Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳನ್ನು ಕೊಟ್ಟಿದ್ದೇನೆ. ಒಂದು ವೇಳೆ ಅಪರಾಧ ಚಟುವಟಿಕೆಯಲ್ಲಿ ಪೊಲೀಸರು ಭಾಗಿಯಾದರೆ ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವುದಾಗಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ, ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ವಂಶಿಕೃಷ್ಣ ಅವರೊಂದಿಗೆ ಪ್ರಕರಣದ ತನಿಖೆಯ ಕುರಿತು ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಏಳು ಆರೋಪಿಗಳನ್ನು ಬೆಂಗಳೂರು ನಗರ ಪೊಲೀಸರು ಹಿಡಿದಿದ್ದಾರೆ. ಇನ್ನು ಕೆಲವರು ಸಿಗಬೇಕಿದೆ. ಪ್ರಕರಣದಲ್ಲಿ ಇಲಾಖೆಯ ಒಬ್ಬ ವ್ಯಕ್ತಿ ಭಾಗಿಯಾಗಿದ್ದ. ಮೂರು ವಿಶೇಷ ತಂಡಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಸೇರಿದಂತೆ ಪ್ರಕರಣದ ಜವಾಬ್ದಾರಿ ವಹಿಸಿಕೊಂಡ ಇಬ್ಬರು ಜಂಟಿ ಪೊಲೀಸ್ ಆಯುಕ್ತರಿಗೆ, ಇಬ್ಬರು ಡಿಸಿಪಿಗಳು ಮತ್ತು 200ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಬೆಂಗಳೂರಿನಲ್ಲಿ ಇಂಥ ಘಟನೆಯಾದಾಗ ಯಾರು ಕೂಡ ನಂಬಲು ಸಾಧ್ಯವಾಗಿರಲಿಲ್ಲ.…

Read More

ಬೆಂಗಳೂರು: ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಐದು ಮಂದಿಗೆ ನಾರಾಯಣಗುರು ಪ್ರಶಸ್ತಿ ಪ್ರದಾನ ಮಾಡಿ, ಐದು ಸಾಧಕರಿಗೆ ಗೌರವಿಸಿ ಮಾತನಾಡಿದರು. ದಿನೇ ದಿನೇ ಜಾತಿ ವ್ಯವಸ್ಥೆ ಗಟ್ಟಿಗೊಳ್ಳುತ್ತಾ, ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುತ್ತಿರುವ ಹೊತ್ತಿನಲ್ಲಿ, ನಾರಾಯಣ ಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶೋಷಿಸುವ ಮನಸ್ಥಿತಿ, ಶೋಷಣೆಗೆ ಒಳಗಾಗುವ ಮನಸ್ಥಿತಿ, ಗುಲಾಮಗಿರಿಯ ಮನಸ್ಥಿತಿಗೆ ನಾರಾಯಣಗುರುಗಳು ನೈಸರ್ಗಿಕ ಚಿಕಿತ್ಸೆ ಕೊಡಲು ಯತ್ನಿಸಿದರು. ಇವರ ಬೋಧನೆಗಳು ಮತ್ತು ಸುಧಾರಣಾ ಕಾರ್ಯಗಳು ಅವತ್ತಿನ‌ ಮತ್ತು ಇವತ್ತಿನ ಹಲವು ಸಾಮಾಜಿಕ ಸಮಸ್ಯೆಗಳಿಗೆ ದಾರಿದೀಪವಾಗಿವೆ ಎಂದರು. ಒಂದು ಜಾತಿ, ಒಂದು ಮತ, ಒಬ್ಬನೇ ದೇವರು ಮಾನವನಿಗೆ ಎನ್ನುವುದು ಅವರ ಪ್ರಸಿದ್ಧ ಘೋಷಣೆಯಾಗಿತ್ತು.‌ ಹಾಗೆಯೇ, ಶಿಕ್ಷಣದಿಂದ ಸ್ವಾತಂತ್ರ್ಯವನ್ನು ಗಳಿಸಿ ಎನ್ನುವುದು…

Read More

ಶಿವಮೊಗ್ಗ: ಸುದ್ದಿ ಸಹ್ಯಾದ್ರಿ ಸಂಪಾದಕರಾದಂತ ರಾಘವೇಂದ್ರ ತಾಳಗುಪ್ಪ ಅವರಿಗೆ ಜನದನಿ ಸೇವಾ ಟ್ರಸ್ಟ್ ನಿಂದ ನೀಡಲಾಗುವಂತ ಜನದನಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯ ವಿಶ್ವ ಭಾರತಿ ಶಾಲಾ ಆವರಣದಲ್ಲಿ ಜನದನಿ ಸೇವಾ ಟ್ರಸ್ಟ್ ನಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಅವರು, ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ ಸೇರಿದಂತೆ ವಿವಿಧ ಸಾಧಕನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದಂತ ಅವರು, ಕನ್ನಡ ನಾಡು, ನುಡಿ, ಭಾಷೆ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಕನ್ನಡ ಭಾಷೆ, ಸಾಹಿತ್ಯಕ್ಕೆ ತನ್ನದೇ ಆದ ವೈಶಿಷ್ಯತೆ ಇದೆ. ನಾಡನ್ನು ಕಟ್ಟಿ ಬೆಳೆಸುವಲ್ಲಿ ಹಲವು ವರ್ಷಗಳಿಂದ ಅನೇಕ ಮಹನೀಯರ ಹೋರಾಟವಿದೆ ಎಂದರು. ಜನದನಿ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ವಿಜಯ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಜನದನಿ ಸಂಸ್ಥೆಯು ಹಲವು ಸಮಾಜಮುಖಿ ಕೆಲಸಗಳಲ್ಲಿ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಋತುಬಂಧದ ನಂತರದ ವರ್ಷಗಳಲ್ಲಿ ಸ್ತ್ರೀರೋಗ ಕ್ಯಾನ್ಸರ್ ಅಪಾಯದ ಬಗ್ಗೆ ಪ್ರತಿಯೊಬ್ಬ ಮಹಿಳೆ ತಿಳಿದುಕೊಳ್ಳಬೇಕಾದ ಐದು ವಿಷಯಗಳು ಮುಂದಿವೆ ಓದಿ.. ಋತುಬಂಧವು ವಯಸ್ಸಾದಿಕೆಯ ನೈಸರ್ಗಿಕ ಭಾಗವಾಗಿದೆ, ಇದನ್ನು ಮುಟ್ಟಿನ ಅವಧಿ ಇಲ್ಲದೆ 12 ತಿಂಗಳುಗಳಿಂದ ವ್ಯಾಖ್ಯಾನಿಸಲಾಗುತ್ತದೆ, ii ಸಾಮಾನ್ಯವಾಗಿ 40 ರ ದಶಕದ ಕೊನೆಯಲ್ಲಿ ಅಥವಾ 50 ರ ದಶಕದ ಆರಂಭದಲ್ಲಿ ಸಂಭವಿಸುತ್ತದೆ. ಇದು ಸಂತಾನೋತ್ಪತ್ತಿ ವರ್ಷಗಳ ಅಂತ್ಯವನ್ನು ಸೂಚಿಸುತ್ತದೆ, ಆದರೆ ಇದು ಎಂದಿಗೂ ಸ್ತ್ರೀರೋಗ ಆರೈಕೆಯ ಅಂತ್ಯವನ್ನು ಗುರುತಿಸಬಾರದು. ಋತುಬಂಧವು ದೀರ್ಘಾವಧಿಯ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿವಿಧ ಜೈವಿಕ ಮತ್ತು ದೈಹಿಕ ಬದಲಾವಣೆಗಳೊಂದಿಗೆ ಇರುತ್ತದೆ. ಮಹಿಳೆಯರ ವಯಸ್ಸಾದಂತೆ, ಸ್ತ್ರೀರೋಗ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆ. ಋತುಬಂಧದ ಸಮಯದಲ್ಲಿ ಹೆಚ್ಚುತ್ತಿರುವ ಜೀವಿತಾವಧಿ ಮತ್ತು ವಯಸ್ಸು ಕಡಿಮೆಯಾಗುವುದರೊಂದಿಗೆ, ಮಹಿಳೆಯರು ತಮ್ಮ ಜೀವಿತಾವಧಿಯ ಸುಮಾರು ಮೂರನೇ ಒಂದು ಭಾಗವನ್ನು ಋತುಬಂಧದ ನಂತರದ ಹಂತದಲ್ಲಿ ಕಳೆಯುತ್ತಾರೆ, ಇದು ಜಾಗರೂಕತೆಯನ್ನು ಎಂದಿಗಿಂತಲೂ ಹೆಚ್ಚು ಮುಖ್ಯವಾಗಿಸುತ್ತದೆ. ಋತುಬಂಧದ ನಂತರದ ವರ್ಷಗಳಲ್ಲಿ ಸ್ತ್ರೀರೋಗ ಕ್ಯಾನ್ಸರ್ ಅಪಾಯದ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಅಧಿಕ ರಕ್ತದೊತ್ತಡ ಕಡಿಮೆ ಮಾಡೋದಕ್ಕೆ ಮನೆ ಮದ್ದುಗಳಿವೆ. ಅವುಗಳನ್ನು ಮಾಡಿದ್ರೇ, ಔಷಧಿ ಇಲ್ಲದೆ ಬಿಪಿ ನಿಯಂತ್ರಿಸಬಹುದಾಗಿದೆ. ಹಾಗಾದ್ರೇ ಆ 5 ಅತ್ಯುತ್ತಮ ಬೆಳಗಿನ ಪಾನೀಯಗಳನ್ನು ಮುಂದಿವೆ ಓದಿ. ನಿಂಬೆಹಣ್ಣಿನೊಂದಿಗೆ ಬೆಚ್ಚಗಿನ ನೀರು ನಿಮ್ಮ ದೇಹದಲ್ಲಿನ ವಿಷವನ್ನು ಹೊರಹಾಕಲು ಮತ್ತು ಉತ್ತಮ ಜೀರ್ಣಕ್ರಿಯೆಯನ್ನು ಉತ್ತೇಜಿಸಲು ತಾಜಾ ನಿಂಬೆ ರಸದೊಂದಿಗೆ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯುವುದು ಒಳ್ಳೆಯದು. ನಿಂಬೆಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಹೃದಯದ ಯೋಗಕ್ಷೇಮಕ್ಕೆ ಸಹಾಯ ಮಾಡುತ್ತದೆ ಮತ್ತು ರಕ್ತನಾಳಗಳನ್ನು ಸಡಿಲಗೊಳಿಸಲು ಸಹಾಯ ಮಾಡುತ್ತದೆ. ಇದು ಉತ್ತಮ ರಕ್ತದ ಹರಿವನ್ನು ಉಂಟುಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ದಾಸವಾಳದ ಚಹಾ ದಾಸವಾಳದ ಚಹಾವು ಅದರ ಕಡಿಮೆ ರಕ್ತದೊತ್ತಡದ ಗುಣಗಳಿಗೆ ಹೆಸರುವಾಸಿಯಾಗಿದೆ. ದಾಸವಾಳದ ಚಹಾವನ್ನು ನಿಯಮಿತವಾಗಿ ಸೇವಿಸುವುದರಿಂದ ಸಿಸ್ಟೊಲಿಕ್ ಮತ್ತು ಡಯಾಸ್ಟೊಲಿಕ್ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂದು ಸಂಶೋಧನೆ ಸೂಚಿಸಿದೆ. ಇದರಲ್ಲಿ ಕೆಫೀನ್ ಇಲ್ಲ ಮತ್ತು ಹೀಗಾಗಿ, ಸೌಮ್ಯ ಮತ್ತು ಉತ್ತೇಜಕ ಬೆಳಗಿನ ಪಾನೀಯದ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ನಿಮ್ಮ ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವುದು ತೊಂದರೆಯಿಲ್ಲದ ಆದಾಯ ತೆರಿಗೆ ಮರುಪಾವತಿ ಮತ್ತು ತಡೆರಹಿತ ಹಣಕಾಸು ವಹಿವಾಟುಗಳಿಗೆ ಅತ್ಯಗತ್ಯ. ಆದಾಯ ತೆರಿಗೆ ಇಲಾಖೆಯು ಈ ಸಂಪರ್ಕದ ಮಹತ್ವವನ್ನು ಒತ್ತಿಹೇಳುತ್ತಿರುವುದರಿಂದ, ಭಾರತದಾದ್ಯಂತ ತೆರಿಗೆದಾರರು ತಮ್ಮ ಬ್ಯಾಂಕ್ ಖಾತೆಗಳಿಗೆ PAN ಅನ್ನು ಲಿಂಕ್ ಮಾಡಲು ಸರಳ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅದನ್ನು ಪರಿಣಾಮಕಾರಿಯಾಗಿ ಮಾಡಲು ನಿಮಗೆ ಸಹಾಯ ಮಾಡಲು ಸ್ಪಷ್ಟವಾದ, ಹಂತ-ಹಂತದ ಮಾರ್ಗದರ್ಶಿ ಇಲ್ಲಿದೆ. ನಿಮ್ಮ PAN ಅನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡುವುದು ಏಕೆ ಮುಖ್ಯ ನಿಮ್ಮ PAN ಅನ್ನು ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡುವುದರಿಂದ ಆದಾಯ ತೆರಿಗೆ ಇಲಾಖೆಯು ನಿಮ್ಮ ಖಾತೆಗೆ ನೇರವಾಗಿ ಮರುಪಾವತಿಗಳನ್ನು ಪ್ರಕ್ರಿಯೆಗೊಳಿಸಲು ಅನುಮತಿಸುತ್ತದೆ. ವಿಳಂಬವನ್ನು ಕಡಿಮೆ ಮಾಡುತ್ತದೆ ಮತ್ತು ದೋಷಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಹಣಕಾಸಿನ ಟ್ರ್ಯಾಕಿಂಗ್‌ನಲ್ಲಿ ಸಹಾಯ ಮಾಡುತ್ತದೆ. ತೆರಿಗೆ ಕ್ರೆಡಿಟ್‌ಗಳು, ಹೂಡಿಕೆಗಳು ಮತ್ತು ಇತರ ಆದಾಯ-ಸಂಬಂಧಿತ ವಹಿವಾಟುಗಳನ್ನು…

Read More

ಬೆಂಗಳೂರು; ರಾಜ್ಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಏನೆಲ್ಲಾ ಕಾಮಗಾರಿ ಕೈಗೊಳ್ಳಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹಾಗಾದ್ರೇ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಮುಂದಿದೆ ಓದಿ. ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ 1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು: ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ. 1) ಶಾಲಾ ಕೊಠಡಿಗಳ ನಿರ್ಮಾಣ 2) ಕಾಂಪೌಂಡ್ ಗೋಡೆಗಳ ನಿರ್ಮಾಣ 3) ಆಟದ ಮೈದಾನಗಳ ಅಭಿವೃದ್ಧಿ 4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ 5) ಸುಸಜ್ಜಿತ ಪ್ರಯೋಗಾಲಯಗಳ ನಿರ್ಮಾಣ 6) ಬಯಲು ರಂಗಮಂದಿರಗಳ ನಿರ್ಮಾಣ 7) ಸೈಕಲ್ ಸ್ಟ್ಯಾಂಡ್‌ಗಳ ನಿರ್ಮಾಣ 8) ಶಾಲೆಗಳ ಹತ್ತಿರ ಶಿಕ್ಷಕರಿಗೆ…

Read More

ಬೆಂಗಳೂರು; ನಾಯಿ, ಹಾವು ಅಥವಾ ಇತರೆ ಪ್ರಾಣಿಗಳ ದಾಳಿ ಪ್ರಕರಣದಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೇ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಸರ್ವೋಚ್ಚ ನ್ಯಾಯಾಲಯವು ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು ಎಂದಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್‌ನ ದಾಸ್ತಾನು (Stock) ಇರಿಸಿಕೊಳ್ಳಬೇಕು ಎಂಬುದಾಗಿ ತಿಳಿಸಿದೆ. ರೇಬೀಸ್ಅ‌‌ನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರೆ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್‌ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ…

Read More

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದಲೇ 4,056 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್‌.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1992194310377238935 https://kannadanewsnow.com/kannada/here-is-the-list-of-works-that-can-be-undertaken-under-the-mlas-local-area-development-scheme/ https://kannadanewsnow.com/kannada/private-hospitals-will-have-their-licenses-revoked-if-they-demand-advance-payment-for-this-treatment-state-government-warns/

Read More

ಬೆಂಗಳೂರು: ಜೆಡಿಎಸ್ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಬೆಳ್ಳಿನಾಣ್ಯ ವಾಟ್ಸಪ್ ಲೈನ್ ನಂಬರ್ ಅನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಲೋಕಾರ್ಪಣೆ ಮಾಡಿದರು. ರಾಷ್ಟ್ರೀಯ ಮಂಡಳಿ ಸಭೆ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ನಂತರ ಶನಿವಾರ ನಡೆದ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಹೆಚ್.ಡಿ. ದೇವೇಗೌಡರ ಜತೆಗೆ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ನಾಯಕರು, ಜಿಲ್ಲಾಧ್ಯಕ್ಷರು, ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಜತ ಮಹೋತ್ಸವದ ಮುಖ್ಯ ಆಕರ್ಷಣೆಯಾಗಿ ಪಕ್ಷದ ಚಿನ್ಹೆ ತೆನೆಹೊತ್ತ ರೈತ ಮಹಿಳೆ, ಹೆಚ್.ಡಿ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಚಿತ್ರಗಳು ಇರುವ ಬೆಳ್ಳಿ ನಾಣ್ಯವನ್ನು ಲೋಕಾರ್ಪಣೆ ಮಾಡಲಾಯಿತು. ಬಳಿಕ ಮಾಜಿ ಪ್ರಧಾನಿಗಳು ವಾಟ್ಸಪ್ ಲೈನ್ ನಂಬರ್ 9964002028 ಬಿಡುಗಡೆ ಮಾಡಿದರು. ಎರಡು ನಿರ್ಣಯಗಳ ಅಂಗೀಕಾರ: ಜೆಡಿಎಸ್…

Read More