Author: kannadanewsnow09

ಬೆಂಗಳೂರು : “ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇಂದಿನ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಆ ಹೆಸರುಗಳು ಅಂತಿಮವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚೆ ಮಾಡಿದಾಗ ಅವರು ಯಾರ ಹೆಸರನ್ನ ಪ್ರಸ್ತಾಪ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. 11ರಂದು ನಡೆಯಲಿರುವ ಸಭೆ ನಂತರ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು. 17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದೀರಿ ಎಂದು ಕೇಳಿದಾಗ, “ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು…

Read More

ಮಂಡ್ಯ: ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ವೆಂಕಟರಮಣೇಗೌಡ ಅಂದರೆ ಸ್ಟಾರ್ ಚಂದ್ರು ಎಂಬುವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಗಾದ್ರೇ ಸ್ಟಾರ್ ಚಂದ್ರು ಎಂದೇ ಕರೆಯಲ್ಪಡುವ ವೆಂಕಟರಮಣೇಗೌಡ ಬಗ್ಗೆ ಇಲ್ಲಿದೆ ಪರಿಚಯ.  ಜನಸಮೂಹದಲ್ಲಿ ’ಸ್ಟಾರ್ ಚಂದ್ರು’ ಎಂದೇ ಜನಪ್ರಿಯರಾಗಿರುವ ವೆಂಕಟರಮಣೇಗೌಡ ಅವರು ಮಂಡ್ಯ ಜಿಲ್ಲೆಯ ಸಾಮಾನ್ಯ ರೈತಕುಟುಂಬದಲ್ಲಿ ಜನಿಸಿ ಸ್ವಂತ ದುಡಿಮೆಯಿಂದ ಉದ್ಯಮಿಯಾಗಿ ಬೆಳೆದ ಕ್ರಿಯಾಶೀಲ ಸಾಹಸಿ. ಹಳ್ಳಿಗಾಡಿನಲ್ಲಿ ವಿದ್ಯಾಭ್ಯಾಸ ಮಾಡಿ ಬೆಂಗಳೂರು ನಗರದಲ್ಲಿ ಬದುಕು ಕಟ್ಟಿಕೊಂಡು ಸಾವಿರಾರು ಜನರಿಗೆ ಉದ್ಯೋಗಕಲ್ಪಿಸಿದ ಅವರ ಬದುಕು ಆಧುನಿಕ ಕಾಲದ ಉದ್ಯಮಿಗಳ ಯಶಸ್ಸಿನ ಕತೆ. ಉದ್ಯೋಗ ನಿಮಿತ್ತ ರಾಜಧಾನಿಗೆ ಬಂದರೂ ತಮ್ಮ ಹುಟ್ಟಿದೂರಿನ ’ಕಳ್ಳುಬಳ್ಳಿ’ ಸಂಬಂಧವನ್ನು ಉಳಿಸಿಕೊಂಡಿರುವ ಅಪರೂಪದ ವ್ಯಕ್ತಿ. ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಜನಿಸಿದ್ದು ದಿನಾಂಕ 24-06-1965ರಂದು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು, ಬೆಳ್ಳೂರು ಹೋಬಳಿಗೆ ಸೇರಿದ ಕನ್ನಾಘಟ್ಟ ಗ್ರಾಮದ ರೈತಕುಟುಂಬದಲ್ಲಿ. ತಂದೆ ಲೇಟ್ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮ. ಈ ದಂಪತಿಯ ಮೂವರು ಗಂಡು ಮಕ್ಕಳಲ್ಲಿ ಮೊದಲನೆಯವರು ಕೆ.ಎಚ್ ಪುಟ್ಟಸ್ವಾಮಿಗೌಡ.…

Read More

ನವದೆಹಲಿ: ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ ಒಂದು ವಾರದೊಳಗೆ, ಕಾಂಗ್ರೆಸ್ ರಾಹುಲ್ ಗಾಂಧಿ, ಶಶಿ ತರೂರ್ ಮತ್ತು ಭೂಪೇಶ್ ಬಘೇಲ್ ಸೇರಿದಂತೆ 39 ಹೆಸರುಗಳ ರೂಪದಲ್ಲಿ ತನ್ನ ಉತ್ತರವನ್ನು ನೀಡಿದೆ. ಹಾಗಾದ್ರೇ ಯಾರು ಎಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ. ರಾಹುಲ್ ಗಾಂಧಿ ಕೇರಳದ ವಯನಾಡ್ ನಿಂದ ಸ್ಪರ್ಧಿಸಲಿದ್ದಾರೆ. ಆದರೆ 2019 ರಂತೆಯೇ ಅವರನ್ನು ಅಮೇಥಿಯಿಂದ ಕಣಕ್ಕಿಳಿಸಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಶಶಿ ತರೂರ್ ಅವರು ಮೂರು ಅವಧಿಗೆ ಪ್ರತಿನಿಧಿಸಿರುವ ತಿರುವನಂತಪುರಂನಿಂದ ಸ್ಪರ್ಧಿಸಲಿದ್ದು, ಬಘೇಲ್ ಅವರು ಛತ್ತೀಸ್ ಗಢದ ರಾಜನಂದಗಾಂವ್ ನಿಂದ ಲೋಕಸಭಾ ಚುನಾವಣೆಗೆ ಪಾದಾರ್ಪಣೆ ಮಾಡಲಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು 2009ರಲ್ಲಿ ಗೆದ್ದಿದ್ದ ಕೇರಳದ ಅಲಪುಳ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರ ಹೆಸರುಗಳು ಪಟ್ಟಿಯಲ್ಲಿವೆ. ಮುಖ್ಯವಾಗಿ ಕೆಲವು ದಕ್ಷಿಣ ಮತ್ತು ಈಶಾನ್ಯ ರಾಜ್ಯಗಳಿಗೆ ಹೆಸರುಗಳನ್ನು ಘೋಷಿಸಲಾಗಿದೆ. ಛತ್ತೀಸ್ಗಢ ಮತ್ತು ಕೇಂದ್ರಾಡಳಿತ ಪ್ರದೇಶ…

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಶಕ್ತೀಕರಣವನ್ನು ಡಿಜಿಟಲೀಕರಣಗೊಳಿಸೋ ಸಂಬಂಧ ಪ್ರತಿ ಅಂಗವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ಡಿಜಿಟಲೀಕರಣಗೊಂಡ ಸಶಕ್ತಿಕರಣದ ಭಾಗವಾಗಿ ರಾಜ್ಯದ ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಹೇಳಿದೆ. ಕುಟುಂಬವೊಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬಲಿಷ್ಠಗೊಳ್ಳಬೇಕಾದರೆ ಅಲ್ಲಿ ಪುರುಷರಷ್ಟೇ ಮಹಿಳೆಯರ ಪಾತ್ರವೂ ಮುಖ್ಯ. ರಾಜ್ಯ ಸರ್ಕಾರ ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಕೋಟ್ಯಂತರ ತಾಯಂದಿರ ಕೈಗಳಿಗೆ “ಗೃಹಲಕ್ಷ್ಮಿ”ಯ ಬಲ ನೀಡಿದೆ, ಶಿಕ್ಷಣ ಮತ್ತು ಉದ್ಯೋಗ ನಿಮಿತ್ತ ನಿತ್ಯ ಪ್ರಯಾಣಿಸುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪ್ರಯಾಣದ “ಶಕ್ತಿ” ತುಂಬಿದೆ, ಸ್ವಂತ ಉದ್ಯೋಗ ಆರಂಭಿಸುವ ಅಕ್ಕ ತಂಗಿಯರ ಪ್ರಯತ್ನಕ್ಕೆ ಆರ್ಥಿಕ ನೆರವು ನೀಡಿದೆ, ಅಂಗನವಾಡಿ ಕಾರ್ಯಕರ್ತೆಯರ ಪ್ರೋತ್ಸಾಹಧನ ಹೆಚ್ಚಿಸಿ ಅವರ ಜೀವನಮಟ್ಟ ಸುಧಾರಿಸಿದೆ, ದೇವದಾಸಿ ವೃತ್ತಿ ತೊರೆದವರು, ಲಿಂಗತ್ವ ಅಲ್ಪಸಂಖ್ಯಾತರ ಘನತೆಯ ಬದುಕಿಗೆ ಬೆಂಬಲವಾಗಿ ನಿಂತಿದೆ ಎಂದು ತಿಳಿಸಿದೆ.…

Read More

ನವದೆಹಲಿ: ಇಂದು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೊದಲ ಅಧಿಕೃತ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ ಇಳಿಯಲಿದ್ದಾರೆ. ಅಲ್ಲದೇ ಮೊದಲ ಪಟ್ಟಿಯಲ್ಲೇ ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು, ನಿನ್ನೆಯ ದಿನದಂದು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಯುವ ನ್ಯಾಯ ಗ್ಯಾರಂಟಿಯನ್ನು ಘೋಷಣೆ ಮಾಡಲಾಯಿತು. ದೇಶದ ಯುವ ಜನತೆಗೆ ಉದ್ಯೋಗವನ್ನು ಒದಗಿಸುವ ನಿಟ್ಟಿನಲ್ಲಿ ನಾವು ನೆರವಾಗಲಿದ್ದೇವೆ. 30 ಲಕ್ಷ ಉದ್ಯೋಗವನ್ನು ಯುವ ನ್ಯಾಯ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನೀಡಲಾಗುತ್ತದೆ ಎಂದರು. ಯುವ ಜನತೆ ನಿರುದ್ಯೋಗದಿಂದ ದೇಶದಲ್ಲಿ ಬಳಲುತ್ತಿದ್ದಾರೆ. ಕಾಂಗ್ರೆಸ್ ಕೊಟ್ಟ ಭರವಸೆಗಳನ್ನು ಈಡೇರೇಸುತ್ತಿದೆ. ನಾವು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಲು ಸಿದ್ಧರಿದ್ದೇವೆ. ತೆಲಂಗಾಣ, ಕರ್ನಾಟಕದಲ್ಲಿ ಏನಾಯ್ತು ಅಂತ ಜನರು ನೋಡಿದ್ದಾರೆ.  ಕಳೆದ ನಿನ್ನೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ 39…

Read More

ನವದೆಹಲಿ: ಇಂದು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೊದಲ ಅಧಿಕೃತ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ ಇಳಿಯಲಿದ್ದಾರೆ. ಅಲ್ಲದೇ ಮೊದಲ ಪಟ್ಟಿಯಲ್ಲೇ ಕರ್ನಾಟಕದ 7 ಲೋಕಸಭಾ ಕ್ಷೇತ್ರ ಸೇರಿದಂತೆ 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು, ನಿನ್ನೆಯ ದಿನದಂದು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗಾಗಿ ಯುವ ನ್ಯಾಯ ಗ್ಯಾರಂಟಿಯನ್ನು ಘೋಷಣೆ ಮಾಡಲಾಯಿತು. ದೇಶದ ಯುವ ಜನತೆಗೆ ಉದ್ಯೋಗವನ್ನು ಒದಗಿಸುವ ನಿಟ್ಟಿನಲ್ಲಿ ನಾವು ನೆರವಾಗಲಿದ್ದೇವೆ. 30 ಲಕ್ಷ ಉದ್ಯೋಗವನ್ನು ಯುವ ನ್ಯಾಯ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನೀಡಲಾಗುತ್ತದೆ ಎಂದರು. ಯುವ ಜನತೆ ನಿರುದ್ಯೋಗದಿಂದ ದೇಶದಲ್ಲಿ ಬಳಲುತ್ತಿದ್ದಾರೆ. ಕಾಂಗ್ರೆಸ್ ಕೊಟ್ಟ ಭರವಸೆಗಳನ್ನು ಈಡೇರೇಸುತ್ತಿದೆ. ನಾವು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸಲು ಸಿದ್ಧರಿದ್ದೇವೆ. ತೆಲಂಗಾಣ, ಕರ್ನಾಟಕದಲ್ಲಿ ಏನಾಯ್ತು ಅಂತ ಜನರು ನೋಡಿದ್ದಾರೆ.  ಕಳೆದ ನಿನ್ನೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಿತು.…

Read More

ದಕ್ಷಿಮ ಕನ್ನಡ: ಮಹಾ ಶಿವರಾತ್ರಿಯ ದಿನವಾದಂತ ಇಂದೇ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿನ ಮಂಜುನಾಥನ ಸ್ವಾಮಿಯ ಸನ್ನಿಧಿಯಲ್ಲಿದ್ದಂತ ಆನೆ ಲತಾ(60) ವಿಧಿವಶವಾಗಿದೆ. ಕಳೆದ 50 ವರ್ಷಗಳಇಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿದಿಯಲ್ಲಿ ಸೇವೆಯಲ್ಲಿ ನಿರತವಾಗಿದ್ದಂತ ಆನೆ ಲತಾ, ಅನಾರೋಗ್ಯದಿಂದ ಇಂದು ಮಧ್ಯಾಹ್ನ ನಿಧನವಾಗಿದೆ. ಮೃತ ಲತಾ ಆನೆಯು 50 ವರ್ಷಗಳಿಂದ ಧರ್ಮಸ್ಥಳದ ಜಾತ್ರಾಮಹೋತ್ಸವದಲ್ಲಿ ನಡಿಗೆ ಹಾಕಿ, ಭಕ್ತರ ಗಮನವನ್ನು ಸೆಳೆಯುತ್ತಿತ್ತು. ಇಂತಹ ಆನೆ ಇಂದು ನಿಧನವಾಗುವ ಮೂಲಕ ಇನ್ನಿಲ್ಲವಾಗಿದೆ. ಅಂದಹಾಗೇ ಧರ್ಮಸ್ಥಳದಲ್ಲಿ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎನ್ನುವಂತ ಹೆಸರಿನ ಮೂರು ಆನೆಗಳಿದ್ದವು. ಇವುಗಳಲ್ಲಿ ಲತಾ ಸಾವಿನ ನಂತ್ರ ಈಗ ಲಕ್ಷ್ಮೀ ಹಾಗೂ ಶಿವಾನಿ ಎರಡೇ ಉಳಿಯುವಂತೆ ಆಗಿದೆ. https://kannadanewsnow.com/kannada/breaking-income-tax-tribunal-rejects-congress-plea-to-stop-action-against-bank-accounts/ https://kannadanewsnow.com/kannada/upi-launched-in-nepal-indians-can-now-pay-nepali-merchants-using-the-qr-code/

Read More

ಕೆಲವರಿಗೆ ತಾವು ಮಾಡುವ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾಗುತ್ತಿರುತ್ತದೆ, ಇನ್ನು ಕೆಲವರು ಹಲವಾರು ಆಕಾಂಕ್ಷೆಗಳನ್ನು ಇಟ್ಟುಕೊಂಡು ಅಂದು ಮಾಡುವ ಕೆಲಸ ಯಶಸ್ವಿಯಾಗುತ್ತದೆ ಎಂದು ದೇವಸ್ಥಾನಕ್ಕೆ ತೆರಳಿ ನಮಸ್ಕರಿಸಿ ಹೋಗುವವರಿದ್ದಾರೆ. ಆದರೆ ಕೆಲವೊಂದು ಬಾರಿ ಎಷ್ಟೇ ಕಷ್ಟಪಟ್ಟು ಪ್ರಯತ್ನ ಮಾಡಿದರು ಹಣಕಾಸಿನ ವ್ಯವಹಾರದಲ್ಲಿ ಆಗಲಿ, ಕಚೇರಿಯ ಕೆಲಸಗಳಲ್ಲಿ ಆಗಲಿ ಅಥವಾ ಭೂಮಿಗೆ ಸಂಬಂಧಪಟ್ಟ ವ್ಯವಹಾರಗಳಲ್ಲಿ ನೀವು ಅಂದುಕೊಂಡ ಹಾಗೆ ಆಗುತ್ತಿಲ್ಲ ಎಂದರೆ ಯಾವ ಪರಿಹಾರವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಬಿಳಿ ಸಾಸಿವೆಯನ್ನು ನಾವು ಶ್ವೇತವರ್ಣ ಲಕ್ಷ್ಮಿ ಎಂದು ಕರೆಯುತ್ತೇವೆ. ಆದ್ದರಿಂದ ಬಿಳಿ ಸಾಸಿವೆಯನ್ನು ಗ್ರಂತಿಕೆ ಅಂಗಡಿಯಿಂದ ತಂದ ನಂತರ ಒಂದು ಬಿಳಿ ಬಟ್ಟೆಯಲ್ಲಿ ಹಾಕಿ ತದನಂತರ ಅದಕ್ಕೆ ಸ್ವಲ್ಪ ಉಪ್ಪನ್ನು ಹಾಕಿ ಮುಖದಿಂದ ಮೂರು ಬಾರಿ ಇಳೆಯನ್ನು ತೆಗೆದು ಈ ಮೂರು ವಸ್ತುವನ್ನು ನೀವು ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗಬೇಕಾದರೆ ಇಳೆಯನ್ನು ತೆಗೆದು ನಂತರ ನಿಮ್ಮ ಜೋಬಿನಲ್ಲಿ ಇಟ್ಟುಕೊಂಡು ಹೋಗಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ…

Read More

ನವದೆಹಲಿ: ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಇಸ್ಲಾಮಿಕ್ ಸ್ಟೇಟ್ (ಐಎಸ್), ಲಷ್ಕರ್-ಎ-ತೈಬಾ (ಎಲ್ಇಟಿ) ಮತ್ತು ತಾಲಿಬಾನ್ ಅನ್ನು ಬೆಂಬಲಿಸಿ ಮಂಗಳೂರಿನಲ್ಲಿ ಗೀಚುಬರಹವನ್ನು ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಐಸಿಸ್ ಪಿತೂರಿ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಮತ್ತೋರ್ವ ಆರೋಪಿಯ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ. ಈ ಪ್ರಕರಣದಲ್ಲಿ ಇಂದು ಸಲ್ಲಿಸಿದ ಎರಡನೇ ಪೂರಕ ಚಾರ್ಜ್ಶೀಟ್ನಲ್ಲಿ, ಎನ್ಐಎ ಅರಫತ್ ಅಲಿ ವಿರುದ್ಧ ಆರೋಪ ಹೊರಿಸಿದೆ ಮತ್ತು ಆರ್ಸಿ -46/2022 / ಎನ್ಐಎ / ಡಿಎಲ್ಐ ಪ್ರಕರಣದಲ್ಲಿ ಮೊಹಮ್ಮದ್ ಶಾರಿಕ್ ಮತ್ತು ಮಾಜ್ ಮುನೀರ್ ಅಹ್ಮದ್ ವಿರುದ್ಧ ಹೆಚ್ಚುವರಿ ಆರೋಪಗಳನ್ನು ದಾಖಲಿಸಿದೆ. 2020 ರ ಜನವರಿಯಲ್ಲಿ ಗೀಚುಬರಹವನ್ನು ಬರೆಯಲು ಇತರ ಆರೋಪಿಗಳನ್ನು ತೀವ್ರಗಾಮಿಯಾಗಿ ನೇಮಿಸಿಕೊಂಡಿದ್ದ ಅರಫತ್ ಅವರನ್ನು 2023 ರ ಸೆಪ್ಟೆಂಬರ್ 14 ರಂದು ಕೀನ್ಯಾದಿಂದ ಹಿಂದಿರುಗಿದ ನಂತರ ನವದೆಹಲಿಯ ಟಿ 3 ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ಐಎ ಬಂಧಿಸಿತು. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಾದ ಅಬ್ದುಲ್ ಮತೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೆಬ್…

Read More

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವಂತ ಎನ್ಐಎ ಇಂದು ಮತ್ತೆರಡು ವೀಡಿಯೋಗಳನ್ನು ಬಾಂಬರ್ ಬಗ್ಗೆ ಬಿಡುಗಡೆ ಮಾಡಿದೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ಐಎ ತನಿಖೆ ತೀವ್ರ ಗೊಳಿಸಿದೆ. ಈ ಬೆನ್ನಲ್ಲೇ ತನಿಖೆಗೆ ಸಹಾಯವಾಗುವ ನಿಟ್ಟಿನಲ್ಲಿ, ಬಾಂಬರ್ ಸುಳಿವು ಸಿಗಲೆಂದು, ಬಾಂಬರ್ ಗೆ ಸಂಬಂಧ ಪಟ್ಟಂತೆ ಇಂದು ಮತ್ತೆರಡು ವೀಡಿಯೋವನ್ನು ರಿಲೀಸ್ ಮಾಡಿದೆ. ಎನ್ಐಎಯಿಂದ ಇಂದು ಬಿಡುಗಡೆ ಮಾಡಿರುವಂತ ವೀಡಿಯೋದಲ್ಲಿ ಆರೋಪಿ ಪತ್ತೆಗೆ ನೆರವಾಗಲೆಂದು ಬಾಂಬರ್ ಬಿಎಂಟಿಸಿ ಬಸ್ ನಲ್ಲಿ ಹತ್ತಿರುವ ವೀಡಿಯೋ ಬಿಡುಗಡೆ ಮಾಡಲಾಗಿದೆ. https://twitter.com/ANI/status/1766071037626576972 ಇಲ್ಲದೇ ರಾಮೇಶ್ವರಂ ಕೆಫೆಯ ಸ್ಪೋಟದ ಆರೋಪಿ ಬಸ್ ನಿಲ್ದಾಣವೊಂದರಲ್ಲಿ ಓಡಾಡುತ್ತಿರುವ ವೀಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ. ಈ ಎರಡು ವೀಡಿಯೋಗಳನ್ನು ಆರೋಪಿ ಪತ್ತೆಗೆ ನೆರವಾಗಲೆಂದು ಎನ್ಐಎ ಬಿಡುಗಡೆ ಮಾಡಿರೋದಾಗಿ ತಿಳಿದು ಬಂದಿದೆ. https://twitter.com/ANI/status/1766071223341945326 https://kannadanewsnow.com/kannada/congress-finalises-tickets-for-9-lok-sabha-seats-in-karnataka-official-announcement-awaited/ https://kannadanewsnow.com/kannada/breaking-good-news-for-bank-employees-iba-signs-agreement-with-bank-unions-salary-hike/

Read More