Author: kannadanewsnow09

ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಮೇಷ ರಾಶಿ ಇಂದಿನ ದಿನ ದೈಹಿಕ ಮತ್ತು ಮಾನಸಿಕ ಸಂತೋಷವು ಇಂದಿಗೂ ಉಳಿಯುತ್ತದೆ. ಉದ್ಯೋಗ-ವ್ಯವಹಾರದಲ್ಲಿ ನಿಮ್ಮ ಶ್ರಮವನ್ನು ಸರಿದೂಗಿಸಲಾಗುತ್ತದೆ. ಸರ್ಕಾರಿ ಕೆಲಸವನ್ನು ಪೂರ್ಣಗೊಳಿಸುವುದು ಸುಲಭವಾಗುತ್ತದೆ. ಯಾವುದೇ ಹೊಸ ಒಪ್ಪಂದವನ್ನು ಸಹ ಅಂತಿಮಗೊಳಿಸಬಹುದು. ಉದ್ಯೋಗದಲ್ಲಿ ಅಧಿಕಾರಿಯ ಪ್ರೋತ್ಸಾಹವು ನಿಮ್ಮ ಉತ್ಸಾಹವನ್ನು ಹೆಚ್ಚಿಸುತ್ತದೆ. ಸಾಮಾಜಿಕ ವಲಯದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಸಂಜೆ ಸಂಬಂಧಿಕರ ಆಗಮನದೊಂದಿಗೆ ಕುಟುಂಬದ ವಾತಾವರಣ ಆಹ್ಲಾದಕರವಾಗಿರುತ್ತದೆ. ವೈವಾಹಿಕ ಜೀವನವು ಸಂತೋಷದಿಂದ ಕೂಡಿರುತ್ತದೆ. ನಿಮ್ಮ ಜೀವನದ ಎಂತಹ ಸಮಸ್ಯೆಗೂ…

Read More

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲು ಇನ್ನು ಕೆಲ ದಿನಗಳಷ್ಟೇ ಬಾಕಿ ಉಳಿದಿರುವಂತೆಯೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಮುಖಂಡರ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ಕರೆದಿದ್ದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಸೇರಿ ಕ್ಷೇತ್ರದ ಅನೇಕ ಮುಖಂಡರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಎಲ್ಲಾ ಮುಖಂಡರ ಅಭಿಪ್ರಾಯ ಆಲಿಸಿದ ಮಾಜಿ ಮುಖ್ಯಮಂತ್ರಿಗಳು; ಮುಖಂಡರಿಗೆ ಕೆಲ ಸ್ಪಷ್ಟ ಸೂಚನೆಗಳನ್ನು ಕೊಟ್ಟರಲ್ಲದೆ; ನಮ್ಮ ಕಾರ್ಯಕರ್ತರು, ಮುಖಂಡರು ಪಕ್ಷದ ಹಿತರಕ್ಷಣೆ ಬಗ್ಗೆ ಆತಂಕಪಡಬೇಕಾಗಿಲ್ಲ. ಕಹಿಯನ್ನು ಮರೆತು ಕೆಲಸ ಮಾಡೋಣ, ಹಿಂದೆ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಂಡು ಮುಂದೆ ಹೋಗೋಣ ಎಂದರು. ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ…

Read More

ಬೆಂಗಳೂರು: ನಾನು ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು  ಮಾಡಿದ ಇನ್ನೊಂದು ದೊಡ್ಡ ತಪ್ಪು ಎಂದು ಜೆಡಿಎಸ್ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಮೈತ್ರಿ ದೇವೇಗೌಡರು, ನರೇಂದ್ರ ಮೋದಿ ಅವರ ಮಟ್ಟದಲ್ಲಿ ಆಗಿದೆ. 2018ರ ಸರ್ಕಾರದ ಅವಧಿಯಲ್ಲಿ ಅದ ಕಹಿ ಅನುಭವ, ತುಮಕೂರಿನಲ್ಲಿ ದೇವೆಗೌಡರ ಸೋಲನ್ನು ನಾವು ಮರೆತಿಲ್ಲ. ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು ನಾವು ಮಾಡಿದ ಇನ್ನೊಂದು ದೊಡ್ಡ ತಪ್ಪು. ಅದನ್ನು ಸರಿ ಮಾಡಿಕೊಳ್ಳುವ ಕಾಲ ಸನ್ನಿಹಿತವಾಗಿದೆ, ಈ ಚುನಾವಣೆ ನಿರ್ಣಾಯಕ ಎಂದು  ಅವರು ಹೇಳಿದರು. ಇನ್ನು 45 ದಿನಗಳ ಕಾಲ ಪಕ್ಷದ ಪರವಾಗಿ ಪ್ರಚಾರ, ಕೆಲಸ ಮಾಡುತ್ತೇನೆ. ಮೈತ್ರಿಕೂಟದ ಪರವಾಗಿ ಕೆಲಸ ಮಾಡುತ್ತೇನೆ. ಒಳ್ಳೆಯ ಫಲಿತಾಂಶ ಬರಲು ಕಾಯಾ ವಾಚಾ ಮನಸಾ ಕೆಲಸ ಮಾಡುತ್ತೇನೆ. ನನಗೆ ಹಾಗೂ ಕುಮಾರಣ್ಣ ಅವರಿಗೆ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಅತೀವ ಒತ್ತಡವಿದೆ. ಇದನ್ನು ಪ್ರಾಮಾಣಿಕವಾಗಿ ನಿಮ್ಮ…

Read More

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ( Union Home Ministry ) ಇಂದು ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act -CAA) ನಿಯಮಗಳನ್ನು ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಇಂದು ರಾತ್ರಿ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ರಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಮಹತ್ವದ ಘೋಷಣೆ ಮಾಡಿದ್ದರು. ಈ ನಿಟ್ಟಿನಲ್ಲಿ ನಿಯಮಗಳನ್ನು ಹೊರಡಿಸಿದ ನಂತರ 2019 ರಲ್ಲಿ ಜಾರಿಗೆ ಬಂದ ಈ ಕಾನೂನನ್ನು ಲೋಕಸಭಾ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು. ಸಿಎಎ ಅಧಿಸೂಚನೆ ಚುನಾವಣೆಗೆ ಮೊದಲು ಬರಲಿದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ನಾನು ಇದನ್ನು ಸ್ಪಷ್ಟಪಡಿಸುತ್ತೇನೆ, ಸಿಎಎ ಯಾರ ಪೌರತ್ವವನ್ನು ತೆಗೆದುಕೊಳ್ಳುವ ಕಾನೂನು ಅಲ್ಲ ಎಂದು ಅವರು ಹೇಳಿದರು.…

Read More

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ದವಾಗಿದ್ದು, ಉಳಿದ್ದು ಸಿದ್ದಗೊಳ್ಳುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಈಗಾಗಲೇ ಒಂದು ಉದ್ಘಾಟಿಸಲಾಗಿದೆ. ಮತ್ತೊಂದು ಇಂದಿರಾ ಕ್ಯಾಂಟೀನ್ ಇಲ್ಲಿ ಬರಲಿದೆ. ವಿಮಾನ ನಿಲ್ದಾಣದಲ್ಲಿ 2 ಇಂದಿರಾ ಕ್ಯಾಂಟೀನ್ ಬರಲಿದೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್…

Read More

ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ ಅವರಿಂದ ಸ್ಪಷ್ಟನೆ ಕೇಳಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕಾರ್ಯಕರ್ತರೊಬ್ಬರು ಪ್ರಧಾನಮಂತ್ರಿಯವರಿಗೆ ಅವಮಾನಕರವಾಗಿ ಹೇಳಿಕೆ ನೀಡಿದ್ದಾರೆ. ನಮ್ಮ ಪಕ್ಷದಲ್ಲಿ ಇಂಥ ಚಟುವಟಿಕೆ ಆದರೆ ಅದನ್ನು ಗಮನಿಸಿ ತಕ್ಷಣದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ಸಂವಿಧಾನಕ್ಕೆ ತಲೆಬಾಗಿ ನಮಿಸಿ ಸಂಸತ್ತನ್ನು ಪ್ರವೇಶ ಮಾಡಿದವರು. ಆದರೆ, ಸಂವಿಧಾನಕ್ಕೆ ಗೌರವಿಸಿ ಸಂಸತ್ ಪ್ರವೇಶಿಸಿದ ಪ್ರಧಾನಿಯವರ ಕುರಿತು ಕಾಂಗ್ರೆಸ್ ಕಾರ್ಯಕರ್ತ ಇಷ್ಟೊಂದು ಅವಹೇಳನಕಾರಿಯಾಗಿ ಮಾತನಾಡಿದಾಗ ಆತನಿಗೆ ತಿಳಿಹೇಳುವ ಮತ್ತು ಆತನ ಹೇಳಿಕೆಯನ್ನು ಖಂಡಿಸುವ ಕನಿಷ್ಠ ವರ್ತನೆಯನ್ನು ಕಾಂಗ್ರೆಸ್ಸಿನ ಯಾವ ನಾಯಕರೂ ಮಾಡಿಲ್ಲ ಎಂದು ಆಕ್ಷೇಪಿಸಿದರು. ಗೌರವಸ್ಥರಾದ ಮಲ್ಲಿಕಾರ್ಜುನ ಖರ್ಗೆಯವರಿಗೂ ಇಂಥ ಮಾತುಗಳು…

Read More

ಮಂಗಳೂರು: ರಾಜ್ಯದಲ್ಲೊಂದು ರಕ್ಷಸ ಕೃತ್ಯ ಬಯಲಾಗಿದೆ. ಅದೇ ತನ್ನ ವೃದ್ಧ ಮಾವನನ್ನೇ ಸೊಸೆಯೊಬ್ಬಳು ಆತ ವಾಕಿಂಗ್ ಸ್ಟಿಕ್ ನಿಂದ ಅಮಾನವೀಯವಾಗಿ ಥಳಿಸಿರುವಂತ ಕೃತ್ಯ ಮಂಗಳೂರಲ್ಲಿ ನಡೆದಿದೆ. ಮಂಗಳೂರು ನಗರದ ಅತ್ತಾವರದ ಕೆಇಬಿಯಲ್ಲಿ ಅಧಿಕಾರಿಯಾಗಿ ಉಮಾಶಂಕರಿ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಅಧಿಕಾರಿಯಾಗಿದ್ದು, ಮಾನವೀಯತೆಯಿಂದ ವರ್ತಿಸಬೇಕಾಗಿದ್ದಂತ ಮಹಿಳೆ ಮಾತ್ರ, ಮಾಡಿರೋದು ರಕ್ಷಸ ಕೃತ್ಯ. ಮನೆಯಲ್ಲಿರುವಂತ ವೃದ್ಧ ಮಾನವನನ್ನು ಅವರ ವಾಕಿಂಗ್ ಸ್ಟಿಕ್ ಕಸಿದುಕೊಂಡು ಥಳಿಸಿ, ಹಲ್ಲೆ ಮಾಡಿರುವಂತ ಕೃತ್ಯ ಮನೆಯಲ್ಲಿದ್ದಂತ ಸಿಸಿಟಿವಿಯಲ್ಲಿನ ದೃಶ್ಯಾವಳಿಯಿಂದ ಬಯಲಾಗಿದೆ. ಸೊಸೆಯಿಂದ ಹಲ್ಲೆಗೊಳಗಾದಂತ ಪದ್ಮನಾಭ ಸುವರ್ಣ(87) ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಮನೆಗೆ ಬಂದಂತ ಪುತ್ರನಿಗೆ ತಂದೆ ಹೇಳಿದಾಗಿ ಪತ್ನಿ ಉಮಾಶಂಕರಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಜೊತೆಗೆ ಸಿಸಿಟಿವಿ ದೃಶ್ಯಾವಳಿಯನ್ನು ಪೊಲೀಸರಿಗೆ ದೂರಿನ ಜೊತೆಗೆ ಸಲ್ಲಿಸಿ, ಸೂಕ್ತ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದಾರೆ. ಅಂದಹಾಗೇ ವೃದ್ಧ ಮಾನವನನ್ನು ಸೊಸೆ ಉಮಾಶಂಕರಿ ಥಳಿಸುವಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವಂತ ವೀಡಿಯೋ ದೃಶ್ಯಾವಳಿಯಲ್ಲಿ ಮಂಗಳೂರು ನಗರದ ಅತ್ತಾವರದ…

Read More

ಮಾಲೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರಥ್ಯದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಕಾಳಜಿ ಹೊಂದಿದೆ. ಬಡವರ ಬಗ್ಗೆ ಕಾಳಜಿ ಇರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಾಲೂರು ತಾಲೂಕಿನ ಕೆ.ಜಿ.ಹಳ್ಳಿಯಲ್ಲಿ ಸೋಮವಾರ ನಡೆದ ಟೆಕಲ್ ಹೋಬಳಿ ಮಟ್ಟದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಅಂಗನವಾಡಿ, ಆಶಾ‌ ಕಾರ್ಯಕರ್ತೆಯರ ಶ್ರಮದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ ಎಂದರು. ಗ್ಯಾರಂಟಿ ಸಮಾವೇಶಗಳನ್ನ ನಾವು ಕಾಟಾಚಾರಕ್ಕೆ, ಕೇವಲ ಹೆಸರಿಗಾಗಿ ಮಾಡುತ್ತಿಲ್ಲ. ಯೋಜನೆಗಳು ಯಾರಿಗೆ ತಲುಪಲಿಲ್ಲ ಎಂದು ತಿಳಿದುಕೊಂಡು ಅವುಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶಕ್ಕಾಗಿ ಸಮಾವೇಶ ಮಾಡಲಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಮಹಿಳೆಯರ ಏಳಿಗೆಗೆ ಕೆಲಸ ಮಾಡುತ್ತಿದೆ. ಬಿಜೆಪಿಯವರ ರೀತಿ ಬರೀ ಮಾತನಾಡದೆ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಐದು ಗ್ಯಾರಂಟಿಗಳ ಪೈಕಿ ನನ್ನ ಇಲಾಖೆಗೆ ಸಂಬಂಧಿಸಿದ ಗೃಹಲಕ್ಷ್ಮಿಗಾಗಿ ಮಾಲೂರಿನ ತಾಲೂಕಿನಲ್ಲಿ ಪ್ರತಿ ತಿಂಗಳು 10 ಕೋಟಿ ವ್ಯಯಿಸಲಾಗುತ್ತಿದೆ ಎಂದು ಹೇಳಿದರು.…

Read More

ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಅವರ ವೈಯಕ್ತಿಕ ವಿಚಾರವೇ ಹೊರತು ಪಕ್ಷದ ವಿಚಾರ ಅಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಯಾವತ್ತೂ ಕೂಡ ಬಾಬಾ ಸಾಹೇಬ ಅಂಬೇಡ್ಕರರ ತತ್ವ, ಸಿದ್ಧಾಂತಗಳ ಜೊತೆ ಇದೆ. ನಮ್ಮ ದೇಶದಲ್ಲಿರುವ ಪ್ರತಿಯೊಬ್ಬರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆಯ ಮಾತೇ ಇಲ್ಲ ಎಂದು ಪ್ರಧಾನಿಯವರೂ ಹೇಳಿದ್ದಾರೆ; ಅಲ್ಲದೆ ಸಂವಿಧಾನಕ್ಕೆ ನಮಿಸಿ ಪ್ರಧಾನಿ ಅವರು ಅಧಿಕಾರ ಸ್ವೀಕರಿಸಿದವರು ಎಂದು ನೆನಪಿಸಿದರು. ಸಂಸದರಾದ ಅನಂತಕುಮಾರ್ ಹೆಗಡೆ ಅವರು ಬಹಳ ಹಿಂದೆ ‘ನಾವು ಬಂದಿರುವುದೇ ಸಂವಿಧಾನವನ್ನು ಬದಲಾವಣೆ ಮಾಡಲಿಕ್ಕೆ’ ಎಂದು ಹೇಳಿಕೆ ಕೊಟ್ಟಿದ್ದರು. ಆಗ ಅವರು ಸಚಿವರಾಗಿದ್ದರು. ಮಾನ್ಯ ಪ್ರಧಾನಮಂತ್ರಿ ಮೋದಿಜೀ ಅವರು ಅವರನ್ನು ಸದನಕ್ಕೆ ಕರೆಸಿ ಕ್ಷಮೆ…

Read More

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.15ರಂದು ಪ್ರಧಾನಿ ಮೋದಿಯವರು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿಲಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದಂತ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು, ಮಾರ್ಚ್.15ರಂದು ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಮಾ ಪ್ರಚಾರಕ್ಕೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಮಾರ್ಚ್.15ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಚಿಕ್ಕಬಳ್ಳಾಪುರದಲ್ಲಿ ಚಾಲನೆ ನೀಡಲಿದ್ದಾರೆ. ಮೋದಿಯವರು ಚಿಕ್ಕಬಳ್ಳಾಪುರಕ್ಕೆ ಬಂದು ಚಾಲನೆ ನೀಡುವುದಾಗಿ ಮಾಹಿತಿ ನೀಡಿದರು. https://kannadanewsnow.com/kannada/good-news-for-farmers-state-govt-distributes-mini-fodder-kits-free-of-cost/ https://kannadanewsnow.com/kannada/are-you-eating-gobi-manchuri-with-your-mouth-shut-if-so-read-this-news/

Read More