Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ನಿನ್ನೆಯಷ್ಟೇ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಇಬ್ಬರಿಗೆ ಹೆಚ್ ಎಂ ಪಿ ವಿ ವೈರಲ್ ದೃಢಪಟ್ಟಿತ್ತು. ಇದೀಗ ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ಆರ್ಭಟ ಮುಂದುವರೆದಿದ್ದು, ಶಿವಮೊಗ್ಗದಲ್ಲಿ ಮೂವರು ಮಕ್ಕಳಿಗೆ ಸೋಂಕಿಗೆ ಒಳಗಾಗಿರುವುದಾಗಿ ಪತ್ತೆಯಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಮೂವರು ಮಕ್ಕಳಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕು ಕಂಡು ಬಂದಿದೆ ಎನ್ನಲಾಗುತ್ತಿದೆ. ಈ ಸಂಬಂಧ ವೈದ್ಯ ಧರನಂಜಯ್ ಸರ್ಜಿ ಮಾಹಿತಿ ನೀಡಿದ್ದು, ಆರೋ ತಿಂಗಳಿನಿಂದ ಎರಡು ವರ್ಷದೊಳಗಿನ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗಿ ತಿಳಿಸಿದ್ದಾರೆ. ಕೋವಿಡ್ ಸೋಂಕಿನ ಶಂಕೆಯ ಹಿನ್ನಲೆಯಲ್ಲಿ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಮೂವರು ಮಕ್ಕಳು ಹೆಚ್ ಎಂ ಪಿ ವಿ ವೈರಸ್ ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ. ಸೋಂಕಿಗೆ ಚಿಕಿತ್ಸೆ ನೀಡಲಾಗಿದೆ. ಮಕ್ಕಳು ಗುಣಮುಖ ಕೂಡ ಆಗಿದ್ದಾಗಿ ತಿಳಿಸಿದ್ದಾರೆ. https://kannadanewsnow.com/kannada/chief-minister-siddaramaiah-to-chair-crucial-state-cabinet-meeting-on-january-16/ https://kannadanewsnow.com/kannada/bs-yediyurappa-sexual-assault-case-victims-family-demands-legal-action/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 16-01-2025ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16-01-2025ರ ಗುರುವಾರದಂದು ಬೆಳಿಗ್ಗೆ 11 ಘಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 2ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಅಂತ ತಿಳಿಸಿದ್ದಾರೆ. ಜ.16ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಒಳಮೀಸಲಾತಿ ಜಾರಿ ಸಂಬಂಧ ವರದಿಯ ಬಗ್ಗೆಯೂ ಚರ್ಚೆಯಾಗಲಿದೆ. ಆ ನಂತ್ರ ಸಿಎಂ ಸಿದ್ಧರಾಮಯ್ಯ ಅವರು ಮಹತ್ವದ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ. https://kannadanewsnow.com/kannada/6-most-wanted-naxals-surrender-before-chikkamagaluru-district-administration-tomorrow/ https://kannadanewsnow.com/kannada/bs-yediyurappa-sexual-assault-case-victims-family-demands-legal-action/
ಚಿಕ್ಕಮಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ಮೂಲಕ ಅವರು ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕ್ಸಲರಿಗೆ ಶರಣಾಗತಿ ಆಗುವಂತೆ ಸೂಚಿಸಿದ ಬೆನ್ನಲ್ಲೆ ಕರ್ನಾಟಕದ ನಾಲ್ವರು ಹಾಗೂ ಕೇರಳ, ತಮಿಳುನಾಡಿನ ತಲಾ ಒಬ್ಬೊಬ್ಬರಂತೆ ಒಟ್ಟು ಆರು ಜನ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾ ಆಡಳಿತದ ಮುಂದೆ ಶರಣಾಗಲಿದ್ದಾರೆ. ಹೌದು ಕರ್ನಾಟಕದ ನಾಲ್ವರು ನಕ್ಸಲರು ಸೇರಿದಂತೆ ನಾಳೆ 6 ನಕ್ಸಲರು ಶರಣಾಗತಿ ಆಗಲಿದ್ದಾರೆ. ಕೇರಳದ ದೀಪ, ತಮಿಳುನಾಡಿನ ವಸಂತ ಅಲಿಯಾಸ್ ರಮೇಶ, ರಾಯಚೂರು ಮೂಲದ ಜಯಣ್ಣ ಅಲಿಯಾಸ್ ಮಾರಪ್ಪ ಅರೋಲಿ, ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಮುಂಡಗರು ಲತಾ, ವನಜಾಕ್ಷಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ನಾಳೆ ಶರಣಾಗತಿ ಅಗಲಿದ್ದಾರೆ. ಆರು ನಕ್ಸಲರ ಜೊತೆ ಶಾಂತಿಗಾಗಿ ನಾಗರೀಕ ವೇದಿಕೆಯಿಂದ ಮಾತುಕತೆ ನಡೆಸಲಾಗಿದೆ. ಕಳೆದ ವರ್ಷ ಚಿಕ್ಕಮಂಗಳೂರು ಭಾಗದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿತ್ತು.ಈ ಹಿನ್ನೆಲೆಯಲ್ಲಿ, ANF…
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಅಪ್ರಾಪ್ತ ಬಾಲಕಿಯ ಸಹೋದರ, ನ್ಯಾಯಾಲಯದಲ್ಲಿ ಪ್ರಕರಣವನ್ನು ಮುಂದುವರಿಸಲು ಸೂಕ್ತ ಹಿರಿಯ ವಕೀಲರನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 2024ರ ಫೆಬ್ರವರಿಯಲ್ಲಿ ಬೆಂಗಳೂರಿನ ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ಯಡಿಯೂರಪ್ಪ ಎದುರಿಸುತ್ತಿದ್ದಾರೆ. ಪೊಲೀಸರು ಮಾರ್ಚ್ನಲ್ಲಿ ಎಫ್ಐಆರ್ ದಾಖಲಿಸಿದರು ಮತ್ತು ಜೂನ್ 2024 ರಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಯಿತು. ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸುವ ಅಗತ್ಯವನ್ನು ಪ್ರಶ್ನಿಸಿದ ಹೈಕೋರ್ಟ್ ಯಡಿಯೂರಪ್ಪ ಅವರಿಗೆ ಬಂಧನದಿಂದ ವಿನಾಯಿತಿ ನೀಡಿತು. ಯಡಿಯೂರಪ್ಪ ಅವರು ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕಾಣಿಸಿಕೊಂಡ ಗೌರವ್ (ಹೆಸರು ಬದಲಾಯಿಸಲಾಗಿದೆ) ನ್ಯಾಯಕ್ಕಾಗಿ ಕುಟುಂಬದ ಸುದೀರ್ಘ ಹೋರಾಟವು ಅವರ ಮೇಲೆ ಪರಿಣಾಮ ಬೀರಿದೆ. ಅವರ ಏಕೈಕ ಭರವಸೆ ನ್ಯಾಯಾಂಗವಾಗಿದೆ ಎಂದು ಹೇಳಿದರು. ನನ್ನ ಸಹೋದರಿ ಮತ್ತು ನನ್ನ ಕುಟುಂಬಕ್ಕೆ ನ್ಯಾಯ…
ಬಾಗಲಕೋಟೆ: ಮನೆಯಲ್ಲಿ ಸ್ನಾನ ಮಾಡಲು ತೆರಳಿದಂತ ಮಹಿಳೆಯ ತಲೆಯ ಮೇಲೆ ಅಪರಿಚಿತರು ಹಲ್ಲೆ ಮಾಡಿದ್ದಾರೆ. ಈ ಕಾರಣ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತ ಶಾಕಿಂಗ್ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಮತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೋಭಾ(40) ಎಂಬುವರು ತಮ್ಮ ಮನೆಯಲ್ಲಿ ಸ್ನಾನ ಮಾಡುತ್ತಿದ್ದಂತ ಸಂದರ್ಭದಲ್ಲಿ ಅಪರಿಚಿತರು ತಲೆಗೆ ಬಲವಾಗಿ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ಈ ಪರಿಣಾಮ ಶೋಭಾ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಶೋಭಾ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿದೆ. ಈ ಸಂಬಂಧ ಜಮಖಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕೇಸ್ ದಾಖಲಿಸಿ ತನಿಖಎ ನಡೆಸುತ್ತಿದ್ದಾರೆ. https://kannadanewsnow.com/kannada/youth-seriously-injured-in-accidental-firing-from-pistol-undergoing-treatment-at-hospital/ https://kannadanewsnow.com/kannada/update-tibet-hit-by-a-severe-earthquake-death-toll-rises-to-95-earthquake/
ಮಂಗಳೂರು: ಪಿಸ್ತೂಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ, ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರಿನ ಹೊರವಲಯದ ಮೂಡುಶೆಡ್ಡದಲ್ಲಿ ಸೆಕೆಂಡ್ ಹ್ಯಾಂಡ್ ವಸ್ತುಗಳ ಮಾರಾಟ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಪರವಾನಗಿ ಹೊಂದಿದ್ದಂತ ಪಿಸ್ತೂಲ್ ಅನ್ನು ಕ್ಲೀನ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಯುವಕ ಸಫ್ವಾನ್(25) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಸಫ್ವಾನ್ ಅನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಯುವಕ ಸಫ್ವಾನ್ ಶಸ್ತ್ರಚಿಕಿತ್ಸೆಯ ಬಳಿಕ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/bbmp-officials-remove-encroachments-on-storm-water-drains-in-bengaluru/ https://kannadanewsnow.com/kannada/cm-siddaramaiah-pulls-up-officials-at-progress-review-meeting-of-social-welfare-department/
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಉತ್ತರಹಳ್ಳಿ ಹೋಬಳಿಯ ಹೊಸಕೆರೆಹಳ್ಳಿ ಗ್ರಾಮದ ಸರ್ವೆ ನಂ.90 ರಲ್ಲಿರುವ ಚಾಮುಂಡಿ ಸ್ಲಂ ಜಾಗದ ಬೃಹತ್ ಮಳೆ ನೀರುಗಾಲುವೆ ಮೇಲೆ ಅನಧಿಕೃತವಾಗಿ ತಾತ್ಕಾಲಿಕ ಶೆಡ್ಡುಗಳನ್ನು ನಿರ್ಮಾಣ ಮಾಡಿರುವುದು ಕಂಡು ಬಂದಿರುತ್ತದೆ. ಬೃಹತ್ ಮಳೆ ನೀರುಗಾಲುವೆ ಒತ್ತುವರಿಗಳನ್ನು ತೆರವುಗೊಳಿಸುವ ಕುರಿತು ಸರ್ಕಾರದ ಆದೇಶದಂತೆ ಹಾಗೂ ವಲಯ ಆಯುಕ್ತರು (ದಕ್ಷಿಣ) ರವರ ನಿರ್ದೇಶನದ ಮೇರೆಗೆ ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಉತ್ತರಹಳ್ಳಿ ಹೋಬಳಿಯ ಹೊಸಕೆರೆಹಳ್ಳಿ ಸರ್ವೆ ನಂಬರ್ 90ರಲ್ಲಿರುವ ಚಾಮುಂಡಿ ಸಮ್ ಜಾಗದ ಬೃಹತ್ ಮಳೆ ನೀರು ಕಾಲುವೆ ಮೇಲೆ ಅನಧಿಕೃತವಾಗಿ ನಿರ್ಮಿಸಿರುವ ಶೆಡ್ ಗಳನ್ನು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ನಿಯಮಾನುಸಾರ ಇಂದು ತೆರವುಗೊಳಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಪಾಲಿಕೆಯ ಮಳೆ ನೀರುಗಾಲುವೆ ವಿಭಾಗದ ಅಭಿಯಂತರರು ಹಾಗೂ ಕಂದಾಯ ವಿಭಾಗದ ಅಧಿಕಾರಿಗಳು ಹಾಜರಿದ್ದರು. https://kannadanewsnow.com/kannada/there-is-no-need-to-give-any-special-meaning-to-the-party-former-mp-dk-shivakumar-suresh/ https://kannadanewsnow.com/kannada/cm-siddaramaiah-pulls-up-officials-at-progress-review-meeting-of-social-welfare-department/
ಬೆಂಗಳೂರು: “ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಡಿಸಿಎಂ ಅನುಪಸ್ಥಿತಿಯಲ್ಲಿ ಅನೇಕ ಡಿನ್ನರ್ ಸಭೆಗಳು ನಡೆಯುತ್ತಿವೆ ಎಂದು ಕೇಳಿದಾಗ, “ವಿಶೇಷ ಸಂದರ್ಭಗಳಲ್ಲಿ ಸ್ನೇಹಿತರು ಊಟಕ್ಕೆ ಸೇರುವುದು, ಹೀಗೆ ಊಟಕ್ಕೆ ಸೇರಿದಾಗ ಹಲವಾರು ಚರ್ಚೆ ಮಾಡುವುದು ಸರ್ವೇ ಸಾಮಾನ್ಯ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೆಲವು ಸಚಿವರು, ನಾಯಕರು ಔತಣಕೂಟಕ್ಕೆ ಸೇರಿದ್ದರು. ಅದರಲ್ಲಿ ಮುಖ್ಯಮಂತ್ರಿಗಳು ಸೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ರಾಜಕಾರಣದಲ್ಲಿ ಮಾಧ್ಯಮಗಳು ಹೇಳುವ ರೀತಿ ವಿಶೇಷ ಬದಲಾವಣೆಗೆ ಒತ್ತಡ ಹಾಕಲಾಗುತ್ತಿದೆ ಎಂದು ಅರ್ಥ ಕಲ್ಪಿಸಲು ಸಾಧ್ಯವಿಲ್ಲ. ಇಂದು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಅವರೇ ಔತಣಕೂಟದಲ್ಲಿ ಸೇರಿರುವಾಗ ಇದರಲ್ಲಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವೇನಿದೆ?” ಎಂದು ತಿಳಿಸಿದರು. ಪರಮೇಶ್ವರ್ ಅವರು…
ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು ಸ್ಪಷ್ಟ ಸೂಚನೆ ನೀಡಿದರು. ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದಕ್ಕಾ ನೀವು ಇರುವುದು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು. 2024-25 ನೇ ಸಾಲಿನಲ್ಲಿ ಆಯವ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ರೂ. 5,377 ಕೋಟಿ ಅನುದಾನ ಒದಗಿಸಲಾಗಿದೆ. ಇದುವರೆಗೆ ಅನುದಾನ ರೂ.3,631 ಕೋಟಿ ಬಿಡುಗಡೆಯಾಗಿದ್ದು ಈ ಹಣ ಕೂಡ ಪೂರ್ತಿ…
ಕೊಪ್ಪಳ: ಕೆ.ಕೆ.ಆರ್.ಡಿ.ಬಿ ಹಾಗೂ ಕೊಪ್ಪಳ ಶಾಸಕರ ಅನುದಾನದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಲಾದ 21 ಹೊಸ ವಾಹನಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಮಂಗಳವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಆವರಣದಲ್ಲಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ 2024-25ನೇ ಆರ್ಥಿಕ ವರ್ಷದಲ್ಲಿ ಮಂಜೂರಾಗಿರುವ 200 ಲಕ್ಷ ರೂ. ಅನುದಾನದಲ್ಲಿ ಇಲಾಖೆಯ ದೈನಂದಿನ ಕರ್ತವ್ಯದ ಸಲುವಾಗಿ 16 ಬುಲೆರೋ, 2 ಸ್ಕಾರ್ಪಿಯೋ ಮತ್ತು 1 ಇನ್ನೋವಾ ವಾಹನಗಳನ್ನು ಹಾಗೂ ಕೊಪ್ಪಳ ಶಾಸಕರ ಅನುದಾನದಡಿ ಮಂಜೂರಾದ 20 ಲಕ್ಷ ರೂ. ಅನುದಾನದಲ್ಲಿ 2 ಬೋಲೆರೊ ಖರೀದಿಸಲಾಗಿದ್ದು, ಈ ವಾಹನಗಳ ಪೊಲೀಸ್ ಸೇವೆಗೆ ಸಚಿವರು, ಶಾಸಕರು ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.…