Author: kannadanewsnow09

ಬೆಂಗಳೂರು: ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದರು. https://twitter.com/siddaramaiah/status/1907373145008328929 ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು. ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. https://twitter.com/siddaramaiah/status/1907359146967703722 ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ…

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಇಡಿ ಕೂಡ ಎಂಟ್ರಿಯಾಗಿತ್ತು. ಇದೀಗ ಇಡಿಯಿಂದ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮುಡಾ ಹಗರಣದ ಇತರೆ ಆರೋಪಿಗಳಿಗೂ ನಡುಕ ಶುರುವಾದಂತೆ ಆಗಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಲಾಯಿತು. ಡಿ.ಬಿ ನಟೇಶ್ ಅವರ ಹೇಳಿಕೆಯನ್ನು ಆಧರಿಸಿ ಹೈಕೋರ್ಟ್ ನ್ಯಾಯಪೀಠವು ಮುಡಾ ಹಗರಣ ಸಂಬಂಧ ಇಡಿ ತನಿಖೆಗೆ ಅನುಮತಿ ನೀಡಿದೆ. ಮುಡಾ ಪ್ರಕರಣದಲ್ಲಿ ಇಡಿ ತನಿಖೆಗೆ ಹೈಕೋರ್ಟ್ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ವಿಭಾಗೀಯ ಪೀಠವು ಅನುಮತಿ ನೀಡಿದೆ. ಹೀಗಾಗಿ ಮುಡಾ ಪ್ರಕರಣ ಈಗ ಮತ್ತೊಂದು ತಿರುವು ಪಡೆದಂತೆ ಆಗಿದೆ. ಇನ್ನೂ ಡಾ.ಡಿಬಿ ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶಕ್ಕೆ ತಡೆ ನೀಡಿಲ್ಲ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸಿದೆ. ಆದರೇ ಡಿ.ಬಿ ನಟೇಶ್ ಹೇಳಿಕೆ ಆಧರಿಸಿ ಇಡಿ ತನಿಖೆ ಮುದುವರೆಸಬಹುದು ಎಂಬುದಾಗಿ ಸಿಜೆ ಅಂಜಾರಿಯಾ, ನ್ಯಾಯಮೂರ್ತಿ ಅರವಿಂದ್ ಅವರಿದ್ದಂತ…

Read More

ರಾಯಚೂರು: ಜೆಡಿಎಸ್ ಶಾಸಕಿ ಕರೆಮ್ಮ ಪುತ್ರಿ ಗೌರಿಯವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಿಯ್ಯಾಪುರ ಕ್ರಾಸ್ ಬಳಿಯಲ್ಲಿ ಜೆಡಿಎಸ್ ಶಾಸಕ ಕರೆಮ್ಮ ಜಿ ನಾಯಕ್ ಅವರ ಪುತ್ರಿ ಗೌರಿ ಬೈಕ್ ಒಂದಕ್ಕೆ ಕಾರನ್ನು ಡಿಕ್ಕಿ ಹೊಡೆದಿದ್ದಾರೆ. ಶಾಸಕಿ ಪುತ್ರಿ ಕಾರು ಡಿಕ್ಕಿಯಾಗಿ ಆಂಧ್ರಪ್ರದೇಶ ಮೂಲದ ಬೈಕ್ ಸವಾರ ಕೋಮಿಶೆಟ್ಟಿ ಕೃಷ್ಣ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬೆಳಗ್ಗೆಯಿಂದ ನೀರಿಗಾಗಿ ಪಾದಯಾತ್ರೆಯನ್ನು ಶಾಸಕಿ ಕರೆಮ್ಮ ನಡೆಸುತ್ತಿದ್ದರು. ಅತ್ತ ಪಾದಯಾತ್ರೆ ಶುರುವಾದ ಬಳಿಕ ಶಾಸಕಿ ಕರೆಮ್ಮ ಅವರ ಪುತ್ರಿ ಹೊರಟಿದ್ದರು. ಈ ವೇಳೆಯಲ್ಲಿ ಶಾಸಕಿ ಕರೆಮ್ಮ ಜಿ ನಾಯಕರ ಪುತ್ರಿ ಗೌರಿ ಕಾರು ಅಪಘಾತವಾಗಿದೆ. ಶಾಸಕಿ ಪುತ್ರಿ ಗೌರಿ ಕಾರು ಡಿಕ್ಕಿಯಾದಂತ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ಕಂಡಂತ ನೆಟ್ಟಿಗರು ಜೆಡಿಎಸ್ ಶಾಸಕಿ ವಿರುದ್ಧ ಆಕ್ರೋಶವನ್ನು…

Read More

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ ಶೇ.30ರಷ್ಟನ್ನು, ಅಂದರೆ ₹123 ಕೋಟಿಯನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ. ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ 362 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು. ಆ ಪೈಕಿ 108 ಕೋಟಿ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವೈಯಕ್ತಿಕ ವಿಚಾರಕ್ಕೆ ಉಂಟಾದಂತ ಜಗಳ ತಾರಕಕ್ಕೇರಿದಂತ ವೇಳೆಯಲ್ಲಿ ಗುದ್ದಲಿಯಿಂದಲೇ ಹೊಡೆದು ಸ್ನೇಹಿತನನ್ನು ಕೊಂದಿರುವಂತ ಬೆಚ್ಚಿ ಬೀಳಿಸೋ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ ತಾವರೆಕೊಪ್ಪದಲ್ಲಿ ವೈಯಕ್ತಿಕ ವಿಚಾರಕ್ಕೆ ದೇವರಾಜ್ ಹಾಗೂ ವೆಂಕಟೇಶ್ ಎಂಬುವರ ನಡುವೆ ಜಗಳ ಉಂಟಾಗಿದೆ. ಜಗಳ ತಾರಕ್ಕೇರಿದಂತ ಸಂದರ್ಭದಲ್ಲಿ ಆರೋಪಿ ವೆಂಕಟೇಶ್ ಸ್ನೇಹಿತ ದೇವರಾಜನನ್ನು ಗುದ್ದಲಿಯಿಂದ ಹೊಡೆದಿದ್ದಾನೆ. ಗುದ್ದಲಿಯಿಂದ ಸ್ನೇಹಿತ ದೇವರಾಜ್(31) ಹೊಡೆದ ಪರಿಣಾಮ ಸ್ಥಳದಲ್ಲೇ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿ ವೆಂಕಟೇಶ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/breaking-muda-case-in-trouble-for-cm-again-ed-files-petition-seeking-rejection-of-lokayukta-report/ https://kannadanewsnow.com/kannada/state-government-orders-change-working-hours-of-government-offices-in-the-wake-of-scorching-heat/

Read More

ಬೆಂಗಳೂರು: ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಿದ್ದಾರೆ. ಇಂದು ಮಧ್ಯಾಹ್ನ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಭೇಟಿಯಾಗಿರುವಂತ ಅವರು, ನಾಳೆ ಮತ್ತಿಬ್ಬರು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ಮುಖ್ಯಮಂತ್ರಿ ಕಾರ್ಯಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು ನಾಳೆ ಮಧ್ಯಾಹ್ನ 12.30ಕ್ಕೆ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಸಿಎಂ ಸಿದ್ಧರಾಮಯ್ಯ ಅವರು ಭೇಟಿಯಾಗುತ್ತಿರುವುದಾಗಿ ತಿಳಿಸಿದೆ. ಇನ್ನೂ ಮಧ್ಯಾಹ್ನ 2.30ಕ್ಕೆ ಕೇಂದ್ರ ವಿಮಾನಯಾನ ಸಚಿವ ಕೆ.ರಾಂಮೋಹನ್ ನಾಯ್ಡು ಅವರನ್ನು ದೆಹಲಿಯ ರಾಜೀವ್ ಗಾಂಧಿ ಭವನದಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ರಾಜ್ಯದ ಜಲ ವಿವಾದಗಳು, ನೀರಿನ ಸಮಸ್ಯೆ ಸಂಬಂಧ ಸಿಎಂ ಸಿದ್ಧರಾಮಯ್ಯ ಚರ್ಚೆ ನಡೆಸಿದರೇ, ವಿಮಾನಯಾನ ಸಚಿವರೊಂದಿಗೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸೋ ಸಾಧ್ಯತೆ ಇದೆ. https://kannadanewsnow.com/kannada/bjp-begins-sit-in-protest-against-price-rise-at-freedom-park-in-bengaluru/ https://kannadanewsnow.com/kannada/breaking-muda-case-in-trouble-for-cm-again-ed-files-petition-seeking-rejection-of-lokayukta-report/

Read More

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನುಡಿದಂತೆ ನಡೆದ ಸರಕಾರ ಎಂದು ಜಾಹೀರಾತು ನೀಡುತ್ತಿದ್ದಾರೆ. ಇದು ಮನುಷ್ಯತ್ವ ಇರುವ ಸರಕಾರ ಅಲ್ಲ; ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ಗ್ಯಾರಂಟಿ ಅನುಷ್ಠಾನ ಮಾಡುವುದಾಗಿ ಹೇಳಿದ್ದರು. ಆದರೆ, ತಿಂಗಳುಗಳೇ ಕಳೆದರೂ ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನ ಆಗಿಲ್ಲ ಎಂದು ಆಕ್ಷೇಪಿಸಿದರು. ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ.. ಮುಖ್ಯಮಂತ್ರಿಗಳೇ ದಯವಿಟ್ಟು ನಿಮ್ಮ ಎ.ಸಿ. ರೂಮಿನಿಂದ ಹೊರಕ್ಕೆ ಬನ್ನಿ. ನೀವು ಬೆಂಗಳೂರಿನ ಸಿಎಂ ಅಲ್ಲ; ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸಚಿವರ ಜೊತೆ ಪ್ರವಾಸ ಮಾಡಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು. ಸಿದ್ದರಾಮಯ್ಯನವರೇ, ಹಿಂದೆ ರಾಜ ಮಹಾರಾಜರು…

Read More

ಬೆಳಗಾವಿ: ಜಿಲ್ಲೆಯಲ್ಲಿ ಶಾಸಕ ರಾಜು ಕಾಗೆ ಸಹೋದರ ಪುತ್ರನಿಂದ ಕಾರು ಅಪಘಾತ ಮಾಡಲಾಗಿದೆ. ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದರೇ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಗೋಕಾಕ್ ಮೂಲದ ಬಸವರಾಜ ಪುಡಕಲಕಟ್ಟಿ(22) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ನಲ್ಲಿ ತೆರಳುತ್ತಿದ್ದಂತ ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ. ಸಣ್ಣವಿಠ್ಠಲ ದುರದುಂಡಿ, ನಿಂಗಪ್ಪ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬೆಳಗಾವಿಯ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸವರಾಜ ಮೃತದೇಹವನ್ನು ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಕಾರು ಚಲಾಯಿಸುತ್ತಿದ್ದಂತ ರಾಜು ಕಾಗೆ ಅವರ ಸಹೋರನ ಪುತ್ರ ಶ್ರೀಪಾದ್ ಎಂಬುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-government-orders-change-working-hours-of-government-offices-in-the-wake-of-scorching-heat/ https://kannadanewsnow.com/kannada/breaking-muda-case-in-trouble-for-cm-again-ed-files-petition-seeking-rejection-of-lokayukta-report/

Read More

ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ…

Read More