Author: kannadanewsnow09

ಹಾವೇರಿ: ಆಕೆ ಬಿಎಡ್ ಓದುತ್ತಿದ್ದಂತ ವಿದ್ಯಾರ್ಥಿನಿ. ಆಕೆಯನ್ನು ಪ್ರೀತ್ಸೆ ಪ್ರೀತ್ಸೆ ಅಂತ ಪಾಗಲ್ ಪ್ರೇಮಿಯೊಬ್ಬ ಹಿಂದೆ ಬಿದ್ದಿದ್ದನು. ಆದ್ರೇ ಬಿಎಡ್ ವಿದ್ಯಾರ್ಥಿನಿ ಮಾತ್ರ ಪಾಗಲ್ ಪ್ರೇಮಿಯ ಪ್ರೀತಿಯನ್ನು ಮಾತ್ರ ಒಪ್ಪಿಕೊಳ್ಳಲೇ ಇಲ್ಲ. ಇದೇ ಕಾರಣಕ್ಕೆ ಸಿಟ್ಟಾದಂತ ಆ ಪಾಗಲ್ ಪ್ರೇಮಿ ದಿಢೀರ್ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಿದ್ದಾನೆ. ಮುಂದೇನಾಯ್ತು ಅಂತ ಮುಂದೆ ಓದಿ. ಹಾವೇರಿಯ ಹಳೆಯ ಪೋಸ್ಟ್ ಆಫೀಸ್ ಬಳಿಯಲ್ಲಿ ಬಿಎಡ್ ವಿದ್ಯಾರ್ಥಿನಿಯೊಬ್ಬಳನ್ನು ಪಾಗಲ್ ಪ್ರೇಮಿಯೊಬ್ಬ ಪ್ರೀತಿಸುತ್ತಿದ್ದನು. ಅದು ಒನ್ ಸೈಡ್ ಲವ್ ಆಗಿತ್ತು. ಆಕೆಯ ಹಿಂದೆ ಬಿದ್ದಂತ ಆತ ಇಂದು  ಬಿಎಡ್ ವಿದ್ಯಾರ್ಥಿನಿಯೊಬ್ಬಳು ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕಿಡ್ನ್ಯಾಪ್ ಮಾಡಿದ್ದಾನೆ. ಇಂದು ಬೆಳಿಗ್ಗೆ.9 ಗಂಟೆಗೆ ಯುವತಿ ಕಾಲೇಜಿಗೆ ತೆರಳುತ್ತಿದ್ದಂತ ವೇಳೆಯಲ್ಲಿ ಆಕೆಯನ್ನು ಹಿಂಬಾಲಿಸಿ ತೆರಳಿದಂತ ಪಾಗಲ್ ಪ್ರೇಮಿ, ಕಾರಿನಲ್ಲಿ ಆಕೆಯನ್ನು ಕಿಡ್ನಾಪ್ ಮಾಡಿ ಕರೆದೊಯ್ದಿದ್ದಾನೆ. ಕೂಡಲೇ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯದ ಗಂಭೀರತೆಯನ್ನು ಅರಿತಂತ ಪೊಲೀಸರು, ಪಾಗಲ್ ಪ್ರೇಮಿಯನ್ನು ಹಿಡಿಯೋ ಮುನ್ನವೇ, ಪೊಲೀಸರು ತನ್ನ ಬಂಧಿಸಿ, ಜೈಲಿಗಟ್ಟಬಹುದು…

Read More

ನವದೆಹಲಿ: ಭಾರತದ ಚುನಾವಣಾ ಆಯೋಗಕ್ಕೆ ಇಬ್ಬರು ಆಯುಕ್ತರ ನೇಮಕವನ್ನು ಮಾರ್ಚ್ 15 ರೊಳಗೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆಯ ನಂತರ ಚುನಾವಣಾ ಸಮಿತಿಯಲ್ಲಿ ಎರಡು ಸ್ಥಾನಗಳ ಭರ್ತಿಗಾಗಿ ತಯಾರಿ ನಡೆದಿದೆ. ಅರುಣ್ ಗೋಯೆಲ್ ದಿಢೀರ್ ರಾಜೀನಾಮೆಯಿಂದ ತೆರವಾದ ಹುದ್ದೆ ಹಾಗೂ ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿಯಿಂದ ತೆರವಾದ ಸ್ಥಾನಗಳಿಗೆ ಮಾರ್ಚ್.15ರೊಳಗೆ ಇಬ್ಬರು ಚುನಾವಣಾ ಆಯುಕ್ತರನ್ನು ನೇಮಕ ಮಾಡೋ ಸಾಧ್ಯತೆ ಇದೆ ಎಂಬುದಾಗಿ ವರದಿಯಿಂದ ತಿಳಿದು ತಿಳಿದು ಬಂದಿದೆ. ಇದರ ನಡುವೆ ಮಾರ್ಚ್.14, 15ರ ಒಳಗಾಗಿ ಲೋಕಸಭಾ ಚುನಾವಣೆ 2024ಕ್ಕೆ ಚುನಾವಣಾ ದಿನಾಂಕ ಘೋಷಣೆ ಮಾಡೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮುಂಚೆಯೇ ಕೇಂದ್ರ ಚುನಾವಣಾ ಆಯೋಗಕ್ಕೆ ಇಬ್ಬರು ಆಯುಕ್ತರ ನೇಮಕವನ್ನು ಮಾಡೋ ಸಾಧ್ಯತೆ ಇದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/do-you-know-that-your-children-can-score-more-marks-by-chanting-this-one-mantra/ https://kannadanewsnow.com/kannada/breaking-mandya-activists-arrested-for-protesting-against-government-release-of-water-to-tamil-nadu/

Read More

ದಡ್ಡ ಮಕ್ಕಳು ಕೂಡ ಗಣೇಶನಿಗೆ ಈ ದೀಪವನ್ನು ಹಚ್ಚಿ ಮಕ್ಕಳು ಮಂತ್ರವನ್ನು ಚೆನ್ನಾಗಿ ಓದುತ್ತಾರೆ ತಮ್ಮ ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ಮುನ್ನಡೆಯಬೇಕು ಎಂಬುದು ಪೋಷಕರ ಕನಸು. ಇಂದು ಪ್ರತಿಯೊಬ್ಬ ಪಾಲಕರು ಅವರಿಗೆ ಅಗತ್ಯವಿರುವ ಶಿಕ್ಷಣವನ್ನು ನೀಡಲು ಶ್ರಮಿಸುತ್ತಿದ್ದಾರೆ. ಹಾಗಿದ್ದರೂ ಎಲ್ಲಾ ಮಕ್ಕಳು ಚೆನ್ನಾಗಿ ಕಲಿಯುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ…

Read More

ಮಂಡ್ಯ : ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರೂ ಕೂಡ ಸುಳ್ಳು ಭರವಸೆ ನೀಡಿದ್ದರೂ, ದಾರಿ ತಪ್ಪಿಸುವ ಕೆಲಸ ಮಾಡಿದ್ದರೂ ಸರಿಯಾದ ತೀರ್ಮಾನವನ್ನೇ ಮಾಡಿದ್ದಾರೆ ಎಂದರು. ಭರವಸೆಗಳ ಈಡೇರಿಕೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಅನೇಕ ಭರವಸೆಗಳ ಪೈಕಿ ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೆ ತಂದೆವು. ಪ್ರಮಾಣವಚನ ಸ್ವೀಕಾರ ಮಾಡಿದ ದಿನವೇ 5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದೆವು. ರಾಜ್ಯದ 3.50 ಕೋಟಿ…

Read More

ಬೆಂಗಳೂರು : ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಜಯಗಳಿಸಿರುವ ಹಿನ್ನೆಲೆಯಲ್ಲಿ ಕಂಗೇರಿಯ ಸೂಲಿಕೇರಿ ಮೈದಾನದಲ್ಲಿ ಆಯೋಜಿಸಿರುವ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ಮೋದಿಯವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ ಎಂದಿದ್ದರು. ಈಗ ತಮ್ಮಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂದು ನಾಡಿನ ಜನತೆ ನಿಮ್ಮ ಹಾಗೆ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ನಾಡಿನ ಜನರಿಗೆ ಬಂದಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕು ಎನ್ನುವ ಸಂದರ್ಭ ಈಗ ಇಲ್ಲ ಎಂದರು. ಹಿಂದೆ ನಾನು…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಮಂಡ್ಯ ಗ್ಯಾರಂಟಿ ಸಮಾವೇಶದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್‌ ಪಕ್ಷವೇ ಕಾರಣ ಎಂದು ಸತ್ಯ ಒಪ್ಪಿಕೊಂಡ ಸಿದ್ದರಾಮಯ್ಯ ಅವರ ಸತ್ಯಸಂಧತೆಗೆ ಮಾಜಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ನದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯ ನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ. ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ..!! ಇದಲ್ಲವೇ ನಂಬಿಕೆದ್ರೋಹ..? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್‌ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ, ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ, ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್‌ ದ್ರೋಹ ಬಗೆಯುತ್ತಿದೆ ಎಂದು ಹೇಳಿದರು. ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ ಕೇಂದ್ರ ಸರ್ಕಾರ ಮಾಡಬೇಕು ಎನ್ನುತ್ತಿದ್ದಾರೆ. ಆಯವ್ಯದಲ್ಲಿ ಮೇಕೆದಾಟು ಯೋಜನೆಗೆ ನಯಾ ಪೈಸೆ ನೀಡಿಲ್ಲ. ಇವರಿಗೆ…

Read More

ಮಂಡ್ಯ: ನಮ್ಮ ಪಕ್ಷದಲ್ಲಿ ದಿವಂಗತ ನಟ ಅಂಬರೀಶ್ ಮಂತ್ರಿಯಾಗಿದ್ದರು. ಅವರ ಹೆಸರಲ್ಲೇ ರಸ್ತೆ ಮಾಡುತ್ತೇವೆ. ಅಂಬರೀಶ್ ಸ್ನೇಹಿತನನ್ನೇ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ. ಸ್ಟಾರ್ ಚಂದ್ರು ಅವರು ಸೂರ್ಯ ಚಂದ್ರರಷಅಟೇ ಮಂಡ್ಯದಲ್ಲಿ ಗೆಲುವು ಸತ್ಯ. ಮಂಡ್ಯಕ್ಕೆ ಹೊಸ ಗಂಡು ರೆಡಿ ಮಾಡಿದ್ದೇವೆ ಎಂಬುದಾಗಿ ಸಂಸದೆ ಸುಮಲತಾ ಅಂಬರೀಶ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಮಂಡಕ್ಕೆ ಹೊಸ ಗಂಡು ರೆಡೆ ಮಾಡಿದ್ದೇವೆ. ಅವರು ಯಾರು ಅಂತ ನಿಮಗೆ ಗೊತ್ತಲ್ವ ಎಂಬುದಾಗಿ ಹೇಳಿದರು. ಅಲ್ಲದೇ ಸ್ಟಾರ್ ಚಂದ್ರು ಅವರನ್ನೇ ಕಾರ್ಯಕ್ರಮದಲ್ಲಿ ಪರಿಚಯ ಮಾಡಿದರು. ನಟ ಅಂಬರೀಶ್ ಅವರು ನಮ್ಮ ಪಕ್ಷದಲ್ಲಿ ಮಂತ್ರಿಯಾಗಿದ್ದರು. ಪ್ರಾಣ ಬಿಡುವಾಗಲೂ ಅವರು ಕಾಂಗ್ರೆಸ್ ಪಕ್ಷದವರಾಗಿಯೇ ಬಿಟ್ಟರು. ಈಗ ಅಂಬರೀಶ್ ಸ್ನೇಹಿತನನ್ನೇ ಮಂಡ್ಯಕ್ಕೆ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ. ಇದೆಲ್ಲ ನಿಮ್ಮ ತಲೆಯಲ್ಲಿ ಇರಲಿ. ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. https://kannadanewsnow.com/kannada/breaking-mandya-activists-arrested-for-protesting-against-government-release-of-water-to-tamil-nadu/ https://kannadanewsnow.com/kannada/lok-sabha-elections-likely-to-be-announced-on-march-13-14-dk-shivakumar/

Read More

ಬೆಂಗಳೂರು: ಇಂಧಾನ ಇಲಾಖೆಯ ವೆಬ್ ಸೈಟ್ ಸಾಫ್ಟ್ ವೇರ್ ಅಪ್ ಡೇಟ್ ಕಾರಣದಿಂದಾಗಿ ಮಾರ್ಚ್.10ರ ಇಂದಿನಿಂದ ಮಾ.19ರವರೆಗೆ 10 ದಿನಗಳ ಕಾಲ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಿಲ್ ಸೇರಿದಂತೆ ಇತರೆ ಸೇವೆಗಳು ಸ್ಥಗತಗೊಳಿಸಲಾಗುತ್ತಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ ಲೈನ್ ಸೇವೆಗಳು ಹತ್ತು ದಿನಗಳ ಕಾಲ ಸೇವೆಗಳು ಲಭ್ಯವಿರುವುದಿಲ್ಲ. ಮಾರ್ಚ್.10ರ ಇಂದಿನಿಂದ ಮಾ. 19ರವರೆಗೆ ಹತ್ತು ದಿನಗಳ ಕಾಲ ಲಭ್ಯವಿರುವುದಿಲ್ಲ ಎಂದಿದೆ. ತಂತ್ರಾಂಶವು ಕಾರ್ಯಾರಂಭಗೊಂಡ ನಂತ್ರ ಪರೀಕ್ಷೆಯ ಬಳಿಕ ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಮಾರ್ಚ್.20ರ ನಂತ್ರ ಈ ಆನ್ ಲೈನ್ ಸೇವೆ ಸರಿಯಾಗಲಿದ್ದು, ಗ್ರಾಹಕರು ವಿದ್ಯುತ್ ಪಾವತಿ ಮಾಡದೇ ಇದ್ದರೂ ಸಂಪರ್ಕ ಕಡಿತಗೊಳಿಸೋದಿಲ್ಲ ಅಂತ ಎಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದೆ. ನಾಳೆಯಿಂದ ಈ ಎಲ್ಲಾ ಜಿಲ್ಲೆಗಳ ಎಸ್ಕಾಂ ಸೇವೆಯಲ್ಲಿ…

Read More

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ. https://kannadanewsnow.com/kannada/good-news-for-state-government-employees-full-time-pension-limit-reduced-to-30-years/ https://kannadanewsnow.com/kannada/congress-government-will-be-in-power-for-10-years-ramalinga-reddy/

Read More