Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆಡಳಿತ ಇಲಾಖೆಯವರ ಪ್ರವೇಶ ಮತ್ತು ಭ್ರಷ್ಟಾಚಾರ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತಂತೆ ಟಿಪ್ಪಣಿ ಹೊರಡಿಸಿರುವಂತ ಅವರು, ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆಡಳಿತ ವಿಭಾಗದ ಹುದ್ದೆಗಳಲ್ಲಿರುವವರು ಮುಂಬಡ್ತಿ ಪಡೆಯಲು ಅಸ್ತಿತ್ವದಲ್ಲೇ ಇಲ್ಲದ ಕಾಲೇಜುಗಳ ಹೆಸರಿನಲ್ಲಿ ರೂ. 10 ರಿಂದ 15 ಸಾವಿರ ಗಳಿಗೆ ನಕಲಿ ಅಂಕಪಟ್ಟಿ ಪಡೆದು ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಪ್ರಮಾಣ ಪತ್ರಗಳನ್ನು ಸಲ್ಲಿಸಿ, ಹಲವಾರು ಹುದ್ದೆ ಗಿಟ್ಟಿಸಿಕೊಂಡಿದ್ದು ಬಡ್ತಿಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021, ದಿನಾಂಕ 12- 10-2022 ರ ಕರ್ನಾಟಕ ರಾಜ್ಯಪತ್ರ No. SARIE 40 SAESE 2021(P-1) ರನ್ವಯ ಶೇಕಡ 95 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ, ಶೇಕಡ 5 ರಷ್ಟು…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಸಿಹಿಸುದ್ದಿ ಎನ್ನುವಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿ ನಿಮಿತ್ತ ವೀಕ್ಷಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ನಮ್ಮ ಮೆಟ್ರೋ ದಿನಾಂಕ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮರುದಿನ ಮುಂಜಾನೆ 12.30ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂಬುದಾಗಿ ಬಿ ಎಂ ಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. https://twitter.com/KarnatakaVarthe/status/1907054129308110857 https://kannadanewsnow.com/kannada/chitradurga-district-police-register-154-cases-in-connection-with-card-gambling-seize-rs-10-80-lakh/ https://kannadanewsnow.com/kannada/chitradurga-nursing-officer-sj-somashekar-of-yelladakere-primary-health-centre-suspended/
ಚಿತ್ರದುರ್ಗ: ಯುಗಾದಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಜೂಜಾಟದಲ್ಲಿ ತೊಡಗಿದ್ದಂತವರ ಮೇಲೆ ದಾಳಿ ನಡೆಸಿರುವಂತ ಪೊಲೀಸರು, ಬರೋಬ್ಬರಿ 154 ಕೇಸ್ ದಾಖಲಿಸಿದ್ದಾರೆ. ಜೊತೆಗೆ 10.80 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯಾಧ್ಯಂತ ಯುಗಾದಿ ಹಬ್ಬದ ಪ್ರಯುಕ್ತ ಇಸ್ಪೀಟ್ ಜೂಜಾಟದ ಅಡ್ಡೆಯ ಮೇಲೆ ದಿನಾಂಕ 29-03-2025ರಿಂದ 31-03-2025ರವರೆಗೆ ವಿಶೇಷ ದಾಳಿ ನಡೆಸಲಾಗಿದೆ. ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಚಿತ್ರದುರ್ಗ ಉಪ ವಿಭಾಗದ ವ್ಯಾಪ್ತಿಯಲ್ಲಿ 47 ಕೇಸ್ ದಾಖಲಿಸಿ, 246 ಮಂದಿ ಬಂಧಿಸಲಾಗಿದೆ. ಅವರಿಂದ 3,94,270 ಹಣ ಜಪ್ತಿ ಮಾಡಲಾಗಿದೆ. ಚಳ್ಳಕೆರೆ ಉಪ ವಿಭಾಗದಲ್ಲಿ 51 ಕೋಸ್ ದಾಖಲಿಸಿ, 329 ಮಂದಿ ಬಂಧಿಸಲಾಗಿದೆ. 1,73,420 ಹಣವನ್ನು ಜಪ್ತಿ ಮಾಡಲಾಗಿದೆ ಎಂಬುದಾಗಿ ತಿಳಿಸಿದೆ. ಹಿರಿಯೂರು ಉಪ ವಿಭಾಗದ ವ್ಯಾಪ್ತಿಯಲ್ಲಿ 56 ಪ್ರಕರಣಗಳನ್ನು ದಾಖಲಿಸಲಾಗಿದ್ದು 275 ಆರೋಪಿಗಳಾಗಿದ್ದಾರೆ. ಇವರಿಂದ 5,12,540 ಹಣವನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆ…
ಚಿತ್ರದುರ್ಗ: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿಯೊಬ್ಬರು ಕೆಲಸಕ್ಕೆ ಅನಧಿಕೃತವಾಗಿ ಗೈರಾಗಿದ್ದಲ್ಲದೇ, ಅನುಚಿತವಾಗಿ ವರ್ತನೆ ತೋರಿದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಎಸ್.ಜೆ ಸೋಮಶೇಖರ್ ಎಂಬುವರೇ ಅಮಾನತುಗೊಂಡವರಾಗಿದ್ದಾರೆ. ಎಸ್.ಜೆ ಸೋಮಶೇಖರ್ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸಕ್ಕೆ ಗೈರು ಹಾಜರಾಗಿದ್ದಲ್ಲದೇ, ಕರ್ತವ್ಯದ ವೇಳೆ ಪಾನಮತ್ತರಾಗಿ ಮೇಲಧಿಕಾರಿಗಳೊಂದಿಗೆ ಅನುಚಿತವಾದಂತ ವರ್ತನೆ ತೋರಿದಂತ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಟಿಹೆಚ್ಓ ಅವರು ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಿಇಓಗೆ ವರದಿಯನ್ನು ಸಲ್ಲಿಸಿದ್ದರು. ಈ ವರದಿಯನ್ನು ಆಧರಿಸಿ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸಿಂಗ್ ಆಫೀಸರ್ ಎಸ್ ಜೆ ಸೋಮಶೇಖರ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. https://kannadanewsnow.com/kannada/new-addition-to-history-of-karnataka-now-a-new-copper-plate-inscription-has-come-to-light/ https://kannadanewsnow.com/kannada/good-news-for-those-waiting-for-court-case-to-be-resolved-national-lok-adalat-to-be-held-on-july-12/
ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಜುಲೈ 12 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಂಡು ತಮ್ಮ…
ಬೆಂಗಳೂರು : ಕರ್ನಾಟಕದ ಇತಿಹಾಸದ ಹೊಸ ಸೇರ್ಪಡೆಗೆ ದಾಖಲಾಗಲು ಹೊಸತೊಂದು ತಾಮ್ರದ ತಾಮ್ರದ ಪಟದ ಶಾಸನ ಇದೀಗ ಬೆಳಕಿಗೆ ಬಂದಿದೆ.ಅಂದ್ಹಾಗೆ ಇತ್ತೀಚೆಗಷ್ಟೇ ಪತ್ತೆಯಾದ ಈ ತಾಮ್ರದ ಪಟದ ಶಾಸನ ವಿಜಯನಗರ ರಾಜವಂಶಕ್ಕೆ ಸೇರಿದ್ದಾಗಿದ್ದು, ಹೀಗೆ ಬೆಳಕಿಗೆ ಬಂದ ತಾಮ್ರದ ಈ ಶಾಸನವನ್ನು ಬೆಂಗಳೂರಿನ ಫಾಲ್ಕನ್ ಕಾಯಿನ್ಸ್ ಗ್ಯಾಲರಿಯಲ್ಲಿ ಸಂರಕ್ಷಿಸಲಾಗಿದೆ. ತಾಮ್ರದ ಈ ಶಾಸನ ಕರ್ನಾಟಕ ಮೂಲದ್ದಾಗಿದ್ದು, ವಿಜಯನಗರದ ಸಂಗಮ ದೊರೆ ದೇವರಾಯ-1 ಈತನ ಆಡಳಿತದಲ್ಲಿದ್ದವು ಎಂದು ತಿಳಿದುಬಂದಿದೆ.ಅದಲ್ಲದೆ ಈ ತಾಮ್ರದ ಶಾಸನದ ಮೇಲೆ ಶಕ 1328 ವ್ಯಾಯಾ, ಕಾರ್ತಿಕ, ಬಾ. 10, ಶುಕ್ರವಾರದಂದು ಕೆತ್ತಲಾದ ಸಂಸ್ಕೃತ ಭಾಷೆಯಲ್ಲಿನ ನಾಗರಿ ಲಿಪಿಯಲ್ಲಿ ಕನ್ನಡದ ಬರವಣಿಗೆಗಳು ಕಂಡುಬಂದಿವೆ.ಇದು ಚಂದ್ರ, ಯದು, ಸಂಗಮ ಮತ್ತು ಅವನ ಐದು ಮಕ್ಕಳಾದ ಹರಿಹರ, ಕಂಪ, ಬುಕ್ಕ, ಮಾರಪ, ಮುದ್ದಪ್ಪರಿದ ಆರಂಭಗೊಂಡು ಸಂಗಮ ರಾಜವಂಶದ ವಂಶಾವಳಿಯನ್ನು ಪ್ರತಿನಿಧಿಸುತ್ತಿದೆ. ಬುಕ್ಕ ಎನ್ನುವವನು ಹರಿಹರ ಮತ್ತು ಅವನ ರಾಣಿ ಮೇಲಾಂಬಿಕಾಗೆ ಜನಿಸಿದ್ದನು. ನಂತರ ಬುಕ್ಕನ ಮಗನಾಗಿ ದೇವರಾಯ ಜನಿಸಿದನು.ಇನ್ನು ಪಟ್ಟಾಭಿಷೇಕದ ಸಮಯದಲ್ಲಿ ಹರಿಹರನ…
ಬೆಂಗಳೂರು : ಕನ್ನಡ ಭಾಷೆಗೆ ಆದ್ಯತೆ ನೀಡುವ ಜೊತೆಗೆ ಪ್ರಾದೇಶಿಕ, ಸಾಂಸ್ಕೃತಿಕ ಮೌಲ್ಯ ಎತ್ತಿಹಿಡಿಯುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಅಧಿಕೃತ ಅಂತರ್ಜಾಲ ತಾಣದಲ್ಲಿ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಲಾಗಿದೆ. ಈ ಆಯ್ಕೆಯನ್ನು ಬಳಸುವ ಮೂಲಕ, ಸ್ಥಳೀಯ ಪ್ರಯಾಣಿಕರು ಇನ್ನು ಮುಂದೆ ವಿಮಾನ ನಿಲ್ದಾಣದ ಸೇವೆಗಳನ್ನು ಸುಲಭವಾಗಿ ತಮ್ಮದೇ ಭಾಷೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಆದ್ಯತೆ ನೀಡುವ ಪ್ರಯಾಣಿಕರಿಗೆ ಒಟ್ಟಾರೆ ವಿಮಾನ ನಿಲ್ದಾಣದ ಅನುಭವವನ್ನು ಹೆಚ್ಚಿಸುವ ಗುರಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಹೊಂದಿದ್ದು, ಪ್ರಯಾಣಿಕರ ಪ್ರಯಾಣವನ್ನು ಹೆಚ್ಚು ಅನುಕೂಲಕರ ಮತ್ತು ಆನಂದದಾಯಕವಾಗಿಸಲಿದೆ. ಈ ಕೆಳಗಿನ ವೈಶಿಷ್ಟ್ಯಗಳನ್ನು ಹೊಂದಿರಲಿದೆ: * ಕನ್ನಡದಲ್ಲಿ ನೈಜ-ಸಮಯದ ವಿಮಾನಗಳ ಹಾರಾಟದ ಮಾಹಿತಿ, ನಿರ್ಗಮನ, ಆಗಮನ ಮತ್ತು ವಿಳಂಬಗಳ ಬಗ್ಗೆ ತಡೆರಹಿತ ಮಾಹಿತಿ ಲಭ್ಯ. * ಯಾವುದೇ ಶ್ರಮವಿಲ್ಲದೆ ಪ್ರಯಾಣಿಕರು ವಿಮಾನಗಳನ್ನು ಕಾಯ್ದಿರಿಸಲು, ಸಾರಿಗೆ ಆಯ್ಕೆ ಮತ್ತು ವಿಮಾನ ನಿಲ್ದಾಣದ ಸೌಲಭ್ಯಗಳನ್ನು ಅನ್ವೇಷಿಸಲು ಅನುವು. * ಭದ್ರತಾ ಕಾರ್ಯವಿಧಾನ,…
ಬೆಂಗಳೂರು : ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ. ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಈ ಅಂಗಾಂಗ ಮರು ಪಡೆಯುವಿಕೆ ಕೇಂದ್ರವು ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಸೋಮವಾರ ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1907013677967884586 “ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು…
ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೈಯಪ್ಪನಹಳ್ಳಿ ನಡುವೆ ರಸ್ತೆ ಕೆಳ ಸೇತುವೆ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ, ಈ ಕೆಳಗಿನ ರೈಲುಗಳನ್ನು ಕೆಳಗೆ ತಿಳಿಸಿದಂತೆ ಭಾಗಶಃ ರದ್ದು/ ಮಾರ್ಗಬದಲಾವಣೆ/ ಸಮಯ ಬದಲಾವಣೆ /ನಿಯಂತ್ರಣ ಮಾಡಲಾಗುವುದು: ರೈಲುಗಳ ಭಾಗಶಃ ರದ್ದತಿ: 02.04.2025 ಮತ್ತು 06.04.2025 ರಂದು ಹೊರಡುವ ರೈಲು ಸಂಖ್ಯೆ 07339 ಎಸ್.ಎಸ್.ಎಸ್ ಹುಬ್ಬಳ್ಳಿ- ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ಯಶವಂತಪುರ ಮತ್ತು ಕೆ.ಎಸ್.ಆರ್. ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ. 03.04.2025 ಮತ್ತು 07.04.2025 ರಂದು ಹೊರಡುವ ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು- ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ವಿಶೇಷ ರೈಲು ಕೆಎಸ್ಆರ್ ಬೆಂಗಳೂರಿನ ಬದಲಿಗೆ ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ. 03.04.2025 ಮತ್ತು 07.04.2025 ರಂದು ಹೊರಡುವ ರೈಲು ಸಂಖ್ಯೆ 16521 ಬಂಗಾರಪೇಟೆ- ಕೆಎಸ್ಆರ್ ಬೆಂಗಳೂರು ಮೆಮು ರೈಲು ಬೈಯ್ಯಪ್ಪನಹಳ್ಳಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ. ದಿನಾಂಕ 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಯುನೈಟೆಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದು, ಅದನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇದರ ಫಲಿತಾಂಶವಾಗಿ, 2025ರ ಮಾರ್ಚ್ ತಿಂಗಳಲ್ಲಿ BMTC ಟಿಕೆಟ್ ದರದ ಒಟ್ಟಾರೆ ಆದಾಯದಲ್ಲಿ 39.80% ರಷ್ಟು ಪಾವತಿ ಯುಪಿಐ ಮುಖಾಂತರ ನಡೆದಿದೆ. ಸಂಸ್ಥೆಯ ಇತ್ತೀಚಿನ ಮಾಹಿತಿ ಪ್ರಕಾರ, ಈ ಬೆಳವಣಿಗೆ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಡಿಜಿಟಲ್ ಪಾವತಿ ಸ್ವೀಕೃತಿಯ ಮಹತ್ತರ ಸಾಧನೆಯಾಗಿ ಗುರುತಿಸಲಾಗಿದೆ. ಡಿಜಿಟಲ್ ಪಾವತಿಯ ಭವಿಷ್ಯ UPI ಪಾವತಿ ವಿಧಾನವನ್ನು ಪ್ರಯಾಣಿಕರು ಹೆಚ್ಚು ಅನುಸರಿಸುತ್ತಿರುವುದರಿಂದ ಟಿಕೆಟ್ ಸಂಗ್ರಹ ವ್ಯವಸ್ಥೆಯ ಸರಳತೆ, ವೇಗ ಮತ್ತು ಪಾರದರ್ಶಕತೆ ಹೆಚ್ಚಳ ಕಾಣುತ್ತಿದೆ. ಇದರಿಂದ BMTC ಪ್ರಯಾಣಿಕರಿಗೆ ಸುಲಭ, ಸುರಕ್ಷಿತ ಮತ್ತು ನಗದುರಹಿತ ಪಾವತಿ ಅನುಭವ ಒದಗಿಸುತ್ತಿದೆ. UPI ಪಾವತಿಯ ಪ್ರಭಾವ BMTCಯ ಆದಾಯದಲ್ಲಿ ಡಿಜಿಟಲ್ ಪಾವತಿಯ ಒಟ್ಟಾರೆ ಶೇಕಡವಾರು ಗಣನೀಯವಾಗಿ ಏರಿಕೆ. ಪ್ರಯಾಣಿಕರು ನಗದುರಹಿತ ಪ್ರಯಾಣದ ಜೊತೆಗೆ , ಸುಲಭ UPI ಪಾವತಿ…













