Author: kannadanewsnow09

ಬೆಂಗಳೂರು: ನಗರದಲ್ಲಿನ ಆಟೋ ಚಾಲಕರೊಬ್ಬರು ತಮ್ಮ ಸ್ಟಾರ್ಟ್ಅಪ್ಗೆ ಧನಸಹಾಯ ನೀಡಲು ಮಾಡಿದ ನವೀನ ವಿಧಾನವು ಸಾಮಾಜಿಕ ಮಾಧ್ಯಮದಲ್ಲಿ ಸಂಭಾಷಣೆಯನ್ನು ಹುಟ್ಟುಹಾಕಿದೆ. ಪದವೀಧರ ಮತ್ತು ಆಟೋ ಚಾಲಕ ಸ್ಯಾಮ್ಯುಯೆಲ್ ಕ್ರಿಸ್ಟಿ ತನ್ನ ಸೀಟಿನ ಹಿಂದೆ ತನ್ನ ವ್ಯವಹಾರದ ಕಲ್ಪನೆಯನ್ನು ಚರ್ಚಿಸಲು ಪ್ರಯಾಣಿಕರನ್ನು ಆಹ್ವಾನಿಸುವ ಪೋಸ್ಟರ್ ಅನ್ನು ಇರಿಸಿದನು. “ಹಾಯ್ ಪ್ರಯಾಣಿಕರೇ, ನನ್ನ ಹೆಸರು ಸ್ಯಾಮ್ಯುಯೆಲ್ ಕ್ರಿಸ್ಟಿ. ನಾನು ನನ್ನ ಸ್ಟಾರ್ಟ್ಅಪ್ ವ್ಯವಹಾರ ಕಲ್ಪನೆಗಾಗಿ ಹಣವನ್ನು ಸಂಗ್ರಹಿಸಲು ನೋಡುತ್ತಿರುವ ಪದವೀಧರ. ನಿಮಗೆ ಆಸಕ್ತಿ ಇದ್ದರೆ, ದಯವಿಟ್ಟು ನನ್ನೊಂದಿಗೆ ಮಾತನಾಡಿ” ಎಂದು ಪೋಸ್ಟರ್ನಲ್ಲಿ ಬರೆಯಲಾಗಿದೆ. ಪೋಸ್ಟರ್ ನಲ್ಲಿನ ಫೋಟೋವನ್ನು ರೆಡ್ಡಿಟ್ನಲ್ಲಿ “ಮತ್ತೊಂದು ಪೀಕ್ ಬೆಂಗಳೂರು ಕ್ಷಣ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದ್ದು, ಇದು ಅವರ ಉದ್ಯಮಶೀಲತಾ ಮನೋಭಾವಕ್ಕೆ ಮೆಚ್ಚುಗೆಯನ್ನು ಹುಟ್ಟುಹಾಕಿದೆ. ಪೋಸ್ಟ್ನ ಕಾಮೆಂಟ್ ವಿಭಾಗದಲ್ಲಿ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕ್ರಿಸ್ಟಿಯ ಪ್ರಯತ್ನಗಳನ್ನು ಶ್ಲಾಘಿಸಿದರು ಮತ್ತು ಅವರಿಗೆ ಶುಭ ಹಾರೈಸಿದರು. “ಇದು ಉತ್ತಮ ಪ್ರಯತ್ನ ಎಂದು ನಾನು ಭಾವಿಸುತ್ತೇನೆ. ಅವರು ಏನಾದರೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂದು ಭಾವಿಸುತ್ತೇನೆ…

Read More

ಮೈಸೂರು: ಮುಡಾ ಹಗರಣ ಸಂಬಂಧ ಇಡಿ ವಿಚಾರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು ಹಾಜರಾದರು. ಮುಡಾ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಕಾರಣದಿಂದಾಗಿ ಇಂದು ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗದರು. ಇಡಿ ಅಧಿಕಾರಿಗಳು ಕೇಳಿದಂತ ಪ್ರಶ್ನೆಗಳಿಗೆ ಸಿಎಂ ಬಾಮೈದ ಮಲ್ಲಿಕಾರ್ಜುನ ಉತ್ತರಿಸಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೇ ದೇವರಾಜು ಎಂಬುವರ ಬಳಿಯಲ್ಲಿ ಭೂಮಿಯನ್ನು ಸಿಎಂ ಬಾಮೈದ ಮಲ್ಲಿಕಾರ್ಜುನ ಖರೀದಿಸಿದ್ದರು. ಇದರ ಬಳಿಕ ಮುಡಾದಿಂದ ಪ್ರತಿಯಾಗಿ ಸಿಎಂ ಪತ್ನಿಗೆ 14 ಸೈಟ್ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. BREAKING: ಚಿರತೆ ದಾಳಿಯಲ್ಲಿ ಮಹಿಳೆ ಸಾವು ಕೇಸ್: ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ – ACF ಘೋಷಣೆ – Kannada News | India News | Breaking news | Live news | Kannada | Kannada News | Karnataka News | Karnataka News BREAKING :…

Read More

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸಂಸದ ಸುಧಾಕರ್ ಅವರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ಕೆಳಕಂಡಂತೆ ಪ್ರಶ್ನೆಗಳನ್ನು ಮುಂದಿಡ್ಡಿದ್ದಾರೆ. ಈ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಅಶೋಕ್ ರವರು ಕರ್ನಾಟಕದ ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುಧಾಕರ್ ಅವರ ಜೊತೆಯಲ್ಲಿ ಈ ದಿನ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಭಲೇ ಜೋಡಿಯ ರೂಪದಲ್ಲಿ ಇಬ್ಬರು ಪ್ರತಿಭಟನೆಯ ನಾಯಕತ್ವವನ್ನು ವಹಿಸಿಕೊಂಡು ರಾಜ್ಯದ ಜನತೆಗೆ ಮನರಂಜನೆಯನ್ನು ನೀಡುತ್ತಿದ್ದಾರೆ. ಕರ್ನಾಟಕದ ಭಾರತೀಯ ಜನತಾ ಪಕ್ಷದಲ್ಲಿ ಇರುವಂತಹ ಗುಂಪುಗಾರಿಕೆಯ ಲಾಭವನ್ನು ಪಡೆದುಕೊಂಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಬಾಚಿಕೊಂಡಿರುವ ಅಶೋಕ್ ರವರು, ವಿರೋಧ ಪಕ್ಷದ ನಾಯಕನಾಗಿ ವಿಫಲವಾಗಿರುತ್ತಾರೆ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಪದೇಪದೇ ಅನವಶ್ಯಕವಾಗಿ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುವ ಇವರು ತಮ್ಮ ಮೇಲಿರುವಂತಹ ಗುರುತರವಾದ ಆರೋಪಗಳಿಗೆ ಸಾರ್ವಜನಿಕವಾಗಿ ಇದುವರೆಗೆ…

Read More

ಬೆಳಗಾವಿ: ಜಿಲ್ಲೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರೇಶ್ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಪ್ರಕರಣ ಸಂಬಂಧ ಅನಾಮಧೇಯ ಪತ್ರವೊಂದು ಪತ್ತೆಯಾಗಿದೆ. ಅದರಲ್ಲಿ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೇಸ್ ಮುಚ್ಚಿಹಾಕಬಾರದು. ಸತ್ತವರಿಗೆ ನ್ಯಾಯ ಸಿಗಬೇಕು ಎಂಬುದಾಗಿ ಆಗ್ರಹಿಸಲಾಗಿದೆ. ಈ ಸಂಬಂಧ ಬೆಳಗಾವಿಯ ಪೊಲೀಸ್ ಕಮೀಷನರ್, ಜಿಲ್ಲಾಧಿಕಾರಿ, ಪ್ರಾದೇಶಿಕ ಆಯುಕ್ತರಿಗೆ, ರಾಜ್ಯಪಾಲರಿಗೂ ಪತ್ರವನ್ನು ಅಡ್ರೆಸ್ ಮಾಡಲಾಗಿದೆ. ಅದರಲ್ಲಿ ಬೆಳಗಾವಿ ತಹಶೀಲ್ದಾರ ಕಚೇರಿಯ ಕ್ಲಾರ್ಕ್ ರುದ್ರಣ್ಣ ಯಡವಣ್ಣನವರ ಇವರ ಕೊಲೆಗೆ ತಹಶೀಲ್ದಾರ ಜೀಪ ಗಾಡಿ ಡ್ರೈವರನಾದ ಯಲ್ಲಪ್ಪ ಬಡಸದ ಇವನೇ ಮೂಲ ಸೂತ್ರದಾರ.  ಅದು ಸೂಸೈಡ ಅಲ್ಲ. ಯಲ್ಲಪ್ಪನಿಗೆ ವಿಚಾರಣೆ ಮಾಡಿದರೇ ಕೊಲೆ ರಹಸ್ಯ ಹೊರ ಬರುತ್ತದೆ ಎಂದಿದ್ದಾರೆ. ಇನ್ನೂ ಯಲ್ಲಪ್ಪನ ಹೆಂಡತಿಯು ಅನೈತಿಕ ಸಂಬಂಧ ಇಟ್ಟುಕೊಂಡು ಅವನ ಎಲ್ಲಾ ದುಡ್ಡು ಹೊಡದಿರುತ್ತಾಳೆ. ಸತ್ತವನಿಗೆ ನ್ಯಾಯ ಸಿಗಬೇಕು. ಕೇಸ್ ಮುಚ್ಚಿ ಹಾಕಬಾರದು ಎಂಬುದಾಗಿ ಆಗ್ರಹಿಸಿದ್ದಾರೆ. https://kannadanewsnow.com/kannada/woman-killed-in-leopard-attack-acf-announces-rs-15-lakh-ex-gratia-for-kin-of-deceased/ https://kannadanewsnow.com/kannada/5-lakh-citizens-travelled-in-a-single-day-indian-aviation-creates-history/

Read More

ಬೆಂಗಳೂರು: ಇಲ್ಲಿನ ಕಂಬಾಳು ಗೊಲ್ಲರಹಟ್ಟಿಯಲ್ಲಿ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿತ್ತು. ಸ್ಥಳಕ್ಕೆ ಎಸಿಎಫ್ ನಿಜಾಮುದ್ದೀನ್ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಮೃತ ಮಹಿಳೆಯ ಕುಟುಂಬಕ್ಕೆ 15 ಲಕ್ಷ ಪರಿಹಾರವನ್ನು ಅರಣ್ಯ ಇಲಾಖೆಯಿಂದ ನೀಡುವುದಾಗಿ ಘೋಷಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಕಂಬಾಳು ಗೊಲ್ಲರಹಟ್ಟಿಯ ಬಳಿಯಲ್ಲಿ ಚಿರತೆ ದಾಳಿಯಿಂದಾಗಿ ಕರಿಯಮ್ಮ(55) ಎಂಬ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಕೂಡಲೇ ನರಭಕ್ಷಕ ಚಿರತೆಯನ್ನು ಹಿಡಿಯುವಂತೆ ಆಗ್ರಹ ಹೆಚ್ಚಾಗಿತ್ತು. ಇಂದು ಸ್ಥಳಕ್ಕೆ ಎಸಿಎಫ್ ನಿಜಾಮುದ್ದೀನ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ಚಿರತೆಯನ್ನು ಬಂಧಿಸಲು ಬೋನ್ ಇರಿಸಲಾಗುತ್ತದೆ ಎಂಬುದಾಗಿ ಘೋಷಿಸಿದರು. ಇನ್ನೂ ಚಿರತೆ ದಾಳಿಯಲ್ಲಿ ಮೃತ ಮಹಿಳೆಯ ಕುಟುಂಬಕ್ಕೆ 15 ಲಕ್ಷ ಪರಿಹಾರವನ್ನು ನೀಡುವುದಾಗಿ ಘೋಷಿಸಿದರು. ಕೂಡಲೇ ಮೃತ ಮಹಿಳೆಯ ಕುಟುಂಬಕ್ಕೆ ನೀಡುವುದಾಗಿ ತಿಳಿಸಿದರು. https://kannadanewsnow.com/kannada/kangana-ranauts-emergency-to-release-on-january-17/ https://kannadanewsnow.com/kannada/5-lakh-citizens-travelled-in-a-single-day-indian-aviation-creates-history/

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಹೆಚ್ಚಿನ ನಿರೀಕ್ಷೆಯ ನಂತರ, ಕಂಗನಾ ರನೌತ್ ಅವರ ರಾಜಕೀಯ ನಾಟಕ ತುರ್ತು ಪರಿಸ್ಥಿತಿ ಸೆನ್ಸಾರ್ ಅನುಮತಿಯನ್ನು ಪಡೆದಿದೆ ಮತ್ತು ಈಗ ಜನವರಿ 17, 2025 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 1970 ರ ದಶಕದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದಾಗ ಚಿತ್ರೀಕರಿಸಲಾದ ಈ ಚಿತ್ರವು ಭಾರತೀಯ ಪ್ರಜಾಪ್ರಭುತ್ವದ ಅತ್ಯಂತ ನಿರ್ಣಾಯಕ ಮತ್ತು ಹೆಚ್ಚು ಮಾತನಾಡುವ ಅಧ್ಯಾಯಗಳಲ್ಲಿ ಒಂದರ ಅನ್ವೇಷಣೆಯನ್ನು ನೀಡುವ ಭರವಸೆ ನೀಡುತ್ತದೆ. ಕಂಗನಾ ರನೌತ್ ಬರೆದು, ನಿರ್ದೇಶಿಸಿದ ಮತ್ತು ಶೀರ್ಷಿಕೆ ಹೊಂದಿರುವ ತುರ್ತು ಪರಿಸ್ಥಿತಿ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ಜೀವನ ಮತ್ತು ಸಮಯವನ್ನು ಚಿತ್ರಿಸುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ನವೀಕರಣವನ್ನು ಹಂಚಿಕೊಂಡ ಕಂಗನಾ, “ಜನವರಿ 17, 2025 – ರಾಷ್ಟ್ರದ ಅತ್ಯಂತ ಶಕ್ತಿಶಾಲಿ ಮಹಿಳೆಯ ಮಹಾಕಾವ್ಯ ಕಥೆ ಮತ್ತು ಭಾರತದ ಹಣೆಬರಹವನ್ನು ಬದಲಾಯಿಸಿದ ಕ್ಷಣ. #Emergency – 17.01.2025 ರಂದು ಚಿತ್ರಮಂದಿರಗಳಲ್ಲಿ ಮಾತ್ರ ಅನಾವರಣಗೊಳ್ಳುತ್ತದೆ! ಈ ಚಿತ್ರವು ಆರಂಭದಲ್ಲಿ ಈ ವರ್ಷದ ಸೆಪ್ಟೆಂಬರ್…

Read More

ಬೆಂಗಳೂರು: ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ಕುರಿತು ವಸತಿ ಸಚಿವ ಜಮೀರ್ ಅಹಮದ್ ಅವರು ನೀಡಿರುವ ಹೇಳಿಕೆ ನಾಗರೀಕ ಸಮಾಜ ಒಪ್ಪುವಂಥದ್ದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಒಂದು ಗೌರವ ಇದ್ದೇ ಇರುತ್ತದೆ. ಶ್ರೀಮಂತ ಇರಲಿ, ಬಡವ ಇರಲಿ, ಎಲ್ಲರಿಗೂ ಅವರದ್ದೇ ಆದ ಗೌರವ ಇರುತ್ತದೆ. ಹಾಗಾಗಿ ಯಾರೂ ಯಾರನ್ನೂ ಕೊಂಡುಕಳ್ಳಲು ಆಗುವುದಿಲ್ಲ. ಇದರ ಅರಿವು ಇರುವವರು ಯಾರೂ ಹೀಗೆ ಮಾತನಾಡುವುದಿಲ್ಲ ಎಂದು ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ಮಾಡಿದ್ದ 40% ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಲಿ ಉಲ್ಲೇಖ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ವಿಚಾರದ ಬಗ್ಗೆ ಈಗ ಮಾತನಾಡುವುದಿಲ್ಲ. ಈಗಾಗಲೇ ನಮ್ಮ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಮಾತನಾಡಿದ್ದಾರೆ. ಉಪಚುನಾವಣೆ ಫಲಿತಾಂಶ ಬಂದ ನಂತರ ನಾನು ಮಾತನಾಡುತ್ತೇನೆ, ಅಲ್ಲೀವರೆಗೂ ನಾನು ಮಾತನಾಡುವುದಿಲ್ಲ. 40% ಆರೋಪದ ಬಗ್ಗೆ…

Read More

ಶಿವಮೊಗ್ಗ: ಅಕ್ಟೋಬರ್ ತಿಂಗಳಿನ ಅಕಾಲಿಕ ಮಳೆಯಿಂದಾಗಿ ಶಿಕಾರಿಪುರ ತಾಲ್ಲೂಕಿನ ಕಡೇನಂದಿಹಳ್ಳಿ, ತಡಸನಹಳ್ಳಿ, ಮದಗಹಾರನಹಳ್ಳಿ, ದಿಂಡದಹಳ್ಳಿ, ಮತ್ತು ದಬ್ಬಣಬೈರನಹಳ್ಳಿ ಗ್ರಾಮಗಳಲ್ಲಿ ರೈತರು ಬೆಳೆದ ಬಾಳೆ, ಶುಂಠಿ ಮತ್ತು ತರಕಾರಿ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿದ್ದು ನಷ್ಟ ಪರಿಹಾರ ಕೊಡಲು ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿರುವುದರಿಂದ ಸಾರ್ವಜನಿಕರು ಆಕ್ಷೇಪಣೆಗಳನ್ನು ನ. 21 ರಂದು ಲಿಖಿತವಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ ಸಲ್ಲಿಸುವುದು. ಸುಣ್ಣದಕೊಪ್ಪ ಗ್ರಾ.ಪಂ, ತಡಸಹಳ್ಳಿ ಗ್ರಾ. ಮಹೇಶಕುಮಾರ ಎ.ಜಿ ಇವರ 0.36 ಹೆ. ಟೋಮ್ಯಾಟೋ ಬೆಳೆ ಮತ್ತು 0.18 ಹೆ. ಬದನೆಕಾಯಿ ಬೆಳೆ ಹಾನಿಯಾಗಿದೆ. ತಡಸಹಳ್ಳಿ ಗ್ರಾ. ಪ್ರಾಂಶಾತ ಇವರ 0.40 ಹೆ. ಟೋಮ್ಯಾಟೋ ಬೆಳೆ ಮತ್ತು 0.18 ಹೆ. ಬದನೆಕಾಯಿ ಬೆಳೆ ಹಾನಿಯಾಗಿದೆ. ಕಡೇನಂದಿಗಳ್ಳಿ ಗ್ರಾ, ವಿಜಯಾ ಬಿ.ಬಿ ಇವರ 0.18 ಹೆ. ಶುಂಠಿ ಹಾಗೂ 0.08 ಹೆ. ಶುಂಠಿ ಬೆಳೆ ಹಾನಿಯಾಗಿದೆ. ಕಡೇನಂದಿಗಳ್ಳಿ ಗ್ರಾ, ಮಾಲತೇಶ ಇವರ 0.18 ಹೆ. ಶುಂಠಿ ಬೆಳೆ…

Read More

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಅರಣ್ಯಾಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದಾರೆ. ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಯರಾಂ ಸೂರನಗದ್ದೆ ನಿವಾಸದಲ್ಲಿ ಜಿಂಕೆ ಮಾಂಸವನ್ನು ಜಪ್ತಿ ಮಾಡಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಜಯರಾಂ ಅವರ ಸೂರನಗದ್ದೆಯ ಬೀರೇಶ್ವರ ದೇವಸ್ಥಾನದ ಬಳಿಯ ನಿವಾಸದಲ್ಲಿ ಜಿಂಕೆಯನ್ನು ಹತ್ಯೆ ಮಾಡಿ, ಮಾಂಸ ದೂಟ ಮಾಡುತ್ತಿದ್ದ ಖಚಿತ ಮಾಹಿತಿ ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಅವರಿಗೆ ತಿಳಿದು ಬಂದಿತ್ತು. DFO ಗಮನಕ್ಕೆ ತಂದಿದ್ದರು. ಅವರ ನಿರ್ದೇಶನದ ಮೇರೆಗೆ ACF ರವಿ ನೇತೃತ್ವದಲ್ಲಿ, RFO ಅಣ್ಣಪ್ಪ  ಅವರು ಸೂರನಗದ್ದೆಯಲ್ಲಿನ ಜಯರಾಂ ನಿವಾಸದ ಮೇಲೆ ಕಳೆದ ತಡರಾತ್ರಿ 1 ಗಂಟೆಯ ಹಾಗೆ ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಜಯರಾಂ ಸೂರನಗದ್ದೆ ಅವರ ಮನೆಯಲ್ಲಿ ಒಂದರಿಂದ ಎರಡು ಕೆಜಿಯಷ್ಟು ಜಿಂಕೆ ಮಾಂಸ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಜಿಂಕೆಯನ್ನು ಹತ್ಯೆ ಮಾಡಿ, ಮಾಂಸವನ್ನು ಹಂಚಿಕೊಳ್ಳಲಾಗಿತ್ತು ಎನ್ನಲಾಗುತ್ತಿದೆ. ಇದೀಗ ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯರಾಂ…

Read More