Author: kannadanewsnow09

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಆಕ್ಷೇಪಣೆ ಕೋರಿ ಇಲಾಖಾ ವೆಬ್‌ಸೈಟ್ https://schooleducation.karnataka.gov.in/86/teachers/kn ನ ಶಿಕ್ಷಕರ ಸೇವಾ ವಿವರಗಳಲ್ಲಿ ಕ್ರಮ ಸಂಖ್ಯೆ 04ರಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ. ಈ ಕರಡು ತಾತ್ಕಾಲಿಕ ಜೇಷ್ಟತಾ ಪಟ್ಟಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮೇ 08 ರೊಳಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೇರವಾಗಿ ಸಲ್ಲಿಸಲು ಸೂಚಿಸಿದೆ. https://kannadanewsnow.com/kannada/rajalakshmi-kodibettu-conferred-with-mangala-varghese-award-by-kuwj/ https://kannadanewsnow.com/kannada/breaking-another-suicide-in-bengaluru-car-driver-commits-suicide-after-unable-to-repay-loan/

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ ಮಂಗಳ ವರ್ಗೀಸ್ ಪ್ರಶಸ್ತಿಯನ್ನು ಪ್ರಜಾವಾಣಿಯ ಹಿರಿಯ ಪತ್ರಕರ್ತೆ ಕೆ.ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಅವರು ಅನಾರೋಗ್ಯದಿಂದ ಬರಲಾಗದ ಕಾರಣ ಮಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕರಾವಳಿ ಭಾಗದ ದೈವರಾಧನೆ ಕುರಿತು ರಾಜಲಕ್ಷ್ಮಿ ಅವರು ಸುಧಾ ವಾರಪತ್ರಿಕೆಗೆ ಬರೆದಿದ್ದ ಲೇಖನ ಮುಖಪುಟದಲ್ಲಿ (cover page story) ಪ್ರದಾನವಾಗಿ ಪ್ರಕಟಗೊಂಡಿದ್ದು ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಸ್ಕರ ರೈ ಕಟ್ಟ, ರಾಜಲಕ್ಷ್ಮಿ ಪತಿ ಗಣಪತಿ ಭಟ್ , ಪ್ರವೀಣ್ ಕುಮಾರ್ ಕೋಡಿಯಾಲಬೈಲು ಹಾಜರಿದ್ದರು

Read More

ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರು ಕಾರ್ಯಕ್ರಮವೊಂದರಲ್ಲಿ ಕನ್ನಡಿಗರನ್ನು ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದಂತ ಉಗ್ರರಿಗೆ ಹೋಲಿಕೆ ಮಾಡಿದ್ದರು. ಇಂತಹ ಗಾಯಕ ಸೋನು ನಿಗಮ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಘಟಕದ ಜಿಲ್ಲಾಧ್ಯಕ್ಷ ಧರ್ಮರಾಜ್.ಎ ಅವರು ಅವಲಹಳ್ಳಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಪ್ರಸಿದ್ಧ ಗಾಯಕ ಸೋನು ನಿಗಮ್ ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ವಿರ್ಗೊನಗರ್, ಬೆಂಗಳೂರು ಇಲ್ಲಿ ಏಪ್ರಿಲ್ 30, 2025 ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಮಾಡಿದ ಆಕ್ಷೇಪಾರ್ಹ ಮತ್ತು ಭಾವನೆಗಳನ್ನು ಕೆರಳಿಸುವ ಹೇಳಿಕೆಗಳಿಗಾಗಿ ಈ ಮೂಲಕ ದೂರನ್ನು ಸಲ್ಲಿಸುತ್ತಿದ್ದೇನೆ. ಅವರ ಹೇಳಿಕೆಗಳು ಕನ್ನಡಿಗ ಸಮುದಾಯದ ಭಾವನೆಗಳಿಗೆ ತೀವ್ರ ಘಾಸಿಯನ್ನುಂಟುಮಾಡಿದ್ದು, ಕರ್ನಾಟಕದ ವಿವಿಧ ಭಾಷಿಕ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆಯಲ್ಲದೆ ಹಿಂಸೆಗೆ…

Read More

ಬೆಂಗಳೂರು: 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಗಸೂಚಿ ಹೊರಡಿಸಿದ್ದು, 2025 ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ನೋಂದಾಯಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಪೂರ್ಣಗೊಳಿಸದ [Not Completed] | ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2025ರ ಮೇ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ನಡೆಸಲಾಗುವುದು, ಈ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 1, 2023ರ ಪೂರಕ ಪರೀಕ್ಷೆಗೆ ನೋಂದಾಯಿಸಿದ್ದ ಮತ್ತು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ಣಗೊಳಿಸದ [Not Completed], 2025ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಗೈರು ಹಾಜರಾಗಿರುವ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ https://kseab.karnataka.gov.in ಶಾಲಾ ಲಾಗಿನ್ ಮೂಲಕ ಪರೀಕ್ಷೆ-2ಕ್ಕೆ ನೋಂದಣಿ ಮಾಡುವುದು. ಶಾಲಾ ಲಾಗಿನ್‌ನಲ್ಲಿ Registration for 2025 Exam-2ನ್ನು ಕ್ಲಿಕ್ ಮಾಡಿದಾಗ ENTER REGISTER NUMBER ಎನ್ನುವ…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದರೇ, ಕಲಬುರ್ಗಿ ಕೊನೆಯ ಸ್ಥಾನವನ್ನು ಗಳಿಸಿದೆ. ಈ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ-2, 3ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 26-05-2025ರಿಂದ ಪರೀಕ್ಷೆ ಆರಂಭಗೊಂಡು, ದಿನಾಂಕ 02-06-2025ರವರೆಗೆ ನಡೆಯಲಿದೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ವಿಷಯವಾರು ವೇಳಾಪಟ್ಟಿ ದಿನಾಂಕ 26-05-2025ರಂದು ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇ ಆರ್ ಟಿ, ಸಂಸ್ಕೃತ. ದಿನಾಂಕ 27-05-2025ರಂದು ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ ದಿನಾಂಕ 28-05-2025ರಂದು ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ ದಿನಾಂಕ 29-05-2025ರಂದು ಕೋರ್ ಸಬ್ಜೆಕ್ಟ್ – ಸಮಾಜ…

Read More

ಆನೇಕಲ್: “ಆನೇಕಲ್ ತಾಲೂಕಿಗೆ ಕುಡಿಯಲು ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದ್ದು ಹಾಗೂ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಆನೇಕಲ್ ತಾಲ್ಲೂಕು ಹೆನ್ನಾಗರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ಶಿವಣ್ಣ, ಮಾಜಿ ಸಂಸದ ಸುರೇಶ್, ರಮೇಶ್ ಅವರು ನಿಮ್ಮನ್ನು ಬೆಂಗಳೂರು ನಗರ ವ್ಯಾಪ್ತಿಗೆ ಸೇರಿಸಬೇಕು ಎಂದು ನನ್ನ ಮೇಲೆ ಒತ್ತಾಯ ಹಾಕುತ್ತಿದ್ದಾರೆ. ಈ ಬಗ್ಗೆ ಮುಂದೆ ಚರ್ಚೆ ಮಾಡುತ್ತೇನೆ. ನಿಮ್ಮನ್ನು ಗ್ರೇಟರ್ ಬೆಂಗಳೂರಿನಲ್ಲಿ ಸೇರಿಸಲು ಚರ್ಚೆಯಾಗುತ್ತಿದೆ. ಎಲ್ಲಾ ಶಾಸಕರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಇನ್ನು ಈ ಭಾಗಕ್ಕೆ ಕಾವೇರಿ ನೀರನ್ನು ಪೂರೈಸಬೇಕು ಎಂದು ಸುರೇಶ್ ಹಾಗೂ ರಾಮಲಿಂಗಾ ರೆಡ್ಡಿ ಅವರು ಒತ್ತಡ ಹಾಕುತ್ತಿದ್ದಾರೆ. ಆನೇಕಲ್ ತಾಲೂಕಿಗೆ 30 ಎಂಎಲ್ ಡಿ ನೀರನ್ನು ನೀಡಲು ಟೆಂಡರ್ ಕರೆಯಲಾಗಿದೆ. ಈ ಬಗ್ಗೆ ನಾಳೆ…

Read More

ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಹೈ ಸ್ಕೂಲ್ ಚಿರಂಜೀವಿ ಪ್ರಣವಿ. ಎನ್. ರಾಜ್ ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಎರಡನೇ ಶ್ರೇ ಯಾಂಕದಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ನ್ಯಾಷನಲ್ ಹೈಸ್ಕೂಲ್ ಶಿಕ್ಷಣ ಸಂಸ್ಥೆ ರ್ಯಾಂಕಿಂಗ್ ಪರಂಪರೆಯನ್ನು ಮುಂದುವರೆಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಅಮೋಘ ಸಾಧನೆ ಮಾಡಿದ ಪ್ರಣವಿ. ಎನ್. ರಾಜ್. ಅವರಿಗೆ ಎನ್ಇಎಸ್ ಶಿಕ್ಷಣ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಶಾಲೆಯ ಎಲ್ಲಾ ಅಧ್ಯಾಪಕರು, ಕಚೇರಿ, ಹಾಗೂ ಇತರೆ ಸಿಬ್ಬಂದಿಗಳು ಅಭಿನಂದಿಸಿದ್ದಾರೆ. ಎನ್.ಇ.ಎಸ್ ಸಂಸ್ಥೆಯ ಅಧ್ಯಕ್ಷರಾದ ಡಾ.ಎಚ್.ಎನ್. ಸುಬ್ರಮಣ್ಯ, ಗೌರವ ಕಾರ್ಯದರ್ಶಿ ವಿ. ವೆಂಕಟಶಿವಾ ರೆಡ್ಡಿ ಮತ್ತಿತರರು ವಿದ್ಯಾರ್ಥಿ ಹಾಗೂ ಪೋಷಕರನ್ನು ಅಭಿನಂದಿಸಿ, ಉತ್ತಮ ರೀತಿಯಲ್ಲಿ ಶಿಕ್ಷಣ ಮುಂದುವರೆಸುವಂತೆ ಹುರಿದುಂಬಿಸಿದರು. https://kannadanewsnow.com/kannada/breaking-breaking-case-court-dismisses-ct-ravis-plea-seeking-quashing-of-case-against-laxmi-hebbalkar/ https://kannadanewsnow.com/kannada/for-the-first-time-in-the-state-powermen-were-given-safe-supplies-in-mandya/ https://kannadanewsnow.com/kannada/complaint-filed-against-sonu-nigam-for-comparing-kannadigas-to-terrorists/

Read More

ಬೆಂಗಳೂರು: ಶಂಕರಾಚಾರ್ಯರ ಹೆಸರಿನಲ್ಲಿ ಮುಂದಿನ ವರ್ಷದಿಂದ ಪ್ರಶಸ್ತಿ ನೀಡಲಾಗುವುದು ಎಂದು ಸಚಿವರು ಇದೇ ವೇಳೆ ಘೋಷಿಸಿದರು. ಪ್ರಶಸ್ತಿ ಆಯ್ಕೆಗಾಗಿ ಸಮಿತಿಯನ್ನು ರಚಿಸಲಾಗುವುದು. ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ಆದಿ ಶಂಕರಾಚಾರ್ಯರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆದಿ ಶಂಕರಾಚಾರ್ಯರು ಅದ್ವೈತ ವೇದಾಂತದ ಅಡಿಪಾಯವನ್ನು ಹಾಕುವ ಮೂಲಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ಎಂದು ಅಭಿಪ್ರಾಯಪಟ್ಟರು. ಆಧ್ಯಾತ್ಮಿಕ ಕ್ರಾಂತಿಕ ಹರಿಕಾರರಾಗಿದ್ದ ಶಂಕರಾಚಾರ್ಯರು ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಯಲ್ಲಿ ಒಬ್ಬರಾಗಿದ್ದರು.‌ 8ನೇ ವಯಸ್ಸಿನಲ್ಲೇ ಮಹನೀಯರು ಅಪಾರ ಜ್ಞಾನ ಹೊಂದಿದ್ದರು. ತಮ್ಮ 32 ವಯಸ್ಸಿನಲ್ಲೇ ಅಪಾರ ಮೈಲಿಗಲ್ಲು ಸ್ಥಾಪಿಸಿದ್ದರು ಎಂದು ಶ್ಲಾಘಿಸಿದರು. ಧರ್ಮದ‌ ಹೆಸರಲ್ಲಿ ದಾರಿ‌ ತಪ್ಪಿಸುವ ಕೆಲಸ: ಧರ್ಮದ ಹೆಸರಿನಲ್ಲಿ ಹರಡುತ್ತಿರುವ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ರೆ ಸರಿಯಿರಲ್ವೇ?, ಏನು ಸಿದ್ದರಾಮಯ್ಯ ಅವರು ಮನೆಯಲ್ಲಿ ಕುಳಿತು ಮಾಡ್ತಾರಾ? ಎಂದು ಬಿಜೆಪಿಗರ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಕಿಡಿಕಾರಿದ್ದಾರೆ. ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಜನಗಣತಿ ಜತೆಗೆ ಜಾತಿಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ.‌ ನಾವು ಕೇಂದ್ರ ಸರ್ಕಾರ ಮಾಡುವ ಗಣತಿಗೆ ವಿರೋಧ ಮಾಡುವುದಿಲ್ಲ.‌ ಬಿಜೆಪಿ ನಾಯಕರು ಯಾಕೆ ಕಾಂತರಾಜು ಅವರ ವರದಿಯನ್ನು ವಿರೋಧಿಸುತ್ತಾರೆ? ಲೋಪಗಳಿದ್ದರೆ ಸರಿಮಾಡೋಣ. ಲೋಪಗಳ ಬಗ್ಗೆ ಚರ್ಚೆಯಾಗಲಿ. ಅದನ್ನ ಸರಾಸಗಟಾಗಿ ತಿರಸ್ಕರಿಸುವುದು ಸರಿಯೇ? ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸೇರಿದಂತೆ ಬಿಜೆಪಿಗರು ಕಾಂತರಾಜು ಅವರ ವರದಿಯನ್ನು ನೋಡದೆ ವರದಿ ಬಗ್ಗೆ ಅಪಸ್ವರ ತೆಗೆದರಲ್ಲ? ಇದು ಸರಿಯೇ? ಬಿಜೆಪಿ ನಾಯಕರು…

Read More

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ. ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‍ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665. ಮಡಿಕೇರಿ ತಾಲ್ಲೂಕಿನ ಮಡಿಕೇರಿ ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿಗೆ ಚೈತ್ರ 9449598603, ತಾಳತ್‍ಮನೆ ಹೇಮಂತ್ ರಾಜ್ 9449598604, ಮೂರ್ನಾಡು…

Read More