Author: kannadanewsnow09

ಮಂಡ್ಯ : ಒಂದು ಕಾಲದಲ್ಲಿ ರೈತರು ಬೇಸಾಯ ಮಾಡುವ ಮುಂಚೆ ಕಲ್ಯಾಣಿಯ ನೀರನ್ನು ಹಾಕಿ ಪೂಜೆ ಸಲ್ಲಿಸಿದರೆ ಉತ್ತಮ ಇಳುವರಿ ಬರುತ್ತದೆ ಎಂಬ ನಂಬಿಕೆ ಬೇರೂರಿತ್ತು. ಅನಾರೋಗ್ಯಕ್ಕಿಡಾದವರು ಕಲ್ಯಾಣಿಯ ನೀರನ್ನು ಕುಡಿದರೆ ಗುಣಮುಖರಾಗುತ್ತಾರೆ ಎಂಬ ನಂಬಿಕೆಯೂ ಇತ್ತು. ಇಂತಹ ಧಾರ್ಮಿಕ ಶ್ರದ್ಧಾ ಕೇಂದ್ರ ಹಾಗೂ ಕುಡಿಯುವ ನೀರಿನ ಮೂಲವಾಗಿದ್ದ ಕಲ್ಯಾಣಿ ಕಾಲಕ್ರಮೇಣ ನಿರ್ಲಕ್ಷ್ಯಕ್ಕೆ ಒ‌ಳಗಾಗಿ ಜೀವ ಜಲ ಇದ್ದರೂ ಕಸ, ಕಡ್ಡಿಗಳಿಂದ ಹೂಳು ತುಂಬಿ ತ್ಯಾಜ್ಯ ರಾಶಿಯಲ್ಲಿ ಬಹುತೇಕ ಮುಚ್ಚಿ ಹೋಗಿದ್ದವು. ಇದಕ್ಕೆಲ್ಲ ನರೇಗಾ ಯೋಜನೆ ಮತ್ತು ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ತಿಲಾಂಜಲಿ ಇಟ್ಟಿದ್ದು, ಕಲ್ಯಾಣಿಗೆ ಹೊಸ ಕಳೆ ಬಂದು ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆ ಮತ್ತು ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಭಿವೃದ್ಧಿ ಪಡಿಸಿರುವ ಕಲ್ಯಾಣಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ಹಾಗೂ ಟ್ರಸ್ಟ್ ನ ಅಧ್ಯಕ್ಷ ನಂದೀಶ್ ಗೌಡ ಅವರು ಬುಧವಾರ ಲೋಕಾರ್ಪಣೆ…

Read More

ನವದೆಹಲಿ: ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸಂತಾಪ ಸೂಚಿಸಿದ್ದಾರೆ. ಇಂದು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾಹಿತ್ಯದ ಅತ್ಯುನ್ನತ ವ್ಯಕ್ತಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಎಸ್. ಎಲ್. ಭೈರಪ್ಪ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದಿದ್ದಾರೆ. ಅವರು ಸಾಹಿತ್ಯ, ತತ್ವಶಾಸ್ತ್ರ, ಸಂಸ್ಕೃತಿ ಮತ್ತು ಬೌದ್ಧಿಕ ವಿಚಾರಣಾ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರು ತಮ್ಮ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮತ್ತು ಜಾಗತಿಕ ಪ್ರಾಮುಖ್ಯತೆಗೆ ತಂದರು ಮತ್ತು ಅದರ ಸಾಂಸ್ಕೃತಿಕ ಬೇರುಗಳಿಗೆ ನಿಷ್ಠರಾಗಿದ್ದರು ಎಂದು ಹೇಳಿದ್ದಾರೆ. ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪರಂಪರೆ ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಅಸಂಖ್ಯಾತ ಓದುಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. https://twitter.com/rashtrapatibhvn/status/1970817291450237123 https://kannadanewsnow.com/kannada/bjp-protests-demanding-closure-of-road-pothole-in-sagar/ https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/

Read More

ಶಿವಮೊಗ್ಗ: ಸಾಗರ ತಾಲ್ಲೂಕಿನಲ್ಲಿ ರಸ್ತೆಗಳು ಹಾಳಾಗಿವೆ. ಸಾಗರ ಪಟ್ಟಣ ಸೇರಿದಂತೆ ವಿವಿಧೆಡೆ ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಈ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಸಾಗರ ತಾಲ್ಲೂಕು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನಿಂಬೆಹಣ್ಣಿನ ಸರ್ಕಲ್ ನಲ್ಲಿ ಸಾಗರ ನಗರ, ಗ್ರಾಮಾಂತರ ಮಂಡಲದ ಬಿಜೆಪಿಯಿಂದ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಸಾಗರ ತಾಲ್ಲೂಕಿನ ಬಿಜೆಪಿ ಮುಖಂಡರು ನಿಂಬೆಹಣ್ಣಿನ ಸರ್ಕಲ್ ನಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸುವ ಮೂಲಕ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದಂತ ಸಾಗರ ಗ್ರಾಮಾಂತರ ಮಂಡಲದ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗ್ಯಾರಂಟಿ ಭಾಗ್ಯಗಗಳ ನಡುವೆ ಅಭಿವೃದ್ಧಿ ಭಾಗ್ಯ ಕುಂಠಿತವಾಗಿದೆ. ಬೆಲೆ ಏರಿಕೆಯ ಬರೆ ಜನಸಾಮಾನ್ಯರಿಗೆ ಬಿದ್ದಿದೆ. ಗ್ಯಾರಂಟಿಯನ್ನೂ ಕೊಡಿ, ಜೊತೆ ಜೊತೆಗೆ ಅಭಿವೃದ್ಧಿಗೂ ಒತ್ತು ನೀಡಿ. ರಸ್ತೆ ಗುಂಡಿಗಳನ್ನು ಈ ಕೂಡಲೇ ಮುಚ್ಚುವ ಕೆಲಸವನ್ನು ಮಾಡಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ…

Read More

ನವರಾತ್ರಿಯು ಭಾರತದ ಅತ್ಯಂತ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಇದು ದುರ್ಗಾದೇವಿ ಮತ್ತು ಒಂಬತ್ತು ದೈವಿಕ ರೂಪಗಳಿಗೆ ಸಮರ್ಪಿತವಾಗಿದೆ. ಈ ಹಬ್ಬವು ಭಕ್ತಿ, ಉಪವಾಸ, ಸಂಗೀತ ಮತ್ತು ನೃತ್ಯದಿಂದ ಗುರುತಿಸಲ್ಪಟ್ಟಿದ್ದರೂ, ಇದು ಪ್ರಕೃತಿಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿದೆ. ನವರಾತ್ರಿಯ ಪ್ರಾಣಿಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಪ್ರತಿಯೊಂದೂ ಶುದ್ಧತೆ, ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯದಂತಹ ದೈವಿಕ ಗುಣಗಳನ್ನು ಪ್ರತಿನಿಧಿಸುತ್ತದೆ. ಪೋಷಿಸುವ ಹಸುವಿನಿಂದ ಉಗ್ರ ಎಮ್ಮೆಯವರೆಗೆ, ಪ್ರತಿಯೊಂದು ಪ್ರಾಣಿಯು ಶಕ್ತಿಯ ವಿಶಿಷ್ಟ ಅಂಶವನ್ನು ಸಂಕೇತಿಸುತ್ತದೆ ಮತ್ತು ದೈನಂದಿನ ಜೀವನಕ್ಕೆ ಆಧ್ಯಾತ್ಮಿಕ ಪಾಠಗಳನ್ನು ಕಲಿಸುತ್ತದೆ. ದಿನ 1: ಹಸು – ಶುದ್ಧತೆ ಮತ್ತು ಪೋಷಿಸುವ ಶಕ್ತಿಯ ಸಂಕೇತ. ನವರಾತ್ರಿಯು ಪವಿತ್ರ ಹಸುವಿಗೆ ಸಂಬಂಧಿಸಿದ ದೇವಿ ಶೈಲಪುತ್ರಿಯೊಂದಿಗೆ ಪ್ರಾರಂಭವಾಗುತ್ತದೆ. ಹಸು ನಿಸ್ವಾರ್ಥ ದಾನ, ತಾಳ್ಮೆ ಮತ್ತು ತಾಯಿಯ ಪ್ರೀತಿಯನ್ನು ಪ್ರತಿನಿಧಿಸುತ್ತದೆ. ಮೊದಲ ದಿನ ಹಸುವನ್ನು ಗೌರವಿಸುವುದರಿಂದ ಶಾಂತಿ, ಸಾಮರಸ್ಯ ಮತ್ತು ಆಧ್ಯಾತ್ಮಿಕ ಶಕ್ತಿ ಬರುತ್ತದೆ ಎಂದು ಭಕ್ತರು ನಂಬುತ್ತಾರೆ. ಇದರ ಸಂಕೇತವು ಕರುಣೆ ನಿಜವಾದ ಶಕ್ತಿಯ ಅಡಿಪಾಯವನ್ನು ರೂಪಿಸುತ್ತದೆ…

Read More

ಬೆಂಗಳೂರು: ಇಂದು ಕನ್ನಡದ ಖ್ಯಾತ ಸಾಹಿತಿ, ಅಕ್ಷರ ಲೋಕದ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಸೆಪ್ಟೆಂಬರ್.26ರ ಶುಕ್ರವಾರ ಮಧ್ಯಾಹ್ನದಂದು ಮೈಸೂರಲ್ಲಿ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬಸ್ಥರ ಮೂಲಗಳಿಂದ ತಿಳಿದು ಬಂದಿದೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪನವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಇಂದಿನಿಂದ ನಾಳೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜತೆಯಿಂದ ಸಾವನ್ನಪ್ಪಿದಂತ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನಾಡಿದ್ದು ಶುಕ್ರವಾರ ಮಧ್ಯಾಹ್ನ ಮೈಸೂರಲ್ಲಿ ನೆರವೇರಿಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. https://kannadanewsnow.com/kannada/cabinet-approves-78-days-productivity-linked-bonus-for-railway-employees/ https://kannadanewsnow.com/kannada/breaking-veteran-writer-sl-bhyrappa-is-no-more-sl-bhyrappa-is-no-more/

Read More

ಬೆಂಗಳೂರು: ವಯೋಸಹಜವಾಗಿ ಕನ್ನಡ ಖ್ಯಾತ ಸಾಹಿತಿ, ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ( SL Bhyrappa ) ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರುಗಳು ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಸಂತಾಪ ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರೈಲ್ವೆ ಸಿಬ್ಬಂದಿಯ ಅತ್ಯುತ್ತಮ ಕಾರ್ಯಕ್ಷಮತೆಯನ್ನು ಗುರುತಿಸಿ 10,91,146 ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ಉತ್ಪಾದಕತೆ ಸಂಬಂಧಿತ ಬೋನಸ್ (PLB) ಅನ್ನು 1865.68 ಕೋಟಿ ರೂ.ಗಳಿಗೆ ಪಾವತಿಸಲು ಅನುಮೋದನೆ ನೀಡಿದೆ. ಪ್ರತಿ ವರ್ಷ ದುರ್ಗಾ ಪೂಜೆ / ದಸರಾ ರಜಾದಿನಗಳಿಗೆ ಮೊದಲು ಅರ್ಹ ರೈಲ್ವೆ ಉದ್ಯೋಗಿಗೆ PLB ಪಾವತಿಯನ್ನು ಮಾಡಲಾಗುತ್ತದೆ. ಈ ವರ್ಷವೂ ಸಹ, ಸುಮಾರು 10.91 ಲಕ್ಷ ಗೆಜೆಟೆಡ್ ಅಲ್ಲದ ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮಾನವಾದ PLB ಮೊತ್ತವನ್ನು ಪಾವತಿಸಲಾಗುತ್ತಿದೆ. PLB ಪಾವತಿಯು ರೈಲ್ವೆ ನೌಕರರನ್ನು ರೈಲ್ವೆಯ ಕಾರ್ಯಕ್ಷಮತೆಯ ಸುಧಾರಣೆಗೆ ಕೆಲಸ ಮಾಡಲು ಪ್ರೇರೇಪಿಸಲು ಪ್ರೋತ್ಸಾಹಕವಾಗಿ ಕಾರ್ಯನಿರ್ವಹಿಸುತ್ತದೆ. ಪ್ರತಿ ಅರ್ಹ ರೈಲ್ವೆ ಉದ್ಯೋಗಿಗೆ 78 ದಿನಗಳ ವೇತನಕ್ಕೆ ಸಮಾನವಾದ PLB ಯ ಗರಿಷ್ಠ ಪಾವತಿಸಬಹುದಾದ ಮೊತ್ತ 17,951 ರೂ. ಮೇಲಿನ ಮೊತ್ತವನ್ನು ರೈಲ್ವೆ ಸಿಬ್ಬಂದಿಗಳಾದ ಹಳಿ ನಿರ್ವಹಣಾಕಾರರು, ಲೋಕೋ ಪೈಲಟ್‌ಗಳು, ರೈಲು…

Read More

ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಅಕ್ಷರ ಮಾಂತ್ರಿಕ ಎಸ್ ಎಲ್ ಭೈರಪ್ಪ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳನ್ನು ಸೂಚಿಸಿದ್ದಾರೆ. https://twitter.com/siddaramaiah/status/1970787632062882109

Read More

ಶಿವಮೊಗ್ಗ : ಸಹಕಾರ ಸಂಸ್ಥೆ ಬೆಳೆಯಲು ಆಡಳಿತ ಮಂಡಳಿ ಹಾಗೂ ಷೇರುದಾರರ ಹೊಣೆಗಾರಿಕೆ ಮುಖ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಷೇರುದಾರರು ಸಂಘದಲ್ಲಿ ಮಾರಾಟಕ್ಕಿಟ್ಟಿರುವ ಪರಿಕರಗಳನ್ನು ಖರೀದಿ ಮಾಡುವ ಮೂಲಕ ಸಂಘದ ಬೆಳವಣಿಗೆಗೆ ಉತ್ತೇಜನ ನೀಡಬೇಕು ಎಂದು ಸೊರಬದ ಶ್ರೀಮಾರಿಕಾಂಬಾ ರೈತ ಉತ್ಪಾದಕರ ಸೌಹಾರ್ದ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಎಚ್.ಎನ್.ಚಂದ್ರಪ್ಪ ಗುಂಜನೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಚಿಕ್ಕಪೇಟೆಯಲ್ಲಿ ಕಾರ್ಯನಿರ್ವಹಿಸುವ ಶ್ರೀ ಮಾರಿಕಾಂಬಾ ರೈತ ಉತ್ಪಾದಕ ಸಹಕಾರ ಸಂಘದ ಪಕ್ಕದಲ್ಲಿರುವ ಶ್ರೀಸತ್ಯನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎರಡನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹನಿಹನಿ‌ ಕೂಡಿದರೆ ಹಳ್ಳ ಎನ್ನುವಂತೆ ನಾವು ಮಾಡುವ ಸಣ್ಣ ವಹಿವಾಟು ದೊಡ್ಡಮಟ್ಟದ ವ್ಯವಹಾರವಾಗಿ ಬದಲಾಗುತ್ತದೆ. ಜೊತೆಗೆ ಸಂಘದಲ್ಲಿ ಷೇರುದಾರರು ಬ್ಯಾಂಕಿನಲ್ಲಿ ಠೇವಣಿ ಇಡುವ ಬದಲು ನಮ್ಮ ಸಂಘದ ಹೂಡಿಕೆಯನ್ನು ಮಾಡಿದರೆ ಅತಿ ಅವಶ್ಯವಿರುವ ರೈತರಿಗೆ ಸಾಲ ನೀಡಲು ಅನುಕೂಲವಾಗುತ್ತದೆ. ಖಾಸಗಿ ಗೊಬ್ಬರದ ಅಂಗಡಿಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಗೊಬ್ಬರ, ಕೀಟನಾಶಕಗಳನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 600 ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಒಂದು ಸಾರ್ವಜನಿಕ ಸೇವಾ ನಿರತ ಇಲಾಖೆಯಾಗಿದ್ದು, ಶುಶೂಷಾಧಿಕಾರಿ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ವೃಂದದ ಅರೆ ವೈದ್ಯಕೀಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿಯನ್ನು ಕೋರುತ್ತಾ, ನೇರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ. ಆಯುಕ್ತಾಲಯದ ದಿನಾಂಕ: 01/09/2023ರ ಪುಸ್ತಾವನೆಗೆ ಸಂಬಂಧಿಸಿದಂತೆ ಮೇಲೆ ಓದಲಾದ ಕ್ರಮಾಂಕ(2)ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ…

Read More