Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ ಉಂಟಾದ ಪರಿಣಾಮ, ಸುಮಾರು ಎರಡು ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹೊಸೂರು ರಸ್ತೆಗೆ ತೆರಳುವಂತ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಕಾರೊಂದು ದಿಢೀರ್ ಬ್ರೇಕ್ ಹಾಕಿದ ಪರಿಣಾಮ, ಅದರ ಹಿಂದೆ ಸಾಗಿಸುತ್ತಿದ್ದಂತ ಮೂರು ಕಾರುಗಳು ಡಿಕ್ಕಿಯಾಗಿದ್ದಾವೆ. ಈ ಪರಿಣಾಮ ಸರಣಿ ಅಪಘಾತ ಉಂಟಾಗಿದೆ. ಒಂದರ ಹಿಂದೆ ಮತ್ತೊಂದು ಕಾರುಗಳು ಸರಣಿ ಅಪಘಾತ ಉಂಟಾದ ಪರಿಣಾಮ, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸುಮಾರು 2 ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸರಣಿ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. https://kannadanewsnow.com/kannada/25-killed-in-lightning-strike-in-bihar/ https://kannadanewsnow.com/kannada/nia-releases-first-photo-of-26-11-mastermind-tahawwur-rana/ https://kannadanewsnow.com/kannada/big-news-promotion-for-primary-school-teachers-in-the-state-important-information-from-the-education-department/
ಪಾಟ್ನಾ : ಬಿಹಾರದ ಹಲವು ಜಿಲ್ಲೆಗಳಲ್ಲಿ ಗುರುವಾರ ಸಿಡಿಲು ಬಡಿದು ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ಕಚೇರಿ (ಸಿಎಂಒ) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ನಳಂದದಲ್ಲಿ 18, ಸಿವಾನ್ನಲ್ಲಿ ಇಬ್ಬರು, ಕಟಿಹಾರ್, ದರ್ಭಂಗಾ, ಬೇಗುಸರಾಯ್, ಭಾಗಲ್ಪುರ್ ಮತ್ತು ಜೆಹಾನಾಬಾದ್ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಬುಧವಾರ, ಬಿಹಾರದ ನಾಲ್ಕು ಜಿಲ್ಲೆಗಳಲ್ಲಿ ಸಿಡಿಲು ಬಡಿದು 13 ಜನರು ಸಾವನ್ನಪ್ಪಿದ್ದಾರೆ. https://kannadanewsnow.com/kannada/nia-releases-first-photo-of-26-11-mastermind-tahawwur-rana/ https://kannadanewsnow.com/kannada/108-ambulance-service-to-be-operated-by-health-department-from-now-on-dinesh-gundu-rao/
ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಆರೋಪಿ ತಹವೂರ್ ಹುಸೇನ್ ರಾಣಾ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಇಳಿದ ಒಂದು ಗಂಟೆಯ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದೇಶವನ್ನು ಬೆಚ್ಚಿಬೀಳಿಸಿದ ಭೀಕರ ದಾಳಿಯ ಸಂಚಿನ ಮೊದಲ ಪೋಟೋವನ್ನು ಬಿಡುಗಡೆ ಮಾಡಿದೆ. https://twitter.com/NIA_India/status/1910348025395917291 ಪ್ರಾಥಮಿಕ ಮಾಧ್ಯಮ ವರದಿಗಳ ಪ್ರಕಾರ, ಇಳಿಯುವಿಕೆಯ ನಂತರದ ದೀರ್ಘ ಔಪಚಾರಿಕತೆಗಳು ಅಂತಿಮ ಹಂತದಲ್ಲಿವೆ. ರಾಣಾ ಅವರನ್ನು ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಕರೆದೊಯ್ಯಲಾಗುವುದು ಎಂದು ವರದಿಗಳು ತಿಳಿಸಿವೆ. ತನಿಖಾ ಸಂಸ್ಥೆ ರಾಣಾ ಅವರನ್ನು ಕಸ್ಟಡಿ ವಿಚಾರಣೆಗೆ ಒತ್ತಾಯಿಸುವ ನಿರೀಕ್ಷೆಯಿದೆ. 26/11 ದಾಳಿಯ ಪ್ರಮುಖ ಆರೋಪಿಯಾಗಿರುವ ರಾಣಾ, ಹಸ್ತಾಂತರದಿಂದ ತಪ್ಪಿಸಿಕೊಳ್ಳುವ ಕೊನೆಯ ಪ್ರಯತ್ನ ವಿಫಲವಾದ ನಂತರ ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಹೊರಟರು. ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ ತಂಡವು 64 ವರ್ಷದ ಅವರನ್ನು ಮರಳಿ ಕರೆತಂದಿತು. ರಾಣಾ ಅವರನ್ನು ಶೀಘ್ರದಲ್ಲೇ ಹಾಜರುಪಡಿಸಲಿರುವ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು…
ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ತಹವೂರ್ ಹುಸೇನ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಸಂಜೆ ಔಪಚಾರಿಕವಾಗಿ ಬಂಧಿಸಿದೆ. ಈ ಬೆನ್ನಲ್ಲೇ ಎನ್ಐಎ ವಶದಲ್ಲಿರುವಂತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾ ಮೊದಲ ಪೋಟೋವನ್ನು ಬಿಡುಗಡೆ ಮಾಡಲಾಗಿದೆ. ಅಮೆರಿಕದ ಲಾಸ್ ಏಂಜಲೀಸ್ನಿಂದ ವಿಶೇಷ ವಿಮಾನದಲ್ಲಿ ಹಿರಿಯ ಅಧಿಕಾರಿಗಳನ್ನು ಒಳಗೊಂಡ ಎನ್ಎಸ್ಜಿ ಮತ್ತು ಎನ್ಐಎ ತಂಡಗಳು ರಾಣಾ ಅವರನ್ನು ನವದೆಹಲಿಗೆ ಕರೆದೊಯ್ದವು. ವಿಮಾನ ನಿಲ್ದಾಣದಲ್ಲಿ ಎನ್ಐಎ ತನಿಖಾ ತಂಡವು ಪ್ರಾಥಮಿಕವಾಗಿ ಚಿಕಾಗೋ (ಯುಎಸ್) ನಲ್ಲಿ ವಾಸಿಸುತ್ತಿರುವ ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ರಾಣಾ ಅವರನ್ನು ವಿಮಾನದಿಂದ ಹೊರಬಂದ ಕೂಡಲೇ ಎಲ್ಲಾ ಅಗತ್ಯ ಕಾನೂನು ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಬಂಧಿಸಿದೆ. ಇದೀಗ ಎನ್ಐಎ ವಶದಲ್ಲಿರುವಂತ ಮುಂಬೈ ದಾಳಿಯ ಮಾಸ್ಟರ್ ಮೈಡ್ ತಹವೂರ್ ಹುಸೇನ್ ರಾಣಾ ಅವರನ್ನು ಎನ್ಐಎ ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ. ಆ ಬಳಿಕ ಕೋರ್ಟ್ ಯಾವ ಆದೇಶವನ್ನು ನೀಡಲಿದೆ ಎಂಬುದನ್ನು ಕಾದು ನೋಡಬೇಕು. ಅದಕ್ಕೂ ಮುನ್ನಾ…
ಕ್ಯಾಪ್ರಿ ಹೋಲ್ಡಿಂಗ್ಸ್ನಿಂದ ವೆರ್ಸೇಸ್ ಅನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಾಡಾ 1.375 ಬಿಲಿಯನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿದೆ. ಇದು ಎರಡು ಅಪ್ರತಿಮ ಇಟಾಲಿಯನ್ ಫ್ಯಾಷನ್ ಹೌಸ್ಗಳನ್ನು ಕಾರ್ಯತಂತ್ರದ ವಿಲೀನದಲ್ಲಿ ಒಟ್ಟುಗೂಡಿಸಿದೆ. ವೆರ್ಸೇಸ್ನ ಪರಂಪರೆಯನ್ನು ಆಚರಿಸುವ ಮತ್ತು ಅದರ ದಿಟ್ಟ ಮತ್ತು ಕಾಲಾತೀತ ಸೌಂದರ್ಯವನ್ನು ಮರು ವ್ಯಾಖ್ಯಾನಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಪ್ರಾಡಾ ಅಧ್ಯಕ್ಷ ಪ್ಯಾಟ್ರಿಜಿಯೊ ಬರ್ಟೆಲ್ಲಿ ಹೇಳಿದರು. ಅದೇ ಸಮಯದಲ್ಲಿ, ನಾವು ಇದಕ್ಕೆ ಬಲವಾದ ವೇದಿಕೆಯನ್ನು ಒದಗಿಸುತ್ತೇವೆ. ಇದು ವರ್ಷಗಳಿಂದ ನಡೆಯುತ್ತಿರುವ ಹೂಡಿಕೆಗಳಿಂದ ಬಲಪಡಿಸಲ್ಪಟ್ಟಿದೆ. ದೀರ್ಘಕಾಲದ ಸಂಬಂಧಗಳಲ್ಲಿ ಬೇರೂರಿದೆ ಎಂದು ಅವರು ಹೇಳಿದರು. ವ್ಯಾಪಕ ಐಷಾರಾಮಿ ಮಂದಗತಿಯ ನಡುವೆ ಪ್ರಾಡಾ ಉತ್ತಮ ಪ್ರದರ್ಶನ ನೀಡಿದ್ದರೆ, ವೆರ್ಸೇಸ್ ಆರ್ಥಿಕ ನಷ್ಟದೊಂದಿಗೆ ಹೆಣಗಾಡುತ್ತಿದೆ. ಈ ಸ್ವಾಧೀನವು ಫ್ರೆಂಚ್ ದೈತ್ಯರು ಹೆಚ್ಚಾಗಿ ಪ್ರಾಬಲ್ಯ ಹೊಂದಿರುವ ಉನ್ನತ ಮಟ್ಟದ ಫ್ಯಾಷನ್ ಮಾರುಕಟ್ಟೆಯಲ್ಲಿ ಇಟಲಿಯ ಉಪಸ್ಥಿತಿಯನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. https://kannadanewsnow.com/kannada/cm-siddaramaiah-watches-rcb-vs-dc-tournament-at-m-chinnaswamy-stadium-in-bengaluru/ https://kannadanewsnow.com/kannada/virat-kohli-becomes-first-cricketer-to-hit-1000-fours-in-ipl-history/
ಬೆಂಗಳೂರು : “ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ಇಬ್ಬಗೆ ನೀತಿಯ ವಿರುದ್ಧ ಸರಣಿ ವಾಗ್ದಾಳಿ ನಡೆಸಿದರು. “ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹೋರಾಟದ ಸ್ವರೂಪವನ್ನು ಶೀಘ್ರ ತಿಳಿಸಲಾಗುತ್ತದೆ. ಅವರ ಜನಾಕ್ರೋಶ ಯಾತ್ರೆಯ ವಿರುದ್ಧ ನಾವು ಏನಾದರೂ ಮಾಡಬೇಕಲ್ಲವೇ?” ಎಂದು ಹೇಳಿದರು. ಆರ್.ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಕೇವಲ ರಾಜ್ಯ ಸರ್ಕಾರ ಏರಿಸಿದ ಹಾಲಿನ ದರ ಮಾತ್ರ ಕಣ್ಣಿಗೆ ಕಾಣುತ್ತಿದೆಯೇ? ಬಿಜೆಪಿ ರಾಜ್ಯದಲ್ಲಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ…
ಜಾಮ್ನಗರ : ಅನಂತ್ ಅಂಬಾನಿ ಅವರ ಜನ್ಮದಿನದ ಸಂದರ್ಭದಲ್ಲಿ, ವನ್ಯಜೀವಿ ರಕ್ಷಣೆ, ಪುನರ್ವಸತಿ ಮತ್ತು ಸಂರಕ್ಷಣೆಯಲ್ಲಿ ವಿಶ್ವದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ವನತಾರಾ ತನ್ನ ಹೊಸ ವೆಬ್ಸೈಟ್ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಹೊಸ ವೆಬ್ ಸೈಟ್ vantara.in. ಈ ಪ್ಲಾಟ್ ಫಾರ್ಮ್ ಗಟ್ಟಿಯಾದ ಕಥೆ ಹೇಳುವುದನ್ನು ಅರ್ಥಗರ್ಭಿತ ವಿನ್ಯಾಸದೊಂದಿಗೆ ಸಂಯೋಜಿಸುವ ಪ್ರಬಲ ಡಿಜಿಟಲ್ ಅನುಭವವನ್ನು ನೀಡುತ್ತದೆ. ಜೊತೆಗೆ ಇದು ವನ್ಯಜೀವಿ ಸಂರಕ್ಷಣೆ, ಶಿಕ್ಷಣ ಮತ್ತು ಸಂಶೋಧನೆಗೆ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಈ ಹೊಸ ವೆಬ್ಸೈಟ್ನ ಪ್ರಮುಖ ಅಂಶ ಏನೆಂದರೆ, 360-ಡಿಗ್ರಿ ವಿಶ್ಯುವಲ್ ಪ್ರವಾಸ ಒದಗಿಸುತ್ತದೆ. ಇದು ಸಂದರ್ಶಕರನ್ನು ವನತಾರಾ ಜಗತ್ತಿನ ಸಂಪೂರ್ಣ ಚಿತ್ರಣ ನೀಡುತ್ತದೆ. ಆದರೆ ಮೃಗಾಲಯದ ರೀತಿಯಲ್ಲಿ ಅಲ್ಲ, ಬದಲಿಗೆ ರಕ್ಷಣಾ ಮತ್ತು ಪುನರ್ವಸತಿ ಕೇಂದ್ರವಾಗಿ ಪ್ರಸ್ತುತ ಪಡಿಸುತ್ತದೆ. ಡೆಸ್ಕ್ಟಾಪ್ ಮೊದಲುಗೊಂಡು ಟ್ಯಾಬ್ಲೆಟ್ಗಳು ಮತ್ತು ಸ್ಮಾರ್ಟ್ಫೋನ್ಗಳವರೆಗೆ ಎಲ್ಲ ಸಾಧನಗಳಿಗೆ ಸಂಪೂರ್ಣವಾಗಿ ಆಪ್ಟಿಮೈಸ್ ಮಾಡಲಾದ ಈ ವೆಬ್ ಸೈಟ್ ಪ್ಲಾಟ್ಫಾರ್ಮ್ಗಳಲ್ಲಿ ಸುಗಮ ಮತ್ತು ಸ್ಥಿರವಾದ ಬಳಕೆದಾರ ಅನುಭವವನ್ನು ನೀಡುತ್ತದೆ. ಮುಂಬರುವ ತಿಂಗಳಲ್ಲಿ…
ಶಿವಮೊಗ್ಗ: ದಿನಾಂಕ: 11.04.2025ರ ಶುಕ್ರವಾರದ ನಾಳೆ, ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 11.04.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಎಲ್.ಬಿ ಕಾಲೇಜು, ಅಂಬಾಪುರ, ಲೋಹಿಯಾನಗರ, ಪ್ರಗತಿನಗರ, ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ, ಜನ್ನತ್ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಕೃಷ್ಣ ಗ್ಯಾರೇಜ್ ಕರೆಂಟ್ ಇರೋದಿಲ್ಲ ಎಂದಿದೆ. ಎಲ್.ಐ.ಸಿ ಆಫೀಸ್ ಹತ್ತಿರ ಮತ್ತು ಎಫ್-17 ಎಸ್.ಎನ್ ನಗರ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಗಾಂಧೀನಗರ, ವಿಜಯನಗರ, ಬಿ.ಕೆ ರಸ್ತೆ, ರಾಮನಗರ, ಹೆಗಡೆ ಫಾರಂ, ಎಸ್.ಎನ್ ನಗರ, ಕಂಬಳಿಕೊಪ್ಪ, ಚಿಪ್ಪಿ ಮತ್ತು ಆಧಿಶಕ್ತಿನಗರ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 06:00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ…
ದಾವಣಗೆರೆ: ರಾಜ್ಯದಲ್ಲಿ ಧಾರುಣ ಘಟನೆ ಎನ್ನುವಂತೆ ಪತ್ನಿ ಸಾವಿನಿಂದ ಮನನೊಂದು ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ಪತ್ನಿ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದಂತ ಪತಿಯೊಬ್ಬ, ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಮಕ್ಕಳಾದಂತ ಸಿಂಧುಶ್ರೀ ಮತ್ತು ಶ್ರೀಜಯ್ ಎಂಬುವರನ್ನು ಕೊಂದಿರುವಂತ ತಂದೆ ಉದಯ್ , ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಂದಹಾಗೇ ಮೂರು ತಿಂಗಳ ಹಿಂದಷ್ಟೇ ಉದಯ್ ಅವರ ಪತ್ನಿ ಸಾವನ್ನಪ್ಪಿದ್ದರು. ಇದರಿಂದಾಗಿ ಉದಯ್ ಖಿನ್ನತೆಗೆ ಒಳಗಾಗಿದ್ದರು. ಇಂದು ಅದೇ ಖಿನ್ನತೆಯಲ್ಲಿ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣು ಬಿದಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://kannadanewsnow.com/kannada/ioc-gives-green-signal-to-cricket-at-olympics-6-teams-bow-down-after-128-years/ https://kannadanewsnow.com/kannada/in-yet-another-fatal-accident-in-the-state-three-members-of-a-family-were-killed-when-their-car-collided-with-a-divider/
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಎನ್ನುವಂತೆ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಉಂಟಾದಂತ ಅಪಘಾತದಲ್ಲಿ ಒಂದೇ ಕುಟುಂಬ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಾಸ್ ಪೇಟೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಗೋಪಾಲ್, ಪತ್ನಿ ಶಶಿಕಲಾ ಹಾಗೂ ಮಗಳು ದೀಪಾ ಎಂಬುದಾಗಿ ಗುರುತಿಸಲಾಗಿದೆ. ಇನ್ನೂ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/ioc-gives-green-signal-to-cricket-at-olympics-6-teams-bow-down-after-128-years/ https://kannadanewsnow.com/kannada/big-news-promotion-for-primary-school-teachers-in-the-state-important-information-from-the-education-department/












