Author: kannadanewsnow09

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಭಾಗಿಯಾಗಿರುವಂತ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು… *ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. *ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು. *ಅಮಾಯಕರಿಗೆ ತೊಂದರೆ ಕೊಡಬಾರದು. *ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. *ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು. *ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಇದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ ಎಂಬುದಾಗಿ ಖಡಕ್ ಸೂಚನೆಯನ್ನು ಸಿಎಂ…

Read More

ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಮುಂದಿನ ವಾರದ ಆರಂಭದಲ್ಲಿ ಸಭೆ ಸೇರಲಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಈ ಸಮಿತಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಕ್ಯಾಬಿನೆಟ್ ಸಚಿವರು ಇದ್ದಾರೆ. ಹಾಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಫೆಬ್ರವರಿ 18 ರಂದು ನಿವೃತ್ತರಾಗುವ ಮೊದಲು ಸಮಿತಿಯು ಭಾನುವಾರ ಅಥವಾ ಸೋಮವಾರ ಸಭೆ ಸೇರುವ ಸಾಧ್ಯತೆ ಇದೆ. ಶೋಧನಾ ಸಮಿತಿಯು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪೈಕಿ ಒಬ್ಬರ ಹೆಸರನ್ನು ಇದು ಶಿಫಾರಸು ಮಾಡುತ್ತದೆ. ನಂತರ ರಾಷ್ಟ್ರಪತಿಗಳು ಶಿಫಾರಸಿನ ಆಧಾರದ ಮೇಲೆ ಮುಂದಿನ ಸಿಇಸಿಯನ್ನು ನೇಮಕ ಮಾಡುತ್ತಾರೆ. ರಾಜೀವ್ ಕುಮಾರ್ ನಂತರ ಜ್ಞಾನೇಶ್ ಕುಮಾರ್ ಅತ್ಯಂತ ಹಿರಿಯ ಚುನಾವಣಾ ಆಯುಕ್ತರಾಗಿದ್ದಾರೆ. ಅವರ ಅಧಿಕಾರಾವಧಿ ಜನವರಿ 26, 2029 ರವರೆಗೆ ಇರುತ್ತದೆ. ಸುಖ್ಬೀರ್ ಸಿಂಗ್ ಸಂಧು ಅವರು ಮತ್ತೊಬ್ಬ…

Read More

ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಹೂಡಿಕೆದಾರರ ಸಮಾವೇಶದ ಸಾಧನೆಗಳ ಬಗ್ಗೆ ಮಾತನಾಡಿದ ಸಚಿವರು, `ಇನ್ನೂ ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಆಚೆ ಇರುವ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ ಪ್ರದೇಶಗಳಿಗೆ ಹರಿಯಲಿದೆ’ ಎಂದರು. ಸೃಷ್ಟಿಯಾಗಲಿರುವ 6…

Read More

ವಿಜಯನಗರ: ತುಂಬಿದ ಕೊಡ ತುಳುಕೀತಲೇ ಪರಾಕ್ ಎಂಬುದಾಗಿ ಶ್ರೀ ಮೈಲಾರ ಲಿಂಗೇಶ್ವರದಲ್ಲಿ ವರ್ಷದ ಭವಿಷ್ಯವೆಂದೇ ಹೇಳಲಾಗುವಂತ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ವಿಜಯನಗರದ ಹೂವಿನಹಡಗಲಿಯಲ್ಲಿನ ಶ್ರೀ ಮೈಲಾರ ಲಿಂಗೇಶ್ವರದ ಜಾತ್ರೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಕಾರ್ಣಿಕ ನುಡಿಯನ್ನು ರಾಮಣ್ಣ ಗೊರವಯ್ಯ ನುಡಿದಿದ್ದಾರೆ. ತುಂಬಿದ ಕೊಡ ತುಳುಕೀತಲೇ ಪರಾಕ್ ಎಂಬುದು ಈ ವರ್ಷದ ಕಾರ್ಣಿಕ ನುಡಿಯಾಗಿದೆ. ರಾಮಣ್ಣ ಗೊರವಯ್ಯ ನುಡಿದಂತ ತುಂಬಿದ ಕೊಡ ತುಳುಕೀತಲೇ ಪರಾಕ್ ಕಾರ್ಣಿಕ ನುಡಿಯನ್ನು ವೆಂಕಪ್ಪಯ್ಯ ಒಡೆಯರು ವಿಶ್ಲೇಷಣೆ ಮಾಡಿದ್ದು, ಈ ವರ್ಷ ರಾಜ್ಯ, ದೇಶದಲ್ಲಿ ಉತ್ತಮ ಮಳೆ ಬೆಳೆಯಾಗಲಿದೆ. ರೈತರಿಗೆ ಕೈತುಂಬ ಬೆಳೆ ಬರುವುದಾಗಿ ಅರ್ಥ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/indias-first-vertical-lifting-bridge-ready-for-inauguration-know-whats-special/ https://kannadanewsnow.com/kannada/breaking-big-shock-for-coffee-lovers-price-hike-by-rs-5-soon-coffee-prices-hike/

Read More

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವಂತ ಶ್ರೀ ಮೈಲಾರ ಲಿಂಗೇಶ್ವರನ ಸನ್ನಿಧಿಯಲ್ಲಿ ವರ್ಷದ ಭವಿಷ್ಯ ವಾಣಿಯಾದಂತ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಗೊರವಯ್ಯ ತುಂಬಿದ ಕೊಡ ತುಳುಕೀತಲೇ ಪರಾಕ್ ಎಂಬುದಾಗಿ ಕಾರ್ಣಿಕ ನುಡಿ ನುಡಿದಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಶ್ರೀ ಕ್ಷೇತ್ರ ಮೈಲಾರ ಲಿಂಗೇಶ್ವರ ಜಾತ್ರೆಯನ್ನು ಇಂದು ನಡೆಸಲಾಯಿತು. ಈ ಬಾರಿ ರಾಮಣ್ಣ ಗೊರವಯ್ಯ ವರ್ಷದ ಭವಿಷ್ಯವಾಣಿ ನುಡಿದಿದ್ದಾರೆ. ತುಂಬೀದ ಕೊಡ ತುಳುಕೀತಲೇ ಪರಾಕ್ ಅಂತ ಕಾರ್ಣಿಕ ನುಡಿದಿದ್ದಾರೆ. ಇದನ್ನು ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಿಸಿದ್ದು, ರಾಜ್ಯ, ದೇಶದಲ್ಲಿ ಉತ್ತಮ ಮಳೆ ಬೆಳೆಯಾಗಲಿದೆ ಎಂಬುದಾಗಿ ಅರ್ಥವಾಗಿದೆ ಎಂದಿದ್ದಾರೆ. ಒಟ್ಟಾರೆ ಈ ಭಾರಿ ರಾಜ್ಯ, ದೇಶದಲ್ಲಿ ತುಂಬಿದ ಕೊಡ ತುಳುಕೀತಲೇ ಪರಾಕ್ ಎನ್ನುವಂತೆ ಉತ್ತಮ ಮಳೆ ಬೆಳೆಯಾಗಲಿದೆ ಎಂಬುದಾಗಿ ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. https://kannadanewsnow.com/kannada/invest-karnataka-2025-conclave-to-invest-rs-10-27-lakh-crore-in-karnataka-dk-shivakumar/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ…

Read More

ಮಂಡ್ಯ : ಮಹಡಿ ಮನೆ ಮೇಲೆ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 25 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿರುವ ಮದ್ದೂರು ಗ್ರಾಮಾಂತರ ಪೋಲೀಸರು ಶುಕ್ರವಾರ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪ ಪೋಲೀಸ್ ಠಾಣಾ ವ್ಯಾಪ್ತಿಯ ಹಳೇಹಳ್ಳಿ ಗ್ರಾಮದ ಕರಿಯಪ್ಪ ಬಿನ್ ನಿಂಗೇಗೌಡ ಎಂಬುವವರು ಮನೆಯ ಮೇಲಿನ ಪ್ಲಾಸ್ಟಿಕ್ ಪಾಟ್ ಗಳಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ವೆಂಕಟೇಗೌಡ ಅವರ ಮಾರ್ಗದರ್ಶನದಲ್ಲಿ ಕೊಪ್ಪ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ದಾಳಿ ಮಾಡಿ 3 ಕೆಜಿ 664 ಗ್ರಾಂನಷ್ಟು ಗಾಂಜಾ ಸೊಪ್ಪನ್ನು ಪೋಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಕಲಂ 20(ಎ)(i) ಎನ್ಡಿಪಿಸಿ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದ್ದು, ಕೊಪ್ಪ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/over-5000-industry-representatives-attend-karnataka-investors-meet/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಬೆಂಗಳೂರು: ಕಳೆದ ಮೂರು ದಿನಗಳಿಂದ ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ `ಜಾಗತಿಕ ಹೂಡಿಕೆದಾರರ ಸಮಾವೇಶ’ಕ್ಕೆ ಶುಕ್ರವಾರ ನಡೆದ ವರ್ಣರಂಜಿತ ಸಮಾರಂಭದಲ್ಲಿ ತೆರೆ ಬಿತ್ತು. 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳು, ಕೈಗಾರಿಕಾ ಪರಿಣತರು ಮತ್ತು ರಾಜ್ಯ ಹಾಗೂ ಕೇಂದ್ರ ಸರಕಾರಗಳ ಮಟ್ಟದ ನೀತಿ ನಿರೂಪಕರು ಸಕ್ರಿಯವಾಗಿ ಪಾಲ್ಗೊಂಡಿದ್ದ ಸಮಾವೇಶವು ಬಂಡವಾಳ ಹೂಡಿಕೆಗೆ ಕರ್ನಾಟಕವೇ ಪ್ರಶಸ್ತ ತಾಣ ಎನ್ನುವ ಸಂದೇಶ ತಲುಪಿಸುವಲ್ಲಿ ಯಶಸ್ವಿಯಾಯಿತು. ಗಣ್ಯಾತಿಗಣ್ಯರು ಮತ್ತು ರಾಜ್ಯ ಸಚಿವ ಸಂಪುಟದ ಹತ್ತಾರು ಸಚಿವರು ಹಾಜರಿದ್ದ ಸಮಾರೋಪ ಸಮಾರಂಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರು 2025-30ರ ಅವಧಿಯವರೆಗಿನ ಪರಿಸರಸ್ನೇಹಿ ಸಾರಿಗೆ ನೀತಿಯನ್ನು ಬಿಡುಗಡೆಗೊಳಿಸಿದರು. ಜತೆಗೆ ಇದೇ ವೇದಿಕೆಯಲ್ಲಿ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕಾ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಉದ್ಯಮ ಸಂಸ್ಥೆಗಳಿಗೆ `ವೆಂಚುರೈಸ್ ಚಾಲೆಂಜ್’ ಪುರಸ್ಕಾರಗಳನ್ನು ಪ್ರದಾನ ಮಾಡಲಾಯಿತು. ಇದಕ್ಕೂ ಮೊದಲು ಇದೇ ಪ್ರಥಮ ಬಾರಿಗೆ ಸಾಧಕ ಕಂಪನಿಗಳಿಗೆ `ಇನ್ವೆಸ್ಟ್ ಕರ್ನಾಟಕ’, ಎಸ್ಎಂಇ ಕನೆಕ್ಟ್, ವೆಂಚುರೈಸ್ ಚಾಲೆಂಜ್ ಪುರಸ್ಕಾರಗಳನ್ನು ಪ್ರದಾನ…

Read More

ಪಣಜಿ: 2017 ರಲ್ಲಿ ಐರಿಶ್-ಬ್ರಿಟಿಷ್ ಪ್ರಜೆ ಡೇನಿಯಲ್ ಮೆಕ್ಲಾಫಿನ್ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 31 ವರ್ಷದ ವ್ಯಕ್ತಿಯನ್ನು ಗೋವಾ ನ್ಯಾಯಾಲಯ ಶುಕ್ರವಾರ ದೋಷಿ ಎಂದು ಘೋಷಿಸಿದೆ. ಮಾರ್ಗೋ ಪಟ್ಟಣದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕ್ಷಮಾ ಜೋಶಿ ಅವರು ಸ್ಥಳೀಯ ನಿವಾಸಿ ವಿಕತ್ ಭಗತ್ ಅವರನ್ನು ಅವಳಿ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದಾರೆ ಎಂದು ಮೃತರ ತಾಯಿ ಆಂಡ್ರಿಯಾ ಬ್ರಾನಿಗನ್ ಅವರನ್ನು ಪ್ರತಿನಿಧಿಸುವ ವಕೀಲ ವಿಕ್ರಮ್ ವರ್ಮಾ ತಿಳಿಸಿದ್ದಾರೆ. ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಸೋಮವಾರ (ಫೆಬ್ರವರಿ 17) ಪ್ರಕಟಿಸಲಿದೆ ಎಂದು ಅವರು ಹೇಳಿದರು. ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಗಳಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ನ್ಯಾಯಾಲಯದಿಂದ ಕೋರಿದ್ದಾರೆ ಎಂದು ವರ್ಮಾ ಮಾಹಿತಿ ನೀಡಿದರು. https://kannadanewsnow.com/kannada/new-industrial-policy-will-create-20-lakh-jobs-in-next-5-years-priyank-kharge/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಬೆಂಗಳೂರು: ಕರ್ನಾಟಕ ಸರ್ಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ  20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನ್ಲಿ ಕಳೆದ ಮೂರು ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದ ಅವರು, ರಾಜ್ಯ ಸರ್ಕಾರದ 30ಕ್ಕೂ ಮಿಗಿಲು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಟಿಗೊಳ್ಳಲಿದ್ದು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಕಕಿಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದೂ ಹೇಳಿದರು. ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿಯೇ ಅತ್ಯುನ್ನತ ಸ್ಥಾಯಿಯಲ್ಲಿದ್ದು, ಜೈವಿಕ ತಂತ್ತಜ್ಞಾನ, ನಾವೀನ್ಯತೆ, ಎಂಜನಿಯರಿಂಗ್‌, ಗೆಫೆಕ್ಸ್‌, ಹೆಲ್ತ್‌ಕೇರ್‌ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಿದೆ ಎಂದೂ ಪ್ರಿಯಾಂಕ್‌ ಖರ್ಗೆ ಹೇಳಿದರು. ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ಎಲ್ಲಾ ಅನುಕೂಲತೆಗಳೂ ಇದ್ದು, ಉದ್ದಿಮೆಗಳ ಸ್ಥಾಪನೆಗೆ ರಾಜ್ಯ ಎಲ್ಲಾ ರೀತಿಯಲ್ಲಿ ಒತ್ತಾಸೆ ನೀಡುತ್ತದೆ,…

Read More