Author: kannadanewsnow09

ದಾವಣಗೆರೆ: ರಾಜ್ಯದಲ್ಲಿ ಧಾರುಣ ಘಟನೆ ಎನ್ನುವಂತೆ ಪತ್ನಿ ಸಾವಿನಿಂದ ಮನನೊಂದು ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ಪತ್ನಿ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದಂತ ಪತಿಯೊಬ್ಬ, ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಮಕ್ಕಳಾದಂತ ಸಿಂಧುಶ್ರೀ ಮತ್ತು ಶ್ರೀಜಯ್ ಎಂಬುವರನ್ನು ಕೊಂದಿರುವಂತ ತಂದೆ ಉದಯ್ , ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಂದಹಾಗೇ ಮೂರು ತಿಂಗಳ ಹಿಂದಷ್ಟೇ ಉದಯ್ ಅವರ ಪತ್ನಿ ಸಾವನ್ನಪ್ಪಿದ್ದರು. ಇದರಿಂದಾಗಿ ಉದಯ್ ಖಿನ್ನತೆಗೆ ಒಳಗಾಗಿದ್ದರು. ಇಂದು ಅದೇ ಖಿನ್ನತೆಯಲ್ಲಿ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನು ನೇಣು ಬಿದಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://kannadanewsnow.com/kannada/ioc-gives-green-signal-to-cricket-at-olympics-6-teams-bow-down-after-128-years/ https://kannadanewsnow.com/kannada/in-yet-another-fatal-accident-in-the-state-three-members-of-a-family-were-killed-when-their-car-collided-with-a-divider/

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಎನ್ನುವಂತೆ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಉಂಟಾದಂತ ಅಪಘಾತದಲ್ಲಿ ಒಂದೇ ಕುಟುಂಬ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಾಬಾಸ್ ಪೇಟೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಗೋಪಾಲ್, ಪತ್ನಿ ಶಶಿಕಲಾ ಹಾಗೂ ಮಗಳು ದೀಪಾ ಎಂಬುದಾಗಿ ಗುರುತಿಸಲಾಗಿದೆ. ಇನ್ನೂ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/ioc-gives-green-signal-to-cricket-at-olympics-6-teams-bow-down-after-128-years/ https://kannadanewsnow.com/kannada/big-news-promotion-for-primary-school-teachers-in-the-state-important-information-from-the-education-department/

Read More

ನವದೆಹಲಿ: ಮೊಣಕೈ ಮುರಿತದಿಂದಾಗಿ ಋತುರಾಜ್ ಗಾಯಕ್ವಾಡ್ ಗುರುವಾರ (ಏಪ್ರಿಲ್ 10) ನಡೆಯುತ್ತಿರುವ ಋತುರಾಜ್ ಗಾಯಕ್ವಾಡ್ ನಿಂದ ಹೊರಗುಳಿದ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League -IPL)  2025 ರ ಉಳಿದ ಪಂದ್ಯಗಳಲ್ಲಿ ಭಾರತದ ಮಾಜಿ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಸಿಎಸ್ಕೆ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ಗುರುವಾರ ಈ ದೊಡ್ಡ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. https://twitter.com/ChennaiIPL/status/1910314056130482413 “ಮೊಣಕೈ ಮೂಳೆ ಮುರಿತದಿಂದಾಗಿ ಋತುರಾಜ್ ಗಾಯಕ್ವಾಡ್ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ 2025 ರ ಆರನೇ ಲೀಗ್ ಹಂತದ ಪಂದ್ಯಕ್ಕೆ ಮುಂಚಿತವಾಗಿ ಫ್ಲೆಮಿಂಗ್ ಗುರುವಾರ ಚೆನ್ನೈನಲ್ಲಿ ಮಾಧ್ಯಮಗಳಿಗೆ ತಿಳಿಸಿದರು. ಲಭ್ಯವಿರುವ ಮಾಹಿತಿಯ ಪ್ರಕಾರ, ಮಾರ್ಚ್ 30 ರಂದು ಗುವಾಹಟಿಯಲ್ಲಿ ನಡೆದ ಸಿಎಸ್ಕೆ-ಆರ್ಆರ್ ಐಪಿಎಲ್ 2025 ಪಂದ್ಯದ ವೇಳೆ ಜೋಫ್ರಾ ಆರ್ಚರ್ ಅವರ ಶಾರ್ಟ್ ಬಾಲ್ನಿಂದ ಗಾಯಕ್ವಾಡ್ಗೆ ಹೊಡೆತ ಬಿದ್ದಿದೆ. https://kannadanewsnow.com/kannada/ioc-gives-green-signal-to-cricket-at-olympics-6-teams-bow-down-after-128-years/ https://kannadanewsnow.com/kannada/bengalurus-kempegowda-international-airports-terminal-2-gets-5-star-status-from-skytrax/

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಬರೋಬ್ಬರಿ 128 ವರ್ಷಗಳ ಬಳಿಕ ಒಲಂಪಿಕ್ಸ್ ಆಟದಲ್ಲೂ ಕ್ರಿಕೆಟ್ ಆಟ ಆಡಲು ಅಂತಾರಾಷ್ಟ್ರೀಯ ಒಲಂಪಿಕ್ಸ್ ಕಮಿಟಿಯು ಗ್ರೀನ್ ಸಿಗ್ನಲ್ ನೀಡಿದೆ. 2028ರಲ್ಲಿ ಲಾಸ್ ಏಂಜಲೀಸ್ ನಲ್ಲಿ ನಡೆಯಲಿರುವಂತ ಒಲಂಪಿಕ್ಸ್ ನಲ್ಲಿ 6 ಕ್ರಿಕೆಟ್ ತಂಡಗಳು ಭಾಗಿಯಾಗಲಿದ್ದಾವೆ ಅಂತ ಐಓಸಿ ತಿಳಿಸಿದೆ. ಹಲವಾರು ಪ್ರಮುಖ ಕ್ರಿಕೆಟ್ ರಾಷ್ಟ್ರಗಳು 2028 ರ ಒಲಿಂಪಿಕ್ ಕ್ರೀಡಾಕೂಟದಿಂದ ಹೊರಗುಳಿಯಲಿವೆ ಎಂದು ತೋರುತ್ತದೆ. ಪುರುಷರ ಮತ್ತು ಮಹಿಳಾ ಪಂದ್ಯಾವಳಿಗಳಿಗೆ ಕೇವಲ ಆರು ತಂಡಗಳು ಮಾತ್ರ ಸ್ಪರ್ಧಿಸಲಿವೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಘೋಷಿಸಿದೆ. ಪ್ರತಿ ತಂಡವು 90 ಕ್ರೀಡಾಪಟು ಸ್ಥಾನಗಳನ್ನು ಹೊಂದಿರುತ್ತದೆ. ಅಂದರೆ ಆರು ತಂಡಗಳು ತಲಾ 15 ಆಟಗಾರರ ತಂಡವನ್ನು ಕಣಕ್ಕಿಳಿಸಬಹುದು. ಲಾಸ್ ಏಂಜಲೀಸ್ 2028 ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಸೇರ್ಪಡೆ ಒಂದು ದೊಡ್ಡ ವಿಷಯವಾಗಿದೆ. ಇದು 128 ವರ್ಷಗಳ ಸುದೀರ್ಘ ವಿರಾಮದ ನಂತರ ಈ ಪ್ರಮುಖ ಸ್ಪರ್ಧೆಗೆ ಕ್ರೀಡೆಯ ಪುನರಾಗಮನವನ್ನು ಸೂಚಿಸುತ್ತದೆ. 1900ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕೊನೆಯ ಬಾರಿ ಕ್ರಿಕೆಟ್ ಆಡಲಾಗಿತ್ತು.…

Read More

ಹಾವೇರಿ: ಹಾಲು, ಅಲ್ಲೋಹಾಲು, ಎದ್ಯುತ್ ದರ ಹೆಚ್ಚಳ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗಿತ್ತೊ ಅಂತ ಜನರ ಭಾವನೆ ಇದೆ. ಅವರ ಭಾವನೆಯಂತೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ. ಹಾವೇರಿ ಜಿಲ್ಲೆಯಲ್ಲಿ ಅಹೋರಾತ್ರಿ ಹೋರಾಟ ಆರಂಭ ಮಾಡಿದ್ದೇವೆ. ಕರ್ನಾಟಕ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಸಿದೆ. ಹಾಲು, ಆಲೊಹಾಲು, ಎಲೆಕ್ಷಿಸಿಟಿ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿದೆ. ಸರ್ಕಾರ ದಿವಾಳಿಯಾಗಿದೆ. ಬರುವಂತಹ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಮಾಹಿತಿ ಇದೆ ಎಂದು ಹೇಳಿದರು. ಭಷಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್‌ನ ಶಾಸಕರೇ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಅಂತ ಹೇಳಿದ್ದಾರೆ. ಪಿಡಬ್ಲ್ಯುಡಿ, ಎಲೆಕ್ನಿಕ್ ಕಾಂಟಾಕ್ಟರ್, ಅಬಕಾರಿ…

Read More

ಗೃಹಪ್ರವೇಶಕ್ಕೆ ಮನೆ ಯಜಮಾನನ ಜಾತಕವನ್ನು ನೋಡಿ ಮುಹೂರ್ತವನ್ನು ನಿಷ್ಕರ್ಷೆ ಮಾಡಬೇಕು ಆದರೆ ಸ್ಥೂಲವಾಗಿ ವಾರ ತಿಥಿ ನಕ್ಷತ್ರ ಲಗ್ನ ಕಾಲ ದ್ವಾದಶ ಸುದ್ದಿ ಬಗ್ಗೆ ಸ್ವಲ್ಪ ತಿಳುವಳಿಕೆ ಅಗತ್ಯ. ವೈಶಾಖ ಮಾಸದಲ್ಲಿ ಗೃಹಪ್ರವೇಶ ನಡೆಸಿದ್ದಲ್ಲಿ ಬಹು ಪ್ರಶಸ್ತ ಪ್ರದವಾದದ್ದು. ಜೇಷ್ಠ ಮಾಸವು ಶುಭ ಪಾಲ್ಗುಣ ಸಂಪತ್ಕರ ಮಾಘಮಾಸದಲ್ಲಿ ಸುಖ ಸಂತೋಷ ಮತ್ತು ಧಾನ್ಯ ಸಮೃದ್ಧಿ ವಾರಗಳಲ್ಲಿ ಸೋಮವಾರ ಬುಧವಾರ ಗುರುವಾರ ಶುಕ್ರವಾರ ಸಂಪತ್ಕರ ತಿಥಿಗಳಲ್ಲಿ ತೃತಿಯ ಪಂಚಮಿ ಸಪ್ತಮಿ ದಶಮಿ ತ್ರಯೋದಶಿ ಶ್ರೇಷ್ಠ. ರಕ್ತ ತಿಥಿ ದಗ್ದ ಯೋಗ ತಿಥಿಗಳು ಭದ್ರ ಕರಣ ಶುಕ್ಲ ಷಷ್ಟಿಗಳು ಬಹುಳ ಏಕಾದಶಿ ಮೊದಲ ಶುಕ್ಲ ಪ್ರತಿಪದಿಯ ವರೆಗೆ ಪ್ರದೋಷಗಳು ಸೂರ್ಯನನ್ನು ತನಗೆದುರಿಗಿರುವ ಶುಕ್ರನನ್ನು ಬಿಟ್ಟು ಗೃಹಪ್ರವೇಶ ಮಾಡತಕ್ಕದ್ದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…

Read More

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಟರ್ಮಿನಲ್‌ 2 ಸ್ಕೈಟ್ರಾಕ್ಸ್‌ “5 ಸ್ಟಾರ್‌ ಮಾನ್ಯತೆ” ಪಡೆದ ಭಾರತದ ಮೊದಲ ಟರ್ಮಿನಲ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಾಗತಿಕವಾಗಿ ಗೌರವಿಸಲ್ಪಡುವ ಸ್ಕೈಟ್ರಾಕ್ಸ್‌ ಮಾನದಂಡಗಳ ಆಧಾರದ ಮೇಲೆ ಈ ಮಾನ್ಯತೆಯನ್ನು ನೀಡಲಾಗಿದೆ. ಜೊತೆಗೆ, ಭಾರತ ಮತ್ತು ದಕ್ಷಿಣ ಏಷ್ಯಾದ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣ ಎಂಬ ಹಿರಿಮೆಯನ್ನು ಸತತ ಎರಡನೇ ಬಾರಿ ಮುಡಿಗೇರಿಸಿಕೊಳ್ಳುವ ಮೂಲಕ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಮುಖ ಜಾಗತಿಕ ವಿಮಾನಯಾನ ಕೇಂದ್ರವಾಗಿ ಹೊರಹೊಮ್ಮಿದೆ. ಸ್ಕೈಟ್ರಾಕ್ಸ್ ವಲ್ಡ್‌ ಏರ್‌ಪೋರ್ಟ್‌ ಅವಾರ್ಡ್‌, ವಿಮಾನ ನಿಲ್ದಾಣಗಳ ಶ್ರೇಷ್ಠತೆಯ ಮಾನದಂಡವೆಂದು ಜಾಗತಿಕವಾಗಿ ಹೆಸರುವಾಸಿಯಾಗಿದ್ದು, ಪ್ರಯಾಣಿಕರ ಅನುಭವ ಹೆಚ್ಚಿಸುವಲ್ಲಿ ಉತ್ತಮ ಸಾಧನೆ ಮಾಡಿದ ವಿಮಾನ ನಿಲ್ದಾಣಗಳನ್ನು ಗುರುತಿಸುತ್ತದೆ. ಟರ್ಮಿನಲ್ ವಿನ್ಯಾಸ, ಸ್ವಚ್ಛತೆ, ಭದ್ರತೆ, ಡಿಜಿಟಲ್ ಏಕೀಕರಣ, ಆತಿಥ್ಯ, ಒಳಗೊಳ್ಳುವಿಕೆ ಮತ್ತು ಸುಸ್ಥಿರತೆ ಸೇರಿದಂತೆ 30ಕ್ಕೂ ಹೆಚ್ಚು ವಿಭಾಗಗಳಲ್ಲಿ 800 ಕ್ಕೂ ಹೆಚ್ಚು ಪ್ರಯಾಣಿಕರ ಅಭಿಪ್ರಾಯ, ಲೆಕ್ಕಪರಿಶೋಧನೆಯ ನಂತರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ಗೆ 5…

Read More

ನವದೆಹಲಿ: ಮಾನವ ಹಲ್ಲುಗಳಿಂದ ಕಚ್ಚುವ ಮೂಲಕ ಗಾಯಗೊಳಿಸುವುದು ಐಪಿಸಿ ಸೆಕ್ಷನ್ 324 ರ ಬದಲಿಗೆ ಐಪಿಸಿ ಸೆಕ್ಷನ್ 323 ರ ಅಡಿಯಲ್ಲಿ ‘ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು’ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಅಲ್ಲದೇ ಐಪಿಸಿ ಸೆಕ್ಷನ್ ಅಡಿಯಲ್ಲಿ ಮಾನವ ಹಲ್ಲುಗಳನ್ನು ‘ಆಯುಧ’ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದೆ. ನ್ಯಾಯಮೂರ್ತಿ ವಿಭಾ ಕಂಕನ್ವಾಡಿ ಮತ್ತು ನ್ಯಾಯಮೂರ್ತಿ ಸಂಜಯ್ ಎ. ದೇಶ್ಮುಖ್ ಅವರ ವಿಭಾಗೀಯ ಪೀಠವು ಅರ್ಜಿದಾರರು ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸುತ್ತಿತ್ತು. ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 324 (ಅಪಾಯಕಾರಿ ಆಯುಧಗಳು ಅಥವಾ ವಿಧಾನಗಳಿಂದ ಸ್ವಯಂಪ್ರೇರಿತವಾಗಿ ಹಾನಿ ಉಂಟುಮಾಡುವುದು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡಿದ್ದಕ್ಕಾಗಿ ಶಿಕ್ಷೆ), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂಕ್ಷಿಪ್ತ ಸಂಗತಿಗಳೆಂದರೆ ಮಾಹಿತಿದಾರ ಮತ್ತು ಅರ್ಜಿದಾರರ ನಡುವೆ ಆಸ್ತಿ ವಿವಾದಗಳು ಇದ್ದವು. ಮಾಹಿತಿದಾರರು ಭೂಮಿ, ಮನೆ ಮತ್ತು ಇಟ್ಟಿಗೆ ಗೂಡುಗಳಲ್ಲಿ ವಿಭಜನೆಯ ಮೊಕದ್ದಮೆ ಹೂಡಿದ್ದರು.…

Read More

ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ. ಏಪ್ರಿಲ್.17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಈ ತಿಂಗಳ 17 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾವು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಬೆಲೆಗಳನ್ನು ಹೆಚ್ಚಿಸಲು ಕಾರಣವಾದ ಸರ್ಕಾರದ ವಿರುದ್ಧ ಜನ ಆಕ್ರೋಶ್ ಇದೆ ಎಂದರು. ನಾನು ಕೇವಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾತನಾಡುತ್ತಿಲ್ಲ. ಅವರು (ಕರ್ನಾಟಕ ಬಿಜೆಪಿ) ತಮ್ಮ ಜನ ಆಕ್ರೋಶ ಯಾತ್ರೆಯನ್ನು ಪ್ರಾರಂಭಿಸಿದ ದಿನ, ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಉಡುಗೊರೆಯಾಗಿ ಹೆಚ್ಚಿಸಿತು. ಅವರು ಎಲ್ಲದರ ಬೆಲೆಯನ್ನು ಹೆಚ್ಚಿಸಿದ್ದಾರೆ ಎಂದರು. https://kannadanewsnow.com/kannada/2nd-airport-in-bengaluru-aai-team-inspects-3-locations-finalised-locations-in-a-month/ https://kannadanewsnow.com/kannada/three-father-son-duo-drown-in-lake/

Read More

ಕೋಲಾರ: ಕೆರೆಯಲ್ಲಿ ಈಜಲು ತೆರಳಿದ್ದಂತ ವೇಳೆಯಲ್ಲಿ ನೀರಲ್ಲಿ ಮುಳುಗಿ ತಂದೆ-ಮಗ ಹಾಗೂ ಸ್ನೇಹಿತರ ಪುತ್ರನೊಬ್ಬ ಜಲಸಮಾಧಿ ಆಗಿರುವಂತ ಧಾರುಣ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನ ಬೂಡದಮಿಟ್ಟೆ ಕೆರೆಗೆ ತೆರಳಿದ್ದಂತ ವಾಟರ್ ಮ್ಯಾನ್ ರಮೇಶ್(40) ಹಾಗೂ ಅವರ ಪುತ್ರ ಅಗಸ್ತ್ಯ(12) ಮತ್ತು ಸ್ನೇಹಿತ ಶರಣ್ (15) ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೆರೆಯಲ್ಲಿ ಮುಳುಗುತ್ತಿದ್ದಂತ ಮಗನನ್ನು ರಕ್ಷಿಸಲು ಹೋಗಿ ತಂದೆ-ಮಗ, ಸ್ನೇಹಿತನ ಪುತ್ರ ಜಲಸಮಾಧಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಕೋಲಾರ ಎಸ್ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಬೇತಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/2nd-airport-in-bengaluru-aai-team-inspects-3-locations-finalised-locations-in-a-month/ https://kannadanewsnow.com/kannada/big-news-promotion-for-primary-school-teachers-in-the-state-important-information-from-the-education-department/

Read More