Author: kannadanewsnow09

ಅದು ಒಂದು ರೂಪಾಯಿಯಾಗಿರಲಿ ಅಥವಾ ಒಂದು ಕೋಟಿ ರೂಪಾಯಿಯಾಗಿರಲಿ, ನಾವು ಇತರರಿಂದ ಏನನ್ನಾದರೂ ಖರೀದಿಸಿದ್ದರೆ, ಅದನ್ನು ಸಾಲವೆಂದು ಪರಿಗಣಿಸಲಾಗುತ್ತದೆ. ನಾವು ಆ ಸಾಲವನ್ನು ಮರುಪಾವತಿಸಬೇಕೆಂಬ ಒಂದು ನಿರ್ದಿಷ್ಟ ಭಾವನೆ ಇದೆ. ನಾವು ಅದನ್ನು ಮರುಪಾವತಿಸಲು ಸಾಧ್ಯವಾಗದಿದ್ದರೆ, ಸಾಲ ನೀಡುವವರಿಂದ ಉಂಟಾಗುವ ಅವಮಾನವು ಮಾನಸಿಕ ಯಾತನೆಯನ್ನು ಉಂಟುಮಾಡುತ್ತದೆ ಮತ್ತು ಅನೇಕ ಜನರು ಹಾನಿಕಾರಕ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಸಾಲವು ಜೀವಗಳನ್ನು ತೆಗೆದುಕೊಳ್ಳುವ ಶಕ್ತಿಶಾಲಿ ವಿಷಯವಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ,…

Read More

ಮಂಡ್ಯ: RSS ಬ್ಯಾನ್ ಮಾಡಲು ಜಗತ್ತಿನ ಯಾವುದೇ ದೃಷ್ಟಶಕ್ತಿಯಿಂದಲೂ ಸಾಧ್ಯವಿಲ್ಲ. RSS ಅಸ್ತಿತ್ವವನ್ನ ಅಳಿಸಲು ಯಾರಿಂದಲೂ ಸಾದ್ಯವಿಲ್ಲ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸುವಂತೆ ಪ್ರಿಯಾಂಕ ಖರ್ಗೆ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಇದು ಮೂರ್ಖತನದ ವಿಚಾರವಾಗಿದೆ. ಜವಾಹರ್ ಲಾಲ್ ಇಂದ ಇಲ್ಲಿಯವರೆಗೆ ಎಲ್ಲರು ಪ್ರಯತ್ನ ಮಾಡಿದ್ದಾರೆ. RSS ಬ್ಯಾನ್ ಮಾಡಲು ಜಗತ್ತಿನ ಯಾವುದೇ ದೃಷ್ಟಶಕ್ತಿಯಿಂದಲೂ ಸಾಧ್ಯವಿಲ್ಲ. ಸೂರ್ಯ, ಚಂದ್ರ ಎಷ್ಟು ಸತ್ಯವೋ ಆರ್ ಎಸ್ ಎಸ್ ಕೂಡ ಅಷ್ಟೇ ಸತ್ಯ. RSS ಅಸ್ತಿತ್ವವನ್ನ ಅಳಿಸಲು ಯಾರಿಂದಲೂ ಸಾದ್ಯವಿಲ್ಲ ಎಂದರು. ಕಾಂಗ್ರೆಸ್ ಪಕ್ಷದವರು ಮುಸ್ಲಿಂ ತುಷ್ಟಿಕರಣಕ್ಕೆ ಇಂತಹ ಹೇಳಿಕೆ ಕೊಡ್ತಾರೆ. ದೇಶದಲ್ಲಿ ನ್ಯಾಯಾಲಯದ ವ್ಯವಸ್ಥೆ ಇದೆ. ಮುಸ್ಲಿಂ ರನ್ನ ಖುಷಿ ಪಡಿಸಲು ಪ್ರಿಯಾಂಕ ಖರ್ಗೆ ಇಂತಹ ಹೇಳಿಕೆ ಕೊಡ್ತಾರೆ ಅಷ್ಟೆ ಎಂಬುದಾಗಿ ತಿಳಿಸಿದರು. ಹಿಂದೂ ಜಾತ್ರೆ, ಹಬ್ಬ ಹರಿದಿನಗಳ ಮೇಲೆ, ಶಿವಾಜಿ, ಗಣೇಶ ಹಬ್ಬ…

Read More

ಚಿತ್ತಾಪುರ: ಮಹಾನ್ ಮಾನವತಾವಾದಿ, ಸಮಾಜ ಸುಧಾರಕರು ಹಾಗೂ ವಚನ ಚಳವಳಿಯ ಶ್ರೇಷ್ಠ ಪ್ರೇರಕರಾದ ಶ್ರೀ ನಿಜಶರಣ ಅಂಬಿಗರ ಚೌಡಯ್ಯರವರ ಪ್ರತಿಮೆಯನ್ನು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ದುಷ್ಕರ್ಮಿಗಳು ವಿರೂಪಗೊಳಿಸಿರುವುದು ಅತ್ಯಂತ ಖಂಡನೀಯ ಹಾಗೂ ನಾಚಿಕೆಗೆಡು ಕೃತ್ಯವಾಗಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಡಿನ ಎಲ್ಲೆಡೆ ವಿವಿಧ ಮಹಾ ಪುರುಷರ ಪ್ರತಿಮೆಗಳಿವೆ; ಅವರ ಚಿಂತನೆಗಳು ಜನಮನದಲ್ಲಿ ಅಳಿಸಲಾಗದ ಗುರುತು ಬಿಟ್ಟಿವೆ. ಈ ಎಲ್ಲರನ್ನೂ ನಾಡಿನ ಜನರು ಗೌರವಿಸುತ್ತಾರೆ. ಆದರೆ ಚಿತ್ತಾಪುರದಲ್ಲಿ ನಮ್ಮ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆಯ ಕೈ ಮುರಿದು, ಮುಖದ ಮೇಲೆ ಹಸುವಿನ ಸಗಣಿ ಎರಚಿದ ಕೃತ್ಯ ಇಡೀ ನಾಗರೀಕ ಸಮಾಜ ತಲೆ ತಗ್ಗಿಸುವಂತಿದೆ ಎಂದಿದ್ದಾರೆ. ವಿವಿಧ ಸಮುದಾಯಗಳು ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಇಂತಹ ಕೃತ್ಯದಿಂದ ಅವರ ಭಾವನೆಗಳಿಗೆ ನೇರ ಅವಮಾನವಾಗಿದೆ. ಇದು ನಮ್ಮ ಸಾಂಸ್ಕೃತಿಕ ಪರಂಪರೆ,…

Read More

ಬೆಂಗಳೂರು: ಮಾನ್ಯ ಪ್ರಿಯಾಂಕ್ ಖರ್ಗೆ ಅವರೇ, ಯಾಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಹೇಳಿ..? ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ..? ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ..? ನಾವು ರಾಷ್ಟ್ರದ ಘಟಕ ಎನ್ನುವುದನ್ನು ಅರ್ಥ ಮಾಡಿಸಿ ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವುದು ಸಂವಿಧಾನ ಬಾಹಿರವೇ..? ನೀವೇಕೆ ಕಣ್ಣಿದ್ದು ಕುರುಡರಾಗಿದ್ದೀರಿ, ಕಿವಿ ಇದ್ದು ಕಿವುಡರಾಗಿದ್ದೀರಿ..? ಎಂದು ಕೇಳಿದ್ದಾರೆ. ನಿಮ್ಮ ಕಲ್ಬುರ್ಗಿ ಜಿಲ್ಲೆಯಲ್ಲೇ ಮತಾಂಧರು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಹಾಡು ಹಗಲೇ ತೊಡಗಿಸಿಕೊಳ್ಳುತ್ತಿರುವುದು ನಿಮಗೆ ಕಾಣುವುದಿಲ್ಲವೇ..? ಅಂದು ವಿಧಾನಸೌಧದ ಮೊಘಸಾಲೆಯಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದಾಗ ನಿಮಗೆ ಕೇಳಲಿಲ್ಲವೇ..? ಆವಾಗ ಪ್ರತಿಕ್ರಿಯಿಸಲು ನಿಮ್ಮ ಬಾಯಿ ಬಿದ್ದು ಹೋಗಿತ್ತೇ..? ಎಂದು ಕಿಡಿಕಾರಿದ್ದಾರೆ. “ಭಾರತ್ ಮಾತಾ ಕೀ ಜೈ” ಎಂದರೆ ನಿಮ್ಮ ಪ್ರಕಾರ ಅದು ದೇಶದ್ರೋಹ. ಅದಕ್ಕಾಗಿ ಸಂಘದ ಶಾಖೆಗಳನ್ನು ನಿಷೇಧಿಸುವ ಮಾತನಾಡುತ್ತಿದ್ದೀರಿ. ಸಂಘದ ಶಾಖೆಗಳನ್ನು ನಿಷೇಧಿಸುತ್ತೇವೆಂಬ ತಿರುಕನ ಕನಸಿನಿಂದ…

Read More

ಬೆಂಗಳೂರು: ರ್ರೀ ಪ್ರಿಯಾಂಕ ಖರ್ಗೆಯವರೆ ನೀವು ಇನ್ನೂ ನೂರು ಜನ್ಮ ಎತ್ತಿ ಬಂದರು ನೂರರ ಸಂಭ್ರಮವನ್ನಾಚರಿಸುತ್ತಿರುವ RSS ಮುಟ್ಟಲು ಸಾಧ್ಯವಿಲ್ಲ ಎಂಬುದಾಗಿ ಬಿಜೆಪಿ ವಕ್ತಾರ ಪ್ರಕಾಶ್ ಶೇಷರಾಘವಾಚಾರ್ ಹೇಳಿದ್ದಾರೆ. ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಪೋಸ್ಟ್ ಮಾಡಿರುವಂತ ಅವರು, ರ್ರೀ ಪ್ರಿಯಾಂಕ ಖರ್ಗೆಯವರೆ ನೀವು ಇನ್ನೂ ನೂರು ಜನ್ಮ ಎತ್ತಿ ಬಂದರು ನೂರರ ಸಂಭ್ರಮವನ್ನಾಚರಿಸುತ್ತಿರುವ RSS ಮುಟ್ಟಲು ಸಾಧ್ಯವಿಲ್ಲ ಎಂದಿದ್ದಾರೆ. ನೆಹೆರು,ಇಂದಿರಾ ಗಾಂಧಿ, ಪಿ. ವಿ.ನರಸಿಂಹರಾವ್ ಲೊಡ್ಡಗಳ ದಂಡು ಮತ್ತು ನಗರ ನಕ್ಸಲರು ಏನೂ ಮಾಡಲಾಗಿಲ್ಲ ಯ:ಕಶ್ಚಿತ್ ಅಪ್ಪನ ಕೃಪಾಕಟಾಕ್ಷದಿಂದ ಸಚಿವರಾಗಿರುವ ನೀವು ಹಹ್ಹ್ಹಹಾ ಎಂದು ವ್ಯಂಗ್ಯವಾಡಿದ್ದಾರೆ. ಅಂದಹಾಗೆ, ಪ್ರೈಮರಿ ಸ್ಕೂಲಿನಲ್ಲಿ ನಮಗೊಂದು ಪದ್ಯವಿತ್ತು, ತಿರುಕನೋರ್ವ ಊರ ಮುಂದೆ ಮುರುಕು ಧರ್ಮ ಶಾಲೆಯಲ್ಲಿ …. ಹಾಗೆ ನೆನಪಾಯಿತು ಎಂಬುದಾಗಿ ಕುಟುಕಿದ್ದಾರೆ. https://kannadanewsnow.com/kannada/which-are-the-top-10-inidan-states-where-woment-prefer-to-work/ https://kannadanewsnow.com/kannada/cabinet-post-fixed-for-sagar-constituency-mla-gopalakrishna-belur/

Read More

ನವದೆಹಲಿ: ಶಿಕ್ಷಣ ಮತ್ತು ಕೌಶಲ್ಯಗಳಿಗೆ ಪರಿಹಾರಗಳನ್ನು ಒದಗಿಸುವ ಜಾಗತಿಕ ಕಂಪನಿಯಾದ ವೀಬಾಕ್ಸ್ ಬಿಡುಗಡೆ ಮಾಡಿದ ಇಂಡಿಯಾ ಸ್ಕಿಲ್ಸ್ ರಿಪೋರ್ಟ್ 2025, ಭಾರತದಲ್ಲಿ ಮಹಿಳೆಯರ ಉದ್ಯೋಗಾವಕಾಶ ಮತ್ತು ಕೆಲಸದ ವಾತಾವರಣದ ಆದ್ಯತೆಗಳಲ್ಲಿನ ಬದಲಾವಣೆಗಳನ್ನು ಎತ್ತಿ ತೋರಿಸುತ್ತದೆ. ಹಾಗಾದ್ರೆ ವರದಿಯ ಪ್ರಕಾರ ಮಹಿಳೆಯರು ಕೆಲಸ ಮಾಡಲು ಇಷ್ಟ ಪಡುವಂತ ಟಾಪ್ 10 ಭಾರತೀಯ ರಾಜ್ಯಗಳು ಯಾವುವು ಅಂತ ಮುಂದೆ ಓದಿ. ವಿದ್ಯಾಭ್ಯಾಸ ಮುಗಿಸಿ ಕೆಲಸಕ್ಕೆ ಸೇರುವ ನಿರೀಕ್ಷೆಯಲ್ಲಿರುವಂತ ಮಹಿಳೆಯರ ಶೇಕಡಾವಾರು ಪ್ರಮಾಣ 47.53% ಎಂದು ವರದಿ ಗಮನಸೆಳೆದಿದೆ. ಕಳೆದ ಏಳು ವರ್ಷಗಳಲ್ಲಿ ಈ ಅಂಕಿ ಅಂಶವು ಏರಿಳಿತವಾಗಿದ್ದರೂ, ಒಟ್ಟಾರೆ ಪ್ರವೃತ್ತಿ ಸಕಾರಾತ್ಮಕವಾಗಿಯೇ ಇದೆ. ಇದು ಮಹಿಳೆಯರನ್ನು ವೃತ್ತಿಜೀವನಕ್ಕೆ ಸಿದ್ಧಪಡಿಸುವಲ್ಲಿನ ಪ್ರಗತಿ ಮತ್ತು ಇನ್ನೂ ಪರಿಹರಿಸಬೇಕಾದ ಸವಾಲುಗಳನ್ನು ತೋರಿಸುತ್ತದೆ. ಮಹಿಳೆಯರು ಕೆಲಸ ಮಾಡಲು ಇಷ್ಟಪಡುವ ಟಾಪ್ 10 ರಾಜ್ಯಗಳಿವು ವೃತ್ತಿಪರವಾಗಿ ಎಲ್ಲಿ ಕೆಲಸ ಮಾಡಲು ಬಯಸುತ್ತಾರೆ ಎಂಬುದರ ಕುರಿತು ಮಹಿಳೆಯರಿಗೆ ಸ್ಪಷ್ಟ ಆದ್ಯತೆಗಳಿವೆ ಎಂದು ವರದಿ ಸೂಚಿಸುತ್ತದೆ. ಸುರಕ್ಷಿತ ವಾತಾವರಣ, ಉತ್ತಮ ಮೂಲಸೌಕರ್ಯ ಮತ್ತು ವೃತ್ತಿ ಬೆಳವಣಿಗೆಗೆ…

Read More

ಬೆಂಗಳೂರು: ರಾಜ್ಯದಲ್ಲಿ ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ ಎಂದಿದ್ದಾರೆ. ಆರ್ ಎಸ್ ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ ಎಂದು ತಿಳಿಸಿದ್ದಾರೆ. ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ ಎಸ್ ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ…

Read More

ಬೆಂಗಳೂರು: ನಿಮ್ಮ ಶಾಸಕರ ನಾಟಕವನ್ನು ಸಮರ್ಥಿಸಿಕೊಳ್ಳುವ ನೀವು, ಅವರ ಮೇಲೆ ಅತ್ಯಾಚಾರ ಆರೋಪ ಬಂದಾಗ ಬಾಯಿಗೆ ಬೀಗ ಹಾಕಿಕೊಂಡಿದ್ದೇಕೆ? ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅಪ್ಪನ ರಾಜಕೀಯ ಪ್ರಭಾವದಿಂದ ರಾಜಕೀಯಕ್ಕೆ ಬಂದ ತಕ್ಷಣ ರಾಜ್ಯಾಧ್ಯಕ್ಷ ಹುದ್ದೆ ಸಿಕ್ಕ ನಿಮಗೆ ಆ ಸ್ಥಾನದಲ್ಲಿ ಕೂತು ಯಾವ ವಿಚಾರವಾಗಿ ಮಾತನಾಡಬೇಕು, ಟೀಕಿಸಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲ. ಬಿವೈ ವಿಜಯೇಂದ್ರ ಅವರೇ ನಿಮ್ಮಿಂದ ಅದನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಅದಕ್ಕೆ ಅಲ್ಲವೇ ಯತ್ನಾಳ್ ಅವರು ನಿಮ್ಮನ್ನು ಬಚ್ಚಾ, ಎಳಸು ಎಂದು ಕರೆಯುವುದು ಎಂದು ಹೇಳಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉದ್ಯಾನದಲ್ಲಿ ಹೆಜ್ಜೆ ಹಾಕಿ ಸಾರ್ವಜನಿಕರ ಜೊತೆ ಮಾತನಾಡಿ ಅವರ ಕಷ್ಟ ಕೇಳಲು ಬಂದಿದ್ದರು. ಶಿಷ್ಟಾಚಾರ ಉಲ್ಲಂಘನೆ ಆಗಿದ್ದರೆ, ಅದನ್ನು ಪ್ರಶ್ನಿಸುವ ರೀತಿ ಇರುತ್ತದೆ. ಕಾರ್ಯಕ್ರಮಕ್ಕೆ ಅಡ್ಡಿ ಮಾಡುವುದಲ್ಲ ಎಂದು ತಿಳಿಸಿದೆ. ನಿಮ್ಮ ಶಾಸಕರ ನಾಟಕವನ್ನು ಸಮರ್ಥಿಸಿಕೊಳ್ಳುವ ನೀವು, ಅವರ…

Read More

ಬೆಂಗಳೂರು: ಕರ್ನಾಟಕದಲ್ಲಿ ಆರ್ ಎಸ್ ಎಸ್ ಸಂಘದ ನಿಷೇಧ ಕನಸಿನ ಮಾತು. ಹೀಗೆ ಕರೆ ಕೊಟ್ಟಿರೋದು ಬೌದ್ಧಿಕ ದಾರಿದ್ರ್ಯ ತನವನ್ನು ತೋರಿಸುತ್ತದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸರ್ಕಾರಿ ಸ್ಥಳಗಳಲ್ಲಿ ನಡೆಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳನ್ನು, ಪಥಸಂಚಲನ, ಬೈಠಕ್ ಗಳನ್ನು ನಿಷೇಧಿಸಬೇಕೆಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಮಂತ್ರಿಗಳಿಗೆ ಬರೆದಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್.ಎಸ್.ಎಸ್. ನ ನಿಷೇಧಕ್ಕೆ ಕರೆ ಕೊಟ್ಟಿರುವುದು ಇವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ ಎಂದಿದ್ದಾರೆ. ಪ್ರಕೃತಿ ವಿಕೋಪ, ರೈಲು ದುರಂತ, ಕೋವಿಡ್, ಅಪಘಾತಗಳು, ಭೂಕಂಪ, ನೆರೆಯಾದಾಗ ನೊಂದವರಿಗೆ ಮೊದಲು ಆಸರೆಯಾಗುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು. ಸೇವಾತತ್ಪರತೆ, ಸಮಾಜ ಸೇವೆ, ರಾಷ್ಟ್ರ ಪ್ರೇಮದ ಬಗ್ಗೆ ಜಾಗೃತಿ, ಶಿಸ್ತಿಗೆ ಮತ್ತೊಂದು ಹೆಸರೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲು ರಾತ್ರಿ ಎನ್ನದೇ ನಿಸ್ವಾರ್ಥ…

Read More

ಬೆಂಗಳೂರು: “ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು. ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಮುಂಜಾನೆ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಪಾಲಿಕೆ ಆಯುಕ್ತರು ಹಾಗೂ ಜೆ.ಪಿ‌.ಪಾರ್ಕ್ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳಿಂದ ಉದ್ಯಾನದಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಟಾಯ್ ಟ್ರೈನ್, ಮಕ್ಕಳ ಆಟಿಕೆಗಳು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಏಕೆ ಉಂಟಾಗಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ಪ್ರತಿದಿನವೂ ಎಲ್ಲಾ ಶೌಚಾಲಯಗಳಿಗೂ ಬೀಗ ಹಾಕಲಾಗಿರುತ್ತದೆ ಎನ್ನುವ ದೂರಿಗೆ, “ಇನ್ನೆರಡು ದಿನದಲ್ಲಿ ಈ ಸಮಸ್ಯೆ ಬಗೆಹರಿಯಲೇ ಬೇಕು” ಎಂದು ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರಿಗೆ ಸೂಚನೆ ನೀಡಿದರು. ಜಿಮ್ ಪರಿಕರಗಳು ಹಾಳಾಗಿರುವುದನ್ನು ನೋಡಿದ…

Read More