Author: kannadanewsnow09

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ 2019 ಭಾರತದ ಆಂತರಿಕ ವಿಷಯವಾಗಿದೆ ಮತ್ತು ಅದರ ಅನುಷ್ಠಾನದ ಬಗ್ಗೆ ಅಮೆರಿಕದ ಹೇಳಿಕೆ ತಪ್ಪಾಗಿದೆ. ತಪ್ಪು ಮಾಹಿತಿ ಮತ್ತು ಅನಗತ್ಯವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಕಾಯ್ದೆಯ ಅಧಿಸೂಚನೆಯ ಬಗ್ಗೆ ಅಮೆರಿಕ ಕಳವಳ ವ್ಯಕ್ತಪಡಿಸಿದ ನಂತರ ನವದೆಹಲಿ ತನ್ನ ಬಲವಾದ ನಿಲುವನ್ನು ಪ್ರತಿಪಾದಿಸಿತು. ಮಾರ್ಚ್ 11 ರಂದು ಪೌರತ್ವ (ತಿದ್ದುಪಡಿ) ಕಾಯ್ದೆಯ ಅಧಿಸೂಚನೆಯ ಬಗ್ಗೆ ನಾವು ಕಳವಳ ಹೊಂದಿದ್ದೇವೆ. ಈ ಕಾಯ್ದೆಯನ್ನು ಹೇಗೆ ಜಾರಿಗೆ ತರಲಾಗುವುದು ಎಂಬುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ” ಎಂದು ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಮತ್ತು ಕಾನೂನಿನ ಅಡಿಯಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನ ಚಿಕಿತ್ಸೆ ಮೂಲಭೂತ ಪ್ರಜಾಪ್ರಭುತ್ವ ತತ್ವಗಳಾಗಿವೆ” ಎಂದು ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದರು. ಅಮೆರಿಕದ ಕಳವಳಗಳಿಗೆ ಪ್ರತಿಕ್ರಿಯಿಸಿದ ಅವರು, ಭಾರತದ ಬಹುತ್ವದ ಸಂಪ್ರದಾಯಗಳ ಬಗ್ಗೆ ಸೀಮಿತ ತಿಳುವಳಿಕೆ ಹೊಂದಿರುವವರ ಉಪನ್ಯಾಸಗಳ ಬಗ್ಗೆ ತಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.…

Read More

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಇದೀಗ ನ್ಯಾಯಾಲಯವು ಆರೋಪಿ ಮಾಝ್ ಮುನೀರ್ ನನ್ನು 7 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ. ಮಂಗಳೂರು ಗೋಡೆ ಬರಹ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಆರೋಪಿಯಾಗಿದ್ದಂತ ಮಾಝ್ ಮುನೀರ್ ಅಹ್ಮದ್ ಅನ್ನು ಬಂಧಿಸಿ, ಜೈಲಿಗಟ್ಟಲಾಗಿತ್ತು. ಇಂತಹ ಆರೋಪಿಯು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲೂ ಭಾಗಿಯಾಗಿರೋ ಶಂಕೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವ್ಯಕ್ತ ಪಡಿಸಿದ್ದರು. ಈ ಹಿನ್ನಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ಆರೋಪಿಯನ್ನು ತಮ್ಮ ಕಸ್ಟಡಿಗೆ ನೀಡುವಂತೆ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದಂತ ನ್ಯಾಯಾಲಯವು 7 ದಿನಗಳ ಕಾಲ ಆರೋಪಿ ಮಾಝ್ ಮುನೀರ್ ಅಹ್ಮದ್ ನನ್ನು ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ. ಅಂದಹಾಗೇ ಮಾಝ್ ಮುನೀರ್ ಅಹ್ಮದ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಮದ ಪ್ರಮುಖ ಆರೋಪಿಯಾಗಿದ್ದಾನೆ. ಬಂಧನದ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. ಈ ಆರೋಪಿಯನ್ನು ಈಗ ಎನ್ಐಎ…

Read More

ಬೆಂಗಳೂರು: ನಗರದಲ್ಲಿ ರಸ್ತೆ ದಾಟುತ್ತಿದ್ದಂತ ವೇಳೆಯಲ್ಲಿ ವ್ಯಕ್ತಿಯೊಬ್ಬರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಈ ಮೂಲಕ ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯನ್ನು ಪಡೆದಂತೆ ಆಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಂಧ್ರಪ್ರದೇಶ ಮೂಲದ ಚೇತನ್(35) ಎಂಬುವರು ರಸ್ತೆ ದಾಟುತ್ತಿದ್ದಂತ ವೇಳೆಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಚೇತನ್ ತೀವ್ರರಕ್ತಸ್ತ್ರಾವದೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಹೌಸಿಂಗ್ ಬೋರ್ಡ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಘಟನೆಯ ನಂತ್ರ ಬಿಎಂಟಿಸಿ ಬಸ್ ಚಾಲಕ ಶಿವಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/note-kea-extends-application-deadline-for-recruitment-to-these-posts/ https://kannadanewsnow.com/kannada/breaking-massive-fire-breaks-out-due-to-cylinder-blast-at-tent-house-in-bhopal/

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರೆಯಲಾಗಿದ್ದಂತ ಗ್ರೂಪ್ ಸಿ ಹಾಗೂ 50 ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿನ 50 ಸಹಾಯಕ ಎಂಜಿನಿಯರ್ ಮತ್ತು ಗ್ರೂಪ್-ಸಿ 14 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ. https://twitter.com/KEA_karnataka/status/1768224115411108209 ದಿನಾಂಕ 05-02-2024ರಂದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 10-02-2024ರಿಂದ 10-03-2024ರವರೆಗೆ ಅವಕಾಶ ನೀಡಲಾಗಿತ್ತು. ಆದರೇ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಕೋರಿದ್ದರು ಎಂದಿದೆ. ಈ ಹಿನ್ನಲೆಯಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯನ್ನು ದಿನಾಂಕ 11-03-2024ರಿಂದ 21-03-2024ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 22-03-2024 ಕೊನೆಯ ದಿನವಾಗಿದೆ ಎಂದು ತಿಳಿಸಿದೆ. https://kannadanewsnow.com/kannada/applications-invited-for-free-tv-electronics-items-repair-training-for-self-employed-seekers/ https://kannadanewsnow.com/kannada/breaking-massive-fire-breaks-out-due-to-cylinder-blast-at-tent-house-in-bhopal/

Read More

ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದು ನಂತರ ಮಾತನಾಡಿದ ಅವರು, ಚುನಾವಣೆಗೂ ಮುನ್ನ ಶ್ರೀಗಳ ದರ್ಶನಕ್ಕೆ ಬಂದಿದ್ದೇವೆ. ಒಳ್ಳೆಯ ಕಾರ್ಯ ಮಾಡುವಂತೆ ಶ್ರೀಗಳು ತಿಳಿಸಿದ್ದಾರೆ. ನಾನು ಅದೇ ರೀತಿ ಕೆಲಸ‌ ಮಾಡಿಕೊಂಡು ಬಂದಿದ್ದೇನೆ ಎಂದರು‌. ಚಿತ್ರದುರ್ಗ ಲೋಕಸಭಾ ಟಿಕೆಟ್ ಘೋಷಣೆ ಕುರಿತು ಪಾರ್ಲಿಮೆಂಟ್ರಿ ಬೋರ್ಡ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಮಾದಾರ ಚೆನ್ನಯ್ಯ ಶ್ರೀಗಳ ಹೆಸರು ಕೇಳಿಬಂದ ವಿಚಾರ ನಾನು ಎಲ್ಲೂ ಚರ್ಚೆ ಮಾಡಿಲ್ಲ. ಹಾಲಿ ಎಂಪಿಗೆ ಟಿಕೆಟ್ ತಪ್ಪುತ್ತದೆ ಅನ್ನುವುದು ಊಹಾಪೋಹಾ ಎಂದು ಹೇಳಿದರು. ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸಭೆ ಕರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪ ಅವರೊಂದಿಗೆ ನಾನು, ನಮ್ಮ ವರಿಷ್ಠರು ಮಾತನಾಡಿದ್ದೇವೆ. ಎಲ್ಲಾ ಸರಿಹೋಗತ್ತದೆ‌ ಏನು ಆಗುವುದಿಲ್ಲ. ಹಾವೇರಿ ಸಂಸದ…

Read More

ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಉಚಿತವಾಗಿ ಟಿವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ದುರಸ್ಥಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ದಿನಾಂಕ 10-04-2024 ರಿಂದ 09-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಟಿವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ದುರಸ್ಥಿ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು 18-45 ವರ್ಷದ ಒಳಗೆ ಇರುವವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಉಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯಿಂದ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ಕೂಡ ನೀಡಲಾಗುತ್ತದೆ ಎಂದಿದ್ದಾರೆ. ವಾಟ್ಸಾಪ್ ಮೂಲಕವೂ…

Read More

ಧಾರವಾಡ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ 17 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರೋ ಸಂಬಂಧ ಪ್ರಕರಣ ದಾಖಲಾಗಿದೆ. ಈ ನಡುವೆ ನನಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಅಪಾರವಾದ ನಂಬಿಕೆಯಿದೆ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾರೇ ಯಾವುದೇ ವಿಚಾರವಾಗಿ ಪೊಲೀಸರಿಗೆ ದೂರು ಕೊಟ್ಟರೂ ಅದನ್ನು ದಾಖಲು ಮಾಡಬೇಕು. ಈಗ ಬಿಎಸ್ ಯಡಿಯೂರಪ್ಪ ಅವರ ವಿಚಾರದಲ್ಲಿ ಅದೇ ಆಗಿದೆ. ಸಂತ್ರಸ್ತೆ ತಾಯಿ ನೀಡಿದಂತ ದೂರಿನ ಆಧಾರದ ಮೇಲೆ ಪೋಕ್ಸೊ ಕೇಸ್ ದಾಖಲಾಗಿದೆ ಎಂದರು. ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿರುವ ವಿಚಾರ ಗೊತ್ತಾಗಿದೆ. ಆದರೇ ಅವರ ಮೇಲೆ ನನಗೆ ಅಪಾರವಾದಂತ ನಂಬಿಕೆಯಿದೆ. ಸಂತ್ರಸ್ತೆ ತಾಯಿ ಮಾನಸಿಕ ಅಸ್ವಸ್ಥೆ ಅಂತ ಹೇಳಲಾಗುತ್ತಿದೆ. ಸ್ವಲ್ಪ ದಿನ ಕಾದು ನೋಡೋಣ. ನಾನು ಈ ಪ್ರಕರಣದ ಬಗ್ಗೆ ಏನು ಮಾತನಾಡೋದಿಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/dy-cm-dk-shivakumars-big-plan-for-congress-candidates-victory-in-lok-sabha-elections-know-what/ https://kannadanewsnow.com/kannada/breaking-massive-fire-breaks-out-due-to-cylinder-blast-at-tent-house-in-bhopal/

Read More

ಬೆಂಗಳೂರು : “ಎರಡೂ ಪಕ್ಷಗಳ ಸಾಕಷ್ಟು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸ ಮತ್ತು ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಬಿಜೆಪಿ- ದಳದವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಸುಮಾರು 5- 6 ಕ್ಷೇತ್ರಗಳಲ್ಲಿ ನಮಗೂ ಮತ್ತು ದಳಕ್ಕೂ ನೇರಾ- ನೇರ ಸ್ಪರ್ಧೆ ಇತ್ತು. ಆದರೆ ಈಗ ದಳ ಎಲ್ಲಿದೆ? ಎರಡೂ ಪಕ್ಷಗಳ ನಾಯಕರುಗಳು ನಮ್ಮ ವಿರುದ್ಧ ಹೋರಾಟ ಮಾಡಿದವರು. ಅವರೂ ಸಹ ಮುಂದಿನ ರಾಜಕೀಯ ಭವಿಷ್ಯವನ್ನು ನೋಡುತ್ತಾರಲ್ಲವೇ? ಎಂದು ಪ್ರಶ್ನಿಸಿದರು. ದೇವೆಗೌಡರು ಮತ್ತು ಕುಮಾರಸ್ವಾಮಿ ಅವರ ಕುಟುಂಬವೇ ಬಿಜೆಪಿ ಸೇರುತ್ತಿದೆ. ಹೀಗಾದರೆ ನಮ್ಮ ಗತಿ ಏನು ಎಂದು ದಳದ ಕಾರ್ಯಕರ್ತರು ನಮ್ಮ ಪಕ್ಷದ ನಾಯಕರ ಸಂಪರ್ಕ ಮಾಡುತ್ತಿದ್ದಾರೆ. ನಾನು ಸಹ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನಾಯಕ. ನಮ್ಮ ಚುನಾವಣಾ…

Read More

ನವದೆಹಲಿ: ಹೊಸದಾಗಿ ನೇಮಕಗೊಂಡ ಇಬ್ಬರು ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಭಾರತದ ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಮುಂಬರುವ ಲೋಕಸಭಾ ಚುನಾವಣೆ 2024 ರ ವೇಳಾಪಟ್ಟಿಯನ್ನು ರಾಜ್ಯ ವಿಧಾನಸಭೆಗಳೊಂದಿಗೆ ಪ್ರಕಟಿಸಲಿದೆ. ಇದೇ ಹೊತ್ತಿನಲ್ಲಿ ಚುನಾವಣಾ ಆಯೋಗಕ್ಕೆ ಇಬ್ಬರನ್ನು ಹೊಸದಾಗಿ ಚುನಾವಣಾ ಆಯೋಕ್ತರನ್ನಾಗಿ ನೇಮಿಸಿದ್ದಂತ ನೇಮಕಾತಿಗೆ ತಡೆ ನೀಡಲು ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಅಲ್ಲದೇ ಇಬ್ಬರು ಹೊಸ ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಂದಹಾಗೇ ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಭಾರತದ ಚುನಾವಣಾ ಆಯೋಗದ (Election Commission) ಉನ್ನತ ಸಮಿತಿಯಲ್ಲಿ ಖಾಲಿ ಇರುವ ಎರಡು ಹುದ್ದೆಗಳಿಗೆ ಅಧಿಕಾರಿಗಳಾದ ಸುಖ್ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. https://kannadanewsnow.com/kannada/breaking-massive-fire-breaks-out-due-to-cylinder-blast-at-tent-house-in-bhopal/ https://kannadanewsnow.com/kannada/centre-grant-discrimination-has-created-economic-challenges-for-state-krishna-byre-gowda/

Read More

ನವದೆಹಲಿ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಶುಕ್ರವಾರ (ಮಾರ್ಚ್ 15, 2024) ಬೆಳಿಗ್ಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆದಿದ್ದಾರೆ ಎಂದು ವರದಿಯಾಗಿದೆ. 81 ವರ್ಷದ ನಟ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾರ್ಯವಿಧಾನಕ್ಕೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ, ಬಿಗ್ ಬಿ ಅವರನ್ನು ಹೆಚ್ಚಿನ ಭದ್ರತೆಯ ನಡುವೆ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ. “ನಿಮ್ಮ ಅಭಿಮಾನಕ್ಕೆ ಕೃತಜ್ಞ ಎಂಬುದಾಗಿ ಅವರು ಎಕ್ಸ್ ಮಾಡಿ ಪೋಸ್ಟ್ ಮಾಡಿದ್ದಾರೆ. https://twitter.com/SrBachchan/status/1768525624639967501 ಶಸ್ತ್ರಚಿಕಿತ್ಸೆಯ ನಂತರ ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ನಂಬಲಾಗಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಐಎಸ್ಪಿಎಲ್ ಪಂದ್ಯದ ಗೆಲುವನ್ನು ಸಂಭ್ರಮಿಸಿದ ಅಮಿತಾಭ್ ಗುರುವಾರ (ಮಾರ್ಚ್ 14, 2024) ಅಮಿತಾಬ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್ ಬಚ್ಚನ್ ತಮ್ಮ ತಂಡವು ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ಐಎಸ್ಪಿಎಲ್) ಫೈನಲ್ಗೆ ಅರ್ಹತೆ ಪಡೆದ ನಂತರ ಸಂಭ್ರಮದ ಮನಸ್ಥಿತಿಯಲ್ಲಿ ಕಾಣಿಸಿಕೊಂಡರು. ಥಾಣೆಯ ದಾಡೋಜಿ ಕೊಂಡದೇವ್…

Read More