Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದೆ. ಇನ್ನೂ ಅಧ್ಯಕ್ಷರು, ರಾಜ್ಯ ಪರಿಷತ್ ಸ್ಥಾನದ ಅಂತಿಮ ಕಣದಲ್ಲಿ ಐವರು ಅಭ್ಯರ್ಥಿಗಳಿದ್ದಾರೆ. ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಾಗರ ತಾಲ್ಲೂಕು ಶಾಖೆಯ ಚುನಾವಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಇಂದು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಅಧ್ಯಕ್ಷರ ಸ್ಥಾನದಲ್ಲಿ ಅಂತಿಮ ಕಣದಲ್ಲಿ ಸುರೇಶ್.ಎಸ್.ಕೆ ಹಾಗೂ ಸಂತೋಷ್ ಕುಮಾರ್.ಎನ್ ಇದ್ದಾರೆ. ಇನ್ನುಳಿದಂತ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ವಾಪಾಸ್ ಪಡೆದಿರುವುದಾಗಿ ತಿಳಿಸಿದ್ದಾರೆ. ಇನ್ನೂ ರಾಜ್ಯ ಪರಿಷತ್ ಸ್ಥಾನಗಳಿಗೆ ಅಂತಿಮ ಕಣದಲ್ಲಿ ದೇವೇಂದ್ರಪ್ಪ.ಕೆ, ನಾಗರಾಜ್.ಕೆ ಹಾಗೂ ಮಂಜುನಾಥ ಎಂ.ಎಸ್ ಇದ್ದಾರೆ. ಖಜಾಂಚಿಯಾಗಿ ಅವಿರೋಧವಾಗಿ ಸಹದೇವ್ ಎಸ್ ಬಡಿಗೇರ್ ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ. ಅಧ್ಯಕ್ಷ ಸ್ಥಾನದ ಅಂತಿಮ ಕಣದಲ್ಲಿರುವಂತ ಸುರೇಶ್ ಎಸ್ ಕೆ ಹಾಗೂ ಸಂತೋಷ್ ಕುಮಾರ್ ಎನ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಈ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕಲಬುರ್ಗಿಯ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ(ರಿ)ಯಲ್ಲಿ ನಡೆದಿದೆ ಎನ್ನಲಾದಂತ ಅಕ್ರಮಗಳ ಕುರಿತಂತೆ ವಿವರವಾದ ತನಿಖೆಗೆ ಆದೇಶಿಸಲಾಗಿದೆ. ಇಂದು ರಾಜ್ಯದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರದೇಶಾಭಿವೃದ್ಧಿ ಮಂಡಳಿ ವಿಭಾಗದ ನಿರ್ದೇಶಕರು ನಡವಳಿಯನ್ನು ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ (ರಿ), ಕಲಬುರಗಿ ಇವುಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ದೂರಿನ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು, ಸ್ಥಳ ಹಾಗೂ ದಾಖಲಾತಿಗಳ ಪರಿಶೀಲನೆಯೊಂದಿಗೆ ವಿವರವಾದ ತನಿಖೆ ನಡೆಸಿ ಆರೋಪಿತರ ಮಾಹಿತಿಯೊಂದಿಗೆ ಪರಿಪೂರ್ಣ ತನಿಖಾ ವರದಿಯನ್ನು ಸ್ಪಷ್ಟ ಅಭಿಪ್ರಾಯ/ಶಿಫಾರಸ್ಸಿನೊಂದಿಗೆ 15 ದಿನಗಳೊಳಗಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶಿಸಿದೆ. ಅಲ್ಲದೆ, ತನಿಖಾಧಿಕಾರಿಗಳು ಈ ತನಿಖೆಗೆ ಸಂಬಂಧಿಸಿದಂತೆ ಸಹಾಯಕ್ಕಾಗಿ ಅಗತ್ಯವಿರುವವರನ್ನು ತೆಗೆದುಕೊಳ್ಳತಕ್ಕದ್ದು ಮತ್ತು ತನಿಖೆಯ ವ್ಯಾಪ್ತಿಯಲ್ಲಿ ಮಂಡಳಿ ಮತ್ತು…
ಹಾವೇರಿ: ಶಿಗ್ಗಾಂವಿಯ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ವಿರುದ್ಧ ರೌಡಿ ಶೀಟ್ ಇದೆ ಎಂಬುದಾಗಿ ಹಾವೇರಿ ಎಸ್ಪಿ ಮಾಹಿತಿ ನೀಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೇ ಶಿಗ್ಗಾವಿ ಡಿಎಸ್ಪಿ ಹಾಗೂ ಪಿಐ ಕಚೇರಿಯ ದಾಖಲಾತಿಗಳಲ್ಲಿ ಯಾಸೀರ್ ಅಹ್ಮದ್ ವಿರುದ್ಧ ಯಾವುದೇ ರೌಡಿ ಶೀಟ್ ಇರುವುದಿಲ್ಲ ಎಂಬುದಾಗಿ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಹಾವೇರಿ ಜಿಲ್ಲಾ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಯಾಸೀರ್ ಅಹ್ಮದ್ ತಂದೆ ಮೊಹ್ಮದ್ ಖಾನ್ ಪಠಾಣ, ಬೊಮ್ಮನಹಳ್ಳಿ, ಹಾನಗಲ್ ತಾಲ್ಲೂಕು, ಹಾವೇರಿ ಜಿಲ್ಲೆ ಇವರ ಮೇಲೆ ರೌಡಿ ಶೀಟ್ ಇದೆ ಅಂತ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು ಇರುತ್ತದೆ ಎಂದಿದ್ದಾರೆ. ಡಿಎಸ್ಪಿ ಶಿಗ್ಗಾವಿ ಹಾಗೂ ಪಿಐ ಶಿಗ್ಗಾವಿ ಅವರ ಕಚೇರಿಯ ದಾಖಲಾತಿಗಳನ್ನು ಪರಿಶೀಲಿಸಲಾಗಿ, ಪ್ರಸ್ತುತ ಯಾಸೀರ್ ಅಹ್ಮದ್ ತಂದೆ ಮೊಹಮ್ಮದ್ ಖಾನ್ ಪಠಾಣ ಅವರ ಮೇಲೆ ಯಾವುದೇ ರೀತಿ ರೌಡಿ ಶೀಟ್ ಇರುವುದಿಲ್ಲ ಎಂಬುದಾಗಿ ಹಾವೇರಿ ಪೊಲೀಸ್ ಅಧೀಕ್ಷಕರು ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/chitradurga-district-congress-working-president-shivu-yadav-campaigns-in-channapatna-seeks-votes-from-kadugollas/ https://kannadanewsnow.com/kannada/big-shock-to-those-who-parked-vehicles-in-no-parking-zone-in-sagar-police-issues-notice/
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನ ನಿಲ್ಲಿಸಿದಂತ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಪೊಲೀಸರಿಂದ 6ಕ್ಕೂ ಹೆಚ್ಚು ವಾಹನಗಳ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದ್ದು, ದಿನಾಂಕ 10-11-2024ರಂದು ಸಂಜೆ ಸುಮಾರು 5.54ಕ್ಕೆ ಸಾಗರ ಸರ್ಕಲ್ ಹತ್ತಿರ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದಂತ ಕೆಎ 15, ಎನ್ 2093 ಕಾರು ಮಾಲೀಕರಿಗೆ ಸಾರ್ವಜನಿಕರ ಸುಗಮ ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ್ದ ಕಾರಣ ನೋಟಿಸ್ ನೀಡಲಾಗಿದೆ. ಇನ್ನೂ ನೋಟಿಸ್ ತಲುಪಿದ ಕೂಡಲೇ ಕಡ್ಡಾಯವಾಗಿ ವಾಹನ ಮತ್ತು ದಾಖಲಾತಿಗಳೊಂದಿಗೆ ಸಾಗರ ಪೇಟೆ ಠಾಣೆಗೆ ಹಾಜರಾಗಬೇಕು. ಇಲ್ಲವಾದಲ್ಲಿ 179, 201 ಐಎಂವಿ ಕಾಯ್ದೆ ಹಾಗೂ ಕೆಪಿ ಕಾಯ್ದೆ 1963ರ ರೀತಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ನಿವೇದಿಸಿಕೊಳ್ಳಲಾಗುವುದಾಗಿ ತಿಳಿಸಲಾಗಿದೆ. ಈ ವಾಹನದ ಮಾಲೀಕರಿಗೆ ಅಷ್ಟೇ ಅಲ್ಲದೇ ಜೆಸಿ ರಸ್ತೆಯ ಸಾಗರ ಸರ್ಕಲ್ ಬಳಿಯಲ್ಲಿನ ನೋ ಪಾರ್ಕಿಂಗ್ ನಲ್ಲಿ ಕಾರು ನಿಲ್ಲಿಸಿದಂತ ಕೆಎ17,…
ಚನ್ನಪಟ್ಟಣ: ಇಂದು ಚನ್ನಪಟ್ಟಣ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿತ್ತು. ಈ ವೇಳೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ, ವಕೀಲ ಸಿ.ಶಿವು ಯಾದವ್ ಅವರು ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು. ಅಲ್ಲದೇ ಕಾಡುಗೊಲ್ಲರ ಹಟ್ಟಿಗಳಿಗೆ ಭೇಟಿ ನೀಡಿದಂತ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು. ಇಂದು ಚಿತ್ರದುರ್ಗದಿಂದ ತೆರಳಿದಂತ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಿ.ಶಿವು ಯಾದವ್ ಅವರು, ಚನ್ನಪಟ್ಟಣದಲ್ಲಿ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಪರವಾಗಿ ಮತಬೇಟೆಯನ್ನು ನಡೆಸಿದರು. ಚೆನ್ನಪಟ್ಟಣದ ನ್ಯಾಯಾಲಯದಲ್ಲಿ ಚೆನ್ನಪಟ್ಟಣ ವಕೀಲರ ಸಂಘದ ಅದ್ಯಕ್ಷರಾದ ಗಿರೀಶ್ ಮತ್ತು ಪದಾಧಿಕಾರಿಗಳೊಂದಿಗೆ ವಕೀಲರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ ಪರ ಮತಯಾಚನೆ ಮಾಡಿದುವಂತೆ ಮನವಿ ಮಾಡಿದರು. ಇದಲ್ಲದೇ ಚನ್ನಪಟ್ಟಣದ ಅರಳಲ ಸಂದ್ರ, ವಿಟ್ಟನಹಳ್ಳಿ, ಬಾಚಳ್ಳಿ, ದೇವರಹೊಸಹಳ್ಳಿ ಗೊಲ್ಲರಹಟ್ಟಿಗಳಿಗೆ ಭೇಟಿ ನೀಡಿದಂತ ಅವರು, ಜನಾಂಗದ ಮುಖಂಡರೊಂದಿಗೆ ಮತ್ತು ಮಹಿಳೆಯರೊಂದಿಗೆ ಚರ್ಚಿಸಿದರು. ಕಾಡುಗೊಲ್ಲ ಜನಾಂಗಕ್ಕೆ ಅಸ್ಮಿತೆ ನೀಡಿದ್ದು…
ಬೆಂಗಳೂರು: ಇ-ಖಾತಾ ಸಮಸ್ಯೆ ನಿವಾರಣೆಗೆ ಸಂಬಂಧಿಸಿದಂತೆ ಬಿಬಿಎಂಪಿಯಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಇ-ಖಾತಾ ಪಡೆಯವು ಬಗ್ಗೆ ವೀಡಿಯೋ ಕೂಡ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವ್ಯವಸ್ಥೆ: ನಗರದಲ್ಲಿ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ದಾಖಲೆಗಳನ್ನು ತೆಗದುಕೊಂಡು ಹೋಗಿ 45 ರೂ. ಪಾವತಿಸಿದರೆ ಇ-ಖಾತಾ ಸಿಗಲಿದೆ. ಇ-ಖಾತಾ ಪಡೆಯುವ ವೀಡಿಯೋ ಬಿಡುಗಡೆ: ನಾಗರೀಕರು ಇ-ಖಾತಾ ಪಡೆಯಲು ಅರ್ಜಿ ಹಾಕುವ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಸಲುವಾಗಿ ಪಾಲಿಕೆಯ ಯುಟ್ಯೂಬ್ ಲಿಂಕ್ https://youtube.com/@bbmpcares?si=YStwr7xLhX5aRxFT ನಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯ ವೀಡಿಯೋ ಅಪ್ಲೊಡ್ ಮಾಡಲಾಗಿದೆ. ಈ ವೀಡಿಯೋ ನೋಡಿಕೊಂಡು ಸುಲಭವಾಗಿ ಇ-ಖಾತಾ ಪಡೆಯಬಹುದಾಗಿದೆ. ಇದೇ ರೀತಿ ಇನ್ನಿತರೆ ವೀಡಿಯೋಗಳನ್ನು ಕೂಡಾ ಅಪ್ಲೋಡ್ ಮಾಡಲಿದ್ದು, ಪಾಲಿಕೆಯ ಯೂಟ್ಯೂಬ್ ಚಾನಲ್ ಅನ್ನು Subscribe ಮಾಡಿಕೊಳ್ಳಲು ನಾಗರೀಕರಲ್ಲಿ ಕೋರಿದೆ. ವಲಯವಾರು ಇ-ಖಾತಾ ಸಹಾಯವಾಣಿ ಸಂಖ್ಯೆಯ ವಿವರಗಳು: ಇ-ಖಾತಾ ಪಡೆಯಲು ತಾಂತ್ರಿಕ…
ಬೆಂಗಳೂರು: ಕೋವಿಡ್ ಭ್ರಷ್ಟಾಚಾರಗಳ ಕುರಿತು ಮೈಕಲ್ ಕುನ್ಹಾ ಅವರ ಆಯೋಗದ ವರದಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು ಮಾಡಿರುವ ಬೆನ್ನಲ್ಲೇ ಜಸ್ಟೀಸ್ ಕುನ್ಹಾ ಅವರನ್ನ ಕಾಂಗ್ರೆಸ್ ಏಜೇಂಟ್ ಎಂದು ಕರೆದ ಪ್ರಲ್ಹಾದ್ ಜೋಶಿ ಹೇಳಿಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೂರು ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಿವೃತ್ತ ನ್ಯಾಯಮೂರ್ತಿಯಾಗಿ ಜಸ್ಟೀಸ್ ಕುನ್ಹಾ ಅವರು ಅತ್ಯಂತ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಿದವರು. ಗೌರವಾನ್ವಿತರ ಬಗ್ಗೆ ಕೇಂದ್ರ ಸಚಿವರಾಗಿ ಪ್ರಲ್ಹಾದ್ ಜೋಶಿ ವಯಕ್ತಿಕ ನಿಂದನೆ ಮಾಡಿ ಮಾತನಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಪ್ರಲ್ಹಾದ್ ಜೋಶಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಪ್ರಲ್ಹಾದ್ ಜೋಶಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.…
ಬೆಂಗಳೂರು: ದಿನಾಂಕ 13.11.2024 (ಬುಧವಾರ) ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 03:30 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ,…
ಶಿವಮೊಗ್ಗ: ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಶಾಖೆಯ ಸದಸ್ಯರು, ನಮ್ಮ ಸಂಘದ ಸಕ್ರೀಯ ಸದಸ್ಯ, ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕ ವಸಂತ ಅವರ ಮೇಲೆ ಹಾವೇರಿಯ ಸಿಇಎನ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಲಾಗಿದೆ. ಕನ್ನಡ ನ್ಯೂಸ್ ಇ-ಪೇಪರ್ ನಲ್ಲಿ ಮೃತ ರೈತನ ಸಂಬಂಧಿಕರು ನೀಡಿದಂತ ಹೇಳಿಕೆಯನ್ನು, ನೀಡಿದ ಮನವಿ ಆಧರಿಸಿ ಸುದ್ದಿಯನ್ನು ಪ್ರಕಟಿಸಲಾಗಿದೆ. ಈ ಕೂಡಲೇ ನಮ್ಮ ಸಂಘದ ಸದಸ್ಯ ವಸಂತ ಮೇಲಿನ ಪ್ರಕರಣವನ್ನು ತಕ್ಷಣವೇ ಹಿಂಪಡೆಯುವಂತೆ ಮನವಿಯ ಮೂಲಕ ಒತ್ತಾಯಿಸಲಾಯಿತು. ಈ ವೇಳೆ ಮಾತನಾಡಿದಂತ ಸಾಗರ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಮಲ್ಲೇಶ್ವರಂ ಐಪಿಪಿ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಚನೆ ನೀಡಿದರು. ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ ವ್ಯಾಪ್ತಿವಾರು ಸಭೆ ನಡೆಸಿ, ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಪರಿಷ್ಕರಣೆ ಪ್ರಕರಣಗಳ ಪಟ್ಟಿಯ ಅನುಸಾರ ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. ಒಟಿಎಸ್ ಯೋಜನೆ ಬಗ್ಗೆ ಅರಿವು ಮೂಡಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ…