Subscribe to Updates
Get the latest creative news from FooBar about art, design and business.
Author: kannadanewsnow09
ತಮಿಳುನಾಡು: ಆ ಪ್ರದೇಶಕ್ಕೆ ರೈಲು ಸಂಪರ್ಕ ಕಲ್ಪಿಸದೇ ಇದ್ದರೇ ಭಾರತದೊಂದಿಗೆ ಸಂಪರ್ಕವೇ ಇರುತ್ತಿರಲಿಲ್ಲ. ರೈಲು ಮಾರ್ಗದೊಂದಿಗೆ ಸಂಪರ್ಕ ಪಡೆದಂತ ಭಾರತದ ಭೂ ಭಾಗವೇ ರಾಮೇಶ್ವರಂ. ಈ ನಗರಕ್ಕೆ ಸಂಪರ್ಕ ಕಲ್ಪಿಸಿದ್ದೇ ಪಂಬನ್ ಸೇತುವೆ. ಕೆಲ ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರಕ್ಕೆ ನೂತನ ಸಮುದ್ರ ರೈಲು ಸೇತುವೆ ಸಿದ್ಧಗೊಂಡಿದೆ. ಇನ್ನೇನಿದ್ದರೂ ಉದ್ಘಾಟನೆಯ ಬಳಿಕ ಸಂಚಾರವಷ್ಟೇ. ಹಾಗಾದ್ರೇ ಪಂಬನ್ ಸಮುದ್ರ ರೈಲು ಸೇತುವೆ ನಿರ್ಮಾಣ, ವಿಶೇಷತೆ ಏನು ಅಂತ ಮುಂದೆ ಓದಿ. ರಾಮೇಶ್ವರಂ ದ್ವೀಪಕ್ಕೆ ಭಾರತೀಯ ರೈಲ್ವೆಯಿಂದ ಸಂಪರ್ಕ ಒಂದು ಕಾಲದಲ್ಲಿ ಆ ಭೂ ಭಾಗ ಸುತ್ತಲೂ ಸಮುದ್ರದಿಂದ ಆವೃತ್ತವಾಗಿ ದ್ವೀಪವಾಗಿತ್ತು. ಆ ದ್ವೀಪಕ್ಕೆ ಸಂಪರ್ಕ ಕಲ್ಪಿಸಿದ್ದು ರೈಲ್ವೆ ಸಾರಿಗೆ ಸಂಚಾರದ ಮೂಲಕ. ಈಗ ರಸ್ತೆ, ರೈಲು ಮಾರ್ಗದ ಮೂಲಕ ಜೊತೆಗೆ ಬೆಸೆದುಕೊಂಡಿರೋದೇ ರಾಮೇಶ್ವರಂ. ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪಟ್ಟಣಕ್ಕೆ ರೈಲು ಸಾರಿಗೆ ಮೂಲಕ ಮತ್ತೊಮ್ಮೆ ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ಸಿದ್ಧವಾಗಿದೆ. ಇದಕ್ಕಾಗಿ ಭಾರತದ ಮೊದಲ ವರ್ಟಿಕಲ್ ಲಿಫ್ಟಿಂಗ್ ಸೇತುವೆಯನ್ನು ನಿರ್ಮಿಸಲಾಗಿದ್ದು, ಉದ್ಘಾಟನೆಗೆ…
ಮೂರು ಸೋಮವಾರ ಅಥವಾ ಏಳು ಸೋಮವಾರದ ಈ ಪ್ರಯೋಗವನ್ನು ಮಾಡಬೇಕಾಗುತ್ತದೆ. ಏನು ಮಾಡಬೇಕೆಂದರು ಬಿಳಿ ಎಕ್ಕದ ಹೂವನ್ನು 108 ಪೋಣಿಸಿ ಹಾರ ಮಾಡಿ ಈಶ್ವರನಿಗೆ ಹಾಕಬೇಕು. ಹಾಗೂ ಶತ್ರುವಿಗೆ ನೀನೇ ನೋಡಿಕೋ, ಈ ರೀತಿಯಾಗಿ ಪರಿಪರಿಯಾಗಿ ನನ್ನನ್ನು ಕಾಡುತ್ತಿದ್ದಾನೆ ಎಂದು ಹೇಳಿ ದೇವರ ಮುಂದೆ ನಿವೇದನೆ ಮಾಡಿಕೊಳ್ಳಿ ಹಾಗೂ ಪರಶಿವನ ಪಾದದ ಕೆಳಗೆ ಶತ್ರುವಿನ ಹೆಸರಿನಲ್ಲಿ ಎಷ್ಟು ಅಕ್ಷರವಿದೆಯೋ ಅಷ್ಟೇ ಪ್ರಮಾಣದ ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಉದಾರಣೆಗೆ ರಾಮಕೃಷ್ಣ ನಾಲ್ಕು ಅಕ್ಷರ ಅಲ್ಲಿಗೆ ನಾಲ್ಕು ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಎಂಬುದಾಗಿ ಅರ್ಥ ಈ ರೀತಿಯಾಗಿ ಮೂರು ಸೋಮವಾರ ಅಥವಾ ಏಳು ಸೋಮವಾರ ನಿರಂತರವಾಗಿ ಶತ್ರು ಧ್ವಂಸ ಆಗಲಿ ಎಂದು ಸಂಕಲ್ಪ ಮಾಡಿಕೊಂಡು ಮಾಡಿದ್ದೆ ಆದಲ್ಲಿ 100ಕ್ಕೆ 100% ಅಷ್ಟು ಆತ ಉಚ್ಚಾಟನೆಗೊಳ್ಳುವನು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:-…
ತಮಿಳುನಾಡು: ಆ ಪ್ರದೇಶಕ್ಕೆ ರೈಲು ಸಂಪರ್ಕ ಕಲ್ಪಿಸದೇ ಇದ್ದರೇ ಭಾರತದೊಂದಿಗೆ ಸಂಪರ್ಕವೇ ಇರುತ್ತಿರಲಿಲ್ಲ. ರೈಲು ಮಾರ್ಗದೊಂದಿಗೆ ಸಂಪರ್ಕ ಪಡೆದಂತ ಭಾರತದ ಭೂ ಭಾಗವೇ ರಾಮೇಶ್ವರಂ. ಈ ನಗರಕ್ಕೆ ಸಂಪರ್ಕ ಕಲ್ಪಿಸಿದ್ದೇ ಪಂಬನ್ ಸೇತುವೆ. ಕೆಲ ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರಕ್ಕೆ ನೂತನ ಸಮುದ್ರ ರೈಲು ಸೇತುವೆ ಸಿದ್ಧಗೊಂಡಿದೆ. ಇನ್ನೇನಿದ್ದರೂ ಉದ್ಘಾಟನೆಯ ಬಳಿಕ ಸಂಚಾರವಷ್ಟೇ. ಹಾಗಾದ್ರೇ ಪಂಬನ್ ಸಮುದ್ರ ರೈಲು ಸೇತುವೆ ನಿರ್ಮಾಣ, ವಿಶೇಷತೆ ಏನು ಅಂತ ಮುಂದೆ ಓದಿ. ರಾಮೇಶ್ವರಂ ದ್ವೀಪಕ್ಕೆ ಭಾರತೀಯ ರೈಲ್ವೆಯಿಂದ ಸಂಪರ್ಕ ಒಂದು ಕಾಲದಲ್ಲಿ ಆ ಭೂ ಭಾಗ ಸುತ್ತಲೂ ಸಮುದ್ರದಿಂದ ಆವೃತ್ತವಾಗಿ ದ್ವೀಪವಾಗಿತ್ತು. ಆ ದ್ವೀಪಕ್ಕೆ ಸಂಪರ್ಕ ಕಲ್ಪಿಸಿದ್ದು ರೈಲ್ವೆ ಸಾರಿಗೆ ಸಂಚಾರದ ಮೂಲಕ. ಈಗ ರಸ್ತೆ, ರೈಲು ಮಾರ್ಗದ ಮೂಲಕ ಜೊತೆಗೆ ಬೆಸೆದುಕೊಂಡಿರೋದೇ ರಾಮೇಶ್ವರಂ. ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪಟ್ಟಣಕ್ಕೆ ರೈಲು ಸಾರಿಗೆ ಮೂಲಕ ಮತ್ತೊಮ್ಮೆ ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ಸಿದ್ಧವಾಗಿದೆ. ಇದಕ್ಕಾಗಿ ಭಾರತದ ಮೊದಲ ವರ್ಟಿಕಲ್ ಲಿಫ್ಟಿಂಗ್ ಸೇತುವೆಯನ್ನು ನಿರ್ಮಿಸಲಾಗಿದ್ದು, ಉದ್ಘಾಟನೆಗೆ…
ಬೆಂಗಳೂರು: “ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯಕ್ಕೆ ₹ 10.27 ಲಕ್ಷ ಕೋಟಿ ಬಂಡವಾಳ ಹರಿದುಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶುಕ್ರವಾರದಂದು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರ ಜತೆ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಈ ಸಮಾವೇಶದಿಂದ ನಾವು ರಾಜ್ಯಕ್ಕೆ ₹ 10 ಲಕ್ಷ ಕೋಟಿ ಬಂಡವಾಳ ಹರಿದುಬರುವ ನಿರೀಕ್ಷೆ ಇತ್ತು. ₹ 4.30 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆ ಅಂತಿಮವಾಗಿದ್ದು, ₹ 6.23 ಲಕ್ಷ ಕೋಟಿಯಷ್ಟು ಬಂಡವಾಳ ಹೂಡಿಕೆಯಷ್ಟು ಒಡಂಬಡಿಕೆಯಾಗಿದೆ. ಈ ಉದ್ಯಮಿಗಳಿಗೆ ಅಗತ್ಯವಿರುವ ಸಹಕಾರವನ್ನು ನಮ್ಮ ಸರ್ಕಾರ ನೀಡಲಿದೆ” ಎಂದು ತಿಳಿಸಿದರು. “ಕರ್ನಾಟಕ ಇತಿಹಾಸ ದೇಶಕ್ಕೆ ಮಾದರಿ. 2000ನೇ ಇಸವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ದೇಶದ ಮೊದಲ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದೆವು. ಇನ್ಫೋಸಿಸ್ ನಾರಾಯಣಮೂರ್ತಿ ಅವರು ಇದನ್ನು ಉದ್ಘಾಟಿಸಿದ್ದರು. ನಂತರ…
ಬೆಂಗಳೂರು: ದಿನಾಂಕ 15.02.2025 (ಶನಿವಾರ)ರ ಇಂದು ಬೆಳಿಗ್ಗೆ 09:00 ಗಂಟೆಯಿಂದ ದಿನಾಂಕ 16.02.2025 (ರವಿವಾರ)ದ ನಾಳೆ ಸಂಜೆ 5:00 ಗಂಟೆಯವರೆಗೆ ‘66/11ಕೆ.ವಿ ಬಾಗಮನೆ ಡಬ್ಲೂ. ಟಿ. ಸಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಮೂನ್ ಸ್ಟೋನ್ ಆಫೀಸ್ ಬಿಲ್ಡಿಂಗ್ ಬಾಗ್ಮನೆ, ಮೂನ್ ಸ್ಟೋನ್ ಆಫೀಸ್ ಬಿಲ್ಡಿಂಗ್ ಲ್ಯಾಬ್, ಬಾಗ್ಮ್ಯಾನ್ ಡಬ್ಲ್ಯೂಟಿಸಿ ಬ್ಯಾಗ್ಮ್ಯಾನ್, ಎಮರಾಲ್ಡ್ ಬಿಲ್ಡಿಂಗ್ ಬ್ಯಾಗ್ಮ್ಯಾನ್ ಎಡಬ್ಲ್ಯುಟಿಸಿ ಬಾಗ್ಮ್ಯಾನ್ ಅಕ್ವಾ ಮರಿನ್ ಪೆರಿಡಾಟ್ ಬಿಲ್ಡಿಂಗ್ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ವೆಂಕಟೇಶ್ವರನಗರ, ವೆಂಕಟೇಶ್ವರಪುರ ಲೇಔಟ್ ಕನ್ಯಾ ಕಟ್ಟಡ ಫರ್ನ್ ಆವಾಸಸ್ಥಾನ, ಔಟರ್ ರಿಂಗ್ ರೋಡ್, ದೊಡ್ಡನೆಕ್ಕುಂಡಿ ರೈಲ್ವೇ ಬ್ರಿಡ್ಜ್ ಕರೀನಾ ಪೂರ್ವ ಕಟ್ಟಡ ಗಾರ್ನೆಟ್ ಕಟ್ಟಡ WTC ಬಗಮಣೆ ಕರೀನಾ ಪಶ್ಚಿಮ ,WTC ಬಾಗಮನೆ ಯುಟಿಲಿಟಿ ಬ್ಲಾಕ್ WTC ಬಾಗಮನೆ ರಿಯೋ ಆಫೀಸ್ ಬ್ಲಾಕ್ ಪೂರ್ವ ಪಾರ್ಕ್ ವಿಲ್ಲಾಸ್, ಶಿವಗಂಗಾ ಲೇಔಟ್, ಅನುಗ್ರಹ ಲೇಔಟ್, ಚಿನ್ನಪ್ಪ ಲೇಔಟ್, ಔಟ್…
ಬೆಂಗಳೂರು: ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ವಿತರಣೆಯಾಗದೇ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿತ್ತು. ಈ ಸಮಸ್ಯೆ ನೀಗಿಸಿ, ವಿದ್ಯಾರ್ಥಿಗಳಿಗೆ ಈ ಪ್ರಮಾಣ ಪತ್ರ ವಿತರಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ: 10.02.2025 ರಿಂದ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರವನ್ನು ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ/ ಉದ್ಯೋಗಾಕಾಂಕ್ಷಿಗಳಿಗೆ ವಿವಿಧ ಪ್ರವೇಶ ಪರೀಕ್ಷೆಗಳಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣಗಳನ್ನು ಅರ್ಜಿ ಸಲ್ಲಿಸಿ ಪಡೆಯಲು ಅರ್ಜಿದಾರರುಗಳಿಗೆ ಅಡಚಣೆ ಉಂಟಾಗಿರುತ್ತದೆ ಎಂದಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಗ್ರಾಮ ಆಡಳಿತ ಅಧಿಕಾರಿಗಳ ಲಾಗಿನ್ ನಲ್ಲಿ ಕ್ಷೇತ್ರ ಪರಿಶೀಲನೆಗೆ ಬಾಕಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ವಾಸಸ್ಥಳ ದೃಢೀಕರಣ ಕೋರಿಕೆಯ…
ವಿಜಯಪುರ: ಜಿಲ್ಲೆಯ ಭೀಮಾತೀರದಲ್ಲಿ ನಡೆದ್ದಂತ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ್ನು ಬಂಧಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಐವರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಈ ಹತ್ಯೆ ಸಂಬಂಧ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದರು. ಬಂಧಿತ ಆರೋಪಿಗಳನ್ನು ವಿಜಯಪುರದ 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅಲ್ಲದೇ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಮನವಿ ಪುರಸ್ಕರಿಸಿದಂತ ಕೋರ್ಟ್,…
ಚಿಕ್ಕಮಗಳೂರು: ಜಿಲ್ಲೆಯ ಗೌರಿಗದ್ಧೆ ಗ್ರಾಮದಲ್ಲಿರುವಂತ ಗೋಶಾಲೆಯಲ್ಲಿ ಭೀಕರ ಬೆಂಕಿ ಅವಘಡ ಉಂಟಾಗಿದೆ. ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಗೋವುಗಳಿಗೆ ಸಂಗ್ರಹಿಸಿದ್ದಂತ ಮೇವು ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ಧೆ ಗ್ರಾಮದಲ್ಲಿನ ಗೋಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಉಂಟಾಗಿದೆ. ಗೋವಿಗೆ ಹಾಕಲು ಸಂಗ್ರಹಿಸಿದ್ದಂತ ಮೇವಿಗೆ ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದೆ. ಗೋ ಶಾಲೆಗೂ ಬೆಂಕಿ ತಗುಲಿದ್ದು, ಗೋವುಗಳನ್ನು ರಕ್ಷಿಸಲಾಗಿದೆ. ಇನ್ನೂ ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದ ಸುಮಾರು 12 ಲಕ್ಷ ಮೌಲ್ಯದ ಮೇವು ಸುಟ್ಟು ಭಸ್ಮವಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/indias-first-vertical-lifting-bridge-ready-for-inauguration-know-whats-special/ https://kannadanewsnow.com/kannada/breaking-big-shock-for-coffee-lovers-price-hike-by-rs-5-soon-coffee-prices-hike/
ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೆ ಮಂಗನ ಕಾಯಿಲೆ ಆರ್ಭಟಿಸುತ್ತಿದೆ. ಜೊತೆ ಜೊತೆಗೆ ಜನರಲ್ಲಿ ಆತಂಕಕ್ಕೂ ಕಾರಣವಾಗಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಇಂದು ಒಂದೇ ದಿನ ನಾಲ್ವರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಎನ್ ಆರ್ ಪುರ ವ್ಯಾಪ್ತಿಯಲ್ಲಿ ಇಂದು ನಾಲ್ವರಿಗೆ ಮಂಗನಕಾಯಿಲೆ ದೃಢಪಟ್ಟಿರುವುದಾಗಿ ತಿಳಿಸಿದೆ. ಮಂಗನಕಾಯಿಲೆಯಿಂದ ಬಳಲುತ್ತಿರುವಂತ ಜನರಿಗೆ ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು, ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮಂಗನಕಾಯಿಲೆಗೆ ಒಳಗಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಇನ್ನೂ ಮಂಗನ ಕಾಯಿಲೆ ಹೆಚ್ಚಾಗಿರುವ ಕಾರಣ, ಜನರಿಗೆ ಕಾಡಿಗೆ ಹೋಗದಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಜೊತೆಗೆ ಮಂಗನ ಕಾಯಿಲೆ ತಡೆಯ ಸಂಬಂಧ ಜನರ ರಕ್ತದ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದೆ. https://kannadanewsnow.com/kannada/good-news-for-students-who-were-waiting-for-caste-income-certificate-domicile-certificate/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/
ಕಾರವಾರ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ನಗರ ಯೋಜನಾ ಸದಸ್ಯನನ್ನು ರೆಡ್ ಹ್ಯಾಂಡ್ ಆಗಿಯೇ ಬಲೆಗೆ ಕೆಡೆವಿದ್ದಾರೆ. ಕಾರವಾರದ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಶಿವಾನಂದ ತಾಮ್ರಣ್ಣನವರ ಪ್ರಶಾಂತ ನಾಯಕ ಎಂಬುವರಿಗೆ ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಸಂಬಂಧ ಪ್ರಶಾಂತ ನಾಯಕ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಶಿವಾನಂದ ತಾಮ್ರಣ್ಣನವರ ಪ್ರಶಾಂತ ನಾಯಕರಿಂದ 10,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಎಸ್ಪಿ ಕುಮಾರ ಚಂದ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಆ ಮೂಲಕ ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. https://kannadanewsnow.com/kannada/udayagiri-police-station-stone-pelting-case-cm-siddaramaiah-says-action-will-be-taken-against-culprits/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/