Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣ. ಈ ಕುರಿತು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಎಸ್ಐಟಿಯಿಂದ ತನಿಖೆ ನಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ತನಿಖೆಗೆ ನಾವು ಒಪ್ಪುವುದಿಲ್ಲ. ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಬಳಿಗೆ ಪಿಐಎಲ್ ಹೋಗುತ್ತಿದೆ. ಹೈಕೋರ್ಟ್ ನ್ಯಾಯಾಧೀಶರ ಸುಪರ್ದಿಯಲ್ಲೇ ಇದರ ತನಿಖೆ ನಡೆಯಬೇಕಿದೆ. ಇದಕ್ಕಾಗಿ ಎಸ್ಐಟಿ ರಚಿಸಬೇಕು. ಇದರ ವರದಿ ನೇರವಾಗಿ ಹೈಕೋರ್ಟ್ಗೆ ಸಲ್ಲಿಕೆಯಾಗಬೇಕು. ಈ ಎಲ್ಲ ಸಾವುಗಳಿಗೆ ನ್ಯಾಯ ನೀಡಬೇಕು. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು. ಇದು ಕ್ರಿಕೆಟ್ ಅಸೋಸಿಯೇಶನ್ ಕಾರ್ಯಕ್ರಮ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಜವಾಬ್ದಾರಿ ಮರೆತಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿಹಾಕಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ನೋಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯನವರ ಕೈ ಕೆಳಗೆ ಕೆಲಸ ಮಾಡುವ, ಅವರಿಗೆ ವರದಿ…
ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕಿಕ್ತ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಈ ಮೇಲಿನ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಮತ್ತು ಇತರೆ ದಾಖಾಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ…
ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗವು ರೈಲ್ವೆ ಮಂಡಳಿಯ ನಿರ್ದೇಶನದಂತೆ ಅಂತಾರಾಷ್ಟ್ರೀಯ ಮಟ್ಟದ ಲೆವಲ್ ಕ್ರಾಸಿಂಗ್ ಜಾಗೃತಿದಿನ (ILCAD) ಅನ್ನು 2025ರ ಜೂನ್ 5 ರಂದು ಆಚರಿಸಿತು. ಈ ಕಾರ್ಯಕ್ರಮದ ಉದ್ದೇಶ, ಮಾನವ ಸಹಿತ ಕ್ರಾಸಿಂಗ್ಗಳಲ್ಲಿ ರಸ್ತೆ ಬಳಕೆದಾರರಲ್ಲಿ ಜಾಗೃತಿ ಮೂಡಿಸಿ ಅಪಘಾತಗಳನ್ನು ತಡೆಯುವುದು. ಈ ಬಗ್ಗೆ ಮಾಹಿತಿ ನೀಡಿರುವಂತ ಮೈಸೂರು ನೈರುತ್ಯ ರೈಲ್ವೆ ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ್ ಧರ್ಮರಾಜ್ ಕಲಗೊಂಡ ಅವರು, ಮೈಸೂರು ನಗರದ ಕೋಕ್ಕರಹಳ್ಳಿ ಲೆವಲ್ ಕ್ರಾಸಿಂಗ್ ಗೇಟ್ ಸಂಖ್ಯೆ 01 ರಲ್ಲಿ ಬೆಳಿಗ್ಗೆ 09:30 ಗಂಟೆಗೆ ಅಂತಾರಾಷ್ಟ್ರೀಯ ಮಟ್ಟದ ಲೆವೆಲ್ ಕ್ರಾಸಿಂಗ್ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಎಂದಿದ್ದಾರೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ (DRM) ಮುದಿತ್ ಮಿತ್ತಲ್, ಇತರ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಜಾಗೃತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ನೈಋತ್ಯ ರೈಲ್ವೆ ಮೈಸೂರು ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ತಂಡವೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರೊಂದಿಗೆ ಸಂವಾದ…
ಬೆಂಗಳೂರು : ದೊಡ್ಡಮಟ್ಟದ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಕಾರ್ಯಕ್ರಮಗಳಿಗೆ ಹೊಸ ಎಸ್ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಘಟನೆ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿ ಆಗಿರಲಿಲ್ಲ. ಮೊದಲನೇಯದಾಗಿ ಸಾವನ್ನಪ್ಪಿರುವ ಆತ್ಮಕ್ಕೆ ಶಾಂತಿ ಕೊರುತ್ತೇನೆ. ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಸಿಎಂ ಅವರು ನಿನ್ನೆ ಸಭೆ ನಡೆಸಿ, ಅನೇಕ ಮಾಹಿತಿ ಪಡೆದು ಮಾತನಾಡಿದ್ದಾರೆ. ಈ ಬಗ್ಗೆ ಮ್ಯಾಜೆಸ್ಟ್ರೆಟಿಯಲ್ ತನಿಖೆಗೆ ಆದೇಶ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಯಾಗಬೇಕೆಂದು ಆದೇಶಿಸಲಾಗಿದೆ. ಅವರು ಯಾರೇ ಆಗಿರಲಿ ಕಠಿಣವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ವಿವರಣೆ ಮಾಡಲು ಹೋಗುವುದಿಲ್ಲ. ತನಿಖೆಯ ವರದಿ ಬರುವವರೆಗು ಹೇಳಲು ಸಾಧ್ಯವಿಲ್ಲ ಎಂದರು ದುರ್ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದು, 56 ಜನ ಗಾಯಗೊಂಡಿದ್ದಾರೆ. 46 ಜನ ಚಿಕಿತ್ಸೆ ಪಡೆದು ಮನೆಗಳಿಗೆ ಹೋಗಿದ್ದಾರೆ. 10 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡಿಲ್ಲ ಎಂದು…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಚಾಲಕ ಕಂ ನಿರ್ವಾಹಕ ಹುದ್ದೆಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದು, ಕೆ ಎಸ್ ಆರ್ ಟಿ ಸಿಯಿಂದ ಕರೆಯಲಾಗಿದ್ದಂತ ಚಾಲಕ ಕಂ ನಿರ್ವಾಹಕ ಹುದ್ದೆಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ನಿಗಮದ ಕೇಂದ್ರ ಕಚೇರಿಯ ಸೂಚನಾ ಫಲಕದಲ್ಲಿ ಮತ್ತು ನಿಗಮದ ವೆಬ್ ಸೈಟ್ www.ksrtcjobs.karnataka.gov.in ನಲ್ಲಿ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ. ಚಾಲಕ ಕಂ ನಿರ್ವಾಹಕರ ಹುದ್ದೆಯ ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಕೊನೆಯ ಅಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದಂತೆ ವಿವರವನ್ನು ಸಂಭವನೀಯ ಆಯ್ಕೆಪಟ್ಟಿಯಲ್ಲಿ ಪರಿಶೀಲಿಸುವಂತೆ ಸೂಚಿಸಿದ್ದಾರೆ. ಇನ್ನೂ ಸಂಭವನೀಯ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆ ಇದ್ದಲ್ಲಿ ದಿನಾಂಕ: 11-06-2025 ರ ಸಂಜೆ 5.30 ರ ಒಳಗಾಗಿ ಕರಾರಸಾ ನಿಗಮ, ಕೇಂದ್ರ ಕಛೇರಿ, ನೇಮಕಾತಿ ಶಾಖೆ, ಶಾಂತಿನಗರ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಅಥವಾ ನಿಗಮದ ಅಧಿಕೃತ ಇ-ಮೇಲ್ dycpmrct@ksrtc.org ಮುಖಾಂತರ…
ಶಿವಮೊಗ್ಗ: ಸಾಗರದ ಜನರಿಗೆ ಮತ್ತಷ್ಟು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಅದೇ ಇಂದು ನಗರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸುವ ಮೂಲಕ ಜನರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ನಮ್ಮ ಕ್ಲಿನಿಕ್ ಅನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಸಾಗರದ ಬಿಹೆಚ್ ರಸ್ತೆಯ ಟಿವಿಎಸ್ ಶೋ ರೂಂ ಹಿಂಭಾಗದಲ್ಲಿ ನಮ್ಮ ಕ್ಲಿನಿಕ್ ಸಾರ್ವಜನಿಕರ ಸೇವೆಗೆ ಶಾಸಕರು ಲೋಕಾರ್ಪಣೆಗೊಳಿಸಿದರು. ಈ ಬಳಿಕ ಮಾತನಾಡಿದಂತ ಅವರು ಸಾಗರದ ಖಾಸಗಿ ಬಸ್ ನಿಲ್ದಾಣದ ಸಮೀಪದಲ್ಲೇ ನಮ್ಮ ಕ್ಲಿನಿಕ್ ತೆರೆಯಲಾಗಿದೆ. ಸಾಗರ ತಾಲ್ಲೂಕಿನ ವಿವಿಧ ಊರುಗಳಿಂದ ಆಗಮಿಸುವವರಿಗೆ ಬಸ್ ನಿಲ್ದಾಣದ ಸಮೀಪದಲ್ಲೇ ನಮ್ಮ ಕ್ಲಿನಿಕ್ ನಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಸಿಗುವಂತ ಕೆಲಸ ಮಾಡಲಾಗಿದೆ. ‘ನಮ್ಮ ಕ್ಲಿನಿಕ್’ಗಳಲ್ಲಿ ತಲಾ ಒಬ್ಬರು ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಲಭ್ಯವಿದ್ದು, ಬಡವರು, ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ…
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಕೋವಿಡ್ ಸೋಂಕಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದರೇ, 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 592 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 153 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದಿದೆ. ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಉಡುಪಿಯಲ್ಲಿ 65 ವರ್ಷದ ವ್ಯಕ್ತಿ ಹಾಗೂ ಬೆಂಗಳೂರಲ್ಲಿ 42 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಪ್ರಸ್ತುತ ರಾಜ್ಯದಲ್ಲಿ 324 ಸಕ್ರೀಯ ಕೊರೋನಾ ಕೇಸ್ ಗಳಿದ್ದಾವೆ. 317 ಜನರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, ಜನರಲ್ ಬೆಡ್ ನಲ್ಲಿ ಐವರು, ಐಸಿಯುನಲ್ಲಿ ಇಬ್ಬರು ಸೇರಿದಂತೆ 7 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದೆ. https://twitter.com/DHFWKA/status/1930265319316304261 https://kannadanewsnow.com/kannada/minister-jameer-ahmad-gifted-a-bike-to-a-muslim-student-who-scored-125-out-of-125-in-sanskrit/ https://kannadanewsnow.com/kannada/due-to-the-mishap-of-playing-without-prior-preparation-by-vijayendras-comment/
ಬೆಂಗಳೂರು : “ಈ ದುರ್ಘಟನೆ ಆಗಬಾರದಿತ್ತು ಆಗಿದೆ. ನಾವು ಮುಂಜಾಗೃತಾ ಕ್ರಮವಾಗಿ ಮೆರವಣಿಗೆಯನ್ನು ರದ್ದು ಮಾಡಿದ್ದೆವು. ಈ ದುರ್ಘಟನೆ ನಡೆದಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಮೃತರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಬೌರಿಂಗ್ ಅಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. “ದುರ್ಘಟನೆ ಬಗ್ಗೆ ಪೊಲೀಸ್ ಆಯುಕ್ತರ ಜತೆ ಚರ್ಚೆ ಮಾಡಿದ್ದೇನೆ. ಲಕ್ಷಾಂತರ ಜನ ಸೇರಿದ್ದು, ಕೆಲವರು ಕ್ರೀಡಾಂಗಣದ ಗೇಟ್ ಅನ್ನು ಮುರಿಯುವ ಪ್ರಯತ್ನ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 6 ಜನ ಮೃತಪಟ್ಟಿದ್ದು, 11-12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜನರು ಆತಂಕಕ್ಕೆ ಒಳಗಾಗದೇ, ಶಾಂತರಾಗಿ ಸಹಕಾರ ನೀಡಬೇಕು. ಆರ್ ಸಿಬಿ ತಂಡದ ಸಂಭ್ರಮಾಚಾರಣೆಯನ್ನು 10 ನಿಮಿಷಕ್ಕೆ ಮೊಟಕುಗೊಳಿಸಲಾಗಿದೆ” ಎಂದು ತಿಳಿಸಿದರು. “ಮೆಟ್ರೋಗಳಲ್ಲೂ ಜನದಟ್ಟಣೆ ಹೆಚ್ಚಾಗಿದೆ. ಪೊಲೀಸರು ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದರು. ಆದರೆ ಅನಿರೀಕ್ಷಿತವಾಗಿ ಜನ ಸೇರಿದ್ದಾರೆ” ಎಂದು ತಿಳಿಸಿದರು.…
ಬೆಂಗಳೂರು: ಆರ್.ಸಿ.ಬಿ. ಗೆಲುವಿನ ವಿಜಯೋತ್ಸವದ ಸಂದರ್ಭದಲ್ಲಿ ಇಂದು ನಡೆದ ಕಾಲ್ತುಳಿತ ಮತ್ತು ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರ ಪರಿಣಾಮವಾಗಿ 11ಕ್ಕೂ ಹೆಚ್ಚು ಜನರು ಪ್ರಾಣ ಕಳಕೊಂಡಿದ್ದಾರೆ. ನೂರಾರು ಜನರು ಆಸ್ಪತ್ರೆ ಸೇರಿದ್ದಾರೆ; ಇನ್ನೂ ಎಷ್ಟು ಸಾವಾಗಲಿದೆಯೋ ಗೊತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಇದೆಲ್ಲಕ್ಕೂ ರಾಜ್ಯ ಸರಕಾರವೇ ಹೊಣೆ ಎಂದು ತಿಳಿಸಿದರು. ಪ್ರಶ್ನೆಗೆ ಉತ್ತರ ನೀಡಿದ ಅವರು, ಲಭ್ಯ ಮಾಹಿತಿ ಪ್ರಕಾರ 12 ಜನರು ಈಗಾಗಲೇ ಪ್ರಾಣ ಕಳಕೊಂಡಿದ್ದಾರೆ. ಸ್ಟೇಡಿಯಂನಲ್ಲಿ ಪರದಾಟ ಮುಂದುವರೆದಿದೆ. ಅದರ ನಡುವೆ ಕಾರ್ಯಕ್ರಮ ನಡೆಯುತ್ತಿದೆ ಎಂದು ಆಕ್ಷೇಪಿಸಿದರು. ಪೂರ್ವತಯಾರಿ ಇಲ್ಲದೆ ಹೀಗಾಗಿದೆ. ಇದೆಲ್ಲದಕ್ಕೂ ರಾಜ್ಯ ಸರಕಾರವೇ ಹೊಣೆ ಎಂದು ಆರೋಪಿಸಿದರು. ಆತುರಾತುರವಾಗಿ ಇವತ್ತೇ ಈ ಕಾರ್ಯಕ್ರಮ ಆಯೋಜಿಸಬೇಕಿತ್ತೇ ಎಂದು ಅವರು ಇನ್ನೊಂದು ಪ್ರಶ್ನೆಗೆ ಮರುಪ್ರಶ್ನೆ ಹಾಕಿದರು. ನಿನ್ನೆ ಆರ್.ಸಿ.ಬಿ. ಫೈನಲ್ಸ್ನಲ್ಲಿ ಗೆದ್ದಾಗ…
ಬೆಂಗಳೂರು: ಇಂದು ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿ 33 ಮಂದಿ ಗಾಯಗೊಳ್ಳೋದಕ್ಕೆ ನಿರೀಕ್ಷೆ ಮೀರಿ ಜನರು ಬಂದಿದ್ದೇ ದುರಂತಕ್ಕೆ ಕಾರಣ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿ ಬಿ ಚಾಂಪಿಯನ್ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ನಿರೀಕ್ಷೆಗೂ ಮೀರಿ ಜನರು ಬಂದಿದ್ದಾರೆ. 35,000 ಆಸನದ ವ್ಯವಸ್ಥೆ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿದೆ. ಆದರೇ 2 ರಿಂದ 3 ಲಕ್ಷ ಜನರು ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ಸೇರಿದ್ದೇ ದುರಂತಕ್ಕೆ ಕಾರಣ ಎಂಬುದಾಗಿ ತಿಳಿಸಿದರು. ಆರ್ ಸಿಬಿ ವಿಜಯೋತ್ಸವ ಆಚರಣೆ ಮಾಡೋದಕ್ಕೆ ಕ್ರಿಕೇಟ್ ಅಸೋಸಿಯೇಷನ್ ಅವರು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ಕೂಡ ಕಾರ್ಯಕ್ರಮ ಏರ್ಪಾಡು ಮಾಡಿದ್ದೆವು. ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ವಿಜಯೋತ್ಸವ ಆಚರಣೆಯ ವೇಳೆ ಬಹಳ ದೊಡ್ಡ ದುರಂತ ನಡೆದಿದೆ. ಜನರು ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 33 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದರು. ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ,…