Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: “ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರು ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಬೆಂಗಳೂರು ಸಿಟಿ ರೌಂಡ್ ಅನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಫೋಟೋ ಶೂಟ್ ಎಂದು ಟೀಕಿಸಿರುವ ಬಗ್ಗೆ ಕೇಳಿದಾಗ, “ಬಿಜೆಪಿವರು ಇರುವುದೇ ಟೀಕೆ ಮಾಡಲು. ಬಿಜೆಪಿಗೆ ಬೇರೆ ಏನು ಕೆಲಸ ಇದೆ. ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಇದು ದೊಡ್ಡ ಮೊತ್ತದ ಯೋಜನೆ, ಇದರ ಗುಣಮಟ್ಟ ಸರಿಯಾಗಿದೆಯೇ? ಸಧ್ಯ 150 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಯುತ್ತಿದೆ. 1,700 ಕೋಟಿ ಮೊತ್ತದ ಯೋಜನೆ. ಇದನ್ನು ಕಾಲಮಿತಿಯೊಳಗೆ ಮುಗಿಸುವ ಗುರಿ ಹೊಂದಿದ್ದೇವೆ. ಮುಂದೆಯೂ ಇಂತಹ ಯೋಜನೆ ಕೈಗೆತ್ತಿಕೊಳ್ಳುವ ಉದ್ದೇಶವಿದೆ. ಈ ವಿಚಾರವಾಗಿ ಸ್ಥಳೀಯ ಶಾಸಕರ ಅಭಿಪ್ರಾಯ ಏನಿದೆ ಎಂದು ಚರ್ಚೆ ಮಾಡಿದ್ದೇನೆ. ಮತ್ತೆ…
ಉತ್ತರ ಪ್ರದೇಶ: ದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದಂತ ಕಾಲ್ತುಳಿತದ ನಂತ್ರ ರೈಲ್ವೆ ಸಚಿವಾಲಯ ಎಚ್ಚೆತ್ತುಕೊಂಡಿದೆ. ಮತ್ತೆಲ್ಲೂ ಈ ದುರಂತ ಮರುಕಳಿಸದಂತೆ ಪ್ರಯಾಗ್ ರಾಜ್ ರೈಲ್ವೆ ನಿಲ್ದಾಣದಲ್ಲಿ ಎಮರ್ಜೆನ್ಸಿ ಜಾರಿಗೊಳಿಸಿದೆ. ಈ ಸಂಬಂಧ ರೈಲ್ವೆ ಇಲಾಖೆಯಿಂದ ಪ್ರಯಾಗ್ ರಾಜ್ ನಿಲ್ದಾಣದಲ್ಲಿ ಎಮರ್ಜೆನ್ಸಿ ಜಾರಿಗೊಳಿಸಿ ಆದೇಶಿಸಿದೆ. ಆದೇಶದಲ್ಲಿ ಜನಸಂದಣಿ ಆಗದಂತೆ ಎಚ್ಚರಿಕೆ ವಹಿಸಬೇಕು. ಹೆಚ್ಚು ಜನರು ಸೇರದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂಬುದಾಗಿ ಸೂಚಿಸಿದೆ. ಇನ್ನೂ ಸಾಧ್ಯವಾದಷ್ಟು ವಿಶೇಷ ರೈಲು ಓಡಿಸಲು ಸೂಚಿಸಿರುವಂತ ಇಲಾಖೆ ಫೆಬ್ರವರಿ.28ರವರೆಗೆ ಈ ನಿಯಮ ಪಾಲಿಸುವಂತೆ ಖಡಕ್ ಆದೇಶ ಮಾಡಿದೆ. ಈ ಮೂಲಕ ಪ್ರಯಾಗ್ ರಾಜ್ ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ನಿಯಂತ್ರಣಕ್ಕೆ ಮಹತ್ವದ ಕ್ರಮ ವಹಿಸಿದೆ. https://kannadanewsnow.com/kannada/a-woman-suffering-from-leptospira-endometriosis-a-rare-disease-was-successfully-treated-at-fortis-hospital/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/
ಬೆಂಗಳೂರು: ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ನೀಡಲಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಎಂಬುದಾಗಿ ಭರವಸೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಆಡಿದ ಆರಂಭಿಕ ಮಾತುಗಳು… ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆಧ್ಯತೆ ನೀಡುವುದಾಗಿ ಸಿ.ಎಂ.ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರ್ತೇನೆ ಅಂತ ಸಿ.ಎಂ ಭರವಸೆ ನೀಡಿದರು. ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ…
ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಕಾರಣದಿಂದಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವುದಾಗಿ ಹೇಳಲಾಗುತ್ತಿದೆ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ವೈದ್ಯರ ಸೂಚನೆಯ ಮೇರೆಗೆ ಇಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ನಿರಂತರ ಪ್ರವಾಸ ಹಾಗೂ ಕೆಲಸದ ಒತ್ತಡದಿಂದ ಅವರು ಆಯಾಸಕ್ಕೆ ಒಳಗಾಗಿ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಸದಸ್ಯ ಅಪೋಲೋ ಆಸ್ಪತ್ರೆಯ ವೈದ್ಯರಿಂದ ಹೆಚ್.ಡಿ ಕುಮಾರಸ್ವಾಮಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಯಾರೂ ಭಯಪಡಬೇಕಾಗಿಲ್ಲ ಎಂಬುದಾಗಿಯೂ ಹೇಳಿದ್ದಾರೆ. ಇನ್ನೂ ಅನಾರೋಗ್ಯದಿಂದ ಆಸ್ಪತ್ರೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ದಾಖಲಾದ ಕಾರಣ ಅವರ ಈ ವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿರೋದಾಗಿ ಹೇಳಲಾಗುತ್ತಿದೆ. ಚಿಕಿತ್ಸೆ ಬಳಿಕ ಬುಧವಾರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ ಎಂಬುದಾಗಿ…
ನವದೆಹಲಿ: ಕರೋನವೈರಸ್ ಸಾಂಕ್ರಾಮಿಕ ರೋಗವು ಪ್ರಪಂಚದಾದ್ಯಂತ ವಿನಾಶವನ್ನುಂಟು ಮಾಡಿದೆ ಮತ್ತು ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಈ ಸಾಂಕ್ರಾಮಿಕ ರೋಗವು ನಮ್ಮೆಲ್ಲರ ಜೀವನದಲ್ಲಿ ಬದಲಾವಣೆಗಳನ್ನು ತಂದಿತು ಮತ್ತು ವಿಶ್ವಾದ್ಯಂತ ಭಯದ ವಾತಾವರಣವನ್ನು ಸೃಷ್ಟಿಸಿತು. ಆದರೆ ಕರೋನವೈರಸ್ ಹೊರತಾಗಿ, ಭವಿಷ್ಯದಲ್ಲಿ ಸಾಂಕ್ರಾಮಿಕ ರೋಗಗಳಾಗಬಹುದಾದ ಇನ್ನೂ ಅನೇಕ ರೋಗಗಳಿವೆ. ಆ ಬಗ್ಗೆ ಮುಂದೆ ಓದಿ. ಪ್ರಪಂಚದಾದ್ಯಂತದ ಆರೋಗ್ಯ ತಜ್ಞರು ಮತ್ತು ವಿಜ್ಞಾನಿಗಳು ಈ ಬೆದರಿಕೆಗಳ ಬಗ್ಗೆ ನಿರಂತರವಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಕಳೆದ ವರ್ಷ 2024 ರಲ್ಲಿ, ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ, ತಜ್ಞರು ‘ಡಿಸೀಸ್ ಎಕ್ಸ್’ ಬಗ್ಗೆ ಚರ್ಚಿಸಿದರು. ಇದು ಭವಿಷ್ಯದಲ್ಲಿ ಸಾಂಕ್ರಾಮಿಕ ರೋಗಕ್ಕೆ ಕಾರಣವಾಗಬಹುದಾದ ಅಪರಿಚಿತ ಕಾಯಿಲೆಯನ್ನು ಸೂಚಿಸುತ್ತದೆ. ಕರೋನಾದಂತಹ ಸಾಂಕ್ರಾಮಿಕ ರೋಗದ ರೂಪವನ್ನು ತೆಗೆದುಕೊಳ್ಳಬಹುದಾದ ಆ 8 ಅಪಾಯಕಾರಿ ರೋಗಗಳ ಬಗ್ಗೆ ಕಲಿಯೋಣ. 1. ಮೆರ್ಸ್-ಸಿಒವಿ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡ್ರೋಮ್ ಕರೋನವೈರಸ್) ಮೆರ್ಸ್-ಸಿಒವಿ ಒಂದು ಕರೋನವೈರಸ್ ಆಗಿದ್ದು, ಇದು ಪ್ರಾಥಮಿಕವಾಗಿ ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಈ ರೋಗವು ಮೊದಲು…
ಬೆಂಗಳೂರು: ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳಬೇಡಿ ಅಂತ ಹೇಳಿಕೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ಅದು ಹೇಳಿಕೆ ಅಷ್ಟೇ. ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯೋದಿಲ್ಲ. ಈಗ ಎಚ್ಚರಿಕೆನ ಯಾರು ಕೇಳ್ತಾರೆ ಎಂಬುದಾಗಿ ಸಚಿವ ಕೆ.ಎನ್ ರಾಜಣ್ಣ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಯಾರ ಹೆಸರನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಅವರ ಹೆಸರನ್ನು ಹೇಳುತ್ತಿದ್ದಾರೆ. ಅವರು ಆ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗೆ ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬಾರದು ಅಂತ ಗುಡುಗಿದರು. ನನ್ನದು ಇದು ಆರೋಪವಲ್ಲ. ವಾಸ್ತವ ಸಂಗತಿಯಾಗಿದೆ. ನಾನು ಯಾರಿಂದಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ. 50 ವರ್ಷ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನಾನು ಮಾತನಾಡಿದರೇ ಸತ್ಪರಿಣಾಮ ಬೀರುವ ಮಾತನಾಡುತ್ತೇನೆಯೇ ಹೊರತು, ದುಷ್ಪರಿಣಾಮ ಬೀರುವಂತೆ ಮಾತನಾಡಲ್ಲ ಎಂಬುದಾಗಿ ತಿಳಿಸಿದರು. ನಾನು ಸಿಎಂ ಪೂರ್ಣಾವಧಿ ವಿಚಾರದಲ್ಲಿ ಹಠಕ್ಕೆ ಬಿದ್ದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ಗೆ…
ನವದೆಹಲಿ: ರೈಲ್ವೆ ನಿಲ್ದಾಣಗಳಲ್ಲಿ ಹೋಲ್ಡಿಂಗ್ ವಲಯಗಳನ್ನು ರಚಿಸಲು, ಜನಸಂದಣಿ ನಿಯಂತ್ರಣಕ್ಕಾಗಿ ಎಐ ತಂತ್ರಜ್ಞಾನವನ್ನು ಬಳಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಕೇಂದ್ರ ಸರ್ಕಾರವು ದೇಶಾದ್ಯಂತ ಎಲ್ಲಾ ನಿಲ್ದಾಣಗಳಲ್ಲಿ ಶಾಶ್ವತ ಹೋಲ್ಡಿಂಗ್ ವಲಯಗಳನ್ನು ನಿರ್ಮಿಸಲಿದೆ ಮತ್ತು ಜನಸಂದಣಿ ಮತ್ತು ಬಿಕ್ಕಟ್ಟು ನಿರ್ವಹಣೆಗಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ಬಳಸಲಿದೆ ಎಂದು ಮೂಲಗಳು ತಿಳಿಸಿವೆ. ಅಂದಹಾಗೇ ಎರಡು ದಿನಗಳ ಹಿಂದಷ್ಟೇ ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಜನ ಸಂದಣಿ ಉಂಟಾದ ಪರಿಣಾಮ, ರೈಲು ಹತ್ತೋದಕ್ಕೆ ನೂಗು ನುಗ್ಗಲು ಉಂಟಾಗಿ 18 ಮಂದಿ ಪ್ರಾಯಾಣಿಕರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂತದ್ದೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. https://kannadanewsnow.com/kannada/what-could-be-more-shameful-than-modiji/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/ https://kannadanewsnow.com/kannada/a-woman-suffering-from-leptospira-endometriosis-a-rare-disease-was-successfully-treated-at-fortis-hospital/
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸದಲ್ಲಿ ಇರುವಾಗಲೇ 116 ವಲಸಿಗ ಭಾರತೀಯರನ್ನು ಅಮೇರಿಕಾ ಕೋಳ ಹಾಕಿ ಭಾರತಕ್ಕೆ ಕಳುಹಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ ಅಂತ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲೇ ಮತ್ತದೆ ಧಾರ್ಷ್ಟ್ಯ ತೋರಿದೆ. ಇಷ್ಟಾದರೂ ಮೋದಿ ಬಾಬಾ ಮೌನಕ್ಕೆ ಶರಣಾಗಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಮೋದಿಯವರು ಅಮೆರಿಕದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರಿಕರನ್ನು ತುಚ್ಛವಾಗಿ ನಡೆಸಿಕೊಂಡಿದೆ. ಇದರರ್ಥ ಮೋದಿಯವರನ್ನು ಅಮೆರಿಕ ಲೆಕ್ಕಕ್ಕೇ ಇಟ್ಟಿಲ್ಲ ಎಂದು ಭಾಸವಾಗುತ್ತಿದೆ. ಮೋದಿಯವರು ‘ಮನೆಯಲ್ಲಿ ಹುಲಿ.,ಬೀದಿಯಲ್ಲಿ ಇಲಿ’ಯಂತಾದರೆ ಏನು ಪ್ರಯೋಜನ.? ಎಂದು ಕೇಳಿದ್ದಾರೆ.…
ನವದೆಹಲಿ: ಸ್ಮಾರ್ಟ್ಫೋನ್ ರಫ್ತಿನಲ್ಲಿ ಭಾರತ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ದಾಟಿದೆ. ಏಪ್ರಿಲ್ ಮತ್ತು ಜನವರಿ ನಡುವೆ, ಸ್ಮಾರ್ಟ್ಫೋನ್ ರಫ್ತು ಅಂಕಿ ಅಂಶವು 1.55 ಲಕ್ಷ ಕೋಟಿ ರೂ.ಗೆ ತಲುಪಿದ್ದು, ಹೊಸ ದಾಖಲೆಯನ್ನು ನಿರ್ಮಿಸಿದೆ. ಈ ಬೆಳವಣಿಗೆಗೆ ಮುಖ್ಯ ಕಾರಣ ಸರ್ಕಾರದ ಉತ್ಪಾದನಾ-ಲಿಂಕ್ಡ್ ಇನ್ಸೆಂಟಿವ್ (ಪಿಎಲ್ಐ) ಯೋಜನೆ, ಇದು ಸ್ಮಾರ್ಟ್ಫೋನ್ ರಫ್ತು ಗಮನಾರ್ಹವಾಗಿ ಹೆಚ್ಚಾಗಿದೆ. 2024ರ ಹಣಕಾಸು ವರ್ಷದಲ್ಲಿ ಈ ಮೊತ್ತ 1.31 ಲಕ್ಷ ಕೋಟಿ ರೂ. ಜನವರಿಯಲ್ಲಿ ದಾಖಲೆಯ ರಫ್ತು ಜನವರಿಯಲ್ಲಿ, ಸ್ಮಾರ್ಟ್ಫೋನ್ ರಫ್ತು ಐತಿಹಾಸಿಕ ಗರಿಷ್ಠ ಮಟ್ಟವನ್ನು ತಲುಪಿದೆ, ರಫ್ತು 25,000 ಕೋಟಿ ರೂ.ಗಳಷ್ಟಿದೆ, ಇದು ಜನವರಿ 2024 ಕ್ಕೆ ಹೋಲಿಸಿದರೆ 140% ಹೆಚ್ಚಾಗಿದೆ. 10 ತಿಂಗಳಲ್ಲಿ 56% ಹೆಚ್ಚಳ ಏಪ್ರಿಲ್ನಿಂದ ಜನವರಿವರೆಗಿನ 10 ತಿಂಗಳಲ್ಲಿ ಸ್ಮಾರ್ಟ್ಫೋನ್ ರಫ್ತು ಶೇಕಡಾ 56 ರಷ್ಟು ಏರಿಕೆಯಾಗಿ 1.31 ಲಕ್ಷ ಕೋಟಿ ರೂ.ಗೆ ತಲುಪಿದೆ. ಮಾರಾಟಗಾರರ ಕೊಡುಗೆಗಳು ಈ ದಾಖಲೆಯ ರಫ್ತಿಗೆ ತಮಿಳುನಾಡು ಮೂಲದ ಕೆಲವು ಐಫೋನ್ ಮಾರಾಟಗಾರರಿಂದ ಗಮನಾರ್ಹ ಕೊಡುಗೆ ಬಂದಿದೆ,…
ಧಾರವಾಡ: ಆ ಇಬ್ಬರು ದಂಪತಿಗಳು ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದಾರೆ. ಬೆಳಿಗ್ಗೆಯಾದರೂ ಏಳದೇ ಇದ್ದಾಗ ಕುಟುಂಬಸ್ಥರು ಎದ್ದೇಳಿಸೋದಕ್ಕೆ ನೋಡಿದ್ದಾರೆ. ಆದರೇ ಎದ್ದಿಲ್ಲ. ಆ ಮೂಲಕ ಸಾವಿನಲ್ಲೂ ರೈತ ದಂಪತಿಗಳು ಒಂದಾಗಿರುವಂತ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ದೇವರಹುಬ್ಬಳ್ಳಿ ಗ್ರಾಮದಲ್ಲೇ ಇಂತಹ ಘಟನೆ ನಡೆದಿದೆ. ಈಶ್ವರ್ ಅರೇರ್(82) ಹಾಗೂ ಪಾರ್ವತಿ ಅರೇರ್ (73) ಎಂಬುವರೇ ಸಾವಿನಲ್ಲೂ ಒಂದಾದಂತ ರೈತ ದಂಪತಿಗಳಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಪತ್ನಿ ಪಾರ್ವತಿಯನ್ನು ಪತಿ ಈಶ್ವರ್ ಅರೇರ್ ಅವರೇ ಆರೈಕೆ ಮಾಡುತ್ತಿದ್ದರು. ನಿನ್ನೆ ರಾತ್ರಿ ಒಟ್ಟಿಗೆ ಊಟ ಮಾಡಿದಂತ ದಂಪತಿಗಳು ಮಲಗಿದ್ದಾರೆ. ಆದರೇ ಬೆಳಿಗ್ಗೆ ಎಬ್ಬಿಸಲು ಹೋದಾಗ ಎದ್ದಿಲ್ಲ. ಹೀಗೆ ರೈತ ದಂಪತಿಗಳು ಸಾವಿನಲ್ಲೂ ಒಂದಾಗಿದ್ದಾರೆ. ಅಂದಹಾಗೇ ಈಶ್ವರ್ ಹಾಗೂ ಪಾರ್ವತಿ ದಂಪತಿಗಳಿಗೆ ನಾಲ್ವರು ಪುತ್ರಿಯರು. 12 ಮಂದಿ ಮೊಮ್ಮಕ್ಕಳಿದ್ದಾರೆ. ಇಂತಹ ರೈತ ದಂಪತಿಗಳು ನಿನ್ನೆ ಮಲಗಿ, ಇಂದು ಬೆಳಿಗ್ಗೆ ಇನ್ನಿಲ್ಲವಾಗಿ ಸಾವಿನಲ್ಲೂ ಒಟ್ಟಾಗಿ ಪಯಣಿಸಿದ್ದಾರೆ. https://kannadanewsnow.com/kannada/top-3-supplements-to-be-taken-to-keep-the-heart-healthy/ https://kannadanewsnow.com/kannada/a-woman-suffering-from-leptospira-endometriosis-a-rare-disease-was-successfully-treated-at-fortis-hospital/