Subscribe to Updates
Get the latest creative news from FooBar about art, design and business.
Author: kannadanewsnow09
ವಿಜಯಪುರ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದ ನಂತ್ರ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮ ಕೈಗೊಳ್ಳಲಾಗಿದೆ. ಇಂದು ಚುನಾವಣಾಧಿಕಾರಿಗಳು ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 4.5 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೊಳಖೇಡ ಬಳಿಯಲ್ಲಿ ಚುನಾವಣಾಧಿಕಾರಿಗಳು ತಪಾಸಣೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಕಾರೊಂದರಲ್ಲಿ 4.5 ಲಕ್ಷ ಹಣ ಪತ್ತೆಯಾಗಿದೆ. ಈ ಹಣದ ಬಗ್ಗೆ ಕಾರಿನಲ್ಲಿದ್ದಂತ ಚಾಲಕ ರೋಷನ್ ಗಜಾನನ್ ಎಂಬುವರನ್ನು ಪ್ರಶ್ನಿಸಿದಾಗ ಸರಿಯಾದ ಮಾಹಿತಿ ನೀಡಿಲ್ಲ. ಈ ಹಿನ್ನಲೆಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 4.5 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಹಣವನ್ನು ಮಹಾರಾಷ್ಟ್ರದಿಂದ ವಿಜಯಪುರಕ್ಕೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದ ಔರಂಗಾಬಾದ್ ಮೂಲದ ರೋಷನ್ ಗಜಾನನ್ ಎಂಬಾತನನ್ನು ವಶಕ್ಕೆ ಪಡೆದಿರುವಂತ ಝಳಕಿ ಠಾಣೆಯ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/i-didnt-hold-a-meeting-of-anganwadi-workers-minister-laxmi-hebbalkar/ https://kannadanewsnow.com/kannada/public-beware-all-these-are-prohibited-during-the-code-of-conduct-if-violated-case-will-be-fixed/
ಬೆಂಗಳೂರು: ಒಂದು ಸರಕಾರ ಗರಿಷ್ಠ ಪ್ರಮಾಣದ ಕೆಲಸ ಮಾಡಿದ್ದರೆ ಅದು ನರೇಂದ್ರ ಮೋದಿಯವರ ಸರಕಾರ ಎನ್ನಲು ನನಗೆ ಅತ್ಯಂತ ಹೆಮ್ಮೆ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಪ್ರಕೋಷ್ಠಗಳ ಸಭೆಯಲ್ಲಿ ಮಾತನಾಡಿದ ಅವರು, 2014ರಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ ಎಲ್ಲರ ಮನೆಗಳಿಗೆ ದೀನದಯಾಳ್ ಉಪಾಧ್ಯಾಯ ಯೋಜನೆಯಡಿ ವಿದ್ಯುತ್ ಕೊಡುವುದಾಗಿ ಹೇಳಿದ್ದರು. ಸ್ವಾತಂತ್ರ್ಯಾನಂತರ ಯಾರೂ ಇಂಥ ಘೋಷಣೆ ಮಾಡಿರಲಿಲ್ಲ. 2018ರೊಳಗೆ ಇಡೀ ದೇಶದ ಎಲ್ಲ ಗ್ರಾಮಗಳು, ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಟ್ಟು ಅವರು ಯಶಸ್ಸನ್ನು ಕಂಡರು ಎಂದು ವಿವರಿಸಿದರು. ಅದಾದ ಬಳಿಕ ಮಹಿಳೆಯರ ಆರೋಗ್ಯ ಮತ್ತು ಮಹಿಳೆಯರಿಗೆ ಸುಲಭ ಆಗಬೇಕೆಂಬ ದೃಷ್ಟಿಯಿಂದ ಎಲ್ಲ ಮನೆಗೂ ಎಲ್ಪಿಜಿ ಸಿಲಿಂಡರ್ ಸಂಪರ್ಕ ಒದಗಿಸುವುದಾಗಿ ಹೇಳಿದರು. ಉಜ್ವಲ ಯೋಜನೆಯಡಿ 12 ಕೋಟಿಗೂ ಹೆಚ್ಚು ಮನೆಗಳಿಗೆ ಗ್ಯಾಸ್ ಸಂಪರ್ಕ ಕೊಡಲಾಯಿತು. ಕೋವಿಡ್ ಸಂದರ್ಭದಲ್ಲಿ ಎಲ್ಲ ವ್ಯಕ್ತಿಗಳಿಗೆ ಲಸಿಕೆ…
ಬೆಳಗಾವಿ : ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ನಿವಾರಿಸಬೇಕೆಂದು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿ ಸಚಿವರು ಅಂಗವಾಡಿ ಕಾರ್ಯಕರ್ತೆಯರ ಸಭೆ ನಡೆಸಿದ್ದಾರೆ ಎಂದು ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೊಲೀಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ವೆ ಮಾಡಿದ್ದರು. ಈಗ ಬಿಎಲ್ಒ ಆಗಿ ಕೆಲಸ ಮಾಡ್ತಿದ್ದಾರೆ. ಬಿಎಲ್ಒ ಆಗಲು ನಮಗೆ ತೊಂದರೆ ಆಗುತ್ತಿದೆ ಎಂದು ನನಗೆ ಹೇಳಲು ಬಂದಿದ್ದಾರೆ. ಆದರೆ, ನಾನೇ ಅವರಿಗೆ ತಿಳಿ ಹೇಳಿ ಕೆಲಸ ಮಾಡಲು ಸೂಚಿಸಿದೆ ಎಂದರು. ನಿಯಮ ಉಲ್ಲಂಘಿಸಿಲ್ಲ ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ. ದೂರು ಕೊಡಲಿ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನಿಗೆ…
ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ ಆದೇಶಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಗಳನ್ನು ಭಾರತ ಚುನಾವಣಾ ಆಯೋಗವು ದಿನಾಂಕ: 16.03.2024, ಶನಿವಾರದಂದು ಘೋಷಿಸಿದ್ದು, ಮಾದರಿ ನೀತಿ ಸಂಹಿತೆಯು ಅಂದಿನಿಂದಲೇ ಜಾರಿಗೆ ಬಂದಿರುತ್ತದೆ. ಜಾರಿಯಾಗಿರುವ ಚುನಾವಣಾ ಮಾದರಿ ನೀತಿ ಸಂಹಿತೆಯು ಉಲ್ಲಂಘನೆಯಾಗದಂತೆ ಇಲಾಖೆಗಳು ಜಾಗ್ರತೆ ವಹಿಸುವುದು ಅವಶ್ಯವಾಗಿರುತ್ತದೆ. ಮಾದರಿ ನೀತಿ ಸಂಹಿತೆ ವಿನಾಯಿತಿ ಬೇಕಾದ ಪ್ರಸ್ತಾವನೆಗಳಿಗೆ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ (Screening Committee)ಯನ್ನು ರಚಿಸಲಾಗಿದೆ. ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಮಾದರಿ ನೀತಿ ಸಂಹಿತೆ ಕುರಿತಾದ ಸೂಚನೆಗಳನ್ನು ಆಡಳಿತ ಇಲಾಖೆಗಳು ಗಮನದಲ್ಲಿಟ್ಟುಕೊಂಡು, ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾಗಿರುವ ತುರ್ತು ಪ್ರಸ್ತಾವನೆಗಳನ್ನು ಲಗತ್ತಿಸಿರುವ ನಮೂನೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಪರಿಶೀಲನಾ ಸಮಿತಿಗೆ ಸಂಬಂಧಿಸಿದ…
ಬಳಾರಿ : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿವಿಧ ಚುನಾವಣಾ ಕಾರ್ಯಗಳಿಗೆ ನಿಯೋಜಿಸಿದ ಅಧಿಕಾರಿಗಳು ಮತ್ತು ಖಾಸಗಿ ವಲಯಗಳ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾರೂ ಮತದಾನದಿಂದ ಹೊರಗುಳಿಯಬಾರದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಅಂಚೆ ಮತಪತ್ರ ವಿತರಣೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣೆಯು ಪ್ರಜಾಪ್ರಭುತ್ವ ಹಬ್ಬವಿದ್ದಂತೆ. ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯವರೆಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಎಂದು ಸೂಚಿಸಿದರು. ಚುನಾವಣಾ ಆಯೋಗವು ಅಗತ್ಯ ಸೇವೆಗಳ ಇಲಾಖೆಗಳಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆ. ಅದರಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಇಲಾಖೆ ಮತ್ತು ಆಕಾಶವಾಣಿ, ಬಿ.ಎಸ್.ಎನ್.ಎಲ್ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೂ ಅಂಚೆ ಮತಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದರು. ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಚುನಾವಣಾ…
ಹನೋಯ್: ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷವು ಬುಧವಾರ (ಮಾರ್ಚ್ 20) ಅಧ್ಯಕ್ಷ ವೊ ವ್ಯಾನ್ ತುವಾಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ತುವಾಂಗ್ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ, “ಆ ನ್ಯೂನತೆಗಳು ಸಾರ್ವಜನಿಕ ಅಭಿಪ್ರಾಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಿವೆ, ಪಕ್ಷ, ರಾಜ್ಯ ಮತ್ತು ವೈಯಕ್ತಿಕವಾಗಿ ಅವರ ಪ್ರತಿಷ್ಠೆಯ ಮೇಲೆ ಪರಿಣಾಮ ಬೀರಿದೆ” ಎಂದು ಹೇಳಿದೆ. ಅಧ್ಯಕ್ಷರು ಹೆಚ್ಚಾಗಿ ಔಪಚಾರಿಕ ಪಾತ್ರವನ್ನು ಹೊಂದಿದ್ದಾರೆ. ಆದರೆ ಆಗ್ನೇಯ ಏಷ್ಯಾದ ರಾಷ್ಟ್ರದ ಅಗ್ರ ನಾಲ್ಕು ರಾಜಕೀಯ ಸ್ಥಾನಗಳಲ್ಲಿ ಒಬ್ಬರು. ಅವರು ದೇಶದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಪಕ್ಷದ ಪಾಲಿಟ್ ಬ್ಯೂರೋದ ಕಿರಿಯ ಸದಸ್ಯರಾಗಿದ್ದಾರೆ. ವಿಯೆಟ್ನಾಂನ ಅತ್ಯಂತ ಶಕ್ತಿಶಾಲಿ ವ್ಯಕ್ತಿಯಾದ ಪ್ರಧಾನ ಕಾರ್ಯದರ್ಶಿ ನ್ಗುಯೆನ್ ಫು ಟ್ರೊಂಗ್ ಅವರ ಆಪ್ತರು ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಭ್ರಷ್ಟಾಚಾರದ ವಿರುದ್ಧ ಪಕ್ಷದ ಮುಖ್ಯ ವಾಸ್ತುಶಿಲ್ಪಿ ಟ್ರೊಂಗ್, ಇದರ ಅಡಿಯಲ್ಲಿ ನೂರಾರು ಅಧಿಕಾರಿಗಳನ್ನು ತನಿಖೆ ಮಾಡಲಾಗಿದೆ. ಮಾಜಿ ಅಧ್ಯಕ್ಷ ನ್ಗುಯೆನ್ ಕ್ಸುವಾನ್…
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೊ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/110 ಕೆ.ವಿ ಸೋಮಸಮುದ್ರ ವಿದ್ಯುತ್ ಉಪಕೇಂದ್ರದ 11 ಕೆ.ವಿ ಮಾರ್ಗದಲ್ಲಿ ಮಾ.21 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ 3 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ. ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯ ನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-3/11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯ ನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಹಾಗೂ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ ಕ್ಯಾಂಪ್ ಸೇರಿ ಮುಂತಾದ…
ನವದೆಹಲಿ: ಲೋಕಸಭಾ ಚುನಾವಣೆ 2024 ಕ್ಕೆ ಒಂದು ತಿಂಗಳು ಬಾಕಿ ಇರುವಾಗ, ಪಪ್ಪು ಯಾದವ್ ಬುಧವಾರ ತಮ್ಮ ಜನ ಅಧಿಕಾರ್ ಪಕ್ಷವನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸಿದ್ದಾರೆ. ಪಪ್ಪು ಯಾದವ್ ಮಂಗಳವಾರ ಸಂಜೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಪಕ್ಷದ ಮುಖಂಡ ತೇಜಸ್ವಿ ಯಾದವ್ ಅವರನ್ನು ಭೇಟಿಯಾದರು. “ಲಾಲು ಯಾದವ್ ಮತ್ತು ನಾನು ರಾಜಕೀಯ ಸಂಬಂಧವನ್ನು ಹೊಂದಿಲ್ಲ, ಇದು ಸಂಪೂರ್ಣವಾಗಿ ಭಾವನಾತ್ಮಕ ಸಂಬಂಧವಾಗಿದೆ. ನಿನ್ನೆ, ನಾವೆಲ್ಲರೂ ಒಟ್ಟಿಗೆ ಕುಳಿತೆವು. ಸೀಮಾಂಚಲ್ ಮತ್ತು ಮಿಥಿಲಾಂಚಲ್ನಲ್ಲಿ ಬಿಜೆಪಿಯನ್ನು ಯಾವುದೇ ಬೆಲೆ ತೆತ್ತಾದರೂ ತಡೆಯುವುದು ನಮ್ಮ ಪ್ರಯತ್ನವಾಗಿದೆ” ಎಂದು ಹೇಳಿದರು. https://twitter.com/ANI/status/1770393034422661286 “ತೇಜಸ್ವಿ ಯಾದವ್ 17 ತಿಂಗಳು ಕೆಲಸ ಮಾಡಿದರು ಮತ್ತು ವಿಶ್ವಾಸವನ್ನು ಬೆಳೆಸಿದರು. ರಾಹುಲ್ ಗಾಂಧಿ ಹೃದಯಗಳನ್ನು ಗೆದ್ದರು ಮತ್ತು ಜನರಿಗೆ ಭರವಸೆ ನೀಡಿದರು. ನಾವು ಒಟ್ಟಾಗಿ 2024 (ಲೋಕಸಭಾ ಚುನಾವಣೆ) ಮಾತ್ರವಲ್ಲದೆ 2025 (ಬಿಹಾರ ವಿಧಾನಸಭಾ ಚುನಾವಣೆ) ಅನ್ನು ಗೆಲ್ಲುತ್ತೇವೆ. ಬಿಜೆಪಿಯನ್ನು ತಡೆಯುವುದು ಮತ್ತು ದುರ್ಬಲ ವರ್ಗಗಳ ಅಸ್ಮಿತೆ ಮತ್ತು ಸಿದ್ಧಾಂತವನ್ನು ರಕ್ಷಿಸುವುದು…
ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದಂತ ಕಾಂಗ್ರೆಸ್ ಪಕ್ಷ, ಇನ್ನುಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದ ಸಂಭಾವ್ಯ ಪಟ್ಟಿ ಹೊರ ಬಿದ್ದಿದ್ದು, ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ಅಂತ ಮುಂದೆ ಓದಿ. ನಿನ್ನೆ ದೆಹಲಿಯಲ್ಲಿ ಮಹತ್ವದ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ದೆಹಲಿಯ ಕಾಂಗ್ರೆಸ್ ಸಿಇಸಿ ಸಭೆಯ ಬಳಿಕ ಮಾತನಾಡಿದ್ದಂತ ಸಿಎಂ ಸಿದ್ಧರಾಮಯ್ಯ ಇಂದು ಕರ್ನಾಟಕದ ಉಳಿದ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸೋದಾಗಿ ಘೋಷಣೆ ಮಾಡಿದ್ದರು. ಇದಕ್ಕೂ ಮುನ್ನಾ ಕಾಂಗ್ರೆಸ್ ಉನ್ನತ ಮೂಲಗಳಿಂದ 17 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೊರ ಬಿದ್ದಿದೆ. ಹೀಗಿದೆ ಕರ್ನಾಟಕದ 17 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಚಿತ್ರದುರ್ಗ – ಚಂದ್ರಪ್ಪ ಬೆಳಗಾವಿ – ಮೃಣಾಲ್…
ನವದೆಹಲಿ: ಸ್ಟಾರ್ಟ್ಅಪ್ ಮಹಾಕುಂಭದಲ್ಲಿ ಕ್ರಿಯಾತ್ಮಕ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಬುಧವಾರ (ಮಾರ್ಚ್ 20) ಭಾರತದ ರೋಮಾಂಚಕ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯನ್ನು ಶ್ಲಾಘಿಸಿದರು ಮತ್ತು ಉದ್ಯೋಗಾಕಾಂಕ್ಷಿಗಳಿಂದ ಉದ್ಯೋಗ ಪೂರೈಕೆದಾರರಿಗೆ ಪರಿವರ್ತಕ ಬದಲಾವಣೆಯನ್ನು ಎತ್ತಿ ತೋರಿಸಿದರು. 1.25 ಲಕ್ಷಕ್ಕೂ ಹೆಚ್ಚು ನೋಂದಾಯಿತ ಸ್ಟಾರ್ಟ್ಅಪ್ಗಳು 12 ಲಕ್ಷಕ್ಕೂ ಹೆಚ್ಚು ವ್ಯಕ್ತಿಗಳಿಗೆ ಉದ್ಯೋಗ ನೀಡುವುದರೊಂದಿಗೆ, ಭಾರತವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ಅಪ್ ಕೇಂದ್ರವಾಗಿ ಹೊರಹೊಮ್ಮಿದೆ. 110 ಕ್ಕೂ ಹೆಚ್ಚು ಯುನಿಕಾರ್ನ್ಗಳು ಮತ್ತು 12,000 ನೋಂದಾಯಿತ ಪೇಟೆಂಟ್ಗಳನ್ನು ಹೊಂದಿದೆ. ಬಾಹ್ಯಾಕಾಶ ಕ್ಷೇತ್ರದ ಇತ್ತೀಚಿನ ವಿಮೋಚನೆಯನ್ನು ಎತ್ತಿ ತೋರಿಸಿದ ಪಿಎಂ ಮೋದಿ, ಈ ಕ್ಷೇತ್ರದಲ್ಲಿ 50 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳ ಹೊರಹೊಮ್ಮುವಿಕೆಯನ್ನು ಉಲ್ಲೇಖಿಸಿದರು. ಜಾಗತಿಕ ನಾವೀನ್ಯತೆ ಶಕ್ತಿ ಕೇಂದ್ರವಾಗುವ ಭಾರತದ ಪ್ರಯಾಣವನ್ನು ಪ್ರತಿಬಿಂಬಿಸಿದ ಪಿಎಂ ಮೋದಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಹೆಚ್ಚುತ್ತಿರುವ ಪ್ರವೃತ್ತಿಯನ್ನು ಶ್ಲಾಘಿಸಿದರು. ರಾಜಕೀಯ ಪ್ರವೇಶಿಸುವವರನ್ನು ಸೂಕ್ಷ್ಮವಾಗಿ ತರಾಟೆಗೆ ತೆಗೆದುಕೊಂಡ ಅವರು, ನಿಜವಾದ ಸ್ಟಾರ್ಟ್ಅಪ್ಗಳ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು, ಅವುಗಳನ್ನು ರಾಜಕೀಯ ರಂಗದಲ್ಲಿರುವವರೊಂದಿಗೆ ಹೋಲಿಸಿ, ಆಗಾಗ್ಗೆ ಪ್ರಯೋಗ ಮತ್ತು…