Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಈವರೆಗೆ 4 ಸಾವಿರ ಗುಂಡಿಗಳ್ನು ದುರಸ್ತಿ ಮಾಡಿರುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಏಪ್ರಿಲ್ 1 ರಿಂದ 4 ಸಾವಿರ ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನೂ ಎರಡು ಸಾವಿರ ಗುಂಡಿ ಮುಚ್ಚಬೇಕಿದೆ. ಆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ. ʼರಸ್ತೆ ಗುಂಡಿನ ಗಮನʼ ಆ್ಯಪ್ನಲ್ಲಿ ಸುಮಾರು 1,600 ದೂರುಗಳು ಬಂದಿವೆ. ಅದರಲ್ಲಿ ಒಂದು ಸಾವಿರ ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದೆ. ತ್ವರಿತಗತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1833838230153650440 ರಾಜರಾಜೇಶ್ವರಿ ನಗರ ವಲಯದಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲಾಗುತ್ತಿದೆ: ಅಜಯ್ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು.…
ದಾವಣಗೆರೆ ; ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ತಲಾ ಲಕ್ಷ ರೂ.ಗಳ ದಂಡ ಪಾವತಿಸುವಂತೆ ಜಿಲ್ಲಾಧಿಕಾರಿ ಹಾಗೂ ಕೆಪಿಎಂಇ ನೊಂದಣಿ ಪ್ರಾಧಿಕಾರ ಹಾಗೂ ಸಾರ್ವಜನಿಕ ಕುಂದುಕೊರತೆ ನಿವಾರಣಾ ಸಮಿತಿ ಅಧ್ಯಕ್ಷರಾದ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ. ಭದ್ರಾವತಿ ತಾಲ್ಲೂಕಿನ ಸನ್ಯಾಸಿಕೊಡಮಗ್ಗಿ ಗ್ರಾಮದ 57 ವರ್ಷದ ಶ್ರೀನಿವಾಸ್ ತಂದೆ ತಿಮ್ಮಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಲಿಂಗಾಪುರದಲ್ಲಿ ಶೀನಪ್ಪಗೌಡ ಎಂಬುವರ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಶ್ರೀ ರಾಮಾಂಜನೇಯ ಮೆಡಿಕಲ್ಸ್ ಮತ್ತು ಜನರಲ್ ಸ್ಟೋರ್ ಎಂದು ಪರವಾನಗಿ ಪಡೆದು ಜೊತೆಗೆ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಾ ಜನರಿಗೆ ಚಿಕಿತ್ಸೆ ನೀಡುತ್ತಿದ್ದನು. ಇವರು ಪಡೆದ ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದುಪಡಿಸಿ ಒಂದು ಲಕ್ಷ ದಂಡ ವಿಧಿಸಲಾಗಿದೆ. ಮತ್ತೊಬ್ಬ ನಕಲಿ ವೈದ್ಯ ಹಿರೇಕೇರೂರು ತಾಲ್ಲೂಕಿನ ಹಿರೇ ಮರಬ ಗ್ರಾಮದ 45 ವರ್ಷದ ಲಕ್ಷ್ಮಣ ಬಿನ್ ಫಕ್ಕೀರಪ್ಪ ಇವರು ಹೊನ್ನಾಳಿ ತಾಲ್ಲೂಕಿನ ಕ್ಯಾಸಿನಕೆರೆ ಗ್ರಾಮದಲ್ಲಿ ದೇವಸ್ಥಾನದ ಹತ್ತಿರ ಬಸವನಗೌಡ ಎಂಬುವರಿಂದ ಮನೆ…
ಬೆಂಗಳೂರು: ಕೆ ಎಸ್ ಆರ್ ಟಿಸಿಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದವರಿಗೆ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪ್ರಾರಂಭಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿ ಹುಮ್ಮಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ರಿಂದ ಚಾಲನಾ ವೃತ್ತಿ DDOT:18-09-2024 ಇಚ್ಚಿಸಿರುವ ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದೆ. ಈ ಸಂಬಂಧ ಅಭ್ಯರ್ಥಿಗಳು ದಿನಾಂಕ: 13-09-2024 ರಂದು ಮಧ್ಯಾಹ್ನ 1.00 ಗಂಟೆಯಿಂದ ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ ಸೂಚಿಸಿದೆ. ವಿಶೇಷ ಸೂಚನೆ ಸದರಿ ನೇಮಕಾತಿಯನ್ನು ಅಭ್ಯರ್ಥಿಗಳು ಗಣಕೀಕೃತ…
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶಿಸಿದೆ. ಆ ಬಗ್ಗೆ ಪಟ್ಟಿ ಮುಂದಿದೆ ಓದಿ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ ಕಾಯ್ದೆ 2021 ಹಾಗೂ ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ ) ಮಾದರಿ ನಿಯಮಗಳು 2016, ತಿದ್ದುಪಡಿ ಮಾದರಿ ನಿಯಮಗಳು 2022ರ ಅನ್ವಯ ಈ ಕೆಳಕಂಡ 26 ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು 3 ವರ್ಷಗಳ ಅವಧಿಗೆ ನೇಮಕಾತಿ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರ ಜವಾಬ್ದಾರಿ ಮತ್ತು ಕರ್ತವ್ಯಗಳು:- 1.…
ಬೆಂಗಳೂರು : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಫಲಾನುಭವಿ ಆಧಾರಿತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಹೊಸ ಪಾಲನೆ ಕೊಳಗಳ ನಿರ್ಮಾಣ (ನರ್ಸರಿ/ಮೀನುಮರಿ ಪಾಲನೆ ಕೊಳಗಳು), ಲವಣ/ಕ್ಷಾರಿಯ ಪ್ರದೇಶಗಳಿಗೆ ಹೊಸ ಕೊಳಗಳ ನಿರ್ಮಾಣ ಮತ್ತು ಹೂಡಿಕೆ ವೆಚ್ಚ ಹೊಸ ಮೀನುಕೃಷಿ ಕೊಳಗಳ ನಿರ್ಮಾಣ, ಐಸ್ ಬಾಕ್ಸ್ನೊಂದಿಗೆ ಮೋಟಾರ್ ಸೈಕಲ್ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ಹೊಂದಿರುವ ತ್ರಿಚಕ್ರ ಹಾಗೂ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತಿ ಹೊಂದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60ರಷ್ಟು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.40 ರಂತೆ ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆ.27 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ,…
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಸೆ.13 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಎನ್.ಜೆ.ವೈ ಬಾಲಾಜಿ ನಗರ್ ಕ್ಯಾಂಪ್ ಮಾರ್ಗದ ಕರ್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷ್ಮೀನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷ್ಮೀನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮಗಳು.…
ಬೆಂಗಳೂರು: ಬಿಜೆಪಿ ಸರ್ಕಾರದ ( BJP Government ) ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳ ತನಿಖೆ ನಡೆಸುವುದು ನಿಶ್ಚಿತ. ಇನ್ಮುಂದೆ ದಿನಕ್ಕೊಂದು ಬಿಜೆಪಿ ಹಗರಣಗಳ ಕಥಾ ಸರಣಿ ಬರಲಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಪಕ್ಷವು ( Karnataka Congress Party ) ಎಕ್ಸ್ ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳ ತನಿಖೆ ನಡೆಸುವುದು ನಿಶ್ಚಿತ. ಹಗರಣದ ಆರೋಪಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆಸಿ ತನಿಖೆಗೆ ವಹಿಸಲು ಸಚಿವರ ಸಮಿತಿ ರಚನೆಯಾಗಿದೆ ಎಂದು ಹೇಳಿದೆ. ಕೊಳ್ಳೆ ಹೊಡೆಯಲಾಗಿರುವ ಜನರ ಹಣಕ್ಕೆ ನ್ಯಾಯ ಒದಗಿಸುವುದಕ್ಕೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ದಿನಕ್ಕೊಂದು ಚಂದಮಾಮನ ಕತೆಯಂತೆ ಇನ್ಮುಂದೆ ದಿನಕ್ಕೊಂದು ಬಿಜೆಪಿ ಹಗರಣಗಳ ಕಥಾ ಸರಣಿ ಬರಲಿದೆ ಎಂಬುದಾಗಿ ತಿಳಿಸಿದೆ. https://twitter.com/INCKarnataka/status/1833839561480261762 https://kannadanewsnow.com/kannada/kpsc-recruitment-exam-slated-to-be-held-on-september-14-15-prohibitory-orders-under-section-144-imposed-around-exam-centre-in-bengaluru/ https://kannadanewsnow.com/kannada/bescom-launches-ev-mitra-app-electric-vehicle-charging-station-payments-and-other-services-available/ https://kannadanewsnow.com/kannada/loan-facility-up-to-rs-5-lakh-from-central-government-if-you-have-these-documents-apply-immediately/
ಬೆಂಗಳೂರು: ಸೆಪ್ಟೆಂಬರ್.14 ಹಾಗೂ 15ರಂದು ಕೆಪಿಎಸ್ಸಿಯ ಗ್ರೂಪ್-ಬಿ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಾ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆಗಳನ್ನು ಮೊದಲ ಹಂತದಲ್ಲಿ ದಿನಾಂಕ: 14-09-2024 ಮತ್ತು 15-09-2024 ರಂದು ಹಾಗೂ ದಿನಾಂಕ: 18- 09-2024 ಮತ್ತು 19-09-2024 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಮತ್ತು ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ನಮೂದಿತ ಉಲ್ಲೇಖದಲ್ಲಿ ಕೋರಲಾಗಿರುತ್ತದೆ ಎಂದಿದ್ದಾರೆ. ಈ ಸಂಬಂಧ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಹಾಗೂ ಗುಪ್ತವಾರ್ತಾ ಮಾಹಿತಿಯಿಂದ ಮೇಲ್ಕಂಡ ಪರೀಕ್ಷೆಗಳನ್ನು…
ಬೆಂಗಳೂರು: ಬೆಸ್ಕಾಂ ಮತ್ತಷ್ಟು ಗ್ರಾಹಕ ಸ್ನೇಹಿಯಾಗಿದೆ. ಎಲೆಕ್ಟ್ರಿಕ್ ವಾಹನ ಸವಾರರ ಅನುಕೂಲಕ್ಕಾಗಿ ಇವಿ ಮಿತ್ರ ಆಪ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಚಾರ್ಜಿಂಗ್ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೇವೆಗಳು ಲಭ್ಯವಾಗಲಿವೆ. ಎಲೆಕ್ಟ್ರಿಕ್ ವಾಹನ (ಇವಿ) ಬಳಕೆದಾರರಿಗೆ ಚಾರ್ಜಿಂಗ್ ಕೇಂದ್ರಗಳ ಮಾಹಿತಿ, ಹಣ ಪಾವತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿರುವ ಬೆಸ್ಕಾಂನ ʼಇವಿ ಮಿತ್ರʼ ಆ್ಯಪ್ ಈಗ ಹೊಸ ರೂಪದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿದೆ. ಆಂಡ್ರಾಯ್ಡ್ ಮತ್ತು ಐಒಎಸ್ ಎರಡು ಅಪ್ಲಿಕೇಶನ್ಗಳಲ್ಲಿ ಲಭ್ಯವಿರುವ ಹೊಸ ʼಇವಿ ಮಿತ್ರʼ ಆ್ಯಪ್, ಬಳಕೆದಾರರ ಪ್ರೊಫೈಲ್ ನಿರ್ವಹಣೆ, ಚಾರ್ಜಿಂಗ್ ಸ್ಟೇಷನ್ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್ ಪ್ರಕ್ರಿಯೆ, ಬುಕ್ಕಿಂಗ್ ವಿವರ, ಚಾರ್ಜಿಂಗ್ ಸ್ಟೇಷನ್ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಗ್ರಾಹಕರು ಹಳೆಯ ʼಇವಿ ಮಿತ್ರʼ ಆ್ಯಪ್ ಡಿಲೀಟ್ ಮಾಡಿ https://play.google.com/store/apps/details?id=com.bescom.evmithra… ಲಿಂಕ್ ಮೂಲಕ ಹೊಸ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು. ವ್ಯಾಲೆಟ್ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್ಗೆ ಆ ಹಣ…
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇಂದಿನ ಯುಗದಲ್ಲಿ ವೈವಾಹಿಕ ಜೀವನ ಮತ್ತು ಪತಿಯೊಂದಿಗೆ ಬದುಕುವುದು ಕೆಲವರಿಗೆ ನರಕವಾಗಿದೆ. ಜೀವನ ಎಂದರೆ ಸುಖವಾಗಿ ಬಾಳುವುದು. ಈ ಜೀವನ ಒಂದೇ ಒಂದು ಬಾರಿ. 24 ಗಂಟೆಗಳಲ್ಲಿ ಅರ್ಧದಷ್ಟು ಸಮಯವನ್ನು ನಿದ್ರೆಯಲ್ಲಿ ಕಳೆಯಲಾಗುತ್ತದೆ. ಇನ್ನುಳಿದ ಮುಕ್ಕಾಲು ಪಾಲು ದುಡಿಮೆಯೇ. ಉಳಿದ ಕಾಲದಲ್ಲಾದರೂ ನಮ್ಮ ಬದುಕನ್ನು ಸುಖವಾಗಿಡಬೇಕಲ್ಲವೇ? ನಿಮ್ಮ ಮನೆಯಲ್ಲಿ ನಿಮ್ಮ ಗಂಡ ಮತ್ತು ಹೆಂಡತಿ ಪರಸ್ಪರರ ಮುಖವನ್ನು ನೋಡಲು ಇಷ್ಟಪಡದಿದ್ದರೆ, ಈ ಸರಳ ಆಧ್ಯಾತ್ಮಿಕ ಪರಿಹಾರವು ನಿಮಗಾಗಿ ಆಗಿದೆ. ಇದರೊಂದಿಗೆ ಮಹಿಳೆಯರು ತಮ್ಮ ಮಾಂಗಲ್ಯದಲ್ಲಿ ಮಾಡಬಾರದ ಸಣ್ಣ ಪುಟ್ಟ ಆಧ್ಯಾತ್ಮಿಕ ತಪ್ಪುಗಳನ್ನೂ ನೋಡೋಣ . ದಾಂಪತ್ಯ ಏಕತೆಯ ಪರಿಹಾರ ಪತಿ-ಪತ್ನಿಯರು ಒಂದಾದರೆ ಮೊದಲು ಆಗುವುದು ಮದುವೆಯ ಮಾಂಗಲ್ಯ ಧಾರಣೆ ತಿರುಮಾಂಗಲ್ಯಂ. ತಾಳಿ ಕಟ್ಟಿದ ನಂತರವೇ ಈ ಸಂಬಂಧ ಆರಂಭವಾಗುತ್ತದೆ. ಈ ತಾಳಿ ದಾರ ಹಗ್ಗವನ್ನು ಬದಲಾಯಿಸುವಾಗ ಮಹಿಳೆಯರು ಮಾಡುವ ಒಂದು ಪ್ರಮುಖ ತಪ್ಪು…