Author: kannadanewsnow09

ಬೆಂಗಳೂರು: ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪರೀಕ್ಷೆ ಮುಂದೂಡುವ ವಿಶ್ವಾಸವಿದೆ ಎಂದ ಅವರು, 402 ಹುದ್ದೆ ಪೈಕಿ 102 ಜನರು ಹಾಲ್ ಟಿಕೆಟ್ ಹೊಂದಿದವರು ಯುಪಿಎಸ್ಸಿ ಮೈನ್ಸ್ ಗೆ ಆಯ್ಕೆಯಾಗಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದೆ. ಯುಪಿಎಸ್ಸಿ ಮೈನ್ಸ್ ಗೆ ಆಯ್ಕೆಯಾದವರು ಪಿಎಸ್‍ಐ ಪರೀಕ್ಷೆಯಲ್ಲಿ 100ಕ್ಕೆ ನೂರು ಆಯ್ಕೆ ಆಗಿಯೇ ಆಗುತ್ತಾರೆ. ಅವರಿಗೆ ಅನ್ಯಾಯ ಆಗಬಾರದು ಎಂದು ನುಡಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ)…

Read More

ಬೆಂಗಳೂರು: ನಕಲಿ ಪೊಲೀಸ್ ವೆರಿಫಿಕೇಷನ್ ಕೊಟ್ಟಿದ್ದಂತ ’ಗುತ್ತಿಗೆದಾರರನ್ನು ಪಾಲಿಕೆಯ ಯಾವುದೇ ಟೆಂಡರ್ ಗಳಲ್ಲಿ ಭಾಗವಹಿಸದಂತೆ 03 ವರ್ಷಗಳ ಅವಧಿಗೆ ಡಿಬಾರ್ ಮಾಡಿ ಬಿಬಿಎಂಪಿ ಆದೇಶಿಸಿದೆ. ಈ ಮೂಲಕ ನಕಲಿ ಸರ್ಟಿಫಿಕೇಟ್ ಕೊಟ್ಟಂತ ಗುತ್ತಿಗೆದಾರನಿಗೆ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ಬಿಬಿಎಂಪಿ ಆದೇಶ ಹೊರಡಿಸಿದ್ದು, ಶ್ರೀ ಭುವನೇಶ್ವರಿ ಎಂಟರ್ ಪ್ರೈಸಸ್ ಸಂಸ್ಥೆಯ ಮಾಲೀಕರಾದ ಎ.ವಿ.ಗಿರೀಶ್ ಗುತ್ತಿಗೆದಾರರು ಸರ್ಕಾರದ ಒಳಾಡಳಿತ ಇಲಾಖೆಗೆ ನಕಲಿ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ಅನ್ನು ನೀಡಿ ಪ್ರಸಾರ ಪರವಾನಗಿಯನ್ನು ಪಡೆದುಕೊಂಡಿರುವುದು ಹಾಗೆಯೇ ಸದರಿ ಪ್ರಸಾರ ಪರವಾನಗಿಯನನ್ಉ ಉಪಯೋಗಿಸಿಕೊಂಡು ಪಾಲಿಕೆಯ ಹಲವು ಟೆಂಡರ್ಗಳಲ್ಲಿ ಪಾಲ್ಗೊಂಡು ಕಾರ್ಯಾದೇಶಗಳು ಮತ್ತು ಬಿಲ್ಲುಗಳನ್ನು ಪಡೆದುಕೊಂಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ ಎಂದಿದೆ. ಮುಂದುವರೆದು, ಪ್ರಸಾರ ಪರವಾನಗಿ ಪಡೆಯಲು ಸಲ್ಲಿಸಿರುವ ಪೊಲೀಸ್ ವೆರಿಫಿಕೇಶನ್ ಸರ್ಟಿಫಿಕೇಟ್ ನಕಲಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರವರ ವರದಿಯಂತೆ ದಿನಾಂಕ:15-06-2024ರಲ್ಲಿ ಸರ್ಕಾರದಿಂದ ಮಂಜೂರು ಮಾಡಿರುವ ಪ್ರಸಾರ ಪರವಾನಗಿಯನ್ನು ರದ್ದುಗೊಳಿಸಿ ಆದೇಶಿಸಿದೆ. ಮೇಲ್ಕಂಡ ಕಾರಣಗಳಿಂದ ಪಾಲಿಕೆಯ ದಕ್ಷಿಣ ಮತ್ತು ಪಶ್ಚಿಮ ವಲಯದ ಹಿರಿಯ ಸಹಾಯಕ ತೋಟಗಾರಿಕೆ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಈ ಸಮಿತಿಯ ಅಧ್ಯಕ್ಷರಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥರಾದಂತ ರಮೇಶ್ ಬಾಬು ಅವರನ್ನು ನೇಮಕ ಮಾಡಿದೆ. ಇಂದು ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು, ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿಯನ್ನು ರಚಿಸಿ, ಸದರಿ ಸಮಿತಿಗೆ ಈ ಕೆಳಕಂಡವರನ್ನು ಮುಂದಿನ ಆದೇಶದವರೆಗೆ ಅಧ್ಯಕ್ಷರು, ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ. ನೂತನ ಜಾಹೀರಾತು ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಅವರನ್ನು ನೇಮಕ ಮಾಡಲಾಗಿದೆ. ಇನ್ನೂ ಸದಸ್ಯರನ್ನಾಗಿ ಕೆಪಿಸಿಸಿಯ ಜನರಲ್ ಸೆಕ್ರೇಟರಿ ಎಂ ರಾಮಚಂದ್ರಪ್ಪ, ನಹೀದ್ ಅತಾವುಲ್ಲಾ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯ ಕಾರ್ಯದರ್ಶಿಯನ್ನಾಗಿ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಆಯುಕ್ತರನ್ನು ಮಾಡಲಾಗಿದೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/good-news-for-iti-passouts-hal-invites-applications-for-apprentice-training/ https://kannadanewsnow.com/kannada/big-update-good-news-for-the-owners-1-months-grihalakshmi-money-finally-deposited-in-the-account/ https://kannadanewsnow.com/kannada/hoysala-keladi-chennamma-gallantry-award-invited/

Read More

ಬೆಂಗಳೂರು: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ + ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್ ಡೈಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಎಸ್‌ಎಸ್‌ಎಲ್‌ಸಿ+ ಐಟಿಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್, ಪೋರ್ಟಲ್ ರಿಜಿಸ್ಟ್ರೇಷನ್ ಸಂಖ್ಯೆ, ಎಂಪ್ಲಾಯ್ಮೆಂಟ್ ಕಾರ್ಡ್, ಪಾಸ್‌ಪೋರ್ಟ್ ಸೈಜಿನ 4 ಫೋಟೋಗಳು ಈ ಎಲ್ಲಾ ದಾಖಲೆಗಳ ಮೂಲ ಪ್ರತಿ ಹಾಗೂ 2 ಸೆಟ್ ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ, ಗುತ್ಯಪ್ಪ ಕಾಲೋನಿ, ಪಂಪಾ ನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ದಿ:05/10/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ ಆಯಾ…

Read More

ಬೆಂಗಳೂರು : ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿರುವ ಬೆಸ್ಕಾಂನ ‘ಇವಿ ಮಿತ್ರ’ ಆ್ಯಪ್‌ ಈಗ ಹೊಸ ರೂಪ ಪಡೆದುಕೊಂಡಿದೆ. ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಳೆಯ ‘ಇವಿ ಮಿತ್ರ’ ಆ್ಯಪ್ ಡಿಲೀಟ್ ಮಾಡಿ https://onelink.to/evmithra ಮೂಲಕ ಹೊಸ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. ವ್ಯಾಲೆಟ್‌ನಲ್ಲಿ ಹಣ ಉಳಿದಿದ್ದರೂ ಚಿಂತಿಸಬೇಕಿಲ್ಲ. ಹೊಸ ಆ್ಯಪ್‌ಗೆ ಹಣ ವರ್ಗಾವಣೆಯಾಗುತ್ತದೆ. ಕನ್ನಡ, ಹಿಂದಿ, ಇಂಗ್ಲಿಷ್‌ ಹಾಗೂ ಪ್ರಾದೇಶಿಕ ಭಾಷೆಗಳು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಇವಿ ಚಾರ್ಚಿಂಗ್‌ ಮಾಹಿತಿ ಲಭ್ಯವಿದ್ದು, ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಇರಲಿದೆ. ಬಳಕೆದಾರರ ಸ್ನೇಹಿಯಾಗಿರುವ ಆ್ಯಪನ್ನು ಈಗಾಗಲೇ 15,000ಕ್ಕೂ ಹೆಚ್ಚು ಬಳಕೆದಾರರು ಡೌನ್‌ಲೋಡ್‌…

Read More

ಬೆಂಗಳೂರು: 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300/- ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಇಂದಿಲ್ಲಿ ಒತ್ತಾಯಿಸಿದರು. ಕೇಂದ್ರ ಸರ್ಕಾರವು ದಿನಾಂಕ: 20.03.2023 ರಂದು ರಾಜ್ಯಸಭೆಯ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ: 2167ಕ್ಕೆ ಉತ್ತರ ನೀಡಿ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬAಧಪಟ್ಟ ಎಲ್ಲಾ ಹಂತದ ಮಂಜೂರಾತಿಗಳು ದೊರೆತಿದ್ದು, ಇದು ರಾಷ್ಟ್ರೀಯ ಯೋಜನೆಗಾಗಿ ಘೋಷಣೆ ಮಾಡಲು ಎಲ್ಲಾ ಅರ್ಹತೆ ಪಡೆದಿದೆ ಎಂದು ತಿಳಿಸಿರುತ್ತಾರೆ ಎಂದು ವಿವರಿಸಿದರು. ದಿನಾಂಕ: 01.02.2023 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಬಜೆಟ್ ಭಾಷಣದ ಪುಟ ಸಂಖ್ಯೆ (10) ಪ್ಯಾರಾ (39) ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ. Water for Drought Prone…

Read More

ಶಿವಮೊಗ್ಗ : ಮಕ್ಕಳ ದಿನಾಚರಣೆ-2024 ರ ಪ್ರಯುಕ್ತ, ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಾಹಸ ಪ್ರಕರಣವು ದಿ: 01-08-2023 ರಿಂದ 31-07-2024 ರೊಳಗೆ ನಡೆದಿರಬೇಕು. ದಿ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ…

Read More

ಬೆಂಗಳೂರು: ಸೆ.22ರಂದು ನಡೆಸಲು ನಿಗದಿ ಪಡಿಸಿರುವಂತ ಪಿಎಸ್ಐ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಸೆಪ್ಟೆಂಬರ್ 22 ರಂದು ಯುಪಿಎಸ್ಸಿ ನಾಗರಿಕ ಸೇವೆಗಳ ಮುಖ್ಯ ಮತ್ತು ಎಸ್ಎಸ್ಸಿ ಸಿಜಿಎಲ್ ಶ್ರೇಣಿ 1 ರಂತಹ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳೊಂದಿಗೆ ಸ್ಪಷ್ಟ ವೇಳಾಪಟ್ಟಿಯ ಘರ್ಷಣೆಗಳ ಹೊರತಾಗಿಯೂ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಲು ನಿರಾಕರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ವರ್ತನೆಯನ್ನು ಪ್ರದರ್ಶಿಸುತ್ತಿದೆ. ಯುಪಿಎಸ್ಸಿ ಪರೀಕ್ಷೆಗೂ ಮುನ್ನವೇ ಪಿಎಸ್ಐ ಪರೀಕ್ಷೆ ನಿಗದಿಯಾಗಿದೆ ಎಂಬ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆ ಶುದ್ಧ ಸುಳ್ಳು ಎಂದಿದ್ದಾರೆ. ಯುಪಿಎಸ್ಸಿ ಪರೀಕ್ಷೆಯ ಕ್ಯಾಲೆಂಡರ್ ಅನ್ನು ಮೇ 10, 2023 ರಂದು ಮುಂಚಿತವಾಗಿ ಬಿಡುಗಡೆ ಮಾಡಲಾಯಿತು. ಏತನ್ಮಧ್ಯೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಆರಂಭದಲ್ಲಿ ಪಿಎಸ್ಐ ಪರೀಕ್ಷೆಯನ್ನು ಮಾರ್ಚ್ 8, 2024 ರಂದು ನಿಗದಿಪಡಿಸಿತ್ತು. ಆದರೆ ಅದನ್ನು ಮಾರ್ಚ್ 21, 2024 ರಂದು ಮುಂದೂಡಲಾಯಿತು. ಇದಲ್ಲದೆ,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಖಾಯಂ ನೌಕರರಿಗೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಯಥಾವತ್ತಾಗಿ…

Read More

ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್‌ ಕಾರ್ಡ್‌ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಬೇಕು ಎಂದು ಆಗ್ರಹಿಸಿದರು. ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ…

Read More