Author: kannadanewsnow09

ಬೆಂಗಳೂರು: ಈಗಾಗಲೇ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಬ್ಯಾನ್ ಮಾಡಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ವಿಷಕಾರಕ, ಕ್ಯಾನ್ಸರ್ ಕಾರಕ ಅಂಶಗಳಿರುವಂತ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಬ್ಯಾನ್ ಮಾಡೋದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ತಿಳಿದು ಬಂದಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಈಗಾಗಲೇ ಹಾನಿಕಾರ ಅಂಶವಿರುವಂತ ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯಲ್ಲಿ (Gobi Manchuri)ಯ ಸ್ಯಾಂಪಲ್ ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಿ, ಪರೀಕ್ಷಾ ವರದಿಯನ್ನು ಪಡೆದುಕೊಂಡಿದೆ. ಈ ವರದಿಯನ್ನು ಆಧರಿಸಿ ಕರ್ನಾಟಕದಲ್ಲಿ ಬಾಂಬೆ ಮಿಠಾಯಿ ಹಾಗೂ ಗೋಬಿ ಮಂಚೂರು ಬ್ಯಾನ್ ಮಾಡೋದಾಗಿ ಹೇಳಲಾಗುತ್ತಿದೆ. ಇನ್ನೂ  ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ಸೋಮವಾರ (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ…

Read More

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ವಿವಿಧ ಆಯಾಮಗಳಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಮುದ್ರ ಮಾರ್ಗದಲ್ಲಿ ಪಲಾಯಣ ಮಾಡಿರೋ ಶಂಕೆಯಲ್ಲಿ ಕರಾವಳಿ ಕಾವಲುಪಡೆಯಿಂದ ಪರಿಶೀಲನೆ ನಡೆಸುತ್ತಿದ್ದರೇ, ಮತ್ತೊಂದು ಆಯಾಮವಾಗಿ ಈಗ ಬಾಂಬರ್ ಪುಣೆಯಲ್ಲಿರುವ ಶಂಕೆ ವ್ಯಕ್ತವಾಗಿದೆ. ಮಾ.1ರಂದು ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ 2 ಬಾಂಬ್ ಸ್ಪೋಟಗೊಂಡಿದ್ದವು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದರು. ಈಗಾಗಲೇ ಗಾಯಾಳುಗಳಲ್ಲಿ ಹಲವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಕೆಲವರು ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕೇಸ್ ಸಂಬಂಧ ತನಿಖೆಯನ್ನು ಎನ್ಐಎ ಅಧಿಕಾರಿಗಳು ಚುರುಕಾಗಿ ನಡೆಸುತ್ತಿದ್ದಾರೆ. ಈಗಾಗಲೇ ಬಾಂಬರ್ ಎರಡು ಮೂರು ವೀಡಿಯೋಗಳನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ ಇಂದು ಮೂರು ಬಾಂಬರ್ ಕ್ಲಿಯರ್ ಪೋಟೋಗಳನ್ನು ಬಿಡುಗಡೆ ಮಾಡಲಾಗಿತ್ತು. ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ನಗದು ಬಹುಮಾನ ಕೂಡ ಘೋಷಣೆ ಮಾಡಲಾಗಿದೆ. ಇದೀಗ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ…

Read More

ಚೆನ್ನೈ: 2,000 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಮಾಜಿ ಕಾರ್ಯಕರ್ತ ಜಾಫರ್ ಸಾದಿಕ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬಂಧಿಸಿದೆ. ಎನ್ಸಿಬಿ ಶನಿವಾರ ಹೇಳಿಕೆಯಲ್ಲಿ, ಮಾದಕವಸ್ತು “ಬ್ಯಾರನ್” ಅನ್ನು ಬಂಧಿಸಿದೆ ಎಂದು ಹೇಳಿದೆ. ಆಡಳಿತಾರೂಢ ಡಿಎಂಕೆಯ ಎನ್ಆರ್ಐ ಸೆಲ್ನ ಮಾಜಿ ಪದಾಧಿಕಾರಿಯಾಗಿದ್ದ ಸಾದಿಕ್ ಕೂಡ ಚಲನಚಿತ್ರಗಳನ್ನು ನಿರ್ಮಿಸಿದ್ದರು. ಒಂದು ವಾರದ ಹಿಂದೆ ಎನ್ಸಿಬಿ ತನ್ನ ಕೆಲವು ಸಹಾಯಕರನ್ನು ಬಂಧಿಸಿದ ನಂತರ ಸಾದಿಕ್ ಕಳೆದ ಕೆಲವು ದಿನಗಳಿಂದ ಪರಾರಿಯಾಗಿದ್ದರು. ಆಹಾರ ಉತ್ಪನ್ನಗಳಲ್ಲಿ ಅಡಗಿಸಿಟ್ಟಿರುವ ಮಾದಕವಸ್ತುಗಳನ್ನು ತಮ್ಮ ದೇಶಗಳಿಗೆ ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದ ಅಧಿಕಾರಿಗಳು ಭಾರತೀಯ ಏಜೆನ್ಸಿಗಳಿಗೆ ಮಾಹಿತಿ ನೀಡಿದ ನಂತರ ಈ ದಂಧೆಯನ್ನು ಬಯಲಾಗಿತ್ತು. ಅಂತರರಾಷ್ಟ್ರೀಯ ಡ್ರಗ್ ಕಾರ್ಟೆಲ್ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ವರದಿಗಳ ನಡುವೆ ಸಾದಿಕ್ ಅವರನ್ನು ಡಿಎಂಕೆಯಿಂದ ವಜಾಗೊಳಿಸಲಾಯಿತು. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/this-famous-ram-temple-in-the-state-will-be-exploded-in-the-name-of-allah-hu-bomb-threat-letter/ https://kannadanewsnow.com/kannada/pedestrian-killed-in-hit-and-run-on-nelamangala-highway/

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರೊಂದು ಪಾದಚಾರಿಗೆ ಡಿಕ್ಕಿಹೊಡೆದ ಪರಿಣಾಮ, ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಬಾಲಕೃಷ್ಣನ್ ಎಂಬುವರಿ ಕಾರೋಂದು ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಪಾದಚಾರಿ ಬಾಲಕೃಷ್ಣನ್ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ನೆಲಮಂಗಲ ಬಳಿಯ ವಿಶ್ವೇಶ್ವರಪುರಂ ಬಳಿಯಲ್ಲಿ ಈ ಹಿಟ್ ಅಂಡ್ ರನ್ ಕೇಸ್ ನಡೆದಿದೆ. ಈ ಘಟನೆಯ ಬಳಿಕ ಕಾರು ಚಾಲಕ ಕಾರು ಬಿಟ್ಟು ಪರಾರಿಯಾಗಿರೋದೋಗಿ ತಿಳಿದು ಬಂದಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/this-famous-ram-temple-in-the-state-will-be-exploded-in-the-name-of-allah-hu-bomb-threat-letter/ https://kannadanewsnow.com/kannada/nia-releases-new-pics-of-bangalore-cafe-bomber/

Read More

ಬೆಂಗಳೂರು: ನಗರದಲ್ಲಿ ಡ್ಯಾನ್ ಮಾಡುವಾಗ ಮೈ ಟಚ್ ಮಾಡಿದ ಅಂತ ಒಂದೇ ಒಂದು ಕಾರಣಕ್ಕೆ ಯುವಕನೋರ್ವನನ್ನು ನಾಲ್ವರು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರೋ ಘಟನೆ ನಡೆದಿದೆ. ಬೆಂಗಳೂರಿನ ಗಿರಿನಗರದಲ್ಲಿ ಶಿವರಾತ್ರಿ ಪ್ರಯುಕ್ತ ಡ್ಯಾನ್ಸ್ ಆಯೋಜಿಸಲಾಗಿತ್ತು. ಈ ಡ್ಯಾನ್ಸ್ ಮಾಡುವ ವೇಳೆಯಲ್ಲಿ ಯೋಗೇಶ್(23) ಮೈ ಟಚ್ ಮಾಡಿದ್ದನಂತೆ. ಈ ಕಾರಣಕ್ಕೆ ಡ್ಯಾನ್ಸ್ ಮುಗಿಸಿ ಮನೆಗೆ ಹೊರಟಂತ ಯೋಗೇಶ್ ನನ್ನು ನಾಲ್ವರು ಹಿಂಭಾಲಿಸಿ ತೆರಳಿದ್ದಾರೆ. ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಂತ ಯೋಗೇಶ್ ನನ್ನು ಫಾಲೋ ಮಾಡಿದಂತ ನಾಲ್ವರು ಗಲಾಟೆ ತೆಗೆದು ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದಿದ್ದಾರೆ. ಚಾಕು ಇರಿತಕ್ಕೆ ಒಳಗಾದಂತ ಯೋಗೇಶ್ವರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಂತ ಬ್ಯಾಟರಾಯನಪುರ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. https://kannadanewsnow.com/kannada/nia-releases-new-pics-of-bangalore-cafe-bomber/ https://kannadanewsnow.com/kannada/this-famous-ram-temple-in-the-state-will-be-exploded-in-the-name-of-allah-hu-bomb-threat-letter/

Read More

ಕೋಲ್ಕತ್ತಾ: ಈಸ್ಟ್ ವೆಸ್ಟ್ ಮೆಟ್ರೋ ರೈಲು ನಿಗಮವು ಮಾರ್ಚ್ 15 ರಿಂದ ಅಂಡರ್ ವಾಟರ್ ಮೆಟ್ರೋ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಶನಿವಾರ ಘೋಷಿಸಿದೆ. ಕಳೆದ ಬುಧವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾ ಮತ್ತು ಅದರ ಅವಳಿ ಹೌರಾವನ್ನು ಸಂಪರ್ಕಿಸುವ ನೀರೊಳಗಿನ ಮೆಟ್ರೋ ಸಂಪರ್ಕವನ್ನು ಉದ್ಘಾಟಿಸಿದ್ದರು. ಅದೃಷ್ಟಶಾಲಿ ಶಾಲಾ ಮಕ್ಕಳ ಗುಂಪಿನೊಂದಿಗೆ ಪ್ರಧಾನಿ ನದಿಯ ಕೆಳಗೆ ಸವಾರಿ ಮಾಡಿದರು. ಆದರೆ ಸರಾಸರಿ ಕೋಲ್ಕತ್ತಾ ನಾಗರಿಕರು ಇಂತಹ ಅಂಡರ್ ವಾಟರ್ ಮೆಟ್ರೋದಲ್ಲಿ ಪ್ರಯಾಣಿಸಲು ಕಾಯಬೇಕಾಗುತ್ತದೆ ಎನ್ನಲಾಗಿತ್ತು. ಆದರೇ ಇದೀಗ ಅದಕ್ಕೆ ಅವಕಾಶ ಕೂಡಿ ಬಂದಿದೆ. ಮಾರ್ಚ್.15ರಿಂದ ಕೋಲ್ಕತ್ತಾದ ಅಂಡರ್ ವಾಟರ್ ಮೆಟ್ರೋ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗಲಿದೆ. ಈ ಬಗ್ಗೆ ಈಸ್ಟ್ ವೆಸ್ಟ್ ಮೆಟ್ರೋ ರೈಲು ನಿಗಮ ಅಧಿಕೃತ ಮಾಹಿತಿಯನ್ನೂ ನೀಡಿದೆ. https://kannadanewsnow.com/kannada/nia-releases-new-pics-of-bangalore-cafe-bomber/ https://kannadanewsnow.com/kannada/this-famous-ram-temple-in-the-state-will-be-exploded-in-the-name-of-allah-hu-bomb-threat-letter/

Read More

ಬೆಂಗಳೂರು: ಖಾಸಗಿ ಟ್ಯಾಂಕರ್ ಗಳಿಗೆ ಸಿಗುವ ನೀರು ಸರ್ಕಾರಕ್ಕೆ ಯಾಕೆ ಸಿಗುತ್ತಿಲ್ಲ ಎಂದು ಸಾರ್ವಜನಿಕ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಖಾಸಗಿ ಟ್ಯಾಂಕರ್ ಗಳು ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸುತ್ತಿವೆ. ಸರ್ಕಾರದ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ಪೂರೈಸಲಾಗುತ್ತಿದೆ. ದುರಸ್ತಿ ಇದ್ದ ಘಟಕಗಳನ್ನು ರಿಪೇರಿ ಮಾಡುತ್ತಿದ್ದೇವೆ. ಇನ್ನು ಮೂರ್ನಾಲ್ಕು ತಿಂಗಳು ಈ ಸಮಸ್ಯೆ ಇರುತ್ತವೆ. ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ನಮಗೆ ನೀರಿನ ಬೆಲೆ ಗೊತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಗ್ರಾಮಾಂತರ ಜಿಲ್ಲೆ ಕೊಳವೆ ಬಾವಿ ಮೇಲೆ ಅವಲಂಬಿತ, ಹೀಗಾಗಿ ನೋಡಲ್ ಅಧಿಕಾರಿ ನೇಮಕ ಬೆಂಗಳೂರು ಗ್ರಾಮಾಂತರ ಭಾಗದ ವಾರ್ಡ್ ಗಳಿಗೆ ನೋಡಲ್ ಅಧಿಕಾರಿ ನೇಮಿಸಿದ್ದು, ಬೇರೆ ಭಾಗಗಳಲ್ಲಿ ಯಾಕೆ ನೇಮಿಸಿಲ್ಲ ಎಂದು ಕೇಳಿದಾಗ, “ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಭಾಗ ಸಂಪೂರ್ಣವಾಗಿ ಕೊಳವೆ ಬಾವಿಗಳ ಮೇಲೆ ಅವಲಂಬಿತವಾಗಿವೆ. ಬೆಂಗಳೂರು ನಗರ ಕಾವೇರಿ ನೀರನ್ನು ಅವಲಂಬಿಸಿದೆ. ಬೆಂಗಳೂರು ಗ್ರಾಮಾಂತರದಿಂದಲೇ…

Read More

ಬೆಂಗಳೂರು: ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, “ನಾವು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಹೈಕಮಾಂಡ್ ಗೆ ಹೆಸರು ರವಾನೆ ಮಾಡುತ್ತೇವೆ. 11ರಂದು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಟ್ಟಿ ಪ್ರಕಟಿಸುತ್ತಾರೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಜನರಿಗೆ ಹೇಗೆ ಮುಖ ತೋರಿಸುತ್ತಾರೆ? ಬಿಜೆಪಿಗಿಂತ ಮುನ್ನ ನೀವು ಟಿಕೆಟ್ ಘೋಷಣೆ ಮಾಡಿದ್ದೀರಿ ಎಂದು ಕೇಳಿದಾಗ, “ಈಗಿನ ರಾಜಕೀಯ ನೋಡಿ ಬಹಳ ನೋವಾಗುತ್ತಿದೆ. ಕುಮಾರಸ್ವಾಮಿ ಅವರು ತಮ್ಮ ಸರ್ಕಾರವನ್ನು ಬೀಳಿಸಿದ ಯಡಿಯೂರಪ್ಪ, ಯೋಗೇಶ್ವರ್, ಮುನಿರತ್ನ ಅವರನ್ನು ಈಗ ತಬ್ಬಾಡುತ್ತಿದ್ದಾರೆ. ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂದು ಬಹಳ ವ್ಯಥೆಯಾಗುತ್ತಿದೆ. ನಾವು ಕುಮಾರಣ್ಣ ಅವರನ್ನು 5 ವರ್ಷ ಸಿಎಂ ಮಾಡಬೇಕು ಎಂದು ಮೈತ್ರಿ ಸರ್ಕಾರ ಮಾಡಿದೆವು. ಆ ಸರ್ಕಾರ ಬೀಳಿಸಿದವರ ಜೊತೆ ಈಗ ಕುಮಾರಸ್ವಾಮಿ ಸ್ನೇಹ ಬೆಳೆಸುತ್ತಿದ್ದಾರೆ. ಅವರ ವಕ್ತಾರರಾಗಿದ್ದಾರೆ. ಇದೆಲ್ಲವನ್ನೂ ನಿರ್ಧರಿಸಲು ಜನರಿಗೆ…

Read More

ಬೆಂಗಳೂರು:  ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಿಂದ ಎನ್ಎಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬಾಂಬರ್ ಸಮುದ್ರ ಮಾರ್ಗ ಬಳಸಿ ಎಸ್ಕೇಪ್ ಆಗಿರೋ ಶಂಕೆಯನ್ನು ವ್ಯಕ್ತಪಡಿಸಿರುವಂತ ಎನ್ಐಎ ಟೀಂ, ಮಂಗಳೂರಲ್ಲಿ ಕರಾವಳಿ ಕಾವಲು ಪಡೆಯನ್ನು ಹೈ ಅಲರ್ಟ್ ಮಾಡಿದೆ.  ಮಂಗಳೂರಿನ ಕರಾವಳಿ ತೀರದಲ್ಲಿ ರಾಮೇಶ್ವರಂ ಕೆಫೆ ಸ್ಪೋಟಕ ಆರೋಪಿಯು ಸಮುದ್ರ ಮಾರ್ಗದ ಮೂಲಕ ತೆರಳಿರೋ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಎನ್ಐಎ ಅಧಿಕಾರಿಗಳು ಕರಾವಳಿ ಕಾವಲುಪಡೆಯನ್ನು ಅಲರ್ಟ್ ಮಾಡಿದ್ದಾರೆ. ಎನ್ಐಎ ಸೂಚನೆಯ ಮೇರೆಗೆ ಮಂಗಳೂರಲ್ಲಿ ಕರಾವಳಿ ಕಾವಲುಪಡೆಯಿಂದ ಪ್ರತಿ ಬೋಡ್ ಗಳನ್ನು ತಪಾಸಣೆ ಮಾಡಲಾಗುತ್ತಿದೆ. ಜೊತೆಗೆ ಎನ್ಐಎ ಬಿಡುಗಡೆ ಮಾಡಿರುವಂತ ಬಾಂಬರ್ ಪೋಟೋಗಳನ್ನು ಮೀನುಗಾರರಿಗೆ ತೋರಿಸಿ, ಸುಳಿವು ಸಿಗಲಿದ್ಯಾ ಅಂತ ಪತ್ತೆ ಹಚ್ಚುತ್ತಿದೆ. ಅರಬ್ಬೀ ಸಮುದ್ರದ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಂಗಳೂರಿನ ವಿವಿಧ ಕಡೆಯಲ್ಲಿ ಎನ್ಐಎ ಸೂಚನೆಯ ಮೇರೆಗೆ ಕರಾವಳಿ ಕಾವಲುಪಡೆಯಿಂದ ಬೋಟ್ ಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಜೊತೆಗೆ ಬಾಂಬರ್ ಸಮುದ್ರ ಮಾರ್ಗ ಬಳಸಿ ಪರಾರಿಯಾದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಾಹ ನೋದಂಣಿಗಾಗಿ ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲಾಗಿದೆ. ಇದರ ಬದಲಾಗಿ ಆನ್ ಲೈನ್ ಮೂಲಕ ನೋಂದಣಿ ಮಾಡೋದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಸೋ ನಿಮಗೆ ವಿವಾಹ ನೋಂದಣಿ ಮಾಜಿಸಬೇಕು ಅಂದ್ರೇ ಜಸ್ಟ್ ಕುಳಿತಲ್ಲೇ ಆನ್ ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆ. ಅದು ಹೇಗೆ ಅಂತ ಮುಂದೆ ಓದಿ. ಮದುವೆಗಳು ನಿಶ್ಚಯವಾಗಲಿ ಸ್ವರ್ಗದಲ್ಲಿ, ನೋಂದಣಿಯಾಗಲಿ ಕಾವೇರಿ 2.0ರಲ್ಲಿ, ನಿಮ್ಮ ಮನೆಯಲ್ಲೇ ನೆಮ್ಮದಿ ಗ್ಯಾರಂಟಿ ಎಂಬುದಾಗಿ ರಾಜ್ಯ ಸರ್ಕಾರ ಹೇಳಿದೆ. ಜೊತೆಗೆ ಕಾವೇರಿ 2.0 ತಂತ್ರಾಂಶದಲ್ಲಿ ಸುಲಭ, ಸರಳ, ಸುಲಲಿತವಾಗಿ ವಿವಾಹ ನೋಂದಣಿ ಮಾಡಿಕೊಳ್ಳಿ ಎಂದು ಹೇಳಿದೆ. ಆನ್ ಲೈನ್ ನಲ್ಲೇ ವಿವಾಹ ನೋಂದಣಿಗಾಗಿ ಈ ಹಂತ ಅನುಸರಿಸಿ https://kaveri.karnataka.gov.in ಗೆ ಭೇಟಿ ನೀಡಿ. ಬಳಕೆದಾರರ ಖಾತೆಯನ್ನು ತೆರೆಯಿರಿ. ಕಾವೇರಿ ಪೋರ್ಟಲ್ ಗೆ ಲಾಗಿನ್ ಮಾಡಿ, ವಿವಾಹ ನೋಂದಣಿ ಸೇವೆ ಆಯ್ಕೆ ಮಾಡಿ ಮತ್ತು ವಿವರ ನಮೂದಿಸಿ ಅರ್ಜಿ ಸಲ್ಲಿಸಿ. ಗಂಡ, ಹೆಂಡತಿ ಮತ್ತು ಮೂರು ಸಾಕ್ಷಿದಾರರ ಆಧಾರ್ ದೃಢೀಕರಣ ಪ್ರಕ್ರಿಯೆ…

Read More