Author: kannadanewsnow09

ಚಿತ್ರದುರ್ಗ : ಹಿರಿಯೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜನವರಿ 07ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ “ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ, ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶುಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್ ಅವರು ಕುರಿ ಮತ್ತು ಉತ್ತಮ ತಳಿಗಳ ಆಯ್ಕೆ, ಕೊಟ್ಟಿಗೆ ಮತ್ತು ಮೇವಿನ ನಿರ್ವಹಣೆ ಹಾಗೂ ಅವುಗಳ ಆರೋಗ್ಯ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು. ಆಸಕ್ತ ರೈತ ಭಾಂದವರು ತರಬೇತಿಯಲ್ಲಿ ಭಾಗವಹಿಸಲು ದೂರವಾಣಿ ಸಂಖ್ಯೆ 8277931058ಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆಯಬಹುದು. ನೋಂದಾವಣಿ ಮಾಡಿಕೊಂಡ ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ ಹಾಗೂ ಮೊದಲು ನೋಂದಾವಣಿ ಮಾಡಿಕೊಂಡ…

Read More

ಚಿತ್ರದುರ್ಗ : 2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗುವುದು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿಯೂ ಫೆಸಿಲಿಟೇಷನ್ ಕೇಂದ್ರಗಳನ್ನು ತೆರೆದು ಇ-ದೃಢೀಕರಣ ಪಡೆಯಲಾಗುತ್ತಿದೆ. ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ಇ-ಕೆವೈಸಿ ಧೃಡೀಕರಣ ನೊಂದಣಿ ಮಾಡಿಸಲು ಕೋರಿದೆ. ಇಲ್ಲದವಾದಲ್ಲಿ ಕೇಂದ್ರ ಸರ್ಕಾರದಿಂದ ಬರುವ ಶೇ.60 ರಷ್ಟು ವಿದ್ಯಾರ್ಥಿವೇತನ ಮಂಜೂರಾಗುವುದಿಲ್ಲ ಎಂದು ಹೊಳಲ್ಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/cabinet-decides-to-bifurcate-hubballi-dharwad-municipal-corporation-to-form-a-separate-dharwad-municipal-corporation/ https://kannadanewsnow.com/kannada/here-are-the-key-highlights-of-todays-state-cabinet-meeting-adds/

Read More

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಪ್ರತ್ಯೇಕ ಮಾಡಿ, ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಮೂರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಊರಾಗಿರುವ ಧಾರವಾಡ, ವಿದ್ಯಾಕಾಶಿ ಎಂದು ಪ್ರಖ್ಯಾತಿ ಗಳಿಸಿದೆ. ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ನಾಡಿಗೆ ಅಪಾರ ಕೊಡುಗೆ ನೀಡಿರುವ ಧಾರವಾಡವನ್ನು ಮಹಾನಗರ ಪಾಲಿಕೆಯಾಗಿಸಿ, ಆ ಮೂಲಕ ನಗರದ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ. https://twitter.com/KarnatakaVarthe/status/1874840387346747818 https://kannadanewsnow.com/kannada/ramesh-babu-hits-back-at-narayanasamy-for-seeking-priyank-kharges-resignation/ https://kannadanewsnow.com/kannada/isro-to-launch-us-satellite-to-enable-voice-calls-via-smartphones-from-space/ https://kannadanewsnow.com/kannada/here-are-the-key-highlights-of-todays-state-cabinet-meeting-adds/

Read More

ಬೆಂಗಳೂರು: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಬೌದ್ಧಿಕವಾಗಿ ದಿವಾಳಿಯಾಗಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು, ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಕೇಳುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಪ್ರಯತ್ನವಾಗಿರುತ್ತದೆ ಅಂತ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದ ರಾಜಕಾರಣದಲ್ಲಿ ಸಿದ್ದರಾಮಯ್ಯನವರನ್ನು, ಮಲ್ಲಿಕಾರ್ಜುನ ಖರ್ಗೆರವರನ್ನು, ಡಿ.ಕೆ. ಶಿವಕುಮಾರ್ ಅವರನ್ನು ತೇಜೋವದೆ ಮಾಡುವ ಕಾರಣಕ್ಕಾಗಿ ಭಾರತೀಯ ಜನತಾ ಪಕ್ಷದ ಹಲವಾರು ನಾಯಕರಿಗೆ ಹಲವಾರು ಬಹುಮಾನಗಳನ್ನ ಬಿಜೆಪಿ ಬಳುವಳಿಯಾಗಿ ನೀಡಿರುತ್ತದೆ. ಅಂತಹ ಬಳುವಳಿಗಳಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನ ಗಳಿಸಿದ ಛಲವಾದಿ ನಾರಾಯಣಸ್ವಾಮಿ ರವರು, ಮತ್ತೊಮ್ಮೆ ಬಿಜೆಪಿ ಲಾಟರಿ ಯೋಜನೆಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಪಡೆದಿರುತ್ತಾರೆ. ಸಂಘಪರಿವಾರದ ಅಣತಿಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಯ ಮುಂದೆ ಸ್ವಾಭಿಮಾನವನ್ನು…

Read More

ಬೆಂಗಳೂರು: ಪ್ರತಿ ವರ್ಷ ಕೊಡ ಮಾಡುವಂತ ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ.ಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 12ರಂದು ನಡೆಯುವಂತ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪ್ರದಾನ ಮಾಡಲಿದ್ದಾರೆ. ಈ ಕುರಿತಂತೆ ಬೆಂಗಳೂರು ಪ್ರೆಸ್ ಕ್ಲಪ್ ಅಧ್ಯಕ್ಷ ಆರ್.ಶ್ರೀಧರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಬೆಂಗಳೂರು ಪ್ರೆಸ್‌ಕ್ಲಬ್ ಪ್ರತಿ ವರ್ಷ ನೀಡುವ ಪ್ರೆಸ್‌ ಕ್ಲಬ್ ‘ವರ್ಷದ ವ್ಯಕ್ತಿ ಪ್ರಶಸ್ತಿ’, ‘ವಿಶೇಷ ಪ್ರಶಸ್ತಿ’ ಮತ್ತು ‘ವಾರ್ಷಿಕ ಪ್ರಶಸ್ತಿ’ ಗಳನ್ನು ಜನವರಿ 12 ರಂದು ಪ್ರದಾನ ಮಾಡಲಾಗುವುದು ಎಂದಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ 50 ಸಾಧಕ ಪತ್ರಕರ್ತರನ್ನು ಗುರುತಿಸಲಾಗಿದೆ. ಇದರ ಜೊತೆಗೆ ಪ್ರೆಸ್‌ಕ್ಲಬ್ ಸುವರ್ಣ ಮಹೋತ್ಸವ ಪ್ರಶಸ್ತಿ ಘೋಷಿಸಿದ್ದು, ಐವರು ಹಿರಿಯ ಪತ್ರಕರ್ತರು ಹಾಗೂ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲು ಪ್ರೆಸ್‌ಕ್ಲಬ್‌ ಕಾರ್ಯಕಾರಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು,  ಬೆಂಗಳೂರು ಅಬಕಾರಿ ಆಯುಕ್ತ ಡಾ.ರವಿಶಂಕರ್ ಜೆ., ಐಎಎಸ್ (ಕೆಎನ್: 2001) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅನ್ಬುಕ್ಕುಮಾರ್, ಐಎಎಸ್ (ಕೆಎನ್: 2004), ಸರ್ಕಾರದ ಕಾರ್ಯದರ್ಶಿ, ಕೃಷಿ ಇಲಾಖೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ಬೆಂಗಳೂರು ಆಗಿ ನೇಮಿಸಲಾಗಿದೆ. ಬೆಂಗಳೂರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಚುನಾವಣೆಗಳು) ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ (ವೆಚ್ಚ) ವೆಂಕಟೇಶ್ ಕುಮಾರ್ ಆರ್., ಐಎಎಸ್ (ಕೆಎನ್: 2010) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ…

Read More

ಬೆಂಗಳೂರು : ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5 ರಿಂದ ಜಾರಿಗೆ ಬರಲಿದೆ. ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್ ಅವರು ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು. ಪ್ರತಿ ಲೀಟರ್ ಡೀಸೆಲ್ ಗೆ 10-1-2015ರಲ್ಲಿ ಬಿಎಂಟಿಸಿ ಗೆ ಹತ್ತು ವರ್ಷಗಳ ಹಿಂದೆ ದರ ಪರಿಷ್ಕರಣೆ ಆಗಿತ್ತು. ಅಂದು ರೂ60.98 ಪೈಸೆ ಇತ್ತು. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಂದಿನ ಡೀಸೆಲ್ ವೆಚ್ಚ 9 ಕೋಟಿ 16ಲಕ್ಷ ಇದ್ದ್ದು ಈಗ ಪ್ರಸ್ತುತ 13.21ಕೋಟಿ ಹೆಚ್ಚಳ ಆಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ಸಿಬ್ಬಂದಿ…

Read More

ಬೆಳಗಾವಿ: ಶಾಲೆ ಬಿಟ್ಟ ಮೇಲೆ ಬ್ಯಾಗ್ ತಗೆದುಕೊಂಡು ಬರುವಂತೆ ಸಹಪಾಠಿಗಳು ಹೇಳಿದ ಮಾತನ್ನು ಕೇಳದಿದ್ದಕ್ಕೇ ಸಿಟ್ಟಾಗಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿರುವಂತ ಘಟನೆ ಗೋಕಾಕ್ ನಲ್ಲಿ ನಡೆದಿದೆ. ಬೆಳಗಾವಿಯ ಗೋಕಾಕ್ ವಾಲ್ಮೀಕಿ ಮೈದಾನದಲ್ಲಿ ಶಾಲೆ ಬಿಟ್ಟಾಗ ತನ್ನ ಬ್ಯಾಗ್ ತರುವಂತೆ 10ನೇ ಕ್ಲಾಸ್ ವಿದ್ಯಾರ್ಥಿಗೆ ಸಹಪಾಠಿಗಳು ತಿಳಿಸಿದ್ದರು. ಆದರೇ ಶಾಲೆ ಬಿಟ್ಟ ನಂತ್ರ ವಿದ್ಯಾರ್ಥಿ ಸಹಪಾಠಿಗಳು ಹೇಳಿದಂತೆ ಅವರ ಬ್ಯಾಗ್ ತರೋದಕ್ಕೆ ನಿರಾಕರಿಸಿ ತಂದಿರಲಿಲ್ಲ. ಇದೇ ಕಾರಣಕ್ಕೆ ಮೈದಾನದಲ್ಲಿ ಜಗಳಕ್ಕೆ ಇಳಿದಂತ ಅಪ್ರಾಪ್ತ ಬಾಲಕರು, ವಿದ್ಯಾರ್ಥಿಯ ಮೇಲೆ ಚಾಕುವಿನಿಂದ ಇರಿದಿದ್ದಾರೆ. ಕುತ್ತಿಗೆ, ಮೈಮೇಲೆ ಚಾಕು ಇರಿದು ಸ್ಥಳದಿಂದ ಅಪ್ರಾಪ್ತ ಸಹಪಾಠಿಗಳು ಪರಾರಿಯಾಗಿದ್ದಾರೆ. ಚಾಕು ಇರಿತಕ್ಕೆ ಒಳಗಾಗಿದ್ದಂತ 10ನೇ ತರಗತಿ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಗೋಕಾಕ್ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. https://kannadanewsnow.com/kannada/isro-to-launch-us-satellite-to-enable-voice-calls-via-smartphones-from-space/ https://kannadanewsnow.com/kannada/in-yet-another-big-shock-to-the-people-of-the-state-cabinet-approves-15-hike-in-bus-ticket-prices/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳಕ್ಕೆ ಅನುಮತಿ ನೀಡಲಾಗಿದೆ. ಶೇ.15ರಷ್ಟು ಟಿಕೆಟ್ ದರ ಹೆಚ್ಚಳದ ಬಿಸಿ ಜನವರಿ 15ರಿಂದಲೇ ಜಾರಿಗೊಳ್ಳಲಿದೆ ಅಂತ ಸಚಿವ ಹೆಚ್.ಕೆ ಪಾಟೀಲ್ ಘೋಷಿಸಿದ್ದಾರೆ. ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾರಿಗೆ ಬಸ್ ದರ ಏರಿಕೆಗೆ ಸಂಪುಟ ಸಮ್ಮತಿ ನೀಡಲಾಗಿದೆ. ಶೇ.15% ದರ ಏರಿಕೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದರು. ಕೆಎಸ್ ಆರ್ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ, ವಾಯುವ್ಯ ಕರ್ನಾಟಕ ಸಂಸ್ಥೆಗಳ ಬಸ್ ಗಳ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತಿದೆ. ಜನವರಿ 5ರಿಂದ ಹೊಸ ಟಿಕೆಟ್ ದರ ಜಾರಿಯಾಗಲಿದೆ ಎಂದು ತಿಳಿಸಿದರು. 2015ರಂದು ಟಿಕೆಟ್ ದರ ಏರಿಕೆಯಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಏರಿಕೆ ಇರಲಿಲ್ಲ. 2015ರಲ್ಲಿ ಡಿಸೇಲ್ ದರ 60.98 ಇತ್ತು. 9.16 ಕೋಟಿ ಡಿಸೇಲ್ ವೆಚ್ಚ ಇತ್ತು. ಸಿಬ್ಬಂದಿ ವೆಚ್ಷವೂ 12 ರಿಂದ 18.36ಕ್ಕೆ ಏರಿದೆ. ಹೆಚ್ಚುವರಿ ಹೊರೆ ಸಾರಿಗೆ ನಿಗಮಗಳ‌ ಮೇಲಿತ್ತು. ಹಾಗಾಗಿ ಬಸ್ ದರ ಏರಿಕೆ ಅನಿವಾರ್ಯವಾಗಿದೆ ಎಂದರು. https://kannadanewsnow.com/kannada/do-you-know-what-minister-ramalinga-reddy-said-about-the-15-per-cent-hike-in-bus-ticket-prices/ https://kannadanewsnow.com/kannada/in-yet-another-big-shock-to-the-people-of-the-state-cabinet-approves-15-hike-in-bus-ticket-prices/

Read More

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದಿಸಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ದರ ಏರಿಸೋದಕ್ಕೆ ಬಿಎಂಟಿಸಿಯಲ್ಲಿ 2014ರಲ್ಲಿ ದರ ಏರಿಸಿದ್ದು. ಅವತ್ತು ಕೇವಲ 30 ರೂಪಾಯಿ ಡಿಸೇಲ್ ಇತ್ತು. 2020ರಲ್ಲಿ ವಾಯವ್ಯ, ಕಲ್ಯಾಣ ಕರ್ನಾಟಕ ಕೆಎಸ್ ಆರ್ ಟಿಸಿ ದರ ಏರಿಸಲಾಗಿತ್ತು. 2020ರಲ್ಲಿ ಪ್ರತಿದಿನ ಡಿಸೇಲ್ 9.16 ಕೋಟಿ ಖರ್ಚು ಮಾಡ್ತಿದ್ವು. ಈಗ 13 ಕೋಟಿ 21 ಲಕ್ಷ ಖರ್ಚಾಗುತ್ತಿದೆ. ಈ ಮೂಲಕ ಒಂದು ದಿನಕ್ಕೆ 10 ಕೋಟಿ ನಮಗೆ ಖರ್ಚಾಗುತ್ತಿದೆ ಎಂದರು. ನಾಲ್ಕು ವಿಭಾಗಗಳಿಂದಲೂ ದರ ಹೆಚ್ಚಳದ ಬಗ್ಗೆ ಕಳೆದ ಐದಾರು ತಿಂಗಳಿಂದ ಪ್ರಸ್ತಾಪ ಬಂದಿತ್ತು. ಈಗ ಶೇ.15 ಒಪ್ಪಿಗೆ ಸಿಕ್ಕಿದೆ. ಒಂದು ಸಾವಿರ ಕೋಟಿ ಬರಬಹುದು. ಆದ್ರೆ ನಷ್ಟದ ಪ್ರಮಾಣ ಕಡಿಮೆ ಆಗುತ್ತೆ. ಬಿಜೆಪಿ ಸರ್ಕಾರ 5900 ಕೋಟಿ ಸಾಲ ಬಿಟ್ಟು ಹೋಗಿದ್ದಾರೆ. ಅಷ್ಟು ಸಾಲ…

Read More