Author: kannadanewsnow09

ಶಿವಮೊಗ್ಗ: ವಿದ್ಯುತ್ ಮತ್ತು ರಸ್ತೆ ಸಂಪರ್ಕ ಇಲ್ಲದ ಕಗ್ಗತಲ ಗ್ರಾಮ ಉರುಳುಗಲ್ಲು ಮತ್ತಿತರ ಗ್ರಾಮಗಳನ್ನು ಹೊಂದಿರುವ ಬಾನುಕುಳಿ ಗ್ರಾಮ ಪಂಚಾಯಿತಿಯಲ್ಲಿ ಅರಣ್ಯ ಕಾರ್ಖಾನೆ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಸಾಗರ ಶಾಸಕಾರಾದ ಬೇಳೂರು ಗೋಪಾಲಕೃಷ್ಣರವರು ಮತ್ತು ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಹೆಗಡೆ ಜಂಟಿಯಾಗಿ ಜನಸ್ಪಂದನ ಸಭೆ ನಡೆಸಿ ಜನರ ಅಹವಾಲು ಆಲಿಸಿದರು. ಉರುಳುಗಲ್ಲು ಕತ್ತಲು ಕಳೆಯಬೇಕು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಇಲಾಖೆ ಅನಗತ್ಯ ತಡೆ ಒಡ್ಡುವುದು ನಿಲ್ಲಬೇಕು ಎಂದು ಪ್ರಾಸ್ತಾವಿಕ ಮಾತಲ್ಲಿ ಗಟ್ಟಿಯಾಗಿ ದ್ವನಿಸಿದ ಬೇಳೂರು ಸಭೆಯ ಕೊನೆಯಲ್ಲಿ ಜಿಲ್ಲಾಧಿಕಾರಿ ಮತ್ತೂ ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿಯ ಎದುರೇ ಅರಣ್ಯ ಅಧಿಕಾರಿಗಳಿಗೆ ಸರಣಿ ಪ್ರಶ್ನೆಗಳ ಜತೆ ಅಂತಿಮವಾಗಿ ಅತಿರೇಕ ಮಾಡಬೇಡಿ ಎಂದು ಸಾರ್ವಜನಿಕರ ಎದುರೇ ಕ್ಲಾಸ್ ತೆಗೆದುಕೊಂಡರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜನರ ಅಹವಾಲು ಆಲಿಸುವ ಜತೆ ಉರುಲುಗಲ್ಲು ವಿದ್ಯುತ್ ಸಮಸ್ಯೆ ಬಗ್ಗೆ ಫಾರೆಸ್ಟ್ ಕ್ಲಿಯರೆನ್ಸ್ ಬಗ್ಗೆ ವಿಶೇಷ ಸಭೆ ಕರೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಂಟಿ ಸರ್ವೆ ಪ್ರಕ್ರಿಯೆ…

Read More

ಬೆಂಗಳೂರು: ಲೋಕಸಭೆ ಚುನಾವಣೆಯ ಪೂರ್ವ ತಯಾರಿ ಹಾಗೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಭೆಯ ನಂತರ ತಮ್ಮ ನಿವಾಸದಲ್ಲಿ ಮಂಡ್ಯ ನಾಯಕರ ಸಭೆ ನಡೆಸಿದ ಕುಮಾರಸ್ವಾಮಿ ಅವರು; ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಮುಖಂಡರಿಗೆ ತಿಳಿಸಿದರು. ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹಾಗೂ ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ರಮೇಶ್ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ಸ್ಥಿತಿಗತಿಗಳನ್ನು ವಿಸ್ತೃತವಾಗಿ ಚರ್ಚೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಮೈತ್ರಿ ನಂತರದ ಜಿಲ್ಲೆಯಲ್ಲಿನ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಅವಲೋಕನ ಮಾಡಿದರು. ಅಭ್ಯರ್ಥಿ ಆಯ್ಕೆ ಬಗ್ಗೆ ನಾಯಕರಿಂದ ಮಾಹಿತಿ ಸಂಗ್ರಹ ಮಾಡಿದರಲ್ಲದೆ; ಚುನಾವಣೆಯಲ್ಲಿ ಗೆಲುವು ಮುಖ್ಯ. ಮೈತ್ರಿ…

Read More

ಬೆಳಗಾವಿ: ಮಂಡ್ಯದಲ್ಲಿ 2022ರಲ್ಲಿ ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದಂತ ಪ್ರಕರಣವನ್ನು ಈ ಹಿಂದಿನ ಬಿಜೆಪಿ ಸರ್ಕಾರ ಮುಚ್ಚಿಹಾಕಿತ್ತು. ಈ ಪ್ರಕರಣವನ್ನು ರೀ ಓಪನ್ ಮಾಡಲಾಗುತ್ತದೆ. ಪಾಕಿಸ್ತಾನ ಪರ ಘೋಷಣೆ ಕೂಗಿದಂತವನನ್ನು ಸಹ ಬಂಧನ ಮಾಡುತ್ತೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಅಥಣಿಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2022ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದನು. ಆ ಕೇಸನ್ನು ಬಿಜೆಪಿಯವರು ಮುಚ್ಚಿಹಾಕಿದ್ದಾರೆ. ಆದರೇ ನಾವು ಆ ಪ್ರಕರಣವನ್ನು ಮರು ತನಿಖೆ ನಡೆಸಲು ತೀರ್ಮಾನಿಸಿದ್ದೇವೆ. ಪ್ರಕರಣವನ್ನು ರೀ ಓಪನ್ ಮಾಡಿಸಿ, ಆರೋಪಿಯನ್ನು ಬಂಧಿಸೋದಾಗಿ ತಿಳಿಸಿದರು. ಎರಡು ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂಬರುವಂತ ಲೋಕಸಭಾ ಚುನಾವಣೆಗೆ 2-3 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಬೆಳಗಾವಿ, ಚಿಕ್ಕೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಣೆ ಮಾಡಲಾಗುತ್ತದೆ. ನಿಮ್ಮ ಕೆಲಸ ಮಾಡಿದ್ದೇವೆ, ನಮಗೆ ಕೂಲಿ ರೂಪದಲ್ಲಿ…

Read More

ಬೆಂಗಳೂರು: ಅನಧಿಕೃತವಾಗಿ ಗರ್ಭಪಾತ ಮಾಡಿಸುವುದು ಕಾನೂನು ಬಾಹಿರವಾಗಿದೆ. ಹೀಗಿದ್ದೂ ನಿಯಮ ಮೀರಿ 74 ಗರ್ಭಪಾತ ಮಾಡಿದಂತ ನೆಲಮಂಗಲದ ಆಸರೆ ಆಸ್ಪತ್ರೆಯ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಪಡೆದಂತ ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮತ್ತೊಂದೆಡೆ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿದ್ದಂತ ಶಸ್ತ್ರಚಿಕಿತ್ಸಾ ಕಡತವನ್ನು ಆರೋಗ್ಯ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ನೆಲಮಂಗಲದ ಬಿ.ಎಚ್‌. ರಸ್ತೆಯಲ್ಲಿರುವ ಆಸರೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಕೃತ್ಯ ನಡೆಸಿರುವುದು ಗೊತ್ತಾಯಿತು. 2021ರ ಸೆಪ್ಟೆಂಬರ್‌ 17ರಿಂದ 2026ರ ಸೆಪ್ಟೆಂಬರ್‌ 16ರವರೆಗೆ ಕೆಪಿಎಂಇ ಪ್ರಾಧಿಕಾರದಿಂದ ಪರವಾನಗಿ ಪಡೆದುಕೊಂಡು ಆಸ್ಪತ್ರೆ ನಡೆಸಲಾಗುತ್ತಿದೆ. ಎಂಟಿಪಿ ಕಾಯ್ದೆ ಅಡಿಯಲ್ಲಿ ಪರವಾನಗಿ ಪಡೆಯದೆ ಗರ್ಭಪಾತ ನಡೆಸಲಾಗಿದೆ. ಇದು ವೈದ್ಯಕೀಯ ಗರ್ಭಪಾತ ಕಾಯ್ದೆ–1971 ಅನ್ನು ಉಲ್ಲಂಘಿಸಲಾಗಿದೆ ಎಂದು ದೂರು ನೀಡಿದ್ದರಿಂದ ಆಸರೆ ಆಸ್ಪತ್ರೆ ವೈದ್ಯ ಹಾಗೂ ಮಾಲೀಕ ಡಾ.ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/rythu-solar-shakti-mela-to-be-organised-at-gkvk-premises-in-bengaluru-on-march-9-cm-siddaramaiah/ https://kannadanewsnow.com/kannada/draft-manifesto-was-presented-to-the-congress-president-by-the-manifesto-committee/

Read More

ಮುಂಬೈ: ತನ್ನ ಪತ್ನಿ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿದ್ದರಿಂದ ವಿಮಾನವನ್ನು ವಿಳಂಬಗೊಳಿಸುವ ಕಾರಣದಿಂದ ಪತಿರಾಯನೊಬ್ಬ ವಿಮಾನದಲ್ಲಿ ಬಾಂಬ್ ಇರುವುದಾಗಿ ಬೆದರಿಕೆ ಕರೆ ಮಾಡಿ ಜೈಲುಪಾಲಾಗಿರುವಂತ ಘಟನೆ ಮುಂಬೈನಲ್ಲಿ ನಡೆದಿದೆ.   ಮುಂಬೈನ ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಫೆಬ್ರವರಿ 24 ರಂದು ಸಂಜೆ ಮಲಾಡ್ನಲ್ಲಿರುವ ಏರ್ಲೈನ್ಸ್ ಕಾಲ್ ಸೆಂಟರ್ಗೆ ಬೆದರಿಕೆ ಕರೆ ಬಂದಿದೆ. ‘ಸಂಜೆ 06.40ಕ್ಕೆ ಮುಂಬೈನಿಂದ ಬೆಂಗಳೂರಿಗೆ ವಿಮಾನವಿದೆ, ವಿಮಾನ ಸಂಖ್ಯೆ ಕ್ಯೂಪಿ 1376, ಆ ವಿಮಾನದಲ್ಲಿ ಬಾಂಬ್ ಇದೆ’ ಎಂದು ವ್ಯಕ್ತಿ ಹೇಳಿಕೊಂಡಿದ್ದಾನೆ. 167 ಪ್ರಯಾಣಿಕರನ್ನು ಹೊತ್ತ ವಿಮಾನ ಮುಂಬೈನಿಂದ ಟೇಕ್ ಆಫ್ ಆಗಲು ಸಿದ್ಧವಾಗಿದ್ದ ವಿಮಾನವನ್ನು ಕೂಡಲೇ ವಿಮಾನಯಾನ ಅಧಿಕಾರಿಗಳು ತಕ್ಷಣ ವಿಮಾನದ ಕ್ಯಾಪ್ಟನ್ ಮತ್ತು ಪೊಲೀಸರು ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಬೆದರಿಕೆಯ ಬಗ್ಗೆ ಮಾಹಿತಿ ನೀಡಿದರು. ಕ್ಯಾಪ್ಟನ್ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಗೆ ಮಾಹಿತಿ ನೀಡಿದರೆ, ವಿಮಾನ ನಿಲ್ದಾಣ ಪೊಲೀಸರು ಸ್ಥಳೀಯ ಅಪರಾಧ ವಿಭಾಗ, ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಬಾಂಬ್ ಸ್ಕ್ವಾಡ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದರು.…

Read More

ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಬಿಜೆಪಿಗೆ ಸೆಡ್ಡು ಹೊಡೆದು I.N.D.I.A ಮೈತ್ರಿ ಕೂಟದೊಂದಿಗೆ ಕಣಕ್ಕೆ ಇಳಿಯೋ ಘೋಷಣೆ ಮಾಡಿ, ತಯಾರಿ ನಡೆಸುತ್ತಿದೆ. ಈ ಬೆನ್ನಲ್ಲೇ ಇಂದು ಎಐಸಿಸಿ ಅಧ್ಯಕ್ಷರಿಗೆ ಪ್ರಣಾಳಿಕೆ ಸಮಿತಿಯಿಂದ ಲೋಕಸಭಾ ಚುನಾವಣೆಗೆ ಕರಡು ಪ್ರಣಾಣಿಕೆಯನ್ನು ಸಲ್ಲಿಸಲಾಗಿದೆ. ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 195 ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳ್ನು ಬಿಜೆಪಿ ಘೋಷಣೆ ಮಾಡಲಾಗಿದೆ. ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ತಯಾರಿಸೋ ಸಂಬಂಧ ಮಹತ್ವದ ಸಭೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯಿಂದ ಮುಂಬರುವಂತ ಲೋಕಸಭಾ ಚುನಾವಣೆ ಪಕ್ಷ ಚುನಾವಣಾ ಪ್ರಣಾಳಿಕೆಯನ್ನು ತಯಾರಿಸಲಾಗಿದೆ. ಇಂದು ಪ್ರಣಾಣಿಕೆ ಸಮಿತಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಕೆ ಮಾಡಲಾಗಿದೆ. ಈ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆಗಳನ್ನು ಕಾಂಗ್ರೆಸ್ ಮಾಡೋ ಸಾಧ್ಯತೆ ಇದೆ. ಆ…

Read More

ಬಳ್ಳಾರಿ: ಕಾಮಗಾರಿ ಬಿಲ್ ಪಾವತಿಸೋದಕ್ಕೆ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು, ಪಡೆಯುತ್ತಿದ್ದಂತ ವೇಳೆಯಲ್ಲಿ ಸಹಾಯಕ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಳ್ಳಾರಿಯಲ್ಲಿ ಬಿದ್ದಿದ್ದಾರೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಪಕ್ಕದಲ್ಲಿ ಸಣ್ಣ ನೀರಾವರಿ ಕಚೇರಿಯಲ್ಲಿ ಕಾಮಗಾರಿ ಬಿಲ್ 30 ಲಕ್ಷ ಪಾವತಿಗಾಗಿ, 2 ಲಕ್ಷಕ್ಕೆ ಸಹಾಯ ಇಂಜಿನಿಯರ್ ನಾಗರಾಜ್ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಗುತ್ತಿಗೆದಾರ ರಾಮಕೃಷ್ಣ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಗುತ್ತಿಗೆದಾರ ರಾಮಕೃಷ್ಣ ಅವರಿಂದ 2 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಂತ ವೇಳೆಯಲ್ಲಿ ಸಹಾಯಕ ಇಂಜಿನಿಯರ್ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಳ್ಳಾರಿ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದ್ದು, ಭ್ರಷ್ಟ ಅಧಿಕಾರಿ ಎಇ ನಾಗರಾಜ್ ಮನೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಅಂದಹಾಗೇ ಎಇ ನಾಗರಾಜ್ ಕಾಮಗಾರಿ ಬಿಲ್ ಪಾವತಿಗಾಗಿ ಕಳೆದ ಮೂರು ತಿಂಗಳಿನಿಂದ ಸತಾಯಿಸುತ್ತಿದ್ದರು. ಆರಂಭದಲ್ಲಿ 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಆನಂತ್ರ 2 ಲಕ್ಷಕ್ಕೆ ಬೇಡಿಕೆಯಿಟ್ಟು ಇಂದು 2 ಲಕ್ಷ ಲಂಚದ…

Read More

ಬೆಂಗಳೂರು: ಅಂದು – ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿಯೇ ಇಲ್ಲ. ಇಂದು – ಪಾಕಿಸ್ತಾನ್‌ ಜಿಂದಾಬಾದ್‌ ಎಂದವರು ನಮಗೆ ಪರಿಚಯವೇ ಇಲ್ಲ. ಸಿಎಂ ಸಿದ್ಧರಾಮಯ್ಯ ಅವರೇ, ಡಿಸಿಎಂ ಡಿಕೆ ಶಿವಕುಮಾರ್ ಅವರೇ ಇಲ್ಲಿ ನೋಡಿ ಚಿತ್ರಗಳೇ ಮಾತನಾಡುತ್ತಿವೆ ಎಂಬುದಾಗಿ ಬಿಜೆಪಿ ವಾಗ್ಧಾಳಿ ನಡೆಸಿದೆ. https://twitter.com/BJP4Karnataka/status/1765315171562799415 ಈ ಬಗ್ಗೆ ಎಕ್ಸ್ ಮಾಡಿದ್ದು, ಪಾಕಿಸ್ತಾನ ಪರ ಸಹಾನುಭೂತಿ ಹೊಂದಿದ ದೇಶದ್ರೋಹಿಗಳ ಜೊತೆ ಕಾಂಗ್ರೆಸ್ ಅವಿನಾಭಾವ ಸಂಬಂಧ. ಪಾ”ಕೈ”ಸ್ತಾನಿಗಳ ಜೊತೆ ಬಿಡಿಸಲಾಗದ ನಂಟು. ಭವ್ಯ ಭಾರತಕ್ಕೆ ಇವರಿಂದ ಸದಾ ಕಳಂಕವುಂಟು ಎಂದು ಕಿಡಿಕಾರಿದೆ. https://twitter.com/BJP4Karnataka/status/1765323581276512399 https://kannadanewsnow.com/kannada/breaking-fly91-aircraft-ready-to-fly-air-operator-certificate-available-from-dgca/ https://kannadanewsnow.com/kannada/rythu-solar-shakti-mela-to-be-organised-at-gkvk-premises-in-bengaluru-on-march-9-cm-siddaramaiah/

Read More

ಗದಗ : ಬರಗಾಲ ಸಂದರ್ಭದ ಗಾಂಭೀರ್ಯತೆ ಅರಿತು ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಡಳಿತ ಭವನದಲ್ಲಿ ಬುಧವಾರ ಬರ ನಿರ್ವಹಣೆ ಕುರಿತ ಸಭೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಮುಂದಿನ ಎರಡು ಮೂರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆ ತಲೆದೂರಿದಲ್ಲಿ ಸಮರ್ಪಕವಾಗಿ ಅಧಿಕಾರಿಗಳು ನಿರ್ವಹಣೆ ಮಾಡಬೇಕು. ಜನಸಾಮಾನ್ಯರ ಅಹವಾಲುಗಳಿಗೆ ಸಹಾನುಭೂತಿಯಿಂದ ಸ್ಪಂದಿಸಬೇಕು ಎಂದು ಸೂಚಿಸಿದರು. ಕಾಮಗಾರಿ ಸ್ಥಳ ಪರಿಶೀಲಿಸಿ : ಜಿಲ್ಲೆಯಲ್ಲಿ ಜೆಜೆಎಂ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಆಯಾ ತಾಲೂಕಾ ಕಾರ್ಯನಿರ್ವಹಣಾಧಿಕಾರಿಗಳು ಗುತ್ತಿಗೆದಾರರೊಂದಿಗೆ ಹಾಗೂ ಪಿಡಿಓ ಗಳೊಂದಿಗೆ ಖುದ್ದು ಕಾಮಗಾರಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಬರಗಾಲದ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರವಾಗಿ ನಿರ್ವಹಿಸಬೇಕು. ಗ್ರಾಮೀಣ ಭಾಗದ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ 110/11 ಕೆವಿ ಸೊರಬ, ಮಾವ, ಶಿರಾಳಕೊಪ್ಪ ಹಾಗೂ ಸಂಡಾ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ 11ಕೆವಿ ಫೀಡರ್ ಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸೊರಬ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನಾಳೆ ಪವರ್ ಕಟ್ ಆಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ತಾಲೂಕಿನ ಎಇಇ ಮಾಹಿತಿ ನೀಡಿದ್ದು, ದಿನಾಂಕ:07.03.2024ರ ನಾಳೆ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಸೊರಬ, ಮಾವಲಿ, ಶಿರಾಳಕೊಪ್ಪ ಹಾಗೂ ಸಂಡಾ ಯಿಂದ ವಿದ್ಯುತ್‌ ಸರಬರಾಜಾಗುವ ಕೆಳಕಂಡ 11 ಕವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ನಾಳೆ ಈ ಪ್ರದೇಶಗಲ್ಲಿ ಕರೆಂಟ್ ಇರುವುದಿಲ್ಲ 07.03.2024 ರಂದು ಪ್ರಸರಣ ಮಾರ್ಗ ಉಪವಿಭಾಗ, ಕವಿಪ್ರನಿನಿ’ ಜೋಗ್ ಫಾಲ್ಸ್ ರವರಿಂದ ತುರ್ತು ಕಾಮಗಾಲಯನ್ನು ನಡೆಸಲು ಉದ್ದೇಶಿಸಿರುವುದರಿಂದ 110/ 6 ಸೊರಬ, ಮಾವಲ, ಶಿರಾಳಕೊಪ್ಪ ಹಾಗೂ ಸಂಡಾ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಫ್‌21 ಸೊರಬ ಪಟ್ಟಣ ಸೇರಿದಂತೆ ಎಫ್2 ಸಾರೇಕೊಪ್ಪ, ಎಫ್-3 ಬಳ್ಳಬೈಲು,…

Read More