Author: kannadanewsnow09

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.01.2025 (ಶುಕ್ರವಾರ) ಬೆಳಗ್ಗೆ 10:00 ರಿಂದ ಸಂಜೆ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಲ್ಲದೇ ನಾಡಿದ್ದು ಇತರೆಡೆಗಳಲ್ಲಿ ಪವರ್ ಕಟ್ ಆಗಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಜನವರಿ.10ರ ನಾಳೆ, “ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಗತಿ ರಸ್ತೆ, ತ್ರಿವೇಣಿ, ಎಚ್ ಎಚ್ ವಿ, ಡಿಎಂಜಿ, ಕೃಷ್ಣಾ ಫ್ಯಾಚ್ರಿಕೇಶನ್ಸ್, ಜೆಮಿನಿ ಇಂಡಸ್ಟ್ರೀಸ್ ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಪ್ರಿಸ್ ಐಎಲ್, ಎಮ್ ಎಸ್ ಐಎಲ್, ವಿಪ್ರೋವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ ವೋ, ಏವೆರಿ ಡೆನ್ನಿಸನ್, ಹಿಟಾಚ್ ಇಂಡಸ್ಟ್ರೀಸ್, ಗೀತಾ ಟಿಂಬರ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಅಂತ…

Read More

ಬೆಂಗಳೂರು: ದೀರ್ಘಕಾಲದ ಸೊಂಟ ನೋವಿನಿಂದ ಬಳಲುತ್ತಿದ್ದ ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್‌ ಸಹಾಯದ ಮೂಲಕ “ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.ಸಲಾಯಿತು. ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ಪ್ರಧಾನ ನಿರ್ದೇಶಕ ನಾರಾಯಣ್ ಹುಲ್ಸೆ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಬಳಿಕವೇ ರೋಗಿಯು ನಡೆಯಲು ಸಶಕ್ತರಾಗಿದ್ದರು. ಈ ಕುರಿತು ಮಾತನಾಡಿದ ಡಾ. ನಾರಾಯಣ್‌ ಹುಲ್ಸೆ, ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿದ್ದ ರೋಗಿಯು ಮೂರು ವರ್ಷದ ಹಿಂದೆ ಕೋವಿಡ್‌ ಸೋಂಕಿಗೆ ಒಳಗಾಗಿ, ಅದರ ಅಡ್ಡಪರಿಣಾಮದಿಂದ ಅವಾಸ್ಕುಲರ್ ನೆಕ್ರೋಸಿಸ್ (AVN) ಗೆ ಒಳಗಾಗಿ, ದೀರ್ಘಕಾಲದ ಸೊಂಟದ ನೋವಿನಿಂದ ಬಳಲುತ್ತಿದ್ದರು. ವಿಶ್ವಾದ್ಯಂತ ಅನೇಕ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದರೂ ಎಲ್ಲಿಯೂ ಸಫಲ ಕಾಣಲಿಲ್ಲ, ಅಷ್ಟೆ ಅಲ್ಲದೆ, ಎರಡು ವಿಫಲ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಇಲ್ಲಿ ನಮ್ಮ ತಂಡ ಅವರನ್ನು ಸಂಪೂರ್ಣ…

Read More

ಬೆಂಗಳೂರು: 66/11 kV ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಯನಗರ ವಿಭಾಗದ S14 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮ್ಯೇನ್ ರೋಡ್ ನಾರಾಯಣ ನಗರ, 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ ಎಸ್ ಶಾಲೆ, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾದಾರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗಾರ್ಜುನ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ 66/11kV ಎನ್.ಜಿ.ಇ.ಎಫ್ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ…

Read More

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಷಯದಲ್ಲಿ ಸರಕಾರವು ಯುವಜನರ ಜೊತೆ ಯಾಕೆ ಆಟ ಆಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ಭವಿಷ್ಯ ಕಂಡುಕೊಳ್ಳಲು ಹಲವು ಯುವಕರು ಕೆಪಿಎಸ್ಸಿಯಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ಬಾರಿ ಪ್ರಿಲಿಮಿನರಿ ಪರೀಕ್ಷೆ ನಡೆದಾಗ 200 ಪ್ರಶ್ನೆಗಳಲ್ಲಿ 57 ಪ್ರಶ್ನೆಗಳು ಕನ್ನಡದಲ್ಲಿ ತಪ್ಪಾಗಿ ಮುದ್ರಣ ಆಗಿತ್ತು. ಅದರಿಂದ ಬಹಳ ಜನರಿಗೆ ಅನ್ಯಾಯ ಆಗಿದ್ದು, ಹೋರಾಟವೂ ನಡೆದಿತ್ತು ಎಂದರು. ಈಗ ಕಳೆದ ವಾರ ಮತ್ತೆ ಪರೀಕ್ಷೆ ನಡೆದಿದೆ. ಈ ಪರೀಕ್ಷೆಯಲ್ಲಿ 200 ಪ್ರಶ್ನೆಗಳ ಪೈಕಿ 33 ಪ್ರಶ್ನೆಗಳು ತಪ್ಪಾಗಿ ಮುದ್ರಣಗೊಂಡಿವೆ. ಆಂಗ್ಲ ಭಾಷೆಯ ಪ್ರಶ್ನೆಗಳು ಕನ್ನಡದಲ್ಲಿ ಅರ್ಥವೇ ಆಗದಂತಿದ್ದು, ಪ್ರಶ್ನೆಯ ರೀತಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು. ಈ ಸರಕಾರಕ್ಕೆ ಕನ್ನಡವೂ ಬರುವುದಿಲ್ಲ; ಇದು ಮುಖ್ಯಮಂತ್ರಿಗಳ ಪರಿಧಿಯಲ್ಲಿ ಬರುವ ವಿಷಯ. ಇದರ ಬಗ್ಗೆ ಮುಖ್ಯಮಂತ್ರಿಗಳಿಗೆ ಯಾವುದೇ ಕಾಳಜಿ ಇಲ್ಲ ಎಂದು ಟೀಕಿಸಿದರು.…

Read More

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದೆ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಶರಣಾಗತರಾಗಿದ್ದರು. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 3 ಲಕ್ಷ ಸಹಾಯಧನವನ್ನು ಘೋಷಣೆ ಮಾಡಲಾಗಿತ್ತು. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಂದ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮುಂದೆ ಶರಣಾಗತರಾದಂತ 6 ನಕ್ಸಲರನ್ನು ಇಂದು ಬೆಂಗಳೂರಿನ NIA ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇಂತಹ ಆರು ನಕ್ಸಲರಿಗೂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಮೂಲಕ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಜೈಲುಪಾಲಾಗಿದ್ದಾರೆ. https://kannadanewsnow.com/kannada/appeal-for-help-from-the-public-may-your-helping-hand-be-to-this-family/ https://kannadanewsnow.com/kannada/state-one-labourer-dies-of-suffocation-while-dumping-chemical-3-critical/

Read More

ಬೆಂಗಳೂರು : 220/66 kV ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ಮಾರ್ಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 12.01.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 18:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜ.12ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ “ಚಿಕ್ಕಬಳ್ಳಾಪುರ ನಗರ, ಕೈಗಾರಿಕಾ ಪ್ರದೇಶ ಸೇರಿದಂತೆ ತಾಲ್ಲೂಕಿನ ನಂದಿ, ನಂದಿಕದರಾಸ್, ಬೀಡಗಾನಹಳ್ಳಿ, ನಂದಿಬೆಟ್ಟ, ಸುಲ್ತಾನ್ ಪೇಟೆ, ಸಿಂಗಾಟಕದಿರೇನಹಳ್ಳಿ, ಹೋಸೂರು, ಮುದ್ದೇನಹಳ್ಳಿ, ಕುಪ್ಪಹಳ್ಳಿ, ಪಟ್ರೇನಹಳ್ಳಿ, ಜಾತವಾರ, ಹೊಸಹುಡ್ಯ, ಅಜ್ಜವಾರ, ದಿಬ್ಬೂರು, ಮಂಚನಬಲೆ, ಕೇತೇನಹಳ್ಳಿ, ರೆಡ್ಡಿಗೊಲ್ಲರಹಳ್ಳಿ, ರಾಮದೇವರಗುಡಿ, ಹಾರೋಬಂಡೆ, ಗುಂಡ್ಲಗುರ್ಕಿ, ಜಿಲ್ಲಾಡಳಿತ ಭವನ, ತಿಪ್ಪೇನಹಳ್ಳಿ, ಕಣಜೇನಹಳ್ಳಿ, ಮೈಲಪ್ಪನಹಳ್ಳಿ, ಕಂದವಾರ, ಚದಲಪುರ, ಗವಿಗಾನಹಳ್ಳಿ, ಕಣಿತಹಳ್ಳಿ, ಬೊಮ್ಮನಹಳ್ಳಿ, ಅಗಲಗುರ್ಕಿ, ಹೊನ್ನೇನಹಳ್ಳಿ, ಕೆಳಗಿನ ತೋಟ, ಜಕ್ಕಲಮಡಗು, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. https://kannadanewsnow.com/kannada/veteran-actor-kishore-kumar-appointed-as-ambassador-of-bengaluru-international-film-festival/ https://kannadanewsnow.com/kannada/big-news-there-is-no-confusion-in-congress-party-home-minister-dr-g-parameshwara-clarifies/

Read More

ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಸ್ಯಾಂಡಲ್ ವುಡ್ ಖ್ಯಾತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ  ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು…

Read More

ಬೆಂಗಳೂರು: ಆರು ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ, ಸಮಾಜದ ಮುಖ್ಯವಾಹಿನಿಗೆ ಹಿಂದಿರುಗಿ ಬಂದಿರುವುದರಿಂದ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶರಣಾದ ನಕ್ಸಲೀಯರಿಗೆ ಪರಿಹಾರ ಪ್ಯಾಕೇಜ್ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಇದೆ. ಇದರಲ್ಲೆಲ್ಲ ರಾಜಕೀಯ ಮಾಡಲು ಹೋಗಬಾರದು ಎಂದಿದ್ದಾರೆ. ಬಿಜೆಪಿ ಎಲ್ಲದರಲ್ಲೂ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ. ಯುಜಿಸಿ ನಿಯಾಮವಳಿಗಳಿಗೆ ತರಲು ಹೊರಟಿರುವ ಬದಲಾವಣೆಯಲ್ಲೂ ಇದೇ ಅಜೆಂಡಾ ಇದೆ. ಗುಜರಾತಿನಲ್ಲಿ ಕುಲಪತಿಗಳ ನೇಮಕಾತಿ ಅಧಿಕಾರ ಮುಖ್ಯಮಂತ್ರಿಯ ಬಳಿಯೇ ಇದೆ. ಬೇರೆ ರಾಜ್ಯಗಳಲ್ಲಿ‌ ಮಾತ್ರ ಇದನ್ನು ವಿರೋಧಿಸುವುದರಲ್ಲಿ ಯಾವ ಅರ್ಥವಿದೆ ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯ ಕಾಂಗ್ರೆಸ್ಸಿ‌ನಲ್ಲಿ ಯಾವ ಸಮಸ್ಯೆಯೂ ಇಲ್ಲ. ಬೆಳಗಾವಿಯ ಜೈ ಸಂವಿಧಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ ಅಷ್ಟೆ. ನಮ್ಮಲ್ಲಿ…

Read More

ಬೆಂಗಳೂರು : ಬಿಜೆಪಿಗರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿಯೇ ಸುಳ್ಳು ಸುದ್ದಿ ಹಬ್ಬಿಸುತ್ತಾ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಗರುಡಾಕ್ಷಿ -ಆನ್ಲೈನ್ ಎಫ್ ಐ ಆರ್ ಉದ್ಘಾಟನೆ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಬಂಡಿಪುರದಲ್ಲಿ ಈಗಾಗಲೇ ರಾತ್ರಿ 9 ರವರೆಗೆ ಸಂಚಾರಕ್ಕೆ ಅವಕಾಶವಿದೆ. ಇದರ ಜೊತೆಗೆ ಎರಡು ರಾಜ್ಯಗಳ ಎರಡು ಬಸ್ ಸಂಚಾರಕ್ಕೆ ಹಿಂದಿನಿಂದಲೂ ಅವಕಾಶವಿದೆ. ಇದಲ್ಲದೆ ಆಂಬುಲೆನ್ಸ್ ಹಾಗೂ ಆರೋಗ್ಯ ನಿಮಿತ್ತ ತುರ್ತು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದೇನೆ. ಆದರೆ ಬಿಜೆಪಿ ಇಲ್ಲ ಸಲ್ಲದ ಆರೋಪ ಮಾಡಿ ಟ್ವೀಟ್ ಮಾಡಿರುವುದು ಅಕ್ಷಮ್ಯ. ಅವರ ಕಾಲದಲ್ಲೂ ರಾತ್ರಿ ಬಸ್ ಸೇವೆ ಇತ್ತು ಎಂದು ತಿಳಿಸಿದ್ದಾರೆ. ನನ್ನನ್ನು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ಬಿಜೆಪಿಗರು ಪ್ರಶ್ನಿಸಿದ್ದಾರೆ, ಕರ್ನಾಟಕದ ಜನತೆಯೆ ಈ ಪ್ರಶ್ನೆಗೆ ತಕ್ಕ ಉತ್ತರ ನೀಡುತ್ತಾರೆ ಎಂದು ಖಂಡ್ರೆ ತಿರುಗೇಟು ನೀಡಿದ್ದಾರೆ. ತಾವು ಸಚಿವರಾದ…

Read More

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವಂತ ಆತನ ಚಿಕಿತ್ಸೆಗಾಗಿ ಇಡೀ ಕುಟುಂಬವೇ ಹಣವನ್ನು ಹೊಂದಿಸೋದಕ್ಕೆ ಪರದಾಡುತ್ತಿದೆ. ಸಾರ್ವಜನಿಕರ ಸಹಾಯದ ಹಸ್ತ ಚಾಚುವಂತೆ ಕನ್ನಡ ನ್ಯೂಸ್ ನೌ ಮೂಲಕ ಕೋರಿದೆ. ಕೂಲಿ ಕೆಲಸ ಮಾಡುತ್ತಿದ್ದಂತ ರಮೇಶ್ ಎಂಬುವರು, ಕೆಲಸ ಮುಗಿಸಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಬರುತ್ತಿದ್ದಂತ ವೇಳೆಯಲ್ಲಿ ಹಿಂಬದಿಯಿಂದ ಬಂದಂತ ಬೈಕ್ ಒಂದು ಡಿಕ್ಕಿಯಾಗಿತ್ತು. ಈ ಅಪಘಾತದಲ್ಲಿ ಗಾಯಗೊಂಡಿದ್ದಂತ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮನೆಗೆ ದುಡಿಯುವ ವ್ಯಕ್ತಿಯಾಗಿದ್ದಂತ ರಮೇಶ್ ಈಗ ಸ್ಪೈನಲ್ ಕಾರ್ಡ್ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯಸ್ಸಾದ ತಾಯಿ, ಮತ್ತೊಬ್ಬ ತಂಗಿಯ ಜೀವನ ನಿರ್ವಹಣೆಯು ರಮೇಶ್ ದುಡಿಮೆಯ ಮೇಲೆಯೇ ನಿಂತಿದೆ. ಅಲ್ಲದೇ ತಂಗಿಯ ಇಬ್ಬರು ಮಕ್ಕಳ ಹೊಣೆಹೊತ್ತಿದ್ದರು. ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ರಮೇಶ್ ಗೆ ಆರ್ಥಿಕ ಸಹಾಯ ಬೇಕಿದೆ. ಚಿಕಿತ್ಸೆಗಾಗಿ ಹಣಕಾಸಿನ ನೆರವು ಬೇಕಿದೆ. ನೀವು ಸಹಾಯ ಮಾಡುವುದಾದರೇ ಫೋನ್ ನಂಬರ್ 7259609476 ನಂಬರ್ ಗೆ ಪೋನ್ ಪೇ, ಜಿ ಪೇ ಮಾಡಬಹುದಾಗಿದೆ. ಇದು ರಮೇಶ್ ಅವರ…

Read More