Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಎನ್ನುವಂತೆ ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವಂತ ಘಟನೆ ನಡೆದಿದೆ. ಆ ಮೂಲಕ ಇನ್ಟಾಗ್ರಾಂನಲ್ಲಿ ಪರಿಚಿತವಾಗಿದ್ದಂತ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದಂತ ನಾಲ್ವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನ ಅಪ್ರಾಪ್ತ ಬಾಲಕಿಯನ್ನು ಇನ್ಟಾ ಗ್ರಾಂನಲ್ಲಿ ಪರಿಚಯಿಸಿಕೊಂಡಿದ್ದರು. ಆಕೆಯನ್ನು ಪುಸಲಾಯಿಸಿ ಕರೆದೊಯ್ದಂತ ಇಬ್ಬರು ಆರೋಪಿಗಳು, ತನ್ನ ಸ್ನೇಹಿತರ ಜೊತೆಗೂಡಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಘಟನೆಯ ನಂತ್ರ ಅಪ್ರಾಪ್ತೆ ಗರ್ಭವತಿಯಾದ ನಂತ್ರ ಕೃತ್ಯ ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಹಾನಗಲ್ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು. ಈ ದೂರು ಆಧರಿಸಿ ಉದಯ್ ಕರಿಯಣ್ಣನವರ್, ಕಿಶನ್ ವಡ್ಡರ್, ಆಕಾಶ್ ಮಂತಗಿ ಹಾಗೂ ಚಂದ್ರು ಗೊಲ್ಲರ ಎಂಬುವರ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಈ ಘಟನೆಯು ಕಳೆದ ಮಾರ್ಚ್ ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ…
ಬೆಂಗಳೂರು: ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಕೆ.ನಾಗಣ್ಣ ಗೌಡ ಅವರನ್ನು ಬಿಡುಗಡೆಗೊಳಿಸಿ ಸರ್ಕಾರವು ಆದೇಶ ಹೊರಡಿಸಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕೆ.ನಾಗಣ್ಣ ಗೌಡ ಬಿನ್ ಈರೇಗೌಡ, 3ನೇ ಕ್ರಾಸ್, ವಿವಿ ನಗರ, ಕಲ್ಲಹಳ್ಳಿ, ಮಂಡ್ಯ ಇವರನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ಮಮಇ 9 ಮಭಾಬ 2021 ದಿನಾಂಕ 21/10/2022ರನ್ವಯ ಕೇಂದ್ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧಿನಿಯಮ 2005ರ ಪರಿಚ್ಛೇಧ 18 ರನ್ವಯ ಹಾಗೂ ಕರ್ನಾಟಕ ರಾಜ ಮಕ್ಕಳ ಆಯೋಗದ ನಿಯಮ 2010ರ ನಿಯಮ 3ರಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ದಿನಾಂಕ 21/10/2022ರಿಂದ ಜಾರಿಗೆ ಬರುವಂತೆ 3 ವರ್ಷಗಳ ಅವಧಿಗೆ ನೇಮಕ ಮಾಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಸದರಿ ಅವಧಿಯು ಮುಕ್ತಾಯಗೊಂಡಿರುವುದರಿಂದ ದಿನಾಂಕ 20/10/2025ರಿಂದ ಅನ್ವಯವಾಗುವಂತೆ…
ಹಾಸನ: ಶ್ರೀ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಅ.09 ರಿಂದ ಅ.23ರವರೆಗೆ ನಡೆದಿದ್ದು 25,59,87,327 ಕೋಟಿ ರೂ ಆದಾಯ ಸಂಗ್ರಹವಾಗಿದೆ ಎಂದು ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ಅವರು ತಿಳಿಸಿದ್ದಾರೆ. 1000 ರೂ, 300 ರೂ ಟಿಕೆಟ್ ಹಾಗೂ ಲಾಡುಪ್ರಸಾದ ಮಾರಾಟದಿಂದ ಒಟ್ಟು 21,91,75,052 ರೂ ಆದಾಯ ಬಂದಿರುತ್ತದೆ. ಹುಂಡಿ ಎಣಿಕೆಯಲ್ಲಿ 3,68,12,275 ರೂಪಾಯಿ ಬಂದಿರುತ್ತದೆ. ಕಾಣಿಕೆ ರೂಪದಲ್ಲಿ 75 ಗ್ರಾಂ. 300 ಮಿಲಿ ಚಿನ್ನ, ಬೆಳ್ಳಿ 1 ಕೆ.ಜಿ 58 ಗ್ರಾಂ. 400 ಮಿಲಿ ಹುಂಡಿಗೆ ಭಕ್ತರು ಹಾಕಿದ್ದಾರೆ ಎಂದು ತಿಳಿಸಿದರು. ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹುಂಡಿ ಎಣಿಕೆ ನಡೆದಿದ್ದು, 15,17,785 ರೂ ಆದಾಯ ಸಂಗ್ರಹವಾಗಿದೆ ಎಂದು ಶ್ರೀ ಹಾಸನಾಂಬ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮಾರುತಿ ಅವರು ತಿಳಿಸಿದ್ದಾರೆ.
ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ ವೀಳ್ಯದೆಲೆಯನ್ನು ಸೇವಿಸುತ್ತಾರೆ. ವೀಳ್ಯದೆಲೆಯಲ್ಲಿ ಔಷಧೀಯ ಗುಣವೂ ಕೂಡ ಇದೆ ಎಂಬೂದನ್ನು ವಿಜ್ಞಾನ ತಿಳಿಸಿದೆ. ಹಿಂದೂ ಧರ್ಮದಲ್ಲಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಹೆಚ್ಚಿನ ಪೂಜೆ ಹಾಗೂ ದೇವರ ಕಾರ್ಯಕ್ರಮಗಳಲ್ಲಿ ಉಪಯೋಗಿಸುತ್ತಾರೆ. ಈ ವೀಳ್ಯದೆಲೆ ಮತ್ತು ಅಡಿಕೆಯನ್ನು ದೇವರಿಗೆ ಅರ್ಪಿಸುವುದರಿಂದಾಗುವ ಉಪಯೋಗವೇನು ಗೊತ್ತಾ.? ಯಾವ ಕಾರಣಕ್ಕಾಗಿ ವೀಳ್ಯದೆಲೆ ಹಾಗೂ ಅಡಿಕೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ ನೋಡಿ: ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ, ನೈಋತ್ಯ ರೈಲ್ವೆಯು ನವೆಂಬರ್ 2, 2025 ರಿಂದ ಡಿಸೆಂಬರ್ 15, 2025 ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದೆ. ಈ ಕಾರಣದಿಂದಾಗಿ, ಈ ಕೆಳಗೆ ತಿಳಿಸಲಾದ ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ. ಅವುಗಳ ಅವಧಿ ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ. 2. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. 3. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರವರೆಗೆ ರದ್ದುಗೊಂಡಿತ್ತು. ಈಗ 02.11.2025…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನಿರ್ಮಾಣ ಮಾಡಲು ಹೊರಟಿರುವಂತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತಂತೆ ಸಂವಾದಕ್ಕಾಗಿ ಮಾಧ್ಯಮದವರನ್ನು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಆಹ್ವಾನಿಸಿದೆ. ಅಕ್ಟೋಬರ್.27ರಂದು ಶಿವಮೊಗ್ಗದ ವಾರ್ತಾಭವನದಲ್ಲಿ ಮಾಧ್ಯಮದವರೊಂದಿಗೆ ಈ ಸಂವಾದವನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಮುಖ್ಯ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಶಪಿಸಿಎಲ್) ವತಿಯಿಂದ 2000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ, ಯೋಜನೆಯ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿಸ್ತ್ರತ ಮಾಹಿತಿ ನೀಡಲು ಕೆಪಿಸಿಎಲ್ ಮುಂದಾಗಿದೆ ಎಂದಿದ್ದಾರೆ. ಈ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಆದರೆ, ಯೋಜನೆಯ ಕುರಿತು ಕೆಲವು ತಪ್ಪು ಪ್ರಚಾರಗಳು ಹಾಗೂ ಸತ್ಯಕ್ಕೆ ದೂರವಾದ ಮಾಹಿತಿಗಳನ್ನು ಹರಡುತಹತಿದ್ದು, ಜನರಲ್ಲಿ ಗೊಂದಲ ಉಂಟಾಗುತ್ತಿದೆ. ಹೀಗಾಗಿ, ಯೋಜನೆಯ ನೈಜಾಂಶಗಳನ್ನು ಸ್ಪಷ್ಟಪಡಿಸುವುದರ ಜತೆಗೆ, ಜನಜೀವನ, ಪರಿಸರದ ಮತ್ತು ವನ್ಯಜೀವಿಗಳ ಮೇಲೆ ಯಾವುದೇ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ನಡೆಯಿತು. ಈ ಸಭೆಯಲ್ಲಿ ನಿರ್ಣಯಗಳನ್ನು ಸಕಾಲದಲ್ಲಿ ಜಾರಿ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನು ಸಿಎಂ ಸಿದ್ಧರಾಮಯ್ಯ ನೀಡಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಮುಖ್ಯಾಂಶಗಳು • ಕರ್ನಾಟಕ ದೇಶದಲ್ಲೇ ಪ್ರಗತಿಪರ ರಾಜ್ಯವಾಗಿದ್ದು, ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಯಾವುದೇ ಕಾರಣಕ್ಕೂ ಅನುಮೋದನೆಗಳ ನೀಡಿಕೆಯಲ್ಲಿ ವಿಳಂಬಕ್ಕೆ ಅವಕಾಶ ನೀಡಬಾರದು. ಈ ಕುರಿತು ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಕೈಗಾರಿಕಾ ಸ್ನೇಹಿ ವ್ಯವಸ್ಥೆಯನ್ನು ಉತ್ತಮಪಡಿಸಲು ಕಾನೂನು ಮತ್ತು ನಿಯಮಾವಳಿಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು. • ಕೈಗಾರಿಕೆಗಳ ಆರಂಭಕ್ಕೆ ಅಗತ್ಯವಾದ ಭೂ ಬಳಕೆ…
ಶಿವಮೊಗ್ಗ: ನನಗೂ ಸಚಿವನಾಗಬೇಕು ಎಂಬ ಆಸೆ ಇದೆ. ನಾನೇನು ರಾಜಕೀಯ ಸನ್ಯಾಸಿಯಲ್ಲ. ಆದರೇ ಹಾಗೆಂದ ಮಾತ್ರಕ್ಕೆ ನನಗೂ ಸಚಿವಸ್ಥಾನ ಕೊಟ್ಟು ಬಿಡ್ತಾರಾ? ಅದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವಾಗಿದೆ. ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಯತೀಂದ್ರ ಸಿದ್ಧರಾಮಯ್ಯನವರು ಸಿದ್ಧರಾಮಯ್ಯ ರಾಜಕೀಯದ ಅಂತಿಮ ಘಟ್ಟದಲ್ಲಿ ಇದ್ದಾರೆ ಎಂಬ ಹೇಳಿಕೆ ಯಾಕೆ ಕೊಟ್ಟಿದ್ದಾರೋ ಅಂತ ನನಗೆ ಗೊತ್ತಿಲ್ಲ. ಆದರೇ ನಮ್ಮಲ್ಲಿ ಮುಂದಿನ ಸಿಎಂ ಯಾರು ಎಂದು ಘೋಷಣೆ ಮಾಡೋದು ನಮ್ಮ ರಾಷ್ಟ್ರೀಯ ನಾಯಕರು. ನಮ್ಮ ಹೈಕಮಾಂಡ್ ಆದೇಶದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು. ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಹಾಗಂತ ಕೊಟ್ಟು ಬಿಡ್ತಾರಾ? ನಮ್ಮಲ್ಲಿ ಎಲ್ಲದಕ್ಕೂ ಕೇಂದ್ರದ ನಾಯಕರು ಸೂಚನೆ ಕೊಡಬೇಕು. ಅವರ ಸೂಚನೆಯಂತೆ ನಮ್ಮ ನಿರ್ಧಾರ ಇರುತ್ತದೆ. ನಾನು ಸಿಎಂ ಆಗಬೇಕು ಅಂತೀನಿ ಮಾಡಿ ಬಿಡ್ತಾರಾ? ಯಾರು ಯಾರು ಈ ರೀತಿ ಹೇಳಿಕೆ ನೀಡುತ್ತಿದ್ದಾರೋ ಅದೆಲ್ಲವೂ ವೈಯಕ್ತಿಕವಾದಂತ ಹೇಳಿಕೆಯಾಗಿವೆ. ಆ ಹೇಳಿಕೆಗೂ ಪಕ್ಷಕ್ಕೂ…
ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಸಂಬಂಧ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ. ಆದರೇ ಹಿಂದಿನ ಸರ್ಕಾರದ ಅವಧಿಯಲ್ಲೇ ಈ ಯೋಜನೆ ಬಗ್ಗೆ ತೀರ್ಮಾನಿಸಲಾಗಿತ್ತು. ಈ ಯೋಜನೆಯಿಂದ ಏನು ಪರಿಣಾಮ ಆಗುತ್ತದೆ ಎಂಬುದು ಯಾರೂ ಹೇಳುತ್ತಿಲ್ಲ. ಬಿಜೆಪಿಯವರು ಹಣ ಹೊಡೆಯುವ ಯೋಜನೆ ಇದಾಗಿತ್ತು. ಆದರೇ ಅವರೇ ಈಗ ಇದರ ವಿರುದ್ಧ ಮಾತನಾಡುತ್ತಿದ್ದಾರೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ನಿಲ್ಲಿಸುವುದಾದರೇ ಬಿಜೆಪಿಯವರು ನಿಲ್ಲಿಸಲಿ ನೋಡೋಣ. ಈ ಯೋಜನೆ ನಿಲ್ಲಿಸಲು ಇವರೇನು ಇಂಜಿನಿಯರ್ ಗಳಾ? 1,465 ಮೆಗಾವ್ಯಾಟ್ ವಿದ್ಯುತ್ ಯೋಜನೆ ಇದಾಗಿದೆ. ಯಾವುದೇ ಯೋಜನೆಯಾದರೂ ಸ್ವಲ್ಪ ಮಟ್ಟಿನ ಅರಣ್ಯ ಹೋಗಿಯೇ ಹೋಗುತ್ತದೆ. ಪರಿಸರ ಕೂಡ ಹಾನಿಯಾಗುತ್ತದೆ. ಆದರೇ ರೈತ ಸಂಘದ ಜೊತೆಗೆ ಕೂತು ಯೋಜನೆ ತೀರ್ಮಾನಿಸಿದ ಬಿಜೆಪಿಯವರೇ ಹೋರಾಟ ಮಾಡುವುದು ಎಷ್ಟು ಸರಿ? ಬಿಜೆಪಿಯವರು ಸುಮ್ಮನೇ ಗೊಂದಲ ಮೂಡಿಸಬಾರದು. ಸಾರ್ವಜನಿಕವಾಗಿ ಹೇಳಿಕೆ ನೀಡಿ ಬಿಜೆಪಿಯವರು ಜನರಲ್ಲಿ ಗೊಂದಲ ಮೂಡಿಸುವುದನ್ನು…
ಬೆಂಗಳೂರು : “ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ ಪಕ್ಷದ ರಾಯಚೂರು ಅಧ್ಯಕ್ಷೆ ಚಾಲಕನನ್ನು ಎಚ್ಚರಿಸಿದ ಪರಿಣಾಮ, ಬಸ್ ನಲ್ಲಿದ್ದ 20 ಮೆಡಿಕಲ್ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದರು. ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ ಆ ರಾಜ್ಯದ ಪೊಲೀಸರು ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ನಾನು ರಾಯಚೂರಿಗೆ ಹೋದಾಗ ಅಲ್ಲಿ ಕೆಲವರು ನನಗೆ ಅದರ ವಿಡಿಯೋ ತೋರಿಸಿದರು. ಈ ದುರಂತ ಬೇರೆ ರಾಜ್ಯದಲ್ಲಿ ಆಗಿದ್ದರೂ ಈ ಬಗ್ಗೆ ಗಮನಹರಿಸುವಂತೆ ಸಾರಿಗೆ ಸಚಿವರು ಹಾಗೂ ಗೃಹ ಸಚಿವರಿಗೆ ಸೂಚಿಸುತ್ತೇವೆ.…














