Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಿಂದ ಚುನಾವಣಾ ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಕೂಡಲೇ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು. ಬೆಂಗಳೂರಿನಲ್ಲಿ ಮಂಗಳವಾರ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ಪಾರದರ್ಶಕ ಚುನಾವಣೆ ನಡೆಸುವ ಸಲುವಾಗಿ ಕೂಡಲೇ ಈ ಕ್ಷೇತ್ರದಲ್ಲಿ ಅರೆಸೇನಾ ಪಡೆ ತುಕಡಿ*ಗಳನ್ನು ನಿಯೋಜಿಸಬೇಕು ಎಂದು *ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಆಗ್ರಹಪಡಿಸಿದರು. ಅಲ್ಲದೆ; ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಡೆಸುತ್ತಿರುವ ಅಕ್ರಮಗಳಿಗೆ ಮೌನ ಸಹಕಾರ ನೀಡುತ್ತಿರುವ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು ಎಂದು ಆಯೋಗವನ್ನು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಕೇಂದ್ರ ಆಯೋಗ ಏನು ಮಾಡುತ್ತಿದೆ? ಕರ್ನಾಟಕದಲ್ಲಿ ಚುನಾವಣೆ ಆಯೋಗ ಇದೆಯಾ? ಕೇಂದ್ರ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ…
ಬೆಂಗಳೂರು: ಪ್ರಧಾನಿ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂಬುದಾಗಿ ಮೋದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ಮಾಡಿರುವಂತ ಅವರು, ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಕೇಳಿದ್ದಾರೆ. https://twitter.com/siddaramaiah/status/1770040789638521030 ಕರ್ನಾಟಕದಲ್ಲಿ ನಿಮ್ಮ…
ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಮೈಸೂರು ನಡುವೆ ಸಂಚರಿಸುವಂತ ವಿಶೇಷ ಮೆಮು ರೈಲನ್ನು ನಾಯಂಡಹಳ್ಳಿ ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಮಾಡಲಾಗಿದೆ. ರೈಲುಗಳ ಸಂಖ್ಯೆ 06525/06526 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ಮತ್ತು ಮೈಸೂರು ನಿಲ್ದಾಣಗಳ ನಡುವೆ ಚಲಿಸುವ ಮೆಮು ವಿಶೇಷ ರೈಲುಗಳನ್ನು ನಾಯಂಡಹಳ್ಳಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ ಆರು ತಿಂಗಳ ಕಾಲ ಅಂದರೆ ಮಾರ್ಚ್ 21, 2024 ರಿಂದ ಸೆಪ್ಟೆಂಬರ್ 20, 2024 ರವರೆಗೆ ಪ್ರಸ್ತುತ ಸಮಯದೊಂದಿಗೆ ಮುಂದುವರಿಸಲು ನಿರ್ಧರಿಸಲಾಗಿದೆ. II. ರೈಲುಗಳ ಸಂಚಾರ ಅವಧಿ ವಿಸ್ತರಣೆ ರೈಲು ಸಂಖ್ಯೆ 07335/07336 ಬೆಳಗಾವಿ-ಭದ್ರಾಚಲಂ ರೋಡ ನಿಲ್ದಾಣಗಳ ನಡುವೆ ಚಲಿಸುವ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. ವಿಸ್ತರಣೆ ಸೇವೆಯ ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 07335 ಬೆಳಗಾವಿ-ಭದ್ರಾಚಲಂ ರೋಡ್ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ಏಪ್ರಿಲ್ 1 ರಿಂದ ಏಪ್ರಿಲ್ 30,…
ಬೆಂಗಳೂರು: ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ. ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂಬುದಾಗಿ ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂದು ಕಿಡಿಕಾರಿದ್ದಾರೆ. ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ ಎಂದಿದ್ದಾರೆ. ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ…
ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಐವರಿಂದ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದಂತ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಬಂಧಿತ ಆರೋಪಿಯೊಬ್ಬರ ಸಹೋದರ ಹಾಕಿದ್ದಂತ ಸ್ಟೇಟಸ್ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ ಅಷ್ಟೇ ಆಕ್ರೋಶಕ್ಕೂ ಕಾರಣವಾಗಿದೆ. ಆ ಬಗ್ಗೆ ಮುಂದೆ ಓದಿ. ಬೆಂಗಳೂರಿನ ನಗರತ್ ಪೇಟೆಯ ಅಂಗಡಿಯೊಂದರಲ್ಲಿ ಹನುಮಾನ್ ಜಾಲೀಸಾ ಹಾಕಿದ್ದ ಕಾರಣಕ್ಕಾಗಿ ಹಿಂದೂ ವ್ಯಾಪಾರಿಯೊಬ್ಬರ ಮೇಲೆ ಐವರು ಯುವಕರು ಹಲ್ಲೆ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಚರ್ಚೆಗೂ ಗ್ರಾಸವಾಗಿದೆ. ಅಲ್ಲದೇ ರಾಜಕೀಯ ತಿರುವು ಪಡೆದು ಪ್ರತಿಭಟನೆಗೂ ಕಾರಣವಾಗಿತ್ತು. ಇದರ ನಡುವೆ ಬಂಧಿತ ಸುಲೇಮಾನ್ ಸಹೋದರ ಹಾಕಿರೋ ಸ್ಟೇಟಸ್ ಈಗ ವೈರಲ್ ಆಗಿದೆ. ಅದರಲ್ಲಿ ಇಂದು ಜೈಲ್, ನಾಳೆ ಬೇಲ್, ಮತ್ತೆ ಅದೇ ಖೇಲ್ ಎಂದಿದ್ದಾನೆ. ಈ ಮೂಲಕ ಕಿರಾತಕನೊಬ್ಬ ವಿಕೃತಿ ಮೆರೆದಿದ್ದಾನೆ. ಆತನ ಸ್ಟೇಟಸ್ ಗೆ ಅನೇಕರು ಆಕ್ರೋಶ ಹೊರ ಹಾಕಿದ್ದಾರೆ. ಸಹೋದರನನ್ನು ಬಂಧಿಸಿದಂತೆ ಈತನನ್ನೂ…
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಟಿಕೆಟ್ ಕೈತಪ್ಪಿದಂತ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಬಂಡಾದ ಬಿಸಿ ಮುಟ್ಟಿದೆ. ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೋದಾಗಿ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದರೇ, ಮಾಜಿ ಸಿಎಂ ಡಿವಿ ಸದಾನಂದಗೌಡ ಕೂಡ ಬಂಡಾಯ ಹೇಳೋ ಸಾಧ್ಯತೆ ಇದೆ. ಹೀಗಾಗೇ ಇಂದು ನನ್ನನ್ನು ಕಾಂಗ್ರೆಸ್ ಪಕ್ಷದವರು ಸಂಪರ್ಕಿಸಿದ್ದಾರೆ. ನಾಳೆ ಎಲ್ಲಾ ನಿರ್ಧಾರ ಹೇಳೋದಾಗಿ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಕಾಂಗ್ರೆಸ್ ನವರು ಸಂಪರ್ಕ ಮಾಡಿದ್ದಾರೆ. ಎಲ್ಲಾ ನಿರ್ಧಾರಗಳನ್ನು ನಾಳೆ ಹೇಳುತ್ತೇನೆ ಎಂದರು. ನಾನು ಸಕಾಲಕ್ಕೆ ತೀರ್ಮಾನ ಮಾಡುತ್ತೇನೆ. ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇನೆ ಅಂತ ನಾಳೆ ತೀರ್ಮಾನ ಪ್ರಕಟಿಸೋದಾಗಿ ಮಾಜಿ ಸಿಎಂ ಡಿವಿ ಸದಾನಂದಗೌಡ ತಿಳಿಸಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆ ಡಿ.ವಿ ಸದಾನಂದಗೌಡ ಅವರು ಯಾವುದೇ ಸುಳಿವು ನೀಡಿಲ್ಲ. ಆದ್ರೇ ಅವರನ್ನು ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯೋದಕ್ಕೆ ಡಿಕೆ ಬ್ರದರ್ಸ್ ಎಲ್ಲಾ ಪ್ರಯತ್ನಗಳನ್ನು ತೆರೆ ಮರೆಯಲ್ಲಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆ…
ತುಮಕೂರು: ರಾಜ್ಯದಲ್ಲೊಂದು ಅಮಾನವೀಯ ಘಟನೆ ಎನ್ನುವಂತೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಸ್ಮಶಾನ ಜಾಗ ತನ್ನದೆಂದು 19 ಸಮಾಧಿಗಳನ್ನೇ ಧ್ವಂಸ ಮಾಡಿರೋ ಘಟನೆ ಮಧುಗಿರಿ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಓಬಳಾಪುರ ಗ್ರಾಮದ ಸರ್ವೇ ನಂ.4/1ನಲ್ಲಿ ಸುಮಾರು 10 ಗುಂಟೆ ಜಾಗದಲ್ಲಿ ಊರಿನ ಗ್ರಾಮಸ್ಥರು ಶವಸಂಸ್ಕಾರಕ್ಕೆ ಬಳಸಿಕೊಂಡಿದ್ದರು. ಗ್ರಾಮದ ಜನರು ತೀರಿಕೊಂಡಾಗ ಇಲ್ಲಿ ಶವಸಂಸ್ಕಾರ ಮಾಡಿದ್ದರು. ಶವಸಂಸ್ಕಾರಕ್ಕಾಗಿ ಇರಿಸಲಾಗಿದ್ದಂತ 10 ಗುಂಟೆ ಜಾಗವೇ ನನ್ನದು ಎಂಬುದಾಗಿ ಮಲ್ಲಿಕಾರ್ಜುನ್ ಎಂಬ ವ್ಯಕ್ತಿಯೊಬ್ಬ ಜೆಸಿಬಿ ಯಂತ್ರಗಳನ್ನು ಬಳಸಿ 19 ಸಮಾಧಿಗಳನ್ನು ಧ್ವಂಸ ಮಾಡಿರೋದಾಗಿ ತಿಳಿದು ಬಂದಿದೆ. ಮಲ್ಲಿಕಾರ್ಜನ್ ಶವಸಂಸ್ಕಾರ ಮಾಡಿದ್ದಂತ ಜಾಗವನ್ನೇ ತನ್ನದೆಂದು ಜೆಸಿಬಿ ಬಳಸಿ ಸಮಾಧಿಗಳನ್ನು ಕೆಡವಿದ ವಿಷಯ ತಿಳಿದಂತ ಗ್ರಾಮಸ್ಥರು, ಸ್ಥಳಕ್ಕೆ ಆಗಮಿಸಿ ಆತನೊಂದಿಗೆ ವಾಗ್ವಾದ ನಡೆಸಿದ್ದಾರೆ. ಅಲ್ಲದೇ ತನ್ನವರನ್ನು ಶವಸಂಸ್ಕಾರ ಮಾಡಿದ್ದಂತ ಸಮಾಧಿಗಳನ್ನು ಜೆಸಿಬಿ ಬಳಸಿ ಕಿತ್ತುಹಾಕಿದಂತದ್ದು ಕಂಡು ಅನೇಕರು ಅಲ್ಲಿ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಈ ಕೂಡಲೇ ಈ ಬಗ್ಗೆ ಸಂಬಂಧ ಪಟ್ಟ…
ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿ ಹನುಮಾನ್ ಚಾಲಿಸಾ ಹಾಕಿದ್ದಕ್ಕೆ ಯುವಕರು ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣದಲ್ಲಿನ ಗೂಂಡಾಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಿ ಅಂತ ನಟ ಪ್ರಕಾಶ್ ಆಗ್ರಹಿಸಿದ್ದಾರೆ. ಬೆಂಗಳೂರಿನ ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದಂತ ಪ್ರಕರಣವನ್ನು ಖಂಡಿಸಿ, ನಗರತ್ ಪೇಟೆಯಲ್ಲಿ ಕೇಸರಿ ಪಡೆ ಗರ್ಜಿಸಿದೆ. ಯುವಕನ ಮೇಲೆ ನಡೆದಂತ ಹಲ್ಲೆ ಖಂಡಿಸಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಶಾಂತಿ ಮೆರವಣಿಗೆಯನ್ನು ನಡೆಸಿದರು. ಮತ್ತೊಂದೆಡೆ ಈ ಘಟನೆ ಬಗ್ಗೆ ನಟ ಪ್ರಕಾಶ್ ರಾಜ್ ಎಕ್ಸ್ ಮಾಡಿದ್ದು, ಈ ಗೂಂಡಾಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಯಾವುದೇ ಧರ್ಮದ ಯಾವುದೇ ವ್ಯಕ್ತಿಯಿಂದ ಇಂತಹ ಗೂಂಡಾಗಿರಿ ಕೃತ್ಯಗಳು ನಡೆದರೂ ಅದನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಹೇಳಿದ್ದಾರೆ. ಈ ಮೂಲಕ #justasking ಹ್ಯಾಷ್ಟ್ಯಾಗ್ ಎಂಬುದಾಗಿ ತಿಳಿಸಿದ್ದಾರೆ. https://twitter.com/prakashraaj/status/1769714654438461734 ಇನ್ನೂ ನಟ ಪ್ರಕಾಶ್ ರೈ ಅವರ ಎಕ್ಸ್ ಪೋಸ್ಟ್ ಗೆ ಕೆಲವರು ಬಿಜೆಪಿ ಪರ ಬ್ಯಾಟ್ ಬೀಸುತ್ತಿದ್ದ ಅವರು, ಇದೇನು…
BREAKING: ಚಿತ್ರದುರ್ಗದಲ್ಲಿ ‘ಹೃದಯ ವಿದ್ರಾವಕ’ ಘಟನೆ: ಇಬ್ಬರು ಮಕ್ಕಳನ್ನು ಬೆಂಕಿಗೆ ತಳ್ಳಿ, ತಾಯಿ ಹಾರಿ ‘ಸಜೀವ ದಹನ’
ಚಿತ್ರದುರ್ಗ: ಜಿಲ್ಲೆಯಲ್ಲಿ ಇಂದು ಧಾರುಣ ಘಟನೆಯೊಂದು ನಡೆದಿದೆ. ಅದೇ ಮಕ್ಕಳನ್ನು ಹೊಲದ ಬೇಲಿಗೆ ಬೆಂಕಿಯಿಟ್ಟು, ಅದರಲ್ಲಿ ತಳ್ಳಿ, ತಾಯಿಯೂ ತಾನು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಈ ಮೂಲಕ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಬಹಿರ್ದೆಸೆಗೆಂದು ಇಬ್ಬರು ಮಕ್ಕಳೊಂದಿಗೆ ತಾಯಿ ಮಾರಕ್ಕ ತೆರಳಿದ್ದಾರೆ. ಬೇಲಿಯೊಂದಕ್ಕೆ ಬೆಂಕಿಯಿಟ್ಟಂತ ಆಕೆ, ತನ್ನ 4 ವರ್ಷದ ಪುತ್ರ ನಯನ್ ಹಾಗೂ 2 ವರ್ಷದ ಹರ್ಷವರ್ಧನ್ ನನ್ನು ಬೆಂಕಿಗೆ ದೂಡಿದ್ದಾರೆ. ಈ ಬಳಿಕ 24 ವರ್ಷದ ಮಾರಕ್ಕ ಕೂಡ ಅದೇ ಬೆಂಕಿಗೆ ಹಾರಿ ಸಜೀವ ದಹನವಾಗುವ ಮೂಲಕ ಆತ್ಮಹತ್ಯೆಗೆ ಶರಣಾಗಿರೋ ಶಂಕೆ ವ್ಯಕ್ತವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಭೇಟಿ ನೀಡಿ, ಪರಿಶೀಲಿಸಿ ಮಾಹಿತಿ ಪಡೆದರು. ಈ ದುರಂತಕ್ಕೆ ಕೌಟುಂಬಿಕ ಕಲಹ ಕಾರಣ ಎನ್ನಲಾಗುತ್ತಿದೆ. ಈ ಸಂಬಂಧ ತಳುಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/former-jharkhand-cm-hemant-sorens-sister-in-law-sita-soren-joins-bjp/…
ನವದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಅತ್ತಿಗೆ ಜೆಎಂಎಂ ಶಾಸಕಿ ಸೀತಾ ಸೊರೆನ್ ಮಂಗಳವಾರ ಬಿಜೆಪಿಗೆ ಸೇರಿದರು. ಬಿಜೆಪಿಗೆ ಸೇರುವ ಕೆಲವೇ ಗಂಟೆಗಳ ಮೊದಲು ಅವರು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತೊರೆದರು, ರಾಜ್ಯದ ಆಡಳಿತ ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಮತ್ತು ಪ್ರತ್ಯೇಕಿಸಲಾಗುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ಜಾರ್ಖಂಡ್ ಚುನಾವಣಾ ಉಸ್ತುವಾರಿ ಲಕ್ಷ್ಮೀಕಾಂತ್ ಬಾಜಪೇಯಿ ಅವರ ಸಮ್ಮುಖದಲ್ಲಿ ಸೊರೆನ್ ಬಿಜೆಪಿಗೆ ಸೇರ್ಪಡೆಯಾದರು. ಮೂರು ಬಾರಿ ಶಾಸಕರಾಗಿರುವ ಅವರು ಬಿಜೆಪಿಗೆ ಸೇರುವ ನಿರ್ಧಾರವು ಜೆಎಂಎಂನ ಮುಖ್ಯ ಮತ ನೆಲೆಯಾಗಿರುವ ಪರಿಶಿಷ್ಟ ಪಂಗಡಗಳೊಂದಿಗಿನ ಸಂಪರ್ಕವನ್ನು ಹೆಚ್ಚಿಸುವ ಪಕ್ಷದ ಪ್ರಯತ್ನಗಳಿಗೆ ದೊಡ್ಡ ಹೊಡೆತವಾಗಿದೆ. https://kannadanewsnow.com/kannada/supreme-court-refuses-to-stay-caa-act/ https://kannadanewsnow.com/kannada/this-ingredient-is-a-permanent-solution-to-the-problem-of-hair-loss-what-is-it/