Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ತಾಲ್ಲೂಕು ಹೊಳಲೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗದಿಂದ ಸರಬರಾಜಾಗುವ ಎಫ್-7, ಎಫ್-8 ಮತ್ತು ಎಫ್-10 ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಇರುವುದರಿಂದ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ನ. 12, 13, 14 ಮತ್ತು 15 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ. ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಶಿವಮೊಗ್ಗ, ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು, ಶಿವಮೊಗ್ಗ ಇವರ ಸಹಯೋಗದೊಂದಿಗೆ ನ.11 ರಂದು ಬೆಳಗ್ಗೆ 10 ಕ್ಕೆ ನಗರದ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜು ಇಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ…
ಮೈಸೂರು: ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದೆಯೇ ವ್ಯಕ್ತಿಯೊಬ್ಬರು ಗ್ಯಾರಂಟಿಯಿಂದ ಕರ್ನಾಟಕದಲ್ಲಿ ಲೂಟಿಯಾಗಿದೆ. ಮಹಾರಾಷ್ಟ್ರದಲ್ಲಿ ಘೋಷಿಸಬೇಡಿ ಎಂಬುದಾಗಿ ಹೇಳಿದರು. ಈ ಮಾತು ಕೇಳಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಬ್ಬಿಬ್ಬಾದಂತ ಘಟನೆ ನಡೆದಿದೆ. ಇಂದು ಮೈಸೂರು ನಗರದಲ್ಲಿ ಸಂಗೀತ ಉತ್ಸವದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ದಿಢೀರ್ ಎದ್ದಂತ ವ್ಯಕ್ತಿಯೊಬ್ಬರು ಮೇಡಂ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಯಿಂದ ಲೂಟಿಯಾಗುತ್ತಿದೆ. ದಯವಿಟ್ಟು ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಬೇಡಿ ಎಂಬುದಾಗಿ ಆಗ್ರಹಿಸಿದರು. ವ್ಯಕ್ತಿಯ ಈ ಮಾತು ಕೇಳಿದಂತ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಕೆಲ ಕಾಲ ತಬ್ಬಿಬ್ಬಾದರು. ಕೂಡಲೇ ಸ್ಥಳದಲ್ಲಿದ್ದಂತ ಪೊಲೀಸರು ಆ ವ್ಯಕ್ತಿಯನ್ನು ಕಾರ್ಯಕ್ರಮದಿಂದ ಹೊರ ಕಳುಹಿಸಿದರು. https://kannadanewsnow.com/kannada/did-he-give-a-scheme-like-the-one-given-by-the-congress/ https://kannadanewsnow.com/kannada/job-news-kptcl-invites-applications-for-2975-vacancies-including-powerman/
ರಾಮನಗರ : “ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ನಾವು ಕನಕಪುರದ ಮೂರು ಕಡೆಗಳಲ್ಲಿ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರವಾಗಿ ಶುಕ್ರವಾರ ಚಕ್ಕೆರೆ, ಹೊನ್ನನಾಯಕನಹಳ್ಳಿ ಮತ್ತಿತರ ಚುನಾವಣೆ ಪ್ರಚಾರ ಸಭೆ ನಡೆಸಿದರು. ದೇವೇಗೌಡರು ಗುರುವಾರ ಭಾಷಣ ಮಾಡುತ್ತಾ, “ಒಂದು ಶಾಲೆ ಮಾಡಲು ಜಾಗ ಕೇಳಿದರೆ ಡಿ.ಕೆ. ಶಿವಕುಮಾರ್ ದುಡ್ಡು, ದುಡ್ಡು ಅಂತಾರೆ” ಎಂದು ಮಾಡಿದ್ದ ಟೀಕೆಗೆ ಡಿಸಿಎಂ ಅವರು ಹೀಗೆ ತಿರುಗೇಟು ನೀಡಿದರು. “ದೇವೇಗೌಡರು ನಿನ್ನೆ ಚುನಾವಣೆ ಪ್ರಚಾರ ಮಾಡುತ್ತಾ ಡಿ.ಕೆ. ಸಹೋದರರು ಜಮೀನು ಕಬ್ಜ ಮಾಡಿಕೊಂಡಿದ್ದು, ಶಾಲೆ ಕಟ್ಟಲು ಜಾಗ ನೀಡುತ್ತಿಲ್ಲ. ಜಾಗ ಕೇಳಿದರೆ ದುಡ್ಡು, ದುಡ್ಡು ಅಂತಾರೆ ಎಂದು ಆರೋಪ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ.…
ರಾಮನಗರ: ಅರಸು, ಎಸ್.ಎಂ ಕೃಷ್ಣ, ವಿರೇಂದ್ಪ ಪಾಟೀಲ್, ಸಿದ್ದರಾಮಯ್ಯ, ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದವರು. ಇವರ ಜತೆಗೆ ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ಅರಸು ಅವರ ಕಾಲದಲ್ಲಿ ಉಳುವವನಿಗೆ ಭೂಮಿ ಯೋಜನೆ ಕೊಟ್ಟರು. ಇಂದಿರಾ ಗಾಂಧಿ ಅವರು ವೃದ್ಧಾಪ್ಯ ವೇತನ ಸೇರಿದಂತೆ ಪಿಂಚಣಿ ಯೋಜನೆ ಜಾರಿ, ನಿವೇಶನ, ವಸತಿ ನೀಡುವ ಯೋಜನೆ ತಂದರು. ವಿರೇಂದ್ರ ಪಾಟೀಲ್ ಅವರ ಕಾಲದಲ್ಲಿ ಬಗರ್ ಹುಕುಂ ಸಾಗುವಳಿ ಅವಕಾಶ ನೀಡಿದರು. ಬಂಗಾರಪ್ಪನವರ ಕಾಲದಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. ನಾನು ಇಂಧಿನ ಸಚಿವನಾಗಿದ್ದಾಗ ರೈತರಿಗೆ 6ರಿಂದ 7 ಗಂಟೆಗೆ ವಿದ್ಯುತ್ ನೀಡುವುದನ್ನು ಏರಿಸಿದೆ. ಕೃಷ್ಣ ಅವರ ಕಾಲದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ, ಸ್ತ್ರೀಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ, ಬೆಂಗಳೂರನ್ನು ಜಾಗತಿಕ ನಗರವನ್ನಾಗಿ ಮಾಡಿದರು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದಂತ ಅವರು, ಸಿದ್ದರಾಮಯ್ಯ ಅವರು ತಮ್ಮ ಮೊದಲ ಸರ್ಕಾರದ ಅಧಿಯಲ್ಲಿ ಬಡವರ ಹೊಟ್ಟೆ ತುಂಬಿಸಲು ಅನ್ನಭಾಗ್ಯ,…
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಬದಲಿಗೆ ಭಾರತೀಯ ಕ್ರಿಕೆಟ್ ಮಂಡಳಿ ತಮ್ಮ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದೆ. “ಇದು ನಮ್ಮ ನಿಲುವಾಗಿದೆ ಮತ್ತು ಅದನ್ನು ಬದಲಾಯಿಸಲು ಯಾವುದೇ ಕಾರಣವಿಲ್ಲ. ನಾವು ಅವರಿಗೆ ಪತ್ರ ಬರೆದಿದ್ದೇವೆ ಮತ್ತು ನಮ್ಮ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಕೇಳಿಕೊಂಡಿದ್ದೇವೆ, “ಎಂದು ಬೆಳವಣಿಗೆಗೆ ಹತ್ತಿರದ ಮೂಲವೊಂದು ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದೆ. ಫೆಬ್ರವರಿ 19 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಎಲೈಟ್ ಸ್ಪರ್ಧೆಯಲ್ಲಿ ವಿಶ್ವದ ಅಗ್ರ ಎಂಟು ತಂಡಗಳು ಭಾಗವಹಿಸಲಿವೆ. ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿ ಆತಿಥ್ಯ ವಹಿಸುವ ನಗರಗಳಾಗಿ ಕಾರ್ಯನಿರ್ವಹಿಸಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರದೊಂದಿಗೆ ಸಮಾಲೋಚಿಸಿ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿರುವ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿದೆ ಎಂದು ವರದಿ ಹೇಳಿದೆ. ಆರಂಭದಲ್ಲಿ ಪಾಕಿಸ್ತಾನದ ಆತಿಥ್ಯ ವಹಿಸಲು ಪ್ರಸ್ತಾಪಿಸಲಾಗಿದ್ದ ಏಷ್ಯಾ ಕಪ್ 2023 ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲಾಯಿತು, ಪಂದ್ಯಗಳು ಪಾಕಿಸ್ತಾನ…
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಶುಕ್ರವಾರ ನ್ಯಾಯಾಂಗ ಸೇವೆಯಿಂದ ನಿವೃತ್ತರಾಗುತ್ತಿರುವುದರಿಂದ ಅವರಿಗೆ ಔಪಚಾರಿಕ ಬೀಳ್ಕೊಡುಗೆ ನೀಡಲಾಯಿತು. ಔಪಚಾರಿಕ ಪೀಠದ ಆನ್ಲೈನ್ ಸ್ಟ್ರೀಮಿಂಗ್ನಲ್ಲಿ, ಅಭಿಷೇಕ್ ಮನು ಸಿಂಘ್ವಿ ಮತ್ತು ಕಪಿಲ್ ಸಿಬಲ್ ಸೇರಿದಂತೆ ವಕೀಲರು ನಿರ್ಗಮನ ಸಿಜೆಐ ಅವರನ್ನು ಉದ್ದೇಶಿಸಿ ಮಾತನಾಡಿದರು ಮತ್ತು ನ್ಯಾಯಾಂಗಕ್ಕೆ ಅವರು ನೀಡಿದ ಕೊಡುಗೆಯನ್ನು ನೆನಪಿಸಿಕೊಂಡರು. ಕಚೇರಿಯಲ್ಲಿ ನ್ಯಾಯಮೂರ್ತಿ ಚಂದ್ರಚೂಡ್ ಅವರ ಕೊನೆಯ ದಿನದಂದು ಕೆಲವು ಲಘು ಕ್ಷಣಗಳನ್ನು ಹಂಚಿಕೊಂಡ ಸಿಂಘ್ವಿ ಸೇರಿದಂತೆ ಹಲವಾರು ವಕೀಲರು “ನಿಮ್ಮ ಯೌವನದ ರಹಸ್ಯವನ್ನು” ತಿಳಿದುಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಕೊನೆಯ ದಿನ ಸಿಜೆಐ ಚಂದ್ರಚೂಡ್ ಹೇಳಿದ್ದೇನು? ಭಾರತದ ನಿರ್ಗಮನ ಮುಖ್ಯ ನ್ಯಾಯಮೂರ್ತಿಗಳು ನ್ಯಾಯಾಂಗದಲ್ಲಿ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡರು ಮತ್ತು ನ್ಯಾಯಾಂಗದ ಆ ಭಾಗಗಳು “ಯಾತ್ರಿಕರು” ಎಂದು ನ್ಯಾಯಾಲಯಕ್ಕೆ ಬರುತ್ತವೆ ಎಂದು ಹೇಳಿದರು. “ನಾನು ಚಿಕ್ಕವನಿದ್ದಾಗ ಈ ನ್ಯಾಯಾಲಯಕ್ಕೆ ಬರುತ್ತಿದ್ದೆ, ನಾನು ಈ ನ್ಯಾಯಾಲಯ ಮತ್ತು ಈ ಎರಡು ಭಾವಚಿತ್ರಗಳನ್ನು ನ್ಯಾಯಾಲಯದಲ್ಲಿ ಗಮನಿಸುತ್ತಿದ್ದೆ” ಎಂದು ಅವರು ಹೇಳಿದರು. “ರಾತ್ರಿ…
ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪುರಸಭೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಈ ಪುರಸಭೆ ವ್ಯಾಪ್ತಿಗಳಲ್ಲಿ ಶಸ್ತç/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಶಸ್ತç/ಆಯುಧಗಳನ್ನು ಸಮೀಪದ ಪೊಲೀಸ್ ಠಾನೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗ ಶಿಕಾರಿಪುರ ತಾಲ್ಲೂಕಿನ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ದಿ: 04-11-2024 ರಿಂದ 26-11-2024 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆ ಮುಕ್ತಾಯಗೊಳ್ಳುವವರೆಗೆ ಶಿಕಾರಿಪುರ ಮತ್ತು ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಗಳಲ್ಲಿ ಆಯುಧ ಹೊಂದಿರುವವರು ಸಮೀಪದ ಪೊಲೀಸ್ ಠಾನೆಯಲ್ಲಿ ಠೇವಣಿ ಮಾಡಬೇಕು. ಠೇವಣಿಯಲ್ಲಿ ಇಡಲಾಗುವ ಶಸ್ತç/ಆಯುಧಗಳನ್ನು ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ನಂತರ ಅಂದರೆ…
ರಾಯಚೂರು: ಜಿಲ್ಲೆಯ ಮಸ್ಕಿ ಕ್ಯಾಂಬ್ ಬಳಿಯಲ್ಲಿರುವಂತ ತುಂಗಭದ್ರಾ ಎಡದಂಡೆ ಕಾಲುವೆಯಲ್ಲೇ ನವಜಾತ ಶಿಶುವೊಂದನ್ನು ಎಸೆದು ಹೋಗಿದ್ದು, ಮೃತದೇಹ ಪತ್ತೆಯಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಾಗರ್ ಕ್ಯಾಂಪ್ ಬಳಿಯಲ್ಲಿರುವಂತ ತುಂಗಭದ್ರಾ ಎಡದಂಡೆಗೆ ನೀರು ಬಿಡಲಾಗಿತ್ತು. ಈಗ ತುಂಗಭದ್ರಾ ಎಡದಂಡೆಯ ನಾಲೆ ತುಂಬಿ ಹರಿಯುತ್ತಿದೆ. ಇಂತಹ ನಾಲೆಗೆ ನವಜಾತ ಶಿಶು ಜನಿಸಿದಂತ ಕೆಲವೇ ಗಂಟೆಯಲ್ಲಿ ಬಿಸಾಕಿ ಹೋಗಿರುವುದಾಗಿ ತಿಳಿದು ಬಂದಿದೆ. ಈ ನವಜಾತ ಶಿಶುವಿನ ಮೃತದೇಹವನ್ನು ನೋಡಿದಂತ ಪಾದಚಾರಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಂತ ಪೊಲೀಸರು ಪರಿಶೀಲಿಸಿ, ನವಜಾತ ಶಿಶುವಿನ ಮೃತದೇಹವನ್ನು ಶವಾಗಾರಕ್ಕೆ ಕಳುಹಿಕೊಡಲಾಗಿದೆ. ಈ ಸಂಬಂಧ ಬಳಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/darshan-to-undergo-laser-surgery-wife-turns-to-astrologer-on-date-time/ https://kannadanewsnow.com/kannada/i-started-lake-filling-project-in-karnataka-basavaraj-bommai/
ಬೆಂಗಳೂರು: ನಟ ದರ್ಶನ್ ಅವರು ಬೆನ್ನು ನೋವಿನ ಕಾರಣದಿಂದ ನಗರದ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಅವರಿಗೆ ಮೂರು ದಿನಗಳ ಹಿಂದೆಯೇ ವೈದ್ಯರು ಲೇಜರ್ ಆಪರೇಷನ್ ಮಾಡಬೇಕು ಎಂದು ಪತ್ನಿ ವಿಜಯ ಲಕ್ಷ್ಮೀಗೆ ತಿಳಿಸಿದ್ದಾರೆ. ಯಾವಾಗ ಆಪರೇಷನ್ ಮಾಡಿಸಬೇಕು. ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವ ಬಗ್ಗೆ ಪತ್ನಿ ವಿಜಯ ಲಕ್ಷ್ಮೀ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಂತ ನಟ ದರ್ಶನ್ ಅವರಿಗೆ ಅನಾರೋಗ್ಯದ ಕಾರಣ ಕೋರ್ಟ್ ಮಧ್ಯಂತರ ಜಾಮೀನನ್ನು ಚಿಕಿತ್ಸೆ ಪಡೆಯಲು ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತ್ರ, ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಬೆನ್ನು ನೋವಿನ ಚಿಕಿತ್ಸೆಗಾಗಿ ನಟ ದರ್ಶನ್ ದಾಖಲಾಗಿದ್ದಾರೆ. ನಟ ದರ್ಶನ್ ಅವರನ್ನು ಎಲ್ಲಾ ಪರೀಕ್ಷೆಗೆ ಒಳಪಡಿಸಿರುವಂತ ವೈದ್ಯರು, ಮೂರು ದಿನಗಳ ಹಿಂದೆ ಲೇಜರ್ ಆಪರೇಷನ್ ಮಾಡೋದಾಗಿ ಪತ್ನಿ ವಿಜಯಲಕ್ಷ್ಮೀ ಅವರಿಗೆ ದಿನಾಂಕ, ಸಮಯ ಗೊತ್ತುಪಡಿಸಿ ತಿಳಿಸುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ನಟ…
ಹಾವೇರಿ : ಕರ್ನಾಟಕದಲ್ಲಿ ಕೆರೆ ತುಂಬಿಸುವ ಯೋಜನೆ ಮೊದಲು ಆರಂಭಿಸಿದವನೇ ನಾನು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ತಿಮ್ಮಾಪುರ, ಹಿರೇಬೆಂಡಿಗೇರಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಮಾಡಿದ ಅವರು, ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಶಿಗ್ಗಾವಿಯಲ್ಲಿ ಬೊಮ್ಮಾಯಿಯವರು ಯಾವುದಾದರು ಒಂದು ಯೋಜನೆ ತಂದಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ತಿಳಿಸಲು ಬಯಸುತ್ತೇನೆ. ಇಡಿ ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆ ಆರಂಭಿಸಿದ್ದು ನಾನೇ ಎಂದು ತಿರುಗೇಟು ನೀಡಿದರು. ಬಸನಗೌಡ ಪಾಟೀಲ್ ಯತ್ನಾಳ್ ಅವರು ಇಂಡಿ ಏತ ನೀರಾವರಿ ಯೋಜನೆ, ಬಿಜಾಪುರ ಸಮಗ್ರ ನೀರಾವರಿ ಯೋಜನೆಗೆ ಹೊರಾಟ ಮಾಡಿದ್ದರು. ಆಗ ಅಲ್ಲಿ ಭಾಗವಹಿಸಿ ಅಂತರ ಜಲ ಹೆಚ್ಚಿಸಲು ಕೆರೆ ತುಂಬಿಸುವ ಯೋಜನೆ ಮಾಡುವುದು ಸೂಕ್ತ ಎಂದು ತಿಳಿದು ಅಲ್ಲಿ ಕೆರೆ ತುಂಬಿಸುವ ಯೋಜನೆ ಮಾಡಿದೆ. ನಂತರ ಶಿಗ್ಗಾವಿ ಸವಣೂರು ಏತ ನೀರಾವರಿ ಕೆರೆ ತುಂಬಿಸುವ ಯೋಜನೆ ಮಾಡಿದೆ ಎಂದರು. ಕನಕಪುರದಲ್ಲಿ…