Author: kannadanewsnow09

ಬೆಂಗಳೂರು: ಐತಿಹಾಸಿಕ ಶಕ್ತಿ ದೇವತೆ ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಈ ಭಾರಿ ಜನಸಾಗರಕ್ಕೆ ಮುಖ್ಯ ಕಾರಣ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಆಗಿರುವ ದಿನೇಶ್ ಗೂಳಿಗೌಡ ಬಣ್ಣಿಸಿದ್ದಾರೆ. ಮಹಿಳಾ ಭಕ್ತರು ಅಪಾರ-ಇದು ಶಕ್ತಿ ಯೋಜನೆ ಎಫೆಕ್ಟ್: ರಾಜ್ಯ ಸರ್ಕಾರವು ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ‘ಶಕ್ತಿ’ ಯೋಜನೆ ಜಾರಿಯಾದ ನಂತರ, ರಾಜ್ಯದ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದು, ಇದು ಎಲ್ಲ ಧಾರ್ಮಿಕ ಕೇಂದ್ರಗಳ ಆದಾಯ ಮತ್ತು ಭಕ್ತರ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಇದಕ್ಕೆ ಈಗ ಹಾಸನಾಂಬೆಯ ದರ್ಶನವೇ ಸಾಕ್ಷಿ. ಪ್ರತಿ ವರ್ಷ ಹಾಸನಾಮಿ ದರ್ಶನಕ್ಕೆ ನಾಲ್ಕರಿಂದ ಐದು ಲಕ್ಷ ಜನರಷ್ಟೇ ಸೇರುತ್ತಿದ್ದರು. ಆದರೆ ರಾಜ್ಯ ಸರ್ಕಾರ ಉಚಿತವಾಗಿ…

Read More

ಈ 3 ರಾಶಿಯವರಿಗೆ ಶರೀರದಲ್ಲಿ ಇಂತಹ ಲಕ್ಷಣಗಳು ಕಂಡುಬಂದರೆ ಆವರಿಗೆ ಶನಿದೇವರ ಕೃಪೆ ಆರಂಭವಾಗಿದೆ ಅನ್ನುವ ಸೂಚನೆ ಅದಾಗಿದೆ, ಯಾವ ಲಕ್ಷಣಗಳು ನೋಡಿ…!! ಈ ಭೂಮಿಯ ಮೇಲೆ ಜನರು ಹೆಚ್ಚಾಗಿ ಹೆದರುವ ದೇವರು ಅಂದರೆ ಶನಿದೇವ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಶನಿ ದೇವರು ಮಾನವ ಮಾಡುವ ಪಾಪ ಕರ್ಮಗಳಿಗೆ ಅಂಗವಾಗಿ ಅವರು ಪುಣ್ಯ ಮತ್ತು ಶಿಕ್ಷೆಯನ್ನ ಕೊಡುವ ಕಾರಣ ಜನರು ತಪ್ಪು ಮಾಡುವ ಮುನ್ನ ಒಮ್ಮೆ ಶನಿ ದೇವರನ್ನ ಜ್ಞಾಪಕ ಮಾಡುತ್ತಾರೆ ಎಂದು ಹೇಳಬಹುದು. ಇನ್ನು ಶನಿ ದೇವರ ದೃಷ್ಟಿಯಿಂದ ಪಾರಾಗಲು ಜನರು ಶನಿ ದೇವರ ವೃತ ಮತ್ತು ಎಳ್ಳೆಣ್ಣೆಯ ದೀಪವನ್ನ ಶನಿ ದೇವರಿಗೆ ಹಚ್ಚುವುದರ ಮೂಲಕ ಶನಿಯ ಆರಾಧನೆಯನ್ನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಪಂಡಿತರು ಮತ್ತು ಶಾಸ್ತ್ರ ಹೇಳುವ ಪ್ರಕಾರ ಮಾನವನ ಶರೀರದಲ್ಲಿ ಇಂತಹ ಲಕ್ಷಣಗಳು ಕಂಡುಬಂದರೆ ಶನಿ ದೇವರ ಕೃಪೆ ಅವರ ಮೇಲೆ ಇದೆ ಅನ್ನುವ ಸೂಚನೆ ಆದಾಗಿದೆ ಎಂದು ಶಾಸ್ತ್ರ ಹೇಳುತ್ತದೆ. ಹಾಗಾದರೆ…

Read More

ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳ ಪರಿಶೀಲನೆ ಮಾಡಿಕೊಂಡು ಹೋಗಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು (ಎಎಐ) ಇನ್ನು 2-3 ದಿನಗಳಲ್ಲಿ ವರದಿ ಕೊಡಲಿದೆ. ಇದಾದ ನಂತರ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌ ಬಿ ಪಾಟೀಲ ಗುರುವಾರ ಹೇಳಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಮಗೆ 2033ರವರೆಗೂ ನಿರ್ಬಂಧವಿದೆ. ಆದರೆ, ಈಗಿನಿಂದಲೇ ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸಿದರೆ ಅಷ್ಟು ಹೊತ್ತಿಗೆ ಮುಗಿಸಬಹುದು. ಒಂದು ವಿಮಾನ ನಿಲ್ದಾಣ ನಿರ್ಮಿಸಲು ಕನಿಷ್ಠ ಪಕ್ಷ ಐದಾರು ವರ್ಷಗಳಾದರೂ ಹಿಡಿಯುತ್ತದೆ ಎಂದಿದ್ದಾರೆ. ಎಎಐ ತಾನು ಪರಿಶೀಲಿಸಿರುವ ಎರಡು ಸ್ಥಳಗಳಿಗೂ ಹಸಿರು ನಿಶಾನೆ ತೋರಿಸಬಹುದು. ನಾವೂ ಒಂದು ಕಡೆ ಐದಾರು ಸಾವಿರ ಎಕರೆ ಭೂಮಿ ಕೊಡಬಹುದು. ಆದರೆ ವಿಮಾನ‌ ನಿಲ್ದಾಣ ನಿರ್ಮಾಣ ಸಂಸ್ಥೆಗಳು ಇದು ಆರ್ಥಿಕವಾಗಿ ಲಾಭದಾಯಕವೇ ಎನ್ನುವಂತಹ ಅಂಶಗಳನ್ನು ನೋಡುತ್ತವೆ. ಇದೊಂದು…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ IISC ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 02:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದಾರಪಾಳ್ಯ, ದಿವಾನರ, ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. https://kannadanewsnow.com/kannada/kea-important-information-about-certificate-download-for-those-who-passed-the-compulsory-kannada-examination/ https://kannadanewsnow.com/kannada/the-biggest-eclipse-the-state-is-facing-is-congress-rule-mp-tejasvi-surya/

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಇದೆ. ಕಡ್ಡಾಯ ಕನ್ನಡ ಪರೀಕ್ಷೆ ತೇರ್ಗಡೆಯಾದವರಿಗೆ ಅದನ್ನು ಹೊರತುಪಡಿಸಿ, ಉಳಿದ ಪರೀಕ್ಷೆ ಬರೆಯಬೇಕಿದೆ. ಇದೀಗ ಕಡ್ಡಾಯ ಕನ್ನಡ ಪರೀಕ್ಷೆ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರ ಡೌನ್ ಲೋಡ್ ಬಗ್ಗೆ ಕೆಇಎ ಮಹತ್ವದ ಮಾಹಿತಿ ಹಂಚಿಕೊಂಡಿದೆ.  ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ ಅವರು, ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆದಿದ್ದು, ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪ್ರಮಾಣ ಪತ್ರಗಳನ್ನು KEA ವೆಬ್ ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ಸದ್ಯದಲ್ಲೇ ಲಿಂಕ್ ಬಿಡುಗಡೆ ಮಾಡಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ. ಅರ್ಹರು, ಉತ್ತೀರ್ಣರಾಗಿರುವ ವಿಷಯವನ್ನು ಅರ್ಜಿಯಲ್ಲಿ ನಮೂದಿಸಿ, ನಿಗದಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಿದ್ದಾರೆ. https://twitter.com/KEA_karnataka/status/1981275970356293892 https://kannadanewsnow.com/kannada/congress-government-is-deadly-for-this-state-legislative-council-opposition-leader-chalavadi-narayanaswamy/ https://kannadanewsnow.com/kannada/the-biggest-eclipse-the-state-is-facing-is-congress-rule-mp-tejasvi-surya/

Read More

ಬೆಂಗಳೂರು: ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ವಿಶ್ಲೇಷಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷಗಳ ನಂತರ ಕರ್ನಾಟಕ ಸೂರ್ಯ ಚಂದ್ರ ಇರುವವರೆಗೂ ಪ್ರಕಾಶಮಾನವಾಗಿ ಬೆಳಗುತ್ತದೆ ಎಂದು ನುಡಿದರು. ಸಿದ್ದರಾಮಯ್ಯ ಅವರೇ, ಕರ್ನಾಟಕಕ್ಕೆ ಹಿಡಿದಿರುವ ಗ್ರಹಣ ನಿಮ್ಮ ಆಡಳಿತ. ನೀವು ಅಧಿಕಾರಕ್ಕೆ ಬಂದು ಸುಮಾರು ಎರಡೂವರೆ ವರ್ಷವಾಗಿದೆ. ಬೆಂಗಳೂರಿನ ರಸ್ತೆ ಗುಂಡಿಗಳಿಂದ ಜನರು ನರಕಯಾತನೆಯನ್ನು ಅನುಭವಿಸುತ್ತಿದ್ದಾರೆ. ನಿಮ್ಮ ಆಡಳಿತ ಎಷ್ಟು ಚೆನ್ನಾಗಿದೆ ಎಂಬುದಕ್ಕೆ ಬೆಂಗಳೂರಿನ ರಸ್ತೆ ಗುಂಡಿಗಳೇ ಸಾಕ್ಷಿ ಎಂದು ವ್ಯಂಗ್ಯವಾಡಿದರು. ಅಮಾವಾಸ್ಯೆ- ಹುಣ್ಣಿಮೆಗೆ ವ್ಯತ್ಯಾಸ ತಿಳಿದಿಲ್ಲ.. ಸಿದ್ದರಾಮಯ್ಯ ಅವರು ಹಿರಿಯರು ಹಾಗೂ ಲೋಕಾನುಭವ ಹೊಂದಿರುವವರು. ಅಮಾವಾಸ್ಯೆಗೂ ಮತ್ತು ಹುಣ್ಣಿಮೆಗೂ ಅವರಿಗೆ ವ್ಯತ್ಯಾಸ ಗೊತ್ತಿಲ್ಲ. ಅಮಾವಾಸ್ಯೆ ದಿನವು ಸೂರ್ಯ ಇರುತ್ತಾನೆ; ಹುಣ್ಣಿಮೆ…

Read More

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರಕಾರವು ಇಡೀ ರಾಜ್ಯದಲ್ಲಿ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಬಗ್ಗೆ ಕೇಳಿದರೆ ದಾರಿ ತಪ್ಪಿಸುವ ಉತ್ತರಗಳನ್ನು ಕೊಡುತ್ತ ಬೇರೆ ಬೇರೆ ವಿಚಾರಗಳನ್ನು ಮಾತನಾಡುತ್ತಾರೆ. ರಸ್ತೆ ಗುಂಡಿ ಮುಚ್ಚಲು ಇವರಿಗೆ ಸಾಧ್ಯವಾಗಿಲ್ಲ; ಈಗ ರಸ್ತೆಯಲ್ಲಿ ಗುಂಡಿ ಇದೆಯ ಎಂದರೆ ಸರಕಾರದಲ್ಲೇ ಗುಂಡಿ ಬಿದ್ದಿದೆ ಎಂದು ಆರೋಪಿಸಿದರು. ನಾಯಕರ ಮಕ್ಕಳಲ್ಲಿ ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗ ಯತೀಂದ್ರ, ಮತ್ತೊಂದು ಕಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಮಗ ಇಬ್ಬರೂ ಸೇರಿ ಕಾಂಗ್ರೆಸ್‍ಗೇ ಗುಂಡಿ ತೋಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‍ಗೇ ಗುಂಡಿ ತೋಡಿ ಈಗ ತಂದೆಯವರನ್ನೇ ಅಪಮಾನಗೊಳಿಸುವ ಮತ್ತು ಅವರನ್ನೇ ಜನರು ಈಗ ಅನುಮಾನದಿಂದ ನೋಡುವ ಪರಿಸ್ಥಿತಿಯನ್ನು ಅವರೇ ಉದ್ಭವ ಮಾಡುತ್ತಿದ್ದಾರೆ ಎಂದು ದೂರಿದರು. ಸಂಪೂರ್ಣ ಹದಗೆಟ್ಟ ಕಾನೂನು- ಸುವ್ಯವಸ್ಥೆ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ…

Read More

ಬೆಂಗಳೂರು: ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಈ ಕ್ಷುಲ್ಲಕ ರಾಜಕೀಯ ಬಿಟ್ಟು ಕಲಬುರಗಿ ಜಿಲ್ಲೆಯಲ್ಲಿ ಆಗಿರುವ ನೆರೆ ಅನಾಹುತವನ್ನು ಸರಿ ಮಾಡಿ ಎಂದು ಕಿವಿಮಾತು ಹೇಳಿದರು. ಅಧಿಕಾರಕ್ಕಾಗಿ ಜೆಡಿಎಸ್ ಕೇಸರಿಕರಣವಾಗಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಅಧಿಕಾರಕ್ಕಾಗಿ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್. ಅವತ್ತು ಏನೇನು ನಡೆಯಿತು ಎನ್ನುವುದನ್ನು ಅವರು ತಮ್ಮ ತಂದೆಯನ್ನು ಕೇಳಿ ತಿಳಿದುಕೊಳ್ಳಲಿ. ಬೆಂಗಳೂರಿನಲ್ಲಿ ರಾಜಕೀಯ ಮಾಡುವ ಬದಲು ತಮ್ಮ ಜಿಲ್ಲೆಯಲ್ಲಿ ಏನಾಗಿದೆ ಎಂಬ ಬಗ್ಗೆ ಗಮನ ಹರಿಸಲಿ ಎಂದು ಸಲಹೆ ಮಾಡಿದರು. ಕಾಂಗ್ರೆಸ್ ನವರು…

Read More

ಬೆಂಗಳೂರು: ಹಿಂದೆ ನಾನು ಆರ್ ಎಸ್ ಎಸ್ ಅನ್ನು ಟೀಕೆ ಮಾಡಿದ್ದೇನೆ. ಇಲ್ಲ ಅಂತ ಹೇಳಲ್ಲ. ಕಾಂಗ್ರೆಸ್ ನವರು ನೀವೇನು ಮಾಡಿದ್ದೀರಾ? ರಾಜ್ಯದಲ್ಲಿ 136 ಸೀಟು ಕೊಟ್ಟಿದ್ದಾರೆ. ಜನರ ಸಮಸ್ಯೆ ಕೇಳ್ತಿಲ್ಲ. ಕಲಬುರ್ಗಿಯಲ್ಲಿ ಜನ ಬೀದಿಯಲ್ಲಿ ಇದ್ದಾರೆ. ರೈತರು ಸಂಕಷ್ಟದಲ್ಲಿ ಇದ್ದಾರೆ ಏನು ಮಾಡಿದ್ದೀರಪ್ಪ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ್ ಖರ್ಗೆ ಅವರೇ, ನಿಮ್ಮ ಅಪ್ಪ ಏನು ಹೇಳಿದ್ದರು? ನಮ್ಮ ಹೊಲದಲ್ಲಿ 40 ಎಕರೆ ಬೆಳೆ ನಷ್ಟ ಆಗಿದೆ ಅಂತ ರೈತರು ಹೋಗಿ ಕೇಳಿದರೆ ನಾನು ಎಲ್ಲಿ ಹೋಗಲಿ ಅಂತ ಹೇಳಿದ್ದರು. ನಿಮ್ಮಿಂದ ನಾನು ಯಾವ ರೀತಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಬೇಕು ಅಂತ ಕಲಿಯಬೇಕಾ? ಪ್ರಿಯಾಂಕ್ ಖರ್ಗೆ ಮಾತಾಡಬೇಕಾದ್ರೆ ಹದ್ದುಬಸ್ತಿನಲ್ಲಿ ಮಾತಾಡಿ. ನನ್ನ ಬಗ್ಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಉಳಿಸಿಕೊಂಡಿಲ್ಲ ನೀವು ಎಂದು ಪ್ರಿಯಾಂಕ ಖರ್ಗೆಗೆ ಸಚಿವರು ಎಚ್ಚರಿಕೆ ನೀಡಿದರು. ಅಧಿಕಾರಕೋಸ್ಕರ ನಾವು ಯಾರ ಬಳಿಗೂ ಹೋಗೊಲ್ಲ. ಕಾಂಗ್ರೆಸ್ ಅವರು ಅಧಿಕಾರ ಹಿಡಿಯಲು ಬೇಕಾದಾಗ ನಮ್ಮ…

Read More

ಬೆಂಗಳೂರು:  ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ಈ ಬಗ್ಗೆ ವಿಷಯ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಅವರಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತಿಳಿಸಿದರು. ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ಎಂಬ ಬಗ್ಗೆ ನಾವು ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು ಕೇಂದ್ರ ಸಚಿವರು. ಸಮನ್ವಯ ಸಮಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ…

Read More