Author: kannadanewsnow09

ಬೆಂಗಳೂರು: ಇಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಾಸು ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ವಾಸು ಅವರ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ನನ್ನ ಆತ್ಮೀಯರಾಗಿದ್ದ ವಾಸು ಅವರ ಜತೆ ರಾಜಕೀಯ ಪಯಣದಲ್ಲಿ ಉತ್ತಮ ಒಡನಾಟ ಹೊಂದಿದ್ದೆ. ಮೈಸೂರು ಮೇಯರ್ ಆಗಿ, ನಂತರ ಶಾಸಕರಾಗಿ ವಾಸು ಅವರು ಮೈಸೂರು, ಚಾಮರಾಜನಗರ ಭಾಗದಲ್ಲಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆ ಪಕ್ಷಕ್ಕೆ ಬಹಳ ನಷ್ಟ ತಂದಿದೆ ಎಂದಿದ್ದಾರೆ. ವಾಸು ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ವಾಸು ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ ಬೆಂಗಳೂರು: ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜನಾನುರಾಗಿ ನಾಯಕ ಹಾಗೂ ನಮ್ಮ ಪಕ್ಷದ ಮುಖಂಡ ಕವೀಶ್…

Read More

ಬೆಳಗಾವಿ: ಜಿಲ್ಲೆಯ ಪ್ರಸಿದ್ಧವಾದಂತ ರಾಮಮಂದಿರವೊಂದನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಅಲ್ಲಾ ಹು ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರವನ್ನು ಕಳಿಸಿರೋ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿರುವಂತ 101 ವರ್ಷಗಳ ಇತಿಹಾಸ ಹೊಂದಿರುವಂತ ರಾಮಮಂದಿರವನ್ನು ಸ್ಪೋಟಿಸೋದಾಗಿ ಅಲ್ಲಾ ಹು ಹೆಸರಿನಲ್ಲಿ ಹಿಂದಿಯಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರವನ್ನು ಕಳುಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿರುವಂತ ಶ್ರೀರಾಮ ಮಂದಿರವನ್ನು ಸ್ಪೋಟಿಸೋದಾಗಿ ಫೆಬ್ರವರಿ.7 ಹಾಗೂ ಫೆಬ್ರವರಿ 28ರಂದು ಅಲ್ಲಾ ಹು ಹೆಸರಿನಲ್ಲಿ ದುಷ್ಕರ್ಮಿಗಳಿಂದ ಬೆದರಿಕೆ ಪತ್ರವನ್ನು ಕುಳುಹಿಸಲಾಗಿದೆ. ಫೆಬ್ರವರಿ.7ರಂದು ಕಳುಹಿಸಲಾಗಿರುವಂತ ಮೊದಲ ಪತ್ರವು ರಾಮಮಂದಿರದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ. ಫೆಬ್ರವರಿ.2ರಂದು ಎರಡನೇ ಬೆದರಿಕೆ ಪತ್ರವು ಹನುಮಾನ್ ಗುಡಿಯಲ್ಲಿ ಸಿಕ್ಕಿದೆ. ಈ ಪತ್ರಗಳನ್ನು ಪೊಲೀಸರಿಗೆ ದೇವಾಲಯದ ಅರ್ಚಕರು ನೀಡಿದ್ದು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಲ್ಲದೇ ಬೆಂಗಳೂರು ಸ್ಪೋಟದ ಬೆನ್ನಲ್ಲೇ ಶ್ರೀರಾಮಮಂದಿರ ಸ್ಪೋಟಿಸೋದಾಗಿ ಕಳುಹಿಸಿರೋ ಬೆದರಿಕೆ ಪತ್ರ ಜನರಲ್ಲಿ ಆತಂಕವನ್ನು ಹುಟ್ಟಿಸಿದೆ. https://kannadanewsnow.com/kannada/nia-releases-new-pics-of-bangalore-cafe-bomber/ https://kannadanewsnow.com/kannada/breaking-muslim-cleric-hacked-to-death-over-flex-issue-in-mysuru/

Read More

ಬೆಂಗಳೂರು: ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ಪುಣೆಯಲ್ಲಿದ್ದಾನೆ ಎಂದು ನಂಬಲಾಗಿದೆ ಎಂದು ಲೋಕಮತ್ ವರದಿ ಮಾಡಿದೆ. ಅಲ್ಲದೇ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಂದ ಬಾಂಬರ್ ಹೊಸ ಪೋಟೋಗಳನ್ನು ಬಿಡುಗಡೆ ಮಾಡಲಾಗಿದೆ. ಸ್ಫೋಟದ ನಂತರ ಆರೋಪಿಗಳು ಕರ್ನಾಟಕದ ಬಳ್ಳಾರಿಗೆ ಬಸ್ ನಲ್ಲಿ ಪ್ರಯಾಣಿಸಿ ನಂತರ ಭಟ್ಕಳ, ಗೋಕರ್ಣ, ಬೆಳಗಾವಿ ಮತ್ತು ಕೊಲ್ಹಾಪುರ ಮೂಲಕ ಪುಣೆಗೆ ತೆರಳಿದರು ಎಂದು ವರದಿಯಾಗಿದೆ. ಆದಾಗ್ಯೂ, ಶಂಕಿತ ಭಯೋತ್ಪಾದಕ ಪುಣೆಯನ್ನು ತಲುಪಿದ್ದಾನೆಯೇ ಅಥವಾ ಮಾರ್ಗಮಧ್ಯೆ ಬಸ್ಸುಗಳನ್ನು ಬದಲಾಯಿಸಿದ್ದಾನೆಯೇ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ದೃಢಪಡಿಸಿಲ್ಲ ಎಂದು ವರದಿ ತಿಳಿಸಿದೆ. ಏತನ್ಮಧ್ಯೆ, ಎನ್ಐಎ ಶನಿವಾರ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಆರೋಪಿಗಳ ಹಲವಾರು ಸಿಸಿಟಿವಿ ಚಿತ್ರಗಳನ್ನು ಹಂಚಿಕೊಂಡಿದೆ. “ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರನ್ನು ಗುರುತಿಸಲು ಎನ್ಐಎ ನಾಗರಿಕರ ಸಹಕಾರವನ್ನು ಕೋರಿದೆ. ಯಾವುದೇ ಮಾಹಿತಿಯೊಂದಿಗೆ 08029510900, 8904241100, ಅಥವಾ ಇಮೇಲ್ info.blr.nia@gov.in ಗೆ ಕರೆ ಮಾಡಿ.…

Read More

ನವದೆಹಲಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅಗತ್ಯ ವಸ್ತುಗಳನ್ನು ಪಡೆಯಲು ಪಡಿತರ ಚೀಟಿಯನ್ನು ( Ration Card ) ಪ್ರತ್ಯೇಕವಾಗಿ ನೀಡಲಾಗುತ್ತದೆ ಮತ್ತು ಅದನ್ನು ವಿಳಾಸ ಅಥವಾ ನಿವಾಸದ ಪುರಾವೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ( Delhi High Court ) ಹೇಳಿದೆ. ದೆಹಲಿಯ ಕಟ್ ಪುತಲಿ ಕಾಲೋನಿಯ ನಿವಾಸಿಗಳು ಮರು ಅಭಿವೃದ್ಧಿಯ ನಂತರ ಪುನರ್ವಸತಿ ಯೋಜನೆಯಡಿ ಪರ್ಯಾಯ ವಸತಿಯನ್ನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್, ಈ ಯೋಜನೆಯಡಿ ಪ್ರಯೋಜನ ಪಡೆಯಲು ಪಡಿತರ ಚೀಟಿಯನ್ನು ಕಡ್ಡಾಯ ದಾಖಲೆಯಾಗಿ ಬಳಸುವುದು ನಿರಂಕುಶ ಮತ್ತು ಕಾನೂನುಬಾಹಿರ ಎಂದು ಅಭಿಪ್ರಾಯಪಟ್ಟರು. ಪಡಿತರ ಚೀಟಿಯ ವ್ಯಾಖ್ಯಾನದ ಪ್ರಕಾರ, ಅದನ್ನು ವಿತರಿಸುವ ಉದ್ದೇಶವು ನ್ಯಾಯಬೆಲೆ ಅಂಗಡಿಗಳ ಮೂಲಕ ಅಗತ್ಯ ಆಹಾರ ಪದಾರ್ಥಗಳನ್ನು ವಿತರಿಸುವ ಗುರಿಯನ್ನು ಹೊಂದಿದೆ. ಆದ್ದರಿಂದ, ಇದು ಯಾವುದೇ ಪಡಿತರ ಚೀಟಿದಾರರಿಗೆ ವಾಸಸ್ಥಳದ ಗುರುತಿನ ಪುರಾವೆಯಾಗುವುದಿಲ್ಲ ಎಂದು ನ್ಯಾಯಾಲಯ ಇತ್ತೀಚಿನ ಆದೇಶದಲ್ಲಿ ತಿಳಿಸಿದೆ. ಪಡಿತರ ಚೀಟಿ ಹೊಂದಿರುವವರು ಪಡಿತರ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ  ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067  ಉದ್ಯೋಗಗಳನ್ನು ಸೃಷ್ಟಿಸುವ  ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ  ಅನುಮೋದನೆ  ದೊರೆತಿದ್ದು, ಇದರಲ್ಲಿ  ₹ 8220.05  ಕೋಟಿ ಮೊತ್ತದ   6  ಹೊಸ ಯೋಜನೆಗಳು ಮತ್ತು   ₹ 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ  8 ಯೋಜನೆಗಳು ಇವೆ. ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ  ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ‘ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ  ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ…

Read More

ಬೆಂಗಳೂರು: ಇಂಧಾನ ಇಲಾಖೆಯ ವೆಬ್ ಸೈಟ್ ಸಾಫ್ಟ್ ವೇರ್ ಅಪ್ ಡೇಟ್ ಕಾರಣದಿಂದಾಗಿ ಮಾರ್ಚ್.10ರ ನಾಳೆಯಿಂದ ಮಾ. 19ರವರೆಗೆ 10 ದಿನಗಳ ಕಾಲ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಿಲ್ ಸೇರಿದಂತೆ ಇತರೆ ಸೇವೆಗಳು ಸ್ಥಗತಗೊಳಿಸಲಾಗುತ್ತಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ ಲೈನ್ ಸೇವೆಗಳು ಹತ್ತು ದಿನಗಳ ಕಾಲ ಸೇವೆಗಳು ಲಭ್ಯವಿರುವುದಿಲ್ಲ. ಮಾರ್ಚ್.10ರ ನಾಳೆಯಿಂದ ಮಾ. 19ರವರೆಗೆ ಹತ್ತು ದಿನಗಳ ಕಾಲ ಲಭ್ಯವಿರುವುದಿಲ್ಲ ಎಂದಿದೆ. ತಂತ್ರಾಂಶವು ಕಾರ್ಯಾರಂಭಗೊಂಡ ನಂತ್ರ ಪರೀಕ್ಷೆಯ ಬಳಿಕ ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಮಾರ್ಚ್.20ರ ನಂತ್ರ ಈ ಆನ್ ಲೈನ್ ಸೇವೆ ಸರಿಯಾಗಲಿದ್ದು, ಗ್ರಾಹಕರು ವಿದ್ಯುತ್ ಪಾವತಿ ಮಾಡದೇ ಇದ್ದರೂ ಸಂಪರ್ಕ ಕಡಿತಗೊಳಿಸೋದಿಲ್ಲ ಅಂತ ಎಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದೆ. ನಾಳೆಯಿಂದ ಈ ಎಲ್ಲಾ ಜಿಲ್ಲೆಗಳ ಎಸ್ಕಾಂ…

Read More

ಬಳ್ಳಾರಿ : ಡೇ ನಲ್ಮ್ ಯೋಜನೆಯಡಿ ಪಿಎಂ ಸ್ವನಿಧಿ (ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ಯೋಜನೆ) ಹಾಗೂ ನಿರಾಶ್ರಿತರಿಗೆ ಆಶ್ರಯ ಕೇಂದ್ರದ ಸೌಲಭ್ಯ (Night Shelter) ಈ ಎರಡು ಯೋಜನೆಯಲ್ಲಿ ಅತ್ಯುತ್ತಮ ಗುರಿ ಸಾಧನೆಗೆ ಬಳ್ಳಾರಿ ಮಹಾನಗರ ಪಾಲಿಕೆಗೆ 2 ರಾಜ್ಯ ಪ್ರಶಸ್ತಿಗಳು ಲಭಿಸಿವೆ. ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಡೇ ನಲ್ಮ್ ಯೋಜನೆಯಡಿ ಪಿಎಂ ಸ್ವನಿಧಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡಲಾಗುವ ಸಾಲ ಯೋಜನೆಯಡಿ ಸಮರ್ಪಕ ಅನುಷ್ಠಾನದಲ್ಲಿ ಪ್ರಥಮ ಸ್ಥಾನ ಪಡೆದ ಬಳ್ಳಾರಿ ಮಹಾನಗರ ಪಾಲಿಕೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅದೇರೀತಿಯಾಗಿ ಡೇ ನಲ್ಮ್ ಯೋಜನೆಯಡಿ ನಿರಾಶ್ರಿತರ ಕೇಂದ್ರದ ಉತ್ತಮ ನಿರ್ವಹಣೆಗಾಗಿ ಬಳ್ಳಾರಿ ಮಹಾನಗರ ಪಾಲಿಕೆಗೆ ಇನ್ನೊಂದು ಪ್ರಶಸ್ತಿಯನ್ನು ನೀಡಲಾಯಿತು. ಎರಡು ಪ್ರಶಸ್ತಿಗಳನ್ನು ಕೌಶಲ್ಯಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಮತ್ತು ನಲ್ಮ್ ಅಭಿಯಾನ ನಿರ್ದೇಶಕರಾದ…

Read More

ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆಯಿಂದ ಮಂಜೂರಾದ 119 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪೈಕಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಾವಣಗೆರೆ ಮಹಾನಗರಪಾಲಿಕೆಯ ವೆಬ್‍ಸೈಟ್ www.davanagerecity.mrc.gov.in ನಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯಿಂದ ಬಾಧಿತರಾಗುವ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ 15 ದಿನಗಳೊಗಾಗಿ ಆಯುಕ್ತರ ಕಚೇರಿ, ಮಹಾನಗರಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು ಎಂದು ಆಯುಕ್ತರು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾದ ರೇಣುಕಾ ತಿಳಿಸಿದ್ದಾರೆ. https://kannadanewsnow.com/kannada/applications-invited-for-skill-development-training/ https://kannadanewsnow.com/kannada/congress-releases-first-list-of-39-candidates-for-lok-sabha-elections/

Read More

ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಪಂಗಡದ ಜನಾಂಗದವರ ಆರ್ಥಿಕ ಸಬಲೀಕರಣಕ್ಕಾಗಿ ಪಂಗಡದ ನಿರುದ್ಯೋಗ ಯುವಕ, ಯುವತಿಯರಿಗೆÉ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗ ಯುವಕ, ಯುವತಿಯರು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಘಟಕದ ವೆಚ್ಚದ ಶೇ.70 ರಷ್ಟು ಅಥವಾ 5 ಲಕ್ಷಗಳ ಸಹಾಯಧನವನ್ನು ಪಡೆಯಬಹುದು. ಅರ್ಜಿಗಳನ್ನು ಆಫ್‍ಲೈನ್ ಮೂಲಕ ಮಾ.31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ತರಬೇತಿಗೆ ಅರ್ಜಿಗಳನ್ನು ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಗ್ಲಾಸ್‍ಹೌಸ್ ಹತ್ತಿರ ದೂ.ಸಂ.08192-233309 ಗೆ ಸಂರ್ಪಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಮಹಾವೀರ್ ತಿಳಿಸಿದ್ದಾರೆ. https://kannadanewsnow.com/kannada/davanagere-district-child-labour-planning-society-invites-nominations/ https://kannadanewsnow.com/kannada/congress-releases-first-list-of-39-candidates-for-lok-sabha-elections/

Read More

ದಾವಣಗೆರೆ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲು ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ. ಇಬ್ಬರು ಸಮಾಜ ಸೇವಕರು, ತಲಾ ಒಬ್ಬರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇಬ್ಬರು ಮಹಿಳಾ ಪ್ರತಿನಿಧಿಗಳು ಒಬ್ಬರು ಅಲ್ಪಸಂಖ್ಯಾತರ ಪ್ರತಿನಿಧಿಗಳನ್ನು ಗುರುತಿಸಿ ನಾಮನಿರ್ದೇಶನ ಮಾಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತಾವನೆಯನ್ನು ಮಾ. 19 ಕ್ಕೆ ಸಂಜೆ 5.30 ಗಂಟೆಯೊಳಗೆ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಬಿಎಸ್‍ಎನ್‍ಎಲ್ ಕಟ್ಟಡ, ದೇವರಾಜ ಅರಸ್ ಬಡಾವಣೆ, ಹರಿಹರ ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಸಹಾಯಕ ಕಾರ್ಮಿಕ ಆಯುಕ್ತರಾದ ಇಬ್ರಾಹಿಂ ತಿಳಿಸಿದ್ದಾರೆ. https://kannadanewsnow.com/kannada/names-of-more-congress-candidates-to-be-finalised-after-screening-committee-meeting-dk-shivakumar/ https://kannadanewsnow.com/kannada/congress-releases-first-list-of-39-candidates-for-lok-sabha-elections/

Read More