Author: kannadanewsnow09

ಮಂಡ್ಯ: ಜಿಲ್ಲೆಯ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ನಾಳೆ ರೈತ ಸಂಘಟನೆಗಳು ಹಾಗೂ ಬಿಜೆಪಿಯಿಂದ ಪ್ರತಿಭಟನೆ ಕರೆ ನೀಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಅವರು, ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ತಜ್ಞರು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ನಾಳೆ ಪ್ರತಿಭಟನೆ ನಡೆಸೋದಾಗಿ ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ರೈತ ಸಂಘಟನೆ ಹಾಗೂ ಬಿಜೆಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕೆ ಆರ್ ಎಸ್ ಡ್ಯಾಂ ಬಳಿ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಗೋ ಬ್ಯಾಕ್ ಚಳುವಳಿ ಮೂಲಕ ಟ್ರಯಲ್ ಬ್ಲಾಸ್ಟ್ ಗೆ ವಿರೋಧವನ್ನು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿ ವ್ಯಕ್ತಪಡಿಸಲಿದ್ದಾರೆ ಎಂದಿದ್ದಾರೆ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಬಿಜೆಪಿ ಹಾಗೂ ರೈತ ಸಂಘಟನೆಗಳಿಂದ ನಾಳೆ ಕೆ ಆರ್ ಎಸ್ ಡ್ಯಾಂ ಬಳಿಯಲ್ಲಿ ಗೋ ಬ್ಯಾಕ್ ಚಳುವಳಿಯನ್ನು ನಡೆಸೋದಾಗಿ ಹೇಳಿದ್ದಾರೆ. ವರದಿ:…

Read More

ಬೆಂಗಳೂರು: ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಮತ್ತೋರ್ವ ಗಾಯಾಳು ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಪೋಟ ಪ್ರಕರಣದಲ್ಲಿ 10 ಜನರು ಗಾಯಗೊಂಡಿದ್ದರು. ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ದೀಪಾಂಶು ಎಂಬುವರು ಈಗಾಗಲೇ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಈ ಘಟನೆಯಲ್ಲೇ ನವ್ಯಾ ಎಂಬುವರು ಗಾಯಗೊಂಡಿದ್ದರು. ಅವರ ಕಿವಿಯ ಭಾಗಕ್ಕೆ ಗಾಯವಾಗಿತ್ತು. ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಂತ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಗುಣಮುಖರಾದ ಕಾರಣ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಈ ಬಳಿಕ ಕೆಫೆಯ ಮಾಲೀಕರು ತಾವೇ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸೋದಾಗಿ ತಿಳಿಸಿದ್ದರು. https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/…

Read More

ಬೆಂಗಳೂರು : “ಸಕಾಲ”ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ “ಸಕಾಲ” ಸಭೆ ನಡೆಸಿ ಮಾತನಾಡಿದ ಅವರು, “ಸಕಾಲ ಯೋಜನೆಯ ಅಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೇ ಜನರಿಗೆ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಹೊಸ ಸೇವೆಗಳನ್ನು ಸೇರಿಸಲಾಗಿದೆ. ಆದರೆ, ಹೊಸ ಸೇವೆ ಸೇರಿದಂತೆ ಕೆಲವು ಸೇವೆಗಳು ಇನ್ನೂ ಪೇಪರ್ ಅಪ್ಲಿಕೇಶನ್ ಮೋಡ್ ನಲ್ಲಿದ್ದು, ಮುಂದಿನ 8 ತಿಂಗಳೊಳಗಾಗಿ ಎಲ್ಲಾ ಸೇವೆಗಳನ್ನೂ ಡಿಜಿಟಲೀಕರಿಸಬೇಕು ಎಂದು ಅಧಿಕಾರಿಗಳಿಗೆ ಸಮಯದ ಗಡುವು ನೀಡಿದರು. ಮುಂದುವರೆದು, “1202ಸಕಾಲ ಸೇವೆಗಳ ಪೈಕಿ 922 ನಾಗರೀಕ ಹಾಗೂ 280 ಸಿಬ್ಬಂದಿ ಸೇವೆಗಳನ್ನು ನೀಡಲಾಗುತ್ತಿದೆ. ಆದರೆ, ಈ ಪೈಕಿ 802 ಸೇವೆಗಳನ್ನು ಮಾತ್ರ ಸೇವಾಸಿಂಧು ಆನ್ಲೈನ್ನಲ್ಲಿ ಒದಗಿಸಲಾಗುತ್ತಿದೆ. ಉಳಿದಂತೆ 120 ಸೇವೆಗಳನ್ನು ಆನ್ಲೈನ್ ಮೂಲಕ ಒದಗಿಸಲಾಗುತ್ತಿಲ್ಲ. ನಿಗದಿತ ಸೇವೆಗಾಗಿ ಆನ್ಲೈನ್ ಮೂಲಕ…

Read More

ಬೆಂಗಳೂರು: ಕೆಲ ದಿನಗಳ ಹಿಂದೆ ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ವಿಧಾನಸೌಧದಲ್ಲಿ ಘೋಷಣೆ ಕೂಗಲಾಗಿತ್ತು. ಹೀಗೆ ಘೋಷಣೆ ಕೂಗಿದಂತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧದಲ್ಲಿ ಫೆಬ್ರವರಿ.27ರಂದು ವಿಧಾನಸೌಧದ ಕಾರಿಡಾರಿನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಲಾಗಿತ್ತು. ಈ ಘಟನೆ ವಿವಾದಕ್ಕೂ ಕಾರಣವಾಗಿತ್ತು. ಘೋಷಣೆ ಕೂಗಿದ್ದು ಸುಳ್ಳು ಎಂದೇ ಸರ್ಕಾರ ಸಮರ್ಥಿಸಿಕೊಂಡಿತ್ತು. ಆದರೇ ಅದು ನಿಜ ಎಂಬುದಾಗಿ ಎಫ್ಎಸ್ಎಲ್ ತನಿಖೆಯಲ್ಲಿ ಬಹಿರಂಗವಾಗಿತ್ತು. ಈ ಬೆನ್ನಲ್ಲೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದಂತ ಇಲ್ತಾಜ್, ಮುನಾವರ್ ಹಾಗೂ ಮೊಹಮ್ಮದ್ ನಾಶಿಪುಡಿ ಎಂಬುವರನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಲಿದ್ದು, ಈ ಪ್ರಕರಣ ಸಂಬಂಧ ನ್ಯಾಯಾಧೀಶರು ಯಾವ ತೀರ್ಪು ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/anant-kumar-hegde-hoists-hanuman-flag-again/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/

Read More

ಕಾರವಾರ: ಕೆರೆಗೋಡು ಹನುಮ ಧ್ವಜ ವಿವಾದ ಮಾಸುವ ಮುನ್ನವೇ, ಭಟ್ಕಳದ ತೆಂಗಿನಗುಂಡಿಯಲ್ಲಿ ಇಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಹನುಮ ಧ್ವಜವನ್ನು ಹಾರಿಸೋ ಮೂಲಕ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತೆಂಗಿನಗುಂಡಿ ಗ್ರಾಮದಲ್ಲಿ ಧ್ವಜ ಕಟ್ಟೆ ಮತ್ತು ಸಾವರ್ಕರ್ ನಾಮಫಲಕದ ಬಗ್ಗೆ ವಿವಾದ ಎದ್ದಿತ್ತು. ಈ ಕಾರಣದಿಂದಾಗಿ ತಾಲೂಕು ಆಡಳಿತವು ಆ ಧ್ವಜಕಟ್ಟೆ ಹಾಗೂ ಹನುಮ ಧ್ವಜವನ್ನು ತೆರವು ಮಾಡಿತ್ತು. ಆದ್ರೇ ಇದಕ್ಕೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ವಿರೋಧವನ್ನು ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ತೆಂಗಿನಗುಂಡಿ ಗ್ರಾಮಕ್ಕೆ ಬಿಜೆಪಿ ಕಾರ್ಯಕರ್ತರ ಸಭೆಗೆಂದು ಆಗಮಿಸಿದ ವೇಳೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಹಾಗೂ ಕಾರ್ಯಕರ್ತರು ಸೇರಿಕೊಂಡು ತೆರವುಗೊಳಿಸಲಾಗಿದ್ದಂತ ಜಾಗದಲ್ಲೇ ಹನುಮಧ್ವಜವನ್ನು ಹಾರಿಸಿದ್ದಾರೆ. ಜೊತೆಗೆ ಸಾವರ್ಕರ್ ನಾಮಫಲಕವನ್ನು ಕೂಡ ಹಾಕಲಾಗಿದೆ. https://kannadanewsnow.com/kannada/india-mens-and-womens-table-tennis-team-qualifies-for-paris-olympics-2024/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/

Read More

ಪ್ಯಾರಿಸ್: ಭಾರತದ ಪುರುಷರ ಮತ್ತು ಮಹಿಳಾ ಟೇಬಲ್ ಟೆನಿಸ್ ತಂಡಗಳು ಪ್ಯಾರಿಸ್ 2024 ಒಲಿಂಪಿಕ್ಸ್ನಲ್ಲಿ ತಮ್ಮ ಇತಿಹಾಸದಲ್ಲಿ ಮೊದಲ ಬಾರಿಗೆ ರ್ಯಾಂಕಿಂಗ್ ಮೂಲಕ ತಂಡ ಸ್ಪರ್ಧೆಗೆ ಅರ್ಹತೆ ಪಡೆದಿವೆ. ಪುರುಷರ ತಂಡ ಪ್ರಸ್ತುತ 15 ನೇ ಸ್ಥಾನದಲ್ಲಿದ್ದರೆ, ಮಹಿಳಾ ತಂಡವು 13 ನೇ ಸ್ಥಾನದಲ್ಲಿದೆ. ಐಟಿಟಿಎಫ್ ವಿಶ್ವ ಟೀಮ್ ಟೇಬಲ್ ಟೆನಿಸ್ ಚಾಂಪಿಯನ್ಶಿಪ್ ಫೈನಲ್ಸ್ನ ಪ್ರಿ ಕ್ವಾರ್ಟರ್ ಫೈನಲ್ನಲ್ಲಿ ಮಹಿಳಾ ತಂಡವು ಚೈನೀಸ್ ತೈಪೆ ವಿರುದ್ಧ ಸೋತಿದ್ದರಿಂದ ಅದು ನೇರ ಅರ್ಹತೆಯ ಕೊರತೆಯನ್ನು ಅನುಭವಿಸಿತು, ಆದರೆ ತಂಡವು ಶ್ರೇಯಾಂಕದ ಆಧಾರದ ಮೇಲೆ ಅದನ್ನು ಸಾಧಿಸಿದೆ. https://twitter.com/SportsArena1234/status/1764604157108052095 ಭಾರತದ ಪುರುಷರ ಮತ್ತು ಮಹಿಳಾ ಟೇಬಲ್ ಟೆನಿಸ್ ತಂಡಗಳು 2024ರ ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿವೆ. 2024ರ ಒಲಿಂಪಿಕ್ಸ್ಗೆ ಅರ್ಹತೆ ಪಡೆಯಲು ಮಹಿಳಾ ತಂಡ ವಿಶ್ವ ರ್ಯಾಂಕಿಂಗ್ನಲ್ಲಿ 13ನೇ ಸ್ಥಾನ ಗಳಿಸಿದೆ. ಇದು ಒಲಿಂಪಿಕ್ಸ್ನಲ್ಲಿ ಭಾರತೀಯ ಮಹಿಳಾ ತಂಡಗಳ ಮೊದಲ ಪ್ರದರ್ಶನವಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತದ ಟೇಬಲ್ ಟೆನಿಸ್ ತಂಡದಿಂದ ಉತ್ತಮ…

Read More

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬ ದುರ್ಮರಣ ಹೊಂದಿದರೇ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಹಾವೇರಿಯ ಹಂಸಭಾವಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಂಸಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಹೋರಿ ಬೆದರಿಸುವಂತ ಸ್ಪರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅರಳೀಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ(38) ಮೃತ ವ್ಯಕ್ತಿಯಾಗಿದ್ದಾರೆ. ಇದೇ ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕ ಎನ್ನಲಾಗಿದೆ. ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೋರಿ ಬೆದರಿಸುವ ಸ್ಪರ್ಧೆಯ ವೇಳೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬ ದುರ್ಮರಣ, ಇಬ್ಬರು ಗಂಭೀರವಾಗಿ ಗಾಯಗೊಂಡ ಬೆನ್ನಲ್ಲೇ, ಹೋರಿ ಬೆದರಿಸುವ ಹಬ್ಬವನ್ನು ಹಂಸಭಾವಿ ಪೊಲೀಸರು ಸ್ಥಗಿತಗೊಳಿಸಿದ್ದಾರೆ. https://kannadanewsnow.com/kannada/bjp-will-hurt-your-sentiments-congress-will-formulate-programmes-for-your-life-cm/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/

Read More

ನೆಲಮಂಗಲ: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆ ಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. 3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ನಾವು ಖರ್ಚು ಮತ್ತು ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ಖರ್ಚು ಮಾಡಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ…

Read More

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತ ಎಫ್‍ಎಸ್‍ಎಲ್ ವರದಿ ಬಹಿರಂಗ ಮಾಡುವಂತೆ ಬಿಜೆಪಿ ನಿಯೋಗವು ಐಜಿಪಿಗೆ ಮನವಿ ಸಲ್ಲಿಸಿದೆ. ಶಾಸಕರಾದ ಎಲ್.ಎ. ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಇಂದು ನೃಪತುಂಗ ರಸ್ತೆಯಲ್ಲಿರುವ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು. ಇದೇ ಫೆಬ್ರವರಿ 27ರಂದು ವಿಧಾನಸೌಧದ ಕಾರಿಡಾರ್‍ನಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ನಂತರ ಗೃಹ ಸಚಿವ ಡಾ. ಪರಮೇಶ್ವರ್ ಅವರು ಎಫ್‍ಎಸ್‍ಎಲ್ ವರದಿಯನ್ನು ಶೀಘ್ರವೇ ಬಹಿರಂಗ ಮಾಡುವ ಭರವಸೆ ನೀಡಿದ್ದರು. ಘಟನೆ ನಡೆದು ಒಂದು ವಾರ ಕಳೆದರೂ ಎಫ್‍ಎಸ್‍ಎಲ್ ವರದಿಯ ಮಾಹಿತಿ ಇಲ್ಲ ಎಂದು ಮನವಿ ಗಮನ ಸೆಳೆದಿದೆ. ಸತ್ಯ ತಿಳಿಸಲು ವಿಳಂಬವೇಕೆ? ವಾಸ್ತವ ಸಂಗತಿ ಮರೆಮಾಚಲು ಮತ್ತು ತನಿಖೆಯ ದಿಕ್ಕನ್ನು ಹಳಿ ತಪ್ಪಿಸಲು ನಿಮ್ಮ ಮೇಲೆ…

Read More

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ವಹಿಸಿದೆ. ಈ ಮೊದಲು ಸಿಸಿಬಿಗೆ ತನಿಖೆಯನ್ನು ವರ್ಗಾಹಿಸಿ ಆದೇಶಿಸಿತ್ತು. ಇದೀಗ ಎನ್ಐಎಗೆ ಪ್ರಕರಣ ವರ್ಗಾವಣೆಗೊಂಡ ಬೆನ್ನಲ್ಲೇ ಮತ್ತೆ ಕೆಫೆಯಲ್ಲಿ ಎಫ್ಎಸ್ಎಲ್ ತಜ್ಞರಿಂದ ಶೋಧ ಕಾರ್ಯವನ್ನು ಆರಂಭಿಸಲಾಗಿದೆ. ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕೆಫೆಗೆ ಮತ್ತೆ ಲಗ್ಗೆ ಇಟ್ಟಿರುವಂತ ಎಫ್ಎಸ್ಎಲ್ ತಜ್ಞರ ತಂಡವು, ಕೆಫೆಯಲ್ಲಿನ ಗಾಜು, ಹೋಟೆಲ್ ವಸ್ತುಗಳು ಸೇರಿದಂತೆ ಪ್ರತಿಯೊಂದನ್ನು ಸೂಕ್ಷ್ಮವಾಗಿ ಪರೀಶಿಲಿಸಿ, ಮಾದರಿಗಳನ್ನು ಸಂಗ್ರಹಿಸುತ್ತಿದೆ. ಬಾಂಬ್ ಸ್ಪೋಟಗೊಂಡಂತ ಕೆಫೆಯ ಸ್ಥಳದ ಸುತ್ತಮುತ್ತಲಿನ ಪ್ರತಿಯೊಂದು ವಸ್ತುಗಳನ್ನು ಎಫ್ಎಸ್ಎಲ್ ತಂಡವು ಮತ್ತೊಮ್ಮೆ ಪರಿಶೀಲಿಸಿ, ಅಲ್ಲಿ ಸಿಕ್ಕಂತ ಗಾಜಿನ ಪೀಸ್ ಸೇರಿದಂತೆ ವಿವಿಧ ವಸ್ತುಗಳನ್ನು ಸಂಗ್ರಹಿಸುತ್ತಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ರಾಜ್ಯ ಸರ್ಕಾರದಿಂದ ಬಿಜೆಪಿ ನಾಯಕರ ಆಗ್ರಹ ಕಾರಣ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ತನಿಖೆಗೆ ವಹಿಸಿದೆ. https://kannadanewsnow.com/kannada/gram-panchayat-libraries-to-be-converted-into-awareness-centres-priyank-kharge/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/

Read More