Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶನಗರದ ನಿವಾಸದ ಬಳಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಈಶ್ವರಪ್ಪ ನವರ ಮನವೊಲಿಕೆ ಮಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕ್ಷೇತ್ರ ಬದಲಾವಣೆ ಆಗುತ್ತವೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರೀಯಿಸಿದ ಅವರು, ರಮೇಶ್ ಜಾರಕಿಹೊಳಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿ ಇರಬಹುದು. ಕ್ಷೇತ್ರ ಬದಲಾವಣೆ ಕುರಿತು ಜಾರಕಿಹೊಳಿ ಏನು ಹೇಳಿದ್ದಾರೆ ಎಂದು ಗೊತ್ತಿಲ್ಲ ಎಂದು ಹೇಳಿದರು. ಇವತ್ತು ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇವೆ. ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರಿಗೂ ಅಹ್ವಾನ ಕೊಡಲಾಗಿದೆ. ಈ ಬಾರಿ ಶಿಗ್ಗಾಂವಿ ಕ್ಷೇತ್ರದಿಂದ ಜೋಶಿ ಅವರಿಗೆ ಕಳೆದ ಬಾರಿಗಿಂತ ಹೆಚ್ಚಿನ ಲೀಡ್ ಕೊಡಿಸುತ್ತೇವೆ. ನಾಳೆ ಹಾವೇರಿ ಲೋಕಸಭೆ ವ್ಯಾಪ್ತಿಯ ಗದಗ ಜಿಲ್ಲೆಗೆ ಭೇಟಿ…
ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಬಂಡಾಯದ ಬಿಸಿ ತಟ್ಟಿದೆ. ಬಂಡಾಯ ಬಾವುಟ ಹಾರಿಸಿದ್ದ ಕೆ.ಎಸ್ ಈಶ್ವರಪ್ಪ ಅವರನ್ನು ತಣಿಸೋದಕ್ಕೆ ಬಿಜೆಪಿ ನಾಯಕರು ಮಾಡಿದಂತ ಸಂಧಾನ ಫಲಪ್ರದವಾಗಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕೆ.ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತವಾಗಿದೆ. ನಾಳೆ ಶಿವಮೊಗ್ಗ ಜಿಲ್ಲೆಗೆ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಆಗಮನಿಸುತ್ತಿದ್ದಾರೆ. ಮೋದಿ ರೋಡ್ ಶೋ ಕೂಡ ನಡೆಸಲಿದ್ದಾರೆ. ಸುಮಾರು ಎರಡು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಇದೇ ಸಂದರ್ಭದಲ್ಲಿ ಬಂಡಾಯ ಬಾವುಟವನ್ನು ಹಾರಿಸಿದ್ದಂತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಇಳಿದಿದ್ದರು. ಆದರೆ ಯಾವುದೇ ನಾಯಕರ ಮಾತನ್ನು ಈಶ್ವರಪ್ಪ ಕೇಳಿಲ್ಲ ಎನ್ನಲಾಗಿದೆ. ಹೀಗಾಗಿ ನಾಳೆ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗದ ನಿರ್ಧಾರವನ್ನು ಕೈಗೊಂಡಿದ್ದಾರೆ.
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League- IPL) ಅನ್ನು ವಿದೇಶಕ್ಕೆ ಸ್ಥಳಾಂತರಿಸುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( Board of Control for Cricket in India -BCCI) ಕಾರ್ಯದರ್ಶಿ ಜಯ್ ಶಾ ( secretary Jay Shah ) ಸಂದರ್ಶನವೊಂದರಲ್ಲಿ ಖಚಿತಪಡಿಸಿದ್ದಾರೆ. ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಇರುವುದರಿಂದ ಟಿ20 ಲೀಗ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಸ್ಥಳಾಂತರಿಸಬಹುದು ಎಂಬ ವರದಿಗಳ ನಂತರ ಈ ಬೆಳವಣಿಗೆ ನಡೆದಿದೆ. ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನು ಶನಿವಾರ ಘೋಷಿಸಲಾಯಿತು. ಚುನಾವಣಾ ದಿನಾಂಕ ಘೋಷಣೆಯಾದ ನಂತರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಂದರ್ಶನವೊಂದರಲ್ಲಿ ಐಪಿಎಲ್ ಅನ್ನು ಸ್ಥಳಾಂತರಿಸುವುದಿಲ್ಲ ಎಂದು ಹೇಳಿದರು. “ಇಲ್ಲ, ಇದನ್ನು ವಿದೇಶಕ್ಕೆ ಸ್ಥಳಾಂತರಿಸಲಾಗುವುದಿಲ್ಲ” ಎಂದು ಶಾ ಶನಿವಾರ ಕ್ರಿಕ್ಬಝ್ಗೆ ತಿಳಿಸಿದರು. ಏಪ್ರಿಲ್ 19 ರಿಂದ ಜೂನ್ 4 ರವರೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 22ರಿಂದ ಐಪಿಎಲ್ ಆರಂಭವಾಗಲಿದೆ. ಇಲ್ಲಿಯವರೆಗೆ, ಮೊದಲ ಎರಡು ವಾರಗಳ ದಿನಾಂಕಗಳನ್ನು…
ಬೆಂಗಳೂರು: “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ನನಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಚುನಾವಣಾ ದಿನಾಂಕ ಪ್ರಕಟ ಸಂಬಂಧ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಇಲ್ಲಿ ನಾವು ಹೋರಾಟ ಮಾಡಬೇಕು. ಅದನ್ನು ಸಂಭ್ರಮಿಸಿ, ಆನಂದಿಸಬೇಕು. ನಾವು ಮಾಡಿರುವ ಸಾಧನೆ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾವು 20ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. ನಾವು ನಮ್ಮ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದ್ದೇವೆ. ಭಾರತ ಜೋಡೋ ಯಾತ್ರೆ ಸಮಾರೋಪ ಹಾಗೂ ಇಂಡಿಯಾ ಒಕ್ಕೂಟ ಸಭೆ ಹಿನ್ನೆಲೆಯಲ್ಲಿ ಸಿಇಸಿ ಸಭೆ ಮುಂದೂಡಲಾಗಿದೆ. 19ರಂದು ಈ ಸಭೆ ನಡೆಯುವ ಸಾಧ್ಯತೆ ಇದೆ. ನಂತರ ಉಳಿದ ಅಭ್ಯರ್ಥಿ ಅಂತಿಮ ಮಾಡಲಾಗುವುದು. ನೀವು ಬಿಜೆಪಿಯಲ್ಲಿ ನೋಡುತ್ತಿರುವ ಭಿನ್ನಮತ ಕಾಂಗ್ರೆಸ್ ಪಕ್ಷದಲ್ಲಿ ಆಗುವುದಿಲ್ಲ. ಇದು ದೇವೇಗೌಡರ ಕುಟುಂಬದ ವಿರುದ್ಧದ ಮೊದಲ ಹೋರಾಟವಲ್ಲ: ಇದು ಕುಟುಂಬದ ನಡುವಣ ಯುದ್ಧವೋ ಅಥವಾ…
ಹರಿಯಾಣ: ಇಲ್ಲಿನ ರೇವಾರಿ ಜಿಲ್ಲೆಯ ಧರುಹೆರಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಬಾಯ್ಲರ್ ಸ್ಫೋಟದಿಂದಾಗಿ 100 ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಡಜನ್ಗಟ್ಟಲೆ ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೀಗೆ ಬಾಯ್ಲರ್ ಸ್ಪೋಟದಲ್ಲಿ ಗಾಯಗೊಂಡಿರುವಂತ ಕೆಲವರ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. ಏತನ್ಮಧ್ಯೆ, ರೋಹ್ಟಕ್ ಪಿಜಿಐಎಂಎಸ್ ನಿರ್ದೇಶಕ ಡಾ.ಎಸ್.ಎಸ್.ಲೋಹ್ಚಾಬ್, ಆಘಾತ ಕೇಂದ್ರದ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೇ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಿದ್ದಾರೆ. ಸ್ಥಳೀಯ ಮೂಲಗಳ ಪ್ರಕಾರ, ಸಂಜೆ 7 ಗಂಟೆ ಸುಮಾರಿಗೆ ಲೈಫ್ ಲಾಂಗ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ನಂತರ ಹಲವಾರು ಅಗ್ನಿಶಾಮಕ ಎಂಜಿನ್ಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಕಾರ್ಖಾನೆಗೆ ಆಗಮಿಸಿ, ಪರಿಸ್ಥಿತಿ ನಿಯಂತ್ರಿಸೋ ಕೆಲಸದಲ್ಲಿ ತೊಡಗಿದ್ದಾವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/economist-prof-govinda-rao-appointed-chairman-of-regional-imbalance-redressal-commission/ https://kannadanewsnow.com/kannada/lok-sabha-elections-2019-manipur-riot-victims-allowed-to-vote-from-refugee-centre/
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರನ್ನಾಗಿ ಆರ್ಥಿಕ ತಜ್ಞ ಪ್ರೊ.ಗೋವಿಂದ ರಾವ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಎಕ್ಸ್ ಮಾಡಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಡಾ|| ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿರುವುದರಿಂದ ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞರಾದ ಪ್ರೊ|| ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ. https://twitter.com/CMofKarnataka/status/1769000098254725152 https://kannadanewsnow.com/kannada/law-and-order-situation-in-the-state-has-deteriorated-pm-modi-on-congress-govt-indulging-in-loot/ https://kannadanewsnow.com/kannada/lok-sabha-elections-2019-manipur-riot-victims-allowed-to-vote-from-refugee-centre/
ನವದೆಹಲಿ: 2024 ರ ಲೋಕಸಭಾ ಚುನಾವಣೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ (ಇಸಿ) ಶನಿವಾರ ಬಹಿರಂಗಪಡಿಸಿದೆ. ಈ ಹಂತಗಳಲ್ಲಿ ಎಲ್ಲಾ 543 ಕ್ಷೇತ್ರಗಳು ಸೇರಿವೆ. ಇದಲ್ಲದೆ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂನಲ್ಲಿ ವಿಧಾನಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. ಚುನಾವಣಾ ಆಯೋಗದ ಘೋಷಣೆಯ ನಂತರ, ಮಾದರಿ ನೀತಿ ಸಂಹಿತೆ (ಎಂಸಿಸಿ) ಈಗ ಜಾರಿಯಲ್ಲಿದೆ. ವಿವರವಾದ ವೇಳಾಪಟ್ಟಿ ಇಲ್ಲಿದೆ – ಹಂತ, ರಾಜ್ಯ ಮತ್ತು ಕ್ಷೇತ್ರ ಹಂತಗಳ ಮತದಾನದ ದಿನಾಂಕ ರಾಜ್ಯಗಳು ಹಂತ 1: ಏಪ್ರಿಲ್ 19, 21 ಹಂತ 2: ಏಪ್ರಿಲ್ 26, 13 ಹಂತ 3: ಮೇ 7, 12 ಹಂತ 4: ಮೇ 13, 10 ಹಂತ 5: ಮೇ 20, 8 ಹಂತ 6: ಮೇ 25, 7…
ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಚಾಲಹಳ್ಳಿ ಕ್ರಾಸ್ ಸಮೀಪದ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿಯಲ್ಲಿನ ಕಟ್ಟಡವೊಂದು ಬೆಂಕಿಯ ಕೆನ್ನಾಲಿಗೆಗೆ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ದಿನೇ ದಿನೇ ಅಗ್ನಿ ಅವಘಡಗಳು ಹೆಚ್ಚಾಗುತ್ತಿದೆ. ಎಷ್ಟೇ ಸುರಕ್ಷತಾ ಕ್ರಮ ಕೈಗೊಂಡರೂ ಬೆಂಕಿ ಅವಘಡಗಳು ಮಾತ್ರ ಕಂಟ್ರೋಲ್ ಆಗಿಲ್ಲ. ಇಂದು ಜಾಲಹಳ್ಳಿ ಕ್ರಾಸ್ ಸಮೀಪದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯ ಉಮಾ ಶಂಕರ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ ಉಂಟಾಗಿದೆ. ಉಮಾ ಶಂಕರ ಕಾಂಪ್ಲೆಕ್ಸ್ ಕಟ್ಟಡದ ನೆಲ ಮಹಡಿಯಲ್ಲಿರುವಂತ ಎಲೆಕ್ಟ್ರಿಕ್ ಶಾಪ್ ನಲ್ಲಿ ಕಾಣಿಸಿಕೊಂಡಂತ ಬೆಂಕಿ, ಇಡೀ ಕಟ್ಟಡಕ್ಕೆ ಆವರಿಸಿದೆ. ಸಂಪೂರ್ಣ ಹೊಗೆಯಿಂದ ಕಟ್ಟಡ ಆವೃತಗೊಂಡಿದ್ದೂ, ಹಲವರು ಕಟ್ಟಡದಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿಗಳು ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಕಟ್ಟಡದ ಮೇಲೆ ರಕ್ಷಣೆಗಾಗಿ ಜನರು ಕೂಗಾಡುತ್ತಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವರದಿ: ಶಶಿ ಬಿ ಈಶ್ವರಗೆರೆ, ಬೆಂಗಳೂರು…
ಬೆಳಗಾವಿ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ನಂತ್ರ, ಚುರುಕಾಗಿರೋ ಪೊಲೀಸರು ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಸೀಜ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪೊಲೀಸರು ಲೋಕಸಭಾ ಚುನಾವಣೆ ಘೋಷಣೆಯ ನಂತ್ರ, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸೋ ಕ್ರಮವಹಿಸಿದ್ದಾರೆ. ಬೆಳಗಾವಿಯ ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಆಲ್ಟೋ ಕಾರಿನಲ್ಲಿ ದಾಖಲೆಯಿಲ್ಲದೇ ಗೋಣಿಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಲೋಕಸಭಾ ಚುನಾವಣೆ 2024 : ಕರ್ನಾಟಕದಲ್ಲಿ ಮೊದಲ, ಎರಡನೇ ಹಂತದಲ್ಲಿ ಯಾವ ಕ್ಷೇತ್ರಗಳಲ್ಲಿ ಮತದಾನ? ಇಲ್ಲಿದೆ ಮಾಹಿತಿ ಬೆಂಗಳೂರು : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ.…
ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಕೂಡ ಚುನಾವಣಾ ಆಯೋಗದಿಂದ ಇಂದು ಘೋಷಣೆ ಮಾಡಲಾಗಿದೆ. ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಆಯುಕ್ತರು, ಕರ್ನಾಟಕದ ಯಾದಗಿರಿ ಜಿಲ್ಲಿಯೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯಲ್ಲಿ ಮೇ.7ರಂದು ನಡೆಸಲಾಗುತ್ತದೆ. ಮೇ.7ರಂದು ನಡೆದಂತ ಮತದಾನದ ಮತಏಣಿಕೆ ಕಾರ್ಯವು ಜೂನ್.4ರಂದು ನಡೆಯಲಿದೆ. ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದರು. ಒಟ್ಟಾರೆಯಾಗಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು ಅದೇ ದಿನ ಸುರಪುರದಲ್ಲೂ ಉಪಚುನಾವಣೆ ನಡೆಯಲಿದೆ. ಹೀಗಾಗಿ ಸುರಪುರ ವಿಧಾನಸಭಾ ಕ್ಷೇತ್ರದ ಜನರು ಲೋಕಸಭೆ ಮತ್ತು ವಿಧಾನಸಭೆಗೆ ಎರಡಕ್ಕೂ ಮತವನ್ನು ಚಲಾಯಿಸಲಿದ್ದಾರೆ. https://kannadanewsnow.com/kannada/law-and-order-situation-in-the-state-has-deteriorated-pm-modi-on-congress-govt-indulging-in-loot/ https://kannadanewsnow.com/kannada/lok-sabha-elections-2019-manipur-riot-victims-allowed-to-vote-from-refugee-centre/