Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆಯಿತು. ಈ ಸಭೆಯಲ್ಲಿ ನಿರ್ಣಯಗಳನ್ನು ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ಸಿಎಂ ಸಿದ್ಧರಾಮಯ್ಯ ನೀಡಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಮುಖ್ಯಾಂಶಗಳು • ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು. • ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಾದ ಭೂ ಬಳಕೆ…
ಶಿವಮೊಗ್ಗ: ನನಗೂ ಸಚಿವನಾಗಬೇಕು ಎಂಬ ಆಸೆ ಇದೆ. ನಾನೇನು ರಾಜಕೀಯ ಸನ್ಯಾಸಿಯಲ್ಲ. ಆದರೇ ಹಾಗೆಂದ ಮಾತ್ರಕ್ಕೆ ನನಗೂ ಸಚಿವಸ್ಥಾನ ಕೊಟ್ಟು ಬಿಡ್ತಾರಾ? ಅದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಾಗಿದೆ. ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಯತೀಂದ್ರ ಸಿದ್ಧರಾಮಯ್ಯನವರು ಸಿದ್ಧರಾಮಯ್ಯ ರಾಜಕೀಯದ ಅಂತಿಮ ಘಟ್ಟದಲ್ಲಿ ಇದ್ದಾರೆ ಎಂಬ ಹೇಳಿಕೆ ಯಾಕೆ ಕೊಟ್ಟಿದ್ದಾರೋ ಅಂತ ನನಗೆ ಗೊತ್ತಿಲ್ಲ. ಆದರೇ ನಮ್ಮಲ್ಲಿ ಮುಂದಿನ ಸಿಎಂ ಯಾರು ಎಂದು ಘೋಷಣೆ ಮಾಡೋದು ನಮ್ಮ ರಾಷ್ಟ್ರೀಯ ನಾಯಕರು. ನಮ್ಮ ಹೈಕಮಾಂಡ್ ಆದೇಶದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು. ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಹಾಗಂತ ಕೊಟ್ಟು ಬಿಡ್ತಾರಾ? ನಮ್ಮಲ್ಲಿ ಎಲ್ಲದಕ್ಕೂ ಕೇಂದ್ರದ ನಾಯಕರು ಸೂಚನೆ ಕೊಡಬೇಕು. ಅವರ ಸೂಚನೆಯಂತೆ ನಮ್ಮ ನಿರ್ಧಾರ ಇರುತ್ತದೆ. ನಾನು ಸಿಎಂ ಆಗಬೇಕು ಅಂತೀನಿ ಮಾಡಿ ಬಿಡ್ತಾರಾ? ಯಾರು ಯಾರು ಈ ರೀತಿ ಹೇಳಿಕೆ ನೀಡುತ್ತಿದ್ದಾರೋ ಅದೆಲ್ಲವೂ ವೈಯಕ್ತಿಕವಾದಂತ ಹೇಳಿಕೆಯಾಗಿವೆ. ಆ ಹೇಳಿಕೆಗೂ ಪಕ್ಷಕ್ಕೂ…
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಸಂಬಂಧ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ. ಆದರೇ ಹಿಂದಿನ ಸರ್ಕಾರದ ಅವಧಿಯಲ್ಲೇ ಈ ಯೋಜನೆ ಬಗ್ಗೆ ತೀರ್ಮಾನಿಸಲಾಗಿತ್ತು. ಈ ಯೋಜನೆಯಿಂದ ಏನು ಪರಿಣಾಮ ಆಗುತ್ತದೆ ಎಂಬುದು ಯಾರೂ ಹೇಳುತ್ತಿಲ್ಲ. ಬಿಜೆಪಿಯವರು ಹಣ ಹೊಡೆಯುವ ಯೋಜನೆ ಇದಾಗಿತ್ತು. ಆದರೇ ಅವರೇ ಈಗ ಇದರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ನಿಲ್ಲಿಸುವುದಾದರೇ ಬಿಜೆಪಿಯವರು ನಿಲ್ಲಿಸಲಿ ನೋಡೋಣ. ಈ ಯೋಜನೆ ನಿಲ್ಲಿಸಲು ಇವರೇನು ಇಂಜಿನಿಯರ್ ಗಳಾ? 1,465 ಮೆಗಾವ್ಯಾಟ್ ವಿದ್ಯುತ್ ಯೋಜನೆ ಇದಾಗಿದೆ. ಯಾವುದೇ ಯೋಜನೆಯಾದರೂ ಸ್ವಲ್ಪ ಮಟ್ಟಿನ ಅರಣ್ಯ ಹೋಗಿಯೇ ಹೋಗುತ್ತದೆ. ಪರಿಸರ ಕೂಡ ಹಾನಿಯಾಗುತ್ತದೆ. ಆದರೇ ರೈತ ಸಂಘದ ಜೊತೆಗೆ ಕೂತು ಯೋಜನೆ ತೀರ್ಮಾನಿಸಿದ ಬಿಜೆಪಿಯವರೇ ಹೋರಾಟ ಮಾಡುವುದು ಎಷ್ಟು ಸರಿ? ಬಿಜೆಪಿಯವರು ಸುಮ್ಮನೇ ಗೊಂದಲ ಮೂಡಿಸಬಾರದು. ಸಾರ್ವಜನಿಕವಾಗಿ ಹೇಳಿಕೆ ನೀಡಿ ಬಿಜೆಪಿಯವರು ಜನರಲ್ಲಿ ಗೊಂದಲ ಮೂಡಿಸುವುದನ್ನು…
ಬೆಂಗಳೂರು : “ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ ಪಕ್ಷದ ರಾಯಚೂರು ಅಧ್ಯಕ್ಷೆ ಚಾಲಕನನ್ನು ಎಚ್ಚರಿಸಿದ ಪರಿಣಾಮ, ಬಸ್ ನಲ್ಲಿದ್ದ 20 ಮೆಡಿಕಲ್ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದರು. ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ ಆ ರಾಜ್ಯದ ಪೊಲೀಸರು ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ನಾನು ರಾಯಚೂರಿಗೆ ಹೋದಾಗ ಅಲ್ಲಿ ಕೆಲವರು ನನಗೆ ಅದರ ವಿಡಿಯೋ ತೋರಿಸಿದರು. ಈ ದುರಂತ ಬೇರೆ ರಾಜ್ಯದಲ್ಲಿ ಆಗಿದ್ದರೂ ಈ ಬಗ್ಗೆ ಗಮನಹರಿಸುವಂತೆ ಸಾರಿಗೆ ಸಚಿವರು ಹಾಗೂ ಗೃಹ ಸಚಿವರಿಗೆ ಸೂಚಿಸುತ್ತೇವೆ.…
ಶಿವಮೊಗ್ಗ : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ನಿಮ್ಮ ಅಮೂಲ್ಯ ಜೀವ ಉಳಿಯುತ್ತದೆ ಎಂದು ನಗರ ಠಾಣೆ ವೃತ್ತ ನಿರೀಕ್ಷಕ ಪುಲ್ಲಯ್ಯ ರಾಥೋಡ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸಾಗರ ಹೋಟೆಲ್ ವೃತ್ತದಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಗುಲಾಬಿ ಹೂ ನೀಡಿ ಮಾತನಾಡಿದಂತ ಅವರು, ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಇರುವುದರಿಂದ ಸಾಕಷ್ಟು ಅವಘಡಗಳು ಸಂಭವಿಸುತ್ತಿದೆ. ನಿಮ್ಮನ್ನು ನಂಬಿ ನಿಮ್ಮ ಕುಟುಂಬ ಇರುತ್ತದೆ. ಅಪಘಾತವಾದರೆ ಮೊದಲು ತಲೆಗೆ ಏಟು ಬೀಳುತ್ತದೆ. ತಲೆಯನ್ನು ರಕ್ಷಣೆ ಮಾಡಿಕೊಳ್ಳಲು ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದರು. ಸಾಗರ ನಗರದ ಪ್ರಮುಖ ವೃತ್ತಗಳಲ್ಲಿ ಇಂದಿನಿಂದ ಹೆಲ್ಮೆಟ್ ಧರಿಸುವಂತೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಲ್ಮೆಟ್ ಧರಿಸದೆ ಬಂದರೆ ಅವರಿಗೆ ನಿಯಮಾವಳಿ ಪ್ರಕಾರ ದಂಡ ವಿಧಿಸಲಾಗುತ್ತಿದೆ. ವಾಹನ ಸವಾರರು ಇಲಾಖೆ ಕಾನೂನು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು. ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ. 11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ…
ಮಂಡ್ಯ : ಮಂಡ್ಯದಲ್ಲಿ ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಒಬ್ಬ ಮೃತಪಟ್ಟಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಮಾಚಹಳ್ಳಿ ಸಮೀಪ ಈ ಒಂದು ದುರ್ಘಟನೆ ಸಂಭವಿಸಿದೆ. ಚನ್ನಪಟ್ಟಣ ತಾಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಶ್ರೀ ಚಾಮುಂಡೇಶ್ವರಿ ದೇವಾಲಯದಿಂದ ನೂರಕ್ಕೂ ಹೆಚ್ಚು ಭಕ್ತಾದಿಗಳನ್ನು ಮದ್ದೂರು ನಗರಕ್ಕೆ ಕರೆ ತರುತ್ತಿದ್ದ ಸರ್ಕಾರಿ ಬಸ್ ಮಾಚಹಳ್ಳಿ ಸಮೀಪಕ್ಕೆ ಬರುತ್ತಿದ್ದಂತೆ ಮದ್ದೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಸರ್ಕಾರಿ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮದ್ದೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತ ಸಂಭವಿಸಿ ಅರ್ಧ ಗಂಟೆಯಾದರೂ ಒಂದು ಆಂಬುಲೆನ್ಸ್ ಕೂಡ…
ಆಂಧ್ರಪ್ರದೇಶ: ಇಲ್ಲಿ ತಡರಾತ್ರಿ ಬಸ್ ಬೈಕಿಗೆ ಡಿಕ್ಕಿಯಾಗಿ ಸಂಭವಿಸಿದಂತ ಅಗ್ನಿ ದುರಂತದಲ್ಲಿ 20 ಮಂದಿ ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಬಸ್ ಅಗ್ನಿ ದುರಂತದ ಬಸ್ಸು ಹೈದರಾಬಾದಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ ಎಂದರು. ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದು ಈ ಅಗ್ನಿ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬೈಕ್ ಸವಾರ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೆಲವರ ಶವಗಳು ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಹೀಗಾಗಿ ಡಿಎನ್ಎ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಈ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲದ 16 ತಂಡದಿಂದ ಮಾದರಿ ಸಂಗ್ರಹಿಸಲಾಗುತ್ತಿದೆ.…
ಬೆಂಗಳೂರು: ಕರ್ನಾಟಕದ ಜ್ವಲಂತ ಸಮಸ್ಯೆಗಳನ್ನು ಮೊದಲು ಪರಿಹರಿಸಿ; ಆಮೇಲೆ ಸಿಎಂ ಉತ್ತರಾಧಿಕಾರಿಯ ಕುರಿತು ಚರ್ಚಿಸಿ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಯಾರು ಬೇಕಾದರೂ ಮುಂದಿನ ಮುಖ್ಯಮಂತ್ರಿ, ಉತ್ತರಾಧಿಕಾರಿ ಆಗಲಿ; ನಮಗೆ ಆ ಪ್ರಶ್ನೆ ಇಲ್ಲ ಎಂದು ತಿಳಿಸಿದರು. ಉತ್ತರಾಧಿಕಾರಿ ಎಂಬುದು ಬಹಳ ಗಂಭೀರ ಸಮಸ್ಯೆಯೇ ಎಂದು ಕೇಳಿದರು. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನ ಫಾರ್ಮ್ ಹೌಸ್ನಲ್ಲಿ ಹೆಣ್ಣು ಭ್ರೂಣಗಳ ಹತ್ಯೆ ದಂಧೆ ನಡೆಯುತ್ತಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಪ್ರತಿಕ್ರಿಯೆ ಏನು? ಇದನ್ನು ನಿಲ್ಲಿಸುವ ಕುರಿತು ಸರಕಾರದ ಕಾರ್ಯತಂತ್ರ ಏನು ಎಂದು ಪ್ರಶ್ನಿಸಿದರು. ನೂರಾರು ಹೆಣ್ಣು ಭ್ರೂಣಗಳ ಹತ್ಯೆ ಕುರಿತು ಸಚಿವ ದಿನೇಶ್ ಗುಂಡೂರಾವ್ ಅವರು ಏನು ಹೇಳುತ್ತಾರೆ ಎಂದರು. ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಅರಮನೆ ಮೈದಾನದ ಬಳಿ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯದ ಮಗುವಿನ ಮೇಲೆ…
ಬೆಂಗಳೂರು ಗ್ರಾಮಾಂತರ: ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ. 13 ರಿಂದ 31 ದಿನಗಳ ನಿರುದ್ಯೋಗಿ ಪುರುಷರಿಗೆ ಉಚಿತವಾಗಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಆಯೋಜಿಸಿದ್ದು, 18 ರಿಂದ 45 ವರ್ಷ ವಯೋಮಿತಿಯ ಆರ್ಹರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಅ. 30 ಬೆಳಗ್ಗೆ 10.00ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವುದು.…














