Author: kannadanewsnow09

ಬೆಳಗಾವಿ: ಜಿಲ್ಲೆಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲೆ ಮರಾಠಿಗರು ನಡೆಸಿದಂತ ದಾಳಿಯನ್ನು ಎಂಇಎಸ್ ಪುಂಡನೊಬ್ಬ ಸಮರ್ಥಿಸಿಕೊಂಡಿದ್ದಾನೆ. ಅಲ್ಲದೇ ಕನ್ನಡಿಗರು ನಾಲಾಯಕ್ ಎಂಬುದಾಗಿ ನಾಡದ್ರೋಹಿಯೊಬ್ಬ ನಾಲಿಗೆಯನ್ನು ಹರಿಬಿಟ್ಟಿದ್ದಾನೆ. ಈ ಸಂಬಂಧ ವೀಡಿಯೋ ಬಿಡುಗಡೆ ಮಾಡಿರುವಂತ ಎಂಇಎಸ್ ಮುಖಂಡ ಶುಭಂ ಶಳಕೆ ಎಂಬಾತ, ಬೆಳಗಾವಿಯಲ್ಲಿ ಇದ್ದೇ ಎಂಇಎಸ್ ಪುಂಡಾಟವನ್ನು ಸಮರ್ಥಿಸಿಕೊಂಡಿದ್ದಾರೆ. ಕಂಡಕ್ಟರ್ ಮೇಲಿನ ಹಲ್ಲೆ ಸರಿ ಎನ್ನೋದಾಗಿ ವೀಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮತ್ತೊಂದೆಡೆ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಬೆಳಗಾವಿಯ ಮಾರಿಹಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸಂಬಂಧ ಮಂಗಳವಾರದಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರು ಮಂಗಳವಾರ ಬೆಳಗಾವಿಗೆ ಭೇಟಿ ಕೂಡ ನೀಡಲಿದ್ದಾರೆ. https://kannadanewsnow.com/kannada/farmers-protest-in-front-of-mescom-office-at-avinahalli-in-sagar-tomorrow-over-inadequate-power-supply/ https://kannadanewsnow.com/kannada/watch-video-israel-hoastege/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೇ ರೈತರಿಗೆ ಅಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದನ್ನು ಖಂಡಿಸಿ ನಾಳೆ ಸಾಗರದ ಅವಿನಹಳ್ಳಿಯ ಮೆಸ್ಕಾಂ ಕಚೇರಿಯ ಮುಂದೆ ರೈತರಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಕುರಿತಂತೆ ಲೋಕೇಶ್ ಹುಣಾಲುಮಡಿಕೆ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಗರ ತಾಲ್ಲೂಕಿನ ಆವಿನಹಳ್ಳಿ ಮತ್ತು ಕೋಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನೀಡದಿರುವ ಬಗ್ಗೆ ಹಾಗೂ ಪವರ್ ಕಟ್ ವಿರೋದಿಸಿ ದಿನಾಂಕ 24-02-2025ರ ಸೋಮವಾರ ಬೆಳಗ್ಗೆ 11ಗಂಟೆಗೆ ಆವಿನಹಳ್ಳಿ ಮೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಆವಿನಹಳ್ಳಿ ಮೆಸ್ಕಾಂ ಕಚೇರಿ ಬಳಿಗೆ ರೈತರು ಗ್ರಾಮಸ್ಥರು ವ್ಯಾಪಾರಸ್ಥರು ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/hubballi-anganwadi-food-stocking-case-six-more-accused-arrested/ https://kannadanewsnow.com/kannada/watch-video-israel-hoastege/

Read More

ಹುಬ್ಬಳ್ಳಿ: ಜಿಲ್ಲೆಯಲ್ಲಿ ಅಂಗನವಾಡಿಗಳಿಗೆ ಸರಬರಾಜು ಮಾಡಬೇಕಿದ್ದಂತ ಆಹಾರ ಸಾಮಗ್ರಿಗಳನ್ನು ಅಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು. ಈ ಸಂಬಂಧ ಅಧಿಕಾರಿಗಳ ದಾಳಿಯ ವೇಳೆಯಲ್ಲಿ ಪತ್ತೆಯಾಗಿತ್ತು. ಇದೀಗ ಮತ್ತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 15ರಂದು ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಗೋದಾಮಿನ ಮೇಲೆ ದಾಳಿ ನಡೆಸಿದ್ದರು. ಈ ಸಂಬಂಧ ಹಲವರ ಮೇಲೆ ಹುಬ್ಬಳ್ಳಿಯ ಕಸಬಾ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದಂತ ಬತುಲ್ ಕಿಲ್ಲೇದಾರ, ಫಾರೂಕ್ ಕಿಲ್ಲೇದಾರ ಪರಾರಿಯಾಗಲು ನೆರವಾದ ಸಂಬಂಧ ಇಂದು ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ್ನು ಅಲ್ತಫ್ ಕಲಾದಗಿ, ದಾದಾಪೀರ್, ಸಲೀಂ ಬೇಪಾರಿ, ಸಲೀಂ ಶೇಖ್, ಬಸವರಾಜ, ಸಲೀಂ ಅತ್ತಾರ್ ಎಂಬುದಾಗಿ ಗುರಿತಿಸಲಾಗಿದೆ. ಈ ಮೂಲಕ ಹುಬ್ಬಳ್ಳಿಯಲ್ಲಿ ಅಂಗನವಾಡಿ ಆಹಾರ ಅಕ್ರಮ ದಾಸ್ತಾನು ಪ್ರಕರಣ ಸಂಬಂಧ ಬಂಧಿಸಿದಂತ ಆರೋಪಿಗಳ ಸಂಖ್ಯೆ 32ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/a-doctors-mistake-in-the-state-a-woman-underwent-a-caesarean-section-left-her-clothes-cotton-in-her-stomach/ https://kannadanewsnow.com/kannada/watch-video-israel-hoastege/

Read More

ಕಲಬುರ್ಗಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ, ಮಹಿಳೆಯೊಬ್ಬರಿಗೆ ಸಿಜೇರಿಯನ್ ಮಾಡಿದಂತ ವೈದ್ಯರು ಮಹಾಎಡವಟ್ಟು ಮಾಡಿರುವಂತ ಘಟನೆ ನಡೆದಿದೆ. ಸಿಜೇರಿಯನ್ ಮಾಡಿದ ಬಳಿಕ ಮಹಿಳೆಯ ಹೊಟ್ಟೆಯಲ್ಲೇ ಉಂಡೆ ಬಟ್ಟೆ, ಹತ್ತಿಯನ್ನು ಬಿಟ್ಟು ಹೊಲಿಗೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ಫೆಬ್ರವರಿ.5ರಂದು ಭಾಗ್ಯಶ್ರಿ ಎಂಬುವರು ಹೆರಿಗೆಗಾಗಿ ದಾಖಲಾಗಿದ್ದರು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಂತ ವೈದ್ಯರು ಹೊಟ್ಟೆಯಲ್ಲೇ ಬಟ್ಟೆ ಹುಂಡೆ ಹಾಗೂ ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಒಂದು ವಾರದ ಬಳಿಕ ಮಹಿಳೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಸ್ಕ್ಯಾನಿಂಗ್ ಮಾಡಿಸಲು ಜಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆಯಲ್ಲಿ ವೈದ್ಯರ ಎಡವಟ್ಟು ಬಟಾಬಯಲಾಗಿದೆ. ಆ ಬಳಿಕ ಅಫಜಲಪುರದ ಕರಜಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ವೈದ್ಯರಿಂದ ಮರು ಶಸ್ತ್ರಚಿಕಿತ್ಸೆ ಮಾಡಿಸಿದ್ದು, ಹೊಟ್ಟೆಯಲ್ಲಿದ್ದಂತ ಉಂಡೆ ಬಟ್ಟೆ, ಹತ್ತಿಯನ್ನು ತೆಗೆದಿದ್ದಾರೆ ಎಂಬುದಾಗಿ ಕುಟುಂಬಸ್ಥರು ಹೇಳಿದ್ದಾರೆ. ಇನ್ನೂ ಭಾಗ್ಯಶ್ರೀ ಕುಟುಂಬಸ್ಥರ ಆರೋಪವನ್ನು ಜಿಮ್ಸ್ ವೈದ್ಯರು ತಳ್ಳಿ ಹಾಕಿದ್ದಾರೆ. ಜಿಲ್ಲಾ ಸರ್ಜನ್ ಡಾ.ಅಸ್ನಾ…

Read More

ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಖಂಡಿಸಿ ನಾಳೆ ರಾಷ್ಟ್ರ ಸುರಕ್ಷಾ ಜನಾಂದೋಲನ ಸಮಿತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂಬಂಧ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದು, ನಾಳೆ ರಾಷ್ಟ್ರ ಸುರಕ್ಷತಾ ಜನಾಂದೋಲನ ಸಮಿತಿಯಿಂದ ಜಾಥಾ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ತಿಳಿಸಿದ್ದಾರೆ. ಇಂದಿನಿಂದ ನಾಳೆ ಮಧ್ಯರಾತ್ರಿವರೆಗೆ ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಂಡಿರುವುದರಿಂದ ಮೆರವಣಿಗೆ, ಸಭೆ, ಸಮಾರಂಭಕ್ಕೆ ನಿಷೇಧವಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿದೆ. https://kannadanewsnow.com/kannada/up-ministers-relative-assaults-flower-vendor-video-goes-viral/ https://kannadanewsnow.com/kannada/watch-video-israel-hoastege/

Read More

ಮೀರತ್: ಉತ್ತರ ಪ್ರದೇಶದ ಸಚಿವ ಸೋಮೇಂದ್ರ ತೋಮರ್ ಅವರ ಸಂಬಂಧಿಯೊಬ್ಬರು ಹೂವಿನ ವ್ಯಾಪಾರಿಯೊಂದಿಗೆ ಜಗಳವಾಡಿದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಈ ವೇಳೆಯಲ್ಲಿ ಹೂವಿನ ವ್ಯಾಪಾರಿಯ ಮೇಲೆಯೇ ಸಚಿವರೊಬ್ಬರ ಸಂಬಂಧ ಹಲ್ಲೆ ಮಾಡಿದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶನಿವಾರ ಮಧ್ಯಾಹ್ನ ಸಚಿವರ ಸೋದರಳಿಯ ತನ್ನ ಮಹೀಂದ್ರಾ ಸ್ಕಾರ್ಪಿಯೋದಲ್ಲಿ ಜನದಟ್ಟಣೆಯಿಂದ ತುಂಬಿದ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದಾಗ ಜಗಳ ಪ್ರಾರಂಭವಾಯಿತು ಎಂಬುದು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. https://twitter.com/mrjethwani_/status/1893568854661702032 ಸಚಿವರ ಸೋದರಳಿಯ ಇ-ರಿಕ್ಷಾ ಚಾಲಕನನ್ನು ನಿಂದಿಸಲು ಪ್ರಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ. ವಾಗ್ವಾದವು ಶೀಘ್ರದಲ್ಲೇ ಹೂವು ಮಾರಾಟಗಾರ ದಂಪತಿಗಳನ್ನು ಒಳಗೊಂಡಿತ್ತು. ವೀಡಿಯೊ ಬಿಸಿಯಾದ ವಾದವನ್ನು ಸೆರೆಹಿಡಿಯುತ್ತದೆ. ಇದು ಶೀಘ್ರದಲ್ಲೇ ಪಕ್ಷಗಳ ನಡುವೆ ದೈಹಿಕ ಹಿಂಸಾಚಾರಕ್ಕೆ ಉಲ್ಬಣಗೊಳ್ಳುತ್ತದೆ. ಜಗಳವು ಸ್ವಲ್ಪ ಸಮಯದವರೆಗೆ ಮುಂದುವರಿಯುತ್ತದೆ. ಮಹಿಳೆ ಒಳಗಿನಿಂದ ಕೋಲನ್ನು ತಂದು ವ್ಯಕ್ತಿಗೆ ಹೊಡೆಯುತ್ತಾಳೆ. ಹಲವಾರು ಪ್ರೇಕ್ಷಕರು ದಂಪತಿಯನ್ನು ಬೆಂಬಲಿಸಲು ಬರುತ್ತಾರೆ ಮತ್ತು ಆ ವ್ಯಕ್ತಿಯ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತಾರೆ. ಈ ವಿಷಯದ ಬಗ್ಗೆ ಮಾತನಾಡಿದ ಬ್ರಹ್ಮಪುರಿ…

Read More

ಬೆಳಗಾವಿ: ಜಿಲ್ಲೆಯಲ್ಲಿ ಕನ್ನಡ ಮಾತನಾಡು ಎಂಬುದಾಗಿ ಹೇಳಿದ್ದಕ್ಕೆ ಕೆ ಎಸ್ ಆರ್ ಟಿ ಸಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಲಾಗಿತ್ತು. ಈಗಾಗಲೇ ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಇಂದು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಮಾತನಾಡು ಎಂಬುದಾಗಿ ಕಂಡಕ್ಟರ್ ಮಹಾದೇವ್ ಹೇಳಿದ್ದಕ್ಕೆ ಯುವಕರ ಗುಂಪೊಂದು ಬಸ್ ಅಡ್ಡಗಟ್ಟಿ ಹಲ್ಲೆ ನಡೆಸಿತ್ತು. ಈ ಸಂಬಂಧ ಮಹಾದೇವ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆದರಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಇಂದು ಆರೋಪಿ ಮೋಹನ್ ಹಂಚಿನಮನಿ ಎಂಬಾತನನ್ನು ಬಂಧಿಸಿದ್ದಾರೆ. ಹೀಗಾಗಿ ಪ್ರಕರಣದಲ್ಲಿ ಅಪ್ರಾಪ್ತ ಸೇರಿದಂತೆ ಐವರನ್ನು ಮಾರಿಹಾಳ ಠಾಣೆಯ ಪೊಲೀಸರು ಬಂಧಿಸಿದಂತೆ ಆಗಿದೆ. https://kannadanewsnow.com/kannada/three-persons-including-a-child-were-seriously-injured-when-a-mini-bus-overturned-in-doddaballapura/ https://kannadanewsnow.com/kannada/watch-video-israel-hoastege/

Read More

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಒಂದು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ಮೂವರು ತೀರ್ವವಾಗಿ ಗಾಯಗೊಂಡಿರುವಂತ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಷ್ಟ್ರು ಮನೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಮಕರಣಕ್ಕೆ ಜನರನ್ನು ಕರೆದೊಯ್ಯುತ್ತಿದ್ದಂತ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಮಗು ಸೇರಿದಂತೆ ಮೂವರಿಗೆ ತೀವ್ರ ಗಾಯಗಳಾಗಿವೆ. ಮಿನಿ ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದಂತ ನಾಮಕರಣಕ್ಕೆ 25 ಮಂದಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/punjabi-singer-actor-guru-randhawa-injured-during-stunt-performance-hospitalised/ https://kannadanewsnow.com/kannada/watch-video-israel-hoastege/ https://kannadanewsnow.com/kannada/congress-to-launch-operation-hasta-to-govern-sagar-municipal-corporation/

Read More

ನವದೆಹಲಿ: ಪಂಜಾಬಿ ಗಾಯಕ ಮತ್ತು ನಟ ಗುರು ರಾಂಧವ ಅವರು ತಮ್ಮ ಮುಂಬರುವ ಚಿತ್ರ ಶೌಂಕಿ ಸರ್ದಾರ್ ಸೆಟ್ ನಲ್ಲಿ ಸ್ಟಂಟ್ ವೇಳೆಯಲ್ಲಿ ಗಾಯಗೊಂಡಿದ್ದು, ಪ್ರಸ್ತುತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ, ರಾಂಧವ ತನ್ನ ಸ್ಥಿತಿಯ ಬಗ್ಗೆ ಅಭಿಮಾನಿಗಳಿಗೆ ನವೀಕರಿಸಲು ಇನ್ಸ್ಟಾಗ್ರಾಮ್ಗೆ ಹೋದರು. ಕುತ್ತಿಗೆಗೆ ಗರ್ಭಕಂಠದ ಕಾಲರ್ನೊಂದಿಗೆ ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು “ನನ್ನ ಮೊದಲ ಸ್ಟಂಟ್, ನನ್ನ ಮೊದಲ ಗಾಯ, ಆದರೆ ನನ್ನ ಉತ್ಸಾಹವು ಮುರಿಯದೆ ಉಳಿದಿದೆ. ಶೌಂಕಿ ಸರ್ದಾರ್ ಚಿತ್ರದ ಸೆಟ್ ಗಳಿಂದ ಒಂದು ನೆನಪು. ಬಹುತ್ ಮುಷ್ಕಿಲ್ ಕಮ್ಮ್ ಆ ಆಕ್ಷನ್ ವಾಲಾ ಆದರೆ ನನ್ನ ಪ್ರೇಕ್ಷಕರಿಗಾಗಿ ಶ್ರಮಿಸುತ್ತೇನೆ ಎಂದಿದ್ದಾರೆ. ರಾಂಧವ ಚಿತ್ರವನ್ನು ಪೋಸ್ಟ್ ಮಾಡಿದ ಸ್ವಲ್ಪ ಸಮಯದ ನಂತರ, ಅಭಿಮಾನಿಗಳು ಕಾಮೆಂಟ್ ವಿಭಾಗವನ್ನು ಹೃತ್ಪೂರ್ವಕ ಸಂದೇಶಗಳಿಂದ ತುಂಬಿದರು. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. “ಓ ದೇವರೇ, ಕಿತ್ನಾ ಕಠಿಣ ಪರಿಶ್ರಮ ಕರ್ ರಹೇನ್ ಹೈನ್ ಆಪ್…

Read More

ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಇನ್ನು ಮುಂದ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು…

Read More