Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ನಮ್ಮ ಮೆಟ್ರೋ ( Namma Metro Train ) ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಸೋಮವಾರದಂದು ಮಾತ್ರ ಮೆಟ್ರೋ ಸೇವೆ ಮುಂಜಾನೆ 4.15 ಕ್ಕೆ ಆರಂಭಗೊಳ್ಳಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಆರ್ ಸಿಎಲ್, ಬೆಂಗಳೂರು ನಗರಕ್ಕೆ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ ಸಂಪರ್ಕವನ್ನು ಒದಗಿಸುವ ಸಲುವಾಗಿ, ನಮ್ಮ ಮೆಟ್ರೋ ನಿಗಮವು ಪ್ರತಿ ಸೋಮವಾರದಂದು ಮಾತ್ರ ಮೆಟ್ರೋ ಸೇವೆಯನ್ನು ದಿನಾಂಕ 13ನೇ ಜನವರಿ 2025 ರಿಂದ ಜಾರಿಗೆ ಬರುವಂತೆ ಈಗಿರುವ ಮುಂಜಾನೆ 05:00ಕ್ಕೆ ಬದಲಾಗಿ 04:15 ರಿಂದ ಪ್ರಾರಂಭಿಸಲಿದೆ ಎಂದಿದೆ. ಇನ್ನೂ ಮತ್ತೆಲ್ಲಾ ದಿನಗಳಂದು ಮೆಟ್ರೋ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕೋರಿದೆ. https://kannadanewsnow.com/kannada/state-government-extends-deadline-for-installation-of-hspr-number-plates-for-the-sixth-time/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/ https://kannadanewsnow.com/kannada/beer-lovers-shocked-by-state-government-will-the-price-hike-be-fixed-from-january-20/
ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ 6ನೇ ಬಾರಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶಿಸಿದೆ. ಈ ಸಂಬಂಧ ಸಾರಿಗೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸುವಂತೆ ವಾಹನ ಸವಾರರು ಮನವಿ ಮಾಡಿದ್ದರು. ಅಲ್ಲದೇ ಈವರೆಗೆ ಕೆಲವೇ ಕೆಲವು ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿದ್ದಾರೆ ಎಂದಿದೆ. ಈ ಹಿನ್ನಲೆಯಲ್ಲಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜನವರಿ 31ರವರೆಗೆ ಅವದಿ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ಮೂಲಕ 6ನೇ ಬಾರಿಗೆ ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. https://kannadanewsnow.com/kannada/cabinet-meeting-to-be-held-at-male-mahadeshwara-hills-on-jan-15-state-government/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಬೆಂಗಳೂರು: ಜನವರಿ.15, 2025ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ನಡೆಯಲಿದೆ. ಬೇರೆಲ್ಲಿಯೂ ನಡೆಯುತ್ತಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ದಿನಪತ್ರಿಕೆಗಳಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಂದ ಸಚಿವ ಸಂಪುಟ ಸಭೆ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂಬುದಾಗಿ ವರದಿ ಮಾಡಲಾಗಿದೆ. ಆದರೇ ಅದು ಸುಳ್ಳು ಎಂಬುದಾಗಿ ತಿಳಿಸಿದೆ. ದಿನಾಂಕ 15-02-2025ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/big-relief-for-congress-mp-rahul-gandhi-bail-granted-in-defamation-case/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ ಮಾಡುವುದಾಗಲಿ ಅಥವಾ ಕುಬೇರನನ್ನು ಅತ್ಯಂತ ಸರಳವಾಗಿ ಪೂಜಿಸುವುದಾಗಲಿ ಅದರೊಂದಿಗೆ ಈ ಮಂತ್ರವನ್ನು ಪಠಿಸಬೇಕು. ಈ ಕುಬೇರ ಪೂಜೆಯನ್ನು ಯಂತ್ರವನ್ನು ಇಟ್ಟುಕೊಂಡು, ಪೆಟ್ಟಿಗೆಯನ್ನು ಇಟ್ಟು, ಮಂತ್ರಗಳನ್ನು ಪಠಿಸುವ ಮೂಲಕ ಬಹಳ ವಿಮರ್ಶಾತ್ಮಕವಾಗಿ ನಡೆಸಲಾಗುತ್ತದೆ. ಅಷ್ಟರ ಮಟ್ಟಿಗೆ ಈ ಪೂಜೆ ಮಾಡಬಹುದೋ ಗೊತ್ತಿಲ್ಲ. ಆದರೆ ಮಂಗಳವಾರ ಮತ್ತು ಶುಕ್ರವಾರ ಸಂಜೆ ನಮ್ಮ ಮನೆಯಲ್ಲಿ ಈ ಪೂಜೆಯನ್ನು ಮಾಡಬಹುದಷ್ಟೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…
ಪುಣೆ: ಹಿಂದುತ್ವ ಸಿದ್ಧಾಂತಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಪುಣೆಯ ವಿಶೇಷ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ. ಕಳೆದ ವರ್ಷ ಲಂಡನ್ನಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ದಿವಂಗತ ಸ್ವಾತಂತ್ರ್ಯ ಹೋರಾಟಗಾರನ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪಗಳಿಂದ ಈ ಪ್ರಕರಣ ಹುಟ್ಟಿಕೊಂಡಿದೆ. ವಿನಾಯಕ್ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು 2023 ರ ಮಾರ್ಚ್ನಲ್ಲಿ ಲಂಡನ್ನಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ವಿನಾಯಕ್ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು 2023 ರ ಮಾರ್ಚ್ನಲ್ಲಿ ಲಂಡನ್ನಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ವಿ.ಡಿ.ಸಾವರ್ಕರ್ ಅವರು ತಾವು ಮತ್ತು ಕೆಲವು ಸ್ನೇಹಿತರು ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ ಘಟನೆಯ ಬಗ್ಗೆ…
ಬೆಂಗಳೂರು: ನಗರದ ಸೌತ್ ಎಂಡ್ ಸರ್ಕಲ್ ಬಳಿಯಲ್ಲಿರುವಂತ ಬಿಬಿಎಂಪಿ ಕಚೇರಿಗೆ ಇಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿಯ ವೇಳೆಯಲ್ಲಿ ಬಹುದೊಡ್ಡ ಕರ್ಮಕಾಂಡವೇ ಬಯಲಾಗಿದೆ. ನಿಯಮ ಉಲ್ಲಂಘಿಸಿ ಅಮ್ಮನ ಬದಲು ಮಗ ಕೆಲಸಕ್ಕೆ ಬಂದಿರುವಂತ ವಿಚಾರ ತಿಳಿದು ಬಂದಿದೆ. ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಲ್ಲಿರುವಂತ ಬಿಬಿಎಂಪಿ ಕಚೇರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿದರು. ಈ ವೇಳೆಯಲ್ಲಿ ಕೇಸ್ ವರ್ಕರ್ ಕವಿತಾ ಬದಲಾಗಿ ಮಗ ನವೀನ್ ಎಂಬಾತ ಕೆಲಸ ಮಾಡುತ್ತಿರೋದು ಗಮನಕ್ಕೆ ಬಂದಿದೆ. ಕಚೇರಿಗೆ ದಿಢೀರ್ ಭೇಟಿಯ ಸಂದರ್ಭದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ನೀನ್ಯಾರು ಅಂತ ನವೀನ್ ಪ್ರಶ್ನಿಸಿದ್ದಾರೆ. ಈ ವೇಳೆಯಲ್ಲಿ ತಾನು ಕೇಸ್ ವರ್ಕರ್ ಕವಿತಾ ಅವರ ಪುತ್ರ ಎಂಬುದಾಗಿ ನವೀನ್ ತಿಳಿಸಿದ್ದಾನೆ. ನಿಮ್ಮ ಅಮ್ಮ ಎಲ್ಲಿ ಅಂದಾಗ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾರೆ ಅಂತ ಉತ್ತರಿಸಿದ್ದಾನೆ. ಕೂಡಲೇ ಸ್ಥಳದಲ್ಲೇ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಬಿಬಿಎಂಪಿ ಕೇಸ್…
ಬೀದರ್: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಂತ ಗುತ್ತಿಗೆದಾರ ಸಚಿನ್ ಕೇಸನ್ನು ಸಿಐಡಿ ಅಧಿಕಾರಿಗಳ ತಂಡದಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಇಂದು ನೋಟಿಸ್ ನೀಡಿದ್ದರ ಹಿನ್ನಲೆಯಲ್ಲಿ ಐವರು ಆರೋಪಿಗಳು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇವರನ್ನು ಬಂಧಿಸಲಾಗಿದೆ. ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನವೇ ಡೆತ್ ನೋಟ್ ಬರೆದಿಟ್ಟಿದ್ದರು. ಆ ಡೆತ್ ನೋಟ್ ನಲ್ಲಿ ಎಂಟು ಮಂದಿಯ ಹೆಸರನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನಲೆಯಲ್ಲಿ ಜನವರಿ 6ರಂದು ತನಿಖಾ ತಂಡವಾದಂತ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು. ಸಿಐಡಿ ನೋಟಿಸ್ ಹಿನ್ನಲೆಯಲ್ಲಿ ಇಂದು ಬೀದರ್ ನ ರೈಲ್ವೆ ಇಲಾಖೆಯ ಕಚೇರಿಯಲ್ಲಿನ ಸಿಐಡಿ ಅಧಿಕಾರಿಗಳ ಕಚೇರಿಗೆ ಹಾಜರಾಗಿ, ವಿಚಾರಣೆಯನ್ನು ಎದುರಿಸಿದರು. ಆ ಮೂಲಕ ಗೋರಕನಾಥ ಸಜ್ಜನ್, ನಂದಕುಮಾರ್ ನಾಗಬುಜಂಗಿ, ರಾಜು ಕಪನೂರು, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಎಂಬುವರು ವಿಚಾರಣೆ ಎದುರಿಸಿದರು. ಈ ಬಳಿಕ ಐವರು ಆರೋಪಿಗಳನ್ನು ಸಿಐಟಿ ಅಧಿಕಾರಿಗಳು ವಿಚಾರಣೆಯ ಬಳಿಕ ಬಂಧಿಸಿರುವುದಾಗಿ ತಿಳಿದು…
ಬೆಂಗಳೂರು: ನಗರದ ಬಿಬಿಎಂಪಿ ಕಚೇರಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿ, ಆಫೀಸಿನಲ್ಲಿ ಇಲ್ಲದಂತ ಸಿಬ್ಬಂದಿಗಳಿಗೆ ಚಳಿ ಬಿಡಿಸಿದಂತ ಘಟನೆ ಇಂದು ನಡೆದಿದೆ. ಬೆಂಗಳೂರಿನ ಲಾಲ್ ಬಾಗ್ ರಸ್ತೆಯ ಬಿಬಿಎಂಪಿ ಕಚೇರಿಗೆ ದಿಢೀರ್ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಭೇಟಿ ನೀಡಿದರು. ಅವರು ಭೇಟಿ ನೀಡಿದಂತ ಸಂದರ್ಭದಲ್ಲಿ ಕಚೇರಿಯಲ್ಲಿ ಯಾರು ಇರದೇ ಇದ್ದದ್ದು ಕಂಡು ಕೆಂಡಾಮಂಡಲರಾದರು. ಕಚೇರಿಯಲ್ಲೇ ಇದ್ದಂತ ಸಿಬ್ಬಂದಿಯೊಬ್ಬರು ವೈಕುಂಠ ಏಕಾದಶಿ ಪ್ರಯುಕ್ತ ದೇವಸ್ಥಾನಕ್ಕೆ ಅಧಿಕಾರಿ, ಸಿಬ್ಬಂದಿಗಳು ತೆರಳಿರುವಂತ ಮಾಹಿತಿ ನೀಡಿದರು. ಇದರಿಂದ ಕೋಪಗೊಂಡಂತ ಅವರು ಅಧಿಕಾರಿಗಳು ದೇಗುಲಕ್ಕೆ ಹೋದ್ರೆ ಇಲ್ಲಿ ಕೆಲಸ ಮಾಡೋರು ಯಾರು ಅಂತ ಪ್ರಶ್ನಿಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. https://kannadanewsnow.com/kannada/bengaluru-power-outages-in-these-areas-on-january-13/ https://kannadanewsnow.com/kannada/cm-siddaramaiah-agrees-to-hike-honorarium-of-asha-workers-calls-off-strike/
ಬೆಂಗಳೂರು: ಕಳೆದ ಕೆಲ ದಿನಗಳಿಂದ ತಮ್ಮ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮುಷ್ಕರ ನಡೆಸುತ್ತಿದ್ದಾರೆ. ಇವರ ಬೇಡಿಕೆಯಲ್ಲಿ ಒಂದಾಗಿರುವಂತ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರವನ್ನು ವಾಪಾಸ್ಸು ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 15,000 ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂಘಟನೆಯೊಂದಿಗೆ ಮಾತುಕತೆ ನಡೆಸಿ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಇಂದು ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಿದ್ಧರಾಮಯ್ಯ ನಡೆಸಿದಂತ ಸಂಧಾನ ಯಶಸ್ವಿಯಾಗಿದೆ. ಅವರ ಗೌರವಧನ ಹೆಚ್ಚಳಕ್ಕೆ ಸಿಎಂ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್ ಪಡೆಯಲು ನಿರ್ಧಾರಿಸಿದ್ದಾಗಿ ತಿಳಿದು ಬಂದಿದೆ. https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/ https://kannadanewsnow.com/kannada/bengaluru-power-outages-in-these-areas-on-january-13/
ಬೆಂಗಳೂರು : 66/11 kV ಬಿಟಿಎಂ ವಿವಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಚ್.ಎಸ್.ಆರ್. ವಿಭಾಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 13.01.2025 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾವೇರಿನಗರ, ಹುಳಿಮಾವು, ಅಕ್ಷಯ ನಗರ, ಹೊಂಗಸಂದ್ರ, ಬಿ.ಟಿ.ಎಸ್ ಲೇಔಟ್, ಕೋಡಿಚಿಕ್ಕನಹಳ್ಲಿ, ವಿಜಯಬ್ಯಾಂಕ್ ಲೇಔಟ್, ವಿಶ್ವಪ್ರಿಯಾ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. https://kannadanewsnow.com/kannada/former-cm-bs-yediyurappa-announces-state-tour-with-leaders-next-week/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/