Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ 2024ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ಹೊತ್ತಿನಲ್ಲಿ 85 ವರ್ಷ ಮೇಲ್ಪಟ್ಟವರಿಗೂ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ. ದೆಹಲಿಯ ವಿಜ್ಞಾನ ಭವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯ ಚುನಾವಣಾ ಆಯುಗ್ತ ರಾಜೀವ್ ಕುಮಾರ್ ಅವರು, ನಾವು ಲೋಕಸಭಾ ಚುನಾವಣೆ ಸಂಪೂರ್ಣ ತಯಾರಿ ನಡೆಸಲಾಗಿದೆ. ಚುನಾವಣೆ ಒಂದು ಯುದ್ಧವಿದ್ದಂತೆ. ಜಮ್ಮು ಕಾಶ್ಮೀರ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಬಾಕಿಯಿದೆ. 800 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಲೋಕಸಭಾ ಚುನಾವಣೆಗಾಗಿ ಚರ್ಚೆ ನಡೆಸಲಾಗಿದೆ. ಪೊಲೀಸ್, ರಾಜಕೀಯ ಪಕ್ಷಗಳು ಸೇರಿದಂತೆ ಎಲ್ಲರೊಂದಿಗೂ ಸಮೀಕ್ಷೆ ನಡೆಸಿ, ಚರ್ಚಿಸಲಾಗಿದೆ ಎಂದರು. ನಾವು ಸ್ವತಂತ್ರ್ಯ, ನಿಷ್ಪಕ್ಷ ಪಾತ ಚುನಾವಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಭೌಗೋಳಿಕ, ಸಾಂಸ್ಕೃತಿಕ ವೈವಿದ್ಯತೆ ಹೊಂದಿರುವಂತ ಭಾರತದಲ್ಲಿ ಚುನಾವಣೆ ಒಂದು ಸವಾಲಿನ ಸಂಗತಿಯಾಗಿದೆ. 97 ಕೋಟಿ ಜನರು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುತ್ತಿದ್ದಾರೆ. 10.5 ಲಕ್ಷ ಪೋಲಿಂಗ್ ಭೂತ್ ಗಳನ್ನು ನಿರ್ಮಿಸಲಾಗುತ್ತಿದೆ. 1.5 ಕೋಟಿ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದರು. ಕಳೆದ ಕೆಲ ದಿನಗಳ…
ಬೆಂಗಳೂರು: ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದರು. ದೇಶದಲ್ಲೇ ಅತಿ ಉದ್ದದ (100 ಅಡಿ ಅಥವಾ 31 ಮೀಟರ್) ಯು-ಗರ್ಡರ್ ನಿರ್ಮಾಣ ಪ್ರಕ್ರಿಯೆಯನ್ನು ವೀಕ್ಷಿಸಲು ದೇವನಹಳ್ಳಿ ಬಳಿಯ ಗೊಲ್ಲಹಳ್ಳಿಯ ಕ್ಯಾಸ್ಟಿಂಗ್ ಕಾರ್ಯಾಗಾರಕ್ಕೆ ಭೇಟಿ ನೀಡಿದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಂಜಿನಿಯರಿಂಗ್ ಅದ್ಭುತ ಈ ಎನ್ನಲಾಗಿರುವ ಈ 100 ಅಡಿ ಉದ್ದದ ಯು-ಗರ್ಡರ್ ಅನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಉಪನಗರ ರೈಲು ಯೋಜನೆಗೆ ಬಳಸಲಾಗುತ್ತಿದೆ. ಮಲ್ಲಿಗೆ ಕಾರಿಡಾರ್ ನ (ನಂಬರ್ 2) ಭಾಗವಾದ ಹೆಬ್ಬಾಳ- ಯಶವಂತಪುರದ 8 ಕಿಮೀ ನಡುವೆ ಇಂತಹ ಸುಮಾರು 450 ಯು-ಗರ್ಡರ್ ಗಳನ್ನು ಬಳಸಲಾಗುತ್ತದೆ. ಇದಕ್ಕೆ ಮುಂಚೆ, ದೇಶದಲ್ಲಿ…
ಕಲಬುರ್ಗಿ: 7ನೇ ವೇತನ ಆಯೋಗದ ಅಂತಿಮ ಶಿಫಾರಸು ಈಡೇಸುವ ಕರ್ತವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರದ್ದು ಇದೆ. ಆದರೆ, ಬಜೆಟ್ ನಲ್ಲಿ ಒಂದು ನಯಾಪೈಸೆ ಕೊಟ್ಟಿಲ್ಲ. ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಳನೆ ವೇತನ ಆಯೋಗದ ವರದಿ ಜಾರಿ ಮಾಡಬೇಕು. ಚುನಾವಣೆ ಪೂರ್ವದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಬಹಳಷ್ಟು ಭಾಷಣ ಮಾಡುತ್ತಿದ್ದರು. ಈಗ ಅವರು ಅಧಿಕಾರದಲ್ಲಿದ್ದಾರೆ. ನಾವು ಶೇಕಡಾ 17ರಷ್ಟು ಮಧ್ಯಂತರ ಪರಿಹಾರ ಕೊಟ್ಟಿದ್ದೇವು ಎಂದು ಹೇಳಿದರು. ಸಿದ್ದರಾಮಯ್ಯನವರಿಗೆ ಮಾರ್ಚ್ ಏಪ್ರಿಲ್ ನಲ್ಲಿ 7ನೇ ವೇತನ ಆಯೋಗದ ವರದಿ ಬರುತ್ತದೆ ಅಂತ ಗೊತ್ತಿದ್ದರೂ ಕೂಡಾ ಬಜೆಟ್ ನಲ್ಲಿ ಯಾವುದೇ ಹಣ ಮೀಸಲಿಡದೇ. ಸರ್ಕಾರಿ ನೌಕರರಿಗೆ ಮೂಗಿಗೆ ತುಪ್ಪ ಒರಿಸುವ ಕೆಲ್ಸ ಮಾಡಿದ್ದಾರೆ. ವರದಿ ಜಾರಿ ಆಗುತ್ತದೆಯೋ ಇಲ್ಲವೋ ಕಾದು ನೋಡಬೇಕು.. 7ನೇ ವೇತನ ಆಯೋಗದ ವರದಿ ರೆಡಿಯಾಗಿತ್ತು, ಆದರೂ ಆರು ತಿಂಗಳು ಕಾಲಾವಕಾಶ…
ನವದೆಹಲಿ: ಬೆ.ಮ.ಸಾ.ಸಂಸ್ಥೆಯ ಎಲೆಕ್ಟ್ರಿಕ್ ಬಸ್ ಬ್ರ್ಯಾಂಡಿಂಗ್ ” ಅಸ್ತ್ರ ” ಉಪಕ್ರಮಕ್ಕೆ ವಿಶೇಷ ಜ್ಯೂರಿ ಪ್ರಶಸ್ತಿ ಲಭಿಸಿರುತ್ತದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸಾರಿಗೆಯನ್ನು ಬ್ರ್ಯಾಂಡ್ ಗೊಳಿಸುವಲ್ಲಿ ಮುಂಚೂಣಿಯಲ್ಲಿದ್ದು, ಸಾಮಾನ್ಯ ಸಾರಿಗೆಯಿಂದ ಪ್ರಾರಂಭಿಸಿ ವಾಯು ವಜ್ರದವರೆಗೆ ಈಗ, ಇ-ಬಸ್ಸುಗಳ ಪರಿಚಯದೊಂದಿಗೆ, ಹೊಸ ಪ್ರಯಾಣಿಕರನ್ನು ವ್ಯವಸ್ಥೆಗೆ ಆಕರ್ಷಿಸಲು ಸಿಟಿ ಬಸ್ ವ್ಯವಸ್ಥೆಯನ್ನು ಬ್ರಾಂಡ್ ಮಾಡುವ ಅವಕಾಶವನ್ನು ಸಂಸ್ಥೆಯು ಬಳಸಿಕೊಂಡಿದೆ. ಹೊಸ ಎಲೆಕ್ಟ್ರಿಕ್ ಬಸ್ಸುಗಳು ಪ್ರಯಾಣಿಕರಿಗೆ ಆರಾಮದಾಯಕ, ವಿಶ್ವಾಸಾರ್ಹ ಮತ್ತು ಸುರಕ್ಷಿತ ಪ್ರಯಾಣವನ್ನು ಒದಗಿಸುವ ವ್ಯಾಪಕ ಶ್ರೇಣಿಯ ವೈಶಿಷ್ಟ್ಯಗಳೊಂದಿಗೆ ಬರುತ್ತಿವೆ. ಬೆ.ಮ.ಸಾ.ಸಂಸ್ಥೆಯು ತನ್ನ ವಿದ್ಯುತ್ ಚಾಲಿತ ಬಸ್ಸುಗಳನ್ನು ಸಂಸ್ಕೃತದಿಂದ ಪಡೆದ ವಿಶಿಷ್ಟ “ಅಸ್ತ್ರ” ಎಂಬ ಹೆಸರಿನ ಬ್ರ್ಯಾಂಡ್ ಮಾಡಲು ನಿರ್ಧಾರವನ್ನು ತೆಗೆದುಕೊಂಡಿತು. ಸಮಾರಂಭದಲ್ಲಿ ಸಂಸ್ಥೆಯ ಮಾನ್ಯ ವ್ಯವಸ್ಥಾಪಕರಾದ ರಾಮಚಂದ್ರನ್. ಆರ್. ಭಾ.ಆ.ಸೇ. ರವರ ಪರವಾಗಿ ಸಾರ್ವಜನಿಕ ಸಂಪರ್ಕಾಧಿಕಾರಿಯಾದ ಸುನೀತಾ. ಜೆ. ಅವರು ರಾಷ್ಟ್ರೀಯ ರಸ್ತೆ ಮತ್ತು ಹೆದ್ದಾರಿಗಳ ಸಚಿವಾಲಯದ ಕಾರ್ಯದರ್ಶಿಗಳಾದ ಅನುರಾಗ ಜೈನ್, IAS ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು. https://kannadanewsnow.com/kannada/note-extension-of-date-for-registration-as-kere-mitra-in-bengaluru/ https://kannadanewsnow.com/kannada/farmers-in-the-state-should-note-these-documents-are-mandatory-to-apply-for-the-krishi-bhagya-scheme/
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹೊಂದಿಕೊಂಡಿರುವ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ 20 ಕಿರಿಯ ಎಂಜನಿಯರ್ ಹುದ್ದೆಗಳನ್ನು ತುಂಬಲು ಕರ್ನಾಟಕ ಲೋಕಾಸೇವಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಈ ತಿಂಗಳ 28ರಿಂದ ಆನ್ಲೈನ್ ಮೂಲಕ ಅರರ್ಜಿಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಪ್ರಥಮ ದರ್ಜೆ ಲೆಕ್ಕ ಸಹಾಯಕ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ 71 ಹುದ್ದೆಗಳಿಗೂ ಲೋಕಾಸೇವಾ ಆಯೋಗವು ಇನ್ನಿತರ ಇಲಾಖೆಗಳ ಗ್ರೂಪ್ ಸಿ ವೃಂದ ನೇಮಕಾತಿಗಾಗಿ ಕರೆದಿರುವ ಅಧಿಸೂಚನೆಯಲ್ಲಿ ಸೇರಿಸಿ ಅರ್ಜಿಗಳನ್ನು ಆಹ್ವಾನಿಸಿದೆ. ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಒಟ್ಟು 91 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದಂತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್…
ಬೆಂಗಳೂರು: ಬಿಬಿಎಂಪಿ ವಶದಲ್ಲಿರುವ ಕೆರೆಗಳ ನಿರ್ವಹಣೆಯಲ್ಲಿ ನಾಗರೀಕರನ್ನು ಒಳಗೊಳ್ಳುವ ಉದ್ದೇಶದಿಂದ ಅಧಿಸೂಚನೆಯನ್ನು ಹೊರಡಿಸಿ ಆಸಕ್ತಿವುಳ್ಳ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂಸೇವಕರಾಗಿ ನೊಂದಾಯಿಸಿಕೊಳ್ಳಲು ಎರಡು ಬಾರಿ ಕೋರಲಾಗಿತ್ತು, ಅದರಂತೆ 124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿರುತ್ತದೆ. ಇನ್ನುಳಿದ ಕೆಲವು ಕೆರೆಗಳಿಗೆ ನಾಗರೀಕರು ನೊಂದಾಯಿಸದೇ ಇರುವುದರಿಂದ ಈ ಕೆರೆಗಳಿಗೆ ಹಾಗೂ ಕೆಲವು ಕೆರೆಗಳಿಗೆ ಕೇವಲ ಒಬ್ಬರು ನೊಂದಾಯಿಸಿರುವುದರಿಂದ ಒಟ್ಟಾಗಿ ಎಲ್ಲಾ ಕೆರೆಗಳಿಗೆ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂ ಸೇವಕರನ್ನಾಗಿ ಪಾಲಿಕೆಯ ವೆಬ್ಸೈಟ್ನಲ್ಲಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಅದರಂತೆ ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್/ ಸಮೀಪದಲ್ಲಿರುವ ಕೆರೆಗಳಿಗೆ ಆಸಕ್ತಿ ಇದ್ದಲ್ಲಿ ಕೆರೆ ನಿರ್ವಹಣೆ ಬಗ್ಗೆ ಪ್ರತಿನಿತ್ಯ ಪಲಶೀಲಿಸಿ, ಅಂತರ್ಜಾಲದಲ್ಲಿ ವಿವರಗಳನ್ನು ದಾಖಲಿಸುವ ಮೂಲಕ ಸಾರ್ವಜನಿಕರ ಅವಶ್ಯಕತೆ ಹಾಗೂ ಕೆರೆಗಳ ಆಗೂ ಹೋಗುಗಳನ್ನು ಇನ್ನು ಉತ್ತಮವಾಗಿ ನಿಗಾವಹಿಸಲು ಅನುವು ಮಾಡಿಕೊಳ್ಳುವ ಉದ್ದೇಶದಲ್ಲಿ ಸದರಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನೊಂದಾಯಿಸಬಹುದಾದ ಕೆರೆಗಳ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿರುತ್ತದೆ. ಮುಂದುವರೆದು ಕೆರೆಮಿತ್ರ ನೋಂದಾಣಿಯ ದಿನಾಂಕವನ್ನು 25-03-2024 ರವರೆಗೆ…
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಮರಣ ನೋಂದಣಿಯನ್ನು ಬಲಪಡಿಸುವ ಸಲುವಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ ಮರಣಗಳ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಜನನ ಅಥವಾ ಮರಣ ಘಟಿಸಿದ ಮೂವತ್ತು ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬದಲಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ತಿದ್ದುಪಡಿ ಮಾಡಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಜನನ ಮರಣ ನೊಂದಣಿಯನ್ನು ಸುವ್ಯವಸ್ಥಿತವಾಗಿ ಹಾಗೂ ಉತ್ತಮವಾಗಿ ಅನುಷ್ಠಾನಗೊಳಿಸಲು ಎಲ್ಲಾ ಅವಶ್ಯಕ ಸೌಕರ್ಯ ಹೊಂದಿರುವ ಗ್ರಾಮ ಪಂಚಾಯತಿ ಕಛೇರಿಗಳು ಸಾರ್ವಜನಿಕರಿಗೆ ಹತ್ತಿರವಿರುವ ಜನಸ್ನೇಹಿ ಕೇಂದ್ರವಾಗಿರುತ್ತದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳು ಸೇವಾನಿರತವಾಗಿದ್ದು, ಈಗಾಗಲೇ 72 ಸೇವೆಗಳನ್ನು ಒದಗಿಸುತ್ತಿವೆ. ಜನನ, ಮರಣ ನೋಂದಣಿಯ 73ನೇ ಸೇವೆಯಾಗಲಿದ್ದು, ಸಾರ್ವಜನಿಕರಿಗೆ ತ್ವರಿತ ಸೇವೆ ದೊರೆಯಲಿದೆ ಇದರಿಂದಾಗಿ ಗ್ರಾಮೀಣ ಭಾಗಗಳಲ್ಲಿ ಶೇಕಡ 100ರಷ್ಟು ಜನನ, ಮರಣ ನೋಂದಣಿಯ ಗುರಿಯನ್ನು ಸಾಧಿಸಲು ಮತ್ತು ಕಾಯ್ದೆಯಲ್ಲಿ ನಿಗದಿಪಡಿಸಿರುವ ಕಾಲಮಿತಿಯೊಳಗೆ ಎಲ್ಲಾ ಜನನ…
ಬೆಂಗಳೂರು: ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು. ಹಠಾತ್ ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಉಚಿತವಾಗಿ ಪಡೆಯಬಹುದಾಗಿದೆ. ನಮ್ಮ ಗ್ರಾಮೀಣ ಪ್ರದೇಶದ ಜನರು ಇದರ ಉಪಯೋಗ ಪಡೆಯವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು. ಏನಿದು ಪುನೀತ್ ರಾಜಕುಮಾರ್…
ಬೆಂಗಳೂರು: ಉಡುಪಿ ಜಿಲ್ಲೆಯ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧಿಕಾರೇತರ ನಾಮ ನಿರ್ದೇಶಿತ ಮಹನೀಯರಾಗಿ ವೆಂಕಟೇಶ್ ಅಡಿಗ ನೇಮಕ ಮಾಡಿ ರಾಜ್ಯ ಸರ್ಕಾರದ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದೂ, ಉಡುಪಿ ಜಿಲ್ಲೆಯ ಜಿಲ್ಲಾ ಧಾರ್ಮಿಕ ಪರಿಷತ್ತನ್ನು ಈ ಕೆಳಕಂಡ ಅಧಿಕಾರೇತರ ನಾಮ ನಿರ್ದೇಶಿತ ಮಹನೀಯರುಗಳನ್ನೊಳಗೊಂಡಂತೆ ಜಿಲ್ಲಾ ಧಾರ್ಮಿಕ ಪರಿಷತ್ತನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಾಲ್ಕು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ರಚಿಸಿ ಆದೇಶಿಸಿದ್ದಾರೆ. ನಾಮ ನಿರ್ದೇಶಿತ ಮಹನೀಯರನ್ನಾಗಿ ವೇದಶಾಸ್ತ್ರ ವರ್ಗದಲ್ಲಿ ವೆಂಕಟೇಶ್ವರ ಅಡಿಗ, ಅರ್ಚಕರು, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಳ್ತೂರು ಅವರನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ. https://kannadanewsnow.com/kannada/i-have-not-cheated-eshwarappa-i-have-followed-orders-of-high-command-bommai/ https://kannadanewsnow.com/kannada/bihar-cabinet-expansion-former-deputy-cm-renu-devi-21-other-leaders-join-nitish-kumars-camp/
ಹಾವೇರಿ: ನಾನು ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮೋಸ ಮಾಡಿಲ್ಲ. ನಾನು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಕೆ.ಈ. ಕಾಂತೇಶ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದೆ, ಹೈಕಮಾಂಡ್ ನಾಯಕರು ಅನಿವಾರ್ಯತೆ ಇದೆ. ನನಗೆ ಸ್ಪರ್ಧಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಹಾವೇರಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮ್ಮ ಪುತ್ರನಿಗೆ ಟಿಕೇಟ್ ಸಿಗದಿದ್ದಕ್ಕೆ ಕೆ.ಎಸ್ ಈಶ್ವರಪ್ಪ ಅಸಮಾಧಾನಗೊಂಡಿರುವ ಕುರಿತು ಮಾತನಾಡಿದ ಅವರು, ಈಶ್ವರಪ್ಪ ಅವರ ಸಭೆ ಬಗ್ಗೆ ಮಾಹಿತಿ ಇಲ್ಲ. ಈಶ್ವರಪ್ಪ ಅವರಿಗೆ ಎಲ್ಲಾ ಗೊತ್ತಿದೆ. ನಾನು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಏನ್ ಹೇಳಿದ್ದೆ ಎಂದು ಎಲ್ಲಾ ಅವರಿಗೆ ಗೊತ್ತಿದೆ ಎಂದರು. ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಡ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ,…