Author: kannadanewsnow09

ಬೆಂಗಳೂರು : “ಕಾಂಗ್ರೆಸ್ ಸರ್ಕಾರ ಹಾಗೂ ಇಂದಿರಾ ಗಾಂಧಿ ಅವರು ಜಾರಿಗೆ ತಂದಿರುವ ಉಳುವವನೆ ಭೂಮಿಯ ಒಡೆಯ, ಪಿಂಚಣಿ, ಮಧ್ಯಾಹ್ನದ ಬಿಸಿಯೂಟ, ಪಡಿತರ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಯಾರಿಂದಲೂ ಹಾಗೂ ಯಾವುದೇ ಸರ್ಕಾರಗಳಿಂದಲೂ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ಜವಹಾರ್ ಲಾಲ್ ನೆಹರು ಅವರಿಂದ ಹಿಡಿದು ಮನಮೋಹನ್ ಸಿಂಗ್ ಅವರ ಕಾಲದ ತನಕ ಕಾಂಗ್ರೆಸ್ ಸರ್ಕಾರಗಳು ಜಾರಿಗೆ ತಂದ ಒಂದೇ ಒಂದು ಯೋಜನೆಗಳನ್ನು ನಿಲ್ಲಿಸುವ ಶಕ್ತಿ, ಧೈರ್ಯ ಯಾರಿಗೂ ಬರಲಿಲ್ಲ” ಎಂದರು. ಬ್ಯಾಂಕ್ ರಾಷ್ಟ್ರೀಕರಣದಿಂದ ದೇಶ ಆರ್ಥಿಕವಾಗಿ ಸಬಲ ಚನ್ನಪಟ್ಟಣದ ಉಪಚುನಾವಣಾ ಸಭೆಯಲ್ಲಿ ಮಾತನಾಡುವಾಗ ಹಿರಿಯ ಮಹಿಳೆಯೊಬ್ಬರು ಇಂದಿರಾಗಾಂಧಿ ಅವರ ಪಿಂಚಣಿ ಯೋಜನೆಯನ್ನು ನೆನಪಿಸಿಕೊಂಡು ʼಮೊದಲಿಗೆ 40 ರೂಪಾಯಿ ಕೊಡುತ್ತಿದ್ದರುʼ ಎಂದು ತುಂಬಿದ…

Read More

ಹಾವೇರಿ: ಜಿಲ್ಲೆಯಲ್ಲಿ ಸರ್ಕಾರಿ ಬಸ್ ಒಂದು ವೃದ್ಧನ ಮೇಲೆ ಹರಿದ ಪರಿಣಾಮ ಆತನ ಎರಡು ಕಾಲುಗಳು ಕಟ್ ಆಗಿರುವುದಾಗಿ ತಿಳಿದು ಬಂದಿದೆ. ಕಾಲು ಕಳೆದುಕೊಂಡ ವೃದ್ಧ ಬಸ್ ನಿಲ್ದಾಣದಲ್ಲೇ ನರಳಾಡುತ್ತಿದ್ದದ್ದು ಕಂಡು ಬಂದಿದೆ. ಹಾವೇರಿ ನಗರ ಬಸ್ ನಿಲ್ದಾಣಕ್ಕೆ 60 ವರ್ಷದ ಕರಿಯಪ್ಪ ಮುಚ್ಚಿನಕೊಪ್ಪ ಎಂಬುವರು ತಮ್ಮ ಮಗಳ ಊರಿಗೆ ತೆರಳೋದಕ್ಕೆ ಆಗಮಿಸಿದ್ದರು. ಹಾವೇರಿ ತಾಲೂಕಿನ ಕನಕಾಪುರ ನಿವಾಸಿಯಾಗಿದ್ದಂತ ಇವರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಹಾವೇರಿ ಬಸ್ ನಿಲ್ದಾಣದಲ್ಲೇ ಸಾರಿಗೆ ಬಸ್ ವೃದ್ಧ ಕರಿಯಪ್ಪನ ಎರಡು ಕಾಲುಗಳ ಮೇಲೆ ಅಪಘಾತದ ನಂತ್ರ ಹರಿದ ಕಾರಣ, ಎರಡು ಕಾಲುಗಳು ಕಟ್ ಆಗಿದ್ದಾವೆ. ನಿಲ್ದಾಣದಲ್ಲೇ ರಕ್ತದ ಮುಡುವಿನಲ್ಲಿ ಕೆಲಸ ಸಮಯ ಒದ್ದಾಡಿದ್ದಾರೆ. ಸ್ಥಳೀಯರು ವೃದ್ಧ ಕರಿಯಪ್ಪ ಮುಚ್ಚಿನಕೊಪ್ಪ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕನಕಾಪುರ ಗ್ರಾಮದ ಗ್ರಾಮಸ್ಥರು ಸಾರಿಗೆ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತ ಪಡಿಸಿದರು. ಇನ್ನೂ ಸಾರಿಗೆ ಬಸ್…

Read More

ಬೆಂಗಳೂರು : “ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ, ರಾಜಕೀಯ ಮಾಡಲು ವಿರೋಧ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಕೆಪಿಸಿಸಿ ಕಚೇರಿ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿ ಹಾಗೂ ಕುಮಾರಸ್ವಾಮಿ ಅವರಿಗೆ ನಮ್ಮ ಸರ್ಕಾರದ ಮೇಲೆ ಟೀಕೆ ಮಾಡಲು ವಿಚಾರಗಳಿಲ್ಲ. ಅವರ ಕಾಲದಲ್ಲಿ ಏನೇನು ಅನ್ಯಾಯ ಮಾಡಬೇಕೋ ಮಾಡಿದ್ದಾರೆ. ಅವರ ಸರ್ಕಾರದ ಅವಧಿಯಲ್ಲಿ ಯಾವುದೇ ಬಡವರಿಗೆ ಸಹಾಯ ಮಾಡಲಿಲ್ಲ. ಅವರಿಗೆ ಬಡವರಿಗೆ ಒಂದು ಕಾರ್ಯಕ್ರಮ ಮಾಡಲು ಆಗುವುದಿಲ್ಲ. ಕೆಲವು ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಆರ್ಥಿಕವಾಗಿ ಅನುಕೂಲವಾಗಿರುವವರು ಬಿಡಿಎಲ್ ಕಾರ್ಡ್ ಹೊಂದಿದ್ದಾರೆ. ಅಂತಹವರನ್ನು ಪರಿಶೀಲಿಸಲು ನಾವು ಮುಂದಾಗಿದ್ದೇವೆ.…

Read More

ಉಡುಪಿ: ಇಲ್ಲಿನ ಕಬ್ಬಿನಾಲೆಯ ಪಿತ್ತಬೈಲ್ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಎಂಬುವರನ್ನು ನಕ್ಸಲ್ ನಿಗ್ರಹ ಪಡೆಯಿಂದ ಎನ್ ಕೌಂಟರ್ ನಲ್ಲಿ ಹತ್ಯೆಗೈಯ್ಯಲಾಗಿತ್ತು. ಇನ್ನೂ 5-6 ನಕ್ಸಲರು ಅರಣ್ಯ ಪ್ರದೇಶದಲ್ಲಿ ಇದ್ದಾರೆ ಎಂಬುದಾಗಿ ಐಎಸ್ ಡಿ ಐಜಿಪಿ ರೂಪಾ.ಡಿ ತಿಳಿಸಿದ್ದಾರೆ. ಇಂದು ಸುದ್ದಿಗಾಗರೊಂದಿಗೆ ಮಾತನಾಡಿದಂತ ಅವರು ಮೋಸ್ಟ್ ವಾಂಟೆಂಡ್ ನಕ್ಸಲ್ ನಾಯಕ ವಿಕ್ರಂ ಗೌಡ ಅವರನ್ನು ಎನ್ ಕೌಂಟರ್ ಮಾಡಲಾಗಿದೆ. ಅವರ ವಿರುದ್ಧ 61 ಕೇಸ್ ಗಳಿದ್ದವು. ಕಾರ್ಯಾಚರಣೆಯಲ್ಲಿ ಎರಡೂ ಕಡೆಯಿಂದ ಗುಂಡಿನಚಕಮಕಿ ಆಗಿದೆ. ಹತ್ಯೆದಾ ವ್ಕಿಂ ಗೌಡ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿದ್ದನು. ಕೇರಳದಲ್ಲೂ 19 ಕೇಸ್ ಗಳಿದ್ದಾವೆ ಎಂದರು. ನವೆಂಬರ್.10ರಿಂದ ವಿಕ್ರಂ ಗೌಡಗಾಗಿ ಶೋಧಕಾರ್ಯಾಚರಣೆ ನಡೆಸಲಾಗುತ್ತಿತ್ತು. 2005ರ ನಂತ್ರ 4ನೇ ಎನ್ ಕೌಂಟರ್ ಇದಾಗಿದೆ. ವಿಕ್ರಂ ಗೌಡ ಅವರ ಮೃತದೇಹವನ್ನು ಕೆಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದರು. ಇನ್ನೂ ಕಬ್ಬಿನಾಲೆ ಪಿತ್ತಬೈಲ್ ಅರಣ್ಯ ಪ್ರದೇಶದಲ್ಲಿ 5 ರಿಂದ 6 ಮಂದಿ ನಕ್ಸಲರು…

Read More

ಬೆಂಗಳೂರು: ನಗರದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಯುವಕನೊಬ್ಬನ ಮೇಲೆ ಪುಂಡರ ಗ್ಯಾಂಗ್ ಒಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಬೆಂಗಳೂರಿನ ಮಾರತಹಳ್ಳಿ ಬಳಿಯ ದೊಡ್ಡನಕುಂದಿ ರೈಲ್ವೆ ಹಳಿಯ ಬಳಿಯಲ್ಲಿ ಯುವಕನೊಬ್ಬನ ಮೇಲೆ ಗ್ಯಾಂಗ್ ಒಂದರ ಯುವಕರು ದೊಣ್ಣೆ ಮತ್ತು ಹೆಲ್ಮೆಟ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗಾದಂತ ಯುವಕ ರಸ್ತೆ ಪಕ್ಕದಲ್ಲಿ ಕೆಳಗೆ ಬಿದ್ದರೂ ಬಿಡದಂತ ಪುಂಡರ ಗ್ಯಾಂಗ್, ಮತ್ತಷ್ಟು ಹಲ್ಲೆ ಮಾಡಿದ್ದಾರೆ. ಈ ಹಲ್ಲೆ ಮಾಡುವಂತ ವೀಡಿಯೋವನ್ನು ಚಿತ್ರಿಸಿಕೊಂಡಿದ್ದು, ಈಗ ವೀಡಿಯೋ ವೈರಲ್ ಕೂಡ ಆಗಿದೆ. BREAKING : ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕ್ರಿಕೇಟರ್ ಸೂರ್ಯ ಕುಮಾರ ಯಾದವ್ ಭೇಟಿ, ಪೂಜೆ ಸಲ್ಲಿಕೆ – Kannada News | India News | Breaking news | Live news | Kannada | Kannada News | Karnataka News | Karnataka News BIG NEWS :…

Read More

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ(ರಿ) ಬೆಂಗಳೂರು ಇದರ 2024 ನೇ ಸಾಲಿನ ಪ್ರತಿಷ್ಠಿತ ರಾಜ್ಯಮಟ್ಟದ ದತ್ತಿ ಪ್ರಶಸ್ತಿಗಳನ್ನು ಘೋಷಿಸಿಸಲಾಗಿದೆ. ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ಕಳೆದ 24 ವರ್ಷಗಳಿಂದ ರಾಜ್ಯದಲ್ಲಿ ಕರ್ನಾಟಕ ಸರ್ಕಾರದ ಮಾಧ್ಯಮ ಪಟ್ಟಿಯಲ್ಲಿನ ದಲಿತರ ಮಾಲಿಕತ್ವ/ಸಂಪಾದಕತ್ವದ ಪತ್ರಿಕೆಗಳ ಹಿತ ಕಾಯುವ ಮತ್ತು ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತರ ಸಹಭಾಗಿತ್ವವನ್ನು ಬಲಪಡಿಸುವಲ್ಲಿ ಹಾಗೂ ದಲಿತ ಪತ್ರಕರ್ತರ ಬೌದ್ಧಿಕ ಉನ್ನತೀಕರಣದಂತಹ ರಚನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ. ಇದರ ಭಾಗವಾಗಿ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ದಲಿತರು ,ಶೋಷಿತರ ಪರವಾಗಿ ಅಹರ್ನಿಶಿ ದುಡಿದ ದಲಿತರು ಮತ್ತು ದಲಿತ ಸಂವೇದನೆಯುಳ್ಳ ದಲಿತೇತರ ವೃತ್ತಿಪರ ಪತ್ರಕರ್ತರನ್ನು ಗುರುತಿಸಿ ಸಾಮಾಜಿಕ ನ್ಯಾಯಕ್ಕಾಗಿ, ದಲಿತರ ಸ್ವಾಭಿಮಾನ, ಹಕ್ಕುಗಳಿಗಾಗಿ ದುಡಿದ, ಹೋರಾಡಿದ ಮಹನೀಯರಾದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್, ಮಾಜಿ ಸಚಿವ ಬಿ.ರಾಚಯ್ಯ, ಬಿ.ಬಸವಲಿಂಗಪ್ಪ, ಪ್ರೋ.ಕೃಷ್ಣಪ್ಪ ಅವರುಗಳ ಹೆಸರಿನಲ್ಲಿ ಸ್ಥಾಪಿಸಲಾಗಿರುವ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದೆ. ದಲಿತ ಚಳವಳಿಯ ಸ್ಥಾಪಕರಾದ…

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ನವೆಂಬರ್.20, 2024ರ ನಾಳೆ, ನವೆಂಬರ್.21, 2024ರ ನಾಡಿದ್ದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್.20ರ ನಾಳೆಯ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ನಾಳೆ ಈ ಏರಿಯಾಗಳಲ್ಲಿ ಪವರ್ ಕಟ್ ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್​ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ರಾಮಾಂಜನೇಯ ನಗರ, ನಂದ ಕುಮಾರ್ ಲೇಔಟ್, ಉತ್ತರಹಳ್ಳಿ ಮೇನ್ ರೋಡ್, ಉದಯ ನಗರ, ಗೌಡನ ಪಾಳ್ಯ, ಟೆಲಿಕಾಂ ಲೇಔಟ್, ಮುನೇಶ್ವರ ನಗರ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್, ಹನುಮ ಆದಶð ಅಪಾಟ್ðಮೆಂಟ್ 1 & 2, ಹಿಲ್ಸ್ ಲೇಔಟ್, ಕಾಮಾಕ್ಯ ಲೇಔಟ್, ಹೊಸಕೆರೆಹಳ್ಳಿ, ಟಾಟಾ…

Read More

ಉಡುಪಿ: ಜಿಲ್ಲೆಯ ಕಬ್ಬಿನಾಲೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಹತ್ಯೆ ಮಾಡಲಾಗಿತ್ತು. ಈ ಬೆನ್ನಲ್ಲೇ ಪೀತೆ ಬೈಲ್, ಕಬ್ಬಿನಾಲೆ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಜೊತೆಗೆ ನಕ್ಸಲ್ ನಿಗ್ರಹ ಪಡೆಯಿಂದ ಕೋಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಉಡುಪಿ ಜಿಲ್ಲೆಯ ಕಬ್ಬಿನಾಲೆ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ ನಡೆಸಿದಂತ ದಾಳಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಅವರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. ಇನ್ನೂ ಐದಾರು ನಕ್ಸಲರು ಅರಣ್ಯದಲ್ಲಿ ಇರುವುದಾಗಿ ಹೇಳಲಾಗುತ್ತಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಐಜಿಪಿ ರೂಪಾ.ಡಿ ಅವರು ನಕ್ಸಲ್ ನಾಯಕ ವಿಕ್ರಂ ಗೌಡ ಅವರನ್ನು ಹತ್ಯೆ ಮಾಡಲಾಗಿದೆ. ಅವರ ವಿರುದ್ಧ 61 ಕೇಸ್ ಗಳಿದ್ದವು ಎಂದು ತಿಳಿಸಿದರು. ಕಾಡಿನಲ್ಲಿ ಇನ್ನೂ 5-6 ನಕ್ಸಲ್ ಇರುವುದಾಗಿ ಮಾಹಿತಿ ತಿಳಿದು ಬಂದಿದೆ. ಅವರಿಗೆ ಶರಣಾಗುವಂತೆ ಸೂಚಿಸಲಾಗಿದೆ. ಶರಣಾಗತಿಗೆ ಮೊದಲ ಆದ್ಯತೆ ನೀಡುತ್ತೇವೆ. ಇಲ್ಲದಿದ್ದರೇ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದರು. ನಕ್ಸಲ್ ನಿಗ್ರಹ ಪಡೆಯಿಂದ ಕಾರ್ಯಾಚರಣೆ ಮುಂದುವರೆದಿದೆ.…

Read More

ಬೆಂಗಳೂರು: ರಾಜ್ಯದಲ್ಲಿನ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆ ಬರೆಯೋದಕ್ಕೆ ಸಿದ್ಧತೆ ನಡೆಸುತ್ತಿರುವಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ನಾಳೆ ಸಚಿವ ಮಧು ಬಂಗಾರಪ್ಪ ಉಚಿತ CET, NEET, JEE ತರಬೇತಿಗೆ ಚಾಲನೆ ನೀಡಲಿದ್ದಾರೆ. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರದಿಂದಲೇ ಫ್ರೀ ಕೋಚಿಂಗ್ ನೀಡಲಾಗುತ್ತದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಜೆಟ್ ಅಯವ್ಯಯ ಕಂಡಿಕೆ 101ರಲ್ಲಿ ಘೋಷಿಸಿರುವಂತೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಸಿಇಟಿ, ನೀಟ್, ಜೆಇಇ ಆನ್ ಲೈನ್ ತರಬೇತಿಯನ್ನು ಆರಂಭಿಸುತ್ತಿರುವುದಾಗಿ ತಿಳಿಸಿದ್ದಾರೆ. ದಿನಾಂಕ 20-11-2024ರಂದು ಬೆಳಿಗ್ಗೆ 10.30ಕ್ಕೆ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಸಚಿವ ಮಧು ಎಸ್ ಬಂಗಾರಪ್ಪ ಅವರು ಈ ತರಬೇತಿಗೆ ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ. ಆ ಬಳಿಕ ರಾಜ್ಯದಲ್ಲಿನ 25,000 ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತವಾದಂತ ತರಬೇತಿಯನ್ನು ಸಿಇಟಿ, ನೀಟ್, ಜೆಇಇ ಪರೀಕ್ಷೆಗೆ ಆನ್ ಲೈನ್…

Read More

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಆ ಬಳಿಕ ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗುತ್ತದೆ. ಕೆಲವರ ಕಾರ್ಡ್ ಸಂಪೂರ್ಣ ರದ್ದಾಗಲಿದೆ ಎನ್ನಲಾಗುತ್ತಿತ್ತು. ಹೀಗಾಗಿ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗುವ ಆತಂಕದಲ್ಲಿದ್ದವರಿಗೆ ಸರ್ಕಾರ ಮರುಸ್ಪಷ್ಟನೆ ಮೂಲಕ ಗುಡ್ ನ್ಯೂಸ್ ನೀಡಿದೆ. ಅದೇನು ಅಂತ ಮುಂದೆ ಓದಿ. ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರು, ಲವು ಕುಟುಂಬಗಳಲ್ಲಿ ಹಿಂದೆ ಬಿಪಿಎಲ್‌ ಕಾರ್ಡ್‌ ಹೊಂದಿದ್ದವರು ಉತ್ತಮ ಆದಾಯ ಗಳಿಸುವ ಉದ್ಯೋಗಗಳಿಗೆ ಸೇರಿ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. ಅಂಥವರ ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಿಸಲಾಗುತ್ತದೆ. ಇದೊಂದು ಸಹಜ ಪ್ರಕ್ರಿಯೆ ಎಂಬುದಾಗಿ ತಿಳಿಸಿದ್ದಾರೆ. ಯಾವುದೇ ಸರ್ಕಾರ ಇದ್ದರೂ, ಇದನ್ನೇ ಮಾಡಬೇಕಾಗುತ್ತದೆ. ನಮ್ಮ ಸರ್ಕಾರವು ಅರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್‌ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://twitter.com/KarnatakaVarthe/status/1858788409067925659 https://kannadanewsnow.com/kannada/breaking-%e0%b2%95%e0%b3%81%e0%b2%95%e0%b3%8d%e0%b2%95%e0%b3%86-%e0%b2%b8%e0%b3%81%e0%b2%ac%e0%b3%8d%e0%b2%b0%e0%b2%ae%e0%b2%a3%e0%b3%8d%e0%b2%af-breaking-cricketer-suryakumar-yadav-visits-kukke-subr/ https://kannadanewsnow.com/kannada/congress-has-kindergarten-system-too-narendra-swamy-on-ministerial-berth/

Read More