Author: kannadanewsnow09

ಬೆಂಗಳೂರು: ನಿನ್ನೆ ಹೈಕೋರ್ಟ್ ನಿಂದ ರಾಜ್ಯ ಸರ್ಕಾರದಿಂದ ನಡೆಸಲು ಉದ್ದೇಶಿಸಲಾಗಿದ್ದಂತ 5, 8, 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿತ್ತು. ಈ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಇಂದು ರಾಜ್ಯ ಸರ್ಕಾರವು ವಿಭಾಗಿಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಈ ಕುರಿತಂತೆ ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಮೇಲ್ಮನವಿಯನ್ನು ರಾಜ್ಯ ಸರ್ಕಾರದ ಪರ ಎಎಜೆ ಅವರು, 53,682 ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಯಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿತ್ತು. ಖಾಸಗಿ ಶಾಲೆಗಳು ಇಂತಹ ಬೋರ್ಡ್ ಪರೀಕ್ಷೆಯನ್ನು ವಿರೋಧಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಹೈಕೋರ್ಟ್ ವಿಭಾಗೀಯ ಪೀಠದ ತಡೆಜ್ಞೆಯಾಜ್ಞೆಯಿಂದ ಸೋಮವಾರ ನಡೆಯಬೇಕಿದ್ದಂತ 5, 8, 9 ಹಾಗೂ 11ನೇ ತರಗತಿಯ ಬೋರ್ಡ್ ಪರೀಕ್ಷೆ ಅಡ್ಡಕತ್ತರಿಯಲ್ಲಿ ಸಿಲುಕಿದಂತೆ ಮಕ್ಕಳು ಇದ್ದಾರೆ. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರ ಕೋರಿದೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಬಿಬಿಎಂಪಿ ಪಬ್ಲಿಕ್ ಶಾಲೆಯ ಜಂಟಿ ಸಹಭಯೋಗದಲ್ಲಿ ನಡೆಯುತ್ತಿರುವ ಫ್ರೀ ನರ್ಸರಿ ತರಗತಿ(ಸಿ.ಬಿ.ಎಸ್.ಸಿ ಪಠ್ಯಕ್ರಮ)ಗೆ 2024-25ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಭಾರತೀಯ ವಿದ್ಯಾಭವನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಬ್ಲಿಕ್ ಸ್ಕೂಲ್, ನಂ. 215ನೇ ಮುಖ್ಯ ರಸ್ತೆ ಕ್ರಾಂತಿಕವಿ ಸರ್ವಜ್ಞ ರಸ್ತೆ, ಶ್ರೀರಾಮಪುರ, ಬೆಂಗಳೂರು-21 ಈ ವಿದ್ಯಾಸಂಸ್ಥೆಯಲ್ಲಿ ಫ್ರೀ ನರ್ಸರಿ ತರಗತಿಗೆ ದಿನಾಂಕ: 11-03-2024 ರಿಂದ 25-03-2024 ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. • ಅರ್ಜಿ ನಮೂನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 26-03-2024 ರಿಂದ 10-04-2024 ರವರೆಗೆ • ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ(ಶಿಕ್ಷಣ) 1ನೇ ಮಹಡಿಯ ಅನೆಕ್ಸ್- 3 ಕಟ್ಟಡ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು. • 20-05-2024 ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ. ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು: 1 . ಮಗುವಿನ ಪಾಸ್ ಪೋರ್ಟ್ ಸೈಜ್ ಫೋಟೋ -…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 11,307 ಪೌರ ಕಾರ್ಮಿಕರನ್ನು ಖಾಯಂಗೊಳಿಸುವ ಸಂಬಂಧ ಆದೇಶ ಹೊರಡಿಸಿತ್ತು. ಈ ನಂತ್ರ ಈಗ 11 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಗೊಳಿಸುವ ಸಂಬಂಧ ಮತ್ತೊಂದು ಸೇರ್ಪಡೆ ಆದೇಶವನ್ನು ಹೊರಡಿಸಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿ-2 ಮತ್ತು ಸಮನ್ವಯ, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶ ಹೊರಡಿಸಿದ್ದು, ಅದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನೇರಪಾವತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಭರ್ತಿಗಾಗಿ 11,307 ಪೌರ ಕಾರ್ಮಿಕರ ಹುದ್ದೆಗಳನ್ನು ಪ್ರಸ್ತುತ ಚಾಲ್ತಿಯಲ್ಲಿರುವ ಮೀಸಲಾತಿ, ರೋಸ್ಟರ್ ಮೀಸಲಾತಿ ನಿಯಮಗಳನ್ವಯ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿ ಆದೇಶಿಸಿತ್ತು ಎಂದಿದ್ದಾರೆ. ದಿನಾಂಕ 28-03-2023ರ ಸೇರ್ಪಡೆ ಆದೇಶದಲ್ಲಿ ಸಮಸಂಖ್ಯೆಯ ದಿನಾಂಕ 02-03-2023ರ ಆದೇಶಕ್ಕೆ ಕೆಲವೊಂದು ಅಂಶಗಳನ್ನು ಸೇರ್ಪಡೆಗೊಳಿಸಿ ಆದೇಶಿಸಲಾಗಿರುತ್ತದೆ. ಅದೇ 11,307 ಸಂಖ್ಯಾತಿರಿಕ್ತ ಹುದ್ದೆಗಳಿಗೆ ಪೌರ ಕಾರ್ಮಿಕರುಗಳ ನೇಮಕಾತಿ ಸಮಯದಲ್ಲಿ ಅರ್ಹ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಲಭ್ಯವಿಲ್ಲದೇ ಇದ್ದಲ್ಲಿ, ಇತರೆ ಯಾವುದೇ ವರ್ಗದ ಅರ್ಹ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯ್ತಿಯ ಪಿಡಿಓ ವಿರುದ್ಧ ಗ್ರಾಮ ಪಂಚಾಯ್ತಿ ಸದಸ್ಯರು ಸಿಡಿದೆದ್ದಿದ್ದರು. ಪಿಡಿಓ ದುರ್ವರ್ತನೆಯನ್ನು ಖಂಡಿಸಿ ಸಾಮೂಹಿಕ ರಾಜೀನಾಮೆ ನೀಡಿದ್ದರು. ಈ ಹಿನ್ನಲೆಯಲ್ಲಿ PDO ಅಮಾನುತುಗೊಳಿಸಲಾಗಿದೆ. ಹೀಗಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಕೂಡ ತಮ್ಮ ಸಾಮೂಹಿಕ ರಾಜೀನಾಮೆ ಹಿಂಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯ್ತಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಪಂಚಾಯ್ತಿಯ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರಿಗೆ ಗೌರವ ಕೊಡದೇ, ದುರ್ವರ್ತನೆ ತೋರಿದ್ದರು. ಪಿಡಿಒ ದುರ್ವರ್ತನೆ ಖಂಡಿಸಿ ಕರಿಯಾಲ ಗ್ರಾಮ ಪಂಚಾಯ್ತಿಗೆ ಸೇರಿದಂತ 11 ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದರು. ಇದರಿಂದ ಪರಿಸ್ಥಿತಿಯ ವಿಕೋಪತೆಯನ್ನು ಅರಿತಿದ್ದಂತ ಹಿರಿಯೂರು ತಾಲೂಕು ಪಂಚಾಯ್ತಿ ಇಓ ವರದಿ ಆಧರಿಸಿ, ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಿಇಓ ಕರಿಯಾಲ ಗ್ರಾಮ ಪಂಚಾಯ್ತಿ ಪಿಡಿಒ ಅಮಾನತುಗೊಳಿಸಿದ್ದರು. ಅಲ್ಲದೇ ಕರಿಯಾಲ ಗ್ರಾಮ ಪಂಚಾಯ್ತಿಗೆ ಬೇರೊಬ್ಬ ಪಿಡಿಒ ನೇಮಕ ಮಾಡಲಾಗಿತ್ತು. ಈ ಎಲ್ಲಾ ಕಾರಣದಿಂದಾಗಿ ಪಿಡಿಒ ದುರ್ವರ್ತನೆ ಖಂಡಿಸಿ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಂತ 11 ಸದಸ್ಯರು…

Read More

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ಐಎಯಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಈಗ ಸಿಕ್ಕಿರೋ ಮಾಹಿತಿಯ ಪ್ರಕಾರ ಬಾಂಬರ್ ಟ್ರಾವೆಲ್ ಹಿಸ್ಟ್ರಿ ಮಾತ್ರ ಬೆಚ್ಚಿ ಬೀಳಿಸುವಂತಿದೆ. ಅದೇನು ಅಂತ ಮುಂದೆ ಓದಿ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಸಂಬಂಧ ಆರೋಪಿಯ ಮೊದಲ ಸುಳಿವು ಸಿಕ್ಕಿದ್ದೇ ಕೆಫೆಯಲ್ಲಿನ ಸಿಸಿಟಿವಿ ದೃಶ್ಯಾವಳಿಯಿಂದಾಗಿತ್ತು. ಆನಂತ್ರ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದಂತ ಟ್ರಾವೆಲ್ ಹಿಸ್ಟ್ರಿ ಬಹಿರಂಗಗೊಂಡಿತ್ತು. ಈಗ ಬಾಂಬರ್ ಟ್ರಾವೆಲ್ ಹಿಸ್ಟರಿಯ ಮತ್ತಷ್ಟು ಸ್ಪೋಟ ಮಾಹಿತಿಗಳು ಹೊರಬಿದ್ದಿದ್ದಾವೆ. ಅದೇ ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಟೋಸಿದ ಬಳಿಕ ಅಲ್ಲಿಂತ ತುಮಕೂರಿನ ಕಳ್ಳಂಬೆಳ್ಳ ಮಾರ್ಗವಾಗಿ ಬಳ್ಳಾರಿ, ಬೀದರ್ ಮೂಲಕ ಹುಮ್ನಾಬಾದ್ ಗೆ ಬಾಂಬರ್ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ಪ್ರಯಾಣಿಸಿರೋದಾಗಿ ತಿಳಿದು ಬಂದಿದೆ., ಮಾರ್ಚ್.1ರಂದು ಬೆಂಗಳೂರಿನ ಗೋರಗುಂಟೇಪಾಳ್ಯದಿಂದ ಕೆಎ 38, ಎಫ್ 1235 ಕೆಎಸ್ಆರ್ ಟಿಸಿ ಬಸ್ ಹತ್ತಿರುವಂತ ಬಾಂಬರ್ ತುಮಕೂರು ಮಾರ್ಗವಾಗಿ ಕಳ್ಳಂಬೆಳ್ಳ ಟೋಲ್ ಮೂಲಕ ಬಳ್ಳಾರಿ, ಅಲ್ಲಿಂದ ಬೀದರ್ ಮಾರ್ಗವಾಗಿ ಹುಮ್ನಾಬಾದ್…

Read More

ನವದೆಹಲಿ: ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಗೆ ನೋಂದಣಿಯನ್ನು ಪ್ರಾರಂಭಿಸಿದೆ. ಈ ಯೋಜನೆಯು ಸೌರ ಫಲಕಗಳನ್ನು ಸ್ಥಾಪಿಸಲು ಆರ್ಥಿಕ ನೆರವು ನೀಡಲು ಸಹಾಯ ಮಾಡುತ್ತದೆ. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಅಂತ ಮುಂದೆ ಓದಿ. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯು ತಮ್ಮ ಛಾವಣಿಯ ಮೇಲೆ ಸೌರ ವಿದ್ಯುತ್ ವ್ಯವಸ್ಥೆಯನ್ನು ಹಾಕಲು ಆಯ್ಕೆ ಮಾಡುವ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುತ್ತದೆ, ಅದರ ಪ್ರಕಾರ, ಮನೆಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. PM ಸೂರ್ಯ ಗೃಹ ಯೋಜನೆಗೆ ನೋಂದಣಿ ಹೇಗೆ.? ಇಂತಹ ಪಿಎಂ ಸೂರ್ಯ ಗೃಹ ಯೋಜನೆಗೆ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಅಂಚೆ ಇಲಾಖೆಯಿಂದ ನೋಂದಣಿ ಆರಂಭಗೊಂಡಿದ್ದು, ನೀವು ಪಿಎಂ ಸೂರ್ಯ ಯೋಜನೆಗೆ ಅಂಚೆ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಪಿಎಂ ಸೂರ್ಯ ಗೃಹ ಯೋಜನೆಗೆ ಅರ್ಜಿ ಸಲ್ಲಿಸಲು https://pmsuryaghar.gov.in/ ಭೇಟಿ ನೀಡಿ ಅಥವಾ ಪ್ರದೇಶದ ಪೋಸ್ಟ್ ಮ್ಯಾನ್ ಅನ್ನು ಸಂಪರ್ಕಿಸಿ. ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ನಿಮ್ಮ ಹತ್ತಿರದ ಅಂಚೆ…

Read More

ಬೆಂಗಳೂರು: ಮಾರ್ಚ್.8ರ ನಾಳೆ ಮಹಾ ಶಿವರಾತ್ರಿ ಹಬ್ಬ. ಈ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಇಂದು ಬಿಬಿಎಂಪಿಯ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ.ರವಿಕುಮಾರ್ ಆದೇಶಿಸಿದ್ದು, ದಿನಾಂಕ: 08.03.2024ರ ಶುಕ್ರವಾರ “ಮಹಾ ಶಿವರಾತ್ರಿ” ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/good-news-centre-likely-to-approve-increase-in-dearness-allowance-extension-of-lpg-subsidy-scheme-report/ https://kannadanewsnow.com/kannada/who-is-kashmirs-nazim-who-impressed-pm-narendra-modi-and-got-a-selfie/

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನಜೀಮ್ ಅವರೊಂದಿಗಿನ ಸೆಲ್ಫಿಯನ್ನು ಪೋಸ್ಟ್ ಮಾಡಿದ್ದು, ಅವರನ್ನು ತಮ್ಮ ‘ಸ್ನೇಹಿತ’ ಎಂದು ಕರೆದಿದ್ದಾರೆ. ಹಾಗಾದ್ರೇ ಪ್ರಧಾನಿ ಮೋದಿಯ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಕಾಶ್ಮೀರದ ನಜೀಮ್ ಯಾರು.? ಹಿನ್ನೆಲೆ ಏನು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಪ್ರಧಾನಿ ನರೇಂದ್ರ ಮೋದಿಯ ಅವರು, ಸಾರ್ವಜನಿಕ ಸಭೆಯಲ್ಲಿ ಅವರು ಸೆಲ್ಫಿ ತೆಗೆದುಕೊಳ್ಳಲು ವಿನಂತಿಸಿದರು ಮತ್ತು ಅವರನ್ನು ಭೇಟಿಯಾಗಲು ಸಂತೋಷಪಟ್ಟರು. ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭ ಹಾರೈಕೆಗಳು” ಎಂದು 2019 ರಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ತಮ್ಮ ಮೊದಲ ಕಾಶ್ಮೀರ ಭೇಟಿಯ ಸಂದರ್ಭದಲ್ಲಿ ತಿಳಿಸಿದ್ದಾರೆ. https://twitter.com/narendramodi/status/1765663162651881714 ಕಾಶ್ಮೀರದ ‘ನಜೀಮ್’ ಯಾರು.? ಹಿನ್ನಲೆ ಏನು? ನಜೀಮ್ ಅವರು ವಿಕ್ಷಿತ್ ಭಾರತ್ ಕಾರ್ಯಕ್ರಮದ ಫಲಾನುಭವಿಯಾಗಿದ್ದು, ಪ್ರಧಾನಿ ಮೋದಿಯವರ ವಿಕ್ಷಿತ್ ಭಾರತ್ ವಿಕ್ಷಿತ್ ಜಮ್ಮು ಕಾಶ್ಮೀರ ಕಾರ್ಯಕ್ರಮದಲ್ಲಿ ಪ್ರಧಾನಿಯೊಂದಿಗೆ ಸಂವಹನ ನಡೆಸಿದರು. ಸಂವಾದದ ಸಮಯದಲ್ಲಿ, ಪುಲ್ವಾಮಾದ ನಜೀಮ್ ಜೇನುತುಪ್ಪದೊಂದಿಗೆ ವ್ಯವಹರಿಸುವ…

Read More

ಮಂಡ್ಯ: ಜಿಲ್ಲೆಯಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಂತ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಬಿಜೆಪಿ ಕಾರ್ಯಕರ್ತನಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಂಡ್ಯದಲ್ಲಿ 2022ರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದರು. ಈ ಪ್ರಕರಣವನ್ನು ರೀ ಓಪನ್ ಮಾಡಿ, ಬಂಧಿಸೋದಾಗಿ ಸಿಎಂ ಸಿದ್ಧರಾಮಯ್ಯ ಕೂಡ ಹೇಳಿದ್ದರು. ಈ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದಂತ ಬಿಜೆಪಿ ಕಾರ್ಯಕರ್ತನಿಗೆ ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕ್ ಪರವಾಗಿ ಘೋಷಣೆ ಕೂಗಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಅವರಿಗೆ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿದೆ. https://kannadanewsnow.com/kannada/had-there-been-a-bjp-government-in-karnataka-there-would-have-been-no-bomb-blasts-goa-cm-pramod-sawant/ https://kannadanewsnow.com/kannada/cafe-bomb-blast-nia-conducts-9-hour-search-at-bellary-central-bus-stand/

Read More

ಚಿತ್ರದುರ್ಗ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೇ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಆಗುತ್ತಿರಲಿಲ್ಲ ಎಂಬುದಾಗಿ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಾಗ್ಧಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಬಿಜೆಪಿ ಬೂತ್ ಪ್ರಮುಖರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಹದಗೆಟ್ಟಿದೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಇಲ್ಲದ ಕಾರಣ ಬಾಂಬರ್ ಬಂಧನ ವಿಳಂಬವಾಗುತ್ತಿದೆ. ಬಾಂಬರ್ ಬಂಧನ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಆಗುತ್ತಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಜನರನ್ನು ವಿಭಜನೆ ಮಾಡುತ್ತಿದ್ದಾರೆ. ಇದೊಂದು ಕರಪ್ಟ್ ಸರ್ಕಾರವಾಗಿದೆ. ಇದಕ್ಕೆ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟವೂ ಕಾರಣವಾಗಿದೆ. ಕರಪ್ಟ್ ಕಾಂಗ್ರೆಸ್ ಪಕ್ಷವನ್ನು ಮನಗೆ ಕಳುಹಿಸಿ, ಡಬಲ್ ಇಂಜಿನ್ ಸರ್ಕಾರವನ್ನು ಜಾರಿಗೆ ತರುವಂತೆ ಜನರಲ್ಲಿ ಕರೆ ನೀಡಿದರು. ರಾಜ್ಯದಲ್ಲಿ ಡಬಲ್ ಇಂಜನ್ ಸರ್ಕಾರ ಇದ್ದಾಗ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಅಭಿವೃದ್ಧಿಯೇ ಆಗುತ್ತಿಲ್ಲ. ಅದಕ್ಕೆ ಬ್ರೇಕ್ ಕೂಡ…

Read More