Author: kannadanewsnow09

ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಯುಜಿಸಿ-ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (UGC-National Eligibility Test – NET) ಆಯುರ್ವೇದ ಜೀವಶಾಸ್ತ್ರವನ್ನು ಒಂದು ವಿಷಯವಾಗಿ ಸೇರಿಸಿದೆ. ಆಯೋಗವು ನವೆಂಬರ್ 7 ರ ಗುರುವಾರ ಅಧಿಕೃತ ನೋಟಿಸ್ ಮೂಲಕ ಮಾಹಿತಿಯನ್ನು ಪ್ರಸಾರ ಮಾಡಿದೆ. ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಡಿಸೆಂಬರ್ 2024 ರಿಂದ ಈ ವಿಷಯವನ್ನು ಆಯ್ಕೆ ಮಾಡಬಹುದು. ಯುಜಿಸಿ ನೆಟ್ ಆಯುರ್ವೇದ ಜೀವಶಾಸ್ತ್ರ ಪಠ್ಯಕ್ರಮವು ( UGC NET Ayurveda Biology syllabus ) ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಿದೆ ugcnetonline.in. “ತಜ್ಞರ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ, ಆಯೋಗವು 2024 ರ ಜೂನ್ 25 ರಂದು ನಡೆದ ತನ್ನ 581 ನೇ ಸಭೆಯಲ್ಲಿ, ಯುಜಿಸಿ ನೆಟ್ನ ಅಸ್ತಿತ್ವದಲ್ಲಿರುವ ವಿಷಯಗಳ ಪಟ್ಟಿಗೆ ಡಿಸೆಂಬರ್ 2024 ರಿಂದ “ಆಯುರ್ವೇದ ಜೀವಶಾಸ್ತ್ರ” ವನ್ನು ಹೆಚ್ಚುವರಿ ವಿಷಯವಾಗಿ ಸೇರಿಸಲು ನಿರ್ಧರಿಸಿದೆ” ಎಂದು ಯುಜಿಸಿ ನೆಟ್ನ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಯುಜಿಸಿ ನೆಟ್ ಆಯುರ್ವೇದ ಜೀವಶಾಸ್ತ್ರ ಪಠ್ಯಕ್ರಮ ಘಟಕ 1: ಆಯುರ್ವೇದದ ಇತಿಹಾಸ…

Read More

ಬೆಂಗಳೂರು: ಚಿಕ್ಕೋಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲು ಲಂಚಕ್ಕೆ ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ರವಿಕುಮಾರ್ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಲಂಚದ ಹಣ ಪಡೆಯುತ್ತಿದ್ದಾಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು, ವೀಡಿಯೋ ಕೂಡ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲ್ಲೂಕು ಸಹಾಯಕ ನಿರ್ದೇಶಕ ಗ್ರೇಡ್-1 ರವಿಕುಮಾರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 07.11.2024ರಂದು ಮಾಧ್ಯಮಗಳಲ್ಲಿ ಪುಸಾರಗೊಂಡಿರುವ ದೃಶ್ಯವಳಿಗಳಲ್ಲಿ ರವಿಕುಮಾರ್, ಸಹಾಯಕ ನಿರ್ದೇಶಕರು ಗ್ರೇಡ್-1, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ ಇವರು ಲೋಕೋಪಯೋಗಿ ಇಲಾಖೆ, ಚಿಕ್ಕೋಡಿ ತಾಲ್ಲೂಕು ಇವರಿಗೆ ವಹಿಸಿರುವ 2020-21 ನೇ ಸಾಲಿನಲ್ಲಿ ಪರಿಶಿಷ್ಟ ತಾಲ್ಲೂಕಿನ ಅಕ್ಕೋಳ ಗ್ರಾಮದಲ್ಲಿ ಕಾಲೋನಿಯಲ್ಲಿ ರೂ. 20.00 ಲಕ್ಷಗಳ ವೆಚ್ಚದಲ್ಲಿ ಸುದಾಯ ಭವನ ನಿರ್ಮಾಣ ಕಾಮಗಾರಿಯ ಜಂಟಿ ಪರಿಶೀಲನಾ ವರದಿಯನ್ನು ನೀಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಗುತ್ತಿಗೆದಾರರು…

Read More

ಸಂಡೂರು : ಹಣ ಬಲ, ತೋಳು ಬಲದಲ್ಲಿ ಸಂಡೂರನ್ನು ವಶಪಡಿಸಿಕೊಳ್ಳಲು ಬರ್ತಾರೆ ಎಚ್ಚರ. ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದರು. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು. ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಬ್ಬಾಳಿಕೆ, ದೌರ್ಜನ್ಯದ ಆ ದಿನಗಳನ್ನು ನೆನಪಿಸಿದರು. ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ…

Read More

ಬೆಂಗಳೂರು: ಕನ್ನಡ ಪ್ರಸಿದ್ಧ ಚಲನಚಿತ್ರ ಕೆಜಿಎಫ್ ನಲ್ಲಿ ಚಾಚಾ ಎಂಬುದಾಗಿಯೇ ಗುರುತಿಸಿಕೊಂಡು, ನಟಿಸಿ, ಕೀರ್ತಿ ಗಳಿಸಿದ್ದಂತ ನಟ ಹರೀಶ್ ರಾಯ್. ಇಂತಹ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ಖ್ಯಾತ ಪೋಷಕ ನಟ ಹರೀಶ್ ರಾಯ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಕ್ಯಾನ್ಸರ್ ನಿಂದ ಬಳಲುತ್ತಿರುವಂತ ಅವರ ಆರೋಗ್ಯದಲ್ಲಿ ಇಂದು ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಥೈರಾಯ್ಡ್ ಕ್ಯಾನ್ಸರ್ ಗೆ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/job-news-kptcl-invites-applications-for-2975-vacancies-including-powerman/ https://kannadanewsnow.com/kannada/good-news-for-the-school-students-of-the-state-nehrus-birthday-celebration-is-the-background-of-various-activities-for-children/

Read More

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿ ಮಾಡಿಕೊಂಡಿರುವಂತ ಬಡವರಿಗೆ ನೋಟಿಸ್ ನೀಡ್ತೀರಿ. ಅದೇ ಸಚಿವ ಜಮೀರ್ ಅಹ್ಮದ್ ಖಾನ್, ಕಾಂಗ್ರೆಸ್ ಪಕ್ಷದ ಪ್ರಭಾವಿ ಶಾಸಕರು, ಪರಿಷತ್ ಸದಸ್ಯರು, ಸಂಸದರಿಗೆ ಯಾಕೆ ನೋಟಿಸ್ ನೀಡಿಲ್ಲ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಪ್ರಶ್ನಿಸಿದ್ದಾರೆ. ಈ ಬಗ್ಗೆ ಗುರುವಾರದಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕಾಂಗ್ರೆಸ್ ನಾಯಕರಾದಂತ ಮಲ್ಲಿಖಾರ್ಜುನ ಖರ್ಗೆ, ಧರ್ಮಸಿಂಗ್, ಸಿ.ಕೆ ಜಾಫರ್ ಶರೀಫ್, ಕನೀಝ್ ಫಾತಿಮಾ ಸೇರಿದಂತೆ ಇನ್ನಿತರರ ವಿರುದ್ಧವೂ ವಕ್ಫ್ ಆಸ್ತಿ ಒತ್ತುವರಿಯ ಆರೋಪಗಳಿದ್ದಾವೆ. ಅವರಿಗೆ ಯಾಕೆ ರಾಜ್ಯ ಸರ್ಕಾರ ನೋಟಿಸ್ ನೀಡಿಲ್ಲ ಎಂದು ಕೇಳಿದರು. ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವಂತ ವಿಂಡ್ಸರ್ ಮ್ಯಾನರ್ ಹೋಟೆಲ್ ವಕ್ಫ್ ಆಸ್ತಿಯಾಗಿದ್ದು, ಅದನ್ನು ರಾಜ್ಯ ಸರ್ಕಾರ ವಾಪಾಸು ಪಡೆದುಕೊಳ್ಳುವಲ್ಲಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಮಂಡಳಿಗೆ ಕೊಡಿಸುವಲ್ಲಿ ವಿಫಲವಾಗಿದೆ ಎಂಬುದಾಗಿ ಕಿಡಿಕಾರಿದರು. ಯಲಹಂಕದ ವಡೆಪುರ ಗ್ರಾಮದ ವಿವಿಧ ಸರ್ವೆ ನಂಬರ್ ಗಳಲ್ಲಿ ವಕ್ಫ್ ಭೂಮಿಯನ್ನು ವಕ್ಫ್ ಬೋರ್ಡ್ ತನ್ನ ಸುಪರ್ದಿಗೆ…

Read More

ಬೆಂಗಳೂರು: ಮೈಸೂರಿನ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ವಿರುದ್ಧ ನಡೆಯುತ್ತಿರುವ ತನಿಖೆಯಲ್ಲಿ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳು ದೇಶದಲ್ಲಿ ಜಾರಿಗೆ ಬಂದಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – ಎನ್.ಬಿ.ಎಸ್.ಎಸ್ ನಡಿ ಸೂಕ್ತ ತನಿಖಾ ವಿಧಾನಗಳನ್ನು ಅನುಸರಿಸಿಲ್ಲ. ಲೋಕಾಯುಕ್ತ ಪೊಲೀಸರು ಹೊಸ ಕಾನೂನು ಜಾರಿ ಮಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ದಿ ಹೆಲ್ಪಿಂಗ್ ಸಿಟಿಜ಼ನ್ ಅಂಡ್ ಪೀಪಲ್ಸ್ ಕೋರ್ಟ್ ನ ಸಂಸ್ಥಾಪಕರಾದ ಎ. ಆಲಂ ಪಾಷ ಆರೋಪಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಆಡಳಿತ ವ್ಯವಸ್ಥೆಗೆ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ, ಸಲಹೆ, ಸೂಚನೆಗಳನ್ನು ನೀಡಬೇಕಾದ ಅಡ್ವೋಕೆಟ್ ಜನರಲ್, ಕಾನೂನು ಸಲಹೆಗಾರರು ಸಹ ತನ್ನ ಕರ್ತವ್ಯ ನಿರ್ಹಣೆಯಲ್ಲಿ ವಿಫಲರಾಗಿದ್ದಾರೆ. ಕಾನೂನು ವಿಭಾಗದ ಮುಖ್ಯಸ್ಥರನ್ನು ಪ್ರಾಸಿಕ್ಯೂಷನ್ ಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಕುರಿತು ಲೋಕಾಯುಕ್ತ ಎಡಿಜಿಪಿ ಅವರಿಗೆ ದೂರು ಸಲ್ಲಿಸಿದ್ದು, ಕಾನೂನು ವೈಫಲ್ಯಕ್ಕೆ ಕಾರಣದಾದವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು…

Read More

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಕರ್ನಾಟಕಕ್ಕೆ ಸುವರ್ಣ ಸಂಭ್ರಮದ ಸಲುವಾಗಿ ಇಂದು ರಾತ್ರಿ ವಿದ್ಯಾರ್ಥಿಗಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ ಸಾಗರ ನಗರದ ಮೆಟ್ರಿಕ್ ನಂತರದ ಬಾಲಕ ವಿದ್ಯಾರ್ಥಿನಿಲಯದ ನಿಲಯಾರ್ಥಿಗಳಿಗೆ ವಿಶೇಷ ಭೋಜನದ ಸವಿಯನ್ನು ನಿಲಯ ಮೇಲ್ವಿಚಾರಕ ಜೈಶೀಲ್.ಬಿ ಉಣಬಡಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಮೆಟ್ರಿಕ್ ನಂತ್ರದ ಬಾಲಕರ ವಿದ್ಯಾರ್ಥಿನಿಲಯದ ಬಿಸಿಡಬ್ಲ್ಯೂ ಡಿ 2352 ಸಾಗರ ಟೌನ್ ನಲ್ಲಿ ನಿಲಯ ಮೇಲ್ವಿಚಾರಕ ಜೈಶೀಲ್.ಬಿ ಅವರು ರಾಜ್ಯ ಸರ್ಕಾರದ ಆದೇಶದಂತೆ ಇಂದು ರಾತ್ರಿ ವಿದ್ಯಾರ್ಥಿ ನಿಲಯದ ನಿಲಯಾರ್ಥಿಗಳಿಗೆ ವಿಶೇಷ ಭೋಜನದ ನೀಡಿದರು. ರಾಜ್ಯ ಸರ್ಕಾರದ ಆದೇಶದಂತೆ ನಿಲಯಾರ್ಥಿಗಳಿಗೆ ಮೈಸೂರು ಪಾಕ್, ಹೋಳಿಗೆ, ಫಲಾವು, ವಾಂಗಿಬಾತ್, ಚಪಾತಿ, ಬೀನ್ಸ್ ಪಲ್ಯ, ಕೋಸಂಬರಿ, ಹೋಳಿಗೆ ಸಾಂಬಾರ್, ಅನ್ನ, ಮಜ್ಜಿಗೆ, ಬಾಳೇಹಣ್ಣು ನೀಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಕಲ್ಯಾಣಧಿಕಾರಿ ರಾಜೇಶ್ವರಿ ಹಾಗೂ ವಿಸ್ತರಾಧಿಕಾರಿ ಅನುಸೂಯ ತಳವಾರ್ ಹಾಜರಿದ್ದು, ವಿದ್ಯಾರ್ಥಿಗಳೊಂದಿಗೆ ವಿಶೇಷ ಭೋಜನದ ಸವಿಯನ್ನು ಸವಿದರು. ಇದೇ ಸಂದರ್ಭದಲ್ಲಿ ವಿಶೇಷ ಭೋಜನದ ಊಟವನ್ನು ತಯಾರಿಸಿ ಸುರೇಶ್.ಹೆಚ್.ಕೆ, ಮೋಹನ್,…

Read More

ಶಿವಮೊಗ್ಗ: ಅರಣ್ಯ ಇಲಾಖೆಯಿಂದ ರೈತರಿಗೆ ನೋಟಿಸ್ ಕೊಟ್ರೆ ಸುಮ್ಮನಿರುವುದಿಲ್ಲ. ಈ ಬಗ್ಗೆ ಅರಣ್ಯ ಸಚಿವರು ನೋಟಿಸ್ ಕೊಡದಂತೆ ಸೂಚಿಸಿದ್ದಾರೆ. ಸೂಚನೆ ಮೀರಿ ನಡೆದುಕೊಂಡರೇ ಅಂತಹ ಅರಣ್ಯ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಾಗರ ತಾಲ್ಲೂಕು ಕೆಡಿಪಿ ತ್ರೈಮಾಸಿಕ ಸಭೆಯನ್ನು ನಡೆಸಿದರು. ಸಭೆಯ ಆರಂಭದಲ್ಲೇ ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಂತ ಅವರು, ಯಾವುದೇ ರೈತರಿಗೆ ಅರಣ್ಯ ಒತ್ತುವರಿ ಸಂಬಂಧ ನೋಟಿಸ್ ನೀಡುವಂತಿಲ್ಲ. ಹೊಸದಾಗಿ ಒತ್ತುವರಿ ಮಾಡುವುದನ್ನು ತಡೆಯುವಂತೆ ನಿರ್ದೇಶಿಸಿದರು. ಅರಣ್ಯ ಇಲಾಖೆಯಿಂದ ರೈತರಿಗೆ ನೋಟಿಸ್ ನೀಡುವ ಸಂಬಂಧ ಸಚಿವ ಈಶ್ವರ್ ಖಂಡ್ರೆ ಅವರ ಬಳಿಯಲ್ಲಿಯೂ ಚರ್ಚಿಸಲಾಗಿದೆ. ರೈತರಿಗೆ ನೋಟಿಸ್ ನೀಡದಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ನಿಯಮ ಮೀರಿ ನೋಟಿಸ್ ನೀಡುವಂತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂಬುದಾಗಿ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರು. ರೈತರಿಗೆ ಯಾವುದೇ ಸಮಸ್ಯೆ ಮಾಡಬೇಡಿ.…

Read More

ನವದೆಹಲಿ: ಸಲ್ಮಾನ್ ರಶ್ದಿ ಅವರ ವಿವಾದಾತ್ಮಕ ಕಾದಂಬರಿ ದಿ ಸೈಟಾನಿಕ್ ವರ್ಸಸ್ ಮೇಲೆ 36 ವರ್ಷಗಳ ಹಿಂದಿನ ಆಮದು ನಿಷೇಧವನ್ನು ದೆಹಲಿ ಹೈಕೋರ್ಟ್ ತೆಗೆದುಹಾಕಿದೆ. ಅದರ ಆಮದನ್ನು ನಿಷೇಧಿಸುವ ಕಸ್ಟಮ್ಸ್ ಅಧಿಸೂಚನೆಯನ್ನು ಕಂಡುಹಿಡಿಯಲು ಸಾಧ್ಯವಾಗಲಿಲ್ಲ ಎಂದು ತೀರ್ಪು ನೀಡಿದೆ. 1988ರಲ್ಲಿ ರಾಜೀವ್ ಗಾಂಧಿ ನೇತೃತ್ವದ ಸರ್ಕಾರ ಈ ಪುಸ್ತಕವನ್ನು ನಿಷೇಧಿಸಿತ್ತು. ನವೆಂಬರ್ 5 ರಂದು, ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯು ಅಧಿಸೂಚನೆಯನ್ನು ಇನ್ನು ಮುಂದೆ ಕಂಡುಹಿಡಿಯಲು ಸಾಧ್ಯವಿಲ್ಲ ಎಂದು ಒಪ್ಪಿಕೊಂಡ ನಂತರ ನಿಷೇಧದ ಸಿಂಧುತ್ವವನ್ನು ಪರಿಶೀಲಿಸಲು ನ್ಯಾಯಾಲಯ ನಿರಾಕರಿಸಿತು. ಅಧಿಸೂಚನೆಯ ಅನುಪಸ್ಥಿತಿಯಲ್ಲಿ, ಅದು ಅಸ್ತಿತ್ವದಲ್ಲಿಲ್ಲ ಎಂದು ಭಾವಿಸುವುದನ್ನು ಬಿಟ್ಟು ನ್ಯಾಯಾಲಯಕ್ಕೆ ಬೇರೆ ಆಯ್ಕೆಯಿಲ್ಲ ಎಂದು ಪ್ರಕರಣದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ರೇಖಾ ಪಲ್ಲಿ ಮತ್ತು ನ್ಯಾಯಮೂರ್ತಿ ಸೌರಭ್ ಬ್ಯಾನರ್ಜಿ ಘೋಷಿಸಿದರು. ಇದರ ಪರಿಣಾಮವಾಗಿ, 2019 ರಲ್ಲಿ ಸಾಂದೀಪನ್ ಖಾನ್ ಸಲ್ಲಿಸಿದ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು “ನಿಷ್ಪ್ರಯೋಜಕ” ಎಂದು ಪರಿಗಣಿಸಲಾಯಿತು. ದಿ ಸೈಟಾನಿಕ್ ವರ್ಸಸ್ ಮೇಲಿನ ಆಮದು ನಿಷೇಧವು ಪುಸ್ತಕದ…

Read More

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯ ಎಂಬಿಬಿಎಸ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವೇ ಮೊದಲ ವರ್ಷದ ಶುಲ್ಕವಾಗಿರುವಂತ 25 ಲಕ್ಷವನ್ನು ಭರಿಸಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು, ಪಿಯುಸಿಯಲ್ಲಿ ಶೇಕಡ 95 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್‌ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್‌ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೆ ವರ್ಷದ ಕಾಲೇಜು ಶುಲ್ಕ ₹25 ಲಕ್ಷ ಗಳನ್ನು ಸರ್ಕಾರವೇ ಭರಿಸಲಿದೆ ಎಂದಿದ್ದಾರೆ. ಅಲ್ಲದೇ, ಇದೇ ವಿದ್ಯಾರ್ಥಿಗಳು ಎಂಬಿಬಿಎಸ್‌ ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಮತ್ತೆ ₹25 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್‌. ಸಿ. ಮಹದೇವಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1854525226207641775 https://kannadanewsnow.com/kannada/save-your-life-from-heart-attack-keep-this-7-rupees-ram-kit/ https://kannadanewsnow.com/kannada/breaking-liquor-sale-to-be-closed-across-the-state-on-november-20-president-guruswamy/

Read More