Author: kannadanewsnow09

ಬೆಂಗಳೂರು: ಮನುಷ್ಯ ಪ್ರಗತಿ ಹೊಂದಲು ಅವನಲ್ಲಿ ಕುತೂಹಲ ಇರಬೇಕು, ಅಧ್ಯಯನದಿಂದ ಕುತೂಹಲಗಳಿಗೆ ಉತ್ತರ ದೊರಕುವುದರಿಂದ ಗ್ರಾಮೀಣ ಗ್ರಂಥಾಲಯಗಳನ್ನು ʼಅರಿವು ಕೇಂದ್ರʼಗಳೆಂದು ಹೆಸರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.  ಸಚಿವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಪಂಚಾಯತ್ ರಾಜ್ ಆಯುಕ್ತಾಲಯದ ವತಿಯಿಂದ ಏರ್ಪಡಿಸಿದ್ದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಪಗತಿ ಪರಿಶೀಲನೆ ಸಭೆ ನಡೆಸಿದರಲ್ಲದೆ ಅರಿವು ಕೇಂದ್ರಗಳ ಲೋಗೋ, ಪೋಸ್ಟರ್, ಕಟ್ಟಡ ವಿನ್ಯಾಸ, ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಅರಿವು ಕೇಂದ್ರಗಳ ಚಟುವಟಿಕೆಗಳ ಸಂಪುಟಗಳ ಬಿಡುಗಡೆ ಕಾರ್ಯಕ್ರಮ ನೆರೆವೇರಿಸಿ ಮಾತನಾಡುತ್ತಿದ್ದರು. ರಾಜ್ಯದ ಪ್ರತಿಯೊಂದು ಅರಿವು ಕೇಂದ್ರಗಳ ಮಾಹಿತಿಯನ್ನು ಡಾಟಾಬೇಸ್‌ ಆಧರಿಸಿ ಸಂಗ್ರಹಿಸಲು ಸೂಚಿಸಲಾಗಿದೆ ಎಂದೂ ಸಚಿವರು ತಿಳಿಸಿದರು. ಇಲ್ಲಿಯವರೆವಿಗೆ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಅಭಿವೃದ್ಧಿಯಲ್ಲಿ ಅಗಾಧವಾದ ಸಾಧನೆಯಾಗಿದ್ದು, 5,895 ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ 4925 ಗ್ರಂಥಾಲಯಗಳಿಗೆ ಕಟ್ಟಡ, ಕಟ್ಟಡದ ನವೀಕರಣ, ಕೊಠಡಿಗಳು, ಓದುವ…

Read More

ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಸೀಟು ಹಂಚಿಕೆ ವಿಚಾರದ ಬಗ್ಗೆ ಈಗಾಗಲೇ ಬಿಜೆಪಿ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬಹುಶಃ ಇನ್ನೊಮ್ಮೆ ಕೂತು ಚರ್ಚೆ ಮಾಡಿದರೆ ಅಲ್ಲಿಗೆ ಎಲ್ಲಾ ಅಂತಿಮ ಆಗುತ್ತದೆ ಎಂದರು ಅವರು ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆಯೇ ಎನ್ನುವ ಮತ್ತೊಂದು ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಅವರು; ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗುತ್ತದೆ. ಜೆಡಿಎಸ್ ಪಕ್ಷಕ್ಕೆ ಯಾವ ಯಾವ ಕ್ಷೇತ್ರ ಎನ್ನುವುದು ಮೋದಿ, ಅಮಿತ್ ಶಾ, ನಡ್ಡಾ, ಕುಮಾರಸ್ವಾಮಿ ಅವರು…

Read More

ಬೆಂಗಳೂರು: ರಾಜ್ಯ ಜೆಡಿಎಸ್ ನ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಶ್ಮಿ ರಾಮೇಗೌಡ ಅವರು ಅಧಿಕಾರ ಸ್ವೀಕರಿಸಿದರು. ಇಂದು ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆಯಾಗಿ ರಶ್ಮೀ ರಾಮೇಗೌಡ ಪದಗ್ರಹಣ ಮಾಡಿದರು. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರ ಸಮಕ್ಷಮದಲ್ಲಿ ರಶ್ಮಿ ರಾಮೇಗೌಡ ಅವರು ರಾಜ್ಯ ಜೆಡಿಎಸ್ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷರಾದ ಲೀಲಾದೇವಿ ಆರ್ ಪ್ರಸಾದ್ ಅವರಿಂದ ಅಧಿಕಾರ ಸ್ವೀಕರಿಸಿದರು. ಪಕ್ಷದ ಹಿರಿಯ ನಾಯಕಿ ಶ್ರೀಮತಿ ಸುನೀತಾ ಚೌಹಾಣ್ ಸೇರಿದಂತೆ ಹಲವಾರು ನಾಯಕಿಯರು ಈ ಸಂದರ್ಭದಲ್ಲಿ ಹಾಜರಿದ್ದರು. https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/ https://kannadanewsnow.com/kannada/good-news-for-those-going-to-srisaila-mallikarjuna-deva-fair-kkrtc-arranges-225-additional-special-buses/

Read More

ಇಸ್ಲಾಮಾಬಾದ್: ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ನಾಯಕ ಶೆಹಬಾಜ್ ಷರೀಫ್ ಪ್ರಮಾಣ ವಚನ ಸ್ವೀಕರಿಸಿದರು. ಐವಾನ್-ಇ-ಸದರ್ನಲ್ಲಿ ಅಧ್ಯಕ್ಷ ಆರಿಫ್ ಅಲ್ವಿ ಅವರು ಶೆಹಬಾಜ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ನವಾಜ್ ಷರೀಫ್, ಮರಿಯಮ್ ನವಾಜ್ ಮತ್ತು ಇತರ ಪಿಎಂಎಲ್-ಎನ್ ಕಾರ್ಯಕರ್ತರು ಭಾಗವಹಿಸಿದ್ದರು. ಪಿಪಿಪಿಯ ಮುರಾದ್ ಅಲಿ ಶಾ ಮತ್ತು ಸರ್ಫರಾಜ್ ಬುಗ್ತಿ ಕೂಡ ಹಾಜರಿದ್ದರು. https://kannadanewsnow.com/kannada/forest-fire-at-historic-biligiri-rangana-hills-fire-spreads-to-remote-areas/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/

Read More

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿತ್ತು. ಇದು ನಿಜವೋ ಇಲ್ಲವೋ ಎನ್ನುವ ಬಗ್ಗೆ ಎಫ್ಎಸ್ಎಲ್ ತನಿಖೆಗೆ ವೀಡಿಯೋ ದೃಶ್ಯಾವಳಿಯನ್ನು ಕಳುಹಿಸಿಕೊಡಲಾಗಿತ್ತು. ಈ ತನಿಖೆಯ ವರದಿಯನ್ನು ಇನ್ನೂ ಬಹಿರಂಗಪಡಿಸದ ಕಾರಣ, ಶೀಘ್ರದಲ್ಲೇ ಬಹಿರಂಗ ಪಡಿಸುವಂತೆ ಒತ್ತಾಯಿಸಿದ ಬಿಜೆಪಿಯಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಆಗ್ರಹಿಸಿದೆ. ಈ ಕುರಿತಂತೆ ರಾಜ್ಯ ಬಿಜೆಪಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದು, ಫೆಬ್ರವರಿ 27, 2024 ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ರಾಜ್ಯಸಭಾ ಸಂಸದ ಸೈಯದ್‌ ನಾಸಿರ್ ಹುಸೇನ್ ಅವರ ಬೆಂಬಲಿಗರು “ಪಾಕಿಸ್ತಾನ್ ಜಿಂದಾಬಾದ್” ಘೋಷಣೆಗಳನ್ನು ಕೂಗಿದರು, ನಂತರ ಗೌರವಾನ್ವಿತ ಗೃಹ ಸಚಿವರಾದ ಡಾ ಜಿ. ಪರಮೇಶ್ವರ್ ಅವರು ಎಫ್‌ಎಸ್ಎಲ್ ವರದಿಯನ್ನು ಶೀಘ್ರದಲ್ಲಿ ಬಹಿರಂಗ ಮಾಡುವುದಾಗಿ ಭರವಸೆ ನೀಡಿದರು ಎಂದಿದೆ. ಘಟನೆ ನಡೆದು ಒಂದು ವಾರ ಕಳೆದರೂ ಇಲ್ಲಿಯವರೆಗೆ ಎಫ್‌ಎಸ್ಎಲ್ ವರದಿಯ ಬಗ್ಗೆ ಯಾವುದೇ ಏಕೆ? ತಿಳಿಸಲು ಇಷ್ಟು ವಿಳಂಬ ಮಾಹಿತಿ ಇಲ್ಲ. ಸತ್ಯವನ್ನು ಸಾರ್ವಜನಿಕರಿಗೆ ಈ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸದಿರಲು, ವಾಸ್ತವಿಕ ಸಂಗತಿಯನ್ನು…

Read More

ಚಾಮರಾಜನಗರ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಬಿಸಿಲ ಬೇಗೆಯ ಜೊತೆಗೆ ಬೀಸುವ ಗಾಳಿಯಿಂದಾಗಿ ಕಾಳ್ಗಿಚ್ಚು ಬಿಳಿಗಿರಿರಂಗನ ಬೆಟ್ಟದ ದುರ್ಗಮ ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಪುಣಜನೂರು ವಲಯದ ಕುರಿಮಂದೆ ಸೇರಿದಂತೆ 3-4 ಕಡೆಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಅರಣ್ಯದ ದುರ್ಗಮ ಪ್ರದೇಶಗಳಿಗೆ ಬೆಂಕಿ ವ್ಯಾಪಿಸಿದ್ದು, ಕಾಡ್ಗಿಚ್ಚಿನಿಂದ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕ್ಷಣ ಕ್ಷಣಕ್ಕೂ ಬೆಂಕಿ ಕಾಡಿನ ಮತ್ತಷ್ಟು ಭಾಗಕ್ಕೆ ವ್ಯಾಪಿಸುತ್ತಿದ್ದು, ಹತೋಟಿಗೆ ಬಾರದಷ್ಟು ಹೆಚ್ಚಾಗುತ್ತಿದೆ ಎನ್ನಲಾಗುತ್ತಿದೆ. https://kannadanewsnow.com/kannada/good-news-for-those-going-to-srisaila-mallikarjuna-deva-fair-kkrtc-arranges-225-additional-special-buses/ https://kannadanewsnow.com/kannada/bjp-launches-modi-ka-parivar-campaign-hits-back-at-lalu-prasad-over-modi-has-no-family/

Read More

ರಾಯಚೂರು: ಶ್ರೀಶೈಲದ ಮಲ್ಲಿಕಾರ್ಜನ ದೇವರ ಜಾತ್ರೆಗೆ ತೆರಳುವಂತ ಭಕ್ತರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 225 ಹೆಚ್ಚುವರಿ ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು. ಶ್ರೀಶೈಲ ಜಾತ್ರೆ -2024(ಶಿವರಾತ್ರಿ) ಶಿವರಾತ್ರಿ ಹಬ್ಬದ ಪ್ರಯುಕ್ತ ಮಲ್ಲಿಕಾರ್ಜುನ ದೇವರ ಜಾತ್ರೆಗೆ ದಿನಾಂಕ 01.03-2024 ರಿಂದ 10-03-2024 ವರೆಗೆ 225 ಹೆಚ್ಚುವರಿ ವಿಶೇಷ ಬಸ್ಸುಗಳ ಕಾರ್ಯಾಚರಣೆ ಮಾಡಲಿದ್ದಾವೆ ಎಂದಿದೆ. ಪ್ರಮುಖವಾಗಿ ರಾಯಚೂರು ವಿಭಾಗದಿಂದ 160 ಹಾಗೂ ಬಳ್ಳಾರಿ‌ ವಿಭಾಗದಿಂದ 30 ಇತರೆ ವಿಭಾಗಗಳಿಂದ ಸೇರಿ ಒಟ್ಟು 225 ಹೆಚ್ಚುವರಿ ವಿಶೇಷ ಬಸ್ಸುಗಳ ಕಾರ್ಯಚರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ‌ ಮೂಲಕ‌ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದೆ. ಎಲ್ಲಿಂದ ಎಷ್ಟು ಬಸ್ ಶ್ರೀಶೈಲಕ್ಕೆ ಸಂಚಾರ ಗೊತ್ತಾ.? ಇಲ್ಲಿದೆ ಡೀಟೆಲ್ಸ್  ರಾಯಚೂರು ಘಟಕ-2 30 ರಾಯಚೂರು ಘಟಕ-3 – 30 ಲಿಂಗಸುಗೂರು- 30 ಸಿಂಧನೂರು…

Read More

ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ದಿನಕ್ಕೊಂದು ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಇದೀಗ ಬಾಂಬ್ ಇಟ್ಟಂತ ಬಾಂಬರ್ ಬಸ್ ನಿಲ್ದಾಣದಲ್ಲೇ ಟೈಮರ್ ಫಿಕ್ಸ್ ಮಾಡಿ, ಅದನ್ನು ರಾಮೇಶ್ವರಂ ಕೆಫೆಯ ಬಳಿಗೆ ತಂದು ಇಟ್ಟಿರೋ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತಂತೆ ತನಿಖೆಯನ್ನು ನಡೆಸುತ್ತಿರುವಂತ ತನಿಖಾಧಿಕಾರಿಗಳ ತಂಡಕ್ಕೆ ಮಾಹಿತಿ ದೊರೆತಿದೆ. ಸುಮಾರು 1000ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದಂತ ತನಿಖಾ ತಂಡಕ್ಕೆ ಈ ಶಾಕಿಂಗ್ ಮಾಹಿತಿ ದೊರೆತಿದೆ. ದೊರೆತಿರುವಂತ ಮಾಹಿತಿಯಂತೆ ಐಟಿಪಿಎಲ್ ನಿಂದ ಬಸ್ ನಲ್ಲಿ ಬಸ್ ನಲ್ಲಿ ಆಗಮಿಸಿರುವಂತ ಬಾಂಬರ್, ಬೆಳಿಗ್ಗೆ 10.45ಕ್ಕೆ ಕುಂದಲಹಳ್ಳಿ ಬಸ್ ನಿಲ್ದಾಣದಲ್ಲಿ ಇಳಿದಿದ್ದಾನೆ. ಅಲ್ಲಿಯೇ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಕಾಲ ಕಳೆದಿರೋದಾಗಿ ತಿಳಿದು ಬಂದಿದೆ. ಕಪ್ಪು ಮಾಸ್ಕ್, ಬಿಳಿ ಹ್ಯಾಟ್ ಧರಿಸಿದ್ದಂತ ಶಂಕಿತ ಬಾಂಬರ್ ನಡೆದು ಬರುವಾಗ ಎಲ್ಲಿಯೂ ಪಾದಚಾರಿ ಮಾರ್ಗವನ್ನು ಬಳಸಿಲ್ಲ. ಬದಲಾಗಿ ರಸ್ತೆಯಲ್ಲೇ ಹೆಜ್ಜೆಹಾಕಿದ್ದಾನೆ. ಕಾರಣ ಪಾದಚಾರಿ ಮಾರ್ಗದಲ್ಲಿ ನಡೆದು ಹೋದ್ರೇ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 5 ರಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಅವರು ಈ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ “ಕುಡಿಯುವ ನೀರು, ಬರ ನಿರ್ವಹಣೆ, ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ” ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. https://kannadanewsnow.com/kannada/modi-ka-parivar-after-2019s-chowkidar-campaign-bjp-launches-another-campaign-in-x/ https://kannadanewsnow.com/kannada/big-breaking-isro-chief-somnath-diagnosed-with-cancer/

Read More

ಬೆಂಗಳೂರು: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಮಂಜುನಾಥ್ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಆದರೇ ಈ ಕುರಿತಂತೆ ಅವರ ಮಾವ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಡಾ.ಮಂಜುನಾಥ್ ಅವರು ಇಡೀ ದೇಶಾದ್ಯಂತ ತಮ್ಮದೇ ಆದಂತ ಹೆಸರು ಮಾಡಿದ್ದಾರೆ. ಮುಗಿಲೆತ್ತರಕ್ಕೆ ಹೆಸರು ಮಾಡಿರುವಂತ ಅವರು, ಈ ರಾಜಕೀಯ ಪರಿಸ್ಥಿತಿಯಲ್ಲಿ ಬರುವುದು ಸರಿಯಲ್ಲ. ಅವರಿಗೆ ಈಗ ಒಂದು ಒಳ್ಳೇ ಸ್ಥಾನವಿದೆ ಎಂಬುದಾಗಿ ತಿಳಿಸಿದರು. ನಾನು ರಾಜಕೀಯ ಪ್ರವೇಶ ಮಾಡಿ ಅಂತ ಅವರನ್ನು ಈ ಸಮಯದಲ್ಲಿ ಒತ್ತಾಯ ಮಾಡುತ್ತಿಲ್ಲ. ನಾವು ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನ ಮಾಡುವುದಿಲ್ಲ. ನಾನು ಅವರು ರಾಜಕೀಯಕ್ಕೆ ಬರೋದಕ್ಕೆ ಸಮ್ಮತಿ ಸೂಚಿಸುವುದಿಲ್ಲ ಅಂದುಕೊಂಡಿದ್ದೇನೆ ಎಂಬುದಾಗಿ ತಿಳಿಸಿದರು. ಇನ್ನೊಂದು ವಾರದಲ್ಲಿ ಮೈತ್ರಿ ಸೀಟು ಹಂಚಿಕೆಯ ಬಗ್ಗೆ ತೀರ್ಮಾನ ಆಗಲಿದೆ. ಈ ಕುರಿತಂತೆ ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ…

Read More