Author: kannadanewsnow09

ಶಿವಮೊಗ್ಗ: ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರ ನಾಟ ಕಡಿತಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಸಾಗರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಹಾಗೂ ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ.ಬಿ ಜಂಟಿ ಕಾರ್ಯಾಚರಣೆ ನಡೆಸಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ನಾಟಾ ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಸಾಗರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿ.ಕೆ ಅವರು ಮಾಹಿತಿ ನೀಡಿದ್ದು, ಉಳ್ಳೂರು ವ್ಯಾಪ್ತಿಯ ಅರಣ್ಯಯ ಸರ್ವೇ ನಂಬರ್.5ರಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕಡಿತಲೆ ಮಾಡಿದ್ದರ ಬಗ್ಗೆ ಪ್ರಕರಣ ದಾಖಲಿಸಾಗಿತ್ತು. ಈ ಸಂಬಂಧ ಇಲಾಖೆಯಿಂದ ತನಿಖೆಯನ್ನು ಕೈಗೊಳ್ಳಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಸಾಗರ ವಲಯ ಅರಣ್ಯಾಧಿಕಾರಿ ಅಣ್ಣಪ್ಪ.ಬಿ ಜೊತೆಗೂಡಿ ಜಂಟಿ ಕಾರ್ಯಾಚರಣೆ ನಡೆಸಿ, ಕಡಿತಲೆ ಮಾಡಿದಂತ ಸಾಗುವಾನಿ ಮರದ ನಾಟ ಹಾಗೂ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಸಾಗುವಾನಿ ಮರಗಳನ್ನು ಕಡಿತಲೆ ಮಾಡಿ ಅಕ್ರಮವಾಗಿ ಸಾಗಿಸಿದಂತ ಆರೋಪದಡಿ ದಾಖಲಾಗಿದ್ದಂತ ದೂರಿನ ಹಿನ್ನಲೆಯಲ್ಲಿ ಆರೋಪಿ ಕಣಕಿ ಗೌಡ್ರು ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪೌರಕಾರ್ಮಿಕರ ಪಿತಾಮಹರಾದ ಶ್ರೀ ಐ.ಪಿ.ಡಿ ಸಾಲಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಶ್ರೀ ಐ.ಪಿ.ಡಿ ಸಾಲಪ್ಪ ರವರು 1929ರಲ್ಲಿ ಜನಿಸಿದ್ದು, ಭಾರತ ಸ್ವಾತಂತ್ರ್ಯದ ಹೋರಾಟದಲ್ಲಿ ಸಕ್ರಿಯವಾಗಿ ಹೋರಾಟ ನಡೆಸಿಕೊಂಡು ಬಂದವರು. ಬಿನ್ನಿಪೇಟೆಯಿಂದ ಶಾಸಕರಾಗಿ ಕಾರ್ಯನಿರ್ವಹಿಸಿದವರು. ಪೌರಕಾರ್ಮಿಕರ ಜೀವನದ ಸ್ಥಿತಿಗತಿಗಳನ್ನು ಬಹಳ ಹತ್ತಿರದಿಂದ ತಿಳಿದಿದ್ದ ಸಾಲಪ್ಪನವರು 36 ಅಂಶಗಳ ವರದಿಯನ್ನು ಸರ್ಕಾರಕ್ಕೆ ನೀಡಿದರು. ಐ.ಪಿ.ಡಿ.ಸಾಲಪ್ಪ ವರದಿಯ…

Read More

ಸುಕ್ಮಾ : ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಖಚಿತಪಡಿಸಿದ್ದಾರೆ. ಇಂದು ಮುಂಜಾನೆ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಎನ್ಕೌಂಟರ್ ನಡೆದಿದೆ. ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬೆಳಿಗ್ಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲಾ ರಿಸರ್ವ್ ಗಾರ್ಡ್, ವಿಶೇಷ ಕಾರ್ಯಪಡೆ ಮತ್ತು ಕೋಬ್ರಾ (ಸಿಆರ್ಪಿಎಫ್ನ ಗಣ್ಯ ಘಟಕವಾದ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು. ಆಗಾಗ್ಗೆ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/big-news-there-is-no-confusion-in-congress-party-home-minister-dr-g-parameshwara-clarifies/ https://kannadanewsnow.com/kannada/state-one-labourer-dies-of-suffocation-while-dumping-chemical-3-critical/

Read More

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಹಲ್ಲೆ ಯತ್ನ ಆರೋಪ ಕುರಿತಂತೆ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ನೀಡಿ ಆದೇಶಿಸಿತ್ತು. ಇಂದು ಹಲ್ಲೆ ಯತ್ನ ಆರೋಪ ಮಾಡಿದ್ದಂತ ಸಿ.ಟಿ ರವಿ ಅವರು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಡಿಸೆಂಬರ್.19, 2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಹಲ್ಲೆ ಮಾಡಿದ್ದರ ಸಂಬಂಧ ಸಭಾಪತಿ ಹೊರಟ್ಟಿ ಅವರನ್ನು ಭೇಟಿಯಾಗಿ ಮೂವರು ಪರಿಷತ್ ಸದಸ್ಯರು ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇಂದು ಸಿಐಡಿಯಿಂದ ವಿಚಾರಣೆಗೆ ಹಾಜರಾಗುವಂತೆ ಸಿ.ಟಿ ರವಿ ಅವರಿಗೆ ನೋಟಿಸ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಸಿಐಡಿ ಕಚೇರಿಗೆ ಖುದ್ದು ವಿಚಾರಣೆಗೆ ಪರಿಷತ್ ಸದಸ್ಯ ಸಿ.ಟಿ ರವಿ ಹಾಜರಾದರು. ಸಿಐಡಿಯ ತನಿಖಾಧಿಕಾರಿ ಕೇಶವಮೂರ್ತಿ ಮುಂದೆ ವಿಚಾರಣೆಗೆ ಹಾಜರಾದಂತ ಸಿ.ಟಿ ರವಿ ಅವರನ್ನು ಘಟನೆಯ ಸಂಬಂಧ ಪ್ರಶ್ನಿಸಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/big-news-there-is-no-confusion-in-congress-party-home-minister-dr-g-parameshwara-clarifies/ https://kannadanewsnow.com/kannada/state-one-labourer-dies-of-suffocation-while-dumping-chemical-3-critical/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ಒದಗಿಸಲು ಮಹತ್ವದ ಕ್ರಮ ವಹಿಸಲಾಗಿದೆ. ಕೂಡಲೇ 587 ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ಆದೇಶಿಸಿದೆ. ಇಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಆಯುಕ್ತರ ಏಕ ಕಡತ ಸಂಖ್ಯೆ: 1634358 ರಲ್ಲಿ ಸ್ವೀಕರಿಸಿರುವ ಪ್ರಸ್ತಾವನೆಯಲ್ಲಿ ಪ್ರಸ್ತುತ ತುರ್ತು ಚಿಕಿತ್ಸಾ ವೈಧ್ಯಾಧಿಕಾರಿಗಳ 706 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ ಕೇವಲ 241 ಹುದ್ದೆಗಳು ಭರ್ತಿ ಯಾಗಿದ್ದು, 465 ಹುದ್ದೆಗಳು ಖಾಲಿ ಇರುತ್ತವೆ. ಇವುಗಳನ್ನು ತುರ್ತಾಗಿ ತುಂಬಲು ಕೋರಲಾಗಿರುತ್ತದೆ ಎಂದಿದ್ದಾರೆ. ದಿ: 31.01.2024 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಇವರ ಅಧ್ಯಕ್ಷತೆಯಲ್ಲಿ ನಡೆದ DHO ಮತ್ತು RCHO ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿಗಳ (Casualty Medical Officer) ಹುದ್ದೆಗಳು ಖಾಲಿಯಿರುವುದರಿಂದ ತುರ್ತು ವೈದ್ಯಕೀಯ ಸೇವೆ ಹಾಗೂ ತಾಯಿ ಮತ್ತು ಮಕ್ಕಳ ಆರೋಗ್ಯ…

Read More

ಚಿಕ್ಕಬಳ್ಳಾಪುರ: ಲಾರಿಯೊಂದಕ್ಕೆ ಕೆಮಿಕಲ್ ಡಂಪ್ ಮಾಡುತ್ತಿದ್ದಂತ ವೇಳೆಯಲ್ಲಿ ಉಸಿರುಗಟ್ಟಿ ಓರ್ವ ಕಾರ್ಮಿಕ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಶ್ರೀನಿವಾಸಮೂರ್ತಿ ಎಂಬುವರಿಗೆ ಸೇರಿದಂತ ಕಾರ್ಖಾನೆಯಲ್ಲಿ ನಿನ್ನೆ ರಾತ್ರಿ ನಡೆದಂತ ಘಟನೆ, ಇಂದು ತಡವಾಗಿ ಬೆಳಕಿಗೆ ಬಂದಿದೆ. ಲಾರಿಯೊಂದರ ಮೇಲ್ಭಾಗದ ಟ್ಯಾಂಕ್ ಕ್ಯಾಪ್ ತೆರೆದು ಕೆಮಿಲಕ್ ಡಂಪ್ ಮಾಡುವಂತ ಸಂದರ್ಭದಲ್ಲಿ ಉಸಿರು ಗಟ್ಟಿ ಬಿಹಾರ ಮೂಲಕ ಮಹಮ್ಮದ್ ರಜಿಕ್ಶ್ರ(33) ಎಂಬಾತ ಸಾವನ್ನಪ್ಪಿದ್ದಾನೆ. ಇನ್ನೂ ಈ ದುರ್ಘಟನೆಯಲ್ಲಿ ಉಸಿರುಗಟ್ಟಿ ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಸ್ವಸ್ಥ ಮತ್ತೋರ್ವ ಕಾರ್ಮಿಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ರಾತ್ರಿ ನಡೆದಿರುವಂತ ಘಟನೆ ಇದಾಗಿದೆ. ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇಷ್ಟೆಲ್ಲಾ ನಡೆದರೂ ಕಾರ್ಮಿಕ ಇಲಾಖೆಗೆ ಮಾಹಿತಿಯನ್ನು ಮಾಲೀಕ ನೀಡಿಲ್ಲ ಎನ್ನಲಾಗುತ್ತಿದೆ. ಅಲ್ಲದೇ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದಕ್ಕೆ ಕಾರ್ಮಿಕರು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ನಂದಿಗಿರಿಧಾಮ ಪೊಲೀಸ್…

Read More

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. ಕೆ ಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್ ಅವರ ಮನವಿ ಮೇರೆಗೆ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದ ಮಂಡ್ಯ ಸಂಸದರು ಆಗಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಯೋಜನೆಯ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಶ್ರೀರಂಗಪಟ್ಟಣ – ಕೆ.ಆರ್.ಪೇಟೆ – ಪಾಂಡವಪುರ – ಚನ್ನರಾಯಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು. ಈ ರಸ್ತೆಯು ತಾಲೂಕು ಕೇಂದ್ರಗಳಿಂದ ನಗರಗಳಿಗೆ ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿದ್ದು, ಆರ್ಥಿಕವಾಗಿ ದೊಡ್ಡ ಕೊಡುಗೆಯನ್ನು ನೀಡಲಿದೆ. ಮುಖ್ಯವಾಗಿ ಈ ಭಾಗದಲ್ಲಿ ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು…

Read More

ಬೆಂಗಳೂರು : 66/11 kV IISC ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ6 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ “ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. https://kannadanewsnow.com/kannada/big-news-there-is-no-confusion-in-congress-party-home-minister-dr-g-parameshwara-clarifies/ https://kannadanewsnow.com/kannada/shocking-woman-raped-repeatedly-by-husbands-friends-sinful-husband-watches-video-of-act-after-taking-money/

Read More

ಹೈದರಾಬಾದ್: ತಿರುಪತಿಯಲ್ಲಿ ನಿನ್ನೆ ವೈಕುಂಠ ಏಕಾದಶಿ ಪ್ರಯುಕ್ತ ದರ್ಶನದ ಟಿಕೆಟ್ ಪಡೆಯುವ ಸಂದರ್ಭದಲ್ಲಿ ಕಾಲ್ತುಳಿತ ಘಟನೆ ನಡೆದಿತ್ತು. ಈ ದುರಂತದಲ್ಲಿ 6 ಭಕ್ತರು ಸಾವನ್ನಪ್ಪಿದ್ದರು. ಇಂತಹ ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರವು ತಲಾ 25 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ. ಈ ಸಂಬಂಧ ಸಿಎಂ ಚಂದ್ರಬಾಬು ನಾಯ್ಡು ಅವರು ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ತಿರುಪತಿಯಲ್ಲಿ ಕಾಲ್ತುಳಿತದಿಂದ ಮೃತರಾದಂತವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿರುವಂತ ಅವರು, ಘಟನೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ. ಇನ್ನೂ ತಿರುಪತಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟಂತ 6 ಭಕ್ತಾಧಿಗಳ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಆಂಧ್ರ ಸರ್ಕಾರವು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ನೀಡಿವುದು ಕಡಿಮೆಯೇ ಆಗಿದೆ. 1 ಕೋಟಿ ಪರಿಹಾರ ಕೊಡುವಂತೆ ಕಾಂಗ್ರೆಸ್ ಪಕ್ಷವು ಆಗ್ರಹಿಸಿದೆ.

Read More

ಆಂಧ್ರಪ್ರದೇಶ: ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿ ತಿರುಮಲದಲ್ಲಿ ಹೆಚ್ಚು ಜನರು ಸೇರಿದ್ದರಿಂದ ಟಿಕೆಟ್ ಕೌಂಟರ್ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಹೀಗಾಗಿ ಕಾಲ್ತುಳಿತ ಉಂಟಾಗಿ ನಾಲ್ವರು ಭಕ್ತರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಟಿಕೆಟ್ ವಿತರಣೆ ರದ್ದುಗೊಳಿಸಲಾಗಿದೆ. ವೈಕುಂಠ ದ್ವಾರದಲ್ಲಿ ಟಿಕೆಟ್ ಗಾಗಿ ಹೆಚ್ಚು ಜನರು ಸೇರಿದ್ದರ ಪರಿಣಾಮ ತಿರುಪತಿಯಲ್ಲಿ ಕಾಲ್ತುಳಿತ ಉಂಟಾಗಿದೆ. ಈ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ. ವೈಕುಂಟ ಏಕಾದಶಿಯ ಟಿಕೆಟ್ ಗಾಗಿ ಕೌಂಟರ್ ಬಳಿಯಲ್ಲಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತದಿಂದ ಭಕ್ತರು ಸಾವನ್ನಪ್ಪಿದ ಕಾರಣ, ಟಿಕೆಟ್ ವಿತರಣೆ ರದ್ದುಗೊಳಿಸಲಾಗಿದೆ. ನಾಳೆ ಮುಂಜಾನೆಯವರೆಗೂ ಟಿಕೆಟ್ ವಿತರಣೆಯನ್ನು ಸ್ಥಗಿತಗೊಳಿಸಿರುವುದಾಗಿ ಟಿಟಿಡಿ ತಿಳಿಸಿದೆ.

Read More