Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆಯುತ್ತಿದ್ದಂತ ಪ್ರಜಾಪ್ರಭುತ್ವ ನಡಿಗೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಭಾಗಿಯಾಗಿದ್ದರು. ಈ ಕಾರ್ಯಕ್ರಮದ ವೇಳೆಯಲ್ಲಿ ದಿಢೀರ್ ವ್ಯಕ್ತಿಯೊಬ್ಬ ನುಗ್ಗಿ ಬಂದಿದ್ದರು. ಇಂತಹ ವ್ಯಕ್ತಿಯ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದಂತ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಪ್ರಕಣ ಸಂಬಂಧ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಆರೋಪಿ ಮಹದೇವ್ ನಾಯಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕನಕಪುರ ಮೂಲದ ಮಹದೇವ್ ನಾಯಕ್ ವಿರುದ್ಧ ವಿಧಾನಸೌಧ ಬಿಎನ್ಎಸ್ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ಆರೋಪಿ ಮಹದೇವ್ ನಾಯಕ್ ಅವರು ಖಾಸಗಿ ಶೋ ರೂಂ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಿಗಿ ಭದ್ರತೆಯ ನಡುವೆಯೂ ಸಿಎಂ ವೇದಿಕೆಯತ್ತ ನುಗ್ಗುವ ಮೂಲಕ ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಗಿದ್ದನು. ಈ ಹಿನ್ನಲೆಯಲ್ಲಿ ಆತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ವಶಕ್ಕೆ ಪಡೆದು, ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ. https://kannadanewsnow.com/kannada/arvind-kejriwals-resignation-check-list-of-possible-candidates-for-post-of-next-delhi-cm/ https://kannadanewsnow.com/kannada/breaking-delhi-cm-arvind-kejriwal-announces-resignation-as-cm-within-two-days/
ನವದೆಹಲಿ: ಮುಂದಿನ ಎರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವುದಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಜನರು ನನಗೆ “ಪ್ರಾಮಾಣಿಕತೆಯ ಪ್ರಮಾಣಪತ್ರ” ನೀಡುವವರೆಗೂ ಉನ್ನತ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದರು. ಹಾಗಾದ್ರೇ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ರೆ ಆ ಹುದ್ದೆ ಯಾರು ಏರಬಹುದು.? ಆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಮುಂದಿದೆ ಓದಿ. ದೆಹಲಿ ಅಬಕಾರಿ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಎರಡು ದಿನಗಳ ಹಿಂದೆ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್, ಮುಂದಿನ ಒಂದೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸುವುದಾಗಿ ಮತ್ತು ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದರು. ದೆಹಲಿ ಚುನಾವಣೆಗಳು ಫೆಬ್ರವರಿಯಲ್ಲಿ ನಡೆಯಲಿವೆ ಆದರೆ ರಾಷ್ಟ್ರ ರಾಜಧಾನಿಯಲ್ಲಿ ನವೆಂಬರ್ನಲ್ಲಿ ಮಹಾರಾಷ್ಟ್ರದೊಂದಿಗೆ ಚುನಾವಣೆ ನಡೆಸಬೇಕೆಂದು ನಾನು ಒತ್ತಾಯಿಸುತ್ತೇನೆ… ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರವನ್ನು ನೀಡಿದ ನಂತರವೇ ನಾನು ಸಿಎಂ ಕುರ್ಚಿಯಲ್ಲಿ…
ಬೆಳಗಾವಿ: ಜಿಲ್ಲೆಯ ಚಿಕ್ಕೋಡಿಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಕೀಚಕ ನಡೆಯನ್ನು ತೋರಿದ್ದನು. ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ, ದೌರ್ಜನ್ಯ ಎಸಗಿದ್ದಲ್ಲದೇ, ಆ ಎಲ್ಲವನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿಟ್ಟುಕೊಂಡಿದ್ದನು. ಈ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಳಿಕ ತನನ್ನು ಇಲಾಖೆ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯ ಶಿಕ್ಷಕ ಮೊಹಮ್ಮದ್ ಸಾದಿಕ್, ಕಳೆದ ಐದು ವರ್ಷಗಳಿಂದ ಚಿಕ್ಕೋಡಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂತಹ ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ, ವಿಕೃತಿ ಮೆರೆಯುತ್ತಿದ್ದನು. ಜೊತೆಗೆ ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಪೋಟೋ ತೆಗೆದುಕೊಂಡು ಬರುವಂತೆಯೂ ವಿದ್ಯಾರ್ಥಿನಿಯರಿಗೆ ಹೇಳುತ್ತಿದ್ದನು. ಇವೆಲ್ಲವನ್ನು ತನ್ನ ಮೊಬೈಲ್ ನಲ್ಲಿ ಸೇವ್ ಮಾಡಿಟ್ಟುಕೊಂಡಿದ್ದನು. ಶಿಕ್ಷಕ ಮೊಹಮ್ಮದ್ ಸಾದಿಕ್ ಕಳೆದ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಎಸಗಿರೋದಾಗಿ ತಿಳಿದು ಬಂದಿತ್ತು. ಓರ್ವ ವಿದ್ಯಾರ್ಥಿನಿ ತಾಯಿ ಮುಂದೆ ಶಿಕ್ಷಕನ ಲೈಂಗಿಕ ಕೃತ್ಯವನ್ನು ಹೇಳಿದಾಗ, ಕೀಚಕ ಕೃತ್ಯ…
ಬೆಂಗಳೂರು: ಬಿಜೆಪಿ ಸತ್ಯಶೋಧನಾ ಸಮಿತಿಯು ನಾಳೆ (ಸೆ.16) ನಾಗಮಂಗಲಕ್ಕೆ ಭೇಟಿ ಕೊಡಲಿದೆ. ಅಲ್ಲಿನ ಮಾಹಿತಿಯನ್ನು ಪಡೆಯಲಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ನನ್ನ ನೇತೃತ್ವದಲ್ಲಿ ಬಿಜೆಪಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಮಾಜಿ ಸಚಿವರು ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಭೈರತಿ ಬಸವರಾಜ್, ಮಾಜಿ ಸಚಿವ ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಸಮಿತಿ ಒಳಗೊಂಡಿದೆ ಎಂದರು. ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ಪ್ರಾರಂಭದಲ್ಲಿ ಅದೇನೂ ಇಲ್ಲ ಎಂಬಂತೆ ಹೇಳಿಕೆ ಕೊಟ್ಟರು. ನಂತರ ಇಂಟೆಲಿಜೆನ್ಸ್ ಮುಖ್ಯಸ್ಥರನ್ನು ವರ್ಗಾಯಿಸಿದರು. ಇನ್ಸ್ಪೆಕ್ಟರ್ ಅನ್ನು ಅಮಾನತು ಮಾಡಿದ್ದು, ಕಾನೂನು- ಸುವ್ಯವಸ್ಥೆ ನಿರ್ವಹಿಸುವಲ್ಲಿನ ವೈಫಲ್ಯವು ನಾಗಮಂಗಲ ಘಟನೆ ಮೂಲಕ ವ್ಯಕ್ತವಾಗಿದೆ ಎಂದು ತಿಳಿಸಿದರು. ಕೇರಳದವರು ಇದರ ಹಿಂದಿದ್ದು, ಎಸ್ಡಿಪಿಐನವರು ಎಂಬ ಅನುಮಾನಗಳಿವೆ ಎಂದು ವಿವರಿಸಿದರು. ನಾಗಮಂಗಲದಲ್ಲಿ…
ಬೆಂಗಳೂರು : ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದರು. ನಮ್ಮ ಬುದ್ದ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ ಎಂದರು. 1949ರ ನವೆಂಬರ್ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಿಎಂ, ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರಾತಮ್ಯ ಭಾರತದಲ್ಲಿ ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದರು. ಸಂವಿಧಾನದ ಪೀಠಿಕೆಯಲ್ಲಿ…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ ಎಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ರಚಿಸುತ್ತಿದೆ ಎಂದು ಪ್ರಸ್ತಾಪಿಸಿದರು. ಕರ್ನಾಟಕದಲ್ಲಿ ಸಂವಿಧಾನವನ್ನು ಜಾರಿ ಮಾಡುತ್ತಿದ್ದೀರಾ? ಎಂದು ಕೇಳಿದರು. ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಸಂವಿಧಾನ ಯಥಾವತ್ ಜಾರಿಗೊಳಿಸುವ ಸರಕಾರ ಎಂದು ಕಾಂಗ್ರೆಸ್ಸಿಗರು ಹೇಳಿಕೊಳ್ಳುತ್ತಾರೆ. ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಅಟ್ರಾಸಿಟಿ ಕೇಸ್ ಆಗಿದ್ದು, ಬಂಧಿಸಿದ್ದೀರ ಒ.ಕೆ. ಆದರೆ, ಒಂದು ತಿಂಗಳಿಗೂ ಹಿಂದೆ ಇದೇ ಅಟ್ರಾಸಿಟಿ ಕೇಸ್ ಕಾಂಗ್ರೆಸ್ಸಿನ ಶಾಸಕ ಚನ್ನಾರೆಡ್ಡಿ ಮೇಲೂ ಆಗಿದೆ. ಎಲ್ಲ ಕಾರ್ಯಕ್ರಮಗಳಲ್ಲಿ ರಾಜಾರೋಷವಾಗಿ ಭಾಗವಹಿಸುವ ಅವರನ್ನು ಇನ್ನೂ ಬಂಧಿಸಿಲ್ಲ. ಇದಾ ನಿಮ್ಮ ಪ್ರಜಾಪ್ರಭುತ್ವ? ಇದಾ ನಿಮ್ಮ ಸೆಕ್ಯುಲರಿಸಂ, ಇದಾ ನಿಮ್ಮ ಸಂವಿಧಾನ ಮಾನ್ಯ ಸಿದ್ದರಾಮಯ್ಯನವರೇ ಎಂದು ಕೇಳಿದರು. ನಾಗಮಂಗಲದಲ್ಲಿ ಗಣಪತಿ ಹಬ್ಬ ಮಾಡುವ, ಮೆರವಣಿಗೆ ಹೋಗುವ ಹಿಂದೂ ಯುವಕರ ಮೇಲೆ ನೂರಾರು ಕಲ್ಲು…
ಬೆಂಗಳೂರು: ರಾಜ್ಯ ಸರ್ಕಾರವು ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ; ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ರಾಜ್ಯ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದೆ ಸೇಡಂನ ಬಿಜೆಪಿಯ ಮಾಜಿ ಶಾಸಕ ಎಂದು ರಾಜಕುಮಾರ ಪಾಟೀಲ ತೇಲ್ಕೂರ ಅವರು ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಿನ್ನೆ ಮಾಗಡಿಯಲ್ಲಿ ಸಹಕಾರ ಸಚಿವರಿಗೆ ಹಾಲಿನ ದರ ಏರಿಕೆ ಮಾಡುವಂತೆ ಸೂಚಿಸಿರುವುದು ಖಂಡನೀಯ. ಈಗಾಗಲೇ ರಾಜ್ಯದ ಜನತೆ ನೀರು, ವಿದ್ಯುತ್, ಮನೆ ಬಾಡಿಗೆ ಸೇರಿದಂತೆ ಅನೇಕ ದರ ಏರಿಕೆಯ ಆಘಾತದೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ನಂದಿನಿ ಹಾಲಿನ ದರ ಏರಿಕೆ ಮಾಡಲು ಹೊರಟಿರುವುದು ಸರಿಯಲ್ಲ ಎಂದಿರುವ ಅವರು, ರಾಜ್ಯ ಸರ್ಕಾರವು ಮೊದಲು ರೈತರ ಹಾಲಿನ ಸಬ್ಸಿಡಿ ಹಣ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ನಂದಿನಿಯ ಎಲ್ಲ ಮಾದರಿಯ ಹಾಲಿನ ದರ ಕಳೆದ ಜೂನ್ನಲ್ಲೇ ಪ್ರತಿ ಲೀಟರ್ಗೆ 2 ರೂ 10 ಪೈಸೆಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಪ್ರತಿ ಲೀಟರ್ ಟೋನ್ಡ್ ಹಾಲು 42…
ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಇಂದು (ಸೆಪ್ಟೆಂಬರ್ 15) ಎರಡು ದಿನಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆಗೆ ಒತ್ತಾಯಿಸುವುದಾಗಿ ಹೇಳಿದರು. ಅಲ್ಲದೇ ಮನೀಶ್ ಸಿಸೋಡಿಯಾ ಮುಂದಿನ ದೆಹಲಿ ಸಿಎಂ ಅಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಅಬಕಾರಿ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಕೇಜ್ರಿವಾಲ್, ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರವನ್ನು ನೀಡಿದ ನಂತರವೇ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ. ಜೈಲಿನಿಂದ ಹೊರಬಂದ ನಂತರ ‘ಅಗ್ನಿಪರೀಕ್ಷೆ’ ನೀಡಲು ಬಯಸುತ್ತೇನೆ. ನಾವು ಪ್ರಾಮಾಣಿಕರು ಎಂದು ಜನರು ಹೇಳಿದಾಗ ಮಾತ್ರ ನಾನು ಮುಖ್ಯಮಂತ್ರಿ, ಸಿಸೋಡಿಯಾ ಉಪಮುಖ್ಯಮಂತ್ರಿಯಾಗುತ್ತೇನೆ ಎಂದು ಅವರು ಹೇಳಿದರು. ಚುನಾವಣೆ ಮುಗಿಯುವವರೆಗೂ ಬೇರೆ ಯಾರೋ ಸಿಎಂ ಆಗಿರುತ್ತಾರೆ. ಮನೀಶ್ ಸಿಸೋಡಿಯಾ ಮತ್ತು ನಾನು ಇಬ್ಬರೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು. https://twitter.com/AamAadmiParty/status/1835215040401780881 ಶೀಘ್ರದಲ್ಲೇ ಹೊಸ ಸಿಎಂ ನಿರ್ಧಾರ: ಕೇಜ್ರಿವಾಲ್…
ಚಿಕ್ಕಮಗಳೂರು: ಮಂಡ್ಯದ ನಾಗಮಂಗಲದ ಘಟನೆ ಮಾಸುವ ಮುನ್ನವೇ ಮತ್ತೊಂದು ಗಲಭೆಗೆ ಕಾರಣವಾಗುವಂತೆ ಚಿಕ್ಕಮಗಳೂರಲ್ಲಿ ಪ್ಯಾಲಿಸ್ತೀನ್ ಧ್ವಜವನ್ನು ಹಿಡಿದಂತ ಯುವಕರು, ಬೈಕ್ ನಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ರೌಂಡ್ಸ್ ಹೊಡೆದಿರುವುದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ನಗರದಲ್ಲಿ ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿದೆ. ಈ ಸಂದರ್ಭದಲ್ಲಿಯೇ ಚಿಕ್ಕಮಗಳೂರಿನ ಪ್ರಮುಖ ರಸ್ತೆಗಳಲ್ಲಿ ಅನ್ಯ ಕೋಮಿನ ಯುವಕರು ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್ ನಲ್ಲಿ ರೌಂಡ್ಸ್ ಮಾಡಿರುವಂತ ವೀಡಿಯೋ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಚಿಕ್ಕಮಗಳೂರು ನಗರ ಠಾಣೆಯ ಎದುರು ಜಮಾಯಿಸಿ, ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್ ನಲ್ಲಿ ರೌಂಡ್ಸ್ ಮಾಡಿದಂತ ಯುವಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಕೂಡ ಕಂಡು ಬಂದಿದೆ. https://kannadanewsnow.com/kannada/breaking-delhi-cm-arvind-kejriwal-announces-resignation-as-cm-within-two-days/ https://kannadanewsnow.com/kannada/stepmother-burns-5-year-old-daughters-lips-private-parts-with-hot-rod-for-snoring/
ಧಾರವಾಡ : ಬರುವ ಸೆಪ್ಟೆಂಬರ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೋಳ್ಳುತ್ತಿರುವದರಿಂದ, ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರಕಾರಿ ನೌಕರ ಉಪಸ್ಥಿತರಿದ್ದು, ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕು. ಡಿಸಿ ಅನುಮತಿ ಇಲ್ಲದೆ ಯಾರು ರಜೆ ಹೊಗುವಂತಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದರು. ಅವರು, ಇಂದು ಸಂಜೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ, ಸೆಪ್ಟೆಂಬರ 15 ರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದ ಅಂತಿಮ ಸಿದ್ದತೆ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ, ರೂಪುರೇಷೆ ಮಾಡಲಾಗಿದೆ. ಮಾನವ ಸರಪಳಿ ರಚನೆ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಆಗಿರುವದರಿಂದ ಜಿಲ್ಲೆಯ ಪ್ರತಿಯೊಬ್ಬ ಸರಕಾರಿ ನೌಕರನು ಕಡ್ಡಾಯವಾಗಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಸೆಪ್ಟೆಂಬರ್ 14, 15 ಮತ್ತು 16 ರಂದು ಸಾರ್ವತ್ರಿಕ ರಜೆ ಇದೆ ಎಂದು ಮುಂಚಿತವಾಗಿ, ಈಗಾಗಲೇ ಯಾವುದೇ ಹಂತದ ಅಧಿಕಾರಿ ಹಾಗೂ…