Author: kannadanewsnow09

ಬೆಂಗಳೂರು : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಇಂದು ತಮ್ಮನ್ನು ಭೇಟಿ ಮಾಡಿದ ಅಂಗನವಾಡಿ ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗಕ್ಕೆ ಈ ಭರವಸೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ 11500, 10,000 ಹಾಗೂ ಸಹಾಯಕಿಯರಿಗೆ 6000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದರು. ಕೇಂದ್ರದಿಂದ ಬರುತ್ತಿರುವ ಅನುದಾನ ಬರುತ್ತಿಲ್ಲವಾದ್ದರಿಂದ ಆಗುತ್ತಿರುವ ಸಮಸ್ಯೆಗಳನ್ನೂ ಕಾರ್ಯಕರ್ತೆಯರು ಮುಂದಿಟ್ಟು ಸರ್ಕಾರದ ನೆರವು ಕೋರಿದರು. ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1000 ರೂ ಹೆಚ್ಚಿಸುವಂತೆ ಕೋರಿದರು.…

Read More

ಮಂಗಳೂರು: ನಗರದಲ್ಲಿನ ಮೆಸ್ಕಾಂ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಂತ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಿಂದ ಹಲ್ಲೆ ನಡೆಸಿದ್ದರು. ಮಾವನ ಮೇಲೆ ರಕ್ಕಸ ಕೃತ್ಯವನ್ನು ಎಸಗಿದ್ದು ಮನೆಯಲ್ಲಿನ ಸಿಸಿಟಿವಿ ದೃಶ್ಯಾವಳಿಯಿಂದ ಬಹಿರಂಗವಾಗಿತ್ತು. ಈ ವೀಡಿಯೋ ವೈರಲ್ ಕೂಡ ಆಗಿತ್ತು. ಈ ಬೆನ್ನಲ್ಲೇ ಮಾವನ ಮೇಲೆ ಹಲ್ಲೆ ನಡೆಸಿದಂತ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕುಲಶೇಖರ ಹಾಲಿ ಡೇರಿಯ ಸಮೀಪದಲ್ಲಿದ್ದಂತ ಮನೆಯೊಂದರಲ್ಲಿ 87 ವರ್ಷದ ವೃದ್ಧ ಪದ್ಮನಾಭ ಮೇಲೆ ಸೊಸೆ ಉಮಾಶಂಕರಿ ವಾಕಿಂಗ್ ಸ್ಟಿಕ್ ನಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ದೂರನ್ನು ಆಧರಿಸಿ ಮೆಸ್ಕಾಂ ಸಿಬ್ಬಂದಿ ಉಮಾಶಂಕರಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂದಹಾಗೆ ಹಲ್ಲೆಗೊಳಗಾದ ವೃದ್ಧ ಪದ್ಮನಾಭ ಅವರ ಪುತ್ರ ಪ್ರೀತಮ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಹೀಗಾಗಿ ಕುಲಶೇಖರ ಹಾಲಿನ ಡೇರಿ ಬಳಿಯ ಮನೆಯಲ್ಲಿ ಪದ್ಮನಾಭ ಹಾಗೂ ಅವರ ಸೊಸೆ ಅಂದರೆ ಮಗನ ಪತ್ನಿ ಉಮಾಶಂಕರಿ ಮನೆಯಲ್ಲಿ ವಾಸವಾಗಿದ್ದರು. ಮಾವ ಮನೆಯಲ್ಲಿ ಇರುವಂತ ವಿಚಾರಕ್ಕಾಗಿಯೇ ದಿನನಿತ್ಯ…

Read More

ದೇವನಹಳ್ಳಿ : ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ನಾವು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು‌ . ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು ಎನ್ನುತ್ತಾ, ನಾವು ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಕೈ…

Read More

ಬೆಂಗಳೂರು : ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭರವಸೆ ನೀಡಿದರು. ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು. https://kannadanewsnow.com/kannada/note-from-march-15-onwards-if-drinking-water-is-used-for-other-purposes-in-bengaluru-there-will-be-on-the-spot-penalty/ https://kannadanewsnow.com/kannada/central-government-issues-notification-regarding-implementation-of-caa/

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗಾರ್ಬೆಜ್ ಸಿಟಿ ನಂತ್ರ, ನೀರಿನ ಸಮಸ್ಯೆ ಉಲ್ಭಣಗೊಂಡಿದೆ. ಹನಿ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ, ನಗರದಲ್ಲಿ ಅನಗತ್ಯ ಉದ್ದೇಶಗಳಿಗಾಗಿ ನೀರು ಪೋಲು ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ದಂಡದ ಎಚ್ಚರಿಕೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಜಲಮಂಡಳಿಯ ಅಧ್ಯಕ್ಷ ಡಾ.ವಿ ರಾಮ್ ಪ್ರಸಾತ್ ಮನೋಹರ್ ಅವರು, ಕುಡಿಯುವ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು. ನೀರಿನ ಸಮಸ್ಯೆ ಇರುವ ಈ ಸಂದರ್ಭದಲ್ಲಿ ಮಿತವಾಗಿ ನೀರನ್ನು ಬಳಸುವಂತೆ ಮನವಿ ಮಾಡಿದ್ದಾರೆ. ಕಾವೇರಿ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಿದರೆ ದಂಡ ವಿಧಿಸುವುದಾಗಿ ಆದೇಶಿಸಲಾಗಿದೆ. ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸುವುದು ಕಂಡುಬಂದರೆ, ಮಾರ್ಚ್‌ 15ರಿಂದ ಸ್ಥಳದಲ್ಲೇ ದಂಡ ವಿಧಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಸ್ಥಳ ದಂಡ ಶುಲ್ಕದ ನಮೂನೆಯನ್ನು ಸಿದ್ಧಪಡಿಸಲಾಗುತ್ತಿದೆ. ಸಿಬ್ಬಂದಿ ಬೆಳಗ್ಗೆ ಮತ್ತು ಸಂಜೆ ಎರಡು ಪಾಳಿಯಲ್ಲಿ ವಾರ್ಡ್‌ಗಳಲ್ಲಿ ಸಂಚರಿಸಿ ಪರಿಶೀಲನೆ ಮಾಡುತ್ತಾರೆ. ಸಾರ್ವಜನಿಕರು 1916 ಸಹಾಯವಾಣಿಗೂ ಕರೆ ಮಾಡಿ ನೀರಿನ ದುರ್ಬಳಕೆ ಬಗ್ಗೆ ಮಾಹಿತಿ ನೀಡಬಹುದು ಎಂದು…

Read More

ಬೆಂಗಳೂರು: ನಗರದಲ್ಲಿ ನೀರಿನ ಆಹಾಕಾರ ಎದ್ದಿದೆ. ಇದರ ನಡುವೆ ಅಪಾರ್ಮೆಂಟ್ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 35 ಸಾವಿರ ಲೀಟರ್ ನೀರು ಸರಬರಾಜು ಮಾಡಲಾಗುವುದು ಎಂಬುದಾಗಿ ಜಲಮಂಡಳಿ ತಿಳಿಸಿದೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್ ಪ್ರಸಾತ್ ಮನೋಹರ್ ಅವರು, ಪಾಲಿಕೆ ನಿಯಮಾವಳಿಗಳ ಪ್ರಕಾರ ಬೆಂಗಳೂರು ಹೊರವಲಯದ ಅಪಾರ್ಟ್ ಮೆಂಟ್ ಗೆ ದೈನಂದಿನ ಕುಡಿಯುವ ಮತ್ತು ದೈನಂದಿನ ಅಡುಗೆ ಅಗತ್ಯತೆಗಳಿಗಾಗಿ ವಾರಕ್ಕೆ 35 ಸಾವಿರ ಲೀಟರ್ ಕಾವೇರಿ ನೀರನ್ನು ಸರಬರಾದು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಹೊರವಲಯದ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಪರಿಶೀಲಿಸಿ, ನಾಗರಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಪಾಲಿಕೆ ನಿಯಮಾವಳಿಗಳ ಪ್ರಕಾರ, ಅಪಾರ್ಟ್‌ಮೆಂಟ್‌ಗೆ ದೈನಂದಿನ ಕುಡಿಯುವ ಮತ್ತು ದೈನಂದಿನ ಅಡುಗೆ ಅಗತ್ಯಗಳಿಗಾಗಿ ವಾರಕ್ಕೆ 35 ಸಾವಿರ ಲೀಟರ್‌ ಕಾವೇರಿ ನೀರನ್ನು ಸರಬರಾಜು ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. https://kannadanewsnow.com/kannada/sringeri-pocso-case-four-accused-including-mother-fined-rs-25000-sentenced-to-20-years-in-jail/ https://kannadanewsnow.com/kannada/central-government-issues-notification-regarding-implementation-of-caa/

Read More

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ನಿಯಮಗಳನ್ನು ಗೃಹ ಸಚಿವಾಲಯ (ಎಂಎಚ್ಎ) ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ತ್ವರಿತ ಪೌರತ್ವಕ್ಕೆ ದಾರಿ ಮಾಡಿಕೊಟ್ಟಿದೆ. ಸಿಎಎ ನಿಬಂಧನೆಗಳ ಅಡಿಯಲ್ಲಿ, ಈ ಮೂರು ನೆರೆಯ ದೇಶಗಳಿಂದ 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಭಾರತಕ್ಕೆ ಬಂದ ಆರು ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು, ಜೈನರು, ಬೌದ್ಧರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವ ನೀಡಲಾಗುವುದು. ಹೊಸದಾಗಿ ಅಧಿಸೂಚಿತ ನಿಯಮಗಳು ಅರ್ಜಿ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತವೆ. ಅರ್ಹ ವಲಸಿಗರಿಗೆ ಮೀಸಲಾದ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ. https://twitter.com/ANI/status/1767169391026638878 ಸಿಎಎ ಅಡಿಯಲ್ಲಿ ಆನ್ಲೈನ್ ಅರ್ಜಿ ಪ್ರಕ್ರಿಯೆ, ಅನುಷ್ಠಾನಕ್ಕೆ ವಿರೋಧ ನಿಯಮಗಳ ಒಂದು ಗಮನಾರ್ಹ ಅಂಶವೆಂದರೆ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಸ್ಥಳಾಂತರಗೊಂಡ ಅಲ್ಪಸಂಖ್ಯಾತರಿಗೆ ಅರ್ಜಿ ಪ್ರಕ್ರಿಯೆಯ ಸಮಯದಲ್ಲಿ ಯಾವುದೇ ದಾಖಲೆಗಳನ್ನು ಒದಗಿಸುವುದರಿಂದ ವಿನಾಯಿತಿ ನೀಡಲಾಗಿದೆ. ಈ ಕ್ರಮವು ತಮ್ಮ ತಾಯ್ನಾಡಿನಲ್ಲಿ ಕಿರುಕುಳವನ್ನು…

Read More

ಬೆಂಗಳೂರು: ಭಾರತದ ಪ್ರಜಾಪ್ರಭುತ್ವವನ್ನು ಕಾಪಿಟ್ಟುಕೊಂಡು ಬಂದಿರುವ ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವುದು ದೇಶದ್ರೋಹದ ಹೇಳಿಕೆಯಾಗಿದೆ. ಪದೇಪದೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್‌ ಹೆಗಡೆ ವಿರುದ್ಧ ರಾಜ್ಯ ಸರ್ಕಾರ ಸ್ವಯಂ ಪ್ರೇರಿತ ದೂರು (ಸುಮೊಟೊ) ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸೀಟು ಗೆಲ್ಲಬೇಕು. ರಾಜ್ಯಸಭೆಯಲ್ಲೂ ನಮಗೆ ಬಹುಮತ ಸಿಕ್ಕಿದರೆ ಸಂವಿಧಾನ ತಿದ್ದುಪಡಿ ಮಾಡಲಾಗುತ್ತೆ. ಆಗ ಇದೆ ನೋಡಿ ನಿಜವಾದ ಮಾರಿ ಹಬ್ಬ ಎಂದು ಅನಂತ್ ಕುಮಾರ್ ಹೇಳಿಕೆ ನೀಡಿರುವ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜನತೆ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ದಬ್ಬಿದ್ದಾರೆ. ಇದೀಗ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ಹೊತ್ತಿರುವ ರಾಜ್ಯ ಸರ್ಕಾರ ಅನಂತ…

Read More

ಹಾವೇರಿ: ಜಿಲ್ಲೆಯಲ್ಲಿ ಬ್ಯಾಡಗಿ ಮೆಣಸಿನ ಕಾಯಿ ಬೆಲೆ ಕುಸಿತಗೊಂಡ ಪರಿಣಾಮ, ರೈತರು ತಮ್ಮ ಕಿಚ್ಚು ಹೊರ ಹಾಕಿದ್ದಾರೆ. ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿರುವಂತ ರೈತರು, ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಒಣಮೆಣಿಸಿನ ಕಾಯಿ ಬೆಲೆ ಕುಸಿತಗೊಂಡ ಪರಿಣಾಮ ರೈತರ ಆಕ್ರೋಶದ ಕಿಚ್ಚಿನ ಕಟ್ಟೆ ಹೊಡೆದಿದೆ. ಬ್ಯಾಡಗಿ ಮೆಣಸಿನ ಕಾಯಿಯ ಬೆಲೆ ಕುಸಿತಗೊಂಡ ಪರಿಣಾಮ, ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಎಪಿಎಂಸಿಯಲ್ಲಿನ ಅಧಿಕಾರಿಗಳ ಕಾರಿಗೂ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ವಾರ ಪ್ರತಿ ಕ್ವಿಂಟಾಲ್ ಗೆ ಬ್ಯಾಡಗಿ ಮೆಣಸಿನ ಕಾಯಿಯ ಬೆಲೆ 20 ಸಾವಿರ ಇತ್ತು. ಈಗ ಕ್ವಿಂಟಾಲ್ ಗೆ 12 ಸಾವಿರಕ್ಕೆ ಇಳಿಕೆ ಕಂಡಿದೆ. ಈ ಹಿನ್ನಲೆಯಲ್ಲಿ ಮಾರುಕಟ್ಟೆಯ ಮೇಲೆ ಕಲ್ಲು ತೂರಾಟವನ್ನು ಮಾಡಿದ್ದಾರೆ. https://kannadanewsnow.com/kannada/applications-invited-for-skill-development-training-2/ https://kannadanewsnow.com/kannada/sringeri-pocso-case-four-accused-including-mother-fined-rs-25000-sentenced-to-20-years-in-jail/

Read More

ಶಿವಮೊಗ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರುಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಆಫ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಇಡಿಪಿ ಆನ್ ಸೆಲ್ಫ್ ಎಂಪ್ಲಾಯ್ಡ್ ಟೈಲರ್ 60 ದಿನ, ಬೌಟಿಕ್, ಅಸಿಸ್ಟೆಂಟ್ ಹೇರ್ ಥೆರಪಿಸ್ಟ್, ಫ್ಯಾಷನ್ ಡಿಸೈನರ್, ಹಾರ್ಡ್‍ವೇರ್ ರಿಪೇರ್ ಟೆಕ್ನೀಷಿಯನ್, ಹೇರ್ ಸ್ಟೈಲಿಸ್ಟ್, ಬ್ಯೂಟಿ ಥೆರಪಿಸ್ಟ್, ಡೊಮೆಸ್ಟಿಕ್ ಡಾಟಾಎಂಟ್ರಿ ಆಪರೇಟರ್, ಸೋಲಾರ್ ಪ್ಯಾನೆಲ್ ಇನ್ಸ್ಟಲೇಷನ್ ಆಂಡ್ ಸರ್ವಿಸ್ ತಲಾ 30 ದಿನಗಳ ತರಬೇತಿ ನೀಡಲಾಗುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08182 276776 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. https://kannadanewsnow.com/kannada/job-news-home-guards-invites-applications-to-fill-up-the-vacant-posts/ https://kannadanewsnow.com/kannada/sringeri-pocso-case-four-accused-including-mother-fined-rs-25000-sentenced-to-20-years-in-jail/

Read More