Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಾಂಗ್ರೆಸ್ ಸರಕಾರವು 38 ಇಲಾಖೆಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೆಲ್ಲವನ್ನೂ ನಮ್ಮ ಮುಖಂಡರು ಒಂದೊಂದಾಗಿ ಬೆಳಕಿಗೆ ತರುತ್ತಿದ್ದಾರೆ. ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಕೂಪದಲ್ಲಿ ಕುಳಿತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬವು ಮುಡಾದ 14 ನಿವೇಶನ ವಾಪಸ್ ಮಾಡಿದ್ದು, ಪ್ರಿಯಾಂಕ್ ಖರ್ಗೆಯವರು 5 ಎಕರೆ ವಾಪಸ್ ಮಾಡಿದ್ದರಿಂದ ಭ್ರಷ್ಟಾಚಾರ ಸಾಬೀತಾಗಿದೆ. ಅದರ ತನಿಖೆ ಏನಿದ್ದರೂ ನಿಮ್ಮ ಕಸರತ್ತು ಅಷ್ಟೇ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯನವರೇ, ನೀವು ಮಾತನಾಡುವಾಗ ಯಾವ ಮಟ್ಟಕ್ಕೆ ಹೋಗುತ್ತೀರಿ? ಪ್ರಧಾನಿಯವರ ಯೋಗ್ಯತೆ, ತಮ್ಮ ಯೋಗ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ವಯಸ್ಸು, ಅಧಿಕಾರದಲ್ಲಿ ನೀವು ಅವರ ಮಟ್ಟಕ್ಕಿದ್ದರೆ ಅವರನ್ನು ಪ್ರಶ್ನೆ ಮಾಡುವುದರಲ್ಲಿ ಅರ್ಥವಿದೆ. ಸಣ್ಣಸಣ್ಣ ವ್ಯಕ್ತಿಗಳೂ ಪ್ರಧಾನಮಂತ್ರಿಗಳನ್ನು ಕೀಳು ಭಾಷೆಯಲ್ಲಿ ಮಾತನಾಡುವುದು ಎಷ್ಟು ಸರಿ? ಎಂದು ಕೇಳಿದರು. ಈಚೆಗೆ ವೈನ್ ಮರ್ಚೆಂಟ್ ಅಸೋಸಿಯೇಶನ್ನವರು ಒಂದು ಆಪಾದನೆ ಮಾಡಿದ್ದಾರೆ. ಸುಮಾರು 500…
ಬೆಂಗಳೂರು : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ ಚೇರ್ಮನ್ ಸೋಮನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿದ್ಯಾರ್ಥಿ ಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯೋಜನೆಯ ಬಗ್ಗೆ ಶ್ಲಾಘಿಸಿದರು. ಮಕ್ಕಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಯೋಜನೆ ಬಹಳ ವಿಶೇಷ ವಾಗಿದೆ. ಸಣ್ಣ ವಯಸ್ಸಿನಲ್ಲೇ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಬೆಳೆಸುವುದರಿಂದ ಮಕ್ಕಳಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಅರಿವು ಮೂಡಿಸಬಹುದಾಗಿದೆ. ಇಂತಹ ಯೋಜನೆಯನ್ನು ಯೋಜಿಸಿ ಅನುಷ್ಟಾನಗೊಳಿಸುತ್ತಿರುವ ಸರಕಾರದ ಕ್ರಮ ಅನುಕರಣೀಯ. ಈ ಯೋಜನೆಯಿಂದ ಭವಿಷ್ಯದ ವೈಜ್ಞಾನಿಕ ಕ್ಷೇತ್ರದಲ್ಲಿ ನಮ್ಮ ಮಕ್ಕಳ ಕೊಡುಗೆಯೂ ಹೆಚ್ಚಲಿದೆ ಎಂದರು. ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಮಾತನಾಡಿ, ಸನ್ಮಾನ್ಯ ಮುಖ್ಯಮಂತ್ರಿಗಳಾದ…
ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ನಾಳೆ ಬೆಂಗಳೂರಿನ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಬೆಸ್ಕಾಂ ಇಇ ಯೋಗೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರದ 66/11 ಕೆ.ವಿ. ಸಾರಕ್ಕಿ ನ.13 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲವೆಂದು ತಿಳಿಸಿದ್ದಾರೆ. ನಾಳೆ ಈ ಏರಿಯಾಗಳಲ್ಲಿ ಪವರ್ ಕಟ್ ಶಾಕಂಬರಿನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 4, 5, 7, 8ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಜಿ.ಪಿ.ನಗರ 5ನೇ ಹಂತ, ಸಾಯಿ ನಸರಿ ರಸ್ತೇ, ಜಿ.ಪಿ.ನಗರ 1,2,3,4,5,6ನೇ ಹಂತ, 15ನೇ ಕ್ರಾಸ್, 16 &…
ಬೆಂಗಳೂರು: ಶಕ್ತಿ ಯೋಜನೆಯ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಅಲ್ಲದೇ ಬಹಿರಂಗವಾಗಿಯೇ ಚರ್ಚೆಗೆ ಆಹ್ವಾನಿಸಿ ಈ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ವಿರೋಧ ಪಕ್ಷದ ನಾಯಕರೇ, ಸುಳ್ಳು ಹೇಳುವುದು, ಜನರ ದಾರಿ ತಪ್ಪಿಸುವುದು ತಮಗೆ ಮತ್ತು ತಮ್ಮ ಬಿ.ಜೆ.ಪಿ ಪಕ್ಷಕ್ಕೆ ಸಿದ್ದಿಸಿರುವ ಕಲೆ. ನಮಗೆ ಅದರ ಅವಶ್ಯಕತೆಯಿಲ್ಲ. ಇಂದೇ ಸ್ಥಳ ಮತ್ತು ಸಮಯವನ್ನು ನಿಗದಿ ಮಾಡಿ ನಾನು ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ ಎಂದಿದ್ದಾರೆ. ಅಂಕಿಅಂಶಗಳೇ ನಮ್ಮ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂಬುದನ್ನು ಹತ್ತು ಹಲವು ಬಾರಿ ನಾನು ತಿಳಿಸಿದ್ದೇನೆ. ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ಎಂಬುದಕ್ಕೆ ಶ್ಚೇತಪತ್ರ ಹೊರಡಿಸಿ ತಮ್ಮ ಅವಧಿಯ ಆಡಳಿತವನ್ನು ಜನರಿಗೆ ತೋರಿಸಬೇಕೆಂಬ ತಮ್ಮ ಮಹದಾಸೆಗೆ ನಾವು ಅಭಾರಿ ಎಂದು ಹೇಳಿದ್ದಾರೆ. ನಮ್ಮ ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳ…
ನವದೆಹಲಿ: ಪಶ್ಚಿಮ ಬಂಗಾಳದ ಖ್ಯಾತ ರಂಗಕರ್ಮಿ ಮನೋಜ್ ಮಿತ್ರಾ ಅವರು ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 8.50ಕ್ಕೆ ಕೊನೆಯುಸಿರೆಳೆದರು. ಅವರ ಸಹೋದರ ಮತ್ತು ಬರಹಗಾರ ಅಮರ್ ಮಿತ್ರಾ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ರವೀಂದ್ರ ಸದನಕ್ಕೆ ತರಲಾಗುವುದು. ಮನೋಜ್ ಮಿತ್ರಾ ಅವರ ಖ್ಯಾತಿ ಬೆಳ್ಳಿ ಪರದೆಗೂ ವಿಸ್ತರಿಸಿತು. ಬಂಚರಾಮರ್ ಬಗಾನ್ (೧೯೮೦) ಚಿತ್ರದಲ್ಲಿನ ಅವರ ಅಭಿನಯವನ್ನು ಬಂಗಾಳಿ ಪ್ರೇಕ್ಷಕರು ಇನ್ನೂ ಪ್ರೀತಿಯಿಂದ ನೆನಪಿಸಿಕೊಳ್ಳುತ್ತಾರೆ. ಮಿತ್ರಾ ಅವರ ನಿಧನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. “ಖ್ಯಾತ ನಟ, ನಿರ್ದೇಶಕ ಮತ್ತು ನಾಟಕಕಾರ “ಬಂಗಾ ಬಿಭೂಷಣ್” ಮನೋಜ್ ಮಿತ್ರಾ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರು ನಮ್ಮ ರಂಗಭೂಮಿ ಮತ್ತು ಚಲನಚಿತ್ರ ಜಗತ್ತಿನಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು ಮತ್ತು ಅವರ ಕೊಡುಗೆಗಳು ಅಪಾರವಾಗಿವೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವನ್ನು ತಿಳಿಸುತ್ತೇನೆ ಎಂದಿದ್ದಾರೆ. ಮನೋಜ್…
ಬೆಂಗಳೂರು: ಪೀಣ್ಯ ಸಮೀಪದ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಮರ ಕಡಿದು, ಟ್ಯಾಕ್ಸಿಕ್ ಚಿತ್ರತಂಡದಿಂದ ಚಿತ್ರೀಕರಣ ಮಾಡಲಾಗಿತ್ತು. ಇಂತಹ ಚಿತ್ರ ತಂಡದ ವಿರುದ್ಧ ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಬೆಂಗಳೂರು ಹೊರವಲಯದ ಹೆಚ್ ಎಂ ಟಿಯಲ್ಲಿನ ಅರಣ್ಯ ಭೂಮಿಯಲ್ಲಿನ ಮರಗಳನ್ನು ಕಟಾವು ಮಾಡಿ, ಚಿತ್ರೀಕರಣಕ್ಕೆ ಸೆಟ್ ನಿರ್ಮಿಸಲಾಗಿದೆ. ಈ ಹಿನ್ನಲೆಯಲ್ಲಿ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್ ಎಂ ಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ಈ ಹಿಂದೆ ನಟ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕಾಗಿ ಅಕ್ರಮವಾಗಿ ಅನುಮತಿಯಿಲ್ಲದೇ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಮರಗಳನ್ನು ಕಡಿಯಲಾಗಿತ್ತು. ಈ ಮೊದಲು ಹೇಗಿತ್ತು, ಚಿತ್ರೀಕರಣಕ್ಕಾಗಿ ಮರಗಳ ನಾಶದ ಬಳಿಕ ಹೇಗಿದೆ ಭೂಮಿ ಎಂಬ ಸ್ಯಾಟಲೈಟ್ ಚಿತ್ರವನ್ನು ಅರಣ್ಯ ಸಚಿವರು ಬಿಡುಗಡೆ ಮಾಡಿದ್ದರು. ಈ ಬೆನ್ನಲ್ಲೇ ಅರಣ್ಯ ಇಲಾಖೆಯಿಂದ ಅಕ್ರಮವಾಗಿ…
ಶುಕ್ರವಾರ ಮುತೈದೆಯರು ಈ ಕೆಲಸವನ್ನು ಮಾಡಿದರೆ ಸಾಕು ಮನೆಯಲ್ಲಿ ನೆಮ್ಮದಿಯ ಸುಖ ಸಂಸಾರದ ಜೀವನ ನಡೆಸಲು..!!! ೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು. ೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು, ೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು. ೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ…
ಚಿತ್ರದುರ್ಗ : ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚಿತ್ರದುರ್ಗದ ಶ್ರೀ ಕ್ಷೇತ್ರ ಗೊಲ್ಲಗಿರಿ ಮಠದ ಶ್ರೀ ಕೃಷ್ಣ ಯಾದವನಂದ ಸ್ವಾಮಿಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿ ಗ್ರಾಮದ ಶ್ರೀ ಈರಲಿಂಗೇಶ್ವರ ಸ್ವಾಮಿ ದೇವರ ನೂತನ ದೇವಸ್ಥಾನ ನಿರ್ಮಾಣದ ಅಡಿಪಾಯ ಪೂಜೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ನಮ್ಮ ಸಮುದಾಯವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದು, ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಾತಿ ಅವಶ್ಯಕತೆಯಿದೆ. ಈಗಾಗಲೇ ಮೀಸಲಾತಿಗಾಗಿ ಸಾಕಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಕಾಡುಗೊಲ್ಲ ಕಡತಗಳಲ್ಲಿ ತೊಡಕುಂಟಾಗಿರುವ ಲೋಪದೋಷಗಳನ್ನು ಸರಿಪಡಿಸಿ ರಾಜ್ಯ ಸರ್ಕಾರ, ಕಡತವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ, ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು. ದೇಶದ ಪರಂಪರೆಯಲ್ಲಿ ದೇವಸ್ಥಾನಗಳಿಗೆ ತನ್ನದೇ ಆದಂತಹ ಸ್ಥಾನಮಾನವಿದೆ. ಅದರಲ್ಲೂ ಕೂಡ ಕಾಡುಗೊಲ್ಲರು ಅನಾದಿಕಾಲದಿಂದಲೂ ದೇವರುಗಳಿಗೆ ಅತ್ಯಂತ ಭಕ್ತಿ ಮತ್ತು ಗೌರವದಿಂದ…
ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ಇತರ ಎರಡು ಘಟಕಗಳ ಮೇಲೆ ಮಾರುಕಟ್ಟೆ ನಿಯಂತ್ರಕ ವಿಧಿಸಿದ್ದ ದಂಡವನ್ನು ರದ್ದುಗೊಳಿಸಿದ ಸೆಕ್ಯೂರಿಟೀಸ್ ಮೇಲ್ಮನವಿ ನ್ಯಾಯಮಂಡಳಿ ಆದೇಶದ ವಿರುದ್ಧ ಸೆಬಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. 2007ರ ನವೆಂಬರ್ ನಲ್ಲಿ ಹಿಂದಿನ ರಿಲಯನ್ಸ್ ಪೆಟ್ರೋಲಿಯಂ ಲಿಮಿಟೆಡ್ (RPL)ನ ಷೇರುಗಳಲ್ಲಿ ಕುಶಲ ವ್ಯಾಪಾರ ಮಾಡಿದ ಆರೋಪ ಇತ್ತು. ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರ ಪೀಠವು ಎಸ್ಎಟಿ ನೀಡಿದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಒಲವು ಹೊಂದಿಲ್ಲ ಎಂದು ಹೇಳಿದೆ. “2023 ರಲ್ಲಿ ಆಕ್ಷೇಪಾರ್ಹ ಆದೇಶವನ್ನು ಅಂಗೀಕರಿಸಲಾಯಿತು, ಅದನ್ನು 2023ನೇ ಇಸವಿಯಲ್ಲಿ ಪ್ರಶ್ನಿಸಲಾಯಿತು ಹಾಗೂ ಒಂದು ವರ್ಷದ ನಂತರ ಈಗ ವಿಷಯವನ್ನು ಪ್ರಸಾರ ಮಾಡಲಾಗುತ್ತಿದೆ. “ನಮ್ಮ ಹಸ್ತಕ್ಷೇಪವನ್ನು ಸಮರ್ಥಿಸುವ ಈ ಮೇಲ್ಮನವಿಯಲ್ಲಿ ಕಾನೂನಿನ ಪ್ರಶ್ನೆಯೇ ಇಲ್ಲ. ಇದನ್ನು ವಜಾಗೊಳಿಸಲಾಗಿದೆ. ನೀವು ಅಂತಹ ವ್ಯಕ್ತಿಯನ್ನು ವರ್ಷಗಳವರೆಗೆ ಬೆನ್ನಟ್ಟಲು ಸಾಧ್ಯವಿಲ್ಲ” ಎಂದು ಪೀಠ ಹೇಳಿದೆ. ಸೆಬಿಯು ಡಿಸೆಂಬರ್ 4,…
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಬಲಾಡಿ ಕಲ್ತ್ತೋಡ್ಮಿ ಮನೆಯವರ ಹಾಗೂ ಕುಟುಂಬಸ್ಥರ ಮೂಲನಾಗಬನದಲ್ಲಿ ನಡೆಯಲಿರುವ ಚತುಃ ಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ಮುಹೂರ್ತ ದರ್ಶನ, ಚಪ್ಪರ ಮುಹೂರ್ತ ಕಾರ್ಯಕ್ರಮ ವೇದಮೂರ್ತಿ ಶಂಕರನಾರಾಯಣ ಉಡುಪ ಬಲಾಡಿ, ವೇದಮೂರ್ತಿ ಶ್ರೀನಿವಾಸ ಅಡಿಗ ಸೌಕೂರು ಹಾಗೂ ವೇದಮೂರ್ತಿ ವಿನಾಯಕ ಉಡುಪ ಬಲಾಡಿ ಅವರ ನೇತೃತ್ವದಲ್ಲಿ ಶ್ರದ್ದಾಭಕ್ತಿಯಿಂದ ನೆರವೇರಿದೆ. ನಾವಪಾತ್ರಿ ಸುದರ್ಶನ ಉಡುಪ ಮೂಡುಗೋಪಾಡಿ ಅವರು ಮುಹೂರ್ತ ದರ್ಶನವನ್ನು ನೆರವೇರಿಸಿ ಪ್ರಸಾದ ವಿತರಿಸಿದರು. ನಾಗಮಂಡಲೋತ್ಸವದ ವೈದ್ಯರಾದ ಸರ್ವೋತ್ತಮ ವೈದ್ಯ ಅಂಪಾರು, ಪಾಕತಜ್ಞರಾದ ಸುರೇಶ್ ಉಡುಪ ಶಾನ್ಕಟ್ ವಾದ್ಯವೃಂದದವರ ಪರವಾಗಿ ಸುದರ್ಶನ ದೇವಾಡಿಗ ಹಳ್ನಾಡು, ಮಂಡಲ ಚಪ್ಪರ, ಶ್ಯಾಮಿಯಾನ, ಅಡುಗೆ ಪಾತ್ರೆ, ಆಸನ ವ್ಯವಸ್ಥೆಯ ಪರವಾಗಿ ಹುಣ್ಸೆಮಕ್ಕಿ- ಜಪ್ತಿ ಮಣಿಕಂಠ ಶಾಮಿಯಾದ ಪರವಾಗಿ ಮಂಜುನಾಥ ಕಾಂಚನ್ ಹಾಗೂ ರಾಘವೇಂದ್ರ, ದೀಪಾಲಂಕಾರದ ನೆರವೇರಿಸುವ ಕಂದಾವರ ಉಳ್ಳೂರು ಕಾರ್ತಿಕೇಯ ಸೌಂಡ್ಸ್ & ಲೈಟಿಂಗ್ಸ್ನ ಕುಮಾರ ದೇವಾಡಿಗ, ಪುಷ್ಪಾಲಂಕಾರ ನೆರವೇರಿಸುವ ಬಸ್ರೂರು ಶ್ರೀ ಮೂಕಾಂಬಿಕಾ ಆರ್ಟ್ಸ್ & ಡೆಕೋರೇಟರ್ಸ್…