Author: kannadanewsnow09

ನಾಗಮಂಗಲ: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ ನಾನೇ ಬಂದು ಕೃಷ್ಣರಾಜ ಸಾಗರ ಸಾಗರದ ಗೇಟ್ ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು. ಗಲಭೆಪೀಡಿತ ನಾಗಮಂಗಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜತೆ ಕೇಂದ್ರ ಸಚಿವರು ಮಾತನಾಡಿದರು. ಮಳವಳ್ಳಿ ‌ಭಾಗಕ್ಕೆ ಇದುವರೆಗೂ ನೀರು ಕೊಟ್ಟಿಲ್ಲ. ಕುಮಾರಸ್ವಾಮಿಗೆ ವೋಟು ಹಾಕಿದ್ದೀರಿ, ನೀರು ಬೇಕಾದರೆ ಕುಮಾರಸ್ವಾಮಿಯನ್ನೇ ಹೋಗಿ ಕೇಳಿ ಎಂದು ಒಬ್ಬ ಶಾಸಕ ಹೇಳುತ್ತಿದ್ದಾನೆ. ಅಣೆಕಟ್ಟೆ ಇವರ ಅಪ್ಪನ ಮನೆಯ ಆಸ್ತಿಯೇ. ರೈತರಿಗೆ ನೀರು ಕೊಡಲು ಯೋಗ್ಯತೆ ಇಲ್ಲ. ಜಲಪಾತೋತ್ಸವ ಬೇರೆ ಮಾಡುತ್ತಿದ್ದಾರೆ. ನಾಚಿಕೆ ಆಗಬೇಕು ಇವರಿಗೆ ಎಂದು ಸಚಿವರು ಕಿಡಿಕಾರಿದರು. ಕೆರೆಕಟ್ಟೆಗಳಲ್ಲಿ ನೀರು ಇಲ್ಲ. ಮೆಟ್ಟೂರು ಜಲಾಶಯ ತುಂಬಿ ತುಳುಕುತ್ತಿದೆ. ನನ್ನನ್ನು ಭೇಟಿಯಾಗಿದ್ದ ತಮಿಳುನಾಡಿನ ಕೆಲ ನಾಯಕರು ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ ಎಂದು…

Read More

ಬೆಂಗಳೂರು: 2024-25ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಜನರ ಸ್ವಾವಲಂಬನೆಯನ್ನು ಉತ್ತೇಜಿಸಲು, ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಯುವಜನರಿಗೆ ಪೂರಕವಾದ ಉದ್ಯೋಗಗಳನ್ನು ಒದಗಿಸುವ ಸಲುವಾಗಿ ತರಬೇತಿಗೆ 18 ರಿಂದ 40 ವರ್ಷ ಒಳಗಿನ ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆಗಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಸೆ. 19 ರಿಂದ ಅ. 03 ರವರೆಗೆ ಜೆಮ್/ಫಿಟೈಸ್ ತರಬೇತಿ ಹಾಗೂ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಸೆ. 21 ರಿಂದ ಅ.03 ರವರೆಗೆ ಮಹಿಳೆಯರಿಗೆ ಬ್ಯೂಟಿಷಿಯನ್ ತರಬೇತಿ ಶಿಬಿರ ಮತ್ತು ಅ. 04 ರಿಂದ ಅ. 09 ವರೆಗೆ ಚಾಟ್ಸ್ ತಯಾರಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ. 18ರೊಳಗಾಗಿ ಸಲ್ಲಿಸುವಂತೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ. ಹೆಚ್ಚಿನ…

Read More

ನವದೆಹಲಿ : ಸರ್ಕಾರದ ಸವಲತ್ತುಗಳಿಂದ ಹಲವು ಪ್ರಮುಖ ದಾಖಲೆಗಳನ್ನು ಪಡೆಯಲು ಆಧಾರ್ ಸಂಖ್ಯೆ ಪ್ರಮುಖ ಅವಶ್ಯಕತೆಯಾಗಿದೆ. ಪ್ರಸ್ತುತ ದೇಶಾದ್ಯಂತ 140 ಕೋಟಿ ಆಧಾರ್ ಕಾರ್ಡ್‌ಗಳಿವೆ. ಇವರಲ್ಲಿ 100 ಕೋಟಿ 50 ಲಕ್ಷ ಜನರು ಮಾತ್ರ ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಿದ್ದಾರೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ಆಧಾರ್ ಗುರುತಿನ ಚೀಟಿಯನ್ನು ನವೀಕರಿಸಲು ಆದೇಶಿಸಿದೆ. ಇದಕ್ಕಾಗಿ ಸೆಪ್ಟೆಂಬರ್ 14ರ ಗಡುವು ಕೂಡ ನಿಗದಿಪಡಿಸಲಾಗಿತ್ತು. ಆದರೆ ಇದೀಗ ಗಡುವು ದಿನಾಂಕ ವಿಸ್ತರಿಸಿದೆ. ಡಿಸೆಂಬರ್ 14ರೊಳಗೆ ಯಾವುದೇ ಶುಲ್ಕವಿಲ್ಲದೆ ಆಧಾರ್ ಅಪ್ ಡೇಟ್ ಮಾಡುವ ಸೌಲಭ್ಯ ಕಲ್ಪಿಸಿದೆ. ಭಾರತದಲ್ಲಿ ಯಾವುದೇ ವ್ಯಕ್ತಿ, ವಯಸ್ಸು ಅಥವಾ ಲಿಂಗವನ್ನು ಲೆಕ್ಕಿಸದೆ, ಆಧಾರ್ ಸಂಖ್ಯೆಯನ್ನು ಪಡೆಯಲು ಸ್ವಯಂಪ್ರೇರಣೆಯಿಂದ ನೋಂದಾಯಿಸಿಕೊಳ್ಳಬಹುದು. ನವಜಾತ ಶಿಶುವಿನಿಂದ ಹಿಡಿದು ಪ್ರತಿಯೊಬ್ಬರಿಗೂ ಆಧಾರ್ ಸಂಖ್ಯೆ ಅತ್ಯಗತ್ಯವಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ಹೆಸರಿನಲ್ಲಿ ವಿಶಿಷ್ಟವಾದ ಆಧಾರ್ ಸಂಖ್ಯೆಯನ್ನು ನೀಡಲಾಗುತ್ತದೆ. ಅದರ ಮೂಲಕ ಆ ವ್ಯಕ್ತಿಯ ಬಗ್ಗೆ ಎಲ್ಲ ಮಾಹಿತಿ ಪಡೆಯಬಹುದು. ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಕೇವಲ ಒಂದು ಆಧಾರ್ ಸಂಖ್ಯೆಯನ್ನು…

Read More

ಗುರುವಾರದಂದು ಗುರು ಭಗವಾನರಿಗೆ ಇದು ದಿನ. ಇವರನ್ನು ದಕ್ಷಿಣಾಮೂರ್ತಿ ಎಂದೂ ಕರೆಯುತ್ತಾರೆ. ಗುರುವನ್ನು ಇಂಗ್ಲಿಷಿನಲ್ಲಿ ಜುಪಿಟರ್ ಎನ್ನುತ್ತಾರೆ. ಇದು ಗುರುಗ್ರಹಕ್ಕೆ ಸೇರಿದ ಚಿಹ್ನೆ. ಇದು ಗುರುವಿಗೆ ಸೇರಿದ ಚಿಹ್ನೆ. ಗುರುವಾರದಂದು ಗುರು ಭಗವಾನರನ್ನು ಪ್ರಾರ್ಥಿಸಿ ಮತ್ತು ಈ ಚಿಹ್ನೆಯನ್ನು ನಿಮ್ಮ ಕೈಯಲ್ಲಿ ಈ ಕೆಳಗಿನ ರೀತಿಯಲ್ಲಿ ಬಿಡಿಸಿ. ಬರದ ಹಣವೂ ಕೈ ಹಿಡಿಯುತ್ತದೆ. ಹಣ ಕೊಟ್ಟು ಬಹಳಷ್ಟು ಜನರಿಗೆ ಮೋಸ ಮಾಡುತ್ತೀರಿ. ಸಾಲ ಕೊಟ್ಟು ಮೋಸ ಹೋಗುತ್ತೀರಿ. ಚಿನ್ನಾಭರಣ ಕೊಟ್ಟು ಮೋಸ ಹೋಗುತ್ತೀರಿ. ಆಸ್ತಿ ವಿಚಾರದಲ್ಲಿ ಕೆಲವರಿಗೆ ನಿರಾಸೆ ಉಂಟಾಗುವುದು. ನೀವು ವಂಚಿಸಿದ ಯಾವುದೇ ಹಣಕಾಸಿನ ವಿಷಯವನ್ನು ನೀವು ಮರುಪಡೆಯಬೇಕಾದರೆ ಈ ಪರಿಹಾರವು ಖಂಡಿತವಾಗಿಯೂ ನಿಮಗೆ ಸಹಾಯ ಮಾಡುತ್ತದೆ. ಗುರುವಾರದಂದು ಈ ಪರಿಹಾರವನ್ನು ಯಾವುದೇ ಸಮಯದಲ್ಲಿ ಮಾಡಬಹುದು. ತಪ್ಪಿಲ್ಲ. ನೀವು ವಿಶೇಷವಾಗಿ ಗುರು ಹೊರೈಯಲ್ಲಿ ಈ ಪರಿಹಾರವನ್ನು ಮಾಡಿದರೆ ನೀವು ಶೀಘ್ರದಲ್ಲೇ ಫಲಿತಾಂಶಗಳನ್ನು ಪಡೆಯುತ್ತೀರಿ. ಸ್ವಲ್ಪ ಶುದ್ಧ ಅರಿಶಿನ ಪುಡಿಯನ್ನು ತೆಗೆದುಕೊಂಡು, ಅದಕ್ಕೆ ಪನೀರ್ ಸೇರಿಸಿ ಮತ್ತು ಪೇಸ್ಟ್ ಮಾಡಲು ಮಿಶ್ರಣ…

Read More

ಪ್ರಮಾಣೀಕೃತ ಆಯುರ್ವೇದ ಡ್ರಾಪ್ಸ್ (ಸ್ವರ್ಣ ಪ್ರಾಶನ) ನಿಮ್ಮ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಸಹಾಯಕಾರಿಯೇ? !!!Certified Ayurveda Drops(Golden Drops)Suvarna Bindu Prashana.! सुवर्णप्राशनं हयेतन्मेधान्गिबलवर्धनम् । आयुष्यं मंगलं पुण्यं वृष्यं गदापहम् ।। <ಕಾಶ್ಯಪ ಸಂಹಿತ> ಸುವರ್ಣ ಪ್ರಾಶನ(ಸ್ವರ್ಣ ಬಿಂದು ಪ್ರಾಶನ) ಎಂದರೇನು? ಸ್ವರ್ಣ(Gold) ಭಸ್ಮವನ್ನು (ಚಿನ್ನದ ಬೂದಿ) ಇತರ ಗಿಡಮೂಲಿಕೆಗಳ ಸಾರಗಳೊಂದಿಗೆ (Essence of Herbal medicines) ಸಂಸ್ಕರಿಸಿ, ಮಕ್ಕಳಿಗೆ ಅವರ ಬಾಯಿಯ ಮೂಲಕ ನೀಡುವ ಪ್ರಕ್ರಿಯೆಯನ್ನು ಸ್ವರ್ಣ ಪ್ರಶಾನ ಎಂದು ಕರೆಯಲಾಗುತ್ತದೆ, ಇದನ್ನು ಸುವರ್ಣ ಪ್ರಾಶನ, ಸ್ವರ್ಣಮೃತ ಪ್ರಾಶನ ಅಥವಾ ಸ್ವರ್ಣ ಬಿಂದು ಪ್ರಾಶನ ಎಂದೂ ಕರೆಯಲಾಗುತ್ತದೆ. ಸುವರ್ಣ ಪ್ರಶಾನವು ಒಂದು ವಿಶಿಷ್ಟವಾದ ರೋಗನಿರೋಧಕ (Immune booster) ವಿಧಾನವಾಗಿದೆ, ಇದು ಮಕ್ಕಳ ಬೌದ್ಧಿಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸಾಮಾನ್ಯ ಅಸ್ವಸ್ಥತೆಗಳ (Cold/fever/cough/allergy) ವಿರುದ್ಧ ಹೋರಾಡಲು ದೇಹದಲ್ಲಿ ನಿರ್ದಿಷ್ಟವಾದ ಪ್ರತಿರಕ್ಷೆಯನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. (Learning Difficulties ) ಕಲಿಕೆಯ ತೊಂದರೆಗಳು, ಗಮನ ಕೊರತೆ(Attention Deficit) ಮತ್ತು ವಿಳಂಬವಾದ…

Read More

ಶಿವಮೊಗ್ಗ: ಮುಂದಿನ ಅವಧಿಯವರೆಗೆ ಸಿದ್ಧರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ಅದರಲ್ಲೇ ಯಾವುದೇ ಡೌಟೇ ಬೇಡ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ನಾನು ಸಿಎಂ ಆಕಾಂಕ್ಷಿ ಎನ್ನುವ ಹೇಳಿಕೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಬೇಕು ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರ ತಾಲ್ಲೂಕು ಆಡಳಿತ ಸೌಧದಲ್ಲಿನ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗ್ಯಾರಂಟಿ ಯೋಜನೆಗೆ ಅನುದಾನ ಕೊರತೆಯಿಲ್ಲ. ಸಿಎಂ ಸಿದ್ಧರಾಮಯ್ಯ ಅವರು ಬಜೆಟ್ ನಲ್ಲಿ ಇದಕ್ಕಾಗಿಯೇ 3 ಲಕ್ಷದ 74 ಕೋಟಿ ಮೀಸಲಿಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಮುಂದುವರೆಯಲಿದೆ ಎಂದರು. ಜನರಿಗೆ ಗ್ಯಾರಂಟಿ ತಲುಪಿಸಲು ಅನುಷ್ಠಾನ ಸಮಿತಿ ರಚನೆ ರಾಜ್ಯ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಯಾರು ಯಾರಿಗೆ ಗ್ಯಾರಂಟಿ ಯೋಜನೆಗಳು ತಲುಪಿಲ್ಲವೇ, ಸಮಸ್ಯೆಯಾಗಿದೆಯೋ ಅದನ್ನು ಸರಿ ಪಡಿಸಲು ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರಾಜ್ಯ ಸರ್ಕಾರದಿಂದ ಹೆಚ್.ಎಂ ರೇವಣ್ಣ ಅವರ…

Read More

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಈವರೆಗೆ 4 ಸಾವಿರ ಗುಂಡಿಗಳ್ನು ದುರಸ್ತಿ ಮಾಡಿರುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಏಪ್ರಿಲ್‌ 1 ರಿಂದ 4 ಸಾವಿರ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನೂ ಎರಡು ಸಾವಿರ ಗುಂಡಿ ಮುಚ್ಚಬೇಕಿದೆ. ಆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ. ʼರಸ್ತೆ ಗುಂಡಿನ ಗಮನʼ ಆ್ಯಪ್‌ನಲ್ಲಿ ಸುಮಾರು 1,600 ದೂರುಗಳು ಬಂದಿವೆ. ಅದರಲ್ಲಿ ಒಂದು ಸಾವಿರ ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದೆ. ತ್ವರಿತಗತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1833838230153650440 ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು.…

Read More

ದಾವಣಗೆರೆ ; ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ. ಭದ್ರಾವತಿ ತಾಲ್ಲೂಕಿನ ಸನ್ಯಾಸಿಕೊಡಮಗ್ಗಿ ಗ್ರಾಮದ 57 ವರ್ಷದ ಶ್ರೀನಿವಾಸ್ ತಂದೆ ತಿಮ್ಮಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಲಿಂಗಾಪುರದಲ್ಲಿ ಶೀನಪ್ಪಗೌಡ ಎಂಬುವರ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಶ್ರೀ ರಾಮಾಂಜನೇಯ ಮೆಡಿಕಲ್ಸ್ ಮತ್ತು ಜನರಲ್ ಸ್ಟೋರ್ ಎಂದು ಪರವಾನಗಿ ಪಡೆದು ಜೊತೆಗೆ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಾ ಜನರಿಗೆ ಚಿಕಿತ್ಸೆ ನೀಡುತ್ತಿದ್ದನು. ಇವರು ಪಡೆದ ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದುಪಡಿಸಿ ಒಂದು ಲಕ್ಷ ದಂಡ ವಿಧಿಸಲಾಗಿದೆ. ಮತ್ತೊಬ್ಬ ನಕಲಿ ವೈದ್ಯ ಹಿರೇಕೇರೂರು ತಾಲ್ಲೂಕಿನ ಹಿರೇ ಮರಬ ಗ್ರಾಮದ 45 ವರ್ಷದ ಲಕ್ಷ್ಮಣ ಬಿನ್ ಫಕ್ಕೀರಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ದೇವಸ್ಥಾನದ ಹತ್ತಿರ ಬಸವನಗೌಡ ಎಂಬುವರಿಂದ ಮನೆ…

Read More

ಬೆಂಗಳೂರು: ಕೆ ಎಸ್ ಆರ್ ಟಿಸಿಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿ ಹುಮ್ಮಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ರಿಂದ ಚಾಲನಾ ವೃತ್ತಿ DDOT:18-09-2024 ಇಚ್ಚಿಸಿರುವ ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದೆ. ಈ ಸಂಬಂಧ ಅಭ್ಯರ್ಥಿಗಳು ದಿನಾಂಕ: 13-09-2024 ರಂದು ಮಧ್ಯಾಹ್ನ 1.00 ಗಂಟೆಯಿಂದ ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ ಸೂಚಿಸಿದೆ. ವಿಶೇಷ ಸೂಚನೆ ಸದರಿ ನೇಮಕಾತಿಯನ್ನು ಅಭ್ಯರ್ಥಿಗಳು ಗಣಕೀಕೃತ…

Read More

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶಿಸಿದೆ. ಆ ಬಗ್ಗೆ ಪಟ್ಟಿ ಮುಂದಿದೆ ಓದಿ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ ಕಾಯ್ದೆ 2021 ಹಾಗೂ ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ ) ಮಾದರಿ ನಿಯಮಗಳು 2016, ತಿದ್ದುಪಡಿ ಮಾದರಿ ನಿಯಮಗಳು 2022ರ ಅನ್ವಯ ಈ ಕೆಳಕಂಡ 26 ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು 3 ವರ್ಷಗಳ ಅವಧಿಗೆ ನೇಮಕಾತಿ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಜವಾಬ್ದಾರಿ ಮತ್ತು ಕರ್ತವ್ಯಗಳು:- 1.…

Read More