Author: kannadanewsnow09

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ…

Read More

ಮಂಡ್ಯ : ಮಹಡಿ ಮನೆ ಮೇಲೆ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 25 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿರುವ ಮದ್ದೂರು ಗ್ರಾಮಾಂತರ ಪೋಲೀಸರು ಶುಕ್ರವಾರ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಎಂಬುವವರು ಮನೆಯ ಮೇಲಿನ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ಅವರ ಮಾರ್ಗದರ್ಶನದಲ್ಲಿ ಕೊಪ್ಪ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ 3 ಕೆಜಿ 664 ಗ್ರಾಂನಷ್ಟು ಗಾಂಜಾ ಸೊಪ್ಪನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಕಲಂ 20(ಎ)(i) ಎನ್ಡಿಪಿಸಿ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದ್ದು, ಕೊಪ್ಪ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/over-5000-industry-representatives-attend-karnataka-investors-meet/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಬೆಂಗಳೂರು: ಕಳೆದ ಮೂರು ದಿನಗಳಿಂದ ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ `ಜಾಗತಿಕ ಹೂಡಿಕೆದಾರರ ಸಮಾವೇಶ’ಕ್ಕೆ ಶುಕ್ರವಾರ ನಡೆದ ವರ್ಣರಂಜಿತ ಸಮಾರಂಭದಲ್ಲಿ ತೆರೆ ಬಿತ್ತು. 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು, ಕೈಗಾರಿಕಾ ಪರಿಣತರು ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರಗಳ ಮಟ್ಟದ ನೀತಿ ನಿರೂಪಕರು ಸಕ್ರಿಯವಾಗಿ ಪಾಲ್ಗೊಂಡಿದ್ದ ಸಮಾವೇಶವು ಬಂಡವಾಳ ಹೂಡಿಕೆಗೆ ಕರ್ನಾಟಕವೇ ಪ್ರಶಸ್ತ ತಾಣ ಎನ್ನುವ ಸಂದೇಶ ತಲುಪಿಸುವಲ್ಲಿ ಯಶಸ್ವಿಯಾಯಿತು. ಗಣ್ಯಾತಿಗಣ್ಯರು ಮತ್ತು ರಾಜ್ಯ ಸಚಿವ ಸಂಪುಟದ ಹತ್ತಾರು ಸಚಿವರು ಹಾಜರಿದ್ದ ಸಮಾರೋಪ ಸಮಾರಂಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರು 2025-30ರ ಅವಧಿಯವರೆಗಿನ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಬಿಡುಗಡೆಗೊಳಿಸಿದರು. ಜತೆಗೆ ಇದೇ ವೇದಿಕೆಯಲ್ಲಿ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕಾ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಉದ್ಯಮ ಸಂಸ್ಥೆಗಳಿಗೆ `ವೆಂಚುರೈಸ್ ಚಾಲೆಂಜ್’ ಪುರಸ್ಕಾರಗಳನ್ನು ಪ್ರದಾನ ಮಾಡಲಾಯಿತು. ಇದಕ್ಕೂ ಮೊದಲು ಇದೇ ಪ್ರಥಮ ಬಾರಿಗೆ ಸಾಧಕ ಕಂಪನಿಗಳಿಗೆ `ಇನ್ವೆಸ್ಟ್ ಕರ್ನಾಟಕ’, ಎಸ್ಎಂಇ ಕನೆಕ್ಟ್, ವೆಂಚುರೈಸ್ ಚಾಲೆಂಜ್ ಪುರಸ್ಕಾರಗಳನ್ನು ಪ್ರದಾನ…

Read More

ಪಣಜಿ: 2017 ರಲ್ಲಿ ಐರಿಶ್-ಬ್ರಿಟಿಷ್ ಪ್ರಜೆ ಡೇನಿಯಲ್ ಮೆಕ್ಲಾಫಿನ್ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 31 ವರ್ಷದ ವ್ಯಕ್ತಿಯನ್ನು ಗೋವಾ ನ್ಯಾಯಾಲಯ ಶುಕ್ರವಾರ ದೋಷಿ ಎಂದು ಘೋಷಿಸಿದೆ. ಮಾರ್ಗೋ ಪಟ್ಟಣದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕ್ಷಮಾ ಜೋಶಿ ಅವರು ಸ್ಥಳೀಯ ನಿವಾಸಿ ವಿಕತ್ ಭಗತ್ ಅವರನ್ನು ಅವಳಿ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದಾರೆ ಎಂದು ಮೃತರ ತಾಯಿ ಆಂಡ್ರಿಯಾ ಬ್ರಾನಿಗನ್ ಅವರನ್ನು ಪ್ರತಿನಿಧಿಸುವ ವಕೀಲ ವಿಕ್ರಮ್ ವರ್ಮಾ ತಿಳಿಸಿದ್ದಾರೆ. ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಸೋಮವಾರ (ಫೆಬ್ರವರಿ 17) ಪ್ರಕಟಿಸಲಿದೆ ಎಂದು ಅವರು ಹೇಳಿದರು. ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯದಿಂದ ಕೋರಿದ್ದಾರೆ ಎಂದು ವರ್ಮಾ ಮಾಹಿತಿ ನೀಡಿದರು. https://kannadanewsnow.com/kannada/new-industrial-policy-will-create-20-lakh-jobs-in-next-5-years-priyank-kharge/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಬೆಂಗಳೂರು: ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ  20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನ್ಲಿ ಕಳೆದ ಮೂರು ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದ ಅವರು, ರಾಜ್ಯ ಸರ್ಕಾರದ 30ಕ್ಕೂ ಮಿಗಿಲು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಟಿಗೊಳ್ಳಲಿದ್ದು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಕಕಿಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದೂ ಹೇಳಿದರು. ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿಯೇ ಅತ್ಯುನ್ನತ ಸ್ಥಾಯಿಯಲ್ಲಿದ್ದು, ಜೈವಿಕ ತಂತ್ತಜ್ಞಾನ, ನಾವೀನ್ಯತೆ, ಎಂಜನಿಯರಿಂಗ್‌, ಗೆಫೆಕ್ಸ್‌, ಹೆಲ್ತ್‌ಕೇರ್‌ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಿದೆ ಎಂದೂ ಪ್ರಿಯಾಂಕ್‌ ಖರ್ಗೆ ಹೇಳಿದರು. ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ಎಲ್ಲಾ ಅನುಕೂಲತೆಗಳೂ ಇದ್ದು, ಉದ್ದಿಮೆಗಳ ಸ್ಥಾಪನೆಗೆ ರಾಜ್ಯ ಎಲ್ಲಾ ರೀತಿಯಲ್ಲಿ ಒತ್ತಾಸೆ ನೀಡುತ್ತದೆ,…

Read More

ನವದೆಹಲಿ: ಪಂಜಾಬ್ ನ ಪಾಟಿಯಾರ ರಸ್ತೆಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಉಂಟಾದಂತ ಅಪಘಾತದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಇಂದು ದೆಹಲಿಯಲ್ಲಿ ಕರೆಯಲಾಗಿದ್ದಂತ ರೈತ ಮುಖಂಡರ ಸಭೆಯಲ್ಲಿ ಭಾಗಿಯಾಗೋದಕ್ಕೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಪಂಜಾಬ್ ನ ಪಾಟಿಯಾಲದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ, ಅಪಘಾತ ಸಂಭವಿಸಿದೆ. ಕಾರು ಅಪಘಾತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಂದಹಾಗೇ ಕಳೆದ ಒಂದು ವರ್ಷದಿಂದ ದೆಹಲಿಯ ಕರ್ನೂಲಿ ಗಡಿಯಲ್ಲಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯ ಸಂಬಂಧ ಕರೆಯಲಾಗಿದ್ದಂತ ಸಭೆಯಲ್ಲಿ ಭಾಗವಹಿಸೋದಕ್ಕೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಕಾರು ಅಪಘಾತಗೊಂಡು, ಕುರುಬೂರು ಶಾಂತಕುಮಾರ್ ಗಾಯಗೊಂಡಿದ್ದಾರೆ. https://kannadanewsnow.com/kannada/karnataka-is-competing-globally-in-terms-of-investment-deputy-cm-dk-shivakumar-shivakumar/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಬೆಂಗಳೂರು: “ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಭಾಗವಹಿಸಿ ಮಾತನಾಡಿದರು. “ಕಳೆದ ನಾಲ್ಕು ದಿನಗಳಲ್ಲಿ ಈ ಸಮಾವೇಶದಲ್ಲಿ ಅನೇಕ ಒಪ್ಪಂದಗಳು, ಚರ್ಚೆಗಳು ನಡೆದಿವೆ. ನೀವೆಲ್ಲರೂ ಕರ್ನಾಟಕ ರಾಜ್ಯದಲ್ಲಿ ಸೋಲುವ ಮಾತಿಲ್ಲ. ಹೀಗಾಗಿ ಈ ರಾಜ್ಯದ ಮೇಲೆ ನೀವು ವಿಶ್ವಾಸವಿಡಬಹುದು. ಈ ರಾಜ್ಯಕ್ಕೆ ಬಂದವರು ಬರಿಗೈಯಲ್ಲಿ ಹೋಗುವುದಿಲ್ಲ. ಈ ಸಮಾವೇಶದಲ್ಲಿ ಭಾಗವಹಿಸಿದ ಸಜ್ಜನ್ ಜಿಂದಾಲ್, ಆನಂದ್ ಮಹೀಂದ್ರಾ ಅವರ ಮಾತು ಕೇಳಿದ್ದೀರಿ. ಅವರ ಯೋಶೋಗಾಥೆ ಕೇಳಿದ್ದೀರಿ. ಇವರ ಮಾತು ಕೇಳಿದ ನಂತರ ವಿಶ್ವ ಭಾರತವನ್ನು ಬೆಂಗಳೂರು ಹಾಗೂ ಕರ್ನಾಟಕದ ಮೂಲಕ ನೋಡುತ್ತಿದೆ” ಎಂದು ತಿಳಿಸಿದರು. “ನಿಮ್ಮ, ಕರ್ನಾಟಕ ರಾಜ್ಯ…

Read More

ಬೆಳಗಾವಿ : ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಗೃಹಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ ಎಂದರು. ನಾನು ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮೈಕ್ರೋ ಫೈನಾನ್ಸ್ ಹಾವಳಿಗೆ ತಡೆ 6 ತಿಂಗಳ ಹಿಂದೆಯೇ ಮೈಕ್ರೋ ಫೈನಾನ್ಸ್ ಸಮಸ್ಯೆ ಬಗ್ಗೆ ತಿಳಿದಿತ್ತು. ನಾನು ತಕ್ಷಣವೇ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೆ,…

Read More

ಬೆಂಗಳೂರು : ವಿದ್ಯುತ್ ಮತ್ತು ಹೈಡ್ರೋಜನ್ ಚಾಲಿತ ವಾಹನ ತಯಾರಿಕೆ ವಲಯಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಆಕರ್ಷಿಸಿ, 1 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಿರುವ ಮುಂದಿನ ಐದು ವರ್ಷಗಳ ಅವಧಿಯ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಇಂಧನ ಸಚಿವ ಕೆ ಜೆ ಜಾರ್ಜ್ ಶುಕ್ರವಾರ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಬಿಡುಗಡೆ ಮಾಡಿದರು. ನೀತಿಯ ಬಗ್ಗೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ, ಹಇದಕ್ಕಾಗಿ ಗೌರಿಬಿದನೂರು, ಧಾರವಾಡ ಮ್ತತು ಹಾರೋಹಳ್ಳಿಯಲ್ಲಿ ಪರಿಸರಸ್ನೇಹಿ ಇಂಧನ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ದೇಶದ ಇ.ವಿ.ವಲಯದಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದ್ದು, ನಮ್ಮಲ್ಲಿ 2.50 ಲಕ್ಷ ಇ.ವಿ.ಚಾಲಿತ ವಾಹನಗಳಿವೆ. ಬ್ಯಾಟರಿ ಪ್ಯಾಕ್, ಕೋಶಗಳ ತಯಾರಿಕೆ, ಬಿಡಿಭಾಗಗಳ ಉತ್ಪಾದನೆ, ಒಇಎಂ, ಚಾರ್ಜಿಂಗ್, ಪರೀಕ್ಷಾರ್ಥ ಮೂಲಸೌಕರ್ಯ ಹಾಗೂ ಆರ್ & ಡಿ ಇವುಗಳಿಗೆ ಈಗಾಗಲೇ 25 ಸಾವಿರ ಕೋಟಿ ರೂ. ಬಂದಿದೆ. ಹೊಸ…

Read More

ಬೆಂಗಳೂರು: ರೈಡ್ ಹೆಯ್ಲಿಂಗ್ ಸೇವಾ ಪೂರೈಕೆದಾರ ರ್ ಯಾಪಿಡೊ ತನ್ನ ಹೊಸ ಪಿಂಕ್ ರ್ ಯಾಪಿಡೊ ಬೈಕ್ ಗಳನ್ನು ಈ ವರ್ಷದ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಕಂಪನಿಯ ಸಹ ಸಂಸ್ಥಾಪಕ ಪವನ್ ಗುಂಟುಪಲ್ಲಿ ಅವರು ಶುಕ್ರವಾರ ಇಲ್ಲಿ ನಡೆದ ‘ಜಾಗತಿಕ ಹೂಡಿಕೆ ಶೃಂಗಸಭೆ’ಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಬಹಿರಂಗಪಡಿಸಿದರು. “ರ್ ಯಾಪಿಡೊ ಬೈಕ್ ಗಳಲ್ಲಿ ಮಹಿಳಾ ಕ್ಯಾಪ್ಟನ್ ಗಳನ್ನು ಪರಿಚಯಿಸುವ ಮೂಲಕ ಮಹಿಳೆಯರಿಗೆ 25,000 ಉದ್ಯೋಗಾವಕಾಶಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಒಬ್ಬ ಮಹಿಳೆ ಅಪರಿಚಿತ ಚಾಲಕನೊಂದಿಗೆ ಸುರಕ್ಷಿತವಾಗಿ ಪ್ರಯಾಣಿಸಿ, ತನ್ನ ಗಮ್ಯಸ್ಥಾನವನ್ನು ಸುಲಭವಾಗಿ ತಲುಪಲು ಸಾಧ್ಯವಾದರೆ, ಅದನ್ನು ನಮ್ಮ ಯಶಸ್ಸು ಎಂದು ಪರಿಗಣಿಸಬಹುದು” ಎಂದು ಗುಂಟುಪಲ್ಲಿ ಹೇಳಿದರು. ಈ ಉಪಕ್ರಮವು ಕೇವಲ ಉದ್ಯೋಗಗಳನ್ನು ಸೃಷ್ಟಿಸುವ ಬಗ್ಗೆ ಮಾತ್ರವಲ್ಲ, ಮಹಿಳೆಯರಿಗೆ ಸುರಕ್ಷಿತ ಮತ್ತು ಸಬಲೀಕರಣದ ಕೆಲಸದ ವಾತಾವರಣವನ್ನು ನೀಡುವ ಬಗ್ಗೆಯೂ ಇದೆ ಎಂದು ಅವರು ಒತ್ತಿ ಹೇಳಿದರು. “ಸುರಕ್ಷಿತ ಸವಾರಿ ಅನುಭವವನ್ನು ಖಚಿತಪಡಿಸಿಕೊಳ್ಳಲು ನಾವು ಹಲವಾರು ಸುರಕ್ಷತಾ…

Read More