Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವ ಅದ್ದೇಶಕ್ಕಾಗಿ ಗರಿಷ್ಠ ಅರ್ಹತಾದಾಯಕ ಸೇವೆಯ ಪ್ರಮಾಣವನ್ನು 30 ವರ್ಷಕ್ಕೆ ಇಳಿಕೆ ಮಾಡಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಆದೇಶ ಸಂಖ್ಯೆ: ಆಇ 22 ಎಸ್‌ಆರ್‌ಪಿ 2017, ದಿನಾಂಕ 01.06.2017ರನ್ವಯ ರಚಿಸಲಾಗಿದ್ದ ಆರನೇ ರಾಜ್ಯ ವೇತನ ಆಯೋಗವು ದಿನಾಂಕ 31.01.2018ರಂದು ತನ್ನ ವರದಿಯನ್ನು (ಮೊದಲ ಸಂಪುಟ) ಸಲ್ಲಿಸಿದೆ. ಈ ಕುರಿತಾದ ಆರನೇ ರಾಜ್ಯ ವೇತನ ಆಯೋಗದ ಶಿಫಾರಸ್ಸನ್ನು ಸರ್ಕಾರವು ಪರಿಗಣಿಸಿದೆ. ಮತ್ತು ರಾಜ್ಯ ಸರ್ಕಾರಿ ನೌಕರರು ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವಲ್ಲಿನ ಗರಿಷ್ಠ ಅರ್ಹತಾದಾಯಕ ಸೇವೆಯ ಪರಿಷ್ಕರಣೆ ಸಂಬಂಧದ ಶಿಫಾರಸ್ಸನ್ನು ಅಂಗೀಕರಿಸಿ, ಈ ಕೆಳಕಂಡಂತೆ ಆದೇಶವನ್ನು ಹೊರಡಿಸಲು ಹರ್ಷಿಸುತ್ತದೆ ಎಂದಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವ ಉದ್ದೇಶಕ್ಕಾಗಿ ಕರ್ನಾಟಕ ನಾಗರೀಕ ಸೇವಾ ನಿಯಮಗಳಲ್ಲಿ ವಿಧಿಸಲಾಗಿರುವ…

Read More

ಬೆಂಗಳೂರು: ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ನಂತರ ಕಾಂಗ್ರೆಸ್ ಮುಖಂಡ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗರು ಕರ್ನಾಟಕ ವಿಧಾನಸಭೆಯಲ್ಲಿ ‘ಪಾಕಿಸ್ತಾನ್ ಜಿನಾದಾಬಾದ್’ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. “ಏನಾಯಿತು? ಕಾಂಗ್ರೆಸ್ ನ ವರ್ಚಸ್ಸು ಚೆನ್ನಾಗಿದೆ. ವಾಸ್ತವವಾಗಿ, ಅದು ಸುಧಾರಿಸಿದೆ. ಯಾರಾದರೂ ಘೋಷಣೆಗಳನ್ನು ಕೂಗಿದ್ದರೆ ಅಥವಾ ಪಾಕಿಸ್ತಾನವನ್ನು ಬೆಂಬಲಿಸಿದ್ದರೆ, ಆ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಿ. ಇದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ರಾಜಣ್ಣ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕ್ರಮವನ್ನು ಬೆಂಬಲಿಸಿದ ಕರ್ನಾಟಕ ಸಚಿವರು, ಬುಲ್ಡೋಜರ್ಗಳನ್ನು ಬಳಸಿ ಆರೋಪಿಗಳ ಮನೆಗಳನ್ನು ನೆಲಸಮಗೊಳಿಸುವಂತಹ ಸರ್ಕಾರದ ಕ್ರಮಗಳಿಂದ ಜನನಿಬಿಡ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹೇಳಿದರು. “ಉತ್ತರ ಪ್ರದೇಶದಲ್ಲಿ ಮನೆಗಳನ್ನು ನೆಲಸಮ ಮಾಡಲಾಗಿದೆ. ಅದಕ್ಕೆ ಯಾವುದೇ ಕಾನೂನು ಇಲ್ಲ, ಆದರೆ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿಲ್ಲವೇ? ನಾವು ಅದನ್ನು ವಿರೋಧಿಸುವುದಿಲ್ಲ” ಎಂದು ಅವರು ಹೇಳಿದರು.…

Read More

ಬೆಂಗಳೂರು : ರಾಜ್ಯ ಸರ್ಕಾರ ಸಮಗ್ರ ಕೃಷಿಗೆ ಒತ್ತು ನೀಡುತ್ತದೆ. ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ ಸೇರಿದಂತೆ ಬಹು ಕೃಷಿ ಪದ್ಧತಿ ರೂಢಿಸಿಕೊಂಡಾಗ ಮಾತ್ರ ರೈತರ ಆದಾಯ ಹೆಚ್ಚಲು ಸಾಧ್ಯ. ಅದೇ ರೀತಿ ಕೃಷಿ ಕ್ಷೇತ್ರದಲ್ಲಿ ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು,”ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಕೆವಿಕೆ ಆವರಣದಲ್ಲಿ ಇಂಧನ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ‘ರೈತ ಸೌರಶಕ್ತಿ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅತ್ಯಂತ ಸಂತೋಷದಿಂದ ಮೇಳ ಉದ್ಘಾಟಿಸಿದ್ದೇನೆ. ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ನೇತೃತ್ವದಲ್ಲಿ ರೈತ ಸೌರ ಶಕ್ತಿ ಮೇಳ ಏರ್ಪಾಡಾಗಿದೆ. ಸೌರ ಶಕ್ತಿ ಕ್ಷೇತ್ರದಲ್ಲಿ ಆಗಿರುವಂಥ ಬೆಳವಣಿಗೆ ರೈತರನ್ನು ತಲುಪಿ, ಕೃಷಿಯಲ್ಲಿ ಬಳಸಿಕೊಂಡಾಗ ಮಾತ್ರ ಅದು ಸಾರ್ಥಕವಾಗುತ್ತದೆ,”ಎಂದರು. “ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳಾಗಿ, ಅದು ರೈತರಿಗೆ ತಲುಪಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲ ಪ್ರದೇಶಗಳಿಗೆ ನೀರಾವರಿ ಒದಗಿಸಲು ಸಾಧ್ಯವಾಗದು. ರಾಜಸ್ಥಾನ ಹೊರತುಪಡಿಸಿದರೆ ಹೆಚ್ಚು ಒಣ ಭೂಮಿ ಇರುವುದು ಕರ್ನಾಟಕದಲ್ಲಿ. ರೈತರು ಇಂಥ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿದ್ದಂತ ಡಾ.ಯೋಗೇಶ್ ಬಾಬು ಅವರಿಗೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇಂತಹ ಹುದ್ದೆಯನ್ನು ಮಾ.11ರಂದು ಪದಗ್ರಹಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ನಿಷ್ಠಾಪಂತ ಕಾರ್ಯಕರ್ತ ಡಾ.ಬಿ ಯೇಗೇಶ್ ಬಾಬು ಅವರನ್ನು ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದ್ದರು. ಡಾ.ಬಿ ಯೋಗೇಶ್ ಬಾಬು ಅವರು ನೂತನವಾಗಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ ನೇಮಕವಾದಂತ ಹುದ್ದೆಗೆ ದಿನಾಂಕ 11-03-2024ರಂದು ಅಧಿಕಾರ ಪದಗ್ರಹಣ ಮಾಡಲಿದ್ದಾರೆ. ಮಾ.11ರಂದು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಇರುವಂತ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಕಚೇರಿಯಲ್ಲಿ ಅಧ್ಯಕ್ಷರಾಗಿ ಡಾ.ಬಿ ಯೋಗೇಶ್ ಬಾಬು ಅಧಿಕಾರ ಸ್ವೀಕರಿಸಲಿದ್ದಾರೆ. https://kannadanewsnow.com/kannada/congress-government-will-be-in-power-for-10-years-ramalinga-reddy/ https://kannadanewsnow.com/kannada/big-relief-for-bengaluru-people-rs-5000-fine-for-using-water-for-other-purposes-after-march-15/

Read More

ಬೆಂಗಳೂರು: ನಗರದ ಗ್ಯಾರೇಜ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡಿರೋ ಘಟನೆ ನಡೆದಿದೆ. ಅಲ್ಲದೇ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಉಂಟಾದಂತ ಭಾರೀ ಶಬ್ದರಿಂದ ಅಕ್ಕಪಕ್ಕದ ಜನರು ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವಂತ ಗ್ಯಾರೇಜ್ ನಲ್ಲಿ ವೇಲ್ಡಿಂಗ್ ಮಾಡುವಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಈ ಘಟನೆಯಲ್ಲಿ ಸ್ವಿಫ್ಟ್ ಡಿಸೈರ್ ಕಾರು, ದ್ವಿಚಕ್ರ ವಾಹನ ಸಂಪೂರ್ಣ ಹಾನಿಯಾಗಿದೆ. ಈ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಸಿ ಮಾಹಿತಿ ಪಡೆದರು. ಈ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bengalureans-dont-worry-cauvery-water-supply-bwssb/ https://kannadanewsnow.com/kannada/pedestrian-killed-in-hit-and-run-on-nelamangala-highway/

Read More

ಬೆಂಗಳೂರು : ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಪ್ರದೇಶಗಳಿಗೆ 1470 ಎಂಎಲ್‍ಡಿ ಕಾವೇರಿ ನೀರನ್ನು ನಿತ್ಯ ಸರಬರಾಜು ಮಾಡಲಾಗುತ್ತಿದೆ. ಈ ಸರಬರಾಜಿನಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗಿಲ್ಲ. ಬೆಂಗಳೂರು ನಗರಕ್ಕೆ ಬರುವ ನೀರು ಬರುತ್ತಿದೆ. ನಗರದಲ್ಲಿ ಸಮರ್ಪಕ ನೀರು ಸರಬರಾಜಿಗೂ ಸಹ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬದ್ಧವಾಗಿದ್ದು ಬೆಂಗಳೂರಿಗರು ಯಾವುದೇ ಸುಳ್ಳುವದಂತಿಗಳಿಗೆ ಕಿವಿಗೊಡಬೇಡಿ ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಮನವಿ ಮಾಡಿದ್ದಾರೆ. ಮಂಡಳಿಯ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೆಂಗಳೂರು ನಗರಕ್ಕೆ 1.54ಟಿಎಂಸಿ ನೀರು ತಿಂಗಳಿಗೆ ಅಗತ್ಯವಾಗಿದ್ದು,ಮಾರ್ಚ್ ತಿಂಗಳಿಂದ ಜುಲೈ ಅಂತ್ಯದವರೆಗೆ 8 ಟಿಎಂಸಿ ಅಗತ್ಯವಿದೆ. ಬೆಂಗಳೂರು ಸೇರಿದಂತೆ ಕಾವೇರಿ ನೀರಿನ ಮೇಲೆ ಅವಲಂಬನೆಯಾಗಿರುವ ನಗರಗಳಿಗೆ ಜುಲೈ ಅಂತ್ಯದವರೆಗೆ 17 ಟಿಎಂಸಿ ನೀರು ಬೇಕಾಗಿದ್ದು,ಕಾವೇರಿ ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಬೇಡಿಕೆಗಿಂತ ಎರಡುಪಟ್ಟು ನೀರು ಸಂಗ್ರಹವಿದ್ದು;ಯಾವುದೇ ರೀತಿಯ ಆತಂಕ ಬೇಡ. ನೀರನ್ನು ನಗರಕ್ಕೆ ಸಮರ್ಪಕವಾಗಿ ಸರಬರಾಜು ಮಾಡಲು ಬದ್ಧವಾಗಿದ್ದೇವೆ ಎಂದರು.…

Read More

ಭಾನುವಾರ ಸಾಮಾನ್ಯವಾಗಿ ಭಾನುವಾರವಾದರೆ ಅಂದು ಕೆಟ್ಟ ದೃಷ್ಟಿ(ಖಾನ್ ದೃಷ್ಟಿ) ಯನ್ನು ಕಳೆಯುವುದು ವಿಶೇಷ. ಮೇಲಾಗಿ ಮಾಘ ಮಾಸ ಬಂದಿರುವ ಈ ಭಾನುವಾರಗಳಲ್ಲಿ ವಾರಕ್ಕೊಮ್ಮೆ ಮನೆಯಲ್ಲಿ ಇರುವವರಿಗೆ ಕೆಟ್ಟ ದೃಷ್ಟಿ(ಖಾನ್ ದೃಷ್ಟಿ) ತೆಗೆದರೆ ನಮ್ಮ ಸಂಸಾರಕ್ಕೆ ಒಳ್ಳೆಯದಾಗುವುದು ಖಂಡಿತ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ…

Read More

ಬೆಂಗಳೂರು: ನಗರದಲ್ಲಿ ನೀರಿನ ಬಿಕ್ಕಟ್ಟು ಹೆಚ್ಚಾಗಿದೆ. ನೀರು ಅತ್ಯಮೂಲ್ಯ. ಮಿತವಾಗಿ ಬಳಸಿ ಎಂಬುದಾಗಿ ರಾಜ್ಯ ಸರ್ಕಾರ ಜನತೆಗೆ ತಿಳಿಸಿ ಹೇಳಿದೆ. ಅಲ್ಲದೇ ಅನ್ಯಕಾರ್ಯಗಳಿಗೆ ನೀರು ಬಳಕೆ ಮಾಡಿದ್ರೇ 5,000 ದಂಡ ವಿಧಿಸೋದಾಗಿ ಆದೇಶಿಸಿತ್ತು. ಆದ್ರೇ ಮಾ.15ರಿಂದ ಅನ್ಯ ಉದ್ದೇಶಕ್ಕೆ ನೀರು ಬಳಸಿದ್ರೇ ದಂಡ ವಿಧಿಸಲಾಗುತ್ತದೆ ಎಂಬುದಾಗಿ ಜಲಮಂಡಳಿ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕಾವೇರಿ ನೀರನ್ನು ಕುಡಿಯುವ ಉದ್ದೇಶ ಹೊರತುಪಡಿಸಿ ಅನ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಿ ಈಗಾಗಲೇ ಜಲಮಂಡಳಿಯ ಕಾಯ್ದೆ ಅಡಿ ಆದೇಶ ಹೊರಡಿಸಲಾಗಿದ್ದು, ಜನರು ಸಹ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅವರು ಮಾ.15ರಿಂದ ಇದನ್ನು ಅನುಷ್ಠಾನಗೊಳಿಸಲಾಗುವುದು ಎಂದರು. ಅನ್ಯ ಉದ್ದೇಶಕ್ಕೆ ಬಳಸುವುದು ಕಂಡುಬಂದಲ್ಲಿ ನಮ್ಮ ಮಂಡಳಿ ಸಿಬ್ಬಂದಿ ಸ್ಥಳದಲ್ಲಿಯೇ ಆದೇಶದ ಅನುಸಾರ ದಂಡ ವಿಧಿಸಲಿದ್ದಾರೆ. ಈ ಕುರಿತು ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಅಪಾರ್ಟ್‍ಮೆಂಟ್ ನಿವಾಸಿಗಳಿಗೆ ನೀರು…

Read More

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೋರ್ಟಲ್‍ನಲ್ಲಿ ಇದುವರೆಗೆ 1530 ಟ್ಯಾಂಕರ್ ಗಳು ನೋಂದಣಿಯಾಗಿದ್ದು, ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ. ಅದಾದ ನಂತರವೂ ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಲಮಂಡಳಿ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು. ಈ 1530 ಟ್ಯಾಂಕರ್‌ಗಳಿಂದ ನಿತ್ಯ 10 ಎಂಎಲ್‍ಡಿ ನೀರನ್ನು ಒಂದೇ ಬಾರಿಗೆ ಸರಬರಾಜು ಮಾಡಬಹುದು. ನೋಂದಣಿಯಾದ ಟ್ಯಾಂಕರ್ ಗಳಿಗೆ ಸ್ಟಿಕ್ಕರ್ ಅಳವಡಿಸಲಾಗುವುದು; ಆ ಟ್ಯಾಂಕರ್ ಗಳು ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿರುವ ದೂರುಗಳು ಕೇಳಿಬಂದಲ್ಲಿ ಕ್ರಮಕೈಗೊಳ್ಳಲಾಗುವುದು. 419 ಜನರು ಸ್ವಯಂಪ್ರೇರಿತವಾಗಿ ಬಾಡಿಗೆಗೆ ತಮ್ಮ ಟ್ಯಾಂಕರ್ ಗಳನ್ನು ಮಂಡಳಿಗೆ ನೀಡಲು ಮುಂದೆ ಬಂದಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬೇಕಾಬಿಟ್ಟಿಯಾಗಿ ಬೊರವೆಲ್‍ಗಳನ್ನು ಕೊರೆಯುವುದರ ಬದಲು ನೀರಿನ ಲಭ್ಯತೆ ಆಧರಿಸಿ ಭೂವಿಜ್ಞಾನಿಗಳ ವರದಿಯ ಆಧಾರದ ಮೇಲೆ ಬೊರವೆಲ್‍ಗಳನ್ನು ಕೊರೆಯಿಸಲು ಮಂಡಳಿ ಉದ್ದೇಶಿಸಿದ್ದು,ಇದಕ್ಕಾಗಿ 4 ಜನ ಭೂವಿಜ್ಞಾನಿಗಳನ್ನು ಸಹ ತೆಗೆದುಕೊಳ್ಳಲಾಗಿದೆ ಎಂದರು. https://kannadanewsnow.com/kannada/pedestrian-killed-in-hit-and-run-on-nelamangala-highway/ https://kannadanewsnow.com/kannada/congress-government-will-be-in-power-for-10-years-ramalinga-reddy/

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನಾಳೆ ಬೆಳಿಗ್ಗೆ ಮೆಟ್ರೋ ಸಂಚಾರವು ಬೆಳಿಗ್ಗೆ 7 ಗಂಟೆಯ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ದಿನಾಂಕ 10ನೇ ಮಾರ್ಚ್ 2024 (ಭಾನುವಾರ)ದಂದು ಕರ್ನಾಟಕ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ 10K/5K ರನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ಬಿಎಂಆರ್‌ಸಿಎಲ್‌, ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಎಲ್ಲಾ ನಾಲ್ಕು ಟರ್ಮಿನಲ್‌ಗಳಿಂದ ದಿನಾಂಕ 10.03.2024 ರಂದು ಬೆಳಿಗ್ಗೆ 07.00ರ ಬದಲಾಗಿ 06.00 ಗಂಟೆಗೆ ಪ್ರಾರಂಭಿಸಲಿದೆ ಎಂದು ತಿಳಿಸಿದೆ. https://kannadanewsnow.com/kannada/this-famous-ram-temple-in-the-state-will-be-exploded-in-the-name-of-allah-hu-bomb-threat-letter/ https://kannadanewsnow.com/kannada/pedestrian-killed-in-hit-and-run-on-nelamangala-highway/

Read More