Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು.. ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ, ಪೂಜಾ ಕುಣಿತ, ಕಹಳೆ ವಾದ್ಯಗಳು ಆಕರ್ಷಿಸಿದವು. ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಹೊರರೋಗಿಗಳಿಗೆ ಹಣ್ಣುಹಂಪಲು, ಬ್ರೆಡ್, ಬಿಸ್ಕೆಟ್ ವಿತರಿಸಲಾಯಿತು. ಮಾಗಡಿ ಕೆಂಪಾಪುರದಲ್ಲಿಅಲಂಕೃತ ನಾಡಪ್ರಭು ಸಮಾಧಿ ಬಳಿ ಸಂಜೆ 165 ದೀಪಗಳನ್ನು ಬೆಳಗಿಸಲಾಯಿತು. ಇದೇ ವೇಳೆ ನೆರೆದವರು ಕೆಂಪೇಗೌಡರ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಯಂತ್ಯುತ್ಸವ ಪ್ರಯುಕ್ತ ಮಂಗಳವಾರ ಮಾಗಡಿ ಕೆಂಪಾಪುರದಲ್ಲಿ ‘ನಾಡಪ್ರಭು ಕೆಂಪೇಗೌಡ ಸಮಾಧಿ ಪರಿಸರ ಶುದ್ಧಿ ಅಭಿಯಾನ’ ಹಮ್ಮಿಕೊಳ್ಳಲಾಗಿತ್ತು. ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ…
ಬೆಂಗಳೂರು : “ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಅದೇ ರೀತಿ ಕೆಂಪೇಗೌಡರ ಸಾಧನೆಗಳು ಶಾಶ್ವತ. ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ ಆದರೆ ಬದುಕು ನಡೆಸಿದ್ದು, ಸಮಾಜಕ್ಕೆ ಸಂದೇಶ ನೀಡಿದ್ದು ವಿಶ್ವಮಾನವರಾಗಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ʼಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿಶ್ವದೆಲ್ಲೆಡೆ ಬೆಂಗಳೂರಿನ ಕೀರ್ತಿ ಹರಡಿದೆ. ಈ ನಗರದ ಅಭಿವೃದ್ಧಿಗೆ ಕೆಂಪೇಗೌಡರೇ ಸ್ಫೂರ್ತಿ ಎಂಬುದನ್ನು ನಾವು ಮರೆಯಬಾರದು. 500 ವರ್ಷಗಳ ಹಿಂದೆಯೇ ಮಾದರಿ ಆಡಳಿತಕ್ಕೆ ಅಡಿಪಾಯ ಹಾಕಿದವರು. ಎಲ್ಲಾ ಜಾತಿ, ಧರ್ಮಗಳಿಗೆ ಅವಕಾಶ ನೀಡಿ ಸಮಾಜಕ್ಕೆ ಸಂದೇಶ ನೀಡಿದವರು” ಎಂದು ತಿಳಿಸಿದರು. “ನಮ್ಮ ಸಮುದಾಯದವರಿಗೆ ಒಂದು ಸಂದೇಶ ನೀಡಲು ಬಯಸುತ್ತೇನೆ. ನಾವುಗಳು ಯಾರೂ ಸಹ ಇಂತಹದ್ದೇ ಜಾತಿಯಲ್ಲಿ ಹುಟ್ಟಬೇಕು…
ಬೆಂಗಳೂರು: ನಗರದಲ್ಲಿ ಕಸದ ಮಾಫಿಯಾವನ್ನು ತಡೆಗಟ್ಟಲು ಪ್ರಯತ್ನ ಮಾಡಲಾಗುತ್ತಿದೆ. ನಗರದಲ್ಲಿ ಏನೂ ಕೊರತೆಯಾಗದಂತೆ ಯೋಜನೆ ರೂಪಿಸಲಾಗುತ್ತಿದೆ. 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು ಇದಕ್ಕಾಗಿ 50 ಎಕರೆ ಜಾಗ ಗುರುತಿಸಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಪೂರ್ಣಗೊಳಿಸಿ 110 ಹಳ್ಳಿಗಳಿಗೆ ನೀರು ನೀಡುತ್ತಿದ್ದೇವೆ. 6ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ ಬೇಕಾದಷ್ಟು ಶ್ರಮ ಪಡುತ್ತಿದ್ದೇವೆ. ಸಿಕ್ಕಿರುವ ಅವಕಾಶದಲ್ಲಿ ಸಾಕ್ಷಿಗುಡ್ಡೆ ನಿರ್ಮಾಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ʼಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಾವು ಮೂರು ʼಕೆʼಗಳನ್ನು ಮರೆಯಬಾರದು ಬೆಂಗಳೂರು ಕಟ್ಟಿದ ಕೆಂಪೇಗೌಡರು, ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಅವರು, ವಿಕಾಸ ಸೌಧ ಕಟ್ಟಿದ ಎಸ್.ಎಂ.ಕೃಷ್ಣ ಅವರು.…
ನಮ್ಮ ಪೂರ್ವಜರ ಕಾಲದಲ್ಲಿ ಅನೇಕ ಮಹಿಳೆಯರು ದಪ್ಪ, ಉದ್ದ, ಕಪ್ಪು ಕೂದಲನ್ನು ಹೊಂದಿದ್ದರು. ಆಗ ಪುರುಷರು ಸಹ ಉದ್ದ ಕೂದಲು ಬೆಳೆಸುತ್ತಿದ್ದರು. ಆದರೆ ಈಗ ನಮ್ಮ ಕೂದಲು ಕಡಿಮೆ ದಟ್ಟವಾಗಿದೆ, ಚಿಕ್ಕದಾಗಿದೆ ಮತ್ತು ಬೂದು ಬಣ್ಣಕ್ಕೆ ತಿರುಗುವ ಸಾಧ್ಯತೆ ಹೆಚ್ಚು. ಈ ಬ್ಯೂಟಿ ಟಿಪ್ ವಿಭಾಗದಲ್ಲಿ, ಇದೆಲ್ಲವನ್ನೂ ತೆಗೆದುಹಾಕಲು ಮತ್ತು ನಿಮ್ಮ ಕೂದಲು ನೈಸರ್ಗಿಕವಾಗಿ ದಪ್ಪವಾಗಿ ಬೆಳೆಯಲು ಬಳಸಬಹುದಾದ ಎಣ್ಣೆಯನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ,…
ಬೆಂಗಳೂರು: ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಸರ್ಕಾರಕ್ಕೆ ಪೊಲೀಸ್ ಇಲಾಖೆ ಬಹಳ ಮುಖ್ಯ. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಸರಿಯಾಗಿ ಮಾಡದೆ ಹೋದರೆ, ಎಂತಹ ಸಮಾಜ ಆಗುತ್ತದೆ ಎಂಬುದರ ಬಗ್ಗೆಯೂ ಯೋಚಿಸಬೇಕು. ಎಲ್ಲ ಇಲಾಖೆಗಳಿಗಿಂತಲೂ ಬಹಳ ದೊಡ್ಡ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಙದು ಅರಿತುಕೊಳ್ಳಬೇಕಿದೆ ಇತ್ತೀಚೆಗೆ ಖಾಸಗಿ ಸಂಸ್ಥೆಯೊಂದರ ಸಮೀಕ್ಷೆ ವರದಿ ಪ್ರಕಾರ, ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ಮೊದಲ ಸ್ಥಾನದಲ್ಲಿದೆ. ಇದು ಸಂತೋಷದ ವಿಚಾರ. ಆದರೆ, ಸಮೀಕ್ಷೆ ವರದಿಯಿಂದ ನಮ್ಮ ಬೆನ್ನು ನಾವೇ ತಟ್ಟಿಕೊಂಡು ಸಮಾದಾನಪಟ್ಟುಕೊಂಡು ಸುಮ್ಮನಿರಲು ಆಗುವುದಿಲ್ಲ. ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಕೋಟ ಠಾಣೆಗೆ ಭೇಟಿ ನೀಡಿದ್ದೆ. ರಿಜಿಸ್ಟರ್ ಪರಿಶೀಲಿಸಿ ಠಾಣೆಗೆ ಭೇಟಿ ನೀಡಿದ ಇಬ್ಬರಿಗೆ ಕರೆ ಮಾಡಿ ಮಾತನಾಡಿದೆ. ಪೊಲೀಸರು ಸರಿಯಾಗಿ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ 66/11ಕೆವಿ ನೆಲಗೆದರನಹಳ್ಳಿ, 66/11ಕೆವಿ ಕಟ್ಟಿಗೆಹಳ್ಳಿ, 220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಉಪಕೇಂದ್ರ ಮತ್ತು 66/11ಕೆ.ವಿ ‘ಎ’ ಸ್ಟೇಷನ್ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ದಿನಾಂಕ 29.06.2025 (ಭಾನುವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಭಾನುವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪೀಣ್ಯ ವಿಭಾಗದ ಕೆಂಪಯ್ಯ ಗಾರ್ಡೆನ್, ಏ ಟೈಪ್ ಶೆಡ್ ತಿಗಳರಪಾಳ್ಯ ಮೆನ್ ರೋಡ್, ಪರ್ಲ್ ರೋಡ್, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ನೆಲಗೆದರನಹಳ್ಳಿ, ಹೆಚ್ ಎಮ್. ಟಿ ಲೇಔಟ್, ಶಿವಪುರ, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಲಮಾರ್ ಲೇಔಟ್, ವಿನಾಯಕನಗರ, 8ನೇ ಮಿಲಿ ರೋಡ್, ಜಾಲಹಳ್ಳಿ ಕ್ರಾಸ್, ಶೋಭಾ ಅಪಾರ್ಟ್ ಮೆಂಟ್, ಅಮರಾವತಿ ಲೇಔಟ್, ಕೆ ಏ ಪಿಎಲ್, ಕರ್ನಾಟಕ ಪ್ರೈ ಲಿಮಿಟೆಡ್, ರುಕ್ಮಿಣಿನಗರ, ಪೀಣ್ಯ 10ನೇ ಮುಖ್ಯ ರಸ್ತೆ, 11ನೇ ಮುಖ್ಯರಸ್ತೆ, ಉ ಡುಪಿ ಹೋಟೆಲ್, ಐಆರ್ ಪಾಲಿಟೆಕ್ನಿಕ್ ರಸ್ತೆ,…
ಬೆಂಗಳೂರು : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025 ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ. ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗು ಕೂಡಾ ಯೋಜನೆ ವಿಸ್ತರಿಸಲಾಗಿದೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ…
ಬೆಂಗಳೂರು: ದಲಿತರನ್ನು ಒಕ್ಕಲೆಬ್ಬಿಸಿ ಮೌಲ್ಯಯುತ ಜಮೀನು ಕಿತ್ತುಕೊಂಡು ಬಂಡವಾಳ ಮಾಡಿಕೊಳ್ಳಲು ಹುನ್ನಾರ ನಡೆದಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ವಿಧಾನಸೌಧದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 155 ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಹಿಂದೆ ಇದು ಅರಣ್ಯ ಭೂಮಿ ಇದ್ದಿರಬಹುದು. ಒಮ್ಮೆ ಅದನ್ನು ಕಂದಾಯ ಭೂಮಿ ಎಂದು ಕೊಟ್ಟ ಮೇಲೆ ಕಂದಾಯ ಇಲಾಖೆ ಅದನ್ನು ವಿತರಿಸಿದೆ. ರೈಲ್ವೆ, ಕೆಐಎಡಿಬಿಗೂ ಜಾಗ ಕೊಟ್ಟಿದ್ದಾರೆ. ಕಂದಾಯ ಇಲಾಖೆ ಸಚಿವರು, ಕೈಗಾರಿಕಾ ಸಚಿವರು, ಅರಣ್ಯ ಸಚಿವರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ಪಟ್ಟಾದಾರರ ಸಭೆ ಕರೆದು ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದರು. ಸರಕಾರವು ಮಾಫಿಯ ಪರ ಇದೆಯೇ ಅಥವಾ ದಲಿತರ ಪರ ಇದೆಯೇ ಎಂಬ ಬಗ್ಗೆ ನಿಲುವನ್ನು ಪ್ರಕಟಿಸಬೇಕು. ದಲಿತರ ಜಮೀನು ಹೇಗೆ ಕಬಳಿಸಲು ಸಾಧ್ಯ ಎಂದು ಕೇಳಿದರು. ಸದುದ್ದೇಶ ಇದ್ದಲ್ಲಿ ಜಮೀನನ್ನು ಹಣಕೊಟ್ಟು ಸ್ವಾಧೀನಕ್ಕೆ ಪಡೆಯಬೇಕಿದೆ. ಈ ದೇಶಕ್ಕೆ ಕಾನೂನಿದೆ. ಬಾಬಾಸಾಹೇಬರ ಶ್ರೇಷ್ಠ…
ಬೆಂಗಳೂರು: ರಾಜ್ಯದಲ್ಲಿ ಅಪರಾಧ ಚಟುವಟಿಕೆ ತಡೆಗಟ್ಟೋದಕ್ಕೆ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಈ ಹಿನ್ನಲೆಯಲ್ಲೇ ಮನೆ ಮನೆಗೆ ಪೊಲೀಸ್ ಎನ್ನುವಂತ ವಿನೂತನ ಉಪಕ್ರಮವನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಸಂಬಂಧ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 27-06-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯು ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್ ಉಪಕ್ರಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಉಪಕ್ರಮದ ಪ್ರಮುಖ ಅಂಶಗಳು ಈ ಮುಂದಿನಂತಿವೆ ಎಂದಿದ್ದಾರೆ. ಆಧುನಿಕ ಯುಗದಲ್ಲಿ ಪೊಲೀಸರ ಪಾತ್ರವು ಬಹುಮುಖವಾಗಿದೆ. ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ಕಾಯ್ದುಕೊಳ್ಳುವವರಾಗಿ ಮಾತ್ರವಲ್ಲದೇ ಇಂದು ಅವರು ಸಮಾಜದ ಶಾಂತಿ ಮತ್ತು ಭದ್ರತೆಯ ರೂವಾರಿಗಳಾಗಿದ್ದಾರೆ. ಅಪರಾಧಗಳ ತಡೆ, ಅಪರಾಧ ಪ್ರಕರಣಗಳ ತನಿಖೆ, ಸಾರ್ವಜನಿಕ ಸಮಾರಂಭಗಳಲ್ಲಿ ಭದ್ರತೆ ಏರ್ಪಡಿಸುವುದು, ಪ್ರವಾಹ, ಭೂಕಂಪ, ಮಹಾಮಾರಿ ಮುಂತಾದ ವಿಪತ್ತು ಸಂದರ್ಭಗಳಲ್ಲಿ ರಕ್ಷಣಾತ್ಮಕ ಕಾರ್ಯಗಳಲ್ಲಿ ತೊಡಗುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯಗಳಾಗಿವೆ. ಕ್ಲಿಷ್ಟ ಪರಿಸ್ಥಿತಿಗಳಲ್ಲಿ ಶಾಂತಿಯುತವಾಗಿ ಪರಿಸ್ಥಿತಿಯನ್ನು ನಿಭಾಯಿಸುವ…
ಬೆಂಗಳೂರು: ಮಂಡ್ಯದಲ್ಲಿ ಕಾವೇರಿ ಆರತಿ ನಡೆಸೋದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಈಗಾಗಲೇ ಇದಕ್ಕಾಗಿ ಹಣವನ್ನು ಮಂಜೂರು ಮಾಡಲಾಗಿತ್ತು. ಎಲ್ಲಾ ಸಿದ್ಧತೆಗಳು ಕೂಡ ನಡೆಸಲಾಗುತ್ತಿತ್ತು. ಆದರೇ ಇದೀಗ ಹೈಕೋರ್ಟ್ ಕಾವೇರಿ ಆರತಿ ಕಾರ್ಯಕ್ರಮಕ್ಕೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ಈ ಸಂಬಂಧ ರೈತ ಸಂಘದಿಂದ ಕರ್ನಾಟಕ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯಲ್ಲಿ ಕಾವೇರಿ ಆರತಿಯಿಂದ ಆಗಬಹುದಾದಂತ ಕೆ ಆರ್ ಎಸ್ ಅಣೆಕಟ್ಟಿಗೆ ಹಾನಿ, ಪರಿಸರ, ನದಿಗೆ ಅಪಾಯದ ಬಗ್ಗೆ ವಿವರಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಕಾವೇರಿ ಆರತಿಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಲ್ಲದೇ ಈ ಸಂಬಂಧ 2 ವಾರಗಳಲ್ಲಿ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟೀಸ್ ನಲ್ಲಿ ಸೂಚಿಸಲಾಗಿದೆ. ಹೀಗಾಗಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಬ್ರೇಕ್ ಬಿದ್ದಂತೆ ಆಗಿದೆ. https://kannadanewsnow.com/kannada/good-news-good-news-for-farmers-from-the-state-government-pauti-account-movement-in-the-name-of-the-heirs-of-the-deceased/ https://kannadanewsnow.com/kannada/shocking-gang-rape-of-college-student-three-students-arrested/













