Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ತಮ್ಮದೇ ಆದಂತ ಸಂಪ್ರದಾಯ, ಆಚರಣೆಗಳ ಮೂಲಕ ಗುರ್ತಿಸಿಕೊಂಡಿರುವಂತ ಸಮುದಾಯ ಕಾಡುಗೊಲ್ಲ ಬುಡಕಟ್ಟು ಸಮುದಾಯವಾಗಿದೆ. ಈ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹ ಹಲವು ದಿನಗಳ ಹಿಂದಿನದ್ದು. ಇಂದು ಮತ್ತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಈ ಒತ್ತಾಯವನ್ನು ಮಾಡಲಾಗಿದೆ. ಈ ವೇಳೆ ಮಾತನಾಡಿದಂತ ಎಂಎಲ್ಸಿ ನಾಗರಾಜ್ ಯಾದವ್ ಅವರು, ಈ ಜನಾಂಗ ಹಿಂದುಳಿದೆ. ಈ ಜನಾಂಗವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ನೀವೇ ಮುಂದಾಗಬೇಕು. ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸಲ್ಲಿಸುವ ಕೆಲಸವಾಗಬೇಕು. ಅಲೆ ಮಾರಿ ಪಟ್ಟಿಗೆ ಸೇರಿಸುವ ಕೆಲಸ ಆಗಬೇಕು. ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ವ್ಯಕ್ತಿಯನ್ನೇ ಅಧ್ಯಕ್ಷರನ್ನಾಗಿ ಈ ಕೂಡಲೇ ಮಾಡಬೇಕು ಎಂದು ಆಗ್ರಹಿಸಿದರು. ಆ ಬಳಿಕ ಮಾತನಾಡಿದಂತ ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಧ್ಯಕ್ಷರಾದಂತ ಸಿ.ಶಿವು ಯಾದವ್ ಮಾತನಾಡಿ, 2010ರಲ್ಲಿ ಕುಲಶಾಸ್ತ್ರ ಅಧ್ಯಯ ಮಾಡಿಸಿ, 2014ರಲ್ಲಿ ನಿಮ್ಮ ಸಚಿವ ಸಂಪುಟದ ಮುಂದೆ ತಂದು, ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದಕ್ಕಾಗಿ ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ…
ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಬೇಕು. ಕಡ್ಡಾಯವಾಗಿ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆದೇಶ ಮಾಡಿದರು. ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಅವರು ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು. ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಅಂತ ಸೂಚಿಸಿದರು. ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ…
ಧಾರವಾಡ: : 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ (FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ಏಳು ತಾಲ್ಲೂಕಿನ 69,573 ರೈತ ಫಲಾನುಭವಿಗಳಿಗೆ ರೂ.48.45 ಕೋಟಿಗಳನ್ನು ಒಟ್ಟು ಕ್ಷೇತ್ರ 55,809.19 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಒಂದನೇ ಹಂತವಾಗಿ ಸೆಪ್ಟಂಬರ್ ತಿಂಗಳಲ್ಲಿ ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಒಟ್ಟು 19,058 ಜನ ರೈತರಿಗೆ ರೂ.6.34 ಕೋಟಿ ಒಟ್ಟು ಕ್ಷೇತ್ರ 7,706.51 ಹೆಕ್ಟರಗೆ ಇನಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ…
ಬೆಂಗಳೂರು: ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಆ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. • ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್ ಕಾರ್ಡುದಾರನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು. ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೊಟೀಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು. • ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. • ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ರೂ.4692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯದವರೆಗೆ ರೂ. 3253 ಕೋಟಿ ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ.…
ಕಾಂಚಿಪುರಂ : “ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಗುರುವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜತೆ ಶಿವಕುಮಾರ್ ಅವರು ಮಾತನಾಡಿದರು. “400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ”ಎಂದು ತಿಳಿಸಿದರು. ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ “ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ…
ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಆರು ಮಂದಿ ಬಲಿಯಾದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗುರುವಾರ ಪ್ರಕಟಿಸಿದ್ದಾರೆ. ಸುಗಮ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ವಿಫಲವಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸುವ ಮೂಲಕ ಸಿಎಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ತಿರುಪತಿಯ ಮೇಲ್ವಿಚಾರಣಾ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ನಾನು ನೋಡಿದ್ದೇನೆ ಎಂದು ಸಿಎಂ ನಾಯ್ಡು ಕಾಲ್ತುಳಿತದ ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿಯಾದ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಗಮ ಕಾರ್ಯಾಚರಣೆ ನಡೆಸಲು ವಿಫಲರಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ತಿರುಪತಿ ಎಸ್ಪಿ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಇನ್ನೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದರು. ಘಟನೆಯಿಂದ ತನಗೆ ನೋವಾಗಿದೆ ಎಂದು ಹೇಳಿದ ಆಂಧ್ರ ಸಿಎಂ, ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದರು. 33 ಮಂದಿ ಗಾಯಗೊಂಡಿದ್ದಾರೆ. ಅವರಿಗೆ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು ಎಂದು…
ಚಿತ್ರದುರ್ಗ : ವಾಣಿ ವಿಲಾಸ ಸಾಗರ ಜಲಾಶಯಕ್ಕೆ 700 ಕ್ಯೂಸೆಕ್ಸ್ ಒಳಹರಿವು ಬರುತ್ತಿದ್ದು, ವಾಣಿವಿಲಾಸ ಸಾಗರ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರು ಯಾವುದೇ ಸಂದರ್ಭದಲ್ಲಾದರೂ ಕೋಡಿಯ ಮುಖಾಂತರ ವೇದಾವತಿ ನದಿಗೆ ಹರಿಯುತ್ತದೆ. ಹಾಗಾಗಿ ವೇದಾವತಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ಹಿರಿಯೂರು ಕ್ಯಾಂಪ್ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಭದ್ರಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ. https://kannadanewsnow.com/kannada/b-ed-students-applications-invited-for-special-incentives/ https://kannadanewsnow.com/kannada/bengaluru-power-outages-in-these-areas-tomorrow-and-day-after-tomorrow/
ಮಡಿಕೇರಿ : 2024-25 ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ವಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ ಆನ್ಲೈನ್ನಲ್ಲಿ (https://sevasindhu.karnataka.gov.in) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ, 20 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ,ಎಫ್.ಎಂ.ಸಿ. ಕಾಲೇಜು ಹತ್ತಿರ ಮಡಿಕೇರಿ, ದೂರವಾಣಿ ಸಂಖ್ಯೆ ; 08272-225528 ಎಂದು ಪ್ರಕಟಣೆ ತಿಳಿಸಿದೆ. https://kannadanewsnow.com/kannada/kpsc-should-admit-its-helplessness-for-not-providing-justice-to-kannadiga-candidates-dr-purushothama-bilimale/ https://kannadanewsnow.com/kannada/bengaluru-power-outages-in-these-areas-tomorrow-and-day-after-tomorrow/
ಬೆಂಗಳೂರು: ಕನ್ನಡ ಮಾಧ್ಯಮದ ಪ್ರಶ್ನೆ ಪತ್ರಿಕೆಗಳಲ್ಲಿನ ಎಡವಟ್ಟುಗಳನ್ನು ಮುಂದುವರೆಸಿರುವ ಕರ್ನಾಟಕ ಲೋಕಸೇವಾ ಆಯೋಗದ ನಡೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತಂತೆ ಲೋಕಸೇವಾ ಆಯೋಗಕ್ಕೆ ಪತ್ರ ಬರೆದಿರುವ ಡಾ.ಬಿಳಿಮಲೆ, ಆಯೋಗವು ಮತ್ತೊಮ್ಮೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿರುವುದು ವಿಷಾದನೀಯವಾದ ಸಂಗತಿಯಾಗಿದೆ. ಪ್ರತಿಬಾರಿ ಆಯೋಗವು ನಡೆಸುವ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಅವಗಣಿಸುತ್ತಿರುವುದು ಆಯೋಗವು ಕನ್ನಡ ವಿರೋಧಿ ಧೋರಣೆಯನ್ನು ತಳೆದಿದೆಯೇ ಎನ್ನುವ ಗೊಂದಲವನ್ನು ಇದು ಉಂಟುಮಾಡುತ್ತಿದೆ ಎಂದಿದ್ದಾರೆ. ಪ್ರಶ್ನೆ ಪತ್ರಿಕೆಯ ಪ್ರಶ್ನೆಯೊಂದನ್ನು ಸಹ ಉಲ್ಲೇಖಿಸಿರುವ ಡಾ.ಬಿಳಿಮಲೆ, “ಭಾರತದಲ್ಲಿನ ಪುನರಂ ಅವರ ಲೋಕನ ವಿಮರ್ಶಿ ಅಧಿಕಾರವು ಉಚ್ಚ ನ್ಯಾಯಾಲಯ ದೋಂದಿಗೆ ಸರ್ವೋಚ್ಚ ನ್ಯಾಯಾಲಯವು ಹೊಂದಿದೆ” ಎನ್ನುವ ಅರ್ಥವಿಲ್ಲದ ವಾಕ್ಯವೂ ಸಹ ಪ್ರಶ್ನೆಯಾಗಿರುವುದು ಆಯೋಗದ ಗಂಭೀರಲೋಪದ ವಿಷಯವಾಗಿರುತ್ತದೆ. ಕಳೆದ ಬಾರಿ ಪ್ರಾಧಿಕಾರದ ಸೂಚನೆಯ ಮೇರೆಗೆ ಆಯೋಗದಲ್ಲಿ ಭಾಷಾಂತರ ವಿಭಾಗವನ್ನು ಆರಂಭಿಸುವುದಾಗಿ ಭರವಸೆಯನ್ನು ನೀಡಿದರೂ ಸಹ ಇಲ್ಲಿಯವರೆಗೂ ಕ್ರಮಕ್ಕೆ ಮುಂದಾಗದಿರುವುದು ಆಯೋಗದ ಅಸಹಾಯಕತೆಯನ್ನು ಅಭಿವ್ಯಕ್ತಿಸುತ್ತದೆ ಎಂದಿದ್ದಾರೆ. ಪದೇ ಪದೇ ಈ ರೀತಿಯ ಪ್ರಮಾದಗಳು ಉಂಟಾಗಲು…
ಭಗವಾನ್ ವಿಷ್ಣುವಿನ ಈ 10 ಮಂತ್ರಗಳನ್ನು ಯಾರು ನಿಯಮಿತವಾಗಿ ಪಠಿಸುತ್ತಾರೋ ಅವರು ತೊಂದರೆಗಳಿಂದ ಮುಕ್ತಿ ಹೊಂದಿ, ಸಂಪತ್ತು ಮತ್ತು ಅದೃಷ್ಟವನ್ನು ಪಡೆದುಕೊಳ್ಳುತ್ತಾರೆ. ಶ್ರೀಹರಿಯ ಆ 10 ಶಕ್ತಿಶಾಲಿ ಮಂತ್ರಗಳಾವುವು ಗೊತ್ತೇ..? ಗುರು ಮತ್ತು ಗುರುವಾರದ ಅಧಿಪತಿಯನ್ನು ಭಗವಾನ್ ಮಹಾವಿಷ್ಣು ಎಂದು ಹೇಳಲಾಗುತ್ತದೆ. ಗುರುವಾರ ಭಗವಾನ್ ವಿಷ್ಣುವಿಗೆ ಸಮರ್ಪಿತವಾಗಿದೆ. ವ್ಯಕ್ತಿಯ ಜಾತಕದಲ್ಲಿ ಗುರುದೋಷವಿದ್ದರೆ ಗುರುವಾರದಂದು ಶ್ರೀ ಹರಿ ನಾರಾಯಣ ಮತ್ತು ಬೃಹಸ್ಪತಿ ದೇವರನ್ನು ಪೂಜಿಸುವ ಸಂಪ್ರದಾಯ ಮತ್ತು ಪದ್ಧತಿಯಿದೆ. ಈ ದಿನ ಉಪವಾಸ ವ್ರತವನ್ನು ಮಾಡುವುದರಿಂದ ವ್ಯಕ್ತಿಯ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ, ಮನೆಯಲ್ಲಿ ಹಣದ ಕೊರತೆ ಕೂಡ ಇರುವುದಿಲ್ಲ. ಈ ದಿನ ಭಗವಾನ್ ವಿಷ್ಣುವಿನ ಪೂಜೆಯ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದು ಕೂಡ ಶ್ರೇಯಸ್ಕರವಾಗಿರುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ…